The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ? - Vistara News

ಟಾಲಿವುಡ್

The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

The Birthday Boy: ವಿಸ್ಕಿ ನಿರ್ದೇಶನದ ಸಿನಿಮಾಗಳನ್ನು ಅವರ ಮನೆಯವರು ಇಷ್ಟಪಡುವುದಿಲ್ಲ. ಹೀಗಾಗಿ ಅವರಿಗೆ ಗೊತ್ತಾಗದಂತೆ ವೇಷ ಬದಲಿಸಿ ತಿರುಗಾಡುತ್ತಿದ್ದಾರೆ. ನನಗೆ ಪ್ರಚಾರದ ಅವಶ್ಯಕತೆಯಿಲ್ಲ. ನಾನು ಬರೀ ಸಿನಿಮಾ ನಿರ್ದೇಶನ ಮಾಡಿ ಹೋಗೊಕೆ ಬಂದೆ ಅಷ್ಟೆ. ನನಗೆ ಕ್ಯಾಮೆರಾ ಮುಂದೆ ಬಂದು ಮಾತನಾಡುವುದಕ್ಕೆ ಇಷ್ಟವಿಲ್ಲ.

VISTARANEWS.COM


on

The Birthday Boy Director Whisky Real Life Story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಮಾನ್ಯವಾಗಿ ಅನೇಕರು ಸಿನಿಮಾ ನಿರ್ದೇಶನದ ಮೂಲಕವೇ ಜನಪ್ರಿಯರಾಗಬೇಕೆಂದು ಯೋಚಿಸುತ್ತಾರೆ. ಆದರೆ ತೆಲುಗು (The Birthday Boy) ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಿರ್ದೇಶಕರೊಬ್ಬರು ತಮ್ಮ ಹೆಸರನ್ನು “ವಿಸ್ಕಿ’ ಎಂದು ಬದಲಾಯಿಸಿಕೊಂಡು ಸಿನಿಮಾ ನಿರ್ದೇಶಿಸಿದ್ದಾರೆ. ಪ್ರತಿ ಸಿನಿಮಾದ ಪ್ರಚಾರ ವೇಳೆ ಮುಖ ಕಾಣದಂತೆ ಮಾಸ್ಕ್‌ ಧರಿಸುತ್ತಾರೆ. ನಿರ್ದೇಶಕ ಈ ರೀತಿ ಇರೋದ್ಯಾಕೆ ಎಂದು ತಿಳಿಯಲು ಮುಂದೆ ಓದಿ.

ವಿಸ್ಕಿ ನಿರ್ದೇಶನದ ಸಿನಿಮಾಗಳನ್ನು ಅವರ ಮನೆಯವರು ಇಷ್ಟಪಡುವುದಿಲ್ಲ. ಹೀಗಾಗಿ ಅವರಿಗೆ ಗೊತ್ತಾಗದಂತೆ ವೇಷ ಬದಲಿಸಿ ತಿರುಗಾಡುತ್ತಿದ್ದಾರೆ. ನನಗೆ ಪ್ರಚಾರದ ಅವಶ್ಯಕತೆಯಿಲ್ಲ. ನಾನು ಬರೀ ಸಿನಿಮಾ ನಿರ್ದೇಶನ ಮಾಡಿ ಹೋಗೊಕೆ ಬಂದೆ ಅಷ್ಟೆ. ನನಗೆ ಕ್ಯಾಮೆರಾ ಮುಂದೆ ಬಂದು ಮಾತನಾಡುವುದಕ್ಕೆ ಇಷ್ಟವಿಲ್ಲ. ನಿಜ ಹೇಳಬೇಕು ಅಂದರೆ ನಾನು ಚಿತ್ರರಂಗಕ್ಕೆ ಬಂದಿರುವುದು ನಮ್ಮ ಮನೆಯವರಿಗೆ ಗೊತ್ತಿಲ್ಲ. ಕದ್ದು ಮುಚ್ಚಿ ಬಂದಿದ್ದೀನಿ. ಆ ವಿಚಾರ ಅವರಿಗೆ ಗೊತ್ತಾದರೆ ನೋವಾಗುತ್ತದೆ ಎನ್ನುತ್ತಿದ್ದಾರೆ. ಮಾಸ್ಕ್ ಹಾಕಿಕೊಂಡು ಸಿನಿಮಾ ಸುದ್ದಿಗೋಷ್ಠಿ, ಸಂದರ್ಶನದಲ್ಲಿ ಭಾಗಿ ಆಗುತ್ತಿದ್ದಾರೆ.

ಇದೀಗ ರ‌ವಿಕೃಷ್ಣ, ಸ‌ಮೀರ್ ಮ‌ಲ್ಲಾ ಮುಖ್ಯಭೂಮಿಕೆಯಲ್ಲಿರುವ ‘ದಿ ಬರ್ತ್‌ಡೇ ಬಾಯ್‌’ ತೆಲುಗು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ವಿಸ್ಕಿ ಎಂಬುವವರು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೆ ಇದು ಅವರ ನಿಜವಾದ ಹೆಸರಲ್ಲ, ಚಿತ್ರಕ್ಕಾಗಿ ಬದಲಿಸಿಕೊಂಡಿದ್ದಾರೆ.

ಈ ಚಿತ್ರ ಇದೇ ತಿಂಗಳ 19 ರಂದು ಬಿಡುಗಡೆಯಾಗಲಿದೆ. ಭರತ್ ಇಮ್ಮಲರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರವಿಕೃಷ್ಣ ಮತ್ತು ರಾಜೀವ್ ಕಣಕಾಲ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. “ವಿಸ್ಕೀ” (ನಿರ್ದೇಶಕ ವಿಸ್ಕಿ) ಎಂಬ ಹೆಸರನ್ನು ಇಟ್ಟುಕೊಳ್ಳಲು ಕಾರಣವೆಂದರೆ ಅವರು ಒಂದು ನಾಯಿಮರಿಯನ್ನು ಸಾಕಿದ್ದರು. ನಾಯಿ ಕರೋನಾ ಸಮಯದಲ್ಲಿ ಸತ್ತು ಹೋಯ್ತು. ಅವರು ಅದಕ್ಕೆ ವಿಸ್ಕಿ ಎಂದು ಹೆಸರಿಟ್ಟಿದ್ದರು. ಹೀಗಾಗಿ ತಮ್ಮನ್ನು ಈ ರೀತಿ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

ಐವರು ಅನಿವಾಸಿ ಭಾರತೀಯರ ಬದುಕಿನ ಮೂಲ ಕಥೆಗೆ ಸಿನಿಮಾ ಅಂಶಗಳನ್ನು ಸೇರಿಸಿ ಸಿನಿಮಾ ಮಾಡಲಾಗಿದೆ. ನನ್ನ ಎರಡು ಸಿನಿಮಾಗಳು ಫ್ಲಾಪ್ ಆದರೆ ಚಿತ್ರರಂಗ ಬಿಟ್ಟುಬಿಡುತ್ತೇನೆ ಎಂದು ನಿರ್ದೇಶಕ ವಿಸ್ಕಿ ಹೇಳಿದ್ದಾರೆ. ಸದ್ಯ ಮಾಸ್ಕ್ ಹಾಕಿಕೊಂಡು ಆತ ಸಿನಿಮಾ ಪ್ರಚಾರ ಮಾಡುತ್ತಿರುವುದು ವೈರಲ್ ಆಗುತ್ತಿದೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Sudha Murty: ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Sudha Murty praised for simplicity at Ambani wedding
Koo

ಮುಂಬೈ: ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಅದ್ದೂರಿ ವಿವಾಹದಲ್ಲಿ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಪಾಲ್ಗೊಂಡಿದ್ದರು.   (Sudha Murty) ಅವರ ಜತೆ ಮಹೇಶ್‌ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಸುಧಾ ಮೂರ್ತಿ ಜೊತೆಗಿನ ಫೋಟೊ ಶೇರ್ ಮಾಡಿ, ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಜತೆಗೆ ಸುಧಾ ಮೂರ್ತಿ ಅವರ ಸರಳತೆಗೆ ನೆಟ್ಟಿಗರು ಹಾಡಿ ಹೊಗಳಿದ್ದಾರೆ. ಮಾತ್ರವಲ್ಲ ಕೊರಳಲ್ಲಿ ಮಂಗಳ ಸೂತ್ರ ಮಾತ್ರ ಧರಿಸಿ ಸಿಂಪಲ್‌ ಆಗಿ ಕಂಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ.

ಇದನ್ನೂ ಓದಿ: Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಇನ್ನು ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಸುಧಾ ಮೂರ್ತಿ ಅವರನ್ನು ನೆಟ್ಟಿಗರು ಹೊಗಳಿದ್ದಾರೆ. ʻʻಬಿಲಿಯನೇರ್ ಮಹಿಳೆ ಕೇವಲ ಮಂಗಳಸೂತ್ರದೊಂದಿಗೆ ಹಾಜರಾಗುವುದನ್ನು ನೋಡಲು ಖುಷಿ ಆಗುತ್ತೆʼʼಎಂದು ಒಬ್ಬರು ಕಮೆಂಟ್‌ ಮಾಡಿದರೆ, ʻಸರಳ ಮತ್ತು ವಿನಮ್ರʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಸ್ಫೂರ್ತಿದಾಯಕ ಮಹಿಳೆ. ಶೋ-ಆಫ್ ಇಲ್ಲʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದರು.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದರು. ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದರು ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದರು

Continue Reading

ಟಾಲಿವುಡ್

Rashmika Mandanna: ಅಂಬಾನಿ ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಸ್ಟನ್ನಿಂಗ್ ಲುಕ್‌; ಸೀರೆ ಬೆಲೆ ಕೇಳಿ ಫ್ಯಾನ್ಸ್‌ ಶಾಕ್‌!

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಸೀರೆಯಲ್ಲಿ ಮಿಂಚಿದರು. ನೀಲಿ ಸೀರೆಯಲ್ಲಿ ಅದ್ಧೂರಿಯಾಗಿ ಮಿಂಚಿದ್ದಾರೆ. ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷೆಯ ಪುಷ್ಪಾ – 2 ಸಿನಿಮಾ ಮುಂದಿನ ತಿಂಗಳು ಆಗಸ್ಟ್‌ಗೆ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್ ಡೇಟ್ ಡಿಸೆಂಬರ್‌ಗೆ ಫಿಕ್ಸ್ ಆಗಿದೆ. ಅಭಿಮಾನಿಗಳು ರಶ್ಮಿಕಾರನ್ನು ಶ್ರೀವಲ್ಲಿ ಪಾತ್ರದಲ್ಲಿ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

VISTARANEWS.COM


on

Rashmika Mandanna Chose A Beautiful Ajrakh Saree For Anant Ambani
Koo

ಬೆಂಗಳೂರು: ಜುಲೈ 13ರಂದು ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅದ್ಧೂರಿ ಶುಭ ಆಶೀರ್ವಾದ ಸಮಾರಂಭ ನಡೆಯಿತು. ಅನೇಕ ಬಾಲಿವುಡ್‌, ಸೌತ್‌ ಸೆಲೆಬ್ರಿಟಿಗಳು ಸೇರಿದ್ದರು. ಈ ವೇಳೆ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಸೀರೆಯಲ್ಲಿ ಮಿಂಚಿದರು. ನೀಲಿ ಸೀರೆಯಲ್ಲಿ ಅದ್ಧೂರಿಯಾಗಿ ಮಿಂಚಿದ್ದಾರೆ. ವರದಿಗಳ ಪ್ರಕಾರ ರಶ್ಮಿಕಾ ಸೀರೆ ಬೆಲೆ 1,28,000 ರೂ. ಎನ್ನಲಾಗಿದೆ.

ವಜ್ರಗಳಿಂದ ಅಲಂಕರಿಸಲ್ಪಟ್ಟ ಸುಂದರವಾದ ನೆಕ್ಲೇಸ್ ಅನ್ನು ಧರಿಸಿದ್ದರು, ಅಂದವಾದ ಕಿವಿಯೋಲೆಗಳು, ಬಳೆಗಳ ಸ್ಟಾಕ್ ಮತ್ತು ಸ್ಟೇಟ್‌ಮೆಂಟ್ ರಿಂಗ್‌ನೊಂದಿಗೆ ಮತ್ತಷ್ಟು ಚೆಂದವಾಗಿ ಕಂಡಿದ್ದಾರೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ಬ್ಯೂಸಿ ಇರುವ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷೆಯ ಪುಷ್ಪಾ – 2 ಸಿನಿಮಾ ಮುಂದಿನ ತಿಂಗಳು ಆಗಸ್ಟ್‌ಗೆ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್ ಡೇಟ್ ಡಿಸೆಂಬರ್‌ಗೆ ಫಿಕ್ಸ್ ಆಗಿದೆ. ಅಭಿಮಾನಿಗಳು ರಶ್ಮಿಕಾರನ್ನು ಶ್ರೀವಲ್ಲಿ ಪಾತ್ರದಲ್ಲಿ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.ಇನ್ನು ರಶ್ಮಿಕಾ ಮಂದಣ್ಣ ನಟ ವಿಜಯ್ ದೇವರಕೊಂಡ ಮತ್ತು ಗೌತಮ್ ತಿನ್ನನೂರಿ ಸಿನಿಮಾಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಮಾತು ಕೇಳಿ ಬಂದಿವೆ. ನಟ ಧನುಷ್ ಅಭಿನಯದ ‘ಕುಬೇರ’ ಸಿನಿಮಾದಲ್ಲಿ ನಟಿ ಬ್ಯೂಸಿ ಇದ್ದಾರೆ. ರವಿತೇಜ – ಗೋಪಿಚಂದ್ ಮಲಿನೇನಿ ಚಿತ್ರ ಜೊತೆಗೆ ‘ರೈನ್ಬೋ’ ಲೇಡಿ ಓರಿಯೆಂಟೆಡ್ ಸಿನಿಮಾಗಳ ಮೂಲಕ ರಶ್ಮಿಕಾ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ಬಾಲಿವುಡ್ ಸಲ್ಮಾನ್ ಖಾನ್ ಚಿತ್ರ ‘ಸಿಕಂದರ್’ ಸಿನಿಮಾದಲ್ಲಿ ರಶ್ಮಿಕಾ ನಟಿಸಬೇಕಿದೆ.

ಇದನ್ನೂ ಓದಿ: Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಕುಬೇರ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ. ಸದ್ಯ ಈ ಹೈ-ಬಜೆಟ್ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಟಾಲಿವುಡ್

Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್‌!

Kalki 2898 AD: ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಚಿತ್ರದ ಯಶಸ್ಸನ್ನು ಸಂಭ್ರಮಿಸುತ್ತಿರುವ ಪ್ರಭಾಸ್, ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಚಿತ್ರವನ್ನು ‘ದೊಡ್ಡ ಹಿಟ್’ ಮಾಡಿದಕ್ಕಾಗಿ ಧನ್ಯವಾದ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Kalki 2898 AD Prabhas thanks fans
Koo

ಬೆಂಗಳೂರು: ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ (Kalki 2898 AD) ಚಿತ್ರಮಂದಿರಗಳಲ್ಲಿ ತನ್ನ ಓಟವನ್ನು ಮುಂದುವರಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಚಿತ್ರದ ಯಶಸ್ಸನ್ನು ಸಂಭ್ರಮಿಸುತ್ತಿರುವ ಪ್ರಭಾಸ್, ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಚಿತ್ರವನ್ನು ‘ದೊಡ್ಡ ಹಿಟ್’ ಮಾಡಿದಕ್ಕಾಗಿ ಧನ್ಯವಾದ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ವೈಜಯಂತಿ ನೆಟ್‌ವರ್ಕ್ ಒಂದು ವೀಡಿಯೊವನ್ನು ಹಂಚಿಕೊಂಡಿದೆ. ಅದರಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾ, “ನನಗೆ ಇಷ್ಟು ದೊಡ್ಡ ಹಿಂಟ್‌ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು. ತುಂಬಾ ಧನ್ಯವಾದಗಳು. ನೀವಿಲ್ಲದೆ (ಅಭಿಮಾನಿಗಳು) ನಾನು ಶೂನ್ಯ. ನಾಗ್ ಅಶ್ವಿನ್ ಅವರಿಗೆ ಧನ್ಯವಾದಗಳ. ಇಂತಹ ದೊಡ್ಡ ಸಿನಿಮಾ ಮಾಡಲ ಐದು ವರ್ಷಗಳ ಕಾಲ ಶ್ರಮಿಸಿದ್ದಾರೆ.ನಾವು ನಿರ್ಮಾಪಕರಿಗೆ ಧನ್ಯವಾದ ಹೇಳಬೇಕು. ಅತ್ಯಂತ ಧೈರ್ಯಶಾಲಿ ನಿರ್ಮಾಪಕರು. ಅವರು ಖರ್ಚು ಮಾಡಿದ ರೀತಿ, ನಮಗೆಲ್ಲ ಆತಂಕವಾಯಿತು. ಭಾರತೀಯ ಚಿತ್ರರಂಗದ ಶ್ರೇಷ್ಠ ದಂತಕಥೆಗಳೊಂದಿಗೆ ಕೆಲಸ ಮಾಡುವ ಅವಕಾಶವನ್ನು ನೀಡಿದ ಈ ನಿರ್ಮಾಪಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.

“ನಮ್ಮಲ್ಲಿ ಅಮಿತಾಬ್ ಸರ್ ಮತ್ತು ಕಮಲ್ ಸರ್ ಇದ್ದಾರೆ .ನಾವೆಲ್ಲರೂ ನಿಮ್ಮನ್ನು ನೋಡುತ್ತಾ ಬೆಳೆದಿದ್ದೇವೆ ಮತ್ತು ನಿಮ್ಮಿಂದ ನಾವು ಬಹಳಷ್ಟು ಕಲಿತಿದ್ದೇವೆ. ದೀಪಿಕಾ ಅವರಿಗೆ ಕೂಡ ತುಂಬಾ ಧನ್ಯವಾದಗಳು. ಮತ್ತೊಮ್ಮೆ, ನನ್ನ ಅಭಿಮಾನಿಗಳಿಗೆ ಧನ್ಯವಾದಗಳುʼʼಎಂದು ಹೇಳಿಕೊಂಡಿದ್ದಾರೆ.

Kalki 2898 AD: 1,000 ಕೋಟಿ ರೂ. ಕಲೆಕ್ಷನ್‌ ಮಾಡಿದ `ಕಲ್ಕಿ 2898 ಎಡಿ’: ಪ್ರಭಾಸ್ ಹೊಸ ದಾಖಲೆ!ಇದನ್ನೂ ಓದಿ:

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading

ಟಾಲಿವುಡ್

Raj Tarun: ಆತ್ಮಹತ್ಯೆಗೆ ಯತ್ನಿಸಿದ ನಟ ರಾಜ್ ತರುಣ್ ಪ್ರೇಯಸಿ; ಪೊಲೀಸರ ಮಧ್ಯ ಪ್ರವೇಶ!

Raj Tarun: ಯಾವಾಗ ಲಾವಣ್ಯ ಅವರು ರಾಜ್‌ ತರುಣ್‌ ಹಾಗೂ ಅವರ ಜತೆ ಸಂಬಂಧ ಇತ್ತು ಎನ್ನಲಾಗುತ್ತಿದ್ದ ನಟಿ ಮಾಳವಿ ಮಲ್ಹೋತ್ರಾ ವಿರುದ್ಧ ದೂರು ನೀಡಿದ್ದರೋ. ಅದರ ಪ್ರತಿಯಾಗಿ  ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ ಮಾಳವಿ ಮಲ್ಹೋತ್ರಾ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದರು.

VISTARANEWS.COM


on

Raj Tarun Girl Friend Lawanya Attempted To Suicide
Koo

ಬೆಂಗಳೂರು:  ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿ ಲಾವಣ್ಯ ವಂಚನೆ ಪ್ರಕರಣ ದಾಖಲಿಸಿದ್ದರು. ರಾಜ್​ ಅನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.  ಇದೀಗ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ಆತ್ಮಹತ್ಯೆಯನ್ನು ತಡೆದಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಲಾವಣ್ಯ ಶನಿವಾರ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು ಸೂಕ್ತ ಸಮಯಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗುತ್ತಿದೆ. 

ಯಾವಾಗ ಲಾವಣ್ಯ ಅವರು ರಾಜ್‌ ತರುಣ್‌ ಹಾಗೂ ಅವರ ಜತೆ ಸಂಬಂಧ ಇತ್ತು ಎನ್ನಲಾಗುತ್ತಿದ್ದ ನಟಿ ಮಾಳವಿ ಮಲ್ಹೋತ್ರಾ ವಿರುದ್ಧ ದೂರು ನೀಡಿದ್ದರೋ. ಅದರ ಪ್ರತಿಯಾಗಿ  ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ ಮಾಳವಿ ಮಲ್ಹೋತ್ರಾ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದರು. ಲಾವಣ್ಯ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಾನು ರಾಜ್ ತರುಣ್‌ ಜತೆ ಸಂಬಂಧ ಹೊಂದಿಲ್ಲ ಮತ್ತು ನಮ್ಮಿಬ್ಬರ ಮಧ್ಯೆ ಇರುವುದು ಕೇವಲ ಫ್ರೆಂಡ್‌ಶಿಪ್‌. ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ಹೇಳಿಕೊಂಡಿದ್ದರು.

ಇದೀ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶನಿವಾರ ತಮ್ಮ ವಕೀಲರನ್ನು ಭೇಟಿ ಆಗಿದ್ದ ಲಾವಣ್ಯ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್, ನಟ ರಾಜ್ ತರುಣ್, ತಮ್ಮ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಇನ್ನಿತರೆಗಳಿಂದ ಬೇಸತ್ತಿರುವುದಾಗಿ ಹೇಳಿಕೊಂಡಿದ್ದರು. ಲಾವಣ್ಯ ವಕೀಲರಿಗೆ ಸಂದೇಶ ಕಳಿಸಿ, ಈ ಪ್ರಪಂಚದಲ್ಲಿ ನನ್ನ ದಿನಗಳು ಅಂತ್ಯವಾದವು’, ‘ಈ ಮೈಂಡ್ ಗೇಮ್, ಗಾಸಿಪ್​ಗಳಿಂದ ನನಗೆ ಸಾಕಾಗಿ ಹೋಗಿದೆ’ ಎಂದೆಲ್ಲ ಮೆಸೆಜ್‌ ಕಳುಹಿಸಿದ್ದರಂತೆ. ಲಾವಣ್ಯರ ಮನೆಗೆ ಧಾವಿಸಿದ ಪೊಲೀಸರು ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

ಲಾವಣ್ಯ ಈ ಹಿಂದೆ ದೂರು ನೀಡಿದ್ದೇನು?

ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. . “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.

Continue Reading
Advertisement
b nagendra valmiki corporation scam 2
ಕ್ರೈಂ3 mins ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ10 mins ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

gt world mall assembly live
ಪ್ರಮುಖ ಸುದ್ದಿ10 mins ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

Actor Darshan Judicial Custody Extended Till Aug 1
ಸ್ಯಾಂಡಲ್ ವುಡ್19 mins ago

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Raghaveshwarashree Chaturmasya at Ashoke from 21st July
ಉತ್ತರ ಕನ್ನಡ20 mins ago

Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

Uttara Kannada Landslide
ಮಳೆ25 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Kannada Serials TRP Lakshmi Nivas in Top 3 Lakshmi Baramma at fifth position
ಕಿರುತೆರೆ36 mins ago

Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

Sameer Nigam
ಕರ್ನಾಟಕ49 mins ago

Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

Director R Chandru unveiled the teaser of Hagga movie
ಕರ್ನಾಟಕ51 mins ago

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Dangerous Bike Stunt
Latest1 hour ago

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ25 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌