Siri Super Mom: ಸಿರಿಕನ್ನಡ ವಾಹಿನಿಯಲ್ಲಿ ಶುರುವಾಗುತ್ತಿದೆ ಅದ್ಧೂರಿ ರಿಯಾಲಿಟಿ ಶೋ `ಸಿರಿ ಸೂಪರ್‌ MOM'! - Vistara News

ಕಿರುತೆರೆ

Siri Super Mom: ಸಿರಿಕನ್ನಡ ವಾಹಿನಿಯಲ್ಲಿ ಶುರುವಾಗುತ್ತಿದೆ ಅದ್ಧೂರಿ ರಿಯಾಲಿಟಿ ಶೋ `ಸಿರಿ ಸೂಪರ್‌ MOM’!

Siri Super Mom: ಸಿರಿ ಸೂಪರ್‌ MOM’ ಶೋನಲ್ಲಿ ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್ಸ್‌ಗಳು ಸೆಲೆಬ್ರೆಟಿ ಜಡ್ಜ್‌ ಆಗಿ
ಭಾಗವಹಿಸುತ್ತಿದ್ದು, ಪ್ರತಿ ಸಂಚಿಕೆಯಲ್ಲಿ ಅವರ ರಿಯಲ್‌ ಲೈಫ್‌ ಅನುಭವಗಳನ್ನು ಹ೦ಚಿಕೊಂಡು ವೀಕ್ಷಕರನ್ನು ಮನರಂಜಿಸಿಲಿದ್ದಾರೆ.

VISTARANEWS.COM


on

A big reality show Siri Super MOM is starting on Sirikannada channel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮ್ಮ-ಮಕ್ಕಳ ಅನುಬಂಧ ಸಾರುವ ಅತಿದೊಡ್ಡ ರಿಯಾಲಿಟಿ ಶೋ “ಸಿರಿ ಸೂಪರ್‌ MOM” (Siri Super Mom ) ಮೊಟ್ಟ ಮೊದಲ ಬಾರಿಗೆ ಸಿರಿಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿದೆ. ಈ ಸೂಪರ್‌ ಶೋ
ತೀರ್ಪುಗಾರರಾಗಿ ಕಿರುತೆರೆ, ಹಿರಿತೆರೆಯ ವರ್ಸಟೈಲ್‌ ನಟ “ಸಿಹಿ-ಕಹಿ ಚ೦ದ್ರು” ನಡೆಸಿಕೊಡುತ್ತಿದ್ದಾರೆ.

“ಸಿಹಿ-ಕಹಿ ಚ೦ದ್ರು ಅವರ ಪ್ರಕಾರ “ಸಿರಿ ಸೂಪರ್‌ MOM’ ಸ್ಮಾಲ್‌ ಸ್ಕ್ರೀನ್‌ನಲ್ಲಿ ಬರುತ್ತಿರುವ ಬಿಗ್ಗೆಸ್ಟ್‌ ರಿಯಾಲಿಟಿ
ಶೋಗಳಲ್ಲಿ ಒಂದಾಗಿದೆ. ಅಮ್ಮ-ಮಕ್ಕಳ ಬಾ೦ಡಿಂಗ್ಸ್‌ವನ್ನು ಮತ್ತಷ್ಟು ಸ್ಟ್ರಾಂಗ್‌ ಮಾಡುವ ಶೋ ಆಗಿದೆ. ಇದಲ್ಲದೇ ವೀಕ್ಷಕರು ಈ ಶೋನಲ್ಲಿ ಇನ್ಸ್‌ಫೈರಿಂಗ್‌ ಸ್ಟೋರೀಸ್‌ ನೋಡಬಹುದು. ಅಮ್ಮ ಮಕ್ಕಳ ಆಟಗಳನ್ನು ಸೆಲಬ್ರೇಟ್‌ ಮಾಡಬಹುದು. ಈಗಿನ ಮಕ್ಕಳು ತುಂಬಾನೇ ಎನರ್ಜೆಟಿಕ್‌,. ಚಾಲೆಂಜಿಂಗ್‌ ಹಾಗೂ ಟ್ಯಾಲೆಂಟೆಡ್‌. ಒಟ್ಟಾರೆ ಈ ಕಾರ್ಯಕ್ರಮ ಪವರ್‌ ಪ್ಯಾಕ್ಡ್‌ ಎನ್ನಬಹುದುʼʼ ಎಂದರು.

ಮತ್ತೊಬ್ಬ ತೀರ್ಪುಗಾರರಾಗಿ ಸ್ಯಾಂಡಲ್‌ವುಡ್‌ ಸಿಂಪಲ್‌ಕ್ವೀನ್‌ “ಶ್ಹೇತಾ ಶ್ರೀ ವಾತ್ಸವ್‌” ಇರಲಿದ್ದಾರೆ.
ʻʻಈ ಶೋ ಥೀಮ್‌ ನನಗೆ ತುಂಬಾ ಇಷ್ಟ ಆಯ್ತು. ಆ ಕಾರಣಕ್ಕೆ 8 ವರ್ಷಗಳಲ್ಲಿ ಯಾವುದೇ ಆಫರ್‌
ಒಪ್ಪಿಕೊಳ್ಳದೆ ಈ ಆಫರ್‌ನ ಒಪ್ಪಿಕೊ೦ಡಿದ್ದು, ಮುಖ್ಯವಾಗಿ ಅಮ್ಮನ ಜತೆ ಮಗು ಬಂಧ ಹೇಗಿದೆ
ಎಂಬುದನ್ನು ಈ ಶೋ ಮೂಲಕ ಕಂಡ್ಕೋಬಹುದು. ಆ ಕಾರಣಕ್ಕೆ ಈ ಶೋ ಸ್ಪೆಶಲ್‌ ಅನಿಸುತ್ತೆʼʼ ಎಂದರು.

“ಸಿರಿ ಸೂಪರ್‌ MOM’ ಶೋನಲ್ಲಿ ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್ಸ್‌ಗಳು ಸೆಲೆಬ್ರೆಟಿ ಜಡ್ಜ್‌ ಆಗಿ
ಭಾಗವಹಿಸುತ್ತಿದ್ದು, ಪ್ರತಿ ಸಂಚಿಕೆಯಲ್ಲಿ ಅವರ ರಿಯಲ್‌ ಲೈಫ್‌ ಅನುಭವಗಳನ್ನು ಹ೦ಚಿಕೊಂಡು ವೀಕ್ಷಕರನ್ನು ಮನರಂಜಿಸಿಲಿದ್ದಾರೆ.

ಇದನ್ನೂ ಓದಿ: BBK Season 10: ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ʻಸಿರಿʼ ಯಾಕೆ ಇನ್ನೂ ಮದುವೆಯಾಗಿಲ್ಲ?

ನಿರೂಪಕರಾಗಿ ಕಿರುತೆರೆಯ ಖ್ಯಾತ ನಟಿ “ರಶ್ಮಿತಾ ಚ೦ಗಪ್ಪ’ ಮತ್ತು ಕಾಮಿಡಿ ಕಿಲಾಡಿಯ ಖ್ಯಾತ ಹಾಸ್ಯ
ನಟ “ಸೂರಜ್‌’ ಶೋ ನಡೆಸಿಕೊಡತ್ತಿದ್ದಾರೆ. “ಸಿರಿ ಸೂಪರ್‌ MOM’ನ ನಿರ್ದೇಶಕರಾದ “ಮಂಜೇಶ್‌’ ಪ್ರಕಾರ ಇಂತಹ ಒಂದು ಬಿಗ್‌ ರಿಯಾಲಿಟಿ ಶೋ ಸಿರಿಕನ್ನಡದಲ್ಲಿ ಮೊದಲಾಗಿದ್ದು. ಪ್ರತಿ ಸಂಚಿಕೆಯಲ್ಲೂ ಹತ್ತು ಅಮ್ಮ-ಮಕ್ಕಳ ಜೋಡಿ ವಿಭಿನ್ನ ಗೇಮ್‌ನೊಂದಿಗೆ ಸಖತ್‌ ಎಂಟರ್ಟೈನ್ಮೆಂಟ್‌ ನೀಡಲಿದೆ. ಪ್ರತಿ ವಾರ ಒ೦ದು ಸ್ಪೆಷಲ್‌ ಥೀಮ್‌ನೊಂದಿಗೆ
ಈ ಶೋ ಮೂಡಿಬರಲಿದೆʼʼಎಂದರು.

“ಸಿರಿ ಸೂಪರ್‌ MOM’ ಶೋನಲ್ಲಿ ಎಲಿಮೇಶನ್‌ ಸಹ ಇರಲಿದ್ದು, ಗೆದ್ದ ʻʻಸೂಪರ್‌ MOM “ಗೆ 5 ಲಕ್ಷ
ಕ್ಯಾಶ್‌ ಪ್ರೈಜ್‌’ ಸಿಗಲಿದೆ. ಈ ಕಾರ್ಯಕ್ರಮವು ಇದೇ ಡಿಸೆಂಬರ್‌ 4 ರಿಂದ ಸೋಮವಾರದಿಂದ
ಶುಕ್ರವಾರ ಪ್ರಸಾರವಾಗಲಿದೆ ಎ೦ದು ವಾಹಿನಿ ಮುಖ್ಯಸ್ಥರಾದ ರಾಜೇಶ್‌ ರಾಜಘಟ್ಟ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಕಿರುತೆರೆ

Sunny Mahipal: ಗರ್ಭಿಣಿ ಪತ್ನಿ ಮೇಲೆ ʻನೇತ್ರಾವತಿʼ ಸೀರಿಯಲ್‌ ನಟನಿಂದ ಹಲ್ಲೆ ಆರೋಪ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

Sunny Mahipal: ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ.

VISTARANEWS.COM


on

Sunny Mahipal Nethravathi Serial Actor Kick His Pregnant Wife
Koo

ಬೆಂಗಳೂರು: ಒಬ್ಬರ ಜತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ʻನೇತ್ರಾವತಿʼ ಧಾರಾವಾಹಿ ನಟನ ವಿರುದ್ಧ ಆರೋಪ ಕೇಳಿ (Sunny Mahipal) ಬಂದಿದೆ. ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದು ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗೆಳೆದ ಸನ್ನಿ ಮಹಿಪಾಲ್‌ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್‌ ಎ. ಎಲ್‌ ಠಾಣೆಗೆ ದೂರು ನೀಡಿದ್ದಾರೆ.

ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ. ಈ ಯುವತಿ ಲಾ ಸ್ಟೂಡೆಂಟ್ ಆಗಿದ್ದಳು. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಶುರುವಾಗಿದೆ. ಬಳಿಕ ಅವರನ್ನು ಸನ್ನಿ ಪ್ರೀತಿ ಮಾಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಮದುವೆಯಾಗೋದಾಗಿ ನಂಬಿಸಿದ್ದರು. ಜೂನ್ 15ರಂದು ಸನ್ನಿ ಮಹಿಪಾಲ್ ಜೊತೆಗೆ ಯುವತಿ ದೇವಸ್ಥಾನದಲ್ಲಿ ವಿವಾಹ ಆದರು. ಸದ್ಯ ಮಹಿಳೆ ಎರಡು ತಿಂಗಳ ಗರ್ಭಿಣಿ.

ಇದಾದ ಬಳಿಕ ನಟ ಮತ್ತೊಂದು ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಪ್ರಶ್ನಿಸಲು ಹೋದ ಪತ್ನಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಪತಿ ಪತ್ನಿ ಮದುವೆಯಾದರು ಒಟ್ಟಿಗೆ ಇರಲಿಲ್ಲ .ನಮ್ಮ ಪೋಷಕರನ್ನ ಒಪ್ಪಿಸಿ ಮತ್ತೆ ಬರುತ್ತೇನೆ ಎಂದು ನಟ ಕಾಗೆ ಹಾರಿಸಿದ್ದ .ಅಲ್ಲದೇ ಸ್ನೇಹಿತರ ರೀತಿಯೇ ಇರಬೇಕು. ಸ್ನೇಹಿತರಂತೆಯೇ ಮೆಸೆಜ್ ಮಾಡ್ಬೇಕು ಎಂದು ಕಂಡಿಷನ್ ಹಾಕಿದ್ದನಂತೆ. ಅದರಂತೆಯೇ ಮಹಿಪಾಲ್ ಪತ್ನಿ ನಡೆದು ಕೊಂಡಿದ್ದರು. ಅದಾಗಲೇ ಕೆಲ ದಿನದ ಹಿಂದೆ ಬೇರೆ ಯುವತಿ ಜೊತೆಗೆ ಮಹಿಪಾಲ್ ಎಂಗೆಜ್ಮೆಂಟ್ ಆಗಿದ್ದನಂತೆ. ಇದನ್ನು ಪ್ರಶ್ನಿಸಲು 22 ರಂದು ರಾತ್ರಿ ಮಹಿಪಾಲ್ ಮನೆಗೆ ಪತ್ನಿ ಹೋಗಿದ್ದಾರೆ. ರಾತ್ರಿ 9.30 ಕ್ಕೆ ವಿಜ್ಙಾನ ನಗರ ದಲ್ಲಿರುವ ಮಹಿಪಾಲ್ ನಿವಾಸಕ್ಕೆ ಪತ್ನಿ ಹೋಗಿದ್ದರು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ಈ ವೇಳೆ ಗಲಾಟೆಯಾಗಿ ಪತ್ನಿ ಮೇಲೆ ನಟ ಹಲ್ಲೆ ನಡೆಸಿದ್ದಾರೆ. ಚಾಕುವಿನಿಂದ ತೋಳಿಗೆ ಇರಿದ ಆರೋಪ ಮಾಡಲಾಗಿದೆ. ಗಲಾಟೆಯಲ್ಲಿ ಗರ್ಭಪಾತ ಆಗಿರೋದಾಗಿ ಪತ್ನಿ ಹೇಳಿಕೆ ನೀಡಿದ್ದಾರೆ. ಹೊಟ್ಟೆಗೆ ಏಟಾಗಿ ಗರ್ಭಪಾತ ಆಗಿದೆ ಎಂದು ಪತ್ನಿ ಅಳಲು ತೋಡಿಕೊಂಡಿದ್ದಾರೆ.  ಗಲಾಟೆ ಆದ ಮೇಲೆ 112ಕ್ಕೆ ಮಹಿಪಾಲ್ ಪತ್ನಿ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಭೇಟಿ ಕೊಟ್ಟಿದ್ದರು. ಗರ್ಭಪಾತದಿಂದಾಗಿ ಮಹಿಳೆಗೆ ರಕ್ತಸ್ರಾವವಾಗುತ್ತಿತ್ತು. ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸರಿಗೆ ಅವರು ಮನವಿ ಮಾಡಿದ್ದರು. ಆದರೆ, ನಮ್ಮ ಬಳಿ ಮಹಿಳಾ ಸಿಬ್ಬಂದಿ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವತಃ ತಾವೆ ಕಾರು ಚಲಾಯಿಸಿಕೊಂಡು ಬಂದು ಅವರು ಆಸ್ಪತ್ರೆ ಸೇರಿದ್ದಾರೆ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅತ್ತ ಹೆಚ್ಎಎಲ್ ಪೊಲೀಸ್ ಠಾಣೆಗೆ ತೆರಳಿ ಸನ್ನಿ ಮಹಿಪಾಲ್ ಮನೆಗೆ ಅತಿಕ್ರಮ ಪ್ರವೇಶ ಮಾಡಿರೋದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಬಲವಂತದಿಂದ ಮದುವೆಯಾಗಿರೋದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ದೂರು ಪಡೆದು ಹೆಚ್ಎಎಲ್ ಪೊಲೀಸರು ಸುಮ್ಮನಾಗಿದ್ದಾರೆ. ಇನ್ನೂ ಮಾಹಿತಿ ಪ್ರಕಾರ ಹಲ್ಲೆಗೂ ಮುನ್ನ ಗರ್ಭಪಾತ ಮಾಡಿಸಲು ಪತ್ನಿಗೆ ನಟ ಕಿರುಕುಳ ನೀಡಿದ್ದರು ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Chaitra Vasudevan: ನಾನು ಸಿಲ್ಲಿ ಹುಡುಗಿ ಅಲ್ಲ..ನನ್ನಂತವರಿಗೂ ಮೋಸ ಆಗುತ್ತದೆ ಅಂದುಕೊಂಡಿರಲಿಲ್ಲ ಎಂದ ಆ್ಯಂಕರ್ ಚೈತ್ರಾ!

Chaitra Vasudevan: ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Chaitra Vasudevan says not a silly girl never thought that someone cheated me
Koo

ಬೆಂಗಳೂರು: ಬಿಗ್‌ ಬಾಸ್‌ʼನಿಂದ ಹೆಚ್ಚು ಜನಪ್ರಿಯರಾಗಿರುವ ಆ್ಯಂಕರ್ ಚೈತ್ರಾ ವಾಸುದೇವನ್‌ (Chaitra Vasudevan) ಅವರು ತಮ್ಮ ದಾಂಪತ್ಯಕ್ಕೆ ವಿಚ್ಛೇದನ ನೀಡಿರುವುದು ಗೊತ್ತೇ ಈದೆ. ಚೈತ್ರಾ ಅನೌನ್ಸ್‌ ಮಾಡಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸೋಷಿಯಲ್‌ ಮೀಡಿಯಾದಲ್ಲಿ ನಡೆಯಿತು. ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

ಚೈತ್ರಾ ಮಾತನಾಡಿ ʻʻನಾನು ಈ ಬಗ್ಗೆ ಅನೌನ್ಸ್‌ ಮಾಡುವೆ ಮೊದಲೇ ಡಿವೋರ್ಸ್‌ ಮಾಡಿದ್ದೆ. ಈ ಬಗ್ಗೆ ನಾನು ಎಲ್ಲಿಯೂ ಹೇಳಲು ಇಷ್ಟ ಪಟ್ಟಿರಲಿಲ್ಲ. ನನ್ನ ತಂದೆ ತಾಯಿ ಕೂಡ ಆಗ ನನ್ನ ಜತೆ ನಿಂತು, ನಿನ್ನ ಜವಾಬ್ದಾರಿ ಅಂದಿದ್ದರು. ಬೇರೆಯವರ ಕರ್ಮ ಅವರು ಅನುಭವಿಸುತ್ತಾರೆ. ಎಲ್ಲೂ ಕಂಪ್ಲೇನ್‌ ಮಾಡಬೇಡು ಎಂದು ತಂದೆ ತಾಯಿ ಹೇಳಿದ್ದರು. ಕ್ಷುಲ್ಲಕ ಕಾರಣಕ್ಕೆ ಸಪ್‌ರೇಟ್‌ ಆದರು ಎನ್ನುವ ಗಾಸಿಪ್‌ ಹರಡಿತ್ತು. ಆದರೆ ರಿಯಲ್‌ ರೀಸನ್‌ ಬೇರೆ ಇದೆ. ನನ್ನ ಕುಟುಂಬ ಅಂದರೆ ನಾನು, ನನ್ನ ತಂದೆ ತಾಯಿ, ಸೇರಿ ಮೋಸ ಹೋದೆವು. ಮಾನಸಿಕವಾಗಿ, ದೈಹಿಕವಾಗಿ, ಭಾವನಾತ್ಮಕವಾಗಿ ಮೋಸ ಹೋದೆವು. ಆದರೆ ನಾನು 5 ವರ್ಷಗಳ ಕಾಲ ಕಾದೆ. ಎನೋ ಒಂದು ಆಗತ್ತೆ ಅಂತ. ನಾನು ಸಿಲ್ಲಿ ಹುಡುಗಿ ಅಲ್ಲ. ಏನೋ ಅಚೀವ್‌ ಮಾಡಬೇಕು..ಏನೋ ಮಾಡಬೇಕು ಎಂದು ದುಡ್ಡು ದುಡೀಬೇಕು ಎಂಬ ಕಾರಣಕ್ಕೆ ಸಪ್‌ರೇಟ್‌ ಆಗ್ತೀನಿ ಎನ್ನುವ ಸಿಲ್ಲಿ ಹುಡುಗಿ ನಾನಲ್ಲ. ನಾನು ಪ್ಲ್ಯಾನ್‌ ಮುಂಚೆ ಹೇಗ್‌ ಮಾಡಿದ್ದೆ ಅಂದರೆ, ನನ್ನ ಕುಟುಂಬ, ನನ್ನ ಫ್ಯಾಮಿಲಿ, ಅತ್ತೆ ಮಾವ ಹೀಗೆ ಜತೆಗೆ ಇರಬೇಕು, ಮಕ್ಕಳು ಇರಬೇಕು ಎಂದು ಬಯಸಿದ್ದೆ. ಆದರೆ ಕನಸು ನನಸಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಏನು ಮಾಡಕ್ಕೆ ಆಗದೇ ಸುಮ್ಮನೇ ಇದ್ದೆ. ಕೆಟ್ಟ ದಿನಗಳು ಆಗಿದ್ದವು. ಯಾರಾದರೂ ಬಂದು ನನ್ನ ಸೇವ್‌ ಮಾಡ್ತಾರಾ ಎನ್ನುವ ಪರಿಸ್ಥಿತಿ ಇತ್ತು. ಆ ತರ ನಾನು ಹಾತೊರೆಯುತ್ತಿದ್ದೆ. ಪ್ರೀತಿ ಮಾಡಿ, ಆದರೆ ನಿಜ ಹೇಳಿ. ಆದರೆ ಯಾರಿಗೂ ಮೋಸ ಮಾಡಬೇಡಿ. ಆದರೆ ನಾನು ಯಾರಿಗೂ ಮೋಸ ಮಾಡಿಲ್ಲ. ಆದರೆ ನನಗೆ ಹೀಗ್‌ ಆಯ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Chaitra Vasudevan: ಅಹಂಕಾರದಿಂದ ಬೇರೆಯಾಗಿಲ್ಲ ಎಂದು ಡಿವೋರ್ಸ್‌ ಅಸಲಿ ಕಾರಣ ತಿಳಿಸಿದ ಆ್ಯಂಕರ್ ಚೈತ್ರಾ!

ಕುಂದಾಪುರದ ಹುಡುಗಿ ಚೈತ್ರಾ ಜತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.

ಡಿವೋರ್ಸ್‌ ಪೋಸ್ಟ್‌ ಹಂಚಿಕೊಂಡಿದ್ದ ಚೈತ್ರಾ

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದರು.

ಆ್ಯಂಕರ್ ಆಗಿದ್ದ ಚೈತ್ರಾ ‘ಬಿಗ್ ಬಾಸ್ (big boss) ಕನ್ನಡ ಸೀಸನ್ 7’ರ ಸ್ಪರ್ಧಿಯಾಗಿದ್ದರು. ಚೈತ್ರಾ ವಾಸುದೇವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಚೈತ್ರಾ ತಮ್ಮದೇ ಆದ ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ನಡೆಸುತ್ತಿದ್ದಾರೆ.

Continue Reading

ಬಿಗ್ ಬಾಸ್

Actress Siri: ನಾನೇನು ʻಮದುವೆʼಯ ವಿರೋಧಿ ಅಲ್ಲ, ವಿವಾಹ ಬೇಡ ಎಂದೂ ಅಂದುಕೊಂಡಿರಲಿಲ್ಲ ಎಂದ ಸಿರಿ!

Actress Siri: ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

VISTARANEWS.COM


on

Actress Siri Reaction about late marriage
Koo

ಬೆಂಗಳೂರು: `ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿರುವುದು ಗೊತ್ತೇ ಇದೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

ಸಿರಿ ಮಾತನಾಡಿ ʻʻಇಷ್ಟು ವರ್ಷ ನನಗೆ ಮದುವೆ ಬಗ್ಗೆ ಏನೂ ಅನ್ನಿಸುತ್ತಿರಲಿಲ್ಲ. ನಮ್ಮ ತಾಯಿ ಬಿಟ್ಟರೆ ನಾನು ಮದುವೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನನ್ನ ತಾಯಿಗೆ ಒಂದು ಮಾತು ಹೇಳುತ್ತ ಇದ್ದೆ. ನಿನ್ನ ಮಗಳು ಖುಷಿಯಾಗಿ ಇರಬೇಕು. ಅದೇ ಮುಖ್ಯ ಅಂದರೆ ನೋಡು ಅಂತಿದ್ದೆ. ಆದರೆ ಬಿಗ್‌ ಬಾಸ್‌ ಆದ ಬಳಿಕ ಆಗಬೇಕು ಎಂಬ ಮನಸ್ಸು ಬಂತು. ಆದರೆ ಒತ್ತಡ ಅಂತೇನಿಲ್ಲ. ಹೀಗೆ ಆಗಬೇಕು ಎಂದು ಅನ್ನಿಸಿತ್ತು. ಹೊರಗೆ ಬಂದ ಮೇಲೆ ಈ ಬಗ್ಗೆ ನಿರ್ಧಾರ ಮಾಡಿದೆ. ಬಳಿಕ ಇವರನ್ನ ಮದುವೆ ಆಗಬಹುದು ಎಂದು ಅನ್ನಿಸಿದ ಮೇಲೆ ನಾನು ಮದುವೆಯಾದೆʼʼಎಂದರು.

ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿಲ್ಲ. ನನ್ನ ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದೇ ಇತ್ತು. ಮದುವೆ ವಿರುದ್ಧನೂ ಅಲ್ಲ ನಾನು. ನನ್ನ ಹಣೆಬರಹದಲ್ಲಿ ಈಗ ಬರ್ದಿದೆ. ಮನೆಯಲ್ಲಿ ಪ್ರಯತ್ನ ಮಾಡಿದ್ದರು. ಆದರೆ ಈಗ ಆ ಕಾಲ ಕೂಡಿ ಬಂದಿದೆ. ಮದುವೆ ಬೇಗ ಆಗಿ ಏನಾದರೂ ಸಮಸ್ಯೆ ಮಾಡಿಕೊಳ್ಳುವುದಿಕ್ಕಿಂತ , ನಾನು ರೆಡಿ ಇದ್ದೀನಿ.. ಎಂದು ರೆಡಿ ಆದ ಮೇಲೆ ಮದುವೆ ಮದುವೆಯಾಗೋದು ಸರಿ. ಯಾರಿಗಾದರೂ ಇದು ದೊಡ್ಡ ನಿರ್ಧಾರ. ನನಗೆ ನನ್ನ ಪತಿ ಬದುಕು ಸೀರಿಯಲ್‌ ನಿಂದ ಪರಿಚಯ. ಇಬ್ಬರು ಸ್ನೇಹಿತರಾಗಿದ್ದೇವು. ಬಳಿಕ ಮತ್ತೆ ವರ್ಷಗಳ ನಂತರ ಟಚ್‌ನಲ್ಲಿ ಬಂದೆವು. ನಂತರ ಇಬ್ಬರು ಮದುವೆಯಾಗೋಣ ಎಂದು ನಿರ್ಧಾರ ಮಾಡಿದೆವು. ಈಗಲೂ ಫ್ರೆಂಡ್‌ ಜತಗೆ ಇದ್ದೇನೆ ಎಂದು ಅನ್ನಿಸುತ್ತೆ. ಇಬ್ಬರಲ್ಲೂ ಪ್ರಪೋಸ್‌ ಏನೂ ಆಗಿಲ್ಲ. ಮಾತುಕತೆ ಆಯ್ತು. ಹಾಗೇ ಮದುವೆ ಆದೆವುʼʼಎಂದರು.

ಇದನ್ನೂ ಓದಿ: Actress Siri: ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀವೆ; ಪತಿಯನ್ನು ಬಣ್ಣಿಸಿದ ಸಿರಿ!

ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

Continue Reading
Advertisement
illicit relationship raichur siravara
ಕ್ರೈಂ7 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ8 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ27 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ54 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ57 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ2 hours ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್2 hours ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌