Pop Singer Shakira: ಅಂತೂ ಇಂತೂ ಜೈಲು ತಪ್ಪಿಸಿಕೊಂಡ ಪಾಪ್ ಸಿಂಗರ್ ಶಕೀರಾ! Vistara News

ಪ್ರಮುಖ ಸುದ್ದಿ

Pop Singer Shakira: ಅಂತೂ ಇಂತೂ ಜೈಲು ತಪ್ಪಿಸಿಕೊಂಡ ಪಾಪ್ ಸಿಂಗರ್ ಶಕೀರಾ!

Pop Singer Shakira: ಸ್ಪೇನ್‌ ತೆರಿಗೆ ವಂಚನೆ ಪ್ರಕರಣದಲ್ಲಿ ಬಹುತೇಕ ಜೈಲು ಪಾಲಾಗಲಿದ್ದ ಖ್ಯಾತ ಪಾಪ್ ಸಿಂಗರ್ ಶಕೀರಾ ಅವರು, ಆ ಸಂಕಟದಿಂದ ಪಾರಾಗಿದ್ದಾರೆ.

VISTARANEWS.COM


on

Spain tax fraud trial, Pop Singer Shakira finalise deal and Will face jail term
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ತೆರಿಗೆ ವಂಚನೆ ಪ್ರಕರಣದಲ್ಲಿ(Spain tax fraud) ಜೈಲಿಗೆ ಹೋಗುವುದನ್ನು (Jail Term) ತಪ್ಪಿಸಿಕೊಳ್ಳುವಲ್ಲಿ ಖ್ಯಾತ ಕೊಲಂಬಿಯನ್ ಪಾಪ್ ಸಿಂಗರ್ ಶಕೀರಾ (Pop Singer Shakira) ಯಶಸ್ವಿಯಾಗಿದ್ದಾರೆ. 2012ರಿಂದ 2014ರ ಅವಧಿಯಲ್ಲಿ ಸ್ಪೇನ್ ತೆರಿಗೆ ಆದಾಯ (Spain Income Tax Department) ಇಲಾಖೆಗೆ 14.5 ಮಿಲಿಯನ್ ಯುರೋ ಪಾವತಿಸಲು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಜೈಲು ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಶಕೀರಾ ಹಾಗೂ ಕೋರ್ಟ್‌ ಮಧ್ಯೆ ಒಪ್ಪಂದವಾಗಿದ್ದು, ಈ ಸಂಬಂಧ ಶಕೀರಾ ವಿರುದ್ಧ ವಿಚಾರಣೆಯನ್ನು ಕೈ ಬಿಟ್ಟು, ಜೈಲು ಬದಲಿಗೆ ದಂಡ ವಿಧಿಸಲು ಕೋರ್ಟ್ ಒಪ್ಪಿಕೊಂಡಿದೆ ಜಡ್ಜ್ ಹೇಳಿದ್ದಾರೆ. ಸ್ಪೇನ್ ಅಧಿಕಾರಿಗಳೊಂದಿಗೆ ಶಕೀರಾ ಎರಡನೇ ತೆರಿಗೆ ವಂಚನೆಯ ಪ್ರಕರಣ ಕೂಡ ಬಾಕಿ ಇದೆ.

ಜುಲೈ 2022ರಲ್ಲಿ ತನ್ನ ಪ್ರಕರಣವನ್ನು ಇತ್ಯರ್ಥಪಡಿಸಲು ಪ್ರಾಸಿಕ್ಯೂಟರ್‌ಗಳು ನೀಡಿದ ಒಪ್ಪಂದವನ್ನು ಶಕೀರಾ ತಿರಸ್ಕರಿಸಿದ್ದರು. ತಾನು ಮುಗ್ಧೆಯಾಗಿದ್ದು, ಕಾನೂನು ಮೇಲೆ ನಂಬಿಕೆ ಇದ್ದು, ಎಲ್ಲವನ್ನೂ ಕಾನೂನಿಗೆ ಬಿಟ್ಟು ಬಿಡುತ್ತೇನೆ ಎಂದು 46 ವರ್ಷ ಶಕೀರಾ ನಂತರ ಹೇಳಿದ್ದರು. ಆ ಸಮಯದಲ್ಲಿ ಒಪ್ಪಂದದ ವಿವರಗಳನ್ನು ಬಹಿರಂಗ ಮಾಡಿರಲಿಲ್ಲ. ಈ ನಡುವೆ ಮಡೋನಾ ಮತ್ತು ಯು2ನ ಬೋನೋ ಸೇರಿದಂತೆ ಶಕೀರಾ ಅವರ ಹೆಸರು ಪ್ಯಾರಡೈಸ್ ಪೇಪರ್ಸ್ ಲೀಕ್‌ನಲ್ಲಿ ಕಾಣಿಸಿಕೊಂಡಿತು. ತೆರಿಗೆ ವಂಚಿಸಿದ ಲಿಸ್ಟ್ ಅನ್ನು ಈ ಪ್ಯಾರಡೈಸ್ ಪೇಪರ್ಸ್ ಒಳಗೊಂಡಿತ್ತು.

ತೆರಿಗೆ ಅಧಿಕಾರಿ ಮೊಕದ್ದಮೆ ಹೂಡುವ ಮೊದಲು ಸೂಚಿಸಿದಷ್ಟು ನಾನು ತೆರಿಗೆಯನ್ನು ಪಾವತಿಸಿದ್ದೇನೆ. ಎಲ್ಲಕ್ಕಿಂತ ಹೆಚ್ಚಾಗಿ ಅಲೆಮಾರಿ ಜೀವನವನ್ನು ಆಯ್ಕೆ ಮಾಡಿಕೊಂಡಿರುವ ತಾನು ಆ ಅವಧಿಯಲ್ಲಿ ಸ್ಪೇನ್‌ನಲ್ಲಿ ಇರಲಿಲ್ಲ ಎಂದೂ ಹೇಳಿದ್ದರು. ಬಾರ್ಸಿಲೋನಾ ಹಾಗೂ ಸ್ಪೇನ್‌ನ ಮಾಜಿ ಫುಟ್ಬಾಲ್ ಆಟಗಾರ ಗೆರಾರ್ಡ್ ಪಿಕ್ವೆ ಜತೆಗೆ 11 ವರ್ಷಗಳ ಕಾಲ ಜತೆಗಿದ್ದರು ಮತ್ತು ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಗಂಡನಿಂದ ಬೇರ್ಪಟ್ಟ ಬಳಿಕ ಶಕೀರಾ ಅವರು ಮಕ್ಕಳೊಂದಿಗೆ ಮಿಯಾಮಿಗೆ ವಲಸೆ ಹೋಗಿದ್ದರು. ಶಕೀರಾ ಅವರ ಪೂರ್ತಿ ಹೆಸರು ಶಕೀರಾ ಇಸಾಬೆಲ್ ಮೆರಾಬಾರಕ್ ರಿಪೋಲ್.

ಪ್ರಾಸಿಕ್ಯೂಟರ್ ಕಚೇರಿಯು ಶಕೀರಾ ಹೇಳಿಕೆಗೆ ವಿರುದ್ಧವಾದ ಅಭಿಪ್ರಾಯವನ್ನು ಹೊಂದಿದೆ. ಶಕೀರಾ ಅವರು ಸ್ಪೇನ್‌ನಲ್ಲಿ ತಾವಿದ್ದ ಅಷ್ಟೂ ವರ್ಷಗಳಲ್ಲಿ ಪ್ರತಿ ವರ್ಷದಲ್ಲಿ ಅರ್ಧಕ್ಕಿಂತ ಹೆಚ್ಚು ಅವಧಿಯನ್ನು ಕಳೆದಿದ್ದಾರೆ ಎಂದು ಆರೋಪಿಸಿದೆ. ಇದರರ್ಥ ಅವರು ಸಾಮಾನ್ಯವಾಗಿ ದೇಶದಲ್ಲಿ ವಾಸಿಸುತ್ತಿದ್ದರು ಮತ್ತು ಮೇ 2012ರಲ್ಲಿ ಅವರು ಖರೀದಿಸಿದ ಬಾರ್ಸಿಲೋನಾ ಆಸ್ತಿಯು ಕುಟುಂಬದ ಸ್ವತ್ತಾಗಿ ಕಾರ್ಯನಿರ್ವಹಿಸಿತ್ತು ಎಂದು ಕಚೇರಿ ಹೇಳಿದೆ. ಅಂತಿಮವಾಗಿ ಸ್ಪೇನ್ ತೆರಿಗೆ ಅಧಿಕಾರಿಗಳು ಮತ್ತು ಶಕೀರಾ ನಡುವೆ ಒಪ್ಪಂದ ಮಾಡಿಸುವಲ್ಲಿ ಕೋರ್ಟ್ ಯಶಸ್ವಿಯಾಗಿದೆ. ಶಕೀರಾ ಅವರು ಬಾಕಿ ಇರುವ ಮೊತ್ತವನ್ನು ಪಾವತಿಸಲು ಒಪ್ಪಿದ್ದಾರೆ. ಆ ಮೂಲಕ ಜೈಲು ವಾಸವನ್ನು ತಪ್ಪಿಸಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: ಪಾಪ್ ಸಂಗೀತದ​ ಐಕಾನ್​ ಶಕೀರಾ ಬದುಕಲ್ಲಿ ಹೊಸ ಲವ್ ಸ್ಟೋರಿ?; 60ವರ್ಷದ ನಟನಿಗೆ ಆಕೆ ಮೇಲೆ ವಿಪರೀತ ಆಸಕ್ತಿ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

ಮಧ್ಯಪ್ರದೇಶ ಹಾಗೂ ರಾಜಸ್ಥಾನ ಈ ಎರಡೂ ರಾಜ್ಯಗಳ ಫಲಿತಾಂಶದ (Election Results 2023) ಪ್ರಭಾವ ಮುಂದಿನ ವರ್ಷ ಆಗಮಿಸುತ್ತಿರುವ ಲೋಕಸಭೆ ಚುನಾವಣೆಯ ಪ್ರದರ್ಶನದ ಮೇಲೆ ಭಾರಿಯಾಗಿಯೇ ಆಗಲಿದೆ.

VISTARANEWS.COM


on

election five states
Koo

ಹೊಸದಿಲ್ಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ (Election Results 2023) ನಡೆಯುತ್ತಿದ್ದಂತೆ, ಎರಡು ದೊಡ್ಡ ರಾಜ್ಯಗಳಾದ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಬಿಜೆಪಿ ಪರ ಬಂದಿರುವುದು ಸ್ಪಷ್ಟವಾಗಿದೆ. ಇದರ ಜತೆ ಛತ್ತೀಸ್‌ಗಢದಲ್ಲೂ ಬಿಜೆಪಿ ಪಾರಮ್ಯ ಸಾಧಿಸುತ್ತಿದೆ. ರಾಜಸ್ಥಾನ (Rajasthan election result) ಹಾಗೂ ಮಧ್ಯಪ್ರದೇಶಗಳು (Madhya Pradesh election result) ಬಿಜೆಪಿ ಕಡೆ ಒಲವು ತೋರಿಸುತ್ತಿರುವಂತೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ (Parliament Election 2024) ಈ ರಾಜ್ಯಗಳ ಪ್ರದರ್ಶನದ ಸ್ಥೂಲ ಚಿತ್ರಣವೂ ಲಭ್ಯವಾಗುವಂತಾಗಿದೆ.

ರಾಜಸ್ಥಾನದಲ್ಲಿ ಹಾಗೂ ಮಧ್ಯಪ್ರದೇಶದಲ್ಲಿ ಎಕ್ಸಿಟ್‌ ಪೋಲ್‌ ನಿರೀಕ್ಷೆಗಳಂತೆಯೇ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ರಾಜಸ್ಥಾನದಲ್ಲಿ ಬಿಜೆಪಿ 106 ಸ್ಥಾನಗಳೊಂದಿಗೆ ಮುನ್ನಡೆ ಹಾಗೂ ಮಧ್ಯಪ್ರದೇಶದಲ್ಲಿ 150 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದೆ. ಈ ಎರಡೂ ರಾಜ್ಯಗಳನ್ನು ಬಿಜೆಪಿ ಬಗಲಿಗೆ ಹಾಕಿಕೊಳ್ಳುವುದು ಖಚಿತವಾಗಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಜಸ್ಥಾನದಲ್ಲಿ ಕಾಂಗ್ರೆಸ್‌ನಿಂದ ಕಿತ್ತುಕೊಳ್ಳಲಿದೆ.

ಈ ಎರಡೂ ರಾಜ್ಯಗಳ ಫಲಿತಾಂಶ ಪ್ರಭಾವ ಬೀರಲಿರುವುದು ಮುಂದಿನ ವರ್ಷ ಆಗಮಿಸುತ್ತಿರುವ ಲೋಕಸಭೆ ಚುನಾವಣೆಯ ಪ್ರದರ್ಶನದ ಮೇಲೆ. ಸಾಮಾನ್ಯವಾಗಿ ಲೋಕಸಭೆ ಚುನಾವಣೆಗಳಲ್ಲಿ ರಾಜ್ಯಗಳ ಮತದಾರರು, ರಾಜ್ಯದಲ್ಲಿ ಯಾವ ಸರ್ಕಾರ ಅಸ್ತಿತ್ವದಲ್ಲದೆಯೋ ಆ ಪಕ್ಷದ ಪರವಾಗಿ ಮತ ಚಲಾಯಿಸುವುದು ರೂಢಿಯಾಗಿದೆ. ಈ ನಿಟ್ಟಿನಿಂದ ನೋಡಿದರೆ, ಈ ಎರಡೂ ರಾಜ್ಯಗಳಲ್ಲಿ ಗರಿಷ್ಠ ಮತದಾರರು ಬಿಜೆಪಿಗೆ ಮತ ಹಾಕುವ ಸಾಧ್ಯತೆ ಇದೆ.

ಮಧ್ಯಪ್ರದೇಶದಲ್ಲಿ 29 ಲೋಕಸಭೆ ಸ್ಥಾನಗಳು ಹಾಗೂ ರಾಜಸ್ಥಾನದಲ್ಲಿ 25 ಲೋಕಸಭೆ ಸ್ಥಾನಗಳು ಇವೆ. ಒಟ್ಟಾಗಿ 54 ಸ್ಥಾನಗಳಾಗುತ್ತವೆ. ಈ ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆ ಇದೆ. ಕಳೆದ ಸಲ ಲೋಕಸಭೆ ಚುನಾವಣೆ ನಡೆದಾಗ, ಈ ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿ ಇರಲಿಲ್ಲ. ಆದರೂ ಇವೆರಡೂ ಕಡೆಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ 53 ಸ್ಥಾನ ಗೆದ್ದಿತ್ತು. ಮಧ್ಯಪ್ರದೇಶದಲ್ಲಿ ಒಂದೇ ಒಂದು ಸ್ಥಾನವನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು 28 ಸೀಟ್‌ಗಳನ್ನು ಗೆದ್ದಿತ್ತು. ರಾಜಸ್ಥಾನದಲ್ಲಿ 25ರಲ್ಲಿ 24 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಉಳಿದ ಒಂದು ಸ್ಥಾನ ಕೂಡ ಬಿಜೆಪಿ ಮಿತ್ರ ಪಕ್ಷದ ಪಾಲಾಗಿತ್ತು. ಈ ಬಾರಿ ರಾಜ್ಯ ಸರ್ಕಾರವೂ ಬಿಜೆಪಿಯದೇ ಆದರೆ ಮತ್ತೊಮ್ಮೆ ಅಷ್ಟೂ ಸ್ಥಾನಗಳನ್ನು ಗೆದ್ದುಕೊಳ್ಳುವುದು ಸುಲಭವಾಗುತ್ತದೆ.

ಮಧ್ಯಪ್ರದೇಶದಲ್ಲಿ 15 ವರ್ಷಕ್ಕೂ ಹೆಚ್ಚು ಅವಧಿಗೆ ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಾರ್ಟಿಗೆ ಈ ಬಾರಿ ಆಡಳಿತ ವಿರೋಧಿ ಅಲೆ ತಟ್ಟಿತ್ತು. ಆದರೆ ಬಿಜೆಪಿಯ ವಿರುದ್ಧ ಮತದಾರರು ತಿರಸ್ಕಾರವನ್ನು ತೋರಿಲ್ಲ. ಕೊನೆ ಗಳಿಗೆಯಲ್ಲಿ ಸಿಎಂ ಪ್ರಕಟಿಸಿದ ಉಚಿತ ಕೊಡುಗೆಗಳು ಮತದಾರರನ್ನು ಬಿಜೆಪಿಯತ್ತ ಎಳೆದು ತಂದಿರುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ನ ವಿರುದ್ಧ ಸಾಕಷ್ಟು ಆಡಳಿತ ವಿರೋಧಿ ಅಲೆ ಇತ್ತು. ಸಿಎಂ ಅಶೋಕ್ ಗೆಹ್ಲೋಟ್ ಮರಳಿ ಅಧಿಕಾರ ಪಡೆಯುವುದಕ್ಕಾಗಿ ಸಾಕಷ್ಟು ಕೊಡುಗೆ ಘೋಷಣೆ ಮಾಡಿದ್ದರೂ, ಅದನ್ನು ಬಹುಮತವಾಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಿಲ್ಲ.

modi in telangana

ಹಿಂದಿ ಬೆಲ್ಟ್‌ನ ಈ ಎರಡು ಪ್ರಮುಖ ರಾಜ್ಯಗಳ 54 ಸ್ಥಾನಗಳನ್ನು ಗೆದ್ದುಕೊಳ್ಳುವುದು ಬಿಜೆಪಿಗೆ ಲೋಕಸಭೆಯಲ್ಲಿ ಲಾಟರಿ ಹೊಡೆದಂತೆಯೇ. ಈ ಎರಡೂ ರಾಜ್ಯಗಳಲ್ಲಿ ಈ ಬಾರಿಯ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಭಾರಿ ಪ್ರಮಾಣದಲ್ಲಿ ರ‍್ಯಾಲಿಗಳನ್ನು ನಡೆಸಿ ಪ್ರಚಾರ ಮಾಡಿದ್ದರು.

ಈ ನಡುವೆ, ಛತ್ತೀಸ್‌ಗಢದಲ್ಲಿ ಕೂಡ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಎರಡೂ ರಾಜ್ಯಗಳ ಮುನ್ನಡೆ ನಿರೀಕ್ಷಿತವಾಗಿದ್ದರೆ, ಛತ್ತೀಸ್‌ಗಢದ ಮುನ್ನಡೆ ಅನಿರೀಕ್ಷಿತವಾಗಿದೆ. ಇಲ್ಲಿ 11 ಲೋಕಸಭೆ ಸ್ಥಾನಗಳಿವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈಗ ಪಕ್ಷ ಅಧಿಕಾರದಲ್ಲಿ ಇರುವುದರಿಂದ 11ರಲ್ಲಿ 11 ಸ್ಥಾನಗಳನ್ನು ಕೂಡ ಬಗಲಿಗೆ ಹಾಕಿಕೊಳ್ಳಲು ಬಿಜೆಪಿ ಎಲ್ಲ ಪ್ರಯತ್ನ ನಡೆಸುವುದು ನಿಶ್ಚಿತ. ಸದ್ಯದ ಟ್ರೆಂಡ್‌ಗಳ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ಸನ್ನೂ ಹಿಂದಿಕ್ಕಿ ಮುನ್ನಡೆದಿದೆ. ಇಲ್ಲಿನ ಫಲಿತಾಂಶ ಎಕ್ಸಿಟ್‌ ಪೋಲ್‌ಗಳನ್ನು ಸುಳ್ಳಾಗಿಸಲಿದೆ. ಇಲ್ಲಿನ 11 ಸ್ಥಾನಗಳನ್ನೂ ಪರಿಗಣಿಸಿದರೆ ಬಿಜೆಪಿ ಈ ಸಲದ ವಿಧಾನಸಭೆ ಚುನಾವಣೆಯಲ್ಲಿ 65 ಲೋಕಸಭೆ ಸ್ಥಾನಗಳನ್ನೂ ಬುಟ್ಟಿಗೆ ಕೆಡವಿಕೊಂಡಂತಾಗುತ್ತದೆ.

ಇದನ್ನೂ ಓದಿ: Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

Continue Reading

ದೇಶ

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Ladli Behna: ಮಧ್ಯಪ್ರದೇಶದಲ್ಲಿ ಚುನಾವಣೆಗೂ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಇದು ಬಿಜೆಪಿಗೆ ವರದಾನವಾಯಿತು ಎಂದು ಹೇಳಲಾಗುತ್ತಿದೆ.

VISTARANEWS.COM


on

Shivraj Singh Chouhan
Koo

ಭೋಪಾಲ್‌: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Madhya Pradesh Assembly Election 2023) ಆಡಳಿತಾರೂಢ ಬಿಜೆಪಿಯು ಚುನಾವಣೆ ಸಮೀಕ್ಷೆ, ಪಕ್ಷದ ಮುಖಂಡರ ನಿರೀಕ್ಷೆಯನ್ನೂ ಮೀರಿ ಮುನ್ನಡೆ ಸಾಧಿಸಿದೆ. ಒಟ್ಟು 230 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಬಿಜೆಪಿಗೆ ಗೆಲುವಿಗೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದರೂ ಚುನಾವಣೆಗೆ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಅವರು ಜಾರಿಗೆ ತಂದ ಕೆಲ ಯೋಜನೆಗಳು ಗೆಲುವಿಗೆ (Madhya Pradesh Election Result 2023) ಮುಖ್ಯ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ, ಲಾಡ್ಲಿ ಬೆಹನಾ (Ladli Behna) ಯೋಜನೆಯು ಮಧ್ಯಪ್ರದೇಶ ಹೆಣ್ಣುಮಕ್ಕಳ ಮನ ಗೆದ್ದಿತು ಎಂದು ಹೇಳಲಾಗುತ್ತಿದೆ.

ಏನಿದು ಲಾಡ್ಲಿ ಬೆಹನಾ ಸ್ಕೀಮ್?

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು.

ಅಷ್ಟೇ ಅಲ್ಲ, ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗ ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ನೀಡುವ ಮಾಸಿಕ 1 ಸಾವಿರ ರೂ. ಸಹಾಯಧನದ ಮೊತ್ತವನ್ನು 1,250 ರೂ.ಗೆ ಏರಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. ಸಾವನ್‌ ತಿಂಗಳಲ್ಲಿ ಬಡವರಿಗೆ ಕೇವಲ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದರಿಂದಾಗಿ ಮಧ್ಯಪ್ರದೇಶದ ಮಹಿಳೆಯರು ಬಿಜೆಪಿ ಪರ ವಾಲಿದರು. ಕಾಂಗ್ರೆಸ್‌ ಗ್ಯಾರಂಟಿಗಳನ್ನೂ ಮೀರಿ ಅವರು ಬಿಜೆಪಿಗೆ ಮತ ಹಾಕಿದರು ಎಂದು ತಿಳಿದುಬಂದಿದೆ. ಇದರೊಂದಿಗೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಐದನೇ ಬಾರಿ ಸಿಎಂ ಆಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Election Results 2023 : ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಅಲ್ಲಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

VISTARANEWS.COM


on

R Ashok
Koo

ಬೆಂಗಳೂರು: ತೆಲಂಗಾಣ ಕಾಂಗ್ರೆಸ್‌ನವರಿಗೆ (Telangana Congress) ಧಮ್ ಇಲ್ಲ. ಬರಗಾಲ ಬಂದಾಗ ಸಿಎಂ ಸಿದ್ದರಾಮಯ್ಯ (CM Siddaramaiah) ಕಣ್ಣೀರು ಸುರಿಸಿದ್ದೇ ಸುರಿಸಿದ್ದು. ಇವಾಗ ಅವರದ್ದು ಬರೀ ಮೊಸಳೆ ಕಣ್ಣೀರು ಎಂಬುದು ಗೊತ್ತಾಗಿದೆ. ಅಧಿವೇಶನದಲ್ಲಿ ಬರದ ಬಗ್ಗೆ ಮಾತನಾಡೋದು ಬಿಟ್ಟು ಇಲ್ಲಿ ರೆಸಾರ್ಟ್‌ಗೆ ತೆಲಂಗಾಣದ ಶಾಸಕರನ್ನು ಕರೆತಂದು ಸಚಿವರು ಸೇವೆ ಮಾಡುತ್ತಾ ಕುಳಿತುಕೊಂಡರೆ ಪರಿಣಾಮ ನೆಟ್ಟಗಿರಲ್ಲ. ಅವರಿಗೆ ಹೋರಾಟ ಪ್ರತಿಭಟನೆಗಳ ಮೂಲಕ ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಆರ್.‌ ಅಶೋಕ್ (R Ashok) ಹೇಳಿದರು. ಅಲ್ಲದೆ, ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ (Election Results 2023) ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಗೆಲ್ಲುವ ರಾಜ್ಯಗಳಿಗೆ ಓಡಿ ಹೋಗುವ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಗೆಲ್ಲುವ ರಾಜ್ಯಗಳಿಗೆಲ್ಲ ಓಡಿ ಹೋಗುತ್ತಾರೆ. ಮಧ್ಯಪ್ರದೇಶ ಗೆದ್ದರೂ ಅಲ್ಲಿಗೆ ಓಡಿ ಹೋಗುತ್ತಿದ್ದರು. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿ ಸಿಎಂ ಆಗಬೇಕು ಎಂಬ ಅವರ ಕನಸಿಗೆ ಇಲ್ಲಿರುವ ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಲ್ಲವೇ? ಪಾಪ ಶಿವಕುಮಾರ್‌ಗೆ ಸಿದ್ದರಾಮಯ್ಯ ಬಿಟ್ಟು ಕೊಡಬೇಕಲ್ಲ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ವ್ಯಂಗ್ಯವಾಡಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲ ಕಡೆ ಬಿಜೆಪಿ ಗೆಲುವಿನ ಹೊಸ್ತಿಲಿನಲ್ಲಿ ಇದೆ. ಗ್ಯಾರಂಟಿಗಳು ಎಲ್ಲ ಠುಸ್ ಪಟಾಕಿ ಎಂದು ಹೇಳಿದರು.

ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಸೋಲು ಕಂಡಿದ್ದೆವು. ತೆಲಂಗಾಣದಲ್ಲೂ ನಾವು ನಾಲ್ಕು ಸೀಟು ಪಡೆದಿದ್ದೇವೆ. ರಾಜಸ್ಥಾನ ಬಿಜೆಪಿ ಗೆಲ್ಲೋದು ನಿಶ್ಚಿತ. ತೆಲಂಗಾಣದಲ್ಲೂ ಬಿಜೆಪಿ ಹೆಚ್ಚು ಸೀಟುಗಳು ಬರುತ್ತಿದೆ. ಎಲ್ಲ ಕಡೆಯೂ ಬಿಜೆಪಿ ಜಯದ ಹೊಸ್ತಿಲಲ್ಲಿ ಇದೆ. ಇದೆಲ್ಲವೂ ನರೇಂದ್ರ ಮೋದಿಯವರ ವರ್ಚಸ್ಸಿನಿಂದ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಎಲ್ಲ ಕಡೆ ಟೋಪಿ ಹಾಕಿಕೊಂಡು‌ ಹೋಗಿ ಈ ನಮ್ಮ ಕಾಂಗ್ರೆಸ್ ನಾಯಕರು ತೆಲಂಗಾಣದ ರೆಸಾರ್ಟ್‌ನಲ್ಲಿ ಸರ್ವಿಸ್‌ ಕೊಡೋಕೆ ಹೋಗಿದ್ದಾರೆ. ಇದು ಒಂದು ನಾಚಿಕೆಗೇಡಿನ ಸಂಗತಿ ಎಂದು ಆರ್. ಅಶೋಕ್ ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಲಾಭ

ತೆಲಂಗಾಣದಲ್ಲಿ ಕೆಸಿಆರ್ ಕುಟುಂಬ ರಾಜಕಾರಣದಿಂದ ಹಿನ್ನಡೆ ಆಗಿದೆ. ಕಳೆದ ಚುನಾವಣೆಯಲ್ಲಿ ಈ ನಾಲ್ಕು ರಾಜ್ಯದಲ್ಲಿ ನಾವು ಸೋತ್ತಿದ್ದೆವು. ಆದರೆ, ಈ ಬಾರಿ ಎರಡು ರಾಜ್ಯದಲ್ಲಿ ಗೆಲುವು ಸಾಧಿಸಿದ್ದೇವೆ. ತೆಲಂಗಾಣದಲ್ಲಿ 11 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದೇವೆ. ಕಳೆದ ಬಾರಿ ತೆಲಂಗಾಣದಲ್ಲಿ ನಾಲ್ಕು ಸ್ಥಾನ ಇತ್ತು. ಈಗ 11 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದೇವೆ. ದೊಡ್ಡ ದೊಡ್ಡ ರಾಜ್ಯದಲ್ಲಿ ಬಿಜೆಪಿ ಮುನ್ನಡೆಯನ್ನು ಕಂಡುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಬಹುದಾದ ರಾಜ್ಯದಲ್ಲಿ ನಾವು ಮುಂದೆ ಇದ್ದೇವೆ ಎಂದು ಆರ್.‌ ಅಶೋಕ್ ಹೇಳಿದರು.

ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ

ಬಿಆರ್‌ಎಸ್ ತೆಲಂಗಾಣದಲ್ಲಿ ಕುಟುಂಬ ರಾಜಕೀಯ ಮಾಡಿದೆ. ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ. ಕಳೆದ ಬಾರಿ ಮಧ್ಯಪ್ರದೇಶ, ಛತ್ತಿಸ್‌ಗಡ, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಗಳಿಸಿತ್ತು. ಆದರೆ, ಈ ವರ್ಷ ಬಿಜೆಪಿ ಮುಂದಿದೆ. ಕರ್ನಾಟಕದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗುವ ವಿಚಾರ. ಈಗಿನ ಫಲಿತಾಂಶ ನೋಡಿದರೆ ಕಾಂಗ್ರೆಸ್‌ನವರೆ ಬಿಜೆಪಿಗೆ ಬರುವ ಸಾಧ್ಯತೆ ಇದೆ. ಕಾಂಗ್ರೆಸ್‌ನಲ್ಲೇ ಭಿನ್ನಮತೀಯ ಚಟುವಟಿಕೆ ಹೆಚ್ಚಾಗಿದೆ. ಬೆಳಗಾವಿ, ದಾವಣಗೆರೆ, ರಾಯಚೂರಿನಲ್ಲಿ ಕಾಂಗ್ರೆಸ್ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್‌ನವರು ಅವರ ಕಾಲಿನ ಮೇಲೆ ಅವರೇ ಕಲ್ಲು ಹಾಕಿಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ನಾಳೆ ಅಧಿವೇಶನ ಇದ್ದರೂ ಡಿ.ಕೆ. ಶಿವಕುಮಾರ್‌ ಹಾಗೂ ಕೆಲವು ಸಚಿವರು ತೆಲಂಗಾಣಕ್ಕೆ ಹೋಗಿರುವ ವಿಚಾರ‌ದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಬರ ಇದೆ‌. ಇಲ್ಲಿನ ರೈತರು ಬರಗಾಲದಲ್ಲಿ ಸಂಕಷ್ಟದಲ್ಲಿದ್ದರೂ ತೆಲಂಗಾಣಕ್ಕೆ ಹೋಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

ಲೋಕಸಭೆಯಲ್ಲೂ ಗ್ಯಾರಂಟಿ ಅಬ್ಬರ; ಜನ ತೀರ್ಮಾನ ಮಾಡ್ತಾರೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಯೋಜನೆಗಳ ಅಬ್ಬರ ಬರಲಿದೆ. ಆದರೆ, ಜನ ತೀರ್ಮಾನ ಮಾಡುತ್ತಾರೆ. ಮೋದಿ ಸರ್ಕಾರ ಬೇಕಾ ಅಥವಾ ಮಮತಾ ಬ್ಯಾನರ್ಜಿ, ರಾಹುಲ್‌ನಂಥವರ ಸರ್ಕಾರ ಬೇಕಾ ಅಂತಾ ಜನ ತೀರ್ಮಾನ ಮಾಡಲಿ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ದೇಶ

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

Election Results 2023: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಬಿಜೆಪಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ (Election Results 2023) ಸ್ಪಷ್ಟ ಚಿತ್ರಣ ದೊರೆಯುತ್ತಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಇನ್ನು ಛತ್ತೀಸ್‌ಗಢದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿ ಇದೆ. ಇದರ ಬೆನ್ನಲ್ಲೇ, ಭಾನುವಾರ ಸಂಜೆ (ಡಿಸೆಂಬರ್‌ 3) ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವುದು ಬಹುತೇಕ ನಿಶ್ಚಿತವಾಗಿದೆ. ಹಾಗಾಗಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಭಾನುವಾರ ಸಂಜೆ 5 ಗಂಟೆಯಿಂದಲೇ ಸಂಭ್ರಮಾಚರಣೆ ಆರಂಭವಾಗಲಿದೆ. ಸಿಹಿ ಹಂಚಿ, ಸಂಪ್ರದಾಯಿಕ ನೃತ್ಯ ಮಾಡಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ 6.30ಕ್ಕೆ ಕಚೇರಿಗೆ ಆಗಮಿಸಲಿದ್ದಾರೆ. ಇದೇ ವೇಳೆ ಅವರು ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಜತೆಗೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದ ಒಟ್ಟು 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 116ರ ಮ್ಯಾಜಿಕ್‌ ನಂಬರ್‌ ಗಡಿ ದಾಟಿರುವ ಕಾರಣ ಗೆಲುವು ನಿಶ್ಚಿತವಾಗಿದೆ. ಇನ್ನು ರಾಜಸ್ಥಾನದಲ್ಲಿ 199 ಕ್ಷೇತ್ರಗಳ ಪೈಕಿ ಬಿಜೆಪಿಯು 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 74ರಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿಯೂ ಬಿಜೆಪಿಯು 100ರ ಮ್ಯಾಜಿಕ್‌ ನಂಬರ್‌ ಗಡಿ ದಾಟುವುದು ನಿಶ್ಚಿತವಾಗಿದೆ. ಅತ್ತ, ತೆಲಂಗಾಣದಲ್ಲಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿರುವ ಕಾರಣ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ, ಭಾನುವಾರ ಸಂಜೆಯೇ ಇಂಡಿಯಾ ಒಕ್ಕೂಟದ ಸಭೆ ಕೂಡ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಗೆಲುವಿನ ಕುರಿತು ಚೌಹಾಣ್‌ ಪ್ರತಿಕ್ರಿಯೆ

ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Crime Sense Murder Case
ಕರ್ನಾಟಕ21 mins ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ26 mins ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ40 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ43 mins ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್45 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ59 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್1 hour ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ1 hour ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ2 hours ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು2 hours ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ40 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ20 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌