Spandana Vijy Raghavendra : ನಾಳೆ ಸ್ಪಂದನಾ ಉತ್ತರಕ್ರಿಯೆ, ಮಲ್ಲೇಶ್ವರಂ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ - Vistara News

ಕರ್ನಾಟಕ

Spandana Vijy Raghavendra : ನಾಳೆ ಸ್ಪಂದನಾ ಉತ್ತರಕ್ರಿಯೆ, ಮಲ್ಲೇಶ್ವರಂ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ

Spandana Vijay Raghavendra : ಕಳೆದ ಆಗಸ್ಟ್‌ 6ರಂದು ಬ್ಯಾಂಕಾಕ್‌ನಲ್ಲಿ ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರ ಅವರ ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆದಿವೆ. ಸ್ಪಂದನಾ ಅವರ ಕುಟುಂಬ ಎಲ್ಲರಿಗೂ ಆಹ್ವಾನ ನೀಡಿದೆ.

VISTARANEWS.COM


on

Spandana Vijaya Raghavendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕಾಕ್‌ ಪ್ರವಾಸ (Bangkok tour) ವೇಳೆ ಹಠಾತ್‌ ಹೃದಯಾಘಾತದಿಂದ (Sudden Cardiac arrest) ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರ (Spandana vijay Raghavendra) ಅವರ ಉತ್ತರ ಕ್ರಿಯೆ ಆಗಸ್ಟ್‌ 16ರಂದು ಮಲ್ಲೇಶ್ವರದಲ್ಲಿರುವ (Malleshwara house) ಸ್ಪಂದನಾ ಅವರ ತವರು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ಪಂದನಾ ಅವರು ಆಗಸ್ಟ್‌ 6ರಂದು ರಾತ್ರಿ ಬ್ಯಾಂಕಾಕ್‌ನ ಹೋಟೆಲ್‌ನಲ್ಲಿರುವ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದರು. ಆಗಸ್ಟ್‌ 8ರಂದು ರಾತ್ರಿ ಅವರ ಪಾರ್ಥಿವ ಶರೀರವನ್ನು ವಿಮಾನ ಮೂಲಕ ತರಲಾಗಿತ್ತು. ಆಗಸ್ಟ್‌ 9ರಂದು ಮಲ್ಲೇಶ್ವರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಸಂಜೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

Spandana Uttarakriye

ಕಳೆದ ಶುಕ್ರವಾರ (ಆಗಸ್ಟ್‌ 11) ಮಲ್ಲೇಶ್ವರದಲ್ಲಿರುವ ತಂದೆ, ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಹಾಗೂ ಹರಿಶ್ಚಂದ್ರ ಘಾಟ್‌ನಲ್ಲಿ ಹಾಲು ತುಪ್ಪದ ಕಾರ್ಯಕ್ರಮವನ್ನು ನೆರವೇರಿಸಲಾಗಿತ್ತು. ಅಲ್ಲಿಂದ ಸ್ಪಂದನಾ ಅವರ ಅಸ್ಥಿಗಳನ್ನು ಮಂಡ್ಯದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿಯಲ್ಲಿ ವಿಲೀನ ಮಾಡಲಾಯಿತು. ಈ ವೇಳೆ ಪುತ್ರ ಶೌರ್ಯನಿಗೆ ಕೇಶ ಮುಂಡನ ಮಾಡಲಾಗಿತ್ತು. ಸ್ಪಂದನಾ ಅವರ ಪತಿ ವಿಜಯ ರಾಘವೇಂದ್ರ, ತಂದೆ ಬಿ.ಕೆ. ಶಿವರಾಂ, ಸಹೋದರ ರಕ್ಷಿತ್‌ ಶಿವರಾಂ, ಮಾವ ಚಿನ್ನೇಗೌಡರು, ವಿಜಯ ರಾಘವೇಂದ್ರ ಅವರ ಸೋದರ ಶ್ರೀಮುರುಳಿ ಸೇರಿದಂತೆ ಹಲವರು ಪಾಲ್ಗೊಂಡರು.

ಉತ್ತರ ಕ್ರಿಯೆಯ ದಿನ ಏನೇನು ಕಾರ್ಯಕ್ರಮ?

  1. ಮಲ್ಲೇಶ್ವರದ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಆಗಸ್ಟ್‌ 16ರಂದು ಬೆಳಗ್ಗೆ 8 ಗಂಟೆಯಿಂದ ಶಾಂತಿ ಹೋಮ ನಡೆಯಲಿದೆ.
  2. ಮಧ್ಯಾಹ್ನ ಒಂದು ಗಂಟೆಯಿಂದ ಕೋದಂಡರಾಮಪುರದ ಯಂಗ್‌ ಸ್ಟರ್ಸ್‌ ಕಬಡ್ಡಿ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಬಿ.ಕೆ. ಶಿವರಾಂ ಮತ್ತು ಎಸ್‌.ಎ. ಚೆನ್ನೇಗೌಡರ ಕುಟುಂಬಿಕರು ತಿಳಿಸಿದ್ದಾರೆ.

ಇದನ್ನೂ ಓದಿ: Spandana Vijay Raghavendra: ಸ್ಪಂದನಾ ಬಾಲ್ಯ ಹೇಗಿತ್ತು? ಹಳೆಯ ಫೋಟೊಗಳು ವೈರಲ್‌!

spandana

ಕಣ್ಣೀರ ಕೋಡಿಗೆ ಕಾರಣವಾದ ಸ್ಪಂದನಾ ನಿರ್ಗಮನ

    ವಿಜಯ ರಾಘವೇಂದ್ರ ಮತ್ತು ಸ್ಪಂದನಾ ಅವರ ಅನುರೂಪ ದಾಂಪತ್ಯ ಎಲ್ಲರ ಗಮನ ಸೆಳೆದಿತ್ತು. ಇಬ್ಬರೂ ಹೃದಯವಂತರಾಗಿ, ಸೌಜನ್ಯದ ನಡವಳಿಕೆಯಿಂದ ಪ್ರೀತಿಪಾತ್ರರಾಗಿದ್ದರು. ಹೀಗಾಗಿ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಸ್ಪಂದನಾ ಸಾವು ಎಲ್ಲರ ಮನಸ್ಸನ್ನು ಕಲಕಿತ್ತು. ಅದರ ಜತೆಗೆ ಇಷ್ಟು ಸಣ್ಣ ವಯಸ್ಸಿನಲ್ಲಿ ಹೃದಯಾಘಾತವಾಗಿದ್ದು ಎಲ್ಲರ ಹೃದಯ ಹಿಂಡಿತ್ತು. ಅದರ ಜತೆಗೆ ರಾಜ್‌ ಕುಟುಂಬ ಮತ್ತು ಬಂಧುಗಳ ಕುಟುಂಬದಲ್ಲಿ ಬೆನ್ನು ಬೆನ್ನಿಗೆ ಸಂಭವಿಸಿದ ದುರಂತಗಳು ಎಲ್ಲರನ್ನೂ ಕಾಡಿದ್ದವು. ಈ ಹಿನ್ನೆಲೆಯಲ್ಲಿ ಸ್ಪಂದನಾ ಸಾವಿಗೆ ನಾಡಿಗೆ ನಾಡೇ ಕಂಬನಿ ಮಿಡಿದಿತ್ತು. ವಿಜಯ ರಾಘವೇಂದ್ರ, ಮಗ ಶೌರ್ಯ ಅವರು ಈ ನೋವನ್ನು ಹೇಗೆ ಭರಿಸಿಕೊಳ್ಳುತ್ತಾರೆ ಎಂದು ಜನರೇ ಮರುಗಿದ್ದರು.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ವಿಜಯನಗರ

    Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

    Food Department : ತಾಯಿ-ಮಗ ಜೀವಂತವಾಗಿದ್ದರೂ, ಬದುಕಿಲ್ಲ ಎಂದು ಪಡಿತರ ಚೀಟಿಯಿಂದ (BPL Card) ಹೆಸರನ್ನೇ ಡಿಲೀಟ್‌ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡದೆ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳದೇ ಆಹಾರ ಇಲಾಖೆಯ (ration card) ಅಧಿಕಾರಿಗಳ ಯಡವಟ್ಟಿಗೆ ಕಡು ಬಡತನದ ಕುಟುಂಬವೊಂದು ಪರದಾಡುತ್ತಿದೆ.

    VISTARANEWS.COM


    on

    By

    Food department deletes name from ration card list even though it is alive
    Koo

    ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದೆ. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಯಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ. ಆಹಾರ ಇಲಾಖೆ ಯಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿದೆ.

    ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

    ಆಹಾರ ಇಲಾಖೆ ಯಾರದ್ದೋ ಮಾತು ಕೇಳಿ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಿದೆ. ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿಲ್ಲ.

    ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಡಿತರ ಚೀಟಿಯಿಂದ ಹೆಸರು ತೆಗೆಯಬೇಕಾದರೆ ಅಧಿಕಾರಿಗಳು ಸ್ಪಾಟ್‌ ವಿಸಿಟ್‌ ಮಾಡಬೇಕು. ಪಡಿತರ ಚೀಟಿಯಲ್ಲಿ ಇರುವವರು ಬದುಕಿದ್ದಾರಾ ಇಲ್ವಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸದೇ ಹೀಗೆ ಅಂಜೀನಮ್ಮ ಹೆಸರು ತೆಗೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಪ್ರಮುಖ ಸುದ್ದಿ

    Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

    Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಎಲ್ಲಿದ್ದರೂ ಕರೆಸುವುದಕ್ಕೆ ರೇವಣ್ಣಗೆ ಹೇಳಿದ್ದೇನೆ. ಆದರೆ. ನಾವು ಏನು ಮಾತನಾಡುತ್ತೇವೆ ಎಂದು ತಿಳಿಯಲು ಫೋನ್‌ ಕದ್ದಾಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    VISTARANEWS.COM


    on

    Prajwal Revanna Case
    Koo

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದ (Prajwal Revanna Case) ಬಳಿಕ ನಾನು ಸೇರಿದಂತೆ ನಮ್ಮ ಸುತ್ತಲೂ ಇರುವ ಸುಮಾರು 30 ಜನರ ಫೋನ್ ಟ್ಯಾಪ್‌ (Phone Tapping) ಆಗುತ್ತಿದೆ. ರೇವಣ್ಣ ಫೋನ್ ಕೂಡ ಟ್ಯಾಪ್‌ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಗಂಭೀರ ಆರೋಪ ಮಾಡಿದ್ದಾರೆ.

    ಹಾಸನ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಜ್ವಲ್‌ ಎಲ್ಲಿದ್ದರೂ ಕರೆಸುವುದಕ್ಕೆ ರೇವಣ್ಣಗೆ ಹೇಳಿದ್ದೇನೆ. ಆದರೆ. ನಾವು ಏನು ಮಾತನಾಡುತ್ತೇವೆ ಎಂದು ತಿಳಿಯಲು ಫೋನ್‌ ಕದ್ದಾಲಿಗೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಕಿಡಿಕಾರಿದ್ದಾರೆ.

    ದೇವೇಗೌಡರು ರಾಜೀನಾಮೆ ಕೊಡಲು ಮುಂದಾಗಿದ್ದರು

    ಹಾಸನ ಪೆನ್ ಡ್ರೈವ್ ಪ್ರಕರಣದಿಂದ ನೊಂದು ದೇವೇಗೌಡರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದರು. ಯಾವ ಮುಖ ಇಟ್ಟುಕೊಂಡು ನಾನು ರಾಜ್ಯಸಭೆಗೆ ಹೋಗಲಿ ಅಂತ ಹೇಳಿ, ರಾಜೀನಾಮೆ ಕೊಡಲು ಮುಂದಾಗಿದ್ದರು. ಎಷ್ಟು ದಿನ ಅಂತ ಹೊರಗೆ ಇರಬೇಕು. ಬಂದು ತನಿಖೆ ಎದುರಿಸಬೇಕು ಎಂದು ಅವರು ಹೇಳಿರುವುದಾಗಿ ಎಚ್‌ಡಿಕೆ ಹೇಳಿದ್ದಾರೆ.

    ಇನ್ನು ಪ್ರಜ್ವಲ್‌ ಎಲ್ಲಿದ್ದರೂ ಕರೆಸಲು ಮಾಧ್ಯಮದ ಮೂಲಕ ಮನವಿ ಮಾಡು ಅಂತ ರೇವಣ್ಣಗೆ ಹೇಳಿದ್ದೇನೆ. ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದಾಗ, ಯಾರೋ ಮಾಡಿದ ತಪ್ಪಿಗೆ ನೀವು ರಾಜೀನಾಮೆ ಕೊಟ್ಟರೆ ರಾಜ್ಯಕ್ಕೆ ನಷ್ಟ ಅಂತ ಹೇಳಿದ್ದೇನೆ. ಈ ಪ್ರಕರಣದಿಂದ ದೇವೇಗೌಡ್ರು ನೊಂದಿದ್ದಾರೆ. ಯಾವ ಮುಖ ಹೊತ್ತು ರಾಜ್ಯಸಭೆಯಲ್ಲಿ ಕೂರಲಿ ಅಂತ ಹೇಳಿರುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ | CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

    ಅವರೇನು ಭಯೋತ್ಪಾದಕರಾ? ಎಂದ ಡಿಕೆಶಿ

    ರೇವಣ್ಣ-ಕುಮಾರಸ್ವಾಮಿ ಫೋನ್ ಕದ್ದಾಲಿಕೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಹೆಚ್ಡಿಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಫೋನ್ ಕದ್ದಾಲಿಕೆ ಸರ್ಕಾರ ಮಾಡಿಲ್ಲ. ಅಂತಹ ಮುಟ್ಟಾಳ್ ಕೆಲಸ ನಮ್ಮ ಸರ್ಕಾರ ಮಾಡಲ್ಲ. ಅವರೇನು ಭಯೋತ್ಪಾದಕರಾ? ಅವರು ನಮ್ಮ ನಾಯಕರು ಎಂದು ವ್ಯಂಗ್ಯವಾಡಿದ್ದಾರೆ.

    ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

    Prajwal Revanna Case Shivarame Gowdas Deve Gowda suicide statement says Nikhil Kumaraswamy

    ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

    ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

    ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

    ದೇವೇಗೌಡ ಆತ್ಮಹತ್ಯೆ ಹೇಳಿಕೆ; ಶಿವರಾಮೇಗೌಡ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡ

    ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

    ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

    ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

    ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

    ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

    ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

    ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

    ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

    ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

    Continue Reading

    ಕ್ರೈಂ

    HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

    HD Revanna: ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಹೇಳಿದ್ದಾರೆ.

    VISTARANEWS.COM


    on

    Holenarasipura sexual assault case SIT moves HC against HD Revanna bail order
    Koo

    ಬೆಂಗಳೂರು: ಹೊಳೆನರಸೀಪುರ (Holenarasipura) ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಜಾಮೀನು (Bail) ಮಂಜೂರಾಗಿದೆ. ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿರುವುದರಿಂದ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಂತಾಗಿದೆ ಎಂದು ಅಂದುಕೊಳ್ಳುತ್ತಿರುವಂತೆ ಅವರಿಗೆ ಎಸ್‌ಐಟಿ ಶಾಕ್‌ ನೀಡಿದೆ. ಜಾಮೀನು ಅರ್ಜಿಯನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ ಮೊರೆ ಹೋಗಿದೆ.

    ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಆದೇಶವನ್ನು ಪ್ರಶ್ನೆ ಮಾಡಲಿದೆ.

    ಈ ಸಂಬಂಧ ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ವಾರ ವಾದ – ಪ್ರತಿವಾದಗಳು ನಡೆದಿದ್ದವು. ಹೊಸ ಪ್ರಯೋಗ ಮಾಡಲು ಹೋಗಿ ಎಸ್‌ಐಟಿಗೆ ಮುಖಭಂಗವಾಗಿದೆ. ಇವತ್ತು ನ್ಯಾಯಾಲಯ ಎಸ್‌ಐಟಿಯ ನಡೆಯನ್ನು ವಜಾ ಮಾಡಿದೆ. ಇದೇ ಎಸ್‌ಐಟಿಯ ಎಸ್‌ಪಿಪಿ ಹೆಚ್ಚುವರಿ ಸೆಕ್ಷನ್ ಸೇರಿಸಲ್ಲವೆಂದು ಕೋರ್ಟ್‌ಗೆ ಹೇಳಿದ್ದರು. ಕೊನೆಗೆ 354 ಕೇಸ್‌ನಲ್ಲಿನ ಜಾಮೀನು ತೆಗೆದುಕೊಳ್ಳಲು ಬಂದಾಗ 376 ಸೇರಿಸಿದ್ದೇವೆ ಎಂದು ಹೇಳಿಕೊಂಡರು. ರೇವಣ್ಣ ಪರ ಹಿರಿಯ ಪರ ವಕೀಲ ಸಿ.ವಿ. ನಾಗೇಶ ವಾದ ಮಂಡಿಸಿ, ಎಸ್‌ಐಟಿ ತಪ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

    ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌ಡಿ ರೇವಣ್ಣಗೆ ಜಾಮೀನು

    ಜಾಮೀನಿಗೆ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಧೀಶರು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಪ್ರೀತ್ ಜೆ. ಅವರು ಆದೇಶ ಹೊರಡಿಸಿದ್ದಾರೆ. ಇಂದು ವಿಚಾರಣೆಗೆ ರೇವಣ್ಣ ಬರಿಗಾಲಲ್ಲೇ ಹಾಜರಾಗಿದ್ದರು. ಜಾಮೀನು ದೊರೆತ ಬಳಿಕ ಅವರ ಮುಖದಲ್ಲಿ ನಿರಾಳತೆ ಕಂಡುಬಂತು.

    ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭ್ಯವಾಗಿದೆ.

    ಚಾಮರಾಜನಗರದ ಸಂತ್ರಸ್ತೆಯ ಕಿಡ್‌ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಜಾಮೀನು ದೊರೆತಿತ್ತು.

    ಹೊಳೆನರಸೀಪುರ ಪ್ರಕರಣದಲ್ಲಿ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

    ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

    ರೇವಣ್ಣ ಪರ ವಕೀಲರ ವಾದ ಹೀಗಿತ್ತು

    ವಾದದ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

    ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

    ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

    ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

    ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

    ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

    ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

    ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

    ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

    Continue Reading

    ತುಮಕೂರು

    Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

    Heavy Rain: ಶಿರಾ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ. ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

    VISTARANEWS.COM


    on

    Due to heavy rain in Shira water entered houses and shops
    Koo

    ಶಿರಾ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, (Heavy Rain) ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾನುವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ ಚರಂಡಿಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದ ಕಾರಣ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

    ಇದನ್ನೂ ಓದಿ: IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

    ಇನ್ನು ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು, ವಿದ್ಯುತ್‌ ಉಪಕರಣಗಳು ಸೇರಿದಂತೆ ಇತರೆ ವಸ್ತುಗಳು ನೀರು ಪಾಲಾಗಿವೆ.

    ಆಕಳು ಕರು ರಕ್ಷಣೆ

    ಭಾರೀ ಮಳೆಗೆ ನಗರದ 18ನೇ ವಾರ್ಡ್‌ನ ದೊಡ್ಡಕೆರೆ ಅಂಗಳದ ಬಳಿ ಚರಂಡಿಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಆಕಳ ಕರುವನ್ನು ಸ್ಥಳೀಯ ಯುವಕರು ರಕ್ಷಿಸಿ, ಚರಂಡಿಯಿಂದ ಹೊರ ತೆಗೆದಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

    ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

    ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

    ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

    ಇದನ್ನೂ ಓದಿ: Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

    ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    Continue Reading
    Advertisement
    Covaxin Safety
    ದೇಶ5 mins ago

    Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

    Food department deletes name from ration card list even though it is alive
    ವಿಜಯನಗರ9 mins ago

    Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

    History Of Ice Cream
    ಆಹಾರ/ಅಡುಗೆ10 mins ago

    History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

    IPL 2024
    ಕ್ರೀಡೆ12 mins ago

    IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

    Silver Jewel Trend
    ಫ್ಯಾಷನ್21 mins ago

    Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

    Prajwal Revanna Case
    ಪ್ರಮುಖ ಸುದ್ದಿ24 mins ago

    Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

    Holenarasipura sexual assault case SIT moves HC against HD Revanna bail order
    ಕ್ರೈಂ29 mins ago

    HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

    Due to heavy rain in Shira water entered houses and shops
    ತುಮಕೂರು36 mins ago

    Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

    Lok Sabha Election 2024 Shah Rukh Khan booth in Mumbai
    ಬಾಲಿವುಡ್39 mins ago

    Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

    Trichy Tour
    ಪ್ರವಾಸ44 mins ago

    Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

    Sharmitha Gowda in bikini
    ಕಿರುತೆರೆ8 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ6 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ8 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ4 hours ago

    Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    Karnataka Rain
    ಮಳೆ1 day ago

    Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

    Karnataka rain
    ಮಳೆ1 day ago

    Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

    Karnataka Rain
    ಮಳೆ1 day ago

    Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

    Prajwal Revanna Case JDS calls CD Shivakumar pen drive gang
    ರಾಜಕೀಯ3 days ago

    Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

    Karnataka weather Forecast
    ಮಳೆ3 days ago

    Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

    Dina Bhavishya
    ಭವಿಷ್ಯ4 days ago

    Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

    Karnataka Weather Forecast
    ಮಳೆ4 days ago

    Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

    Drowned in water
    ಹಾಸನ4 days ago

    Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

    Suspicious Case
    ಬೆಂಗಳೂರು4 days ago

    Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

    ಟ್ರೆಂಡಿಂಗ್‌