Spandana Vijay Raghavendra: ತಮ್ಮಂದಿರಿಗೆ ಧೈರ್ಯ ತುಂಬಿಯೂ ಬಿಕ್ಕಿ ಬಿಕ್ಕಿ ಅತ್ತ ದೊಡ್ಮನೆ ಸೊಸೆ ಅಶ್ವಿನಿ Vistara News

ಸಿನಿಮಾ

Spandana Vijay Raghavendra: ತಮ್ಮಂದಿರಿಗೆ ಧೈರ್ಯ ತುಂಬಿಯೂ ಬಿಕ್ಕಿ ಬಿಕ್ಕಿ ಅತ್ತ ದೊಡ್ಮನೆ ಸೊಸೆ ಅಶ್ವಿನಿ

ಇಂಥದೇ ದುರಂತದಲ್ಲಿ ತಮ್ಮ ಪತಿ ಪುನೀತ್‌ ಅವರನ್ನು ಕಳೆದುಕೊಂಡ ಅಶ್ವಿನಿ, ಸ್ಪಂದನ (Spandana Vijay Raghavendra) ಅವರನ್ನು ನೋಡಿ ಕಂಬನಿ ಮಿಡಿದರು.

VISTARANEWS.COM


on

ashwini puneeth rajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್‌ಕುಮಾರ್‌ ಕುಟುಂಬದ ಸೊಸೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ (ashwini puneeth rajkumar) ಅವರು ಮಲ್ಲೇಶ್ವರಂನ ನಿವಾಸಕ್ಕೆ ಆಗಮಿಸಿ ಪತ್ನಿಯನ್ನು ಕಳೆದುಕೊಂಡ (Spandana Vijay Raghavendra) ಚಿನ್ನಾರಿ ಮುತ್ತನಿಗೆ ಅಕ್ಕನ ಸ್ಥಾನದಲ್ಲಿ ನಿಂತು ಧೈರ್ಯ ತುಂಬಿದರು.

ಮಕ್ಕಳು ಧೃತಿ ಹಾಗೂ ವಂದಿತಾರೊಂದಿಗೆ ಸ್ಪಂದನ ಅಂತಿಮ ದರ್ಶನಕ್ಕೆ ಅಶ್ವಿನಿ ಹಾಜರಾದರು. ಇಂಥದೇ ದುರಂತದಲ್ಲಿ ತಮ್ಮ ಪತಿ ಪುನೀತ್‌ ಅವರನ್ನು ಕಳೆದುಕೊಂಡ ಅಶ್ವಿನಿ, ಸ್ಪಂದನ ಅವರನ್ನು ನೋಡಿ ಕಂಬನಿ ಮಿಡಿದರು. ನಂತರ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಕೈ ಹಿಡಿದು ಸಾಂತ್ವನ ಹೇಳಿದರು. ಸ್ವಂತ ಅಕ್ಕನಂತೆ ತಮ್ಮಂದಿರಿಗೆ ಧೈರ್ಯ ತುಂಬಿದರು. ಒಂದೇ ಬಗೆಯ ದುಃಖಕ್ಕೆ ತುತ್ತಾಗಿರುವ ಈ ಎರಡು ಜೀವಗಳ ಮುಖಾಮುಖಿ ಹೃದಯಸ್ಪರ್ಶಿಯಾಗಿತ್ತು. ದೊಡ್ಮನೆ ಕುಡಿಗಳಾದ ಯುವ ಹಾಗೂ ಗುರು ರಾಜ್‌ಕುಮಾರ್ ಕೂಡ ಅಶ್ವಿನಿ ಜೊತೆಗೇ ಆಗಮಿಸಿ ವಿಜಯ್‌ಗೆ ಸಾಂತ್ವನ ನೀಡಿದರು.

ಭಾವುಕರಾದ ಬಿ.ಕೆ ಹರಿಪ್ರಸಾದ್

ಸ್ಪಂದನಾ ಅಂತ್ಯಕ್ರಿಯೆ ಬಗ್ಗೆ ವಿವರ ನೀಡುತ್ತಾ ಬಿ.ಕೆ ಹರಿಪ್ರಸಾದ್ ಭಾವುಕರಾದರು. ʼಸ್ಪಂದನಾ ಅವರ ಪಾರ್ಥಿವ ಶರೀರ 2 ಗಂಟೆ ತನಕ ಇಲ್ಲೇ ಇರುತ್ತದೆ. ಅಂತಿಮ ಯಾತ್ರೆ 2 ಗಂಟೆಗೆ ಆರಂಭ ಮಾಡುತ್ತೇವೆ. ಅವರ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್‌ನಲ್ಲಿ 2.30ರಿಂದ 3.30ರ ಒಳಗೆ ಮಾಡುತ್ತೇವೆʼ ಎಂದು ಹರಿಪ್ರಸಾದ್‌ ನುಡಿದರು.

ಮಾಸ್ಟರ್ ಆನಂದ್ ಹಾಗೂ ಪತ್ನಿ ಯಶಸ್ವಿನಿ ಸ್ಪಂದನ ಅಂತಿಮ ದರ್ಶನಕ್ಕೆ ಆಗಮಿಸಿದರು. ಗೆಳೆಯನಿಗೆ ಹೆಗಲ ಮೇಲೆ ಕೈ ಹಾಕಿ ಆನಂದ್‌ ಧೈರ್ಯ ತುಂಬಿದರು. ರಾಘುವಿಗೆ ಇನ್ನು ಕುಟುಂಬದ ಜವಾಬ್ದಾರಿ ತುಂಬಾ ಇದೆ. ಇನ್ನು ಮೇಲೆ ಆತ ತಂದೆಯಾಗಿ.. ತಾಯಿಯಾಗಿ.. ಮನೆ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಸ್ಪಂದನ ಮುಖ ನೋಡಿದಾಗ ಮುತ್ತೈದೆ ಕಳೆ, ಲಕ್ಷ್ಮಿ ಕಳೆ ಎದ್ದು ಕಾಣಿಸುತ್ತಿದೆ ಎಂದು ಆನಂದ್‌ ಹೇಳಿದರು.

ಸ್ಪಂದನ ಅಂತಿಮ ದರ್ಶನ ಪಡೆದ ನಟ ಜಯರಾಂ ಕಾರ್ತಿಕ್, ಪಾರ್ಥಿವ ಶರೀರವನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತರು. ವಿಜಯ್ ರಾಘವೇಂದ್ರ ಅವರಿಗೆ ಬಿಗಿ ಅಪ್ಪುಗೆ ಕೊಟ್ಟು ದುಃಖ ಹೊರಹಾಕಿದರು.

ದೃಷ್ಟಿ ಬಿತ್ತು ಅನಿಸುತ್ತದೆ: ವಿನೋದ್‌ ರಾಜ್‌

ಮುದ್ದಾದ ಚಂದ್ರನಂತೆ ಇದ್ದ ಜೋಡಿ ಇವರದು. ಅಂಥ ಚಂದ್ರನಿಗೆ ದೃಷ್ಟಿ ಬಿತ್ತೇ ಎಂದು ಆಶ್ಚರ್ಯ ಆಗುತ್ತಿದೆ. ನಾನು ಇರಲಿ ಇಲ್ಲದಿರಲಿ, ನನ್ನ ಪ್ರೀತಿ ನಿನ್ನ ಜೊತೆ ಇರಲಿ ಎಂದು ಹೇಳಿ ಹೋಗಿದ್ದಾರೆ ಸ್ಪಂದನ ಎಂದು ಪಾರ್ಥಿವ ಶರೀರ ದರ್ಶನದ ಬಳಿಕ ನಟ ವಿನೋದ್‌ ರಾಜ್‌ ಹೇಳಿದರು. ʼಪ್ರಪಂಚ ಬಿಟ್ಟು ಎಲ್ಲರೂ ಒಂದು ದಿನ ಹೋಗಬೇಕು. ಆದರೆ ಅದಕ್ಕೂ ಒಂದು ನಿಗದಿತ ವಯಸ್ಸು ಇತ್ತು. ಆದರೆ ಇತ್ತೀಚೆಗೆ ಕಾರಣವಿಲ್ಲದ ಅಕಾಲಿಕ ಮರಣ ಹೆಚ್ಚಾಗಿದೆʼ ಎಂದರು.

ಚಿತ್ರರಂಗದ ಇನ್ನಷ್ಟು ಗಣ್ಯರು, ಸ್ಪಂದನ ಕುಟುಂಬ ಬಳಗದವರು ಹಾಗೂ ಸ್ನೇಹಿತರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಶೋಕಸಾಗರದಲ್ಲಿ ಚಿನ್ನಾರಿಮುತ್ತ ಕುಟುಂಬಕ್ಕೆ ಧೈರ್ಯ ಹೇಳಲು ಸಾರ್ವಜನಿಕರು ಕೂಡ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Spandana Vijay Raghavendra : ರಾಜ್‌ ಕುಟುಂಬದಲ್ಲೇಕೆ ಪದೇಪದೆ ದುರಂತ; ಅಷ್ಟಮಂಗಳ ಪ್ರಶ್ನೆ ಇಡಲು ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Dolly Dhananjay: ಮುಖ್ಯಮಂತ್ರಿ ಸಿದ್ದರಾಮಯ್ಯ ನಟ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್‌ ರಾಯಭಾರಿಯಾಗಿ ಘೋಷಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

VISTARANEWS.COM


on

lidkar ambassador dolly dhananjay Officially
Koo

ಬೆಂಗಳೂರು; ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು (Dolly Dhananjay) ಆಯ್ಕೆ ಮಾಡಲಾಗಿದೆ. ʼನಟ‌ ರಾಕ್ಷಸʼ ಡಾಲಿ ಧನಂಜಯ್ ಲಿಡ್ಕರ್‌ಗೆ ರಾಯಭಾರಿಯಾಗಿದ್ದಾರೆ. ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿ.6) ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವ ನಮನ ಸಲ್ಲಿಸಿ, ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್‌ ರಾಯಭಾರಿಯಾಗಿ ಘೋಷಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರ್ಯಾಂಡ್‌ ಪ್ರಮೋಟ್ ಮಾಡುತ್ತಿದ್ದಾರೆ. ಲಿಡ್ಕರ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ.

ಇದನ್ನೂ ಓದಿ: Dolly Dhananjay: ಚರ್ಮ ಕುಶಲಕರ್ಮಿಗಳಿಗೆ ಬೆಂಬಲ; ʻಲಿಡ್ಕರ್ʼ ರಾಯಭಾರಿಯಾದ ಡಾಲಿ

ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನಟ ಧನಂಜಯ್ “ನಾನು ಮೊದಲ ಬಾರಿಗೆ ರಾಯಭಾರಿ ಆಗುತ್ತಿದ್ದೇನೆ. ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ ಅವರು ಈ ಉದ್ಯಮ ನಂಬಿಕೊಂಡು 50 ಸಾವಿರ ಕುಟುಂಬಗಳಿವೆ ಎಂದಾಗ ಖುಷಿಯಾಯಿತು. ನಮ್ಮ ಕರ್ನಾಟಕದಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ. ನಮ್ಮದೇ ಆದ ಬ್ರ್ಯಾಂಡಿಗೆ ನಾವು ಸಹಾಯ ಮಾಡಬೇಕು ಎನ್ನುವ ಕಾರಣಕ್ಕೆ ಇದನ್ನು ಒಪ್ಪಿಕೊಂಡೆ. ಮೇಕ್ ಇನ್ ಇಂಡಿಯಾ ಹೇಗಿದೆಯೋ ಹಾಗೆ ʻಮೇಕ್ ಇನ್ ಕರ್ನಾಟಕʼ ಆಗಬೇಕು. ಲಿಡ್ಕರ್‌ಗೆ ಸಪೋರ್ಟ್ ಮಾಡುವುದರಿಂದ ಅದನ್ನೆ ನಂಬಿಕೊಂಡ ಕುಟುಂಬಗಳಿಗೆ ಸಹಾಯವಾಗಲಿದೆ. ಮೈಸೂರ್ ಸಿಲ್ಕ್ ಹೇಗಿದಿಯೋ ಹಾಗೆ ನಮ್ಮದೆ ಬ್ರ್ಯಾಂಡ್ ಇರಬೇಕುʼʼ ಎಂದರು.

ಇದನ್ನೂ ಓದಿ: Sandalwood Update: ‘ಝೀಬ್ರಾ’ ಕಂಪ್ಲೀಟ್‌; ಶೀಘ್ರದಲ್ಲೇ ತೆರೆಗೆ ಬರಲಿದೆ ಡಾಲಿ-ಸತ್ಯದೇವ್ ಚಿತ್ರ

ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ‘ಖ್ಯಾತ ನಟ ಡಾಲಿ ಧನಂಜಯ ಅವರನ್ನು ಲಿಡ್ಕರ್ ರಾಯಭಾರಿಯಾಗಿ ಆಯ್ಕೆ ಮಾಡಿದ್ದೀವಿ. ಅವರು ಉಚಿತವಾಗಿ ರಾಯಭಾರಿ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಕಳಕಳಿ ಇರುವ ನಟ, ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅರ್ಥಪೂರ್ಣವಾಗಿದೆ. ಇದರಿಂದ ಚರ್ಮ ಉದ್ಯಮಕ್ಕೆ ಉತ್ತೇಜನ ಆಗುತ್ತೆ’ ಎಂದು ಹೇಳಿದರು. ಲಿಡ್ಕರ್‌ ಕೇಂದ್ರಕ್ಕೆ ಭೇಟಿ ನೀಡಿದ ನಟ ಧನಂಜಯ ಅವರಿಗೆ ವಿಶೇಷವಾಗಿ ತಯಾರಿಸಿದ್ದ ಲಿಡ್ಕರ್ ಚಪ್ಪಲಿಯನ್ನು ಉಡುಗೊರೆಯಾಗಿ ನೀಡಿದರು. ಧನಂಜಯವರಿಗಾಗಿಯೇ ವಿಶೇಷವಾಗಿ ಚಪ್ಪಲಿಯನ್ನು ತಯಾರಿಸಲಾಗಿತ್ತು. ಡಾಲಿ ಹೊಸ ಚಪ್ಪಲಿಯನ್ನು ಧರಿಸಿ ಅಲ್ಲಿನ ಕುಶಲಕರ್ಮಿಗಳ ಜತೆ ಮಾತನಾಡಿ ಖುಷಿಪಟ್ಟರು

ಧನಂಜಯ್‌ ಅವರು ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ .

Continue Reading

ಕಿರುತೆರೆ

Brindavana Serial Kannada: ʻಏನಾಗಲಿ ಮುಂದೆ ಸಾಗು ನೀʼಎಂದ ʻಬೃಂದಾವನʼ ಧಾರಾವಾಹಿ ಮಾಜಿ ನಾಯಕ!

Brindavana Serial Kannada: ಈ ವಿವಾದ ಆದ ಬಳಿಕ ವಿಶ್ವನಾಥ್‌ ಅವರ ತಂದೆ ಮಾಧ್ಯಮದ ಮುಂದೆ ʻʻವಿಶ್ವನಾಥ್‌ಗೆ ನಟನೆ ಹೊಸದು. ಇದೆಲ್ಲ ನಮಗೆ ಗೊತ್ತಿಲ್ಲ. ನಮಗೆ ಈ ಬಗ್ಗೆ ಯಾವುದೇ ವಿಷಾದ ಇಲ್ಲʼʼಎಂದಿದ್ದರು.

VISTARANEWS.COM


on

Brindavana Serial Kannada Vishwanath Ravindra Haveri
Koo

ಬೆಂಗಳೂರು: ವೈವಿಧ್ಯಮಯ ಧಾರಾವಾಹಿ, ವಿವಿಧ ಕಾರ್ಯಕ್ರಮಗಳ ಮೂಲಕ ಕಲರ್ಸ್‌ ಕನ್ನಡ ವಾಹಿನಿ ಪ್ರೇಕ್ಷಕರ ಮನಗೆದ್ದಿದೆ. ಈ ಮಧ್ಯೆ ಜನಪ್ರಿಯ ʼಬೃಂದಾವನʼ (Brindavana Serial Kannada) ಧಾರಾವಾಹಿಯ ಪ್ರಮುಖ ಪಾತ್ರಧಾರಿ ಬದಲಾಗಿ, ಹಲವು ಚರ್ಚೆಗಳಿಗೆ ಎಡೆ ಮಾಡಿ ಕೊಟ್ಟಿತ್ತು. ಆರಂಭದಲ್ಲೇ ಪ್ರೇಕ್ಷಕರ ಗಮನ ಸೆಳೆದಿದ್ದ ʼಬೃಂದಾವನʼ ಸೀರಿಯಲ್‌ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ವಿಶ್ವನಾಥ್‌ ಹಾವೇರಿ ಹೊರ ನಡೆದಿದ್ದು, ಆ ಪಾತ್ರಕ್ಕೆ ವರುಣ್‌ ಆರಾಧ್ಯ ಬಂದಿದ್ದರು. ಸಾಕಷ್ಟು ಜನ ವೀಕ್ಷಕರು ಆಕಾಶ್ ಪಾತ್ರದಲ್ಲಿ ವಿಶ್ವನಾಥ್ ಅವರೇ ನಟಿಸಬೇಕು ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದರು. ಆದರೀಗ ಏಕಾಏಕಿ ವಿಶ್ವನಾಥ್‌ ಅವರು ʼಏನಾಗಲಿ ಮುಂದೆ ಸಾಗು ನೀʼ ಎನ್ನುವ ಹಾಡನ್ನು ಪೋಸ್ಟ್‌ ಮಾಡಿದ್ದಾರೆ.

ಇದೀಗ ವಿಶ್ವನಾಥ್‌ ಈ ಎಲ್ಲ ಘಟನೆ ಆದ ಬಳಿಕ ಮುಂಬೈಗೆ ಹಾರಿದ್ದಾರೆ. ‘ಮುಸ್ಸಂಜೆ ಮಾತು’ ಚಿತ್ರದ ಸೂಪರ್ ಹಿಟ್ ‘ಏನಾಗಲಿ ಮುಂದೆ ಸಾಗು ನೀ ಬಯಸಿದ್ದೆಲ್ಲಾ ಸಿಗದು ಬಾಳಲಿ’ ಹಾಡು ಹಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ನಿಜಜೀವನಕ್ಕೆ ಹತ್ತಿರವಾಗುವಂತಿರುವ ಹಾಡನ್ನು ಹಾಡಿ ಪೋಸ್ಟ್ ಮಾಡಿದ್ದಾರೆ ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ ನೆಟ್ಟಿಗರು. ಜತೆಗೆ ವಿಶ್ವನಾಥ್‌ ಅವರ ಜೀವನದ ಮುಂದಿನ ಪಯಣಕ್ಕೆ ಶುಭ ಹಾರೈಸುತ್ತಿದ್ದಾರೆ.

ಇನ್ನು ಕೆಲವರು ವಿಶ್ವನಾಥ್‌ ಅವರು ನೋಡಲು ಚಿಕ್ಕ ಹುಡುಗನಂತೆ ಕಾಣಿಸುತ್ತಿದ್ದ ಕಾರಣ ಧಾರಾವಾಹಿಯಿಂದ ಹೊರ ನಡೆದರು ಎಂದು ಕಮೆಂಟ್‌ ಕೂಡ ಮಾಡುತ್ತಿದ್ದಾರೆ ನೆಟ್ಟಿಗರು. ಈ ವಿವಾದ ಆದ ಬಳಿಕ ವಿಶ್ವನಾಥ್‌ ಅವರ ತಂದೆ ಮಾಧ್ಯಮದ ಮುಂದೆ ʻʻವಿಶ್ವನಾಥ್‌ಗೆ ನಟನೆ ಹೊಸದು. ಇದೆಲ್ಲ ನಮಗೆ ಗೊತ್ತಿಲ್ಲ. ನಮಗೆ ಈ ಬಗ್ಗೆ ಯಾವುದೇ ವಿಷಾದ ಇಲ್ಲʼʼ ಎಂದಿದ್ದರು.

‘ಪುಟ್ಟಗೌರಿ ಮದುವೆ’, ‘ಮಂಗಳಗೌರಿ ಮದುವೆ’, ‘ರಂಗನಾಯಕಿ’, ‘ನಾಗಿಣಿ- 2’, ‘ಗೀತಾ’, ‘ರಾಣಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಕೆ.ಎಸ್. ರಾಮ್‌ ಜೀ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ಕೂಡು ಕುಟುಂಬದ ಕಥೆ ಹೊಂದಿರುವ ಈ ಧಾರಾವಾಹಿಯ ಆಕಾಶ್‌ ಪಾತ್ರದಲ್ಲಿ ಬಿಗ್​ಬಾಸ್ ಸ್ಪರ್ಧಿಯಾಗಿದ್ದ ಗಾಯಕ ವಿಶ್ವನಾಥ್ ಹಾವೇರಿ ಕಾಣಿಸಿಕೊಂಡಿದ್ದರು. ಆದರೆ ಸೀರಿಯಲ್‌ನ 25ರಷ್ಟು ಸಂಚಿಕೆ ಮುಗಿಯುವಷ್ಟರಲ್ಲಿ ಅವರು ಬದಲಾಗಿದ್ದರು.

ಇದನ್ನೂ ಓದಿ: Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯವಾಗಿರುವ ವರುಣ್‌ ಆರಾಧ್ಯ ಹೆಗಲಿಗೆ ಆಕಾಶ್‌ ಪಾತ್ರದ ಜವಾಬ್ದಾರಿ ಬಿದ್ದಿದೆ. ತುಂಬು ಕುಟುಂಬದ ಕುಡಿಯಾಗಿರುವ ಆಕಾಶ್‌ ಮದುವೆಯ ಸಿದ್ಧತೆ ನಡೆಯುತ್ತಿದ್ದು ಈ ಹೊತ್ತಿನಲ್ಲೇ ನಾಯಕನ ಬದಲಾವಣೆ ಅಚ್ಚರಿಗೆ ಕಾರಣವಾಗಿತ್ತು. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡುತ್ತ ಜನಪ್ರಿಯರಾಗಿರುವ ವರುಣ್‌ ಆರಾಧ್ಯಗೆ ಉತ್ತಮ ಅವಕಾಶ ಸಿಕ್ಕಿದೆ. ಅಕ್ಟೋಬರ್ 23ರಂದು ಈ ಸೀರಿಯಲ್‌ ಪ್ರಸಾರ ಆರಂಭಿಸಿತ್ತು.

ಕಥೆ ಏನು?

ಕಥೆಯು 36 ಸದಸ್ಯರ ವಿಶಾಲವಾದ ಅವಿಭಕ್ತ ಕುಟುಂಬದ ಸುತ್ತ ಸುತ್ತುತ್ತದೆ. ‘ಕನ್ನಡತಿ’ ಧಾರಾವಾಹಿ ಮೂಲಕ ಅಮ್ಮಮ್ಮ ಎಂದೇ ಖ್ಯಾತಿ ಪಡೆದ ಚಿತ್ಕಲಾ ಬಿರಾದಾರ್ ಈ ಮೂಲಕ ಮತ್ತೆ ಮೋಡಿ ಮಾಡುತ್ತಿದ್ದಾರೆ. ಅವರು ಸುಧಾ ಮೂರ್ತಿ ಎನ್ನುವ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕಥಾ ನಾಯಕ ಆಕಾಶ್ ತನ್ನ ವಿದ್ಯಾಭ್ಯಾಸ ಮುಗಿಸಿ ವಿದೇಶದಿಂದ ಹಿಂದಿರುಗುತ್ತಾನೆ. ಸುಧಾಮೂರ್ತಿಗೆ ತನ್ನ ಮೊಮ್ಮಗ ಆಕಾಶ್‌ನ ಮದುವೆ ನೋಡಬೇಕೆಂಬ ಆಸೆ. ಅದಕ್ಕಾಗಿ ಕೂಡು ಕುಟುಂಬದ ಎಲ್ಲರ ಒಪ್ಪಿಗೆ ಪಡೆಯುತ್ತಾರೆ. ಕೊನೆಗೆ ಪುಷ್ಪಾ ಎನ್ನುವ ಯುವತಿಯನ್ನು ಒಪ್ಪಿಕೊಳ್ಳುತ್ತಾರೆ. ಸದ್ಯ ಆಕಾಶ್‌-ಪುಷ್ಪಾ ಮದುವೆ ಸಿದ್ಧತೆ ನಡೆಯುತ್ತಿದೆ. ಪ್ರೋಮೊ ಮೂಲಕವೇ ಈ ಧಾರಾವಾಹಿ ಕುತೂಹಲ ಕೆರಳಿಸಿತ್ತು. ಅಮೂಲ್ಯ ಭಾರಾಧ್ವಾಜ್, ಸಂದೀಪ್ ಅಶೋಕ್, ಸುಂದರ್ ವೀಣಾ, ವೀಣಾ ಸುಂದರ್, ರಾಜೇಶ್ ಎಸ್. ರಾವ್, ಅನು ಪಲ್ಲವಿ ಗೌಡ, ಮಾನಸ ಗುರುಸ್ವಾಮಿ, ಯೋಗಿತಾ ಕುಂಬಾರ್, ವೈಷ್ಣವಿ ಗೌಡ, ಮಧುರಾ ಮತ್ತಿತರರು ಮುಖ್ಯ ಪಾತ್ರದಲ್ಲಿದ್ದಾರೆ.

Continue Reading

ದೇಶ

Mamata Banerjee: ಸಲ್ಮಾನ್‌ ಖಾನ್‌ ಜತೆ ಮಮತಾ ಬ್ಯಾನರ್ಜಿ ಡ್ಯಾನ್ಸ್‌! ವಿಡಿಯೊ ಇಲ್ಲಿದೆ

Mamata Banerjee: 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಡ್ಯಾನ್ಸ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

mamtha
Koo

ಕೋಲ್ಕತ್ತಾ: ಸದಾ ರಾಜಕೀಯದಲ್ಲಿ ಬ್ಯುಸಿ ಇರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜಕೀಯವನ್ನೆಲ್ಲ ಮರೆತು ವೇದಿಕೆ ಮೇಲೆ ಡ್ಯಾನ್ಸ್‌ ಮಾಡಿದ್ದಾರೆ. ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಜತೆ ಮಮತಾ ಸ್ಟೆಪ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ. ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ (KIFF) ಮಂಗಳವಾರ (ಡಿಸೆಂಬರ್ 6) ಉದ್ಘಾಟನೆಗೊಂಡಿತು. ಈ ವೇಳೆ ಮಮತಾ ಡ್ಯಾನ್ಸ್‌ ಮಾಡಿ ಬೆರಗು ಮೂಡಿಸಿದರು.

ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಆ ವೇಳೆ ಮಮತಾ ಬ್ಯಾನರ್ಜಿ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಡ್ಯಾನ್ಸ್ ಮಾಡುವಂತೆ ಮಮತಾ ಬ್ಯಾನರ್ಜಿ ಬಳಿ ಬಂದು ಸಲ್ಮಾನ್ ಖಾನ್ ಮನವಿ ಮಾಡಿದರು. ಅದಕ್ಕೆ ಮಮತಾ ಬ್ಯಾನರ್ಜಿ ಒಪ್ಪಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಸಲ್ಮಾನ್, ಮಮತಾ ಮಾತ್ರವಲ್ಲದೆ ಮಹೇಶ್ ಭಟ್, ಅನಿಲ್ ಕಪೂರ್, ಸೋನಾಕ್ಷಿ ಸಿನ್ಹಾ, ಶತ್ರುಘ್ನ ಸಿನ್ಹಾ ಕೂಡ ಸೊಂಟ ಬಳುಕಿಸಿದ್ದಾರೆ. ವೇದಿಕೆಯಲ್ಲೇ ಇದ್ದ ಸೌರವ್‌ ಗಂಗೂಲಿ ನಗುತ್ತಾ ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಮಮತಾ ಬ್ಯಾನರ್ಜಿ ಜಾಸ್ತಿ ಸ್ಟೆಪ್ಸ್‌ ಹಾಕಿಲ್ಲ. ಬರೀ ಕೈ ಬೀಸಿದ್ದಾರೆ. ಇದನ್ನೇ ಕೆಲವರು ಟ್ರೋಲ್‌ ಮಾಡುತ್ತಿದ್ದಾರೆ. ಅಲ್ಲದೆ ಮಮತಾ ಬ್ಯಾನರ್ಜಿ ಅವರಿಂದ ಸ್ಟೆಪ್‌ ಮಾಡಿಸಿದ ಸಲ್ಮಾನ್‌ ಖಾನ್‌ ಅವರಿಗೂ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಡಿಸೆಂಬರ್ 12ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಈ ವೇಳೆ 39 ದೇಶಗಳ 219 ಚಲನಚಿತ್ರ ಪ್ರದರ್ಶನವಾಗಲಿದೆ. ಹಲವು ಸೆಲೆಬ್ರಿಟಿಗಳು, ನಿರ್ದೇಶಕರು, ವಿಮರ್ಶಕರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Continue Reading

South Cinema

Actress Namitha: ಚೆನ್ನೈ ಪ್ರವಾಹ; ಅವಳಿ ಮಕ್ಕಳೊಂದಿಗೆ ಅಪಾಯಕ್ಕೆ ಸಿಲುಕಿದ್ದ ನಟಿ!

Actress Namitha: ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ಅಪಾರ್ಟ್‌ಮೆಂಟ್‌ ಬಳಿಗೆ ರಕ್ಷಣಾ ತಂಡ ತಲುಪಲು ತಡವಾಗಿದ್ದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

namitha actress
Koo

ಬೆಂಗಳೂರು: ಚೆನ್ನೈನ ಪ್ರವಾಹ ಪೀಡಿತ (Actress Namitha) ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ (Aamir Khan) ಅವರನ್ನು ರಕ್ಷಿಸಲಾಗಿರುವುದು ಗೊತ್ತೇ ಇದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ಕಡಲೂರು ಮತ್ತು ತಿರುವಳ್ಳೂರು ಜಿಲ್ಲೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಚೆನ್ನೈನ ಹೆಚ್ಚಿನ ಭಾಗಗಳು ಪ್ರಸ್ತುತ ನೀರಿನಲ್ಲಿ ಮುಳುಗಿವೆ. ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹ ಕಂಡು ಬಂದಿದ್ದು, ರಕ್ಷಣಾ ಸಿಬ್ಬಂದಿ ನಿರಂತರವಾಗಿ ಕಾರ್ಯ ನಿರತರಾಗಿದ್ದಾರೆ. ಚೆನ್ನೈ ಸಮೀಪದಲ್ಲಿರುವ ಪಲ್ಲಿಕರಣ ನಾರಾಯಣಪುರಂ ಕೆರೆ ಒಡೆದು ಮನೆಗೆ ನುಗ್ಗಿದೆ. ಇದರಿಂದ ನಟಿ ನಮಿತಾ ಮನೆ ಜಲಾವೃತಗೊಂಡಿದೆ. ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ಅಪಾರ್ಟ್‌ಮೆಂಟ್‌ ಬಳಿಗೆ ರಕ್ಷಣಾ ತಂಡ ತಲುಪಲು ತಡವಾಗಿದ್ದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ಕಳೆದೆರಡು ದಿನಗಳಿಂದ ಮಿಗ್ಜಾಮ್ ಚಂಡಮಾರುತ ಭಾರೀ ಅವಾಂತರವನ್ನೇ ಸೃಷ್ಟಿಸಿತ್ತು. ಪ್ರವಾಹ ಹೆಚ್ಚಿದ್ದರಿಂದ ಪಳ್ಳಿಕರಣ ನಾರಾಯಣಪುರಂ ಕೆರೆಯ ದಡ ಒಡೆದಿದೆ. ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿದೆ. ಪಳ್ಳಿಕರಣ, ಸಮೀಪದ ದುರೈಪಕ್ಕಂ ಪ್ರದೇಶ ಜಲಾವೃತಗೊಂಡಿದೆ. ಪಳ್ಳಿಕರಣ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ದಕ್ಷಿಣ ಭಾರತದ ನಟಿ ನಮಿತಾ ವಾಸವಿದ್ದರು. ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ಅಪಾರ್ಟ್‌ಮೆಂಟ್‌ ಬಳಿಗೆ ರಕ್ಷಣಾ ತಂಡ ತಲುಪಲು ತಡವಾಗಿದ್ದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ವರದಿಯಾಗಿದೆ. ನಟಿ ನಮಿತಾ ಕನ್ನಡ, ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. 2017ರಲ್ಲಿ ತಿರುಪತಿಯಲ್ಲಿ ಉದ್ಯಮಿ ವೀರೇಂದ್ರ ಚೌಧರಿಯನ್ನು ನಮಿತಾ ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಅವಳಿ ಮಕ್ಕಳು ಜನಿಸಿದ್ದಾರೆ.

ವಿದ್ಯುತ್ ಮತ್ತು ನೆಟ್‌ವರ್ಕ್‌ ಇಲ್ಲದೆ ಚೆನ್ನೈನ ತಮ್ಮ ಮನೆಯಲ್ಲಿ ಸಿಲುಕಿಕೊಂಡಿದ್ದೇನೆ ಎಂದು ವಿಷ್ಣು ವಿಶಾಲ್‌ ಈ ಹಿಂದೆ ಬಹಿರಂಗಪಡಿಸಿದ್ದರು. ತನ್ನ ಮನೆಯೊಳಗೆ ನೀರು ನುಗ್ಗಿದೆ ಎಂದು ತಿಳಿಸಿದ್ದರು. ಫೋಟೊಗಳನ್ನು ಹಂಚಿಕೊಂಡಿದ್ದ ಅವರು, “ನೀರು ನನ್ನ ಮನೆಯೊಳಗೆ ನುಗ್ಗುತ್ತಿದೆ. ಕರಪಕ್ಕಂನಲ್ಲಿ ನೀರಿನ ಮಟ್ಟ ಅಪಾಯಕಾರಿಯಾಗಿ ಏರುತ್ತಿದೆ. ನಾನು ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಇಲ್ಲ, ವೈಫೈ ಇಲ್ಲ, ಫೋನ್ ಸಿಗ್ನಲ್ ಇಲ್ಲ, ಏನೂ ಇಲ್ಲ. ಒಂದು ನಿರ್ದಿಷ್ಟ ಸ್ಥಳದಲ್ಲಿ ಟೆರೇಸ್‌ನಲ್ಲಿ ಮಾತ್ರ ನನಗೆ ಕೆಲವು ಸಿಗ್ನಲ್ ಸಿಗುತ್ತದೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ: Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ನೆರವಿಗೆ ಬಂದ ನಟರು

ಈ ಮಧ್ಯೆ ತಮಿಳು ಚಿತ್ರರಂಗದ ನಟರಾದ ಸೂರ್ಯ ಮತ್ತು ಕಾರ್ತಿ 10 ಲಕ್ಷ ರೂ.ಗಳ ಆರಂಭಿಕ ದೇಣಿಗೆಯನ್ನು ಘೋಷಿಸಿದ್ದಾರೆ. ಅಗತ್ಯವಿರುವ ಯಾವುದೇ ರೀತಿಯ ಸಹಾಯ ಒದಗಿಸಲು ಈ ಹಣವನ್ನು ಬಳಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಟರ ಅಭಿಮಾನಿ ಸಂಘಗಳ ಮೂಲಕ ನೆರವು ನೀಡಲಾಗುತ್ತದೆ.

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡು ಬೀಸುತ್ತಿರುವ ಮಿಚಾಂಗ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತವಾಗಿದೆ. ಕಾರು- ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಮನೆಗಳು ಕುಸಿದಿವೆ. ಕೋಟಿಗಟ್ಟಲೆ ಆಸ್ತಿಗೆ ಹಾನಿಯಾಗಿದೆ.

Continue Reading
Advertisement
Khalistani Terrorist Pannun
ದೇಶ4 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema19 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ23 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ41 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ53 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್54 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್2 hours ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ23 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌