ಬಾಲಿವುಡ್
Sudha Murty: ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನೋಡಿ ಶ್ಲಾಘಿಸಿದ ಸುಧಾ ಮೂರ್ತಿ
Sudha Murty: ಸಿನಿಮಾ ಸೆಪ್ಟೆಂಬರ್ 28ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ʼದಿ ವ್ಯಾಕ್ಸಿನ್ ವಾರ್ʼ ಪಾತ್ರವರ್ಗದಲ್ಲಿ ಅನುಪಮ್ ಖೇರ್, ವಿವೇಕ್ ಅವರ ಪತ್ನಿ ಪಲ್ಲವಿ ಜೋಶಿ, ನಾನಾ ಪಾಟೇಕರ್, ಸಪ್ತಮಿ ಗೌಡ (Sapthami Gowda) ಮತ್ತು ರೈಮಾ ಸೇನ್ ಇದ್ದಾರೆ.
ಬೆಂಗಳೂರು: ವಿವೇಕ್ ಅಗ್ನಿಹೋತ್ರಿ ಅವರ `ದಿ ವ್ಯಾಕ್ಸಿನ್ ವಾರ್‘ (The Vaccine War) ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದೆ. ದಿ ವ್ಯಾಕ್ಸಿನ್ ವಾರ್ ವಿಶೇಷ ಪ್ರದರ್ಶನವನ್ನು ಚಿತ್ರತಂಡ ಆಯೋಜಿಸಿತ್ತು. ಸುಧಾ ಮೂರ್ತಿಯವರು ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೋವಾಕ್ಸಿನ್ ಬೆಳವಣಿಗೆಯ ಕಥೆಯನ್ನು ಹೇಳಿದ್ದಕ್ಕಾಗಿ ಸುಧಾ ಮೂರ್ತಿ(Sudha Murty) ಅವರು ವಿವೇಕ್ ಅಗ್ನಿಹೋತ್ರಿಯನ್ನು ಶ್ಲಾಘಿಸಿದರು.
`ದಿ ವ್ಯಾಕ್ಸಿನ್ ವಾರ್’ ಸಿನಿಮಾ ಸೆಪ್ಟೆಂಬರ್ 28ರಂದು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿದೆ. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲಿ ಮಾತು ಆರಂಭಿಸಿ ಆ ಬಳಿಕ ಇಂಗ್ಲಿಷ್ನಲ್ಲಿ ತಮ್ಮ ವಿಮರ್ಶೆ ತಿಳಿಸಿದರು. ಚಿತ್ರದ ಕುರಿತು ಮಾತನಾಡಿದ ಸುಧಾ ಮೂರ್ತಿ, “ಈ ಸಿನಿಮಾ ಹೃದಯ ಸ್ಪರ್ಶಿಯಾಗಿದೆ. ಮಹಿಳೆಯ ಪಾತ್ರವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಕುಟುಂಬ ಹಾಗೂ ಕೆಲಸವನ್ನು ಸಮದೂಗಿಸಿಕೊಂಡು ಹೋಗುವುದು ಕಷ್ಟ. ಕೆಲವರು ಈ ವಿಚಾರದಲ್ಲಿ ಅದೃಷ್ಟಶಾಲಿಗಳು. ಮಹಿಳೆ ತನ್ನ ಮಕ್ಕಳೊಂದಿಗೆ ತನ್ನ ವೃತ್ತಿಜೀವನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಅಷ್ಟು ಸುಲಭದ ಮಾತವಲ್ಲ. ಆಕೆಗೆ ಉತ್ತಮ ಕುಟುಂಬದ ಬೆಂಬಲ ಬೇಕು. ನಾನು ಯಾವಾಗಲೂ ಹೇಳುತ್ತೇನೆ, ಪ್ರತಿಯೊಬ್ಬ ಯಶಸ್ವಿ ಮಹಿಳೆಯ ಹಿಂದೆ, ಒಬ್ಬ ಅರ್ಥಮಾಡಿಕೊಳ್ಳುವ ಪುರುಷನಿರಬೇಕು, ಇಲ್ಲದಿದ್ದರೆ ಅವಳು ಇಂತಹ ಸಾಧನೆ ಮಾಡಲು ಸಾಧ್ಯವಿಲ್ಲʼʼಎಂದರು.
ಮಾತು ಮುಂದುವರಿಸಿ ಮಹಿಳಾ ವಿಜ್ಞಾನಿಗಳು ಕೊವಿಡ್ ಸಂದರ್ಭದಲ್ಲಿ ಲ್ಯಾಬ್ಗೆ ಬಂದು ಸಂಶೋಧನೆ ಮಾಡಿದ್ದರು. ಇದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, ‘ಮಕ್ಕಳು ಚಿಕ್ಕವರಿರಬಹುದು. ಆದರೆ ಅವರು ತಮ್ಮ ತಾಯಿಯ ಬಗ್ಗೆ ಮತ್ತು ಅವರು ಏನು ಮಾಡಿದ್ದಾರೆಂದು ಹೆಮ್ಮೆಪಡುತ್ತಾರೆ’ ಎಂದಿದ್ದಾರೆ.
“ಈ ಚಲನಚಿತ್ರ ನಿಜವಾಗಿಯೂ ತಂಡದ ಶ್ರಮ ಮತ್ತು ನಿಸ್ವಾರ್ಥ ಕೆಲಸವನ್ನು ತೋರಿಸುತ್ತದೆ. ನಾವೆಲ್ಲರೂ ಪ್ರಜಾಪ್ರಭುತ್ವ ಭಾರತದಲ್ಲಿ ಸಂತೋಷದಿಂದ ಮತ್ತು ಆರೋಗ್ಯಕರವಾಗಿ ಬದುಕಲು ಎಲ್ಲಾ ವಿಜ್ಞಾನಿಗಳ ಕೊಡುಗೆ ಇದೆ. ಅಗ್ನಿಹೋತ್ರಿ ಅವರನ್ನು ಶ್ಲಾಘಿಸಿ ‘ನಿಜವಾದ ಸಂಪತ್ತು ನಿಮ್ಮ ವಿಶ್ವಾಸದಲ್ಲಿದೆ” ಎಂದರು.
ಇದನ್ನೂ ಓದಿ: The Vaccine War Movie: ದಿ ವ್ಯಾಕ್ಸಿನ್ ವಾರ್ ಸಿನಿಮಾ ಟ್ರೈಲರ್ ಔಟ್, ಜನರಿಂದ ಸಖತ್ ರೆಸ್ಪಾನ್ಸ್!
Thank you @SmtSudhaMurty ji for your inspiring words at the screening of #TheVaccineWar #ATrueStory. pic.twitter.com/xw5Jpa8iLL
— Vivek Ranjan Agnihotri (@vivekagnihotri) September 18, 2023
ಸಿನಿಮಾ ಸೆಪ್ಟೆಂಬರ್ 28ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ʼದಿ ವ್ಯಾಕ್ಸಿನ್ ವಾರ್ʼ ಪಾತ್ರವರ್ಗದಲ್ಲಿ ಅನುಪಮ್ ಖೇರ್, ವಿವೇಕ್ ಅವರ ಪತ್ನಿ ಪಲ್ಲವಿ ಜೋಶಿ, ನಾನಾ ಪಾಟೇಕರ್, ಸಪ್ತಮಿ ಗೌಡ (Sapthami Gowda) ಮತ್ತು ರೈಮಾ ಸೇನ್ ಇದ್ದಾರೆ. ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ, ಕನ್ನಡ, ಭೋಜ್ಪುರಿ, ಪಂಜಾಬಿ, ಗುಜರಾತಿ, ಮರಾಠಿ ಮತ್ತು ಬೆಂಗಾಲಿ ಸೇರಿದಂತೆ 10 ಭಾಷೆಗಳಲ್ಲಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.. ʼಕಾಶ್ಮೀರ್ ಫೈಲ್ಸ್ʼ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.
ದೇಶ
Parineeti Chopra; ನಾಳೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಅದ್ಧೂರಿ ಮದುವೆ; ಭರ್ಜರಿ ಸಿದ್ಧತೆ!
Parineeti Chopra; ಅದ್ಧೂರಿ ಮದುವೆಗೆ ರಾಜಸ್ಥಾನ ತಲುಪುವ ಮುನ್ನ ಜೋಡಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಸೆಪ್ಟೆಂಬರ್ 23ರಂದು ಅವರ ಹಳದಿ ಸಮಾರಂಭ, ಮೆಹೆಂದಿ ಇತರ ವಿವಾಹ ಪೂರ್ವ ಸಂಭ್ರಮಗಳು ನಡೆಯಲಿದೆ. ಸೆ. 24ರಂದು ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ.
ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಜೋಡಿ (Parineeti Chopra) ಸೆಪ್ಟೆಂಬರ್ 23 ಮತ್ತು 24 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದೆ. ಲೀಲಾ ಪ್ಯಾಲೆಸ್ (Leela Palace) ಮತ್ತು ದಿ ಒಬೆರಾಯ್ ಉದಯವಿಲಾಸ್ನಲ್ಲಿ (The Oberoi Udaivilas.) ವಿವಾಹದ ವಿಧಿವಿಧಾನಗಳು ನಡೆಯಲಿವೆ ಎಂದು ವರದಿಯಾಗಿದೆ. ಅದ್ಧೂರಿ ಮದುವೆಗೆ ರಾಜಸ್ಥಾನ ತಲುಪುವ ಮುನ್ನ ಜೋಡಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಸೆಪ್ಟೆಂಬರ್ 23ರಂದು ಅವರ ಹಳದಿ ಸಮಾರಂಭ, ಮೆಹೆಂದಿ ಇತರ ವಿವಾಹ ಪೂರ್ವ ಸಂಭ್ರಮಗಳು ನಡೆಯಲಿದೆ. ಸೆ. 24ರಂದು ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ.
ಮೆಹೆಂದಿ ಕಾರ್ಯಕ್ರಮದಲ್ಲಿ ಅವರ ಆಪ್ತರು ಮತ್ತು ಕುಟುಂಬದವರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಪರಿಣಿತಿ-ರಾಘವ್ ಅವರ ಮದುವೆಯ ಮೆರವಣಿಗೆ ಸೆಪ್ಟೆಂಬರ್ 24ರಂದು ನಡೆಯಲಿದೆ. ಇದಕ್ಕೂ ಮೊದಲು ರಾಘವ್ ಅವರ ಸೆಹ್ರಾ ಬಂದಿ ಪಿಚೋಲಾ ಸರೋವರದ ಮಧ್ಯದಲ್ಲಿರುವ ಹೋಟೆಲ್ ತಾಜ್ನಲ್ಲಿ ನಡೆಯಲಿದೆ. ಶೀಘ್ರದಲ್ಲೇ ತಾಜ್ ಹೋಟೆಲ್ನಿಂದ ವಧು ಪರಿಣಿತಿಯನ್ನು ಕರೆದುಕೊಂಡು ಹೋಗಲು ವರನೊಂದಿಗೆ ಮದುವೆ ಮೆರವಣಿಗೆ ಹೊರಡಲಿದೆ. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದೋಣಿಗಳ ಅಲಂಕಾರದಲ್ಲೂ ಮೇವಾರ ಸಂಪ್ರದಾಯದ ಝಲಕ್ ಕಾಣಿಸಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Parineeti Chopra: ಪರಿಣಿತಿ ಚೋಪ್ರಾ-ರಾಘವ್ ಛಡ್ಡಾ ಮದುವೆ ಡೇಟ್ ಫಿಕ್ಸ್! ಎಲ್ಲಿ ಅದ್ಧೂರಿ ವಿವಾಹ?
ಮದುವೆಗೆ 20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಪರಿಣಿತಿ ಚೋಪ್ರಾ ಅವರ ಸೋದರಸಂಬಂಧಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್ ಕೂಡ ಭಾಗಿಯಾಗಲಿದ್ದಾರೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.
ಲೀಲಾ ಪ್ಯಾಲೆಸ್ ಮತ್ತು ಉದಯವಿಲಾಸ್ ಹೊರತುಪಡಿಸಿ ಹತ್ತಿರದ ಮೂರು ಹೋಟೆಲ್ಗಳಲ್ಲಿ ಬುಕ್ಕಿಂಗ್ ಮಾಡಲಾಗಿದೆ. ಎರಡು ತಿಂಗಳ ಹಿಂದೆ, ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ, ಹೋಟೆಲ್ಗಳ ಸ್ಥಳಗಳನ್ನು ಖುದ್ದಾಗಿ ಪರಿಶೀಲಿಸಲು ಉದಯಪುರಕ್ಕೆ ಭೇಟಿ ನೀಡಿದ್ದರು.
ಬಾಲಿವುಡ್
Salman Khan: ಈಗೆಲ್ಲ ಸಿನಿಮಾಗಳಿಗೆ 100 ಕೋಟಿ ಯಾವ ಲೆಕ್ಕ? ಬೆಂಚ್ಮಾರ್ಕ್ ಬಗ್ಗೆ ಸಲ್ಲು ಹೇಳಿದ್ದೇನು?
Salman Khan: ಪಂಜಾಬಿ ಇಂಡಸ್ಟ್ರಿ, ಹಿಂದಿ ಇಂಡಸ್ಟ್ರಿ, ಪ್ರತಿಯೊಂದು ಇಂಡಸ್ಟ್ರಿಯಲ್ಲಿ ಈಗ ಎಲ್ಲ ಸಿನಿಮಾಗಳು 400-500-600 ಕೋಟಿ ರೂ. ಬ್ಯುಸಿನೆಸ್ ಮಾಡುತ್ತಿವೆ. ಮರಾಠಿ ಚಿತ್ರಗಳು ಕೂಡ ಈ ಸಾಲಿಗೆ ಸೇರಿವೆ. ಈಗ 100 ಕೋಟಿ ರೂ. ಕ್ಲಬ್ ಸೇರುವುದು ದೊಡ್ಡ ವಿಚಾರ ಅಲ್ಲ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.
ಬೆಂಗಳೂರು: ಗಿಪ್ಪಿ ಗ್ರೆವಾಲ್ (Gippy Grewal) ಅಭಿನಯದ ಮುಂಬರುವ ಪಂಜಾಬಿ ಚಿತ್ರ ʼಮೌಜಾನ್ ಹಿ ಮೌಜಾನ್ʼನ (Maujaan Hi Maujaan) ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸಲ್ಮಾನ್ ಖಾನ್ (Salman Khan) ಭಾಗಿಯಾಗಿದ್ದರು. ಈ ವೇಳೆ ನಟ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗೆ 100 ಕೋಟಿ ರೂ. ಕ್ಲಬ್ ಎನ್ನುವುದು ಸಣ್ಣ ವಿಚಾರ ಎಂದು ಹೇಳಿದ್ದಾರೆ. ಪಂಜಾಬಿ ಇಂಡಸ್ಟ್ರಿ, ಹಿಂದಿ ಇಂಡಸ್ಟ್ರಿ, ಪ್ರತಿಯೊಂದು ಇಂಡಸ್ಟ್ರಿಯಲ್ಲಿ ಈಗ ಎಲ್ಲ ಸಿನಿಮಾಗಳು 400-500-600 ಕೋಟಿ ರೂ. ಬ್ಯುಸಿನೆಸ್ ಮಾಡುತ್ತಿವೆ. ಮರಾಠಿ ಚಿತ್ರಗಳು ಕೂಡ ಈ ಸಾಲಿಗೆ ಸೇರಿವೆ. ಈಗ 100 ಕೋಟಿ ರೂ. ಕ್ಲಬ್ ಸೇರುವುದು ದೊಡ್ಡ ವಿಚಾರ ಅಲ್ಲ. ಹೀಗಾಗಿ, 1000 ಕೋಟಿ ರೂಪಾಯಿ ಎನ್ನುವುದನ್ನು ಬೆಂಚ್ಮಾರ್ಕ್ ಮಾಡಬೇಕುʼʼ ಎಂದರು.
ಈ ಇವೆಂಟ್ನಲ್ಲಿ, ಗಿಪ್ಪಿ ಗ್ರೆವಾಲ್ ಅವರು ಮಾತನಾಡಿ ʻʻ ನನ್ನ ಮುಂಬರುವ ಸಿನಿಮಾ ʼಮೌಜಾನ್ ಹಿ ಮೌಜಾನ್ʼ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಅಷ್ಟೇ ಅಲ್ಲದೇ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಕಾಣಲಿದೆʼʼ ಎಂದರು.
ವರದಿಯ ಪ್ರಕಾರ ಸಲ್ಮಾನ್ ಅವರ ಕೊನೆಯ ಚಿತ್ರ ʼಕಿಸಿ ಕಾ ಭಾಯ್ ಕಿಸಿ ಕಿ ಜಾನ್ʼ ಭಾರತದಲ್ಲಿ ಸುಮಾರು 132 ಕೋಟಿ ರೂ. ಗಳಿಸಿತ್ತು. ಸಲ್ಮಾನ್ ಖಾನ್ ಅವರ ಈಗಿನ ಹೇಳಿಕೆಯನ್ನು ಅನೇಕರು ಒಪ್ಪಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದೆ. ರಜನಿಕಾಂತ್ ನಟನೆಯ ‘ಜೈಲರ್’, ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಚಿತ್ರಗಳು ಕೂಡ ಗೆದ್ದಿದೆ. ಅನೇಕ ಹಿಂದಿ ಚಲನಚಿತ್ರಗಳು ಈ ವರ್ಷ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿವೆ. 2018ರಲ್ಲಿ ಬಿಡುಗಡೆಯಾದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ನಂತರ 600 ಕೋಟಿ ರೂ. ಕ್ಲಬ್ಗೆ ಪ್ರವೇಶಿಸಿದ ಎರಡನೇ ತಮಿಳು ಚಲನಚಿತ್ರ ಜೈಲರ್ ಆಗಿದೆ.
ಇದನ್ನೂ ಓದಿ: Salman Khan: ಶಾರುಖ್-ನಯನತಾರಾ ಜೋಡಿ ಬಳಿಕ ಸಲ್ಮಾನ್ ಜತೆ ಫೇಮಸ್ ಸೌತ್ ನಟಿ ರೊಮ್ಯಾನ್ಸ್!
"I think 100cr mark is going to be a rock bottom now, Every film should Target 400, 500, 600cr now. 100cr isn't benchmark anymore" – #SalmanKhan at Maujaan Hi Maujaan Trailer launch. #Tiger3pic.twitter.com/NAII0TqvGJ
— MASS (@Freak4Salman) September 21, 2023
ಸಲ್ಮಾನ್ ಖಾನ್ ಅವರ ‘ಟೈಗರ್ 3’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರಕ್ಕೆ ಕತ್ರಿನಾ ಕೈಫ್ ನಾಯಕಿ. ಯಶ್ ರಾಜ್ ಫಿಲ್ಮ್ಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಬಾಲಿವುಡ್
Oscars 2024: ಮುಂದಿನ ʻಆಸ್ಕರ್ʼ ರೇಸ್ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?
Oscars 2024: ಸನ್ನಿ ಡಿಯೋಲ್ ಅವರ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ ಗದರ್ 2 ಸೇರಿದಂತೆ ಇನ್ನೂ ಹಲವು ಚಲನಚಿತ್ರಗಳು ಮುಂಬರುವ ಆಸ್ಕರ್ ರೇಸ್ನಲ್ಲಿ ಇರಲಿದೆ ಎಂದು ವರದಿಯಾಗಿದೆ.
ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ 2023 ಅತ್ಯುತ್ತಮ ವರ್ಷವಾಗಿದೆ. 2024ರ ಆಸ್ಕರ್ (Oscars 2024) ರೇಸ್ನಲ್ಲಿ ಹಲವು ಭಾರತೀಯ ಸಿನಿಮಾಗಳು ಇರಲಿವೆ. ಕೆಲವು ಮೆಗಾ ಬ್ಲಾಕ್ಬಸ್ಟರ್ ಸಿನಿಮಾಗಳ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಶುರುವಾಗುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, ಮುಂದಿನ ವರ್ಷ ಆಸ್ಕರ್ ರೇಸ್ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಸಿನಿಮಾಗಳ ಹಸೆರುಗಳು ವೈರಲ್ ಆಗುತ್ತಿವೆ. ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ (Rocky Aur Rani Kii Prem Kahaani), ʻಜ್ವಿಗಾಟೊʼ (Zwigato), ʻದಿ ಕೇರಳ ಸ್ಟೋರಿʼ (The Kerala Story) ಆಸ್ಕರ್ 2024ರ ರೇಸ್ನಲ್ಲಿ ಆಯ್ಕೆಯಾಗಲಿವೆ ಎಂದು ಹೇಳಲಾಗುತ್ತಿದೆ.
ಇತ್ತೀಚಿನ ವರದಿಗಳ ಪ್ರಕಾರ, ಇತ್ತೀಚೆಗೆ ಬಿಡುಗಡೆಯಾದ ಕರಣ್ ಜೋಹರ್ ನಿರ್ದೇಶನದ ʼರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ, ಕಪಿಲ್ ಶರ್ಮಾ ಅಭಿನಯದ ಜ್ವಿಗಾಟೊ, ದಿ ಕೇರಳ ಸ್ಟೋರಿ, ರಾಣಿ ಮುಖರ್ಜಿ ಅಭಿನಯದ ಮಿಸೆಸ್ ಚಟರ್ಜಿ ವರ್ಸೆಸ್ ನಾರ್ವೆ, ಅಭಿಷೇಕ್ ಬಚ್ಚನ್ ಅಭಿನಯದ ʼಘೂಮರ್ʼ ಮತ್ತು ʼ12th ಫೇಲ್ʼ ಸಿನಿಮಾಗಳ ಹೆಸರು ಸೇರಿವೆ. ಸನ್ನಿ ಡಿಯೋಲ್ ಅವರ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ ʼಗದರ್ 2ʼ ಸೇರಿದಂತೆ ಇನ್ನೂ ಕೆಲವು ಚಲನಚಿತ್ರಗಳು ಮುಂಬರುವ ಆಸ್ಕರ್ ರೇಸ್ನಲ್ಲಿ ಇರಲಿದೆ ಎಂದು ವರದಿಯಾಗಿದೆ.
ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದಲ್ಲಿ 17 ಸದಸ್ಯರ ಆಯ್ಕೆ ತೀರ್ಪುಗಾರರು ಈಗಾಗಲೇ ಎಲ್ಲೆಡೆಯಿಂದ ಪ್ರಾದೇಶಿಕ ಮತ್ತು ಉತ್ತಮ ಸಿನಿಮಾಗಳ ಆಯ್ಕೆಯನ್ನು ಮಾಡುವ ಅನ್ವೇಷಣೆಯಲ್ಲಿದೆ ಎಂದು ವರದಿಯಾಗಿದೆ. ಆಸ್ಕರ್ ಆಯ್ಕೆಗಾಗಿ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಕಳುಹಿಸಲಾದ ಕೆಲವು ಚಲನಚಿತ್ರಗಳಲ್ಲಿ ಅನಂತ್ ಮಹದೇವನ್ ಅವರ ದಿ ಸ್ಟೋರಿಟೆಲರ್, ಮ್ಯೂಸಿಕ್ ಸ್ಕೂಲ್, ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ, 12th ಫೇಲ್, ವರ್ತಿಮಾರನ್ ಅವರ ವಿದುತಲೈ ಭಾಗ 1, ಮತ್ತು ನಾನಿ ಅಭಿನಯದ ದಸರಾ ಮುಂತಾದ ಸಿನಿಮಾಗಳು ಇವೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Actress Nayanthara: ದೀಪಿಕಾ ಹೈಲೈಟ್ ಆಗಿದ್ದಕ್ಕೆ ಬಾಲಿವುಡ್ ಸಿನಿಮಾ ಮಾಡದಿರಲು ನಯನತಾರಾ ನಿರ್ಧಾರ?
ಆಲಿಯಾ ಭಟ್ ಹಾಗೂ ರಣ್ವೀರ್ ಸಿಂಗ್ ಜೋಡಿಯ ಸಿನಿಮಾ ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’. ಬಹಳ ದಿನಗಳ ಬಳಿಕ ಕರಣ್ ಜೋಹರ್ ನಿರ್ದೇಶಿಸಿದ ಈ ಸಿನಿಮಾ ಜುಲೈ 28ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಹೀಗಿದ್ದರೂ, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ವಿಶ್ವದಾದ್ಯಂತ ಬಾಕ್ಸಾಫೀಸ್ನಲ್ಲಿ ಸುಮಾರು 340 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು.’ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಸಿನಿಮಾ ಇದೀಗ ಅಮೆಜಾನ್ ಪ್ರೈಂನಲ್ಲಿ ಲಭ್ಯವಿದೆ. ಈ ಸಿನಿಮಾದಲ್ಲಿ ರಣ್ವೀರ್ ಸಿಂಗ್ ರಾಕಿ ರಾಂಧವನಾಗಿ ಹಾಗೂ ಆಲಿಯಾ ಭಟ್ ರಾಣಿ ಚಟರ್ಜಿಯಾಗಿ ಕಾಣಿಸಿಕೊಂಡಿದ್ದಾರೆ.
ಬಾಲಿವುಡ್
Actress Nayanthara: ದೀಪಿಕಾ ಹೈಲೈಟ್ ಆಗಿದ್ದಕ್ಕೆ ಬಾಲಿವುಡ್ ಸಿನಿಮಾ ಮಾಡದಿರಲು ನಯನತಾರಾ ನಿರ್ಧಾರ?
Actress Nayanthara: ಅಟ್ಲಿಯೊಂದಿಗೆ ನಯನತಾರಾ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದೀಪಿಕಾ ಅವರ ಪಾತ್ರವನ್ನು ಹೆಚ್ಚು ಹೈಲೈಟ್ ಮಾಡಿರುವ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ ಎಂತಲೂ ವರದಿಯಾಗಿದೆ.
ಬೆಂಗಳೂರು: ಶಾರುಖ್ ಖಾನ್ (Shah Rukh Khan) ಅವರ ಬ್ಲಾಕ್ಬಸ್ಟರ್ ಸಿನಿಮಾ ʻಜವಾನ್ʼನಲ್ಲಿ ನಟಿ ನಯನತಾರಾ(Nayanthara) ಏಜೆಂಟ್ ನರ್ಮದಾ ರೈ ಪಾತ್ರವನ್ನು ನಿರ್ವಹಿಸಿದ್ದಾರೆ. ಶಾರುಖ್-ನಯನತಾರಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಆದರೆ, ನಯನತಾರಾ ಅವರಿಗೆ ಅಟ್ಲಿ ಕುರಿತು ಅಸಮಾಧಾನ ಇದೆ ಎಂದು ವರದಿಯಾಗಿದೆ. ಚಿತ್ರದಲ್ಲಿ ತನ್ನ ಪಾತ್ರವನ್ನು ಹಲವು ಕಡೆ ಕತ್ತರಿಸಿದ್ದರಿಂದ ಅಟ್ಲಿಯೊಂದಿಗೆ ನಯನತಾರಾ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದೀಪಿಕಾ ಅವರ ಪಾತ್ರವನ್ನು ಹೆಚ್ಚು ಹೈಲೈಟ್ ಮಾಡಿರುವ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ ಎಂತಲೂ ವರದಿಯಾಗಿದೆ.
ಚಿತ್ರದಲ್ಲಿ ವಿಕ್ರಮ್ ರಾಥೋಡ್ (ಶಾರುಖ್) ಪತ್ನಿಯಾಗಿ ದೀಪಿಕಾ ಪಡುಕೋಣೆ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಮೂಲ ಪ್ರಕಾರ ದೀಪಿಕಾ ಅವರದ್ದು ಅತಿಥಿ ಪಾತ್ರವಲ್ಲ. ಬದಲಿಗೆ ಜವಾನ್ ಅನ್ನು “ಶಾರುಖ್-ದೀಪಿಕಾ” ಚಿತ್ರದಂತೆ ಕಾಣುವಂತೆ ಮಾಡಲಾಗಿದೆ ಎಂದು ಹೇಳಿದೆ. ಇದು ಅತಿಥಿ ಪಾತ್ರವಾಗಿರಲಿಲ್ಲ. ಜವಾನ್ ಅನ್ನು ಬಹುತೇಕ ಶಾರುಖ್-ದೀಪಿಕಾ ಚಿತ್ರದಂತೆ ಕಾಣುವಂತೆ ಮಾಡಲಾಗಿದೆ. ನಯನತಾರಾ ದಕ್ಷಿಣದ ಪ್ರಮುಖ ನಟಿ, ಆದ್ದರಿಂದ ಅವರು ಜವಾನ್ ಸಿನಿಮಾ ಬಗ್ಗೆ ಸಂತೋಷವಾಗಿರಲಿಲ್ಲ. ಇನ್ನು ಮುಂದೆ ಯಾವುದೇ ಬಾಲಿವುಡ್ ಸಿನಿಮಾಗಳಲ್ಲಿ ಕಾಣಿಸುವುದಿಲ್ಲ ಎಂದು ನಯನತಾರಾ ಅಸಮಾಧಾನ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ.
ನಯನತಾರಾ ಕೂಡ ತಮ್ಮ ಯಾವುದೇ ಸಿನಿಮಾ ಪ್ರಚಾರ ಕಾರ್ಯಕ್ರಗಳಲ್ಲಿ ಭಾಗಿಯಾಗುವುದಿಲ್ಲ. ಈ ಹಿಂದೆ ಶಾರುಖ್ ಅವರು ನಯನತಾರಾ ಬಗ್ಗೆ ಆಸ್ಕ್ SRK ಸೆಷನ್ನಲ್ಲಿ ಅನುಭವ ಕಂಚಿಕೊಂಡಿದ್ದರು. ʻʻನಯನತಾರಾ ತುಂಬಾ ಸುಂದರ ಮತ್ತುಅದ್ಭುತ ನಟಿ. ತಮಿಳುನಾಡಿನಲ್ಲಿರುವ ಅವರ ಅಭಿಮಾನಿಗಳು ಆಕೆಯನ್ನು ಪ್ರೀತಿಸುತ್ತಾರೆ ಮತ್ತು ಹಿಂದಿ ಪ್ರೇಕ್ಷಕರು ಅವರ ಶ್ರಮವನ್ನು ಮೆಚ್ಚುತ್ತಾರೆʼʼಎಂದು ಹೇಳಿಕೊಂಡಿದ್ದರು.
ಇದನ್ನೂ ಓದಿ: Actress Nayanthara: ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ನಯನತಾರಾ; ಇನ್ಸ್ಟಾದಲ್ಲಿ ಫಾಲೋ ಮಾಡುತ್ತಿರುವ ಏಕೈಕ ನಟ ಯಾರು?
#Nayanthara is not happy with the treatment of her role in #Jawan. She has been very upset with #Atlee because her role was chopped in the film. She also feels #DeepikaPadukone
— George 🍿🎥 (@georgeviews) September 21, 2023
character was elevated and her part was significantly sidelined.
– Hindustan Times pic.twitter.com/CaxTmULV8U
ಇತ್ತೀಚೆಗೆ ಮುಂಬೈನಲ್ಲಿ ‘ಜವಾನ್’ ಸಿನಿಮಾದ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿತ್ತು. ಆದರೆ, ಇದರಲ್ಲಿ ನಯನತಾರಾ ಅವರು ಭಾಗಿ ಆಗಿರಲಿಲ್ಲ. ಶಾರುಖ್ ಖಾನ್, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಅನಿರುದ್ಧ್ ರವಿಚಂದರ್, ಅಟ್ಲಿ, ಸಾನ್ಯಾ ಮಲ್ಹೋತ್ರಾ ಹಾಗೂ ರಿಧಿ ದೋಗ್ರಾ ಭಾಗವಹಿಸಿದ್ದರು.
#ShahRukhKhan𓀠 & #Nayanthara !!
— _Shobitha_Talks (@Shobitha_Talks) September 20, 2023
Manifesting another movie with this pair 🛐❤️🔥#Jawan #JawanBlockBuster pic.twitter.com/W5NyXPClJr
ನಯನತಾರಾ ಕಾರ್ಯಕ್ರಮಕ್ಕೆ ಬಾರದೇ ಇದ್ದುದ್ದಕ್ಕೆ ಕಾರಣ ತಿಳಿಸಿದ ಶಾರುಖ್ ಖಾನ್, ನಯನತಾರಾ ತಾಯಿಯ ಹುಟ್ಟುಹಬ್ಬ ಇರುವ ಕಾರಣ ಅವರು ಬರಲಾಗಲಿಲ್ಲ, ಅವರ ತಾಯಿಗೆ ನನ್ನ ಪ್ರೀತಿಪೂರ್ವಕ ಅಪ್ಪುಗೆಗಳು ಎಂದರು. ಚೆನ್ನೈನಲ್ಲಿ ನಡೆದಿದ್ದ ಪ್ರೀ ರಿಲೀಸ್ ಇವೆಂಟ್ಗೂ ಸಹ ನಯನತಾರಾ ಗೈರಾಗಿದ್ದರು.
-
ಪ್ರಮುಖ ಸುದ್ದಿ14 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ6 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ12 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಗ್ಯಾಜೆಟ್ಸ್8 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ7 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಆರೋಗ್ಯ18 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!
-
ಕ್ರಿಕೆಟ್11 hours ago
ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ
-
ದೇಶ11 hours ago
Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ