Sushmita Sen: ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ ; ಈಗ ಹೇಗಿದ್ದಾರೆ ಮಾಜಿ ಭುವನ ಸುಂದರಿ? - Vistara News

ಬಾಲಿವುಡ್

Sushmita Sen: ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ ; ಈಗ ಹೇಗಿದ್ದಾರೆ ಮಾಜಿ ಭುವನ ಸುಂದರಿ?

47 ವರ್ಷದ ನಟಿ (Sushmita Sen) ಮಾರ್ಚ್‌ 2ರಂದು ಇನ್‌ಸ್ಟಾ ಮೂಲಕ ತಮ್ಮ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ತಂದೆ ಸುಬೀರ್ ಸೇನ್ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Sushmita Sen Reveals She Suffered A Heart Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ (Sushmita Sen) ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ಇನ್‌ಸ್ಟಾ ಮೂಲಕ ಹೇಳಿಕೊಂಡಿದ್ದಾರೆ. 47 ವರ್ಷದ ನಟಿ ಮಾರ್ಚ್‌ 2ರಂದು ಇನ್‌ಸ್ಟಾ ಮೂಲಕ ತಮ್ಮ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ತಂದೆ ಸುಬೀರ್ ಸೇನ್ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

ʻʻನನ್ನ ತಂದೆ ನನಗೆ ಯಾವಾಗಲೂ ನಿನ್ನ ಹೃದಯವನ್ನು ಸಂತೋಷದಿಂದ ಮತ್ತು ಧೈರ್ಯದಿಂದ ಇರಿಸಿಕೋ ಎನ್ನುತ್ತಿದ್ದರು. ನಾನು ಒಂದೆರಡು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದೆ. ಇದೀಗ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಸ್ಟೆಂಟ್ ಅಳವಡಿಸಿದ್ದಾರೆ. ಮತ್ತು ಮುಖ್ಯವಾಗಿ, ನನ್ನ ಹೃದ್ರೋಗ ತಜ್ಞರು ‘ನನಗೆ ದೊಡ್ಡ ಹೃದಯವಿದೆ’ ಎಂದು ಆಗಾಗ ಹೇಳುತ್ತಿರುತ್ತಾರೆ. ನಿಮ್ಮಲ್ಲರ ಹಾರೈಕೆಗೆ ನನ್ನ ಧನ್ಯವಾದಗಳುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲಲಿತ್‌ ಮೋದಿ ಜತೆ ಡೇಟಿಂಗ್‌: ಕೊನೆಗೂ ಮೌನ ಮುರಿದ ಸುಶ್ಮಿತಾ ಸೇನ್‌ ಹೇಳಿದ್ದೇನು?

ಸುಶ್ಮಿತಾ ಸೇನ್ ಪೋಸ್ಟ್‌

ಇನ್ನೊಂದು ಪೋಸ್ಟ್‌ನಲ್ಲಿ ಹಿತೈಷಿಗಳಿಗೆ ಧನ್ಯವಾದ ಅರ್ಪಿಸುತ್ತಾ, “ಈ ಪೋಸ್ಟ್ ನನ್ನ ಹಿತೈಷಿಗಳು ಮತ್ತು ಪ್ರೀತಿಪಾತ್ರರಿಗೆ. ನಾನು ಆರೋಗ್ಯವಾಗಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ. 1994 ರಲ್ಲಿ ಭುವನ ಸುಂದರಿ ಕಿರೀಟ ತೊಟ್ಟಿದ್ದ ಸುಶ್ಮಿತಾ ಸೇನ್, ನಂತರ ಬಾಲಿವುಡ್‌ನಲ್ಲಿ ಮಿಂಚಿದ್ದರು. ಹಲವಾರು ಹಿಟ್‌ ಸಿನಿಮಾಗಳನ್ನೂ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Priyanka Chopra: ಆಸ್ಟ್ರೇಲಿಯಾದ ಬೀಚ್‌ನಲ್ಲಿ ಅಮ್ಮನ ಸಿನಿ ತಂಡದ ಜತೆ ಎಂಜಾಯ್ ಮಾಡಿದ ಮಾಲತಿ ಮೇರಿ ಚೋಪ್ರಾ!

Priyanka Chopra: ಕಾರ್ಲ್ ಅರ್ಬನ್ ಕೂಡ ಈ ಸಿನಿಮಾ ಭಾಗವಾಗಿದ್ದಾರೆ. ರುಸ್ಸೋ ಬ್ರದರ್ಸ್ ಬ್ಯಾನರ್ ಎಜಿಬಿಒ ಸ್ಟುಡಿಯೋಸ್ ಮತ್ತು ಅಮೆಜಾನ್ ಎಂಜಿಎಂ ಸ್ಟುಡಿಯೋಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ನಿರ್ಮಾಪಕಿಯಾಗಿಯೂ ಪ್ರಿಯಾಂಕಾ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಅಮೆಜಾನ್ ಒರಿಜಿನಲ್ ಸರಣಿ ಸಿಟಾಡೆಲ್‌ನಲ್ಲಿ ನಟಿಸಿದ ನಂತರ ದಿ ರುಸ್ಸೋ ಬ್ರದರ್ಸ್‌ನೊಂದಿಗೆ ಇದು ಎರಡನೇ ಯೋಜನೆಯಾಗಿದೆ.

VISTARANEWS.COM


on

Priyanka Chopra The Bluff team Malti enjoys
Koo

ಬೆಂಗಳೂರು: `ದಿ ಬ್ಲಫ್’ ಚಿತ್ರದ ಶೂಟಿಂಗ್‌ಗಾಗಿ ಪ್ರಸ್ತುತ ಆಸ್ಟ್ರೇಲಿಯಾದಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಹೊಸ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಅವರು ಮಗಳು ಮಾಲತಿ ಮೇರಿ ಚೋಪ್ರಾ ಜೊನಾಸ್ ಮತ್ತು ಚಿತ್ರತಂಡದ ಜತೆ ಎಂಜಾಯ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಮಾಲತಿ ಅಮ್ಮನ ಜತೆ ಸಖತ್‌ ಚಿಲ್‌ ಮಾಡಿದ್ದಾಳೆ. ವಿಡಿಯೊದಲ್ಲಿ ಮಾಲತಿ ಟೀಂ ಜತೆ ಆಟವಾಡಿರುವ, ಹಣ್ಣುಗಳನ್ನು ತಿನ್ನುವುದು , ಬಳಿಕ ಪ್ರಿಯಾಂಕ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆ ಆಗಿವೆ. ಕ್ಲಿಪ್ ಉದ್ದಕ್ಕೂ, ಪ್ರಿಯಾಂಕಾ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಕ್ಲಿಪ್‌ನಲ್ಲಿ ಮಾಲತಿ ನೀಲಿ ಮತ್ತು ಗುಲಾಬಿ ಬಣ್ಣದ ಬಟ್ಟೆಗಳಲ್ಲಿ ಕಾಣಿಸಿಕೊಂಡಿದ್ದಾರೆ.

ವಿಡಿಯೊವನ್ನು ಹಂಚಿಕೊಂಡಿರುವ ಪ್ರಿಯಾಂಕಾ, “ನಾವು ಹೊಸ ಯೋಜನೆಯನ್ನು ಶುರು ಮಾಡಿದ್ದೇವೆ. ನಮ್ಮ ಕುಟುಂಬಗಳು ಮತ್ತು ಮನೆಗಳಿಂದ ದೂರವಿರುತ್ತೇವೆ. ಆದರೆ ನಮ್ಮ ಸುತ್ತ ಮುತ್ತ ಸುತ್ತುವರೆದಿರುವ ಪ್ರತಿಯೊಬ್ಬರೂ ಸಂತೋಷವನ್ನು ನೀಡುವಾಗ ಕಾಲ ಕಳೆಯುವುದು ಸುಲಭವಾಗುತ್ತದೆʼʼಎಂದು ಬರೆದುಕೊಂಡಿದ್ದಾರೆ,

ಕಾರ್ಲ್ ಅರ್ಬನ್ ಕೂಡ ಈ ಸಿನಿಮಾ ಭಾಗವಾಗಿದ್ದಾರೆ. ರುಸ್ಸೋ ಬ್ರದರ್ಸ್ ಬ್ಯಾನರ್ ಎಜಿಬಿಒ ಸ್ಟುಡಿಯೋಸ್ ಮತ್ತು ಅಮೆಜಾನ್ ಎಂಜಿಎಂ ಸ್ಟುಡಿಯೋಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ನಿರ್ಮಾಪಕಿಯಾಗಿಯೂ ಪ್ರಿಯಾಂಕಾ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಅಮೆಜಾನ್ ಒರಿಜಿನಲ್ ಸರಣಿ ಸಿಟಾಡೆಲ್‌ನಲ್ಲಿ ನಟಿಸಿದ ನಂತರ ದಿ ರುಸ್ಸೋ ಬ್ರದರ್ಸ್‌ನೊಂದಿಗೆ ಇದು ಎರಡನೇ ಯೋಜನೆಯಾಗಿದೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

2018ರಲ್ಲಿ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ 2022ರ ಜನವರಿಯಲ್ಲಿ ತಮಗೆ ಹೆಣ್ಣುಮಗು ಹುಟ್ಟಿದ್ದಾಗಿ ತಿಳಿಸಿದ್ದರು. ಹಾಗೇ, ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದಾಗಿಯೂ ಹೇಳಿದ್ದರು. ಪ್ರಿಯಾಂಕಾ ಚೋಪ್ರಾ ಆಗಾಗ ಮಗಳು ಮಾಲತಿ ಮೇರಿಯ ಕುರಿತಾದ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಅಮ್ಮನ ಜತೆ ಶಾಪಿಂಗ್ ಮಾಡುವುದರಿಂದ ಹಿಡಿದು ತಂದೆ ನಿಕ್‌ ಜೋನಾಸ್‌ ಜತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ತನಕ ಫ್ಯಾನ್ಸ್‌ ಹೃದಯ ಗೆಲ್ಲುತ್ತಲೇ ಇರುತ್ತಾಳೆ ಮಾಲತಿ.

Continue Reading

ಬಾಲಿವುಡ್

Sanjeeda Shaikh: ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಓಡಿದಳು ಎಂದ ಖ್ಯಾತ ನಟಿ!

Sanjeeda Shaikh: ʻಹೀರಾಮಂಡಿʼಯಲ್ಲಿ ಸದ್ಯ ನಟಿಸಿರುವ ನಟಿ ಸಂದರ್ಶನವೊಂದರಲ್ಲಿ ನೈಟ್ ಕ್ಲಬ್ ಅನುಭವವನ್ನ ಹಂಚಿಕೊಂಡಿದ್ದಾರೆ. ನನ್ನ ಬಳಿ ಬಂದ ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಮುಂದಕ್ಕೆ ಸಾಗಿದಳು (Sanjeeda Shaikh) ಎಂದಿದ್ದಾರೆ ಸಂಜೀದಾ ಶೇಖ್. ಕೇವಲ ಕನ್ನಡದಲ್ಲಿ ಅಷ್ಟೇ ಅಲ್ಲ ಬಾಲಿವುಡ್ ಮತ್ತು ಕಾಲಿವುಡ್‌ನಲ್ಲಿ ಕೂಡ ಕಾಣಿಸಿಕೊಂಡರು ಸಂಜೀದಾ . ಕಿರುತೆರೆಯತ್ತ ಮುಖ ಮಾಡಿದ್ದ ಸಂಜೀದಾ ಶೇಖ್ ಇಲ್ಲಿಯವರೆಗೆ ಹತ್ತಾರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

VISTARANEWS.COM


on

Sanjeeda Shaikh Says a Woman Groped Her
Koo

ಬೆಂಗಳೂರು: 2006ರಲ್ಲಿ ರವಿ ಗರಣಿ ನಿರ್ದೇಶಿಸಿದ್ದ, ಶಿವಧ್ವಜ್ ನಾಯಕರಾಗಿ ಅಭಿನಯಿಸಿದ್ದ `ಶುಭಂ’ ಚಿತ್ರದಲ್ಲಿ ಸಂಜೀದಾ ಶೇಖ್‌ ನಾಯಕಿಯ ಪಾತ್ರವನ್ನ ನಿರ್ವಹಿಸಿದ್ದರು. ʻಹೀರಾಮಂಡಿʼಯಲ್ಲಿ ಸದ್ಯ ನಟಿಸಿರುವ ನಟಿ ಸಂದರ್ಶನವೊಂದರಲ್ಲಿ ನೈಟ್ ಕ್ಲಬ್ ಅನುಭವವನ್ನ ಹಂಚಿಕೊಂಡಿದ್ದಾರೆ. ನನ್ನ ಬಳಿ ಬಂದ ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಮುಂದಕ್ಕೆ ಸಾಗಿದಳು (Sanjeeda Shaikh) ಎಂದಿದ್ದಾರೆ ಸಂಜೀದಾ ಶೇಖ್.

ನಟಿ ಸಂಜೀದಾ ಶೇಖ್ ಅವರು ನೈಟ್ ಕ್ಲಬ್‌ನಲ್ಲಿದ್ದಾಗ ನಡೆದ ಆಘಾತಕಾರಿ ಘಟನೆಯನ್ನು ಹಂಚಿಕೊಂಡಿದ್ದಾರೆ. ನಟಿ, ಸಂದರ್ಶನವೊಂದರಲ್ಲಿ, ಮಾತನಾಡಿ ʻʻನನಗೆ ಒಂದು ಘಟನೆ ಬಹಳ ನೆನಪಿದೆ. ಆದರೆ ಅದು ಹುಡುಗಿಯದು. ನಾನು ನೈಟ್‌ಕ್ಲಬ್‌ನಲ್ಲಿದ್ದೆ. ನನ್ನ ಬಳಿ ಬಂದ ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಮುಂದಕ್ಕೆ ಸಾಗಿದಳು, ಪುರುಷರು ಅನುಚಿತವಾಗಿ ವರ್ತಿಸುವುದು ಕೇಳಿದ್ದೇವೆ. ಆದರೆ ಮಹಿಳೆಯರು ಕಡಿಮೆ ಇಲ್ಲʼʼ ಎಂದು ಹೇಳಿದ್ದಾರೆ,

ಸಂಜೀದಾ ಮಾತು ಮುಂದುವರಿಸಿ,ʻʻತಪ್ಪು ಹಾದಿಯಲ್ಲಿ ಹೋಗಿದ್ದರೆ ಅದರಲ್ಲಿ ಗಂಡು-ಹೆಣ್ಣು ಎಂಬ ಭೇದ ಇಲ್ಲ ಎಂದಿದ್ದಾರೆ. ಖಾಸಗಿ ಭಾಗ ಟಚ್ ಮಾಡುವುದು ತಪ್ಪು. ಅದು ಯಾರೇ ಆಗಲಿ. ನಿಮ್ಮ ಜೊತೆ ಮಹಿಳೆ ತಪ್ಪಾಗಿ ನಡೆದುಕೊಂಡಿದ್ದರೆ ಪ್ರಶ್ನೆಯನ್ನ ಮಾಡಿ” ಎಂದು ಕೂಡ ಸಂಜೀದಾ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಅದೇ ಸಂದರ್ಶನದಲ್ಲಿ ಸಂಜೀದಾ ತಮ್ಮ ವಿಚ್ಛೇದನದ ಬಗ್ಗೆಯೂ ಮಾತನಾಡಿದ್ದಾರೆ. “ನನಗೆ ಈಗ ಏನೇ ಸಂಭವಿಸಿದರೂ ನಾನು ಅದೃಷ್ಟಶಾಲಿ. ಬಹುಶಃ ನಾನು ಖಿನ್ನತೆಗೆ ಒಳಗಾದ ವ್ಯಕ್ತಿ. ಪ್ರತಿ ಸಂಬಂಧದಲ್ಲಿ ನೀವು ಸಂತೋಷವಾಗಿರುವ ಹಂತಗಳಿವೆ. ಖುಷಿ ಇಲ್ಲದ ಹಂತಗಳು ಇವೆ. ಆದರೆ ನಿಮಗೆ ನೀವು ಮೊದಲು ಆದ್ಯತೆ ಕೊಟ್ಟುಕೊಳ್ಳಿʼʼಎಂದರು.

ಕೇವಲ ಕನ್ನಡದಲ್ಲಿ ಅಷ್ಟೇ ಅಲ್ಲ ಬಾಲಿವುಡ್ ಮತ್ತು ಕಾಲಿವುಡ್‌ನಲ್ಲಿ ಕೂಡ ಕಾಣಿಸಿಕೊಂಡರು ಸಂಜೀದಾ . ಕಿರುತೆರೆಯತ್ತ ಮುಖ ಮಾಡಿದ್ದ ಸಂಜೀದಾ ಶೇಖ್ ಇಲ್ಲಿಯವರೆಗೆ ಹತ್ತಾರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

Shah Rukh Khan: ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ.ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

VISTARANEWS.COM


on

Shah Rukh Khan looks Like Johnny Depp
Koo

ಬೆಂಗಳೂರು: ಶಾರುಖ್ ಖಾನ್ ಹಾಗೂ ಮಗ ಅಬ್ರಾಮ್ ಖಾನ್ ಇಟಲಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಎರಡನೇ ವಿವಾಹ ಪೂರ್ವ ಸಮಾರಂಭದಲ್ಲಿ ರಣಬೀರ್ ಕಪೂರ್ ಅವರೊಂದಿಗೆ ಮಾತನಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಇದೀಗ ಚರ್ಚೆಯಲ್ಲಿರುವುದು ಶಾರುಖ್ ಅವರ ವಿಭಿನ್ನ ಲುಕ್‌. ಶಾರುಖ್‌ ಅವರ ಈ ಲುಕ್‌ ಹಾಲಿವುಡ್ ನಟ ಜಾನಿ ಡೆಪ್‌ಗೆ (Johnny Depp) ಹೋಲಿಸುತ್ತಿದ್ದಾರೆ ಫ್ಯಾನ್ಸ್‌.

ಶಾರುಖ್ ಖಾನ್ ಬಿಳಿ ಸ್ಕಾರ್ಫ್ ಜತೆ ನೀಲಿ ಸೂಟ್ ಧರಿಸಿದ್ದರು. ಜಾನಿ ಡೆಪ್ ನೆನಪಿಸುವಂತೆ ಇತ್ತು ಶಾರುಖ್‌ ಹೇರ್‌ಸ್ಟೈಲ್‌. ʻಪೈರೇಟ್ಸ್ ಆಫ್ ದಿ ಕೆರೆಬಿಯನ್’ ಚಿತ್ರದ ಮೂಲಕ ಜಗತ್ತಿನಾದ್ಯಂತ ಮನೆಮಾತಾಗಿದ್ದಾರೆ ಜಾನಿ ಡೆಪ್. ಇಟಲಿಯ ರೋಮ್‌ನಲ್ಲಿ ಇತ್ತೀಚೆಗೆ ನಡೆದ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಭಾಗಿಯಾಗಿದ್ದರು. ಕುಟಂಬದ ಜತೆ ಸಖತ್‌ ಎಂಜಾಯ್‌ ಮಾಡಿದ್ದಾರೆ ಶಾರುಖ್‌. ಮಾರ್ಚ್ ಆರಂಭದಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನಗಳ ಅದ್ಧೂರಿ ವಿವಾಹ ಪೂರ್ವ ಆಚರಣೆಯ ನಂತರ, ಅಂಬಾನಿ ಕುಟುಂಬವು ಯುರೋಪ್‌ನಲ್ಲಿ ಕ್ರೂಸ್‌ ಪಾರ್ಟಿ ಆಯೋಜಿಸಿತ್ತು.

ಶಾರುಖ್, ರಣಬೀರ್ ಮತ್ತು ಅವರ ಕುಟುಂಬದವರಲ್ಲದೆ, ಸಲ್ಮಾನ್ ಖಾನ್, ಸಾರಾ ಅಲಿ ಖಾನ್, ಕರೀನಾ ಕಪೂರ್, ಇಬ್ರಾಹಿಂ ಅಲಿ ಖಾನ್, ಜಾಹ್ನವಿ ಕಪೂರ್, ಅನನ್ಯಾ ಪಾಂಡೆ, ಕರಣ್ ಜೋಹರ್, ದಿಶಾ ಪಟಾನಿ ಮತ್ತು ಕರಿಷ್ಮಾ ಕಪೂರ್ ಐಷಾರಾಮಿ ಕ್ರೂಸ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು.

ಇದನ್ನೂ ಓದಿ: Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

Continue Reading

ಬಾಲಿವುಡ್

Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

Raveena Tandon: ನಟಿ ರವೀನಾ ಟಂಡನ್ ವಿರುದ್ಧ ಖಾರ್ ಪೊಲೀಸರಿಗೆ ಸುಳ್ಳು ದೂರು ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ದೂರುದಾರರು ನಟಿ ಕುಡಿದು, ಅಶ್ಲೀಲವಾಗಿ ವಾಹನ ಚಲಾಯಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರವೀನಾ ಅವರ ಕಾರು ಯಾರಿಗೂ ಡಿಕ್ಕಿ ಮಾಡಿಲ್ಲ ಮತ್ತು ಅವರು ಕುಡಿದಿಲ್ಲ ಎಂದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Raveena Tandon Was Not Drunk False Complaint Filed
Koo

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿತ್ತು. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿರುವುದಾಗಿ (Raveena Tandon) ವರದಿಯಾಗಿತ್ತು. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಇದೆಲ್ಲ ಸುಳ್ಳು ತಿಳಿದು ಬಂದಿದೆ. ನಟಿ ರವೀನಾ ಟಂಡನ್ ವಿರುದ್ಧ ಖಾರ್ ಪೊಲೀಸರಿಗೆ ಸುಳ್ಳು ದೂರು ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ದೂರುದಾರರು ನಟಿ ಕುಡಿದು, ಅಶ್ಲೀಲವಾಗಿ ವಾಹನ ಚಲಾಯಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರವೀನಾ ಅವರ ಕಾರು ಯಾರಿಗೂ ಡಿಕ್ಕಿ ಮಾಡಿಲ್ಲ ಮತ್ತು ಅವರು ಕುಡಿದಿಲ್ಲ ಎಂದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ನಟಿ ಕೂಡ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರವೀನಾ ಟಂಡನ್ ಕುಡಿದಿರಲಿಲ್ಲ, ಸುಳ್ಳು ದೂರು ದಾಖಲಿಸಲಾಗಿದೆ. ದೂರುದಾರರು ಸುಳ್ಳು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜ್ತಿಲಕ್ ರೋಷನ್ ಈ ಬಗ್ಗೆ ಮಾತನಾಡಿ ʻʻದೂರುದಾರರು ಸುಳ್ಳು ದೂರು ನೀಡಿದ್ದಾರೆ. ನಾವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಆದರೆ ಕಾರು ಡಿಕ್ಕಿ ಹೊಡೆದಿರಲಿಲ್ಲ. ನಟಿ ರವೀನಾ ಟಂಡನ್ ಚಾಲಕನ ಪರ ಇದ್ದಾಗ ಸಾರ್ವಜನಿ ಕರು ನಟಿಯ ಮೇಲೆ ಮಾತಿಗಿಳಿದಿದ್ದಾರೆ. ಬಳಿಕ ರವೀನಾ ಟಂಡನ್ ಮತ್ತು ಕುಟುಂಬ ಇಬ್ಬರೂ ಖಾರ್ ಪೋಲೀಸ್ ಠಾಣೆಗೆ ಹೋಗಿ ಲಿಖಿತ ದೂರುಗಳನ್ನು ನೀಡಿದ್ದರು. ಇನ್ನು ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

ಏನಿದು ಪ್ರಕರಣ?

ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿತ್ತು. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿತ್ತು. ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿದ್ದರು. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಇತ್ತು.

ನಂತರ ಮಹಮ್ಮದ್ ಎನ್ನುವ ವ್ಯಕ್ತಿ ಈ ಘಟನೆಯನ್ನು ವಿವರಿಸಿದ್ದರು. ವಿಡಿಯೋದಲ್ಲಿ ಮಾತನಾಡಿದ ವ್ಯಕ್ತಿ ʻʻತನ್ನ ತಾಯಿ, ತಂಗಿ ಹಾಗೂ ಸೊಸೆ ರಿಜ್ವಿ ಕಾಲೆಜು ಬಳಿಯಲ್ಲಿ ಹೋಗುತ್ತಿರುವಾಗ ರವೀನಾ ಅವರ ಡ್ರೈವರ್ ತನ್ನ ತಾಯಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದಿದ್ದರು. ʻʻಚಾಲಕ ನನ್ನ ಸೊಸೆ ಮತ್ತು ನನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ರವೀನಾ ಕೂಡ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು. ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

Continue Reading
Advertisement
Udupi-Chikmagalur Lok Sabha constituency
ದೇಶ7 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Vasishta Simha Lovely Kannada Film Trailer Event
ಸ್ಯಾಂಡಲ್ ವುಡ್13 mins ago

Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

Heat wave
ದೇಶ13 mins ago

Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

Food Poisoning
ಮೈಸೂರು14 mins ago

Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Gold Rate Today
ಚಿನ್ನದ ದರ24 mins ago

Gold Rate Today: ಚಿನ್ನದ ಬೆಲೆ ಮತ್ತೂ ಇಳಿಕೆ; ಇಂದಿನ ಧಾರಣೆಯನ್ನು ಇಲ್ಲಿ ಗಮನಿಸಿ

karnataka Rain
ಮಳೆ34 mins ago

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Team India
ಪ್ರಮುಖ ಸುದ್ದಿ43 mins ago

Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

Priyanka Chopra The Bluff team Malti enjoys
ಬಾಲಿವುಡ್51 mins ago

Priyanka Chopra: ಆಸ್ಟ್ರೇಲಿಯಾದ ಬೀಚ್‌ನಲ್ಲಿ ಅಮ್ಮನ ಸಿನಿ ತಂಡದ ಜತೆ ಎಂಜಾಯ್ ಮಾಡಿದ ಮಾಲತಿ ಮೇರಿ ಚೋಪ್ರಾ!

George Fernandes ರಾಜಮಾರ್ಗ ಅಂಕಣ
ಅಂಕಣ52 mins ago

ರಾಜಮಾರ್ಗ ಅಂಕಣ: ಜಾರ್ಜ್ ಫರ್ನಾಂಡಿಸ್ ಮತ್ತು ಕೊಂಕಣ್ ರೈಲ್ವೆ ಎಂಬ ಮಹಾ ಕನಸು!

gold rate today
ಕರ್ನಾಟಕ60 mins ago

Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌