Site icon Vistara News

Sundeep Kishan: ಪ್ರತಿದಿನ 350 ಬಡವರ ಹೊಟ್ಟೆ ತುಂಬಿಸುತ್ತಿರುವ ನಟನ ಹೋಟೆಲ್ ಮೇಲೆ ದಾಳಿ; ಡೇಟ್ ಬಾರ್ ಅಕ್ಕಿ ಪತ್ತೆ!

Sundeep Kishan Distributes Free Food To 350 Needy People Hotel Raided By Food Safety Department

ಬೆಂಗಳೂರು: ಸ್ಯಾಂಡಲ್‌ವುಡ್‌ ಸೇರಿದಂತೆ ಟಾಲಿವುಡ್‌ನಲ್ಲಿಯೂ ಅನೇಕ ನಟರು ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕೆಲವು ಹೀರೋಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಎಲ್ಲಿಯೂ ಮಾತನಾಡುವುದಿಲ್ಲ. ಟಾಲಿವುಡ್‌ನ ಪ್ರತಿಭಾವಂತ ನಾಯಕ ಸಂದೀಪ್ ಕಿಶನ್ (Sundeep Kishan) ಈ ವರ್ಗಕ್ಕೆ ಸೇರಿದ್ದಾರೆ. ಈ ಬಗ್ಗೆ ಸುದ್ದಿ ವೈರಲ್‌ ಆಗುತ್ತಿದ್ದಂತೆ ಆಹಾರ ಸುರಕ್ಷತೆ ಮತ್ತು ಶೇಖರಣೆ ವಿಚಾರದಲ್ಲಿ ಸಾಕಷ್ಟು ನಿಯಮಗಳನ್ನು ಅವರು ಗಾಳಿಗೆ ತೂರಿದ್ದಾರೆ ಎಂದು ವರದಿ ಆಗಿತ್ತು.

ತೆಲುಗು ಹೀರೊ ಸಂದೀಪ್ ಕಿಶನ್ ಪ್ರಸ್ತುತ ತಮ್ಮ “ರಾಯನ್‌” ಚಿತ್ರದ ಪ್ರಚಾರದಲ್ಲಿದ್ದಾರೆ. ಸಂದೀಪ್ ಕಿಶನ್ ಅವರು ‘ವಿವಾಹ ಭೋಜನಂ’ಬು ಹೆಸರಿನ ರೆಸ್ಟೋರೆಂಟ್ ಒಂದನ್ನು ನಡೆಸುತ್ತಿದ್ದಾರೆ. ಸಿಕಂದರಾಬಾದ್​ನಲ್ಲಿ ಈ ರೆಸ್ಟೋರೆಂಟ್ ಇದೆ.  ಸಿಕಂದರಾಬಾದ್‌ನ ವಿವಾಹ ಭೋಜನಂಬು ಎಂಬ ರೆಸ್ಟೋರೆಂಟ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಇತ್ತೀಚೆಗೆ ನಡೆಸಿದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜುಲೈ 8 ರಂದು ಈ ದಾಳಿ ನಡೆದಿದ್ದು, ಆಹಾರ ಸುರಕ್ಷತೆ ಮತ್ತು ಸಂಗ್ರಹಣೆಗೆ ಸಂಬಂಧಿಸಿದಂತೆ ಹಲವಾರು ಉಲ್ಲಂಘನೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಸಂದೀಪ್ ನಡೆಸುತ್ತಿರುವ ರೆಸ್ಟೋರೆಂಟ್​ ಏಳು ಔಟ್​ಲೆಟ್​ಗಳನ್ನು ಹೊಂದಿದೆ. ತಮಗೆ ಮೋಸ ಮಾಡೋ ಅಗತ್ಯವಿಲ್ಲ ಎಂದಿದ್ದಾರೆ ಅವರು. ‘ವಿವಾಹ ಭೋಜನಂಬು ರೆಸ್ಟೋರೆಂಟ್​​ನ ಏಳು ಶಾಖೆ​ಗಳಿಂದ ನಾವು ನಿತ್ಯ 50 ಫುಡ್ ಪ್ಯಾಕೆಟ್​ಗಳನ್ನು ದಾನ ಮಾಡುತ್ತೇವೆ. ಅಂದರೆ ದಿನಕ್ಕೆ 350 ಫುಡ್ ಪ್ಯಾಕೆಟ್​ಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಒಂದು ಪ್ಯಾಕೆಟ್​ನ ಬೆಲೆ 50 ರೂಪಾಯಿ. ಅಂದರೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಆಹಾರವನ್ನು ಉಚಿತವಾಗಿ ನೀಡುತ್ತಿದ್ದೇವೆ. ಹೀಗಿರುವಾಗ ಕೆಲವೇ ಸಾವಿರ ರೂಪಾಯಿ ಬೆಲೆ ಬಾಳುವ ಅಕ್ಕಿಯನ್ನು ಶೇಖರಿಸಿಟ್ಟು ನಮಗೆ ಆಗೋದು ಏನಿದೆ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ʻʻನಾವು ಎಷ್ಟೇ ದಾನ ಮಾಡಿದರೂ ಸ್ವಚ್ಛತೆ ಇರಬೇಕು. ಮತ್ತು ಆಹಾರ ಸುರಕ್ಷತಾ ಇಲಾಖೆಯು ಯಾವುದೇ ಶುಚಿತ್ವದ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿಲ್ಲ” ಎಂದು ಅವರು ಹೇಳಿದರು. ಈ ದಾಳಿ ನಡೆದ ಬಳಿಕ ಸಾಮಾನ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಬಿಲ್ಲಿಂಗ್ ಬಂದಿದೆ. ನಾವು ನೀಡುವ ಗುಣಮಟ್ಟದ ಆಹಾರದ ಮೇಲೆ ಜನರಿಗೆ ನಂಬಿಕೆ ಇದೆ’ ಎಂದಿದ್ದಾರೆ ಸಂದೀಪ್.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

ದಾಳಿ ನಡೆದ ಸಂದರ್ಭದಲ್ಲಿ ಡೇಟ್ ಬಾರ್​ ಆದ ಅಕ್ಕಿ ಬ್ಯಾಗ್ ಈ ರೆಸ್ಟೋರೆಂಟ್​ನಲ್ಲಿ ಸಿಕ್ಕಿತ್ತು ಎನ್ನಲಾಗಿದೆ. ಇನ್ನು, 500 ಗ್ರಾಮ್ ತೆಂಗಿನ ತುರಿಗೆ ಬಣ್ಣ ಹಾಕಲಾಗಿತ್ತು. ಈ ಬಗ್ಗೆ ಅಧಿಕಾರಿಗಳು ಹೇಳಿಕೊಂಡಿದ್ದರು ಎಂದು ವರದಿಯಾಗಿದೆ.

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಸಿನಿಮಾ ಜುಲೈ 26ಕ್ಕೆ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ. 

Exit mobile version