Actress Rajini: ʻನಿಮ್ಮ ಆ್ಯಕ್ಟಿಂಗ್‌ ಓವರ್‌ʼ ಅಂದಿದಕ್ಕೆ ʻಅಮೃತ ವರ್ಷಿಣಿʼ ಖ್ಯಾತಿಯ ನಟಿ ರಜಿನಿ ಗರಂ! - Vistara News

ಕಿರುತೆರೆ

Actress Rajini: ʻನಿಮ್ಮ ಆ್ಯಕ್ಟಿಂಗ್‌ ಓವರ್‌ʼ ಅಂದಿದಕ್ಕೆ ʻಅಮೃತ ವರ್ಷಿಣಿʼ ಖ್ಯಾತಿಯ ನಟಿ ರಜಿನಿ ಗರಂ!

Actress Rajini: ಸುಮಾರು 20ರಿಂದ 25 ಕೆಜಿ ತೂಕದ ಆ ಕಾಸ್ಟ್ಯೂಮ್ ತೊಟ್ಟು ಪರ್ಫಾಮ್ ಮಾಡಿದ್ದಾರೆ. ಇದರ ಬೆನ್ನಲ್ಲೇ ನಟಿಯ ಬಗ್ಗೆ ನೆಟ್ಟಿಗರೊಬ್ಬರು ʻʻನಿಮ್ಮ ಆ್ಯಕ್ಟಿಂಗ್‌ ಓವರ್‌ ಆಗಿದೆ ʼʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Actress Rajini In saree
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ `ಅಮೃತ ವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯ (amruthavarshini serial Fame rajini) ಪಡೆದ ರಜಿನಿ (Actress Rajini) ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಮೃತಾ (Serial artist Rajini) ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಆಗಾಗ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಹಾಕಿಕೊಳ್ಳುತ್ತಲೇ ಇರುತ್ತಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳ ಪ್ರಶ್ನೆಗೆ ಉತ್ತರವನ್ನೂ ನೀಡುತ್ತಿರುತ್ತಾರೆ. ಆದರೆ ಇದೀಗ ನೆಟ್ಟಿಗರೊಬ್ಬರು ನಿಮ್ಮ ಆ್ಯಕ್ಟಿಂಗ್‌ ಓವರ್‌ ಆಗಿದೆ ಎಂದು ಹೇಳಿದ್ದಕ್ಕೆ ನಟಿ ಖಡಕ್‌ ಉತ್ತರವನ್ನು (Rajini Post) ಕೊಟ್ಟಿದ್ದಾರೆ.

ರಜಿನಿ ಧಾರಾವಾಹಿಯಲ್ಲದೇ ʻಅಂಬುಜಾʼ (Rajini ambuja cinema) ಸಿನಿಮಾದಲ್ಲಿಯೂ ನಟಿಸಿ ಸೈ ಎನೆಸಿಕೊಂಡಿದ್ದಾರೆ. ಸುಮಾರು 20ರಿಂದ 25 ಕೆಜಿ ತೂಕದ ಆ ಕಾಸ್ಟ್ಯೂಮ್ ತೊಟ್ಟು ಪರ್ಫಾಮ್ ಮಾಡಿದ್ದಾರೆ. ಇದರ ಬೆನ್ನಲ್ಲೇ ನಟಿಯ ಬಗ್ಗೆ ನೆಟ್ಟಿಗರೊಬ್ಬರು ʻʻನಿಮ್ಮ ಆ್ಯಕ್ಟಿಂಗ್‌ ಓವರ್‌ ಆಗಿದೆ ʼʼಎಂದು ಕಮೆಂಟ್‌ ಮಾಡಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿ ʻʻನಿರ್ದೇಶಕರು ಏನು ಹೇಳುತ್ತಾರೋ ಅದನ್ನು ಮಾಡುತ್ತಿರುವೆ. ನೀವು ನಿರ್ದೇಶಕರಾದರೆ ನೀವು ಹೇಳಿದಂತೆ ಮಾಡುವೆʼʼ ಎಂದು ತಿರುಗೇಟು ನೀಡಿದ್ದಾರೆ. ನಟಿಯ ಈ ಪ್ರತಿಕ್ರಿಯೆ ಬಗ್ಗೆ ಪರ ವಿರೋಧಗಳು ಚರ್ಚೆಯಾಗಿವೆ.

ಇದನ್ನೂ ಓದಿ: Rajinikanth: ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ಪ್ರತಿಮೆ ದರ್ಶನ ಪಡೆದ ತಲೈವಾ ರಜಿನಿಕಾಂತ್

‘ಆತ್ಮ ಬಂಧನ’ ಧಾರಾವಾಹಿಯಲ್ಲಿ ನಟಿಸಿದರು. ಭಿನ್ನ ಪಾತ್ರಗಳನ್ನೇ ಆರಿಸಿಕೊಳ್ಳುತ್ತಿದ್ದ ರಜಿನಿ ಅವರಿಗೆ ಅವಕಾಶಗಳು ಕಡಿಮೆಯಾದವು. ನಂತರದ ದಿನಗಳಲ್ಲಿ ಕೆಲ ರಿಯಾಲಿಟಿ ಶೋಗಳಲ್ಲಿ ರಜಿನಿ ಕಾಣಿಸಿಕೊಂಡರು. ಸ್ಟಾರ್ ಸಿಂಗರ್, ಡ್ಯಾನ್ಸಿಂಗ್ ಸ್ಟಾರ್ಸ್, ಮಜಾ ಟಾಕೀಸ್, ಕುಕ್ಕರಿ ಶೋಗಳಲ್ಲಿ ಭಾಗವಹಿಸಿದ್ದರು. ಕುಕ್ಕರಿ ಶೋ ಒಂದನ್ನು ರಜಿನಿ ಅವರೇ ಹೋಸ್ಟ್ ಮಾಡಿದ್ದರು ಕೂಡ. ಇದೀಗ ‘ಡವ್ ಮಂಜ’ ಎಂಬ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Hitler Kalyana Serial: ಹಿಟ್ಲರ್‌ ಕಲ್ಯಾಣ ಧಾರಾವಾಹಿ ಖ್ಯಾತಿಯ ಲೀಲಾ ಹಿನ್ನೆಲೆ ಏನು?

ಸ್ಟಾರ್‌ ಸುವರ್ಣದ ಹೊಸ ಧಾರಾವಾಹಿ ಮೂಲಕ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ ರಜಿನಿ. ಭರತನಾಟ್ಯ ಹಾಗೂ ಪಾಶ್ಚಾತ್ಯ ನೃತ್ಯವನ್ನೂ ರಜಿನಿ ಅವರು ಕರಗತ ಮಾಡಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

Anchor Anushree: ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು. ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Anchor Anushree talking with fans on instagram live
Koo

ಕಿರುತೆರೆ ಜನಪ್ರಿಯ ನಿರೂಪಕಿ, ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ (Anchor anushree) ಅವರು ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು.

ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

ʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ… ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾʼʼ ಎಂದು ನೋವು ತೋಡಿಕೊಂಡರು. ʻʻಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿʼʼ ಎಂದಿದ್ದಾರೆ.

Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಕಿರುತೆರೆ

Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

Shrimad Ramayana: ‘ಶ್ರೀಮದ್ ರಾಮಾಯಣ’ ಹಿಂದಿ ಭಾಷೆಯಿಂದ ಕನ್ನಡ ಡಬ್ ಮಾಡಿ ಪ್ರಸಾರ ಮಾಡಲಾಗುತ್ತಿದೆ. ಭಾಷೆ ಅರ್ಥ ಆಗದವರಿಗೆ ಕನ್ನಡದಲ್ಲಿಯೇ ಈ ಬಿಗ್ ಬಜೆಟ್ ಧಾರಾವಾಹಿಯನ್ನು ವೀಕ್ಷಣೆ ಮಾಡಬಹುದಾಗಿದೆ. 2024ರ ಆರಂಭದಲ್ಲಿಯೇ ‘ಶ್ರೀಮದ್ ರಾಮಾಯಣ’ ಮಹಾ ಧಾರಾವಾಹಿಯನ್ನು ಹಿಂದಿಯ ಸೋನಿ ಸಂಸ್ಥೆ ಪ್ರಸಾರ ಮಾಡಿತ್ತು. ಆರಂಭದಲ್ಲಿ ಈ ಧಾರಾವಾಹಿ ಮೆಚ್ಚುಗೆ ವ್ಯಕ್ತವಾಗಿತ್ತು.

VISTARANEWS.COM


on

Shrimad Ramayana udaya tv to telecasting kannada dubbing version
Koo

ಬೆಂಗಳೂರು: ಕಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ `ಉದಯ ವಾಹಿನಿ’ಯು ಈಗ ’ಶ್ರೀಮದ್ ರಾಮಾಯಣ’ (Shrimad Ramayana) ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಭುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.

ʻರಾಮಾಯಣʼ ಭಾರತೀಯ ಸಂಸ್ಕ್ರತಿ, ಪರಂಪರೆ ಪ್ರತಿಬಿಂಬಿಸಲಿರುವುದು ವಿಶೇಷ. ರಾಮನ ಜೀವನ ಬಹುತೇಕ ಭಾರತೀಯರಿಗೆ ಮಾದರಿಯಾಗಿದೆ. ಆತನ ರಾಜ್ಯ ಪರಿಪಾಲನೆಯು ಇಂದಿಗೂ ರಾಮರಾಜ್ಯ ಅನ್ನುವ ಪದ ಈಗಲೂ ಬಳಸಲಾಗುತ್ತಿದೆ. ರಾಮ ಮತ್ತು ಸೀತೆಯ ಪವಿತ್ರ ಪ್ರೇಮ, ಕಥೆಯಲ್ಲಿ ಧರ್ಮದ ಪಾಲನೆಯ ಮಾರ್ಗದಲ್ಲಿ ಎದುರಿಸಿದ ಅನೇಕ ಸವಾಲುಗಳು ಕುತೂಹಲಕಾರಿಯಾಗಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು, ವೈವಿಧ್ಯಮಯ ನಟರ ತಂಡವು ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಲಿದೆ.

ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಬೇಕು. ಸರಿ ಉತ್ತರ ನೀಡಿದವರಿಗೆ ನೀಡಿದವರಿಗೆ ತಲಾ ಒಂದು ಸಾವಿರ ಬಹುಮಾನವನ್ನು ನೀಡಲಾಗುತ್ತದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.

‘ಶ್ರೀಮದ್ ರಾಮಾಯಣ’ ಹಿಂದಿ ಭಾಷೆಯಿಂದ ಕನ್ನಡ ಡಬ್ ಮಾಡಿ ಪ್ರಸಾರ ಮಾಡಲಾಗುತ್ತಿದೆ. ಭಾಷೆ ಅರ್ಥ ಆಗದವರಿಗೆ ಕನ್ನಡದಲ್ಲಿಯೇ ಈ ಬಿಗ್ ಬಜೆಟ್ ಧಾರಾವಾಹಿಯನ್ನು ವೀಕ್ಷಣೆ ಮಾಡಬಹುದಾಗಿದೆ. 2024ರ ಆರಂಭದಲ್ಲಿಯೇ ‘ಶ್ರೀಮದ್ ರಾಮಾಯಣ’ ಮಹಾ ಧಾರಾವಾಹಿಯನ್ನು ಹಿಂದಿಯ ಸೋನಿ ಸಂಸ್ಥೆ ಪ್ರಸಾರ ಮಾಡಿತ್ತು. ಆರಂಭದಲ್ಲಿ ಈ ಧಾರಾವಾಹಿ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

‘ಶ್ರೀಮದ್ ರಾಮಾಯಣ’ ಧಾರಾವಾಹಿಯನ್ನು ಹೊಸ ದೃಷ್ಟಿಕೋನದಿಂದ ಪ್ರಸಾರ ಮಾಡಲು ಸಿದ್ಧವಾಗಿದೆ. ರಾಮಾಯಣವನ್ನು ಹೊಸ ಆಯಾಮದಿಂದ ತೋರಿಸುವ ಮೂಲಕ ಕಿರುತೆರೆ ವೀಕ್ಷಕರಿಗೆ ಹೊಸ ಅನುಭವವನ್ನು ನೀಡಲು ಹೊರಟಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು ಮತ್ತು ವೈವಿಧ್ಯಮಯ ನಟರ ತಂಡವು ಈ ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಿದೆ.

Continue Reading

ಕರ್ನಾಟಕ

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh: ನಟಿ ಛಾಯಾ ಸಿಂಗ್‌ ಅವರ ತಾಯಿ ಮನೆಯಲ್ಲಿ 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಈ ಸಂಬಂಧ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Chaya Singh
Koo

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda
Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
mlc election congress candidate gift boxes
ಬೆಂಗಳೂರು4 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ6 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್16 mins ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ23 mins ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ25 mins ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

IPL 2024 Points Table
ಕ್ರೀಡೆ49 mins ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ52 mins ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ58 mins ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ1 hour ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ1 hour ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌