Sushanth Singh | ದಿನಕ್ಕೆ ಎರಡೇ ತಾಸು ನಿದ್ರೆ ಮಾಡುತ್ತಿದ್ದ ಸುಶಾಂತ್‌! ನಟಿ ಕಿಯಾರಾ ಬಿಚ್ಚಿಟ್ಟ ಸತ್ಯ - Vistara News

ಬಾಲಿವುಡ್

Sushanth Singh | ದಿನಕ್ಕೆ ಎರಡೇ ತಾಸು ನಿದ್ರೆ ಮಾಡುತ್ತಿದ್ದ ಸುಶಾಂತ್‌! ನಟಿ ಕಿಯಾರಾ ಬಿಚ್ಚಿಟ್ಟ ಸತ್ಯ

ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ (Sushanth Singh) ಅವರು ದಿನಕ್ಕೆ ಎರಡೇ ತಾಸು ನಿದ್ರೆ ಮಾಡುತ್ತಿದ್ದರು ಎನ್ನುವ ವಿಚಾರವನ್ನು ನಟಿ ಕಿಯಾರ ಅದ್ವಾನಿ ಬಯಲು ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ (Sushanth Singh) ಆತ್ಮಹತ್ಯೆಗೆ ಶರಣಾಗಿ ಎರಡೂವರೆ ವರ್ಷಗಳು ಕಳೆದಿವೆ. ಆದರೆ ಇನ್ನೂ ಅವರ ನೆನಪುಗಳು ಮಾತ್ರ ನಮ್ಮಿಂದ ಮರೆಯಾಗಿಲ್ಲ. ಅವರ ಬಗ್ಗೆ ನೆನಪಿಸಿಕೊಂಡಿರುವ ನಟಿ ಕಿಯಾರಾ ಅಡ್ವಾಣಿ ಕೂಡ ಅವರ ಬಗ್ಗೆ ಯಾರಿಗೂ ತಿಳಿಯದ ಒಂದು ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ಸುಶಾಂತ್‌ ದಿನಕ್ಕೆ ಕೇವಲ ಎರಡು ತಾಸು ನಿದ್ರೆ ಮಾಡುತ್ತಿದ್ದರು ಎನ್ನುವ ವಿಚಾರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Sushanth Singh | ನಟ ಸುಶಾಂತ್‌ ಸಿಂಗ್‌ ಸಾಕಿದ್ದ ನಾಯಿ ಸಾವು; ಕಣ್ಣೀರಿಡುತ್ತ ಪೋಸ್ಟ್‌ ಮಾಡಿದ ಸಹೋದರಿ ಪ್ರಿಯಾಂಕಾ
ಯೂಟ್ಯೂಬರ್‌ ಒಬ್ಬರೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿದ್ದ ನಟಿ ಈ ವಿಚಾರವಾಗಿ ಮಾತನಾಡಿದ್ದಾರೆ. “ನಾನು ಮತ್ತು ಸುಶಾಂತ್‌ ಎಂಎಸ್‌ ಧೋನಿ ಚಿತ್ರದಲ್ಲಿ ಜತೆಯಾಗಿ ನಟಿಸಿದ್ದೆವು. ಸಿನಿಮಾ ಚಿತ್ರೀಕರಣ ವೇಳೆ ನಾನು ಸುಸ್ತಾಗಿ ಕುಳಿತು, ʼಅಯ್ಯಪ್ಪಾ, ಮಲಗಿಕೊಂಡರೆ ಸಾಕುʼ ಅನ್ನುತ್ತಿದೆ. ಆದರೆ ಸುಶಾಂತ್‌ ಎಂದಿಗೂ ಹಾಗೆ ಹೇಳಿರಲಿಲ್ಲ. ಮನುಷ್ಯನ ಜೀವಕ್ಕೆ ದಿನಕ್ಕೆ ಎರಡು ತಾಸು ನಿದ್ರೆ ಸಾಕು. ನಾವು 8-9 ತಾಸು ನಿದ್ರೆ ಮಾಡಿದರೂ ನಮ್ಮ ಮೆದುಳು ವಿಶ್ರಾಂತಿ ಪಡೆಯುವುದು ಎರಡು ತಾಸು ಮಾತ್ರ. ಉಳಿದೆಲ್ಲ ಸಮಯದಲ್ಲಿ ಅದು ಆಕ್ಟಿವ್‌ ಆಗಿರುತ್ತದೆ ಎನ್ನುತ್ತಿದ್ದರು. ಅವರು ನಿಜವಾಗಿಯೂ ನಿದ್ರಾಹೀನತೆಯಿಂದ ಬಳಲುತ್ತಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಸ್ತಾರ TOP 10 NEWS | ಎಲ್ಲೆಡೆ ಮಾಸ್ಕ್‌ ಕಡ್ಡಾಯದಿಂದ, ಸುಶಾಂತ್‌ ಸಿಂಗ್‌ರದ್ದು ಹತ್ಯೆ ಎಂಬ ಮಾಹಿತಿವರೆಗಿನ ಪ್ರಮುಖ ಸುದ್ದಿಗಳಿವು
ಸುಶಾಂತ್‌ ತಾವು ದಿನಕ್ಕೆ ಎರಡು ತಾಸು ಮಾತ್ರ ನಿದ್ರೆ ಮಾಡುವುದಾಗಿ ನನಗೆ ಹೇಳಿದ್ದರು. ಅದು ಸಾಧ್ಯವೇ ಎಂದು ನಾನು ಆಶ್ಚರ್ಯಪಟ್ಟಿದ್ದೆ. ಆದರೆ ಪ್ರತಿ ದಿನ ಸುಶಾಂತ್‌ ಚಿತ್ರೀಕರಣದ ಸೆಟ್‌ನಲ್ಲಿ ನಮ್ಮೆಲ್ಲರಿಗಿಂತಲೂ ಆಕ್ಟಿವ್‌ ಆಗಿಯೇ ಕಾಣಿಸಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.
ಸುಶಾಂತ್‌ ಸಿಂಗ್‌ ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದ ನಟಿ ಕಿಯಾರಾ, “ಈ ವಿಚಾರವನ್ನು ನಂಬಲಾಗುತ್ತಿಲ್ಲ. ನೀವು ಬೇಗನೇ ನಮ್ಮನ್ನೆಲ್ಲ ಬಿಟ್ಟು ಹೋಗಿಬಿಟ್ಟಿರಿ” ಎಂದು ಹೇಳಿದ್ದರು. ನಟನ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

By

Abdu Rozik
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Continue Reading

ಬಾಲಿವುಡ್

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Shilpa Shetty: ಶಿಲ್ಪಾ ಶೆಟ್ಟಿ ಅವರು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ, ನಟಿ ಶಮಿತಾ ಶೆಟ್ಟಿ ಅವರೊಂದಿಗೆ ಇರುವ ಹಲವು ಫೋಟೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಆಗಮಿಸಿ ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು (Delantha Bettu) ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಠಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

VISTARANEWS.COM


on

Shilpa Shetty sister Shamita visit Kedarnath with their mother
Koo

ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿ ( Shilpa Shetty) ಅವರು ಸಹೋದರಿ ಶಮಿತಾ (Shamit Shetty) ಮತ್ತು ತಾಯಿಯ ಜತೆ ವೈಷ್ಣೋದೇವಿ ಹಾಗೂ ಕೇದಾರನಾಥ ತೀರ್ಥಯಾತ್ರೆಗೆ ಹೋಗಿದ್ದರು. ಈ ಮೂಲಕ ತಾಯಂದಿರ ದಿನವನ್ನು ವಿಶೇಷವಾಗಿ ಆಚರಿಸಿದರು. ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊ ಮತ್ತು ವಿಡಿಯೊಗಳನ್ನು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಶಮಿತಾ ಇನ್‌ಸ್ಟಾದಲ್ಲಿ ವೀಡಿಯೊವನ್ನು ಹಂಚಿಕೊಂಡು “ಪ್ರೀತಿ ಮತ್ತು ಕೃತಜ್ಞತೆ ಮಾತ್ರ. ಓಂ ನಮಃ ಶಿವೈ” ಎಂದು ತಾಯಿಯ ಜತೆಗಿನ ಸುಂದರ ಕ್ಷಣಗಳ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ. ಕೆಲವು ಚಿತ್ರಗಳಲ್ಲಿ ಮೂವರು ದೇವಸ್ಥಾನಗಳ ಮುಂದೆ ಕೈ ಮುಗಿದು ನಿಂತಿದ್ದಾರೆ. ಶಿಲ್ಪಾ ಅವರ ಮಗಳು ಸಮೀಕ್ಷಾ ಕೂಡ ಜತೆಗೆ ಇದ್ದರು.

ಇದಕ್ಕೂ ಮುನ್ನ ಶಿಲ್ಪಾ ಶೆಟ್ಟಿ ಅವರು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ, ನಟಿ ಶಮಿತಾ ಶೆಟ್ಟಿ ಅವರೊಂದಿಗೆ ಇರುವ ಹಲವು ಫೋಟೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. “ನಮ್ಮ ದೇವಿಯೊಂದಿಗೆ ವೈಷ್ಣೋದೇವಿಯಲ್ಲಿ. ತಾಯಂದಿರ ದಿನದ ಶುಭಾಶಯಗಳು, ಇಂದು, ನಾಳೆ ಮತ್ತು ಪ್ರತಿದಿನ ʻಅಮ್ಮʼ ನಾವು ನಿಮ್ಮನ್ನು ಪ್ರೀತಿಸುತ್ತೇವೆʼʼಎಂದು ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

ಕೆಲವು ದಿನಗಳ ಹಿಂದೆಯಷ್ಟೇ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಆಗಮಿಸಿ ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು (Delantha Bettu) ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಠಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್ ಕುಂದ್ರಾ ಮತ್ತು ಸಮಿಷಾ ಕುಂದ್ರಾ ಮತ್ತು ತಾಯಿ ಸುನಂದಾ ಶೆಟ್ಟಿ ಮತ್ತು ಕುಟುಂಬದವರು ಜತೆಯಲ್ಲಿದ್ದರು.

ಮೂಲತಃ ಮಂಗಳೂರಿನವರಾಗಿರುವುದರಿಂದ ನಟಿ ಶಿಲ್ಪಾ ಕುಟುಂಬದ ಕಾರ್ಯಕ್ರಮಗಳು, ಭೂತಾರಾದನೆ, ದೈವ ದೇವರ ಆರಾಧನೆಗೆ, ಆಗಾಗ ಬರುತ್ತಿರುತ್ತಾರೆ.ಶಿಲ್ಪಾ ಶೆಟ್ಟಿ ಮತ್ತು ರಾಜ್‌ ಕುಂದ್ರಾ ದಂಪತಿ ತಮ್ಮ ಮಕ್ಕಳನ್ನು ಅತ್ಯಂತ ಪ್ರೀತಿಯಿಂದ ನೊಡಿಕೊಳ್ಳುತ್ತಿದ್ದಾರೆ. ಅವರ ಬೇಕು ಬೇಡಗಳನ್ನು ತೀರಿಸುವುದು ಮಾತ್ರವಲ್ಲ ವಿಭಿನ್ನ ಕಲ್ಪನೆಗಳೊಂದಿಗೆ ಬೆಳೆಸುತ್ತಿದ್ದಾರೆ.  ಶಿಲ್ಪಾ ಶೆಟ್ಟಿ ಕೊನೆಯದಾಗಿ ರೋಹಿತ್ ಶೆಟ್ಟಿಯವರ ʻಇಂಡಿಯನ್ ಪೋಲಿಸ್‌ ಫೋರ್ಸ್‌ʼನಲ್ಲಿ ಕಾಣಿಸಿಕೊಂಡರು.

Continue Reading

ಬಾಲಿವುಡ್

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

Kareena Kapoor: ಕರೀನಾ ಮತ್ತು ಸೈಫ್ 2012ರಲ್ಲಿ ವಿವಾಹವಾದರು. ಅದಕ್ಕೂ ಮುಂಚೆ ಸೈಫ್‌ ಅಮೃತಾ ಸಿಂಗ್ ಅವರನ್ನು ಮದುವೆಯಾಗಿದ್ದರು. 2004ರಲ್ಲಿ ವಿಚ್ಛೇದನ ಪಡೆದುಕೊಂಡರು. ಸೈಫ್ ಮತ್ತು ಅಮೃತಾ ಅವರಿಗೆ ಸಾರಾ ಅಲಿ ಖಾನ್ ಮತ್ತು ಇಬ್ರಾಹಿಂ ಅಲಿ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸೈಫ್ ಮತ್ತು ಕರೀನಾ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್ .

VISTARANEWS.COM


on

Kareena Kapoor Saif Ali Khan share a kiss in front of paparazzi
Koo

ಬೆಂಗಳೂರು: ಕರೀನಾ ಕಪೂರ್ (Kareena Kapoor) ಮತ್ತು ಸೈಫ್ ಅಲಿ ಖಾನ್ ತಮ್ಮ ಮುಂಬೈ ನಿವಾಸದ ಹೊರಗೆ ಒಬ್ಬರಿಗೊಬ್ಬರು ಚುಂಬಿಸಿಕೊಂಡಿದ್ದಾರೆ. ಪಾಪರಾಜಿಗಳ ಮುಂದೆಯೇ ಕಿಸ್‌ ಕೊಟ್ಟುಕೊಂಡಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ವೈರಲ್‌ ಆದ ವಿಡಿಯೊಗಳಲ್ಲಿ ದಂಪತಿ ತಮ್ಮ ಕಾರುಗಳ ಕಡೆಗೆ ಸಾಗುತ್ತಿರುವಾಗ ಒಬ್ಬರಿಗೊಬ್ಬರು ಮಾತು ಕತೆ ನಡೆಸಿದ್ದಾರೆ. ಈ ವೇಳೆ ಕರೀನಾ ಅವರು ಪತಿ ಸೈಫ್‌ಗೆ ಮೊದಲು ಮುತ್ತು ಕೊಟ್ಟರು. ಆ ಬಳಿಕ ಸೈಫ್‌ ಕೂಡ ಕರೀನಾಗೆ ಕಿಸ್‌ ಕೊಟ್ಟಿದ್ದಾರೆ. ಕರೀನಾ ನೀಲಿ ಬಣ್ಣದ ಡೆನಿಮ್‌ಗಳೊಂದಿಗೆ ಬಿಳಿ ಕುರ್ತಾವನ್ನು ಧರಿಸಿದ್ದರು. ಸೈಫ್ ಬಿಳಿ ಕುರ್ತಾದಲ್ಲಿ ಮ್ಯಾಚಿಂಗ್ ಪೈಜಾಮಾದೊಂದಿಗೆ ಕಾಣುತ್ತಿದ್ದರು.

ಇದೀಗ ಫ್ಯಾನ್ಸ್‌ ಕಮೆಂಟ್‌ ಮೂಲಕ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಈ ವಿಡಿಯೊಗೆ ಹಲವರು ʻಕ್ಯೂಟ್‌ʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻʻಮೊದಲ ಬಾರಿ ಭೇಟಿಯಾದಂತೆ ಕಾಣುತ್ತೀರಿ. ಸದಾ ಹೀಗೆ ನಗುತ್ತ ಇರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಕರೀನಾ ಮತ್ತು ಸೈಫ್ 2012ರಲ್ಲಿ ವಿವಾಹವಾದರು. ಅದಕ್ಕೂ ಮುಂಚೆ ಸೈಫ್‌ ಅಮೃತಾ ಸಿಂಗ್ ಅವರನ್ನು ಮದುವೆಯಾಗಿದ್ದರು. 2004ರಲ್ಲಿ ವಿಚ್ಛೇದನ ಪಡೆದುಕೊಂಡರು. ಸೈಫ್ ಮತ್ತು ಅಮೃತಾ ಅವರಿಗೆ ಸಾರಾ ಅಲಿ ಖಾನ್ ಮತ್ತು ಇಬ್ರಾಹಿಂ ಅಲಿ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸೈಫ್ ಮತ್ತು ಕರೀನಾ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್ .

ಇದನ್ನೂ ಓದಿ: Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

ಸಿನಿಮಾ ವಿಚಾರಕ್ಕೆ ಬಂದರೆ ಕರೀನಾ ಕಪೂರ್ ಕೊನೆಯದಾಗಿ ʻಕ್ರ್ಯೂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ರೋಹಿತ್ ಶೆಟ್ಟಿಯವರ ‘ಸಿಂಗಮ್ ಅಗೇನ್’ ಮತ್ತು ಹನ್ಸಲ್ ಮೆಹ್ತಾ ಅವರ ‘ದಿ ಬಕಿಂಗ್ಹ್ಯಾಮ್ ಮರ್ಡರ್ಸ್’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ, ಸೈಫ್ ಅಲಿ ಖಾನ್ ಅವರು ಜ್ಯೂನಿಯರ್‌ ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಅವರೊಂದಿಗೆ ‘ದೇವರ’ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

Continue Reading

ಬಾಲಿವುಡ್

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Shekhar Suman: ಸಂದರ್ಶನದಲ್ಲಿ ನಟ ಶೇಖರ್ ಸುಮನ್ ಮಾತನಾಡಿ ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Shekhar Suman Says Sex Workers Keep Society
Koo

ಬೆಂಗಳೂರು: ನಟ ಶೇಖರ್ ಸುಮನ್ (Shekhar Suman) ಅವರು ಲೈಂಗಿಕ ಕಾರ್ಯಕರ್ತರು ಮತ್ತು ವೇಶ್ಯೆಯರ ನಡುವಿನ ವ್ಯತ್ಯಾಸದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇವರ ಸಮಾಜದ ಉತ್ಪನ್ನಗಳು ಮತ್ತು ಅವರನ್ನು ಒಟ್ಟಿಗೆ ವರ್ಗೀಕರಿಸಬಾರದು ಎಂದು ಸಂದರ್ಶನದಲ್ಲಿ ಹೇಳಿದರು. ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.

“ವೇಶ್ಯೆಯರನ್ನು ಈ ರೀತಿ ಲೈಂಗಿಕ ಕಾರ್ಯಕರ್ತೆಯರೆಂದು ತೋರಿಸುವಂತೆ ಮಾಡಿದ್ದು ಸಮಾಜವೇ. ಯಾವುದೇ ಮಹಿಳೆ ಆಯ್ಕೆಯಿಂದ ವೇಶ್ಯೆಯಾಗುವುದಿಲ್ಲ. ಆದರೆ ಸಂದರ್ಭಗಳು ಹೆಚ್ಚಾಗಿ ಮಹಿಳೆಯನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಮಾಡುತ್ತವೆ. ಈ ಎಲ್ಲದರ ಹೊರತಾಗಿಯೂ, ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ಪುರುಷರ ಲೈಂಗಿಕ ಹಸಿವನ್ನು ಲೈಂಗಿಕ ಕಾರ್ಯಕರ್ತರಿಂದ ನೀಗಿಸಿಕೊಳ್ಳುತ್ತಿದ್ದಾರೆʼʼಎಂದರು.

ಶೇಖರ್ ಸುಮನ್ ಮಾತನಾಡಿ ʻʻಹೀರಾಮಂಡಿಯಲ್ಲಿ ಜನರು ಕಲೆ ಮತ್ತು ಸಂಗೀತದಂತಹ ವಿವಿಧ ಕೌಶಲ್ಯಗಳನ್ನು ಕಲಿಯಲು ಹೋದ ಸ್ಥಳವಾಗಿತ್ತು. ಮಕ್ಕಳನ್ನು ಅಲ್ಲಿಗೆ ಕಳುಹಿಸಲಾಗುತ್ತಿತ್ತು. ನವಾಬರು ಅವರಿಂದ ಅನೇಕ ವಿಚಾರಗಳನ್ನು ಕಲಿಯುತ್ತಿದ್ದರು. ಹೀರಾಮಂಡಿಯವರ ಕೊಡುಗೆ ಅಪಾರವಾಗಿತ್ತು, ಅದೊಂದು ಸಂಸ್ಥೆಯಾಗಿತ್ತು, ಆದರೆ ನಾವು ಯಾವಾಗಲೂ ವೇಶ್ಯೆಯರನ್ನು ವಿಭಿನ್ನ ಅರ್ಥದಲ್ಲಿ ನೋಡುತ್ತಿದ್ದೇವು. ಹೀರಾಮಂಡಿಯಲ್ಲಿ, ಸ್ವಾತಂತ್ರ್ಯ ಚಳವಳಿಗೆ ವೇಶ್ಯೆಯರ ಕೊಡುಗೆಯನ್ನು ಸಹ ತೋರಿಸಲಾಗಿದೆʼʼಎಂದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಶೇಖರ್ ಸುಮನ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ ಶೇಖರ್‌ ಸುಮನ್‌(Shekhar Suman) ಕೆಲವು ದಿನಗಳ ಹಿಂದೆ ಬಿಜೆಪಿ(BJP). ಸೇರ್ಪಡೆಗೊಂಡಿದ್ದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದ್ದರು.

ಈ ವೇಳೆ ಶೇಖರ್‌ ಸುಮನ್‌ ಮಾತನಾಡಿದ್ದು, ನಿನ್ನೆಯವರೆಗೆ ನಾನು ಇಲ್ಲಿ ಬಂದು ಕೂರುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ. ಜೀವನದಲ್ಲಿ ನಡೆದ ಅನೇಕ ಘಟನೆಗಳಿಂದಾಗಿ ನಾನು ಇಂದು ಇಲ್ಲಿ ಬಂದಿದ್ದೇನೆ. ಬಹಳ ಧನಾತ್ಮಕ ಚಿಂತನೆಯೊಂದಿಗೆ ನಾನು ಇಲ್ಲಿ ಬಂದಿದ್ದೇನೆ. ಇಲ್ಲಿ ಬರಲು ಪ್ರೇರೇಪಿಸಿದ ದೇವರಿಗೆ ನಾನು ಆಭಾರಿ ಎಂದು ಹೇಳಿದ್ದರು.

Continue Reading
Advertisement
Narendra Modi
ದೇಶ2 mins ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ3 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ5 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ6 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ6 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ6 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ6 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ10 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ10 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ11 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ12 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ18 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ23 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌