ನಾವೆಲ್ಲರೂ ಭಾರತೀಯರೇ ಅಲ್ವಾ ಸರ್‌ !: ಹಿಂದಿಗೇಕೆ ಡಬ್‌ ಮಾಡುತ್ತೀರ ಎಂದ ಅಜಯ್‌ ದೇವಗನ್‌ಗೆ ಕಿಚ್ಚ ಉತ್ತರ - Vistara News

ಸಿನಿಮಾ

ನಾವೆಲ್ಲರೂ ಭಾರತೀಯರೇ ಅಲ್ವಾ ಸರ್‌ !: ಹಿಂದಿಗೇಕೆ ಡಬ್‌ ಮಾಡುತ್ತೀರ ಎಂದ ಅಜಯ್‌ ದೇವಗನ್‌ಗೆ ಕಿಚ್ಚ ಉತ್ತರ

ಅಜಯ್‌ ದೇವಗನ್‌ ವಿರದ್ಧ ಹರಿಹಾಯದೆ ಸುದೀಪ್‌ ಅತ್ಯಂತ ಸಂವೇದನೆಯಿಂದ ಉತ್ತರ ನೀಡಿರುವುದು ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಊಟ, ಬಟ್ಟೆಯಂತೆಯೇ ಭಾಷೆಯಲ್ಲೂ ವೈವಿಧ್ಯತೆ ಹೊಂದಿರುವ ಭಾರತದಲ್ಲಿ ಇದೀಗ ಮತ್ತೊಮ್ಮೆ ಹಿಂದಿ ವರ್ಸಸ್‌ ಕನ್ನಡ ಚರ್ಚೆ ನಡೆಯುತ್ತಿದ್ದು, ಬಾಲಿವುಡ್‌ ನಟ ಅಜಯ್‌ ದೇವಗನ್‌ ಮಾತು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವಾಗಲೇ, ಕಿಚ್ಚ ಸುದೀಪ್‌ ಅವರು ದೇವಗನ್‌ ಮಾತಿಗೆ ಅತ್ಯಂತ ವಿನಯದಿಂದ ಹಾಗೂ ಅಷ್ಟೇ ಖಡಕ್ಕಾಗಿ ಉತ್ತರ ನೀಡಿರುವುದು ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಭಾರತದ ಸಂವಿಧಾನದ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯೇ? ಎಂಬ ಚರ್ಚೆ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ, ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ ಎಂದು ಕಿಚ್ಚ ಸುದೀಪ್‌ ಹೇಳಿದ್ದರು. ಅದು ಉದ್ದೇಶಪೂರ್ವಕವಾಗಿಲ್ಲದೆ, ಸಂದರ್ಶನದ ಯಾವುದೋ ಭಾಗದಲ್ಲಿ, ಸಂದರ್ಭಕ್ಕೆ ಬಂದಿದ್ದ ಮಾತು. ಇದನ್ನು ವೀಕ್ಷಿಸಿದ ಬಾಲಿವುಡ್‌ ನಟ ಅಜಯ್‌ ದೇವಗನ್‌ ಬುಧವಾರ ಮಾಡಿದ ಟ್ವೀಟ್‌ನಲ್ಲಿ ಕಿಚ್ಚ ಸುದೀಪ್‌ರನ್ನು ಟ್ಯಾಗ್‌ ಮಾಡಿದ್ದರು. ಸಂಪೂರ್ಣವಾಗಿ ಹಿಂದಿಯಲ್ಲಿ ಬರೆದ ಟ್ವೀಟ್‌ನಲ್ಲಿ “ನನ್ನ ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ, ಇಂದೂ ಮತ್ತು ಎಂದೆಂದಿಗೂ ಇರುತ್ತದೆ” ಎಂದು ಬರೆದಿದ್ದರು.

ಅಜಯ್‌ ದೇವಗನ್‌ ಮಾತಿಗೆ ಕನ್ನಡಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಇದು ಹಿಂದಿ ಹೇರಿಕೆ, ಅಜಯ್‌ ಸಿನಿಮಾಗಳನ್ನು ನೋಡಬಾರದು ಎಂದೆಲ್ಲ ಅನೇಕರು ತಿಳಿಸಿದ್ದಾರೆ. ಆದರೆ ಕಿಚ್ಚ ಸುದೀಪ್‌ ಮಾತ್ರ ಬೇರೆಯದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಹೆಲೋ ಅಜಯ್‌ ದೇವಗನ್‌ ಸರ್‌.. ನಾನು ಈ ಮಾತನ್ನು ಹೇಳಿದ ಸಂದರ್ಭಕ್ಕೂ ಅದು ನಿಮಗೆ ತಲುಪಿದ ರೀತಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ನಾನು ಭಾವಿಸುತ್ತೇನೆ. ಈ ಮಾತನ್ನು ನಾನು ಏಕೆ ಹೇಳಿದೆ ಎನ್ನುವುದನ್ನು ನಿಮಗೆ ವೈಯಕ್ತಿಕವಾಗಿ ಭೇಟಿಯಾದಾಗ ತಿಳಿಸುತ್ತೇನೆ. ಇದು ಯಾರನ್ನು ನೋಯಸುವುದಕ್ಕೊ, ಪ್ರಚೋದನೆ ನೀಡುವುದಕ್ಕೊ ಅಥವಾ ಚರ್ಚೆಯನ್ನು ಹುಟ್ಟು ಹಾಕುವುದಕ್ಕೋ ನೀಡಿದ ಹೇಳಿಕೆ ಅಲ್ಲ. ನಾನೇಕೆ ಹಾಗೆ ಮಾಡುತ್ತೇನೆ ಅಲ್ಲವೇ ಸರ್‌?” ಎಂದು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ ಮಾತು ಮುಂದುವರಿಸಿದ ಸುದೀಪ್‌, ನಮ್ಮ ದೇಶದ ಎಲ್ಲ ಭಾಷೆಗಳನ್ನೂ ನಾನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ಇದು ಇಲ್ಲಿಗೇ ಮುಕ್ತಾಯವಾಗಲಿ ಎಂದು ನಾನು ಭಾವಿಸುತ್ತೇನೆ. ಈಗಾಗಲೆ ಹೇಳಿದಂತೆ ನಾನು ಆ ಮಾತನ್ನು ಸಂಪೂರ್ಣ ವಿಭಿನ್ನ ಸಂದರ್ಭದಲ್ಲಿ ಹೇಳಿದ್ದೆ. ನಿಮ್ಮ ಮೇಲೆ ಅಪಾರ ಪ್ರೀತಿಯಿದೆ. ಶೀಘ್ರದಲ್ಲೇ ಭೇಟಿಯಾಗುತ್ತೇನೆ” ಎಂದರು.

ಯಾಕೊ ಈ ವಿವಾದ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಅರಿತ ಕಿಚ್ಚ ಮತ್ತೊಂದು ಟ್ವೀಟ್‌ ಮಾಡಿದರು: “ಮತ್ತು ಅಜಯ್‌ ದೇವಗನ್‌ ಸರ್‌, ನೀವು ಕಳಿಸಿದ ಹಿಂದಿ ವಾಕ್ಯವನ್ನು ನಾನು ಅರ್ಥ ಮಾಡಿಕೊಂಡೆ. ಏಕೆಂದರೆ ನಾವು ಆ ಭಾಷೆಯನ್ನು ಗೌರವಿಸಿದ್ದೇವೆ, ಪ್ರೀತಿಸಿದ್ದೇವೆ ಹಾಗೂ ಕಲಿತಿದ್ದೇವೆ. ಇದರಲ್ಲಿ ತಪ್ಪೇನೂ ಇಲ್ಲ ಸರ್‌. ಆದರೆ ನಾನು ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ನೀಡಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತೋ ಗೊತ್ತಿಲ್ಲ !!. ನಾವೆಲ್ಲರೂ ಭಾರತಕ್ಕೇ ಸೇರಿದವರಲ್ಲವೇ ಸರ್‌.” ಎಂದು ಹೇಳಿದರು

ಕಿಚ್ಚ ಸುದೀಪ್‌ ಮಾತಿಗೆ ಪ್ರತಿಕ್ರಿಯೆ ನೀಡಿದ ಅಜಯ್‌ ದೇವಗನ್‌, “ಕಿಚ್ಚ ಸುದೀಪ್‌, ನೀವು ನನ್ನ ಸ್ನೇಹಿತ. ನನ್ನ ತಪ್ಪು ತಿಳುವಳಿಕೆಯನ್ನು ನಿವಾರಿಸಿದ್ದಕ್ಕೆ ಧನ್ಯವಾದಗಳು. ಇಡೀ ಚಿತ್ರರಂಗ ಒಂದೇ ಎಂದು ನಾನು ಭಾವಿಸುತ್ತೇನೆ. ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ ಹಾಗೂ ನಮ್ಮ ಭಾಷೆಯನ್ನು ಎಲ್ಲರೂ ಗೌರವಿಸಬೇಕು ಎಂದು ನಿರೀಕ್ಷಿಸುತ್ತೇವೆ. ಆದರೆ ಬಹುಶಃ ಅನುವಾದದಲ್ಲಿ ಏನೋ ಲೋಪವಾಗಿರಬೇಕು” ಎಂದಿದ್ದಾರೆ.

ಚರ್ಚೆಯು ಗೌರವಯುತವಾಗಿ ನಡೆಯುತ್ತಿರುವುದನ್ನು ಗಮನಿಸಿದ ಕಿಚ್ಚ, ಅಷ್ಟೇ ಆತ್ಮೀಯವಾಗಿ ಮತ್ತೊಂದು ಟ್ವೀಟ್‌ ಮಾಡಿದರು. “ಅನುವಾದಗಳು ಹಾಗೂ ವ್ಯಾಖ್ಯಾನಗಳು ದೃಷ್ಟಿಕೋನಕ್ಕೆ ಅನುಗುಣವಾಗಿರುತ್ತವೆ ಸರ್‌. ಅದಕ್ಕಾಗಿಯೇ, ಸಂಪೂರ್ಣ ಮಾಹಿತಿಯನ್ನು ತಿಳಿಯದೇ ಪ್ರತಿಕ್ರಿಯೆ ನೀಡಬಾರದು. ಇದಕ್ಕಾಗಿ ನಾನು ನಿಮ್ಮನ್ನು ದೂಷಣೆ ಮಾಡುವುದಿಲ್ಲ ಸರ್‌. ಆದರೆ, ಒಂದು ಸೃಜನಶೀಲ ವಿಚಾರದಲ್ಲಿ ನಿಮ್ಮಿಂದ ಒಂದು ಟ್ವೀಟ್‌ ನನಗಾಗಿ ಬಂದಿದ್ದರೆ ನಾನು ಸಂತೋಷ ಪಡುತ್ತಿದ್ದೆ” ಎಂದು ತಣ್ಣಗೆ ಉತ್ತರ ನೀಡಿದ್ದಾರೆ.

ಇಡೀ ಪ್ರಕರಣದಲ್ಲಿ ಕಿಚ್ಚ ಸುದೀಪ್‌ ಅವರು ಅಜಯ್‌ ದೇವಗನ್‌ ಅವರ ವಿರದ್ಧ ಹರಿಹಾಯದೆ ಅತ್ಯಂತ ಸಂವೇದನೆಯಿಂದ ಉತ್ತರ ನೀಡಿರುವುದು ಹಾಗೂ ವಿಚಾರವನ್ನು ಮನವರಿಕೆ ಮಾಡಿರುವ ರೀತಿಗೆ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಅಜಯ್‌ ದೇವಗನ್‌ ವಿರುದ್ಧ ಪ್ರತಿಭಟನೆ

ಅಜಯ್ ದೇವಗನ್ ವಿರುದ್ಧ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಗುರುವಾರ ನಡೆದವು. ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಶ್‌ ಶೆಟ್ಟಿ, “22 ಭಾಷೆಗಳಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ಅದರಲ್ಲಿ ಹಿಂದಿಯೂ ಕೂಡ ಒಂದು ಅಷ್ಟೇ. ಯಾವುದೇ ಕಾರಣಕ್ಕೆ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಲು ಸಾಧ್ಯವಿಲ್ಲ. ಕನ್ನಡಕ್ಕೂ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ನಮಗೆ ಕನ್ನಡವೇ ರಾಷ್ಟ್ರೀಯ ಭಾಷೆ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಕನ್ನಡಿಗರನ್ನು ಬಿಟ್ಟು ಯಾವತ್ತೂ ಭಾರತದೇಶ ಆಗಿಲ್ಲ. ಕನ್ನಡಿಗರನ್ನು ಕೆಣಕಲು ಬಂದರೆ ರಕ್ಷಣಾ ವೇದಿಕೆ ಕೈಕಟ್ಟಿ ಕೊರಲ್ಲ. ಅಜಯ್ ದೇವಗನ್ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ. ಅಜಯ್ ದೇವಗನ್ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು, ಅಜಯ್ ದೇವಗನ್ ಸಿನಿಮಾ ಕರ್ನಾಟಕಕ್ಕೆ ಕಾಲಿಡಲು ಬಿಡಲ್ಲ. ಸರಕಾರ ಕನ್ನಡಿಗರ ಪರವಾಗಿ ಗಮನಹರಿಸಬೇಕು ಹಾಗೆ ನಾವೆಲ್ಲ ಕನ್ನಡಿಗರು ಒಗ್ಗಟಾಗಿ ಹಿಂದಿಯನ್ನು ವಿರೋಧಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಸುದೀಪ್ ಅವರ ಬೆಂಬಲಕ್ಕೆ ನಿಂತಿದ್ದೇವೆ. ಅಜಯ್ ದೇವಗನ್ ಗೆ ನಾವು ಎಚ್ಚರಿಕೆ ಕೊಡುತ್ತೇವೆ. ಹಿಂದಿಯಲ್ಲಿ ಡಬ್ ಮಾಡಿ ಬಿಡ್ತೀರಾ ಎಂದು ಅಜಯ್ ದೇವಗನ್ ಕೇಳಿದ್ದಾರೆ. ಹಿಂದಿಯನ್ನು ನಮ್ಮ ಮೇಲೆ ಹೇರಿ ಉದ್ಯೋಗ ಬದುಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಎಲ್ಲಾ ರಾಜಕೀಯ ಮುಖಂಡರು, ನಟರೂ ಧ್ವನಿ ಎತ್ತಬೇಕು. ಕನ್ನಡದ ಸಿನಿಮಾಗಳು ರಾಷ್ಟ್ರವನ್ನು ಮೀರಿ ಹೋಗುತ್ತಿವೆ ಎಂದರು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: Explainer: ಹಿಂದಿ ರಾಷ್ಟ್ರಭಾಷೆ ಹೌದೋ, ಅಲ್ಲವೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

Munjya Teaser: ಅನಿಮೇಟೆಡ್ ಪಾತ್ರವನ್ನು ಒಳಗೊಂಡಿರುವ ಭಾರತದ ಮೊದಲ CGI (ಕಂಪ್ಯೂಟರ್-ಜನರೇಟೆಡ್ ಇಮೇಜರಿ) ಚಿತ್ರ ಎಂದು ಹೇಳಲಾಗಿದೆ. ‘ಮುಂಜ್ಯ’ ಚಿತ್ರದ ಟೀಸರ್ ಹಾರರ್ ಮತ್ತು ಹಾಸ್ಯದ ಸಮ್ಮಿಶ್ರಣ ಇದೆ.
ʻಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿದೆ.ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇದೆ.

VISTARANEWS.COM


on

Munjya teaser unveils first computer generated actor
Koo

ಬೆಂಗಳೂರು: ರಾಜ್‌ಕುಮಾರ್ ರಾವ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ʻಸ್ತ್ರೀʼ ಚಿತ್ರದ ನಿರ್ಮಾಪಕ ಮತ್ತೊಂದು ಭಯಾನಕ ಚಿತ್ರವೊಂದು ತೆರೆಗೆ ತರಲು ಸಜ್ಜಾಗಿದ್ದಾರೆ. ʻಮುಂಜ್ಯಾʼ ಸಿನಿಮಾದ ಹೆಸರು (Munjya Teaser). ಇದು ಭಾರತದ ಮೊದಲ CGI ನಾಯಕನನ್ನು ಒಳಗೊಂಡಿರುವ ಸಿನಿಮಾ ಎಂದು ಹೇಳಲಾಗುತ್ತಿದೆ (first computer generated actor) . ʻಮುಂಜ್ಯಾʼ ಟೀಸರ್‌ ಮೇ 21ರಂದು ರಿಲೀಸ್‌ ಆಗಿದೆ.

ಅನಿಮೇಟೆಡ್ ಪಾತ್ರವನ್ನು ಒಳಗೊಂಡಿರುವ ಭಾರತದ ಮೊದಲ CGI (ಕಂಪ್ಯೂಟರ್-ಜನರೇಟೆಡ್ ಇಮೇಜರಿ) ಚಿತ್ರ ಎಂದು ಹೇಳಲಾಗಿದೆ. ‘ಮುಂಜ್ಯ’ ಚಿತ್ರದ ಟೀಸರ್ ಹಾರರ್ ಮತ್ತು ಹಾಸ್ಯದ ಸಮ್ಮಿಶ್ರಣ ಇದೆ.

ʻಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿದೆ. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿದ್ದಾನೆ. ʻಮುಂಜ್ಯಾʼ ನಗರಕ್ಕೆ ಪ್ರವೇಶಿಸುವ , ಹಾಗೇ ಟಿವಿ ನೋಡುತ್ತಿದ್ದವ ಏಕಾಏಕಿ ಟಿವಿ ಆಫ್‌ ಮಾಡುವಾಗ ಕೋಪಗೊಂಡ ʻಮುಂಜ್ಯಾʼ ಕೋಣೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸುವ ಸನ್ನಿವೇಶ ಟೀಸರ್‌ನಲ್ಲಿದೆ. ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮುಂಜ್ಯ ಚಿತ್ರವನ್ನು ಆದಿತ್ಯ ಸರ್ಪೋತದಾರ್ ನಿರ್ದೇಶಿಸಿದ್ದಾರೆ ಮತ್ತು ಶಾರ್ವರಿ, ಅಭಯ್ ವರ್ಮಾ, ಮೋನಾ ಸಿಂಗ್ ಮತ್ತು ಬಾಹುಬಲಿ ಚಲನಚಿತ್ರ ಖ್ಯಾತಿಯ ಸತ್ಯರಾಜ್ ಅವರ ಸಮಗ್ರ ತಾರಾಗಣವನ್ನು ಒಳಗೊಂಡಿದೆ. ನಿರೇನ್ ಭಟ್ ಅವರ ಚಿತ್ರಕಥೆ, ಯೋಗೇಶ್ ಚಂಡೇಕರ್ ಸಂಭಾಷಣೆ ಇದೆ. ಸಚಿನ್-ಜಿಗರ್ ಸಂಗೀತ ಸಂಯೋಜಿಸಿದ್ದಾರೆ. ಅಮಿತಾಭ್‌ ಭಟ್ಟಾಚಾರ್ಯ ಸಾಹಿತ್ಯ ಇದೆ.

ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣದ ಮುಂಜ್ಯವನ್ನು ದಿನೇಶ್ ವಿಜನ್ ಮತ್ತು ಅಮರ್ ಕೌಶಿಕ್ ನಿರ್ಮಿಸಿದ್ದಾರೆ. ಚಿತ್ರ ಜೂನ್ 7 ರಂದು ದೇಶಾದ್ಯಂತ ತೆರೆಗೆ ಬರಲಿದೆ.

Continue Reading

ಸಿನಿಮಾ

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Suhana Khan: ಬರ್ತ್‌ಡೇ ಗರ್ಲ್ ಸುಹಾನಾ ಖಾನ್‌ಗೆ, ಅನನ್ಯಾ ಪಾಂಡೆ, ಶನಯಾ ಕಪೂರ್ ಮತ್ತು ನವ್ಯಾ ಅವರಿಂದ ವಿಶೇಷವಾಗಿ ವಿಶಸ್‌ ಬಂದಿವೆ. ಮತ್ತೊಂದೆಡೆ, ನವ್ಯಾ ನವೇಲಿ ನಂದಾ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಸುಹಾನಾ ಅವರ ಫೋಟೊವನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಸುಹಾನಾ” ಎಂದು ಬರೆದಿದ್ದಾರೆ. ಸುಹಾನಾ ಖಾನ್ ಕಳೆದ ತಿಂಗಳು ಇಟಲಿಯ ಮಿಲನ್‌ಗೆ ಸೋಲೊ ಡ್ರಿಪ್‌ ಹೋಗಿದ್ದರು. ತಮ್ಮ ವಕೇಶನ್‌ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದರು.

VISTARANEWS.COM


on

Suhana Khan Birthday Big Love From Ananya Panday
Koo

ಬೆಂಗಳೂರು: ಇಂದು ಶಾರುಖ್‌ ಪುತ್ರಿ ಸುಹಾನಾ ಖಾನ್ (Suhana Khan) ಅವರಿಗೆ ಜನುಮದಿನದ ಸಂಭ್ರಮ. ಮೇ 21ರಂದು ಶಾರುಖ್ ಒಡೆತನದ ಕೋಲ್ಕತ್ತಾ ನೈಟ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿದೆ. ಈ ಮೂಲಕ ಸುಹಾನಾ ಬರ್ತ್​ಡೇಗೆ ಕೆಕೆಆರ್ ಗೆಲುವಿನ ಉಡುಗೊರೆ ನೀಡಿದಂತೆ ಆಗಿದೆ. ಈ ವಿಶೇಷ ಸಂದರ್ಭದಲ್ಲಿ, ಅವರ ಸ್ನೇಹಿತರಾದ ಅನನ್ಯಾ ಪಾಂಡೆ ಅವರಿಗೆ ವಿಶೇಷ ರೀತಿಯಲ್ಲಿ ಶುಭ ಹಾರೈಸಿದರು. ಅನನ್ಯಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಐಪಿಎಲ್ ಪಂದ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. “ನನ್ನ ಮುದ್ದು ಹುಡುಗಿಗೆ ಜನ್ಮದಿನದ ಶುಭಾಶಯಗಳು! ಇಡೀ ಪ್ರಪಂಚದಲ್ಲಿ ನಿಮ್ಮಂತೆ ಯಾರೂ ಇಲ್ಲ. ನಾನು ನಿನ್ನನ್ನು ಪ್ರೀತಿಸುತ್ತೇನೆ ಸುಜಿʼʼಎಂದು ಬರೆದುಕೊಂಡಿದ್ದಾರೆ.

ಬರ್ತ್‌ಡೇ ಗರ್ಲ್ ಸುಹಾನಾ ಖಾನ್‌ಗೆ, ಅನನ್ಯಾ ಪಾಂಡೆ, ಶನಯಾ ಕಪೂರ್ ಮತ್ತು ನವ್ಯಾ ಅವರಿಂದ ವಿಶೇಷವಾಗಿ ವಿಶಸ್‌ ಬಂದಿವೆ. ಮತ್ತೊಂದೆಡೆ, ನವ್ಯಾ ನವೇಲಿ ನಂದಾ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಸುಹಾನಾ ಅವರ ಫೋಟೊವನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಸುಹಾನಾ” ಎಂದು ಬರೆದಿದ್ದಾರೆ. ಸುಹಾನಾ ಖಾನ್ ಕಳೆದ ತಿಂಗಳು ಇಟಲಿಯ ಮಿಲನ್‌ಗೆ ಸೋಲೊ ಡ್ರಿಪ್‌ ಹೋಗಿದ್ದರು. ತಮ್ಮ ವಕೇಶನ್‌ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದರು.

ಸುಹಾನಾ ತಂದೆ ಶಾರುಖ್ ಖಾನ್ ಅವರ ಆಸ್ತಿ 6300 ಕೋಟಿ ರೂಪಾಯಿಗೂ ಅಧಿಕವಾಗಿದೆ. ತಮ್ಮ ಆಸ್ತಿಯಲ್ಲಿ ಒಂದಷ್ಟನ್ನು ಶಾರುಖ್ ಖಾನ್ ಅವರು ಮಗಳ ಹೆಸರಿಗೆ ಬರೆದಿದ್ದಾರೆ. ಸುಹಾನಾ ಹೆಸರಲ್ಲಿ ಒಂದಷ್ಟು ಹೂಡಿಕೆ ಮಾಡಿದ್ದಾರೆ. ಈ ಕಾರಣದಿಂದಲೇ ಸುಹಾನಾ ಖಾನ್ ಅವರ ಆಸ್ತಿಯಲ್ಲಿ ಏರಿಕೆ ಕಾಣುತ್ತಿದೆ. ಸಿನಿಮಾದಲ್ಲಿ ನಟಿಸದ ಹೊರತಾಗಿಯೂ ಅವರು ಹಣ ಮಾಡಿದ್ದಾರೆ.

ಇದನ್ನೂ ಓದಿ: Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

ಸದ್ಯ ಅವರು ಶಾರುಖ್‌ ಖಾನ್‌ ಅವರೊಂದಿಗೆ ತೆರೆ ಹಂಚಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

Continue Reading

ಸಿನಿಮಾ

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Drone Prathap: ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Drone Prathap Helping People To Get Eye Surgery on Birthday
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದಾರೆ ಡ್ರೋನ್ ಪ್ರತಾಪ್.

ಇದೀಗ ಪ್ರತಾಪ್‌ ಫ್ಯಾನ್ಸ್‌ ʻಬಿಗ್ ಬಾಸ್ ಅಲ್ಲಿ ನಿಂಗೆ ವೋಟ್ ಮಾಡಿದ್ದಕ್ಕೂ ಸಾರ್ಥಕ ಆಯ್ತುʼಎಂದು ಕಮೆಂಟ್‌ ಮಾಡಿದ್ದಾರೆ. ʻʻಪ್ರತಾಪ್‌ ಬಡವರ ಪಾಲಿನ ದೇವರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

ಇನ್ನು ಕೆಲವರು ತಾವೂ ಸಹ ನಿಮ್ಮೊಂದಿಗೆ ಈ ಸೇವಾ ಕಾರ್ಯದಲ್ಲಿ ಜೊತೆಯಾಗುವುದಾಗಿ ಹೇಳಿದ್ದಾರೆ. ಕೆಲವರು, ಅಗತ್ಯ ಇರುವವರ ಮೊಬೈಲ್ ಸಂಖ್ಯೆ, ವಿಳಾಸಗಳನ್ನು ಕಮೆಂಟ್ ಸೆಕ್ಷನ್​ನಲ್ಲಿ ಹಾಕಿದ್ದಾರೆ. ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಬಾಲಿವುಡ್

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

Lok Sabha Elections 2024: ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

VISTARANEWS.COM


on

Lok Sabha Elections 2024 7 celebs who didn’t vote in Lok Sabha Elections
Koo

ಬೆಂಗಳೂರು: ದೇಶದಲ್ಲಿ ಈಗಾಗಲೇ ನಾಲ್ಕು (Lok Sabha Elections 2024) ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಐದನೇ ಹಂತದ ಮತದಾನ ಸೋಮವಾರ ಆಗಿದೆ. ಹಲವಾರು ಬಾಲಿವುಡ್ ತಾರೆಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ದೀಪಿಕಾ ಪಡುಕೋಣೆ, ಶಾರುಖ್ ಖಾನ್, ಆಮೀರ್ ಖಾನ್ ಮತ್ತು ಅವರ ಕುಟುಂಬ, ಸಲ್ಮಾನ್ ಖಾನ್ ಮತ್ತು ಅವರ ಪೋಷಕರು, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಐಶ್ವರ್ಯಾ ರೈ ಬಚ್ಚನ್, ಅಮಿತಾಭ್‌ ಬಚ್ಚನ್ ಮತ್ತು ಕಿಯಾರಾ ಆಡ್ವಾಣಿ ಸೇರಿದಂತೆ ಅನೇಕರು ವೋಟ್‌ ಮಾಡಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ವೋಟ್‌ ಹಾಕಿಲ್ಲ.

ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಒಟ್ಟಿಗೆ ಬಂದು ವೋಟ್‌ ಹಾಕಿದರು. ಐಶ್ವರ್ಯಾ ರೈ ಬಚ್ಚನ್ ಅವರು ಕಾನ್‌ ಫೆಸ್ಟಿವಲ್‌ ಮುಗಿಸಿ ಒಬ್ಬರೇ ಬಂದು ವೋಟ್‌ ಮಾಡಿದರು. ಆದರೆ ಅಭಿಷೇಕ್ ಮುಂಬೈನಲ್ಲಿದ್ದರೂ ವೋಟ್‌ ಹಾಕಿರುವುದು ಕಂಡು ಬಂದಿಲ್ಲ . ಜಾಕ್ವೆಲೀನ್ ಪ್ರಸ್ತುತ 77ನೇ ಕಾನ್‌ ಫೆಸ್ಟಿವಲ್‌ ಚಲನಚಿತ್ರೋತ್ಸವಕ್ಕಾಗಿ ಫ್ರಾನ್ಸ್‌ನಲ್ಲಿದ್ದಾರೆ. ನಟಿ ಶ್ರೀಲಂಕಾದ ಪ್ರಜೆ, ಅದಕ್ಕಾಗಿಯೇ ಅವರು ಭಾರತದಲ್ಲಿದ್ದರೂ ಮತ ಚಲಾಯಿಸಿಲ್ಲ.

ಇದನ್ನೂ ಓದಿ: Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

ಅನುಷ್ಕಾ ಕೂಡ ಈ ಬಾರಿ ವೋಟ್‌ ಮಾಡಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ಇದ್ದ ಕಾರಣ ಅನುಷ್ಕಾ ಅವರು ಈ ಬಾರಿ ಮತ ಚಲಾಯಿಸಲು ಹೋಗಿಲ್ಲ.

ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆಗಿದೆ.

Continue Reading
Advertisement
Munjya teaser unveils first computer generated actor
ಬಾಲಿವುಡ್19 mins ago

Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

IndiGo Flight
ದೇಶ31 mins ago

IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

prabuddha murder case
ಕ್ರೈಂ31 mins ago

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

Suhana Khan Birthday Big Love From Ananya Panday
ಸಿನಿಮಾ37 mins ago

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Viral Video
ವೈರಲ್ ನ್ಯೂಸ್46 mins ago

Viral Video: ಅಬ್ಬಾ ಎಂಥಾ ಭೀಕರ ದೃಶ್ಯ! ಸ್ಕೂಟರ್‌ನಲ್ಲಿದ್ದ ದಂಪತಿ ಮೇಲೆ ಏಕಾಏಕಿ ಬಿದ್ದ ಬೃಹತ್‌ ಮರ-ವಿಡಿಯೋ ನೋಡಿ

Iqbal Ahmed Saradgi
ಶ್ರದ್ಧಾಂಜಲಿ1 hour ago

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Bangladesh MP Missing
ದೇಶ1 hour ago

Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

Drone Prathap Helping People To Get Eye Surgery on Birthday
ಸಿನಿಮಾ1 hour ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ2 hours ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ2 hours ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು21 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು23 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌