Athiya Shetty-KL Rahul Wedding: ಸುನೀಲ್ ಶೆಟ್ಟಿ-ಮಾನಾ ಶೆಟ್ಟಿ ಮಗಳನ್ನು ತಬ್ಬಿಕೊಂಡು ಹೂ ಮಳೆ ಸುರಿಸಿ ಆಶೀರ್ವದಿಸಿದ್ದು ಹೀಗೆ! - Vistara News

ಬಾಲಿವುಡ್

Athiya Shetty-KL Rahul Wedding: ಸುನೀಲ್ ಶೆಟ್ಟಿ-ಮಾನಾ ಶೆಟ್ಟಿ ಮಗಳನ್ನು ತಬ್ಬಿಕೊಂಡು ಹೂ ಮಳೆ ಸುರಿಸಿ ಆಶೀರ್ವದಿಸಿದ್ದು ಹೀಗೆ!

ಸುನೀಲ್‌ ಶೆಟ್ಟಿ ಅವರು ಪತ್ನಿ ಮಾನಾ ಶೆಟ್ಟಿ ಮತ್ತು ಕೆಎಲ್ ರಾಹುಲ್ (Athiya Shetty-KL Rahul Wedding) ಅವರ ಪೋಷಕರೊಂದಿಗೆ ಜೋಡಿಗೆ ಆಶೀರ್ವದಿಸಿದ್ದಾರೆ. ಮೊದಲ ಫೋಟೊದಲ್ಲಿ -ಕ್ರಿಕೆಟರ್ ಕೆಎಲ್ ರಾಹುಲ್ (Athiya Shetty and kl Rahul) ಅವರ ತಂದೆ ತಾಯಿ ಡಾ ಕೆಎನ್ ಲೋಕೇಶ್ ಮತ್ತು ರಾಜೇಶ್ವರಿ ಲೋಕೇಶ್ ದಂಪತಿ ನವದಂಪತಿಯನ್ನು ಆಶೀರ್ವದಿಸಿದರು.

VISTARANEWS.COM


on

Suniel Shetty and wife Mana bless Athiya Shetty-KL Rahul Wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಸುನೀಲ್ ಶೆಟ್ಟಿ ಅವರು ತಮ್ಮ ಮಗಳು-ನಟ ಅಥಿಯಾ ಶೆಟ್ಟಿ (Athiya Shetty-KL Rahul Wedding), ಕೆಎಲ್ ರಾಹುಲ್ ಅವರ ವಿವಾಹ ಸಮಾರಂಭದ (Athiya kl rahul marriage,) ಸಂಭ್ರಮದ ಕ್ಷಣಗಳ ಫೋಟೊಗಳನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ನವ ದಂಪತಿಗೆ ಸುನೀಲ್ ಶೆಟ್ಟಿ ಕುಟುಂಬ ಹಾಗೂ ಕೆಎಲ್ ರಾಹುಲ್ ತಂದೆ ತಾಯಿ ಆಶೀರ್ವದಿಸಿರುವ ಫೋಟೊ ಹಂಚಿಕೊಂಡಿದ್ದಾರೆ.

ಸುನೀಲ್‌ ಶೆಟ್ಟಿ ಅವರು ಪತ್ನಿ ಮಾನಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರ ಪೋಷಕರೊಂದಿಗೆ ಜೋಡಿಗೆ ಆಶೀರ್ವದಿಸಿದ್ದಾರೆ. ಮೊದಲ ಫೋಟೊದಲ್ಲಿ -ಕ್ರಿಕೆಟರ್ ಕೆಎಲ್ ರಾಹುಲ್ (Athiya Shetty and kl Rahul) ಅವರ ತಂದೆ ತಾಯಿ ಡಾ ಕೆಎನ್ ಲೋಕೇಶ್ ಮತ್ತು ರಾಜೇಶ್ವರಿ ಲೋಕೇಶ್ ದಂಪತಿ ನವದಂಪತಿಯನ್ನು ಆಶೀರ್ವದಿಸಿದರು. ಅಥಿಯಾ ಮತ್ತು ಕೆಎಲ್ ರಾಹುಲ್ ಮಂಟಪದಲ್ಲಿ ಕುಳಿತು ನಗುತ್ತಾ ಒಬ್ಬರನ್ನೊಬ್ಬರು ನೋಡುತ್ತಿರುವ ಫೋಟೊ ಇದಾಗಿದೆ. ದಂಪತಿಯ ತಂದೆ ತಾಯಿ ಮಕ್ಕಳಿಗೆ ಹೂ ಚೆಲ್ಲಿದ್ದಾರೆ. ಎರಡನೇ ಚಿತ್ರದಲ್ಲಿ ಸುನೀಲ್ ಮತ್ತು ಮಾನಾ ಶೆಟ್ಟಿ ಅವರು ಮಗಳು ಆಥಿಯಾ ಅವರನ್ನು ಅಪ್ಪಿಕೊಳ್ಳುತ್ತಿದ್ದಾರೆ. ಸುನೀಲ್ ತನ್ನ ಮಗಳ ಕೆನ್ನೆಯ ಮೇಲೆ ಮುತ್ತಿಟ್ಟಿದ್ದಾರೆ.

ಚಿತ್ರಗಳಿಗೆ ಟೈಗರ್ ಶ್ರಾಫ್ ಸೇರಿದಂತೆ ಅನೇಕ ಕ್ರಿಕೇಟಿಗರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ಸುರೇಶ್ ರೈನಾ, “ಅಭಿನಂದನೆಗಳು ಸುನೀಲ್‌ ಅಣ್ಣ. ಇಡೀ ಕುಟುಂಬಕ್ಕೆ ಶುಭ ಹಾರೈಸುತ್ತೇನೆ” ಎಂದು ಬರೆದಿದ್ದಾರೆ. ಅಭಿನಂದನೆಗಳು ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: KL Rahul Athiya Shetty: ರಾಹುಲ್-ಅಥಿಯಾ ಜೋಡಿಗೆ ಧೋನಿ-ಕೊಹ್ಲಿ ಕೊಟ್ಟ ಗಿಫ್ಟ್ ಏನು? ಆಡಿ ಕಾರು ಕೊಟ್ಟಿದ್ಯಾರು?

ಜನವರಿ 23ರ ಸೋಮವಾರದಂದು ಖಂಡಾಲಾದಲ್ಲಿರುವ (kl rahul athiya Shetty marriage venue) ನಟ ಸುನೀಲ್ ಶೆಟ್ಟಿ(suniel Shetty) ಅವರ ಫಾರ್ಮ್​ ಹೌಸನಲ್ಲಿ ಈ ಇಬ್ಬರ ಮದುವೆ(athiya Shetty photos) ಅದ್ಧೂರಿಯಾಗಿ ನಡೆದಿದೆ. ಖಾಸಗಿ ಸಮಾರಂಭದಲ್ಲಿ ನಡೆದ ಈ ಜೋಡಿಯ ವಿವಾಹ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಯಾವುದೇ ಟೀಮ್​ ಇಂಡಿಯಾ ಆಟಗಾರರು ಭಾಗಿಯಾರಲಿಲ್ಲ. ಇನ್ನೊಂದೆಡೆ ಮಗಳು ಅಥಿಯಾ ಮತ್ತು ಅಳಿಯ ರಾಹುಲ್​ಗೆ ಸುನೀಲ್​ ಶೆಟ್ಟಿ ಮುಂಬೈಯಲ್ಲಿ 50 ಕೋಟಿ ರೂ. ಮೌಲ್ಯದ ಐಶಾರಾಮಿ ಅಪಾರ್ಟ್‌ಮೆಂಟ್‌ ಗಿಫ್ಟ್​ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: KL Rahul- Athiya Shetty Wedding: ಹಸೆಮಣೆ ಏರಲಿರುವ ಅಥಿಯಾ-ಕೆಎಲ್ ರಾಹುಲ್ ಜೋಡಿಗೆ ಶುಭ ಹಾರೈಸಿದ ಅಜಯ್‌ ದೇವಗನ್‌!

ವರದಿಗಳ ಪ್ರಕಾರ ಕೊಹ್ಲಿ ಅವರು ರಾಹುಲ್ ಮತ್ತು ಅಥಿಯಾ ಜೋಡಿಗೆ 2.17 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯು ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಟೀಮ್​ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ರಾಹುಲ್‌ಗೆ ಕವಾಸಕಿ ನಿಂಜಾ ಬೈಕನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಬೈಕ್‌ನ ಮಾರುಕಟ್ಟೆ ಬೆಲೆ ಸುಮಾರು 80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Salman Khan: ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

VISTARANEWS.COM


on

Salman Khan Cops arrest 4 with alleged links to Bishnoi gang
Koo

ಬೆಂಗಳೂರು: ಮಹಾರಾಷ್ಟ್ರದ ಪನ್ವೇಲ್‌ನಲ್ಲಿ (Maharashtra’s Panvel) ನಟ ಸಲ್ಮಾನ್ ಖಾನ್ (Salman Khan) ಅವರ ಕಾರಿನ ಮೇಲೆ ಅಟ್ಯಾಕ್‌ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಪಾಕಿಸ್ತಾನಿ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರ ಪಡೆದು ಸಲ್ಮಾನ್‌ ಖಾನ್‌ ಕಾರಿನ ಮೇಲೆ ದಾಳಿ ಮಾಡಲು ಈ ತಂಡ ಸಂಚು ರೂಪಿಸಿತ್ತು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಸಲ್ಮಾನ್‌ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಬಳಿಕ, ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದರು. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಅನುಜ್ ಥಾಪನ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪಂಜಾಬ್‌ನಲ್ಲಿ ಏಪ್ರಿಲ್ 26 ರಂದು ಬಂಧಿಸಲಾಗಿತ್ತು. ಒಟ್ಟಾರೆಯಾಗಿ, ಆರು ಮಂದಿಯನ್ನು ಬಂಧಿಸಲಾಗಿತ್ತು ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದ

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

Continue Reading

ಬಾಲಿವುಡ್

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

Lok Sabha Election 2024: ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

VISTARANEWS.COM


on

Lok Sabha Election 2024 Mithun Chakraborty casting his vote
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ.  ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಳಿಕ ಮಾಧ್ಯಮದ ಮುಂದೆ ಮಾತನಾಡಿ , “ನಾನು ಬಿಜೆಪಿ ಕಾರ್ಯಕರ್ತ, ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಾನು ನಾಳೆಯಿಂದ ಸಿನಿಮಾಗಳ ಬಗ್ಗೆ ಮಾತನಾಡುತ್ತೇನೆ. ಏಕೆಂದರೆ ನಾನು ನನ್ನ ಕುಟುಂಬದ ಹೊಟ್ಟೆ ಕೂಡ ತುಂಬಿಸಬೇಕುʼʼಎಂದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

Continue Reading

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading

ಬಾಲಿವುಡ್

Saiyami Kher: ಜರ್ಮನಿಯ ಫೇಮಸ್‌ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಖ್ಯಾತ ನಟಿ!

Saiyami Kher: ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

VISTARANEWS.COM


on

Saiyami Kher to participate in Ironman Triathlon in Germany
Koo

ಬೆಂಗಳೂರು: ನಟಿ ಸಯ್ಯಾಮಿ ಖೇರ್ (Saiyami Kher ) ಸೆಪ್ಟೆಂಬರ್ 15ರಂದು ಜರ್ಮನಿಯಲ್ಲಿ ನಡೆಯಲಿರುವ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ನಟಿ ಈಜು, ಸೈಕ್ಲಿಂಗ್ ಮತ್ತು ಜಿಮ್‌ನಲ್ಲಿ ತರಬೇತಿ ಪಡೆಯುವ ವಿಡಿಯೊ ಇದರಲ್ಲಿದೆ.

ನಟಿ ಪೋಸ್ಟ್‌ನಲ್ಲಿ ʻʻಕೊರೊನಾ ಆದ ಬಳಿಕ ಸಮಯ ಹೇಗೆ ಸಾಗಿತು ಗೊತ್ತಾಗಿಲ್ಲ. ಶೂಟಿಂಗ್‌ ಸೆಟ್‌ನಲ್ಲಿ ಪ್ರತಿದಿನ ಆನಂದಿಸುತ್ತಿದ್ದೆ. ಜೀವನ ರೋಲರ್ ಕೋಸ್ಟರ್ ಆಗಿತ್ತು. ಕಳೆದ ವರ್ಷ ಬೈಕ್ ಅಪಘಾತ ಕೂಡ ಆಯ್ತು. ಎಂಟು ತಿಂಗಳ ಕಾಲ ವ್ಯಾಯಾಮ ಏನೂ ಇಲ್ಲದೆ ಹಾಗೇ ಇದ್ದೆ. ಇದಾದ ಬಳಿಕ , ಟ್ರಯಥ್ಲಾನ್ ಈವೆಂಟ್‌ಗೆ ತರಬೇತಿ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಟ್ರಯಥ್ಲಾನ್ ಈವೆಂಟ್‌ಗಾಗಿ ಎರಡು ತಿಂಗಳ ತರಬೇತಿಯನ್ನು ಪಡೆದ ನಂತ ಇಂದು ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗಿಯಾಗಲು ಸಿದ್ಧನಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಸಿನಿಮಾ ವಿಚಾರಕ್ಕೆ ಬಂದರೆ, ಸಯ್ಯಾಮಿ ʻಅಗ್ನಿʼ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ದಿವ್ಯೆಂದು ಶರ್ಮಾ ಅವರೊಂದಿಗೆ ನಟಿಸಲಿದ್ದಾರೆ. ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಬೆಂಬಲದೊಂದಿಗೆ ರಾಹುಲ್ ಧೋಲಾಕಿಯಾ ನಿರ್ದೇಶನವಿದೆ.

ಮರಾಠಿಯ ಖ್ಯಾತ ನಟಿ ಉಷಾ ಕಿರಣ್ ಅವರ ಮೊಮ್ಮಗಳು ಮತ್ತು ಪ್ರಮುಖ ಬಾಲಿವುಡ್ ನಟಿ ತನ್ವಿ ಅಜ್ಮಿ ಅವರ ಸೊಸೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶಿಸಿದ ಮತ್ತು 2016 ರಲ್ಲಿ ಬಿಡುಗಡೆಯಾದ “ಮಿರ್ಜ್ಯಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಸೈಯಾಮಿ ಖೇರ್ ಮನ್ನಣೆ ಗಳಿಸಿದರು.

Continue Reading
Advertisement
Valmiki Corporation Scam
ಕರ್ನಾಟಕ1 min ago

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

rahul gandhi
ಪ್ರಮುಖ ಸುದ್ದಿ21 mins ago

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Salman Khan Cops arrest 4 with alleged links to Bishnoi gang
ಬಾಲಿವುಡ್22 mins ago

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Chikkalluru Siddappaji temple
ಧಾರ್ಮಿಕ28 mins ago

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Gold Rate Today
ಚಿನ್ನದ ದರ28 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

T20 World Cup 2024
ಕ್ರಿಕೆಟ್35 mins ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Porsche Crash
ದೇಶ58 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ1 hour ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್1 hour ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ1 hour ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌