South Cinema
Actor Ashok Kumar: 10ನೇ ತರಗತಿಯಲ್ಲೇ ನಟಿ ರಂಜಿತಾ ಮೇಲೆ ಪ್ರೀತಿ; ನಿತ್ಯಾನಂದ ಮನಸೋತಿದ್ದು ಯಾತಕ್ಕೆ?
Actor Ashok Kumar: ಈ ಹಿಂದೆ ನಿತ್ಯಾನಂದ ಹಾಗೂ ರಂಜಿತಾ ಸ್ಟೋರಿ ಸುದ್ದಿಯಲ್ಲಿತ್ತು. ನಿತ್ಯಾನಂದ 10ನೇ ತರಗತಿಯಲ್ಲಿ ಇದ್ದಾಲೇ ರಂಜಿತಾಗೆ ಮನಸೋತಿರುವ ಸುದ್ದಿ ಇದೀಗ ವೈರಲ್ ಆಗುತ್ತಿದೆ.
ಬೆಂಗಳೂರು: ನಟ ಅಶೋಕ್ ಕುಮಾರ್ (Actor Ashok Kumar) ಸಂದರ್ಶನವೊಂದರಲ್ಲಿ, ತಮ್ಮ ಮಕ್ಕಳಿಬ್ಬರು ನಿತ್ಯಾನಂದ ಸ್ವಾಮಿಜಿ ಬಳಿ ಇದ್ದಾರೆ ಎಂಬ ವಿಚಾರವನ್ನು ಬಹಿರಂಗಪಡಿಸಿದ ಬಳಿಕ ರಂಜಿತಾ ಹಾಗೂ ನಿತ್ಯಾನಂದ ಲವ್ ಸ್ಟೋರಿ ಸಖತ್ ಚರ್ಚೆಯಾಗುತ್ತಿದೆ. ಈ ಹಿಂದೆ ನಿತ್ಯಾನಂದ ಹಾಗೂ ರಂಜಿತಾ ಸ್ಟೋರಿ ಸುದ್ದಯಲ್ಲಿತ್ತು. ನಿತ್ಯಾನಂದ 10ನೇ ತರಗತಿಯಲ್ಲಿ ಇದ್ದಾಲೇ ರಂಜಿತಾಗೆ ಮನಸೋತಿರುವ ಸುದ್ದಿ ಇದೀಗ ವೈರಲ್ ಆಗುತ್ತಿದೆ.
ಅಶೋಕ್ ಕುಮಾರ್ ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪೋಷಕ ನಟ, ವಿಲನ್ ಆಗಿ ಅಭಿನಯಿಸಿದ್ದಾರೆ. ಅಷ್ಟಾಗಿ ಅವಕಾಶ ಸಿಗದ ಕಾರಣದಿಂದ ಚಿತ್ರರಂಗದಿಂದ ದೂರ ಸರಿದ್ದರು. ಆದರೆ ಅಶೋಕ್ ಕುಮಾರ್ ಅವರ ಎರಡನೇ ಪುತ್ರಿ ರಂಜಿತಾ ಸಿನಿಮಾಗೆ ಎಂಟ್ರಿ ಕೊಟ್ಟಾಗ ಖುಷಿಪಟ್ಟಿದ್ದರು. ತಮಿಳಿನ ಜನಪ್ರಿಯ ನಿರ್ದೇಶಕ ಭಾರತಿರಾಜನ್ ನಿರ್ದೇಶಿಸಿದ ‘ನಾಡೋಡಿ ತೆಂಡ್ರಲ್’ನಲ್ಲಿ ನಾಯಕಿಯಾಗಿ ನಟಿಸಿದ್ದರು. ಆದರೆ ಈ ಸಿನಿಮಾ ನಿತ್ಯಾನಂದನನ್ನು ಹುಚ್ಚನನ್ನಾಗಿ ಮಾಡಿದ್ದಂತೆ.
10ನೇ ತರಗತಿಯಲ್ಲೇ ರಂಜಿತಾ ಮೇಲೆ ಲವ್
ನಿತ್ಯಾನಂದ 10ನೇ ತರಗತಿಯಲ್ಲೇ ರಂಜಿತಾ ಮೇಲೆ ಲವ್ ಆಗಿದ್ದಂತೆ. ನಿತ್ಯಾನಂದ 10ನೇ ತರಗತಿ ಓದುವಾಗ ‘ನಾಡೋಡಿ ತೆಂಡ್ರಲ್’ (nadodi thendral) ರಿಲೀಸ್ ಆಗಿತ್ತು. ಈ ಸಿನಿಮಾ ನೋಡಿದ್ದಾಗಿನಿಂದ ನಿತ್ಯಾನಂದ ರಂಜಿತಾ ಜಪಾ ಮಾಡಲು ಶುರು ಮಾಡಿದ್ದಲ್ಲದೇ ಬ್ಯಾಗ್ನಲ್ಲಿ ರಂಜಿತಾ ಫೋಟೊಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದ ಎಂದು ವರದಿಯಾಗಿದೆ.
ಇದನ್ನೂ ಓದಿ: Actor Ashok Kumar: ನನ್ನ ಮಕ್ಕಳಿಬ್ಬರೂ ನಿತ್ಯಾನಂದ ಸ್ವಾಮಿಜಿ ಬಳಿ ಇದ್ದಾರೆ; ನಟ ಅಶೋಕ್ ಕುಮಾರ್ ಭಾವುಕ!
ಆಧ್ಯಾತ್ಮದ ಬಗ್ಗೆ ನಂಬಿಕೆನೇ ಇರದ ರಂಜಿತಾಗೆ ಒಲವು ಮೂಡಿತ್ತಂತೆ
ನಿತ್ಯಾನಂದ 6ನೇ ತರಗತಿಯಲ್ಲಿರುವಾಗಲೇ ಸನ್ಯಾಸಿ ಆಗಬೇಕೆಂದು ನಿರ್ಧಾರ ಮಾಡಿದ್ದ. ಇತ್ತ ರಂಜಿತಾ ಮಿಲಿಟಿರಿ ಆಫೀಸರ್ ಪ್ರೀತಿಸಿ ಮದುವೆ ಆಗಿದ್ದರು. ರಂಜಿತಾ ಅಕ್ಕ ಮದುವೆ ಬಳಿಕ ಅಮೆರಿಕಾದಲ್ಲಿ ಇದ್ದರು. ಅಕ್ಕ ನಿತ್ಯಾನಂದನ ಭಕ್ತೆಯಾಗಿದ್ದರು. ಅಕ್ಕನೊಂದಿಗೆ ನಿತ್ಯಾನಂದನ ಆಶ್ರಮಕ್ಕೆ ಹೋಗಿದ್ದರು. ಅಲ್ಲಿವರೆಗೂ ಆಧ್ಯಾತ್ಮದ ಬಗ್ಗೆ ನಂಬಿಕೆನೇ ಇರದ ರಂಜಿತಾಗೆ ಒಲವು ಮೂಡುವುದಕ್ಕೆ ಶುರುವಾಗಿತ್ತು. ರಂಜಿತಾ ಹಾಗೂ ಅವರ ಅಕ್ಕ ನಿರ್ಮಲಾ ಇಬ್ಬರೂ ವಿಚ್ಛೇದನ ಪಡೆದು ನಿತ್ಯಾನಂದನ ಭಕ್ತೆಯಾದರು. ಇದನ್ನು ಸ್ವತಃ ಅಶೋಕ್ ಕುಮಾರ್ ಯೂಟ್ಯೂಬ್ ಚಾನೆಲ್ಗೆ ಮಾಹಿತಿ ನೀಡಿದ್ದಾರೆ.
ಅಶೋಕ್ ಕುಮಾರ್ ಹೇಳಿದ್ದೇನು?
ʻʻನನ್ನ ಮಕ್ಕಳಿಬ್ಬರು ಇವತ್ತಿಗೂ ನಿತ್ಯಾನಂದ ಸ್ವಾಮಿಜಿ ಅವರ ಬಳಿ ಇದ್ದಾರೆ. ಹುಡುಗಿ ಹೇಗಿದ್ದಾಳೆ ಎಂದು ನೋಡದೇ ನಾನು ಮದುವೆ ಆಗಿದ್ದೆ. ಮದುವೆ ಮಂಟಪದಲ್ಲಿ ಆಕೆಯನ್ನು ನೋಡಿದಾಗ ನನಗೆ ಇಷ್ಟವಾಗಲಿಲ್ಲ. ಆದರೆ ಬೇರೆ ವಿಧಿಯಿಲ್ಲದೇ ಮದುವೆ ಆಗುವಂತಾಯಿತು. ಇಷ್ಟವಿಲ್ಲದ ಮದುವೆ ಗೊಂದಲದ ನಡುವೆ ಪೊಲೀಸ್ ಕೆಲಸ ಬಿಟ್ಟೆ. ನಂತರ ನನ್ನ ತಪ್ಪಿನ ಅರಿವಾಗಿ ಆಕೆಯನ್ನು ಮದ್ರಾಸ್ಗೆ ಕರೆದುಕೊಂಡು ಹೋದೆ. ನಮಗೆ ಮೂರು ಜನ ಹೆಣ್ಣು ಮಕ್ಕಳು. ಅವರನ್ನು ಚೆನ್ನಾಗಿ ಓದಿಸಿದೆ. ಇಷ್ಟಪಟ್ಟವರ ಜೊತೆ ಮದುವೆ ಮಾಡಿಕೊಟ್ಟೆ. ಮೊದಲನೇ ಮಗಳು ಮದುವೆ ಆಗಿ ಅಮೆರಿಕಾದಲ್ಲಿ ಇದ್ದಳು. 2ನೇ ಮಗಳು ರಂಜಿತಾ, ನಿತ್ಯಾನಂದ ಸ್ವಾಮಿ ಜತೆ ಇದ್ದಾಳೆ. ರಂಜಿತಾ ಹಾಗೂ ನಿತ್ಯಾನಂದ ಸ್ವಾಮಿ ನಡುವಿನ ರಿಲೇಷನ್ಶಿಪ್ ಏನು ಎನ್ನುವುದು ಗೊತ್ತಿಲ್ಲ. ಆದರೆ ಆ ಫೋಟೊಗಳನ್ನು ನೋಡಿದರೆ ಏನು ಹೇಳಬೇಕು ಎನ್ನುವುದು ಅರ್ಥವಾಗುತ್ತಿಲ್ಲ” ಎಂದಿದ್ದರು.
ಮಕ್ಕಳ ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರು
“ಮೊದಲ ಮಗಳನ್ನು ಮದುವೆ ಮಾಡಿಕೊಟ್ಟ ಬಳಿಕ ಆಕೆ ಅಮೆರಿಕಾದಲ್ಲಿ ಇದ್ದಳು. ಆಗಲೇ ಆಕೆ ಅಲ್ಲಿ ನಿತ್ಯಾನಂದ ಸ್ವಾಮೀಜಿ ಪ್ರವಚನ ಕೇಳಲು ಹೋಗುತ್ತಿದ್ದಳು. ಅಕ್ಕನನ್ನು ನೋಡಲು ಹೋಗುತ್ತಿದ್ದ ರಂಜಿತಾ ಕೂಡ ಆಕೆಯ ಜತೆ ಆಶ್ರಮಕ್ಕೆ ಹೋಗಲು ಆರಂಭಿದಳು. ಮುಂದೆ ಅವರಿಬ್ಬರೂ ಗಂಡಂದಿರಿಗೆ ಡಿವೋರ್ಸ್ ಕೊಟ್ಟು ಆಶ್ರಮ ಸೇರಿದರು. ಇವತ್ತಿಗೂ ನನ್ನ ಮಕ್ಕಳು ಆಶ್ರಮದಲ್ಲಿಯೇ ಇದ್ದಾರೆ. ಇಂದಿಗೂ ನನ್ನ ಇಬ್ಬರೂ ಮಕ್ಕಳು ನನಗೆ ಕರೆ ಮಾಡುವುದಿಲ್ಲ. ನಮ್ಮ 3ನೇ ಮಗಳು ನನ್ನನ್ನು ನೋಡಿಕೊಳ್ಳುತ್ತಿದ್ದಾಳೆ. ಇಬ್ಬರು ಮಕ್ಕಳ ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರುʼʼ ಎಂದು ಅಶೋಕ್ ಕುಮಾರ್ ಭಾವುಕರಾಗಿದ್ದರು.
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
South Cinema
Kannada New Movie: ಮೊದಲ ಬಾರಿಗೆ ಗುಜರಾತಿ ಸಿನಿಮಾ ಕನ್ನಡದಲ್ಲಿ!
Kannada New Movie: ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು.
ಬೆಂಗಳೂರು: ‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ (Kannada New Movie) ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ.
`ವರ ಪಧಾರವೋ ಸಾವಧಾನ; ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು. ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಕನ್ನಡ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ.
ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Kannada New Movie: ‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ
ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ. ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ಕರ್ನಾಟಕ8 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ದೇಶ19 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ11 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ