ನಾವೆಲ್ಲರೂ ಭಾರತೀಯರೇ ಅಲ್ವಾ ಸರ್‌ !: ಹಿಂದಿಗೇಕೆ ಡಬ್‌ ಮಾಡುತ್ತೀರ ಎಂದ ಅಜಯ್‌ ದೇವಗನ್‌ಗೆ ಕಿಚ್ಚ ಉತ್ತರ - Vistara News

ಸಿನಿಮಾ

ನಾವೆಲ್ಲರೂ ಭಾರತೀಯರೇ ಅಲ್ವಾ ಸರ್‌ !: ಹಿಂದಿಗೇಕೆ ಡಬ್‌ ಮಾಡುತ್ತೀರ ಎಂದ ಅಜಯ್‌ ದೇವಗನ್‌ಗೆ ಕಿಚ್ಚ ಉತ್ತರ

ಅಜಯ್‌ ದೇವಗನ್‌ ವಿರದ್ಧ ಹರಿಹಾಯದೆ ಸುದೀಪ್‌ ಅತ್ಯಂತ ಸಂವೇದನೆಯಿಂದ ಉತ್ತರ ನೀಡಿರುವುದು ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಊಟ, ಬಟ್ಟೆಯಂತೆಯೇ ಭಾಷೆಯಲ್ಲೂ ವೈವಿಧ್ಯತೆ ಹೊಂದಿರುವ ಭಾರತದಲ್ಲಿ ಇದೀಗ ಮತ್ತೊಮ್ಮೆ ಹಿಂದಿ ವರ್ಸಸ್‌ ಕನ್ನಡ ಚರ್ಚೆ ನಡೆಯುತ್ತಿದ್ದು, ಬಾಲಿವುಡ್‌ ನಟ ಅಜಯ್‌ ದೇವಗನ್‌ ಮಾತು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವಾಗಲೇ, ಕಿಚ್ಚ ಸುದೀಪ್‌ ಅವರು ದೇವಗನ್‌ ಮಾತಿಗೆ ಅತ್ಯಂತ ವಿನಯದಿಂದ ಹಾಗೂ ಅಷ್ಟೇ ಖಡಕ್ಕಾಗಿ ಉತ್ತರ ನೀಡಿರುವುದು ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಭಾರತದ ಸಂವಿಧಾನದ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯೇ? ಎಂಬ ಚರ್ಚೆ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ, ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ ಎಂದು ಕಿಚ್ಚ ಸುದೀಪ್‌ ಹೇಳಿದ್ದರು. ಅದು ಉದ್ದೇಶಪೂರ್ವಕವಾಗಿಲ್ಲದೆ, ಸಂದರ್ಶನದ ಯಾವುದೋ ಭಾಗದಲ್ಲಿ, ಸಂದರ್ಭಕ್ಕೆ ಬಂದಿದ್ದ ಮಾತು. ಇದನ್ನು ವೀಕ್ಷಿಸಿದ ಬಾಲಿವುಡ್‌ ನಟ ಅಜಯ್‌ ದೇವಗನ್‌ ಬುಧವಾರ ಮಾಡಿದ ಟ್ವೀಟ್‌ನಲ್ಲಿ ಕಿಚ್ಚ ಸುದೀಪ್‌ರನ್ನು ಟ್ಯಾಗ್‌ ಮಾಡಿದ್ದರು. ಸಂಪೂರ್ಣವಾಗಿ ಹಿಂದಿಯಲ್ಲಿ ಬರೆದ ಟ್ವೀಟ್‌ನಲ್ಲಿ “ನನ್ನ ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ, ಇಂದೂ ಮತ್ತು ಎಂದೆಂದಿಗೂ ಇರುತ್ತದೆ” ಎಂದು ಬರೆದಿದ್ದರು.

ಅಜಯ್‌ ದೇವಗನ್‌ ಮಾತಿಗೆ ಕನ್ನಡಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಇದು ಹಿಂದಿ ಹೇರಿಕೆ, ಅಜಯ್‌ ಸಿನಿಮಾಗಳನ್ನು ನೋಡಬಾರದು ಎಂದೆಲ್ಲ ಅನೇಕರು ತಿಳಿಸಿದ್ದಾರೆ. ಆದರೆ ಕಿಚ್ಚ ಸುದೀಪ್‌ ಮಾತ್ರ ಬೇರೆಯದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಹೆಲೋ ಅಜಯ್‌ ದೇವಗನ್‌ ಸರ್‌.. ನಾನು ಈ ಮಾತನ್ನು ಹೇಳಿದ ಸಂದರ್ಭಕ್ಕೂ ಅದು ನಿಮಗೆ ತಲುಪಿದ ರೀತಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ನಾನು ಭಾವಿಸುತ್ತೇನೆ. ಈ ಮಾತನ್ನು ನಾನು ಏಕೆ ಹೇಳಿದೆ ಎನ್ನುವುದನ್ನು ನಿಮಗೆ ವೈಯಕ್ತಿಕವಾಗಿ ಭೇಟಿಯಾದಾಗ ತಿಳಿಸುತ್ತೇನೆ. ಇದು ಯಾರನ್ನು ನೋಯಸುವುದಕ್ಕೊ, ಪ್ರಚೋದನೆ ನೀಡುವುದಕ್ಕೊ ಅಥವಾ ಚರ್ಚೆಯನ್ನು ಹುಟ್ಟು ಹಾಕುವುದಕ್ಕೋ ನೀಡಿದ ಹೇಳಿಕೆ ಅಲ್ಲ. ನಾನೇಕೆ ಹಾಗೆ ಮಾಡುತ್ತೇನೆ ಅಲ್ಲವೇ ಸರ್‌?” ಎಂದು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ ಮಾತು ಮುಂದುವರಿಸಿದ ಸುದೀಪ್‌, ನಮ್ಮ ದೇಶದ ಎಲ್ಲ ಭಾಷೆಗಳನ್ನೂ ನಾನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ಇದು ಇಲ್ಲಿಗೇ ಮುಕ್ತಾಯವಾಗಲಿ ಎಂದು ನಾನು ಭಾವಿಸುತ್ತೇನೆ. ಈಗಾಗಲೆ ಹೇಳಿದಂತೆ ನಾನು ಆ ಮಾತನ್ನು ಸಂಪೂರ್ಣ ವಿಭಿನ್ನ ಸಂದರ್ಭದಲ್ಲಿ ಹೇಳಿದ್ದೆ. ನಿಮ್ಮ ಮೇಲೆ ಅಪಾರ ಪ್ರೀತಿಯಿದೆ. ಶೀಘ್ರದಲ್ಲೇ ಭೇಟಿಯಾಗುತ್ತೇನೆ” ಎಂದರು.

ಯಾಕೊ ಈ ವಿವಾದ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಅರಿತ ಕಿಚ್ಚ ಮತ್ತೊಂದು ಟ್ವೀಟ್‌ ಮಾಡಿದರು: “ಮತ್ತು ಅಜಯ್‌ ದೇವಗನ್‌ ಸರ್‌, ನೀವು ಕಳಿಸಿದ ಹಿಂದಿ ವಾಕ್ಯವನ್ನು ನಾನು ಅರ್ಥ ಮಾಡಿಕೊಂಡೆ. ಏಕೆಂದರೆ ನಾವು ಆ ಭಾಷೆಯನ್ನು ಗೌರವಿಸಿದ್ದೇವೆ, ಪ್ರೀತಿಸಿದ್ದೇವೆ ಹಾಗೂ ಕಲಿತಿದ್ದೇವೆ. ಇದರಲ್ಲಿ ತಪ್ಪೇನೂ ಇಲ್ಲ ಸರ್‌. ಆದರೆ ನಾನು ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ನೀಡಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತೋ ಗೊತ್ತಿಲ್ಲ !!. ನಾವೆಲ್ಲರೂ ಭಾರತಕ್ಕೇ ಸೇರಿದವರಲ್ಲವೇ ಸರ್‌.” ಎಂದು ಹೇಳಿದರು

ಕಿಚ್ಚ ಸುದೀಪ್‌ ಮಾತಿಗೆ ಪ್ರತಿಕ್ರಿಯೆ ನೀಡಿದ ಅಜಯ್‌ ದೇವಗನ್‌, “ಕಿಚ್ಚ ಸುದೀಪ್‌, ನೀವು ನನ್ನ ಸ್ನೇಹಿತ. ನನ್ನ ತಪ್ಪು ತಿಳುವಳಿಕೆಯನ್ನು ನಿವಾರಿಸಿದ್ದಕ್ಕೆ ಧನ್ಯವಾದಗಳು. ಇಡೀ ಚಿತ್ರರಂಗ ಒಂದೇ ಎಂದು ನಾನು ಭಾವಿಸುತ್ತೇನೆ. ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ ಹಾಗೂ ನಮ್ಮ ಭಾಷೆಯನ್ನು ಎಲ್ಲರೂ ಗೌರವಿಸಬೇಕು ಎಂದು ನಿರೀಕ್ಷಿಸುತ್ತೇವೆ. ಆದರೆ ಬಹುಶಃ ಅನುವಾದದಲ್ಲಿ ಏನೋ ಲೋಪವಾಗಿರಬೇಕು” ಎಂದಿದ್ದಾರೆ.

ಚರ್ಚೆಯು ಗೌರವಯುತವಾಗಿ ನಡೆಯುತ್ತಿರುವುದನ್ನು ಗಮನಿಸಿದ ಕಿಚ್ಚ, ಅಷ್ಟೇ ಆತ್ಮೀಯವಾಗಿ ಮತ್ತೊಂದು ಟ್ವೀಟ್‌ ಮಾಡಿದರು. “ಅನುವಾದಗಳು ಹಾಗೂ ವ್ಯಾಖ್ಯಾನಗಳು ದೃಷ್ಟಿಕೋನಕ್ಕೆ ಅನುಗುಣವಾಗಿರುತ್ತವೆ ಸರ್‌. ಅದಕ್ಕಾಗಿಯೇ, ಸಂಪೂರ್ಣ ಮಾಹಿತಿಯನ್ನು ತಿಳಿಯದೇ ಪ್ರತಿಕ್ರಿಯೆ ನೀಡಬಾರದು. ಇದಕ್ಕಾಗಿ ನಾನು ನಿಮ್ಮನ್ನು ದೂಷಣೆ ಮಾಡುವುದಿಲ್ಲ ಸರ್‌. ಆದರೆ, ಒಂದು ಸೃಜನಶೀಲ ವಿಚಾರದಲ್ಲಿ ನಿಮ್ಮಿಂದ ಒಂದು ಟ್ವೀಟ್‌ ನನಗಾಗಿ ಬಂದಿದ್ದರೆ ನಾನು ಸಂತೋಷ ಪಡುತ್ತಿದ್ದೆ” ಎಂದು ತಣ್ಣಗೆ ಉತ್ತರ ನೀಡಿದ್ದಾರೆ.

ಇಡೀ ಪ್ರಕರಣದಲ್ಲಿ ಕಿಚ್ಚ ಸುದೀಪ್‌ ಅವರು ಅಜಯ್‌ ದೇವಗನ್‌ ಅವರ ವಿರದ್ಧ ಹರಿಹಾಯದೆ ಅತ್ಯಂತ ಸಂವೇದನೆಯಿಂದ ಉತ್ತರ ನೀಡಿರುವುದು ಹಾಗೂ ವಿಚಾರವನ್ನು ಮನವರಿಕೆ ಮಾಡಿರುವ ರೀತಿಗೆ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಅಜಯ್‌ ದೇವಗನ್‌ ವಿರುದ್ಧ ಪ್ರತಿಭಟನೆ

ಅಜಯ್ ದೇವಗನ್ ವಿರುದ್ಧ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಗುರುವಾರ ನಡೆದವು. ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಶ್‌ ಶೆಟ್ಟಿ, “22 ಭಾಷೆಗಳಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ಅದರಲ್ಲಿ ಹಿಂದಿಯೂ ಕೂಡ ಒಂದು ಅಷ್ಟೇ. ಯಾವುದೇ ಕಾರಣಕ್ಕೆ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಲು ಸಾಧ್ಯವಿಲ್ಲ. ಕನ್ನಡಕ್ಕೂ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ನಮಗೆ ಕನ್ನಡವೇ ರಾಷ್ಟ್ರೀಯ ಭಾಷೆ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಕನ್ನಡಿಗರನ್ನು ಬಿಟ್ಟು ಯಾವತ್ತೂ ಭಾರತದೇಶ ಆಗಿಲ್ಲ. ಕನ್ನಡಿಗರನ್ನು ಕೆಣಕಲು ಬಂದರೆ ರಕ್ಷಣಾ ವೇದಿಕೆ ಕೈಕಟ್ಟಿ ಕೊರಲ್ಲ. ಅಜಯ್ ದೇವಗನ್ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ. ಅಜಯ್ ದೇವಗನ್ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು, ಅಜಯ್ ದೇವಗನ್ ಸಿನಿಮಾ ಕರ್ನಾಟಕಕ್ಕೆ ಕಾಲಿಡಲು ಬಿಡಲ್ಲ. ಸರಕಾರ ಕನ್ನಡಿಗರ ಪರವಾಗಿ ಗಮನಹರಿಸಬೇಕು ಹಾಗೆ ನಾವೆಲ್ಲ ಕನ್ನಡಿಗರು ಒಗ್ಗಟಾಗಿ ಹಿಂದಿಯನ್ನು ವಿರೋಧಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಸುದೀಪ್ ಅವರ ಬೆಂಬಲಕ್ಕೆ ನಿಂತಿದ್ದೇವೆ. ಅಜಯ್ ದೇವಗನ್ ಗೆ ನಾವು ಎಚ್ಚರಿಕೆ ಕೊಡುತ್ತೇವೆ. ಹಿಂದಿಯಲ್ಲಿ ಡಬ್ ಮಾಡಿ ಬಿಡ್ತೀರಾ ಎಂದು ಅಜಯ್ ದೇವಗನ್ ಕೇಳಿದ್ದಾರೆ. ಹಿಂದಿಯನ್ನು ನಮ್ಮ ಮೇಲೆ ಹೇರಿ ಉದ್ಯೋಗ ಬದುಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಎಲ್ಲಾ ರಾಜಕೀಯ ಮುಖಂಡರು, ನಟರೂ ಧ್ವನಿ ಎತ್ತಬೇಕು. ಕನ್ನಡದ ಸಿನಿಮಾಗಳು ರಾಷ್ಟ್ರವನ್ನು ಮೀರಿ ಹೋಗುತ್ತಿವೆ ಎಂದರು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: Explainer: ಹಿಂದಿ ರಾಷ್ಟ್ರಭಾಷೆ ಹೌದೋ, ಅಲ್ಲವೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Hina Khan: ಹೀನಾ ಕನ್ನಡಿಯ ಮುಂದೆ ಕೂತಿದ್ದರು. ಅವರ ಸ್ನೇಹಿತೆ ನಟಿಯ ಕೂದಲನ್ನು ಹೆಣೆದಿದ್ದರು. ನಟಿಯ ಪಕ್ಕದಲ್ಲಿ, ತಾಯಿ ಕೂಡ ಇದ್ದರು. ಹಿನಾ ಆ ಕ್ಷಣಕ್ಕೆ ತಾಯಿಯನ್ನು ಸಮಾಧಾನ ಮಾಡುತ್ತಿದ್ದರು. ಅಳಬೇಡ ಅಮ್ಮ ಎಂದು ಸಮಾಧಾನ ಪಡಿಸುತ್ತಲೇ ಇದ್ದರು. ತಾಯಿ ಕೂಡ ಕೂದಲನ್ನು ಕತ್ತರಿಸಬೇಡಿ ಎಂದು ಭಾವುಕಾರಾದರು.

VISTARANEWS.COM


on

Hina Khan mom weeps as actor cuts her hair
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ  ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದ್ದು, ಕ್ಯಾನ್ಸರ್‌ ಮೂರನೇ ಹಂತದಲ್ಲಿದೆ. ಇದೀಗ ನಟಿ ತಮ್ಮ ಕೂದಲನ್ನು ಚಿಕ್ಕದಾಗಿ ಕತ್ತರಿಸಿಕೊಂಡಿರುವ ಹೊಸ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಕೂದಲು ಕತ್ತರಿಸಿಕೊಂಡಿರುವ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಜತೆಗೆ ಅಮ್ಮ ಮಗಳನ್ನು ತಬ್ಬಿ ಭಾವುಕರಾದರು. ಈ ವಿಡಿಯೊ ಕಂಡು ಹೀನಾ ಫ್ಯಾನ್ಸ್‌ ಬೇಸರ ಹೊರಹಾಕಿದ್ದಾರೆ. ಆದರೆ ವಿಡಿಯೊದುದ್ದಕ್ಕೂ ಹಿನಾ ಮುಖದಲ್ಲಿ ನಗು ಇತ್ತು. ಒಳಗೆ ಎಷ್ಟೇ ನೋವು ಇದ್ದರೂ ಹೊರಗಡೆ ನಟಿ ನಗುತ್ತಲೇ ಇರುವುದು ಕಂಡು ಬಂತು.

ಹೀನಾ ಕನ್ನಡಿಯ ಮುಂದೆ ಕೂತಿದ್ದರು. ಅವರ ಸ್ನೇಹಿತೆ ನಟಿಯ ಕೂದಲನ್ನು ಹೆಣೆದಿದ್ದರು. ನಟಿಯ ಪಕ್ಕದಲ್ಲಿ, ತಾಯಿ ಕೂಡ ಇದ್ದರು. ಹಿನಾ ಆ ಕ್ಷಣಕ್ಕೆ ತಾಯಿಯನ್ನು ಸಮಾಧಾನ ಮಾಡುತ್ತಿದ್ದರು. ಅಳಬೇಡ ಅಮ್ಮ ಎಂದು ಸಮಾಧಾನ ಪಡಿಸುತ್ತಲೇ ಇದ್ದರು. ತಾಯಿ ಕೂಡ ಕೂದಲನ್ನು ಕತ್ತರಿಸಬೇಡಿ ಎಂದು ಭಾವುಕಾರಾದರು. ಬಳಿಕ ನಟಿ ಕೂದಲಿಗೆ ಕತ್ತರಿ ಹಾಕೇ ಬಿಟ್ಟರು. ಈಗಾಗಲೇ ನಟಿಗೆ ಚಿಕಿತ್ಸೆ ಆರಂಭವಾಗಿದೆ. ಈ ಹೋರಾಟದಲ್ಲಿ ತನ್ನ ತಾಯಿ ಜತೆಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು, ಆತ್ಮೀಯರು ನನ್ನ ಹೋರಾಟಕ್ಕೆ ದೊಡ್ಡ ಭರವಸೆ. ನಾನು ಗೆದ್ದು ಬರುತ್ತೇನೆ ಎಂದು ತಮ್ಮ ಕೂದಲನ್ನು ಕಟ್‌ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಹಂಚಿಕೊಂಡಿದ್ದಾರೆ ಹೀನಾ.

ಕೂದಲು ಕತ್ತರಿಸಿದ ಬಳಿಕ ತಾಯಿ ಮಗಳನ್ನು ತಬ್ಬಿಕೊಂಡು ಮತ್ತಿಟ್ಟರು. ಈ ಬಗ್ಗೆ ಹೀನಾ ಸೋಷಿಯಲ್‌ ಮೀಡಿಯಾದಲ್ಲಿ ನಟಿ ಬರೆದುಕೊಂಡಿದ್ದಾರೆ. ʻವಿಶೇಷವಾಗಿ ಈ ರೀತಿಯ ಯುದ್ಧದಲ್ಲಿ ಹೋರಾಡುವ ಮಹಿಳೆಯರಿಗೆ ಈ ಸಂದರ್ಭ ಕಷ್ಟ ಎಂದು ನನಗೆ ತಿಳಿದಿದೆ.ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ, ನಮ್ಮ ಕೂದಲು ನಾವು ಎಂದಿಗೂ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ. ಆದರೆ ನೀವು ಗೆಲ್ಲಲು ಬಯಸಿದರೆ ನೀವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ನಾನು ಗೆಲ್ಲಲು ನಿರ್ಧರಿಸಿದೆ. ಕೂದಲು ಉದುರಲು ಪ್ರಾರಂಭಿಸುವ ಮೊದಲು ನಾನೇ ಕೂದಲಿಗೆ ಕತ್ತರಿ ಹಾಕಿದೆ. ಈ ಯುದ್ಧವನ್ನು ಗೆಲ್ಲಲು ಸಾಧ್ಯವಿರುವ ಎಲ್ಲ ಅವಕಾಶಗಳನ್ನು ನೀಡಲು ನಾನು ನಿರ್ಧರಿಸಿದ್ದೇನೆ. ನನ್ನ ಸುಂದರವಾದ ಕೂದಲು ಉದುರಲು ಪ್ರಾರಂಭಿಸುವ ಮೊದಲು ನಾನು ಅದನ್ನು ಕಟ್‌ ಮಾಡಬೇಕು. ನನ್ನ ಧೈರ್ಯ, ನನ್ನ ಶಕ್ತಿ ಮತ್ತು ನನ್ನ ಮೇಲೆ ನಾನು ಹೊಂದಿರುವ ಪ್ರೀತಿಯಿಂದಾಗಿ ಈ ನಿರ್ಧಾರ ತೆಗೆದುಕೊಂಡೆ. ಕೂದಲು ಮತ್ತೆ ಬೆಳೆಯುತ್ತದೆ, ಹುಬ್ಬುಗಳು ಹಿಂತಿರುಗುತ್ತವೆ, ಕಲೆಗಳು ಮಸುಕಾಗುತ್ತವೆ, ಆದರೆ ಆತ್ಮವು ಸಂಪೂರ್ಣವಾಗಿ ಉಳಿಯಬೇಕು. ನಾನು ನನ್ನ ಈ ಪ್ರಯಾಣವನ್ನು ರೆಕಾರ್ಡ್ ಮಾಡುತ್ತಿದ್ದೇನೆ. ದೇವರು ನಮ್ಮ ನೋವನ್ನು ಕಡಿಮೆ ಮಾಡಿ ವಿಜಯಶಾಲಿಯಾಗಿ ಬನ್ನಿ ಎಂದು ನನಗಾಗಿ ಪ್ರಾರ್ಥಿಸಿ, ”ಎಂದು ಹಿನಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ. ಹೀನಾ ಫ್ಯಾನ್ಸ್‌ ಕೂಡ ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Actor Darshan: ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ.

VISTARANEWS.COM


on

Actor Darshan SIM Secret Revealed investigation start
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ. ನಟ ದರ್ಶನ್ ಮಾತ್ರವಲ್ಲ, ಪವಿತ್ರಗೌಡ, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಕೂಡ ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ತನಿಖೆ ವೇಳೆ ಬಯಲಿಗೆ ಬಂದಿದೆ. ಹೀಗಾಗಿ ಸಿಮ್ ಖರೀದಿದಾರರಿಗೆ ಪೊಲೀಸರು ನೋಟಿಸ್‌ ನೀಡಲು ಮುಂದಾಗಿದ್ದಾರೆ. ಮಾತ್ರವಲ್ಲ ದರ್ಶನ್ ಪರಿಚಯಸ್ಥರ ವಿಚಾರಣೆಗೆ ಕೂಡ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪೊಲೀಸ್‌ ತನಿಖೆ ವೇಳೆ ಆರೋಪಿಗಳು ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಮಾಹಿತಿ ಸಂಗ್ರಹಿಸಿ ಪರಿಶೀಲನೆ ವೇಳೆ ಸಿಮ್ ಕಾರ್ಡ್ ರಹಸ್ಯ ಬಯಲಾಗಿದೆ. ಹೇಮಂತ್ ಹೆಸರಿನಲ್ಲಿರುವ ಸಿಮ್‌ವನ್ನು ದರ್ಶನ್‌ ಬಳಸುತ್ತಿದ್ದರೆ, ಪವಿತ್ರಗೌಡ ಅವರು ಮನೋಜ್ ಹೆಸರಿನಲ್ಲಿದ್ದ ಸಿಮ್ ಬಳಸುತ್ತಿದ್ದರು. ಆರೋಪಿ ನಂದೀಶ್ ಅವರು ಹೇಮಂತ್ ಹೆಸರಿನಲ್ಲಿ, ಆರೋಪಿ ಪ್ರದ್ಯೂಷ್ ಖಾಸಗಿ ಕಂಪನಿ ಸೀನಿಯರ್ ಮ್ಯಾನೇಜರ್ ಹೆಸರಿನಲ್ಲಿ, ಆರೋಪಿ ಕಾರ್ತಿಕ್ ಅವರು ವೇಲು ಎಂಬಾತನ ಹೆಸರಲ್ಲಿ, ಕೇಶವಮೂರ್ತಿ ಅರು ಪ್ರಜ್ಞಾ ಎಂ ಹೆಸರಲ್ಲಿ, ನಿಖಿಲ್ ನಾಯಕ್ ಅವರು ಗೀತಾ ಹೆಸರಲ್ಲಿ ಸಿಮ್‌ ಬಳಕೆ ಮಾಡುತ್ತಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

ಸದರಿ ಸಿಮ್ ಮಾಲೀಕರ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ನೋಟಿಸ್ ನೀಡಿ ವಿಚಾರಣೆ ಮಾಡಲು ಪೊಲೀಸರು ಸಿದ್ಧತೆ ಮಾಡುತ್ತಿದ್ದಾರೆ. ಮಾತ್ರವಲ್ಲ ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿಲಾಗಿದೆ. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪುತ್ತಿದ್ದಂತೆ ಪುರೋಹಿತ್ ಎಸ್ಕೇಪ್ ಆಗಿದ್ದಾನೆ. ಈತ ಆರೋಪಿ ಪ್ರದೋಷ್‌ಗೆ ಆಪ್ತನಾಗಿದ್ದ.

ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ

ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸಾಕ್ಷಿದಾರರು ಎಂದು ಪರಿಗಣಿಸಿ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೋಹನ್ ರಾಜು ಹಾಗೂ ಪ್ರಕಾಶ್ ಹೇಳಿಕೆ ಪಡೆಯಲಿದ್ದಾರೆ. ಹಣಕ್ಕೆ ಸಂಬಂಧಿಸಿದಂತೆ ಹಾಗೇ ಇಬ್ಬರು ಪರಿಚಯಸ್ಥರ ಜೊತೆಗೆ ಇನ್ನೂ ಕೆಲವರ ವಿಚಾರಣೆ ಆಗಲಿದೆ.

ದರ್ಶನ್ ಮನೆ ಕೆಲಸಗಾರರಾದ ಬಾಬುಲ್ ಖಾನ್, ಸುಶೀಲಮ್ಮ ಮತ್ತು ಅಮೀರ್ ಖಾನ್ ,ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಕೆಲಸಗಾರ ಚೇತನ್ ಗೌಡ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಆರೋಪಿ ಪವಿತ್ರಗೌಡ ಸ್ನೇಹಿತೆ ಸಮಂತ ಎಂಬಾಕೆಗೂ ವಿಚಾರಣೆ ಬಿಸಿ ತಟ್ಟಿದೆ. ಇದರ ಜೊತೆಗೆ ಇನ್ನಷ್ಟು ಪರೋಕ್ಷ ಸಾಕ್ಷಿಗಳ ಸಂಗ್ರಹ ಕೂಡ ಆಗುತ್ತಿದೆ. ಪೊಲೀಸರು ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

Chaithra J Achar: ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Chaithra J Achar Kittale Roopanthara Raj B Shetty out
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” (Roopanthara)ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದರು. ಈಗಾಗಲೇ ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಂತಹ ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರ ಮೆಚ್ಚುಗೆ ಗಳಿಸಿಕೊಂಡಿರುವ ಚೈತ್ರಾ ಆಚಾರ್ (Chaithra J Achar) ‘ರೂಪಾಂತರ’ದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.ಮಿಧುನ್ ಸಂಗೀತಕ್ಕೆ ರಾಜ್ ಸಾಹಿತ್ಯ ರಚಿಸಿದ್ದು “ಕಿತ್ತಾಳೆ” ಹಾಡು ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ನಟಿ ಚೈತ್ರಾ ಆಚಾರ್ ಅವರೇ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಅವರೇ ಹಾಡಿರುವುದು ವಿಶೇಷ.

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

Continue Reading
Advertisement
Hina Khan mom weeps as actor cuts her hair
ಬಾಲಿವುಡ್3 mins ago

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Robbery Case
ಕ್ರೈಂ12 mins ago

Robbery Case : ರಾಯಚೂರಿನಲ್ಲಿ ಸ್ವಾಮೀಜಿ ತಲೆಗೆ ಗನ್ ಇಟ್ಟು ದರೋಡೆ!

Jay Shah
ಕ್ರೀಡೆ19 mins ago

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

hd kumaraswamy
ಪ್ರಮುಖ ಸುದ್ದಿ21 mins ago

HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

Bigg Boss Telugu 8 Astrologer Venu Swamy A Contestant
ಟಾಲಿವುಡ್34 mins ago

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Gold Rate Today
ಚಿನ್ನದ ದರ49 mins ago

Gold Rate Today: ಇಂದು ಏರಿಕೆಯಾಗಿಲ್ಲ ಚಿನ್ನದ ದರ; ಬೆಲೆ ಎಷ್ಟಿದೆ ನೋಡಿ

Physical Abuse
ಬೆಂಗಳೂರು55 mins ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Team India
ಕ್ರಿಕೆಟ್1 hour ago

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್​ ಕ್ರಿಕೆಟಿಗರು

ಉದ್ಯೋಗ1 hour ago

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Actor Darshan SIM Secret Revealed investigation start
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse
ಬೆಂಗಳೂರು55 mins ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು1 hour ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ6 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ19 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ21 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ22 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 day ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

ಟ್ರೆಂಡಿಂಗ್‌