Site icon Vistara News

Taraka Ratna: ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರ

Taraka Ratna

ಬೆಂಗಳೂರು: ಜ್ಯೂನಿಯರ್ ಎನ್ ಟಿ ಆರ್ ಸಹೋದರ, ತೆಲುಗು ಚಿತ್ರನಟ ನಂದಮೂರಿ ತಾರಕರತ್ನ (Taraka Ratna) ಅವರಿಗೆ ಜನವರಿ 27ರ ಶುಕ್ರವರ ಹೃದಯಾಘಾತವಾಗಿದ್ದು, ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ತೀವ್ರ ಹೃದಯಾಘಾತ ಹಿನ್ನೆಲೆಯಲ್ಲಿ ಹೃದಯದ ರಕ್ತ ನಾಳಗಳು ಬ್ಲಾಕ್ ಆಗಿದ್ದು, ತಾರಕರತ್ನ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರ

ತೀವ್ರ ಹೃದಯಾಘಾತ ಹಿನ್ನೆಲೆಯಲ್ಲಿ ಹೃದಯದ ರಕ್ತ ನಾಳಗಳು ಬ್ಲಾಕ್ ಆಗಿದ್ದು, ತಾರಕರತ್ನ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬ್ಲಾಕ್ ಆಗಿರುವ ರಕ್ತನಾಳಗಳನ್ನು ಸರಿಪಡಿಸಲು ವೈದ್ಯರ ತಂಡ ಪ್ರಯತ್ನಿಸುತ್ತಿದ್ದು, ಇಂಟ್ರಾ-ಅಯೋರ್ಟಿಕ್ ಪಂಪ್ (ABP) ಮತ್ತು ವ್ಯಾಸೋಆ್ಯಕ್ಟಿವ್ ನೆರವಿನಿಂದ ಹೃದಯ ಚಿಕಿತ್ಸೆ ಮಾಡಲಾಗಿದೆ. ಆ್ಯಂಜಿಯೋಪ್ಲ್ಯಾಸ್ಟಿ ಮೂಲಕ ಹಾನಿಗಳಗಾದ ರಕ್ತನಾಳಗಳಿಗೆ ಸ್ಟಂಟ್ ಅಳವಡಿಸಲಾಗಿದೆ. ಸ್ಟಂಟ್ ಅಳವಡಿಕೆ ನಡುವೆಯು ರಕ್ತಸ್ರಾವ ನಿಲ್ಲದೇ ಇರುವ ಕಾರಣ ನಾರಾಯಣ ಹೃದಯಾಲಯ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿಸಿದೆ. ಸದ್ಯ ಎಕ್ಮೊ ನೆರವಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ 24 ಗಂಟೆಗಳ ವೈದ್ಯಕೀಯ ತಂಡದಿಂದ ಹೆಲ್ತ ಬುಲೆಟಿನ್ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Actor Chiranjeevi | ಟಾಲಿವುಡ್‌ ಸ್ಟಾರ್‌ ಚಿರಂಜೀವಿ ಕಿರಿಯ ಮಗಳಿಗೆ ಮೂರನೇ ಮದುವೆ?

ಇದನ್ನೂ ಓದಿ: Taraka Ratna: ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್‌: ನಟ ಬಾಲಕೃಷ್ಣ ಹೇಳಿದ್ದೇನು?

ತೆಲುಗು ನಟ ಬಾಲಕೃಷ್ಣ ಅವರು ತಾರಕರತ್ನ ಆರೋಗ್ಯ ವಿಚಾರಿಸಿದ್ದು, ಕಳೆದ ಮೂರು ತಾಸಿನಿಂದ ಬಾಲಯ್ಯ ಆಸ್ಪತ್ರೆಯಲ್ಲಿಯೇ ಇದ್ದರು. ಇದೀಗ ಬಾಲಯ್ಯ ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಆರೋಗ್ಯ ವಿಚಾರಿಸಿ ಹೊರಟ್ಟಿದ್ದಾರೆ.

Exit mobile version