Director Surya Kiran: ʻಸಂಭ್ರಮʼ ಸಿನಿಮಾ ಖ್ಯಾತಿ ನಟಿಯ ಮಾಜಿ ಪತಿ ನಿಧನ - Vistara News

ಟಾಲಿವುಡ್

Director Surya Kiran: ʻಸಂಭ್ರಮʼ ಸಿನಿಮಾ ಖ್ಯಾತಿ ನಟಿಯ ಮಾಜಿ ಪತಿ ನಿಧನ

Director Surya Kiran: ಬಿಗ್ ಬಾಸ್ ತೆಲುಗು ಖ್ಯಾತಿಯ ನಟ ಟಾಲಿವುಡ್ ಚಲನಚಿತ್ರಗಳಲ್ಲಿ ‘ಸತ್ಯಂ’ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಸುಮಂತ್ ಮತ್ತು ಜೆನಿಲಿಯಾ ದೇಶಮುಖ್ ನಟಿಸಿದ, ರೊಮ್ಯಾಂಟಿಕ್ ‘ಸತ್ಯಂ’ ಸಿನಿಮಾ ಭಾರಿ ಮೆಚ್ಚುಗೆ ಪಡೆದಿತ್ತು.

VISTARANEWS.COM


on

Telugu film director Surya Kiran passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ತೆಲುಗು ನಟ-ನಿರ್ದೇಶಕ ಸೂರ್ಯ ಕಿರಣ್ ಅವರು ಜಾಂಡೀಸ್‌ನಿಂದಾಗಿ ಚೆನ್ನೈನಲ್ಲಿ ನಿಧನರಾದರು. ತೆಲುಗು ಚಿತ್ರ ಸೂರ್ಯ ಕಿರಣ್‌ ಅವರಿಗೆ 48 ವರ್ಷ ವಯಸ್ಸಾಗಿತ್ತು. ಸೂರ್ಯ ಅವರ ನಿಧನದ ಸುದ್ದಿಯನ್ನು ಅವರ ವಕ್ತಾರರು ಎಕ್ಸ್ ಖಾತೆ ಮೂಲಕ ಖಚಿತಪಡಿಸಿದ್ದಾರೆ. ಕನ್ನಡದ ‘ಸಂಭ್ರಮ’, ‘ರಾಮಕೃಷ್ಣ’ ಮುಂತಾದ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ಕಲ್ಯಾಣಿ ಅವರ ಜತೆಗೆ ಸೂರ್ಯ ಕಿರಣ್ ಮದುವೆ ಆಗಿದ್ದರು. ಸಾಕಷ್ಟು ಸಮಸ್ಯೆಗಳು ಎದುರಾದ ಕಾರಣ ಈ ಜೋಡಿ ದೂರವಾಯ್ತು.

“ನಿರ್ದೇಶಕ ಸೂರ್ಯಕಿರಣ್ ಅವರು ಜಾಂಡೀಸ್‌ನಿಂದ ನಿಧನರಾಗಿದ್ದಾರೆ. ತೆಲುಗು ಚಿತ್ರಗಳು, ʻಸತ್ಯಂʼ, ʻರಾಜು ಭಾಯ್ʼ ಮತ್ತು ಇತರ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಬಿಗ್‌ಬಾಸ್ ತೆಲುಗಿನ ಮಾಜಿ ಸ್ಪರ್ಧಿಯಾಗಿದ್ದರು. ಓಂ ಶಾಂತಿ” ಎಂದು ಸುರೇಶ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸೂರ್ಯ ಕಿರಣ್ ಯಾರು?

ಬಿಗ್ ಬಾಸ್ ತೆಲುಗು ಖ್ಯಾತಿಯ ನಟ ಟಾಲಿವುಡ್ ಚಲನಚಿತ್ರಗಳಲ್ಲಿ ‘ಸತ್ಯಂ’ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ್ದರು. ಸುಮಂತ್ ಮತ್ತು ಜೆನಿಲಿಯಾ ದೇಶಮುಖ್ ನಟಿಸಿದ, ರೊಮ್ಯಾಂಟಿಕ್ ‘ಸತ್ಯಂ’ ಸಿನಿಮಾ ಭಾರಿ ಮೆಚ್ಚುಗೆ ಪಡೆದಿತ್ತು. 150 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡಿತ್ತು. ಅಕ್ಕಿನೇನಿ ಕುಟುಂಬದ ಸುಮಂತ್ ಹೀro ಆಗಿ ಕಾಣಿಸಿಕೊಂಡರೆ, ನಾಯಕಿಯಾಗಿ ಮೊದಲು ಬಾರಿಗೆ ತೆಲುಗು ಚಿತ್ರರಂಗಕ್ಕೆ ಜೆನಿಲಿಯಾ ಕಾಲಿಟ್ಟಿದ್ದರು. ನಾಗಾರ್ಜುನ ನಿರ್ಮಾಣದ ಈ ಸಿನಿಮಾದ ದೊಡ್ಡ ಹಿಟ್ ಆಗಿತ್ತು. ಸೂರ್ಯ ಕಿರಣ್‌ಗೂ ಒಳ್ಳೆಯ ಬ್ರೇಕ್ ಸಿಕ್ಕಿತ್ತು.

ಇದನ್ನೂ ಓದಿ: ಪೇಟಿಎಂ ನಿರ್ಬಂಧ; ಫಾಸ್ಟ್‌ಟ್ಯಾಗ್‌ಗೆ ನಾಳೆಯೊಳಗೆ ಮೊದಲು ಈ ಕೆಲಸ ಮಾಡಿ

ʻಬ್ರಹ್ಮಾಸ್ತ್ರಂʼ (2006), ʻರಾಜು ಭಾಯ್ʼ (2007) ಮತ್ತು ʻಅಧ್ಯಾಯ 6ʼ (2020) ಮುಂತಾದ ತೆಲುಗು ಚಲನಚಿತ್ರಗಳನ್ನು ಸಹ ಸೂರ್ಯ ನಿರ್ದೇಶಿಸಿದ್ದಾರೆ. 2020ರಲ್ಲಿ ರಿಯಾಲಿಟಿ ಶೋ ʻಬಿಗ್ ಬಾಸ್ ತೆಲುಗುʼ ಸೀಸನ್ 4ರಲ್ಲಿ ಕಾಣಿಸಿಕೊಂಡರು.

ಮೂಲತಃ ಕೇರಳದ ತಿರುವನಂತಪುರದವರಾದ ಸೂರ್ಯ ಚೆನ್ನೈನಲ್ಲಿ ಜನಿಸಿದ್ದರು. ಬಾಲನಟನಾಗಿ ‘ಸ್ನೇಹಿಖಾನ್ ಒರು ಪೆನ್ನು’ ನಲ್ಲಿ ಕಾಣಿಸಿಕೊಂಡಿದ್ದರು. 200ಕ್ಕೂ ಹೆಚ್ಚು ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸೂರ್ಯ ಅವರ ಸಹೋದರಿ ಸುಜಿತಾ ಧನುಷ್ ಕೂಡ ನಟಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Rave party: ರೇವ್ ಪಾರ್ಟಿಯ ಕುರಿತು ತೆಲುಗು ನಟಿ ಆಶಿ ರಾಯ್ ಸ್ಫೋಟಕ ಹೇಳಿಕೆ!

Rave party: ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದು, ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

VISTARANEWS.COM


on

Rave party telugu actress Ashi Roy in party
Koo

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದರು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದರು. ಬಳಿಕ ಪೊಲೀಸರು, ಆಕೆ ಪಾರ್ಟಿಯಲ್ಲಿ ಭಾಗಿಯಾಗಿದ್ದನ್ನು ಖಚಿತಪಡಿಸಿದ್ದರು. ಈಗಾಗಲೇ ಪಾರ್ಟಿ ಆಯೋಜಿಸಿದ್ದ ಐವರನ್ನು ಬಂಧಿಸಲಾಗಿದೆ. ಈಗ ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ಮತ್ತೊಬ್ಬ ನಟಿ ಹೆಸರು ಕೇಳಿ ಬಂದಿದೆ. ತೆಲುಗಿನ ನಟಿ ಆಶಿ ರಾಯ್ ತಾನು ಪಾರ್ಟಿಯಲ್ಲಿ ಇದ್ದೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಆಶಿ ರಾಯ್‌ ವಿಡಿಯೊದಲ್ಲಿ ಮಾತನಾಡಿ ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

ರೇವ್‌ ಪಾರ್ಟಿಯಲ್ಲಿ ನಾನಿಲ್ಲ ಎಂದಿದ್ದ ತೆಲುಗು ನಟಿ ಹೇಮಾ

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಹೇಮಾ ಅವರು ಹರಿಬಿಟ್ಟಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳಿದ್ದರು. ಆದರೆ ಪೊಲೀಸರು ಆಕೆಯ ತಪ್ಪು ಮಾಹಿತಿಯನ್ನು ಬಯಲು ಮಾಡಿದ್ದರು.

ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ. 3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

Continue Reading

ಟಾಲಿವುಡ್

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

List of Movies Releasing: ಈ ವಾರ ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ!

VISTARANEWS.COM


on

List of Movies Releasing From may 24
Koo

ಬೆಂಗಳೂರು: ಐಪಿಎಲ್‌, ಲೋಕಸಭಾ ಎಲೆಕ್ಷನ್‌ನಿಂದಾಗಿ ಕನ್ನಡ ಸಿನಿಮಾಗಳು (List of Movies Releasing) ಪ್ರೇಕ್ಷಕರ ಮುಂದೆ ಬಂದಿಲ್ಲ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ…

‘ದಿ ಜಡ್ಜ್‌ಮೆಂಟ್’

ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (tKannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದಿ ಜಡ್ಜ್‌ಮೆಂಟ್’ ಸಿನಿಮಾ ಈ ವಾರ ತೆರೆಗೆ ಬರ್ತಿದೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೂರನೇ ಕೃಷ್ಣಪ್ಪ

ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ʻಮೂರನೇ ಕೃಷ್ಣಪ್ಪʼ. ಲೂಸ್ ಮಾದ ಯೋಗಿ (Kannada New Movie) ಸಂಭಾಷಣೆಯಿಂದ ಶುರುವಾಗುವ ಟ್ರೈಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ ಗಮನ ಸೆಳೆಯುತ್ತದೆ. ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರಂಟಿ ಎಂಬ ಸಂದೇಶ ರವಾನಿಸಿದೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

3ದೇವಿ

3ದೇವಿ ಅಶ್ವಿನ್ ಮ್ಯಾಥ್ಯೂ ನಿರ್ದೇಶನದ 3ದೇವಿ ಸಿನಿಮಾ ಕೂಡ ಈ ವಾರವೇ ಪ್ರೇಕ್ಷಕರ ಮುಂದೆ ಬರಲಿದೆ. ಮೊಗ್ಗಿನ ಮನಸ್ಸಿನ ಶುಭಾ ಪೂಂಜಾ (Shubha Poonja) ದೇವಿ ರೂಪದಲ್ಲಿಯೇ ಅಭಿನಯಿಸಿದ್ದಾರೆ. ಸಂಧ್ಯಾ ಮತ್ತು ಜ್ಯೋತ್ಸ್ನಾ ತಾರಾಗಣದಲ್ಲಿದ್ದಾರೆ.

ಎವಿಡೆನ್ಸ್

ಸಿ. ಪಿ ಪ್ರವೀಣ್ ನಿರ್ದೇಶನದ ‘ಎವಿಡೆನ್ಸ್’ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ʼಮಂಗಳಗೌರಿ ಮದುವೆ’ ಸೇರಿ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ, ಅದರಲ್ಲಿಯೂ ದೇವಿ ಪಾತ್ರದಲ್ಲಿ ಹೆಚ್ಚು ಕಾಣಿಸಿಕೊಂಡಿರುವ ನಟಿ ಮಾನಸಾ ಜೋಶಿ ಅವರು ಈ ಬಾರಿ ‘ಎವಿಡೆನ್ಸ್’ ಎನ್ನುವ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ 3 ಚಿತ್ರಗಳ ಜೊತೆಗೆ ‘ಸೆಲ್ಯೂಟ್’ ಎನ್ನುವ ಮತ್ತೊಂದು ಕನ್ನಡ ಸಿನಿಮಾ ತೆರೆಗೆ ಬರಲಿದೆ.

ಟರ್ಬೋ

ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ.

ಇದನ್ನೂ ಓದಿ: Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading

South Cinema

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Allu Arjun: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

VISTARANEWS.COM


on

Allu Arjun Sneha spotted at a dhaba
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ಪತ್ನಿ ಸ್ನೇಹಾ ರೆಡ್ಡಿ ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿರುವ ಫೋಟೊ ಇದೀಗ ವೈರಲ್‌ ಆಗಿದೆ. ಡಾಬಾದಲ್ಲಿ ಊಟ ಮಾಡುತ್ತಿರುವ ಫೋಟೊ ಕಂಡು ದಂಪತಿಯ ‘ಸರಳತೆ’ಗೆ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ. ಜೋಡಿ ಯಾವ ಡಾಬಾದಲ್ಲಿ ಊಟ ಮಾಡಿದೆ ಎಂದು ತಿಳಿದು ಬಂದಿಲ್ಲ.

ಅಭಿಮಾನಿಯೊಬ್ಬರು ಕ್ಲಿಕ್ಕಿಸಿದ ಚಿತ್ರದಲ್ಲಿ ಅಲ್ಲು ಅವರು ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು, ಸ್ನೇಹಾ ಊಟ ಮಾಡುತ್ತಿದ್ದಾರೆ. ʻʻರಸ್ತೆ ಬದಿಯ ಡಾಬಾದಲ್ಲಿ ಜೋಡಿ! ಸರಳತೆಯ ಮನುಷ್ಯ.” ಎಂದು ಬರೆದುಕೊಂಡಿದ್ದಾರೆ ಒಬ್ಬ ಅಭಿಮಾನಿ. ಇನ್ನೊಬ್ಬರು ʻʻಪುಷ್ಪ ಅಂತಹ ಸೂಪರ್‌ ಹಿಟ್‌ ಸಿನಿಮಾ ಮಾಡಿದ್ದರೂ ಸಿಂಪಲ್‌ ಆಗಿ ಇದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Payal Rajput: ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೋರ್ ನಿರ್ದೇಶಕ ಮತ್ತು ನಿರ್ಮಾಪಕ.

VISTARANEWS.COM


on

Payal Rajput Accuses Rakshana Producers Of Not Clearing Her Dues
Koo

ಬೆಂಗಳೂರು: ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ (Payal Rajput) ` RX 100 ಸಿನಿಮಾ ಮೂಲಕ ಟಾಲಿವುಡ್‌ನಲ್ಲಿ ಖ್ಯಾತಿ ಗಳಿಸಿದರು. ಜತೆಗೆ ಕನ್ನಡ ‘ಹೆಡ್‌ಬುಷ್’ ಚಿತ್ರದಲ್ಲಿ ಮಿಂಚಿದ್ದರು. ಆದರೀಗ ನಟಿ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪ ಮಾಡಿದ್ದಾರೆ. ʻತಂಡ ಇನ್ನೂ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ “ನನ್ನ ಬಳಿ “ರಕ್ಷಣ” ಎಂಬ ಸಿನಿಮಾವಿದೆ . ಇದನ್ನು 2019 ಮತ್ತು 2020ರಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ 5Ws ಎಂದು ಹೆಸರಿಸಲಾಗಿದೆ. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ಆದರೆ ಇತ್ತೀಚೆಗೆ ನನಗೆ ಸಿಕ್ಕ ಯಶಸ್ಸು ನೋಡಿ ಈಗ ನಿರ್ಮಾಪಕರು ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನನ್ನ ಬಾಕಿ ಹಣಗಳನ್ನು ಕ್ಲೀಯರ್‌ ಮಾಡದೇ ಪ್ರಚಾರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಚಿತ್ರದ ಪ್ರಚಾರಕ್ಕೆ ಬರದೇ ಇದ್ದರೆ ತೆಲುಗು ಉದ್ಯಮದಿಂದ ಬ್ಯಾನ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನನ್ನ ತಂಡ ಬಾಕಿ ಮೊತ್ತದ ಬಗ್ಗೆ ಚರ್ಚಿಸಿದಾಗ ರಾಜಿ ಮಾಡಿಕೊಳ್ಳಲು ನಿರಾಕರಿಸಿದರು. ನನ್ನ ಹೆಸರನ್ನು ಡ್ಯಾಮೇಜ್ ಆಗುವಂತೆ ಬಳಸಲಾಗುತ್ತಿದೆ. ಇತ್ತೀಚಿನ ಮೀಟಿಂಗ್‌ನಲ್ಲಿ ನನ್ನ ಬಗ್ಗೆ ಅಸಭ್ಯ ಭಾಷೆ ಬಳಸಲಾಗಿದೆ. ನನಗೆ ನೀಡಬೇಕಾದ ಸಂಪೂರ್ಣ ಸಂಭಾವನೆಯನ್ನು ನೀಡದೆ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿದ್ದಕ್ಕಾಗಿ ನಾನು ಈಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದುಕೊಂಡಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೂರ್ ನಿರ್ದೇಶಕ ಮತ್ತು ನಿರ್ಮಾಪಕ.

ದೆಹಲಿಯಲ್ಲಿ ಹುಟ್ಟಿ ಬೆಳೆದ ಪಾಯಲ್ ಮೊದಲಿಗೆ ಕಿರುತೆರೆ ಧಾರಾವಾಹಿಯಲ್ಲಿ ನಟಿಸಿದ್ದರು. ‘ಸಪ್ನೋನ್ ಸೇ ಭಾರೆ ನೈನಾ’ ಧಾರಾವಾಹಿಯಲ್ಲಿ ಸೋನಾಕ್ಷಿ ಎನ್ನುವ ಪಾತ್ರ ಮಾಡಿದ್ದರು.ಶೂನ್ಯ ನಿರ್ದೇಶನದ ‘ಹೆಡ್‌ಬುಷ್’ ಚಿತ್ರದಲ್ಲಿ ರೇಷ್ಮಾ ಎನ್ನುವ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದರು.

Continue Reading
Advertisement
Star Holiday Fashion
ಫ್ಯಾಷನ್8 mins ago

Star Holiday Fashion: ಪರ್ಫೆಕ್ಟ್ ಸಮ್ಮರ್‌ ಹಾಲಿ ಡೇ ಲುಕ್‌ನಲ್ಲಿ ನಟಿ ಅಮೂಲ್ಯ

Prajwal Revanna Case Surrender Now Devegowda warning to Prajwal
ರಾಜಕೀಯ12 mins ago

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

IPL 202
ಕ್ರೀಡೆ12 mins ago

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

2024 Maruti Swift
ಆಟೋಮೊಬೈಲ್19 mins ago

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

West Bengal Violence
ದೇಶ37 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ51 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್54 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ1 hour ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ1 hour ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌