Sushmita Sen: ಸುಶ್ಮಿತಾರನ್ನು ಕಾಡುತ್ತಿರುವ ಅಡಿಸನ್ಸ್‌ ಡಿಸೀಸ್:‌ ಏನಿದು? - Vistara News

ಬಾಲಿವುಡ್

Sushmita Sen: ಸುಶ್ಮಿತಾರನ್ನು ಕಾಡುತ್ತಿರುವ ಅಡಿಸನ್ಸ್‌ ಡಿಸೀಸ್:‌ ಏನಿದು?

ಆಟೋಇಮ್ಯೂನ್‌ ಕಾಯಿಲೆಗಳೆಂದರೆ, ದೇಹದ ನಿರೋಧಕ ಶಕ್ತಿಯ ಅಸಮರ್ಪಕ ಕೆಲಸದಿಂದಾಗುವ ಅನಾಹುತಗಳು. ನಟಿ ಸುಶ್ಮಿತಾ ಸೇನ ಗೆ (Sushmita Sen) ಕಾಡಿದ್ದ ಈ ಕಾಯಿಲೆ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Sushmita Sen addiction disease: What is it?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ನಟಿ, ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್‌ (Sushmita Sen) ಅವರು ಹೃದಯಾಘಾತಕ್ಕೆ ಒಳಗಾಗಿರುವ ಸುದ್ದಿಯಿಂದಾಗಿ, ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ವಿಷಯ ಮತ್ತೊಮ್ಮೆ ಸದ್ದು ಮಾಡಿದೆ. ʻಫಿಟ್‌ ಆಗಿದ್ದರಲ್ಲ, ಆದರೂ ಹೀಗೇಕಾಯ್ತು?ʼ ಎಂಬ ಆತಂಕ ಮತ್ತೆ ಕೇಳಿ ಬರುತ್ತಿದೆ. ಸುಶ್ಮಿತಾ ಅವರನ್ನು ಕಾಡುತ್ತಿದ್ದ ʻಅಡಿಸನ್ಸ್‌ ಡಿಸೀಸ್‌ʼ ಎನ್ನುವ ಆಟೋಇಮ್ಯೂನ್‌ ಕಾಯಿಲೆಯಿಂದಾಗಿ ಅವರ ಹೃದಯಕ್ಕೆ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಏನು ಕಾಯಿಲೆಯಿದು?

ಆಟೋಇಮ್ಯೂನ್‌ ಕಾಯಿಲೆಗಳೆಂದರೆ, ದೇಹದ ನಿರೋಧಕ ಶಕ್ತಿಯ ಅಸಮರ್ಪಕ ಕೆಲಸದಿಂದಾಗುವ ಅನಾಹುತಗಳು. ಅಂದರೆ, ತನ್ನದೇ ದೇಹದ ಭಾಗಗಳನ್ನು ಆಗಂತುಕರೆಂದು ಭಾವಿಸಿ ದೇಹದ ಪ್ರತಿರೋಧ ಶಕ್ತಿಯು ಅವುಗಳ ಮೇಲೆ ದಾಳಿ ಮಾಡುತ್ತದೆ. ಇದರಿಂದಾಗಿ ಕೆಲವು ರೀತಿಯ ರೋಗಗಳು ಬರಬಹುದು. ಅದರಲ್ಲಿ ಸುಶ್ಮಿತಾ ಅವರಿಗಿರುವ ಕಾಯಿಲೆಯೂ ಒಂದು. ಮೂತ್ರಪಿಂಡದ ಮೇಲಿರುವ ಅಡ್ರೆನಲ್‌ ಗ್ರಂಥಿಗಳು ದೇಹಕ್ಕೆ ಅಗತ್ಯವಾದಷ್ಟು ಕಾರ್ಟಿಸೋಲ್ ಹಾರ್ಮೋನುಗಳನ್ನು ಉತ್ಪಾದನೆ ಮಾಡುವುದಿಲ್ಲ. ಈ ಹಾರ್ಮೋನುಗಳ ಕೊರತೆಯಿಂದಾಗಿ ಬರುವಂಥ ಕಾಯಿಲೆಯೇ ಸುಶ್ಮಿತಾರನ್ನು 2004ರಿಂದಲೇ ಕಾಡುತ್ತಿದ್ದ ಅಡಿಸನ್ಸ್‌ ಡಿಸೀಸ್.‌

ಇದನ್ನೂ ಓದಿ: ಲಲಿತ್‌ ಮೋದಿ ಜತೆ ಡೇಟಿಂಗ್‌: ಕೊನೆಗೂ ಮೌನ ಮುರಿದ ಸುಶ್ಮಿತಾ ಸೇನ್‌ ಹೇಳಿದ್ದೇನು?

ಕಾರ್ಟಿಸೋಲ್‌ ಚೋದಕಗಳ ಬಗ್ಗೆ

ಇವುಗಳನ್ನು ಸ್ಟ್ರೆಸ್‌ ಹಾರ್ಮೋನುಗಳೆಂದೇ ಕರೆಯಲಾಗುತ್ತದೆ. ಇವು ಮೂಲತಃ ನಮ್ಮ ದೇಹದಲ್ಲಿ ಉತ್ಪಾದನೆಯಾಗುವ ಸ್ಟೆರಾಯ್‌ ಚೋದಕಗಳು. ಈ ಹಾರ್ಮೋನುಗಳ ಉತ್ಪಾದನೆಯನ್ನು ಮೆದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯು ನಿರ್ವಹಿಸುತ್ತದೆ. ಈ ಕಾರ್ಟಿಸೋಲ್‌ಗಳ ಉತ್ಪಾದನೆ ಕಡಿಮೆಯಾದರೆ, ಅಲ್ಡೊಸ್ಟೆರಾನ್‌ ಎಂಬ ಇನ್ನೊಂದು ಚೋದಕದ ಉತ್ಪತ್ತಿ ಕಡಿಮೆಯಾಗುತ್ತದೆ. ಇದು ಜೀವಕ್ಕೇ ಮಾರಕವಾಗಬಲ್ಲದು. ಹಾಗಾಗಿ ಸುಶ್ಮಿತಾ ಅವರಿಗೆ ಕೊರತೆ ಆದಂತಹ ಸ್ಟೆರಾಯ್ಡ್ ಚೋದಕವನ್ನು ಹಲವಾರು ವರ್ಷಗಳಿಂದ ಪೂರಕವಾಗಿ ನೀಡಲಾಗುತ್ತಿತ್ತು.

ಇವರೆಡರೂ ಹಾರ್ಮೋನುಗಳು ದೇಹದಲ್ಲಿ ರಕ್ತದ ಸರಿಯಾದ ಒತ್ತಡ ಕಾಪಾಡುವುದಕ್ಕೆ ಮತ್ತು ಹೃದಯವನ್ನು ರಕ್ಷಿಸುವುದಕ್ಕೆ ಮುಖ್ಯವಾದ ಕೆಲಸ ಮಾಡುತ್ತವೆ. ಈ ಚೋದಕಗಳ ಪ್ರಮಾಣ ಕುಸಿದರೆ ಹೃದಯದ ಸಮಸ್ಯೆಗಳು, ಕಡಿಮೆ ರಕ್ತದೊತ್ತಡ (ಲೋ ಬಿಪಿ), ಹೃದಯದ ಅನಿಯಮಿತ ಬಡಿತ ಮತ್ತು ಹೃದಯ ಸ್ಥಂಬನಕ್ಕೂ ಕಾರಣವಾಗಬಲ್ಲದು ಎನ್ನುತ್ತದೆ ವೈದ್ಯಲೋಕ. ಇನ್ನು ಆಟೋ ಇಮ್ಯೂನ್‌ ರೋಗಗಳಿಂದಾಗಿ ರಕ್ತದೊತ್ತಡ, ಹೃದಯದ ಸಮಸ್ಯೆ, ಟೈಪ್‌ ೨ ಮಧುಮೇಹ ಮತ್ತು ಕಿಡ್ನಿ ಸಮಸ್ಯೆಗಳು ಬರಬಹುದು. ಅದರಲ್ಲೂ ಹೃದಯದ ಮಾಂಸಖಂಡಗಳ ಉರಿಯೂತ (ಮಯೋಕಾರ್ಡಿಯಂ) ಹೆಚ್ಚಾಗಿ ನರಳಿಸುವ ಸಮಸ್ಯೆ.

ಸ್ಟೆರಾಯ್ಡ್‌ ಹಾನಿಕಾರಕವೇ?

ಹೆಚ್ಚಿನ ಪ್ರಮಾಣದಲ್ಲಿ ದೀರ್ಘಕಾಲದವರೆಗೆ ಸ್ಟೆರಾಯ್ಡ್‌ ತೆಗೆದುಕೊಳ್ಳುವುದರಿಂದ ದೇಹದ ಮೇಲೆ ಅಡ್ಡಪರಿಣಾಮಗಳು ಖಂಡಿತಾ ಇವೆ. ಕೊಲೆಸ್ಟ್ರಾಲ್‌ ಮತ್ತು ರಕ್ತದೊತ್ತಡ ಹೆಚ್ಚುತ್ತದೆ, ರಕ್ತ ಹೆಪ್ಪುಗಟ್ಟಬಹುದು, ಹೃದ್ರೋಗದ ಭೀತಿಯಂತೂ ಇದ್ದೇಇದೆ. ಹಾಗಾಗಿ ದೀರ್ಘಕಾಲದಿಂದ ಸ್ಟೆರಾಯ್ಡ್‌ ತೆಗೆದುಕೊಳ್ಳುವವರು ಆರೋಗ್ಯದ ಮೇಲೆ ನಿಗಾ ಇಡಲೇಬೇಕಾದ್ದು ಅನಿವಾರ್ಯ. ದೇಹದಲ್ಲಿ ಉರಿಯೂತ ಇರುವವರಿಗೆ ಕಡಿಮೆ ಪ್ರಮಾಣದಲ್ಲಿ ಸ್ಟೆರಾಯ್ಡ್‌ ನುಂಗಿದರೂ ಆಪತ್ತು ಎದುರಾಗಬಹುದು. ರುಮಟಾಯ್ಡ್‌ ಆರ್ಥರೈಟಿಸ್‌, ಪಾರ್ಶ್ವವಾಯು, ಹೃದ್ರೋಗಗಳು ವಕ್ಕರಿಸಬಹುದು.

ಇದನ್ನೂ ಓದಿ: ಲಲಿತ್‌ ಮೋದಿ ಜತೆ ಡೇಟಿಂಗ್‌: ಕೊನೆಗೂ ಮೌನ ಮುರಿದ ಸುಶ್ಮಿತಾ ಸೇನ್‌ ಹೇಳಿದ್ದೇನು?

ಜೀವನಶೈಲಿಯ ಬಗ್ಗೆ ಪ್ರೀತಿ, ಆಸ್ಥೆ ಬೇಕು. ಸತ್ವಭರಿತ, ಸಮತೋಲಿತ ಆಹಾರ ಅಗತ್ಯ. ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡುವುದು ಕಡ್ಡಾಯ. ಒತ್ತಡ ಇಲ್ಲದಂತೆ ಬದುಕು ನಿರ್ವಹಿಸುವುದು ಯಾವ ಔಷಧಿಯೂ ನೀಡದಂಥ ಟಾನಿಕ್ಕನ್ನು ಜೀವಕ್ಕೆ ನೀಡುತ್ತದೆ. ಅದರಲ್ಲೂ ಕೋವಿಡ್‌ ನಂತರದ ದಿನಗಳಲ್ಲಿ ಆಟೋ ಇಮ್ಯೂನ್‌ ರೋಗಗಳ ಪ್ರಮಾಣ ದಿಢೀರನೆ ಹೆಚ್ಚಿರುವ ಹಿನ್ನೆಲೆಯಲ್ಲಿ ಇಂಥ ಧನಾತ್ಮಕ ಬದಲಾವಣೆ ಮಾಡಿಕೊಳ್ಳುವುದು ಆರೋಗ್ಯಕರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

Mr. & Mrs. Mahi: ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Mr. & Mrs. Mahi'
Koo

ಬೆಂಗಳೂರು: ಕ್ರಿಕೆಟ್​ ಭಾರತದಲ್ಲಿ ಒಂದು ಧರ್ಮ. ಎಲ್ಲರೂ ಒಂದಾಗುವ ಅಪರೂಪದ ಕ್ರೀಡೆ. ಅಂತೆಯೇ ಕ್ರಿಕೆಟ್​ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಿಡಿಸಲಾಗದ ನಟು. ಹೀಗಾಗಿ ಬಾಲಿವುಡ್​ ಸೇರಿದಂತೆ ನಾನಾ ಭಾಷೆಗಳ ಸಿನಿ ಇಂಡಸ್ಟ್ರಿಯಲ್ಲಿ ಕ್ರಿಕೆಟ್​ ಆಧಾರವಾಗಿಟ್ಟುಕೊಂಡು ಹಲವಾರು ಸಿನಿಮಾಗಳನ್ನು ತೆಗೆಯಲಾಗಿದೆ. ಅವುಗಳಲ್ಲಿ ಬಹುತೇಕ ಸಿನಿಮಾಗಳು ಸಕ್ಸೆಸ್​ ಆಗಿವೆ. ಅಂತೆಯೇ ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

ಈ ಯೋಜನೆಯ ಸುತ್ತ ತಿಂಗಳುಗಳ ಊಹಾಪೋಹಗಳಿವೆ. ಏತನ್ಮಧ್ಯೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಅಭಿಮಾನಿಗಳು ಅಂತಿಮವಾಗಿ ದೊಡ್ಡ ಪರದೆಯ ಮೇಲೆ ಜಾಹ್ನವಿ ಕಪೂರ್ ಅಭಿನಯ ನೋಡಲು ಕಾತರರಾಗಿದ್ದಾರೆ. ಅವರೆಲ್ಲರೂ ಅದಕ್ಕಾಗಿ ಕಾಯುತ್ತಿದ್ದಾರೆ.

ಇತ್ತೀಚೆಗೆ, ಜಾಹ್ನವಿ ಕಪೂರ್ ತಮ್ಮ ಮುಂಬರುವ ಚಿತ್ರದ ಪ್ರಚಾರದ ಕಾರಣಕ್ಕಾಗಿ ಈ ತಿಂಗಳ ಆರಂಭದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್​​ ಪಂದ್ಯವನ್ನು ವೀಕ್ಷಿಸಿದ್ದರು.

ಎಲ್ಲವೂ ಗುಟ್ಟು

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಸಿನಿಮಾ

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Laila Khan: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಪ್ರಕಟಿಸಿದೆ. 2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ.

VISTARANEWS.COM


on

Laila Khan
Koo

ಮುಂಬೈ: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ (Laila Khan) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ (Parvez Tak) ದೋಷಿ ಎಂದು ಪ್ರಕಟಿಸಿದೆ. ಘಟನೆ ನಡೆದು ಸುಮಾರು 13 ವರ್ಷಗಳ ಬಳಿಕ ಈ ತೀರ್ಪು ಹೊರಬಿದ್ದಿದೆ.

2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಅಚ್ಚರಿ ಎಂದರೆ ಪರ್ವೀನ್ ತಾಕ್ ಲೈಲಾ ಖಾನ್‌ ತಾಯಿ ಸೆಲೀನಾ ಅವರ ಮೂರನೇ ಪತಿ.

ಸೆಲೀನಾ ಹೆಸರಿನಲ್ಲಿರುವ ಭೂಮಿಗೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಮೊದಲು ಪರ್ವೀನ್ ತಾಕ್ ಪತ್ನಿ ಸೆಲೀನಾ ಅವರನ್ನು ಕೊಲೆ ಮಾಡಿದ್ದ. ಬಳಿಕ ಮನೆಯಲ್ಲಿದ್ದ ಲೈಲಾ ಖಾನ್‌ ಹಾಗೂ ಆಕೆಯ ನಾಲ್ವರು ಒಡಹುಟ್ಟಿದವರ ಹತ್ಯೆ ಮಾಡಿ ಪರಾರಿಯಾಗಿದ್ದ. 2012ರಲ್ಲಿ ಆತನನ್ನು ಬಂಧಿಸಲಾಗಿತ್ತು. ಮೇ 14ರಂದು ಕೋರ್ಟ್‌ ಶಿಕ್ಷೆ ಪ್ರಕಟಿಸಲಿದೆ.

ಘಟನೆಯ ವಿವರ

2011ರಲ್ಲಿ ಲೈಲಾ ಖಾನ್‌, ಆಕೆಯ ತಾಯಿ ಸೆಲೀನಾ ಮತ್ತು ಲೈಲಾ ಖಾನ್‌ ಒಡಹುಟ್ಟಿದವರಾದ ಆಮಿನಾ, ಅವಳಿಗಳಾದ ಝಾರ ಮತ್ತು ಇಮ್ರಾನ್‌, ಕಸಿನ್‌ ರೇಷ್ಮಾ ನಾಪತ್ತೆಯಾಗಿದ್ದಾರೆಂದು ಲೈಲಾ ಖಾನ್‌ ತಂದೆ ನಾದಿರ್‌ ಪಟೇಲ್‌ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ತನಿಖೆ ಆರಂಭವಾಗಿತ್ತು. ತನಿಖೆ ಭಾಗವಾಗಿ ನಾಸಿಕ್ ಬಳಿಯ ಇಗ್ತಪುರಿಯಲ್ಲಿರುವ ಕುಟುಂಬದ ತೋಟದ ಮನೆ ಪರಿಶೀಲಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಆ ಬಂಗಲೆ ಬೆಂಕಿಯಲ್ಲಿ ಭಾಗಶಃ ಹಾನಿಯಾಗಿತ್ತು. ಅಲ್ಲದೆ ಲೈಲಾ ಖಾನ್‌ ಅವರ ಮೊಬೈಲ್‌ ನಾಪತ್ತೆಯಾಗುವ ವೇಳೆ ನಾಸಿಕ್‌ನಲ್ಲೇ ಇತ್ತು ಎನ್ನುವುದು ಕಂಡು ಬಂದಿತ್ತು. ಇದೇ ವೇಳೆ ಲೈಲಾ ಖಾನ್‌ಗೆ ಸೇರಿದ ವಾಹನ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾಗಿತ್ತು. ಪರ್ವೀನ್ ತಾಕ್ ಮೂಲತಃ ಕಾಶ್ಮೀರದವನು. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಸಂಶಯ ಬಲವಾಗಿತ್ತು. ಬಳಿಕ ಆತನನ್ನು ಬಂಧಿಸಲಾಯಿತು. ಈ ವೇಳೆ ಆತ ಆಸ್ತಿ ವಿಚಾರದಲ್ಲಿ ಕೊಲೆ ಮಾಡಿರುವ ಸಂಗತಿ ಹೊರ ಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸೆಲೀನಾ ಅವರ ಇಬ್ಬರು ಮಾಜಿ ಪತಿಯರು ಸೇರಿದಂತೆ ಸುಮಾರು 40 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿತ್ತು.

ಲೈಲಾ ಖಾನ್‌ ಮೊದಲ ಬಾರಿಗೆ 2002ರಲ್ಲಿ ತೆರೆಕಂಡ ಜಗ್ಗೇಶ್‌ ಅಭಿನಯದ ʼಮೇಕಪ್‌ʼ ಕನ್ನಡ ಸಿನಿಮಾದಲ್ಲಿ ಲೈಲಾ ಪಟೇಲ್‌ ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಿರಲಿಲ್ಲ. ಬಳಿಕ ಲೈಲಾ 2008ರಲ್ಲಿ ರಾಜೇಶ್‌ ಖನ್ನಾ ನಟನೆಯ ʼವಫಾ: ಎ ಡೆಡ್ಲಿ ಲವ್‌ ಸ್ಟೋರಿʼ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿದ್ದರು. ಇದು ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಆದರೆ ಲೈಲಾಗೆ ಒಂದಷ್ಟು ಜನಪ್ರಿಯತೆ ತಂಡುಕೊಟ್ಟಿತ್ತು. ಲೈಲಾ ಬಾಂಗ್ಲಾ ದೇಶ ಮೂಲದ ಮುನೀರ್‌ ಖಾನ್‌ ಎನ್ನುವವನನ್ನು ವರಿಸಿದ್ದರು.

ಇದನ್ನೂ ಓದಿ: Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Continue Reading

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading
Advertisement
Viral News
ವೈರಲ್ ನ್ಯೂಸ್7 mins ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ27 mins ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Dolly Dhananjay Koti Movie Kannada First song will out
ಸ್ಯಾಂಡಲ್ ವುಡ್30 mins ago

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

esim cyber safety column
ಅಂಕಣ48 mins ago

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Nijjar Killing Case
ವಿದೇಶ1 hour ago

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

HD Revanna
ಪ್ರಮುಖ ಸುದ್ದಿ1 hour ago

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

Maggi Tragedy
ದೇಶ2 hours ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Viral News
ವೈರಲ್ ನ್ಯೂಸ್2 hours ago

Viral News: ಲಾರಿಗೆ ಡಿಕ್ಕಿ ಹೊಡೆಯಿತು ಕಂತೆ ಕಂತೆ ನಗದು ಸಾಗಿಸುತ್ತಿದ್ದ ವ್ಯಾನ್‌; ನೋಟಿನ ರಾಶಿ ಹೇಗಿದೆ ನೋಡಿ

Morning Tips
ಲೈಫ್‌ಸ್ಟೈಲ್3 hours ago

Morning Tips: ಬೆಳಗ್ಗೆ 7 ಗಂಟೆಯೊಳಗೆ ನೀವು ಈ 7 ಕೆಲಸಗಳನ್ನು ಮಾಡುತ್ತೀರಾ?

Karnataka Weather Forecast
ಮಳೆ4 hours ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು19 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌