Tamannaah Bhatia: ʻನೈಸ್ ಜೋಡಿʼ ಎನ್ನುತ್ತಿದ್ದಂತೆ ನಾಚಿಕೊಂಡ ತಮನ್ನಾ-ವಿಜಯ್ ವರ್ಮಾ! Vistara News

ಬಾಲಿವುಡ್

Tamannaah Bhatia: ʻನೈಸ್ ಜೋಡಿʼ ಎನ್ನುತ್ತಿದ್ದಂತೆ ನಾಚಿಕೊಂಡ ತಮನ್ನಾ-ವಿಜಯ್ ವರ್ಮಾ!

ತಮನ್ನಾ ಭಾಟಿಯಾ (Tamannaah Bhatia) ಮತ್ತು ವಿಜಯ್ ವರ್ಮಾ (Vijay Varma ) ಜೋಡಿ ಈ ವರ್ಷದ ಆರಂಭದಲ್ಲಿ ತಮ್ಮ ರಿಲೇಶನ್‌ಶಿಪ್‌ ಬಗ್ಗೆ ಸಾರ್ವಜನಿಕವಾಗಿ ಹೇಳಿಕೊಂಡಿತ್ತು. ಈಗಾಗಲೇ ಮದುವೆ ಬಗ್ಗೆ ಪೋಷಕರು ತಮನ್ನಾಗೆ ಒತ್ತಡ ಹೇರುತ್ತಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Tamannaah Bhatia and Vijay Varma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮನ್ನಾ ಭಾಟಿಯಾ (Tamannaah Bhatia) ಮತ್ತು ವಿಜಯ್ ವರ್ಮಾ ಸಿನಿರಂಗದಲ್ಲಿ ಕ್ಯೂಟ್‌ ಜೋಡಿಗಳಲ್ಲಿ ಒಂದಾಗಿದೆ. ಇಬ್ಬರೂ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ. ಸಾರ್ವಜನಿಕವಾಗಿ ಪರಸ್ಪರ ಪ್ರೀತಿಯನ್ನು ವ್ಯಕ್ತಪಡಿಸಲು ಅವರು ಎಂದಿಗೂ ಹಿಂಜರಿಯುವುದಿಲ್ಲ. ನವೆಂಬರ್‌ 20ರ ರಾತ್ರಿ, ಮುಂಬೈನಲ್ಲಿ ಜೈದೀಪ್ ಅಹ್ಲಾವತ್ ಪತ್ನಿಯ ಹುಟ್ಟುಹಬ್ಬದ ಸಮಾರಂಭದಲ್ಲಿ ತಮನ್ನಾ ಮತ್ತು ವಿಜಯ್ ಪಾಲ್ಗೊಂಡಿದ್ದರು. ಇಬ್ಬರೂ ಫೋಟೊಗ್ರಫಾರ್‌ಗಳಿಗೆ ಪೋಸ್‌ ಕೊಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವಿಡಿಯೊದಲ್ಲಿ, ತಮನ್ನಾ ಮತ್ತು ವಿಜಯ್ ಕಪ್ಪು ಬಣ್ಣದಲ್ಲಿ ಟ್ವಿನ್ನಿಂಗ್‌ ಆಗಿ ಪೋಸ್ ನೀಡಿದ್ದಾರೆ.

ತಮನ್ನಾ ಸರಳವಾದ ಕಪ್ಪು ಉಡುಪನ್ನು ಧರಿಸಿದ್ದರು. ಎಂದಿನಂತೆ ಸುಂದರವಾಗಿ ಕಾಣುತ್ತಿದ್ದರು. ಮತ್ತೊಂದೆಡೆ, ವಿಜಯ್ ಮ್ಯಾಚಿಂಗ್ ಜೀನ್ಸ್‌ನೊಂದಿಗೆ ಕಪ್ಪು ಸ್ವೆಟ್‌ಶರ್ಟ್‌ನೊಂದಿಗೆ ಕಾಣಿಸಿಕೊಂಡರು. ಇಬ್ಬರು ಪಾಪರಾಜಿಗಳಿಗೆ ಪೋಸ್ ನೀಡಿದರು. ಫೋಟೊಗ್ರಾಫರ್‌ಗಳು “ನೈಸ್ ಜೋಡಿ” ಎಂದು ಕರೆಯುತ್ತಿದ್ದಂತೆ ಜೋಡಿ ನಾಚಿಕೊಂಡಿದೆ.

ತಮನ್ನಾ ಭಾಟಿಯಾ (Tamannaah Bhatia) ಮತ್ತು ವಿಜಯ್ ವರ್ಮಾ (Vijay Varma ) ಜೋಡಿ ಈ ವರ್ಷದ ಆರಂಭದಲ್ಲಿ ತಮ್ಮ ರಿಲೇಶನ್‌ಶಿಪ್‌ ಬಗ್ಗೆ ಸಾರ್ವಜನಿಕವಾಗಿ ಹೇಳಿಕೊಂಡಿತ್ತು. ಇದಾದ ಬಳಿಕ ಜೋಡಿಗೆ ಫ್ಯಾನ್ಸ್‌ ಮದುವೆ ಯಾವಾಗ ಎಂಬ ಪ್ರಶ್ನೆಯನ್ನು ಸೋಷಿಯಲ್‌ ಮೀಡಿಯಾದಲ್ಲಿ ಕೇಳುತ್ತಲೇ ಇದ್ದರು. ಇತ್ತೀಚಿನ ವರದಿಗಳ ಪ್ರಕಾರ ಜೋಡಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ ಎನ್ನಲಾಗಿದೆ. ಈಗಾಗಲೇ ಮದುವೆ ಬಗ್ಗೆ ಪೋಷಕರು ತಮನ್ನಾಗೆ ಒತ್ತಡ ಹೇರುತ್ತಿದ್ದಾರೆ ಎಂದು ವರದಿಯಾಗಿದೆ.

ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ‘ಲಸ್ಟ್ ಸ್ಟೋರೀಸ್ 2’ ಬಿಡುಗಡೆಯ ಸಮಯದಲ್ಲಿ ಸಾರ್ವಜನಿಕವಾಗಿ ರಿಲೇಶನ್‌ಶಿಪ್‌ ಬಗ್ಗೆ ಅಧಿಕೃತಗೊಳಿಸಿದ್ದರು. ತಮನ್ನಾ ಮದುವೆಯಾಗುವಂತೆ ಪೋಷಕರಿಂದ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ‘ಭೋಲಾ ಶಂಕರ್’ ಮತ್ತು ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದ ‘ಕಾವಲಾ’ ಹಾಡಿನ ನಂತರ ನಟಿ ಯಾವುದೇ ಹೊಸ ಪ್ರಾಜೆಕ್ಟ್‌ಗಳನ್ನು ಕೈಗೆತ್ತಿಕೊಂಡಿಲ್ಲ. ಹೀಗಿರುವಾಗ ನಟಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದು ದಟ್ಟವಾದಂತಿದೆ.

ಇದನ್ನೂ ಓದಿ: Tamannaah Bhatia: ತಮನ್ನಾಗೆ ಕುಟುಂಬದಿಂದ ಒತ್ತಡ? ಶೀಘ್ರದಲ್ಲೇ ಹಸೆಮಣೆಗೆ ಮಿಲ್ಕಿ ಬ್ಯೂಟಿ!

ತಮನ್ನಾ (tamanna) ಈ ಹಿಂದೆ ವಿಜಯ್‌ ವರ್ಮಾ ಕುರಿತು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಮಾತನಾಡಿ ʻʻಅವರ ಜತೆ ಇದ್ದರೆ ನಾನು ಅತ್ಯಂತ ಸಂತೋಷವಾಗಿರುತ್ತೇನೆ. ಅವರು ಒಳ್ಳೆಯ ಮನುಷ್ಯ. ನನ್ನ ಇಕ್ವಲ್‌ ಪಾರ್ಟ್‌ನರ್. ಯಾರೋ ಒಬ್ಬರು ನಿಮ್ಮ ಸಹನಟರಾಗಿದ್ದ ಮಾತ್ರಕ್ಕೆ ಅವರೊಡನೆ ಆಕರ್ಷಿತರಾಗಲು ಸಾಧ್ಯವಿಲ್ಲ. ಏಕೆಂದರೆ ನಾನು ಈಗಾಗಲೇ ಹಲವಾರು ನಟರೊಡನೆ ನಟಿಸಿದ್ದೇನೆ. ಯಾರ ಕಡೆಗೂ ನಾನು ಆಕರ್ಷಿತಳಾಗಿಲ್ಲ. ಯಾರ ಬಗ್ಗೆಯಾದರೂ ನೀವು ನಿಜಕ್ಕೂ ಮನಸೋತಿರೆಂದರೆ, ಭಾವನೆಗಳು ಹುಟ್ಟಿದವೆಂದರೆ ಅದು ಬಹಳ ವೈಯಕ್ತಿಕವಾಗಿದೆ. ಯಶಸ್ವಿ ವ್ಯಕ್ತಿಯೋ ಎಂಬುದೆಲ್ಲವೂ ಗಣನೆಗೆ ಬರುವುದೇ ಇಲ್ಲ’ ಎಂದಿದ್ದರು. ಲಸ್ಟ್ ಸ್ಟೋರೀಸ್ 2 ಸೆಟ್‌ಗಳಲ್ಲಿ ವಿಜಯ್‌ ವರ್ಮಾ ಜತೆ ಪ್ರೀತಿ ಶುರುವಾಯಿತು ಎಂದು ನಟಿ ಹೇಳಿಕೊಂಡಿದ್ದರು.

ವಿಜಯ್‌ ತಮನ್ನಾ ಅವರನ್ನು ಪ್ರೀತಿಯಿಂದ ಟೊಮ್ಯಾಟೋ ಎಂದು ಕರೆಯುತ್ತಾರೆ. ಗೋವಾದಲ್ಲಿ ನಡೆದ ಹೊಸ ವರ್ಷದ ಪಾರ್ಟಿಯಲ್ಲಿ ವಿಜಯ್ ವರ್ಮಾ ಮತ್ತು ತಮನ್ನಾ ಭಾಟಿಯಾ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Animal Cast Fees: ‘ಅನಿಮಲ್’ ಚಿತ್ರಕ್ಕೆ ರಣಬೀರ್ ಕಪೂರ್ ಪಡೆದ ಸಂಭಾವನೆ ಎಷ್ಟು?

Animal Cast Fees: ಇದರ ಜತೆಗೆ ರಣಬೀರ್ ಕಪೂರ್, ಬಾಬಿ ಡಿಯೋಲ್, ರಶ್ಮಿಕಾ ಮಂದಣ್ಣ ಮತ್ತು ಅನಿಲ್ ಕಪೂರ್ ಈ ಸಿನಿಮಾಗಾಗಿ ಎಷ್ಟೆಲ್ಲ ಸಂಭಾವನೆ ಪಡೆದಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ.

VISTARANEWS.COM


on

Animal Cast Fees Ranbir Kapoor were paid
Koo

ಬೆಂಗಳೂರು: ರಣಬೀರ್ ಕಪೂರ್ (Animal Cast Fees) ಅಭಿನಯದ ಬಹುನಿರೀಕ್ಷಿತ ಚಿತ್ರ ಅನಿಮಲ್ ಡಿಸೆಂಬರ್ 1ರಂದು ಥಿಯೇಟರ್‌ಗೆ ಲಗ್ಗೆ ಇಟ್ಟು ಮೂರು ದಿನಗಳಲ್ಲಿ 200 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭಾರಿ ಪ್ರಶಂಸೆಯನ್ನು ಗಿಟ್ಟಿಸಿಕೊಂಡಿದೆ ಸಿನಿಮಾ. ಇದರ ಜತೆಗೆ ರಣಬೀರ್ ಕಪೂರ್, ಬಾಬಿ ಡಿಯೋಲ್, ರಶ್ಮಿಕಾ ಮಂದಣ್ಣ ಮತ್ತು ಅನಿಲ್ ಕಪೂರ್ ಈ ಸಿನಿಮಾಗಾಗಿ ಎಷ್ಟೆಲ್ಲ ಸಂಭಾವನೆ ಪಡೆದಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ.

ಈ ಮುಂಚೆ ರಣಬೀರ್ ಕಪೂರ್ ಈ ಸಿನಿಮಾಗಾಗಿ 30 – 35 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮವೊಂದು ಪ್ರತ್ಯೇಕವಾಗಿ ವರದಿ ಮಾಡಿತ್ತು. ಪ್ರತಿ ಚಿತ್ರಕ್ಕೆ 70 ಕೋಟಿ ರೂ. ಸಂಭಾವನೆಯನ್ನು ರಣಬೀರ್ ಕಪೂರ್ ಪಡೆಯುತ್ತಿದ್ದಾರೆ ಎಂತಲೂ ವರದಿಯಿದೆ. ಆದರೆ ಅನಿಮಲ್‌ ನಿರ್ಮಾಪಕರಾದ ಭೂಷಣ್ ಕುಮಾರ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರಿಗೆ ಬೆಂಬಲ ಸೂಚಿಸಿ, ಕಪೂರ್ ತಮ್ಮ ಸಂಭಾವನೆಯನ್ನು ಶೇ. 50ರಷ್ಟು ಕಡಿಮೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಾಬಿ ಡಿಯೋಲ್ 4-5 ಕೋಟಿ ರೂ., ರಶ್ಮಿಕಾ ಮಂದಣ್ಣ ಅವರಂತಹ ಇತರ ಪಾತ್ರವರ್ಗದವರು 4 ರೂ. ಕೋಟಿ, ಮತ್ತು ಅನಿಲ್ ಕಪೂರ್ 2 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎನ್ನಲಾಗಿದೆ.

ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರ (Animal Box Office) ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ. ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ, ಸಿನಿಮಾ ಭಾರತದಲ್ಲಿ 200 ಕೋಟಿ ರೂ. ಗಡಿ ದಾಟಲು ಯಶಸ್ವಿಯಾಗಿದೆ. ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಸಿನಿಮಾ ಕೂಡ ಅಂದೇ ರಿಲೀಸ್‌ ಆಗಿದ್ದು, ಅನಿಮಲ್‌ ಸಿನಿಮಾ ಜಯಭೇರಿ ಬಾರಿಸಿದೆ.

ಇದನ್ನೂ ಓದಿ: Animal Box Office: ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ರೂ. ಕ್ಲಬ್‌ ಸೇರಿಯೇ ಬಿಟ್ಟಿತು; ‌ʻಅನಿಮಲ್‌ʼ ಕಮಾಲ್!

ಆರಂಭಿಕ ಅಂದಾಜಿನ ಪ್ರಕಾರ, ಚಿತ್ರವು ಮೂರನೇ ದಿನಕ್ಕೆ ಭಾರತದಲ್ಲಿ 72.50 ಕೋಟಿ ರೂ. ಗಳಿಸಿದೆ. ಡಿಸೆಂಬರ್ 3 ರಂದು ‘ಅನಿಮಲ್’ ಶೇ. 79.0 ರಷ್ಟು ಹಿಂದಿ ಆಕ್ಯುಪೆನ್ಸಿಯನ್ನು ಹೊಂದಿತ್ತು ಎಂದು ವರದಿಯಾಗಿದೆ. ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿತ್ತು.

ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿತ್ತು. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿತ್ತು. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

Continue Reading

ಬಾಲಿವುಡ್

Animal Box Office: 200 ಕೋಟಿ ರೂ. ಗಡಿ ದಾಟಿದ ʻಅನಿಮಲ್‌ʼ!

Animal Box Office : ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಸಿನಿಮಾ ಕೂಡ ಅಂದೇ ರಿಲೀಸ್‌ ಆಗಿದ್ದು, ಅನಿಮಲ್‌ ಸಿನಿಮಾ ಜಯಭೇರಿ ಬಾರಿಸಿದೆ. . ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿತ್ತು.

VISTARANEWS.COM


on

Ranbir Kapoor film crosses Rs 200 crore
Koo

ಬೆಂಗಳೂರು: ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರ (Animal Box Office) ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ. ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ, ಸಿನಿಮಾ ಭಾರತದಲ್ಲಿ 200 ಕೋಟಿ ರೂ. ಗಡಿ ದಾಟಲು ಯಶಸ್ವಿಯಾಗಿದೆ. ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಸಿನಿಮಾ ಕೂಡ ಅಂದೇ ರಿಲೀಸ್‌ ಆಗಿದ್ದು, ಅನಿಮಲ್‌ ಸಿನಿಮಾ ಜಯಭೇರಿ ಬಾರಿಸಿದೆ.

ಆರಂಭಿಕ ಅಂದಾಜಿನ ಪ್ರಕಾರ, ಚಿತ್ರವು ಮೂರನೇ ದಿನಕ್ಕೆ ಭಾರತದಲ್ಲಿ 72.50 ಕೋಟಿ ರೂ. ಗಳಿಸಿದೆ. ಡಿಸೆಂಬರ್ 3 ರಂದು ‘ಅನಿಮಲ್’ ಶೇಕಡಾ 79.0 ರಷ್ಟು ಹಿಂದಿ ಆಕ್ಯುಪೆನ್ಸಿಯನ್ನು ಹೊಂದಿತ್ತು ಎಂದು ವರದಿಯಾಗಿದೆ. ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿತ್ತು.

ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿತ್ತು. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿತ್ತು. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

ಇದನ್ನೂ ಓದಿ: Animal Box Office: ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ರೂ. ಕ್ಲಬ್‌ ಸೇರಿಯೇ ಬಿಟ್ಟಿತು; ‌ʻಅನಿಮಲ್‌ʼ ಕಮಾಲ್!

ಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

ನಟ ಬಾಬಿ ಡಿಯೋಲ್ (Bobby Deol) ಅವರು ʻಅನಿಮಲ್‌ʼ ಸಿನಿಮಾ ನಟನೆಗಾಗಿ ಭಾರಿ ಮೆಚ್ಚುಗೆ ಗಳಿಸುತ್ತಿದ್ದಾರೆ. ಬಾಬಿ ಡಿಯೋಲ್ ಫ್ಯಾನ್ಸ್‌ ಸೋಷಿಯಲ್‌ ಮೀಡಿಯಾ ಮೂಲಕ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಅನಿಲ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ಇದ್ದಾರೆ. ಇದೀಗ ಬಾಬಿ ಡಿಯೋಲ್ ಅವರಿಗೆ ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ ನಟ ಭಾವುಕರಾದರು. ನಟ ಕಣ್ಣೀರಿಟ್ಟ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಮುಂಬೈನಲ್ಲಿ ನಟ ಬಾಬಿ ಡಿಯೋಲ್ ಕಾಣಿಸಿಕೊಂಡಾಗ ಮೆಚ್ಚುಗೆಯ ವಿಮರ್ಶೆಗಳಿಗೆ ಪ್ರತಿಕ್ರಿಯಿಸಿದ್ದರು. ಬೂದು ಬಣ್ಣದ ಹೂಡಿ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದರು. ಬಾಬಿ ಡಿಯೋಲ್ ಅವರು ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ “ತುಂಬಾ ಧನ್ಯವಾದಗಳು. ದೇವರು ನಿಜವಾಗಿಯೂ ದಯೆ ತೋರಿದ್ದಾನೆ. ನಮ್ಮ ಚಿತ್ರ ಪಡೆಯುತ್ತಿರುವ ಪ್ರೀತಿ ಕನಸಿನಂತೆ ಭಾಸವಾಗುತ್ತಿದೆ” ಎಂದು ಭಾವುಕರಾಗಿದ್ದರು. ನಟನ ಸಿಬ್ಬಂದಿ ಮತ್ತು ಚಿತ್ರ ತಂಡವು ನಟನನ್ನು ಸಾಂತ್ವನಗೊಳಿಸುತ್ತಿರುವ ವಿಡಿಯೊ ವೈರಲ್‌ ಆಗಿತ್ತು.

Continue Reading

ಕ್ರಿಕೆಟ್

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Sachin Tendulkar: ವಿಕ್ಕಿ ಅವರು ಸಚಿನ್‌ ತೆಂಡೂಲ್ಕರ್ ಅವರೊಂದಿಗಿನ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತೆಂಡೂಲ್ಕರ್ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಜತೆಗಿದ್ದರು. ಸ್ಕ್ರೀನಿಂಗ್‌ ಆದ ಬಳಿಕ ಸಚಿನ್ ತೆಂಡೂಲ್ಕರ್ ಜತೆ ವಿಕ್ಕಿ ಪೋಸ್ ನೀಡಿದ್ದಾರೆ.

VISTARANEWS.COM


on

Sachin Tendulkar says he is super impressed by Vicky Kaushal
Koo

ಬೆಂಗಳೂರು: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಡಿಸೆಂಬರ್‌ 2ರ ರಾತ್ರಿ ನಟ ವಿಕ್ಕಿ ಕೌಶಲ್ ಅವರ ʻಸ್ಯಾಮ್ ಬಹದ್ದೂರ್‌ʼ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ತೆಂಡೂಲ್ಕರ್ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಜತೆಗಿದ್ದರು. ಸ್ಕ್ರೀನಿಂಗ್‌ ಆದ ಬಳಿಕ ಸಚಿನ್ ತೆಂಡೂಲ್ಕರ್ ಜತೆ ವಿಕ್ಕಿ ಪೋಸ್ ನೀಡಿದ್ದಾರೆ.

ಸಚಿನ್ ಚಿತ್ರವನ್ನು ಕಂಡು “ಇದು ತುಂಬಾ ಒಳ್ಳೆಯ ಸಿನಿಮಾ. ವಿಕ್ಕಿ ಅವರ ನಟನೆಯಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಫೀಲ್ಡ್ ಮಾರ್ಷಲ್ ಸ್ಯಾಮ್ ನಿಜವಾಗಿಯೂ ಇದ್ದಂತೆ ಭಾಸವಾಯಿತು. ನಮ್ಮ ದೇಶದ ಇತಿಹಾಸ ತಿಳಿಯಲು ಎಲ್ಲಾ ಜನರೇಶನ್‌ ಅವರಿಗೆ ಪ್ರಮುಖ ಚಿತ್ರವಾಗಿದೆʼʼ ಎಂದು ಮಾಧ್ಯಮದ ಮುಂದೆ ಹೇಳಿಕೊಂಡರು.

ವಿಕ್ಕಿ ಅವರು ಸಚಿನ್‌ ತೆಂಡೂಲ್ಕರ್ ಅವರೊಂದಿಗಿನ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಬಾಲ್ಯದ ಹೀರೊ ಇಂದು ನನ್ನ ಸಿನಿಮಾವನ್ನು ನೋಡಿದ್ದಾರೆ. ಧನ್ಯವಾದಗಳು ಸಚಿನ್‌ ಸರ್. ನಿಮ್ಮ ಮಾತುಗಳಿಗೆʼʼಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಬಹದ್ದೂರ್‌ ಭಾರತದಲ್ಲಿ ಮೊದಲ ದಿನದಂದು 5.50 ಕೋಟಿ ರೂ. ಗಳನ್ನು ಗಳಿಸಿತು. ಭಾರತದಲ್ಲಿ ಶನಿವಾರ 9.25 ಕೋಟಿ ರೂ. ನಿವ್ವಳ ಗಳಿಸಿದೆ ಎಂದೂ ವರದಿಯಾಗಿದೆ. ಡಿಸೆಂಬರ್ 2ರಂದು ಚಿತ್ರದ ಒಟ್ಟು ಕಲೆಕ್ಷನ್‌ 15.5 ಕೋಟಿ ರೂ. ಆಗಿದೆ ಎಂದು ವರದಿಯಾಗಿದೆ.

ಮೇಘನಾ ಗುಲ್ಜಾರ್ ನಿರ್ದೇಶಿಸಿದ ಈ ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ತೆಂಡೂಲ್ಕರ್ ಜತೆಗೆ ಕ್ರಿಕೆಟಿಗರಾದ ಜಹೀರ್ ಖಾನ್ ಮತ್ತು ಅಜಿತ್ ಅಗರ್ಕರ್ ಕೂಡ ಪ್ರದರ್ಶನದಲ್ಲಿ ಹಾಜರಾಗಿದ್ದರು.

ಮೇಘನಾ ಗುಲ್ಜಾರ್ ನಿರ್ದೇಶನದ ಚಿತ್ರ, ರಣಬೀರ್ ಕಪೂರ್ ಅವರ ‘ಅನಿಮಲ್‌ ಸಿನಿಮಾ ಜತೆ ಕ್ಲಾಶ್‌ ಆಗಿದೆ. ‘ವಿಕ್ಕಿ ಹೊರತುಪಡಿಸಿ, ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇದನ್ನೂ ಓದಿ: Sachin Tendulkar : ಲಂಕಾ ವಿರುದ್ಧ ಪಂದ್ಯದ ಬೆಸ್ಟ್​ ಫೀಲ್ಡರ್ ಯಾರೆಂದು ಘೋಷಿಸಿದ ಸಚಿನ್​ ತೆಂಡೂಲ್ಕರ್​

ದೇಶದ ಮೊದಲ ಫೀಲ್ಡ್‌ ಮಾರ್ಷಲ್‌ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್‌ ಮಾಣೆಕ್‌ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ವಿಕ್ಕಿ ಕೌಶಲ್ ಅಭಿನಯದ ಸ್ಯಾಮ್ ಬಹದ್ದೂರ್ ದೇಶದ ಮೊದಲ ಫೀಲ್ಡ್‌ ಮಾರ್ಷಲ್‌ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್‌ ಮಾಣೆಕ್‌ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ಸ್ಯಾಮ್‌ ಮಾಣೆಕ್‌ ಶಾ ಅವರು ಫೀಲ್ಡ್‌ ಮಾರ್ಷಲ್‌ ಹುದ್ದೆಗೇರಿದ ಮೊದಲ ಭಾರತೀಯ ಸೇನಾ ಅಧಿಕಾರಿ. ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ತಮ್ಮ ಮಿಲಿಟರಿ ವೃತ್ತಿಜೀವನವನ್ನು ಪ್ರಾರಂಭಿಸಿ, ನಾಲ್ಕು ದಶಕಗಳ ಕಾಲ. ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಐದು ಯುದ್ಧಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Continue Reading

ಬಾಲಿವುಡ್

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

Bobby Deol: ಮುಂಬೈನಲ್ಲಿ ನಟ ಬಾಬಿ ಡಿಯೋಲ್ ಕಾಣಿಸಿಕೊಂಡಾಗ ಮೆಚ್ಚುಗೆಯ ವಿಮರ್ಶೆಗಳಿಗೆ ಪ್ರತಿಕ್ರಿಯಿಸಿದರು. ಬೂದು ಬಣ್ಣದ ಹೂಡಿಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ನಟ ಬಾಬಿ ಡಿಯೋಲ್ ಕಣ್ಣೀರಿಟ್ಟ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Bobby Deol cries after paparazzi praise him as Animal
Koo

ಬೆಂಗಳೂರು: ನಟ ಬಾಬಿ ಡಿಯೋಲ್ (Bobby Deol) ಅವರು ʻಅನಿಮಲ್‌ʼ ಸಿನಿಮಾ ನಟನೆಗಾಗಿ ಭಾರಿ ಮೆಚ್ಚುಗೆ ಗಳಿಸುತ್ತಿದ್ದಾರೆ. ಬಾಬಿ ಡಿಯೋಲ್ ಫ್ಯಾನ್ಸ್‌ ಸೋಷಿಯಲ್‌ ಮೀಡಿಯಾ ಮೂಲಕ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಅನಿಲ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ಇದ್ದಾರೆ. ಇದೀಗ ಬಾಬಿ ಡಿಯೋಲ್ ಅವರಿಗೆ ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ ನಟ ಭಾವುಕರಾದರು. ನಟ ಕಣ್ಣೀರಿಟ್ಟ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮುಂಬೈನಲ್ಲಿ ನಟ ಬಾಬಿ ಡಿಯೋಲ್ ಕಾಣಿಸಿಕೊಂಡಾಗ ಮೆಚ್ಚುಗೆಯ ವಿಮರ್ಶೆಗಳಿಗೆ ಪ್ರತಿಕ್ರಿಯಿಸಿದರು. ಬೂದು ಬಣ್ಣದ ಹೂಡಿ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಬಾಬಿ ಡಿಯೋಲ್ ಅವರು ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ “ತುಂಬಾ ಧನ್ಯವಾದಗಳು. ದೇವರು ನಿಜವಾಗಿಯೂ ದಯೆ ತೋರಿದ್ದಾನೆ. ನಮ್ಮ ಚಿತ್ರ ಪಡೆಯುತ್ತಿರುವ ಪ್ರೀತಿ ಕನಸಿನಂತೆ ಭಾಸವಾಗುತ್ತಿದೆ” ಎಂದು ಭಾವುಕರಾದರು. ನಟನ ಸಿಬ್ಬಂದಿ ಮತ್ತು ಚಿತ್ರ ತಂಡವು ನಟನನ್ನು ಸಾಂತ್ವನಗೊಳಿಸುತ್ತಿರುವ ವಿಡಿಯೊ ವೈರಲ್‌ ಆಗಿದೆ.

ಈ ವಿಡಿಯೊಗೆ ನಟನ ಅಭಿಮಾನಿಗಳು “ಈ ವರ್ಷ ಡಿಯೋಲ್ ವರ್ಷವಾಗಿದೆ. ಧರ್ಮೇಂದ್ರ ಅವರ ಸಿನಿಮಾ ರಿಲೀಸ್, ಸನ್ನಿಯ ಗದರ್ 2 ಸೂಪರ್ ಹಿಟ್, ಕರಣ್ ಮದುವೆ, ಸನ್ನಿ ಅವರ ಕಿರಿಯ ಮಗನ ಮೊದಲ ಸಿನಿಮಾ ರಿಲೀಸ್… ಬಾಬಿ ಅನಿಮಲ್ ಸಿನಿಮಾ. ಇದರರ್ಥ ಇಡೀ ಕುಟುಂಬ ಸಾಧನೆಗಳನ್ನು ಮಾಡಿ ಸಂತೋಷವಾಗಿದೆ. ಇದು ಯಶಸ್ಸಿನ ಕಣ್ಣೀರು. ನಟ ಅದಕ್ಕೆ ಅರ್ಹರುʼʼ ಎಂದು ಕಮೆಂಟ್‌ ಮಾಡಿದ್ದಾರೆ.

ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ: Ranbir Kapoor: ಬುರ್ಜ್ ಖಲೀಫಾದಲ್ಲಿ ರಣಬೀರ್ ಕಪೂರ್ ಅಭಿನಯದ ʻಅನಿಮಲ್‌ʼ ಪ್ರಿವ್ಯೂ!

ವೈರಲ್‌ ವಿಡಿಯೊ

ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಜತೆಗೆ ಅನಿಮಲ್‌ ಬಿಡುಗಡೆಯಾಗಿದ್ರೂ ಕೂಡ ಜಯಭೇರಿ ಬಾರಿಸಿದೆ. ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿದೆ. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿದೆ. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

Continue Reading
Advertisement
Revenue Minister Krishna Byre Gowda making coffee
ಕರ್ನಾಟಕ5 mins ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ21 mins ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ38 mins ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema53 mins ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ1 hour ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ1 hour ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ2 hours ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ2 hours ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ2 hours ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ2 hours ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ10 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌