Amruthadhare Kannada Serial Rajesh And Chaya sing act As brother And Sisters acted Previous Serial Amruthadhare Kannada Serial : ʻಅಮೃತಧಾರೆʼಗೂ ಮುಂಚೆ ಅಣ್ಣ-ತಂಗಿಯಾಗಿ ನಟಿಸಿದ್ರಂತೆ ರಾಜೇಶ್‌-ಛಾಯಾ! - Vistara News

ಕಿರುತೆರೆ

Amruthadhare Kannada Serial : ʻಅಮೃತಧಾರೆʼಗೂ ಮುಂಚೆ ಅಣ್ಣ-ತಂಗಿಯಾಗಿ ನಟಿಸಿದ್ರಂತೆ ರಾಜೇಶ್‌-ಛಾಯಾ!

Amruthadhare Kannada Serial: ನಾಯಕ ಗೌತಮ್ ದಿವಾನ್ ಪಾತ್ರದ ರಾಜೇಶ್‌ ಹಾಗೂ ಛಾಯಾ ಸಿಂಗ್ ಅವರು ಭೂಮಿಕಾ ಸದಾಶಿವ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆದರೆ ಇವರಿಬ್ಬರ ಜೋಡಿ ಕಿರುತೆರೆಗೆ ಹೊಸತೇನಲ್ಲ. ಈ ಮುಂಚೆ ಇಬ್ಬರೂ ಅಣ್ಣತಂಗಿಯಾಗಿ ನಟಿಸಿದ್ದರು. ಇದರ ಬಗ್ಗೆ ರಾಜೇಶ್‌ ಹೇಳಿದ್ದು ಹೀಗೆ.

VISTARANEWS.COM


on

Amruthadhare Kannada Serial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜೇಶ್ ನಟರಂಗ (Rajesh nataranga) ಹಾಗೂ ಛಾಯಾ ಸಿಂಗ್ (Chaya Singh) ನಟನೆಯ ‘ಅಮೃತಧಾರೆ’ ಧಾರಾವಾಹಿ (Amruthadhare Kannada Serial) ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈಗಾಗಲೇ ಧಾರಾವಾಹಿಯನ್ನು ಪ್ರೇಕ್ಷಕರು ಮೆಚ್ಚು ಹೊಗಳುತ್ತಿದ್ದಾರೆ. ನಾಯಕ ಗೌತಮ್ ದಿವಾನ್ ಪಾತ್ರದ ರಾಜೇಶ್‌ ಹಾಗೂ ಛಾಯಾ ಸಿಂಗ್ ಅವರು ಭೂಮಿಕಾ ಸದಾಶಿವ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆದರೆ ಇವರಿಬ್ಬರ ಜೋಡಿ ಕಿರುತೆರೆಗೆ ಹೊಸತೇನಲ್ಲ. ಈ ಮುಂಚೆ ಇಬ್ಬರೂ ಅಣ್ಣತಂಗಿಯಾಗಿ ನಟಿಸಿದ್ದರು. ಇದರ ಬಗ್ಗೆ ರಾಜೇಶ್‌ ಹೇಳಿದ್ದು ಹೀಗೆ.

ಇಬ್ಬರೂ ಒಟ್ಟಿಗೆ ನಟಿಸಿದ್ದು 23 ವರ್ಷಗಳ ಹಿಂದಿನ ಕಥೆ. ‘ಈಟಿವಿ ಕನ್ನಡ ಆಗತಾನೇ (2000) ಆರಂಭ ಆಗಿತ್ತು. ಆಗ ಮಧ್ಯಾಹ್ನ ಒಂದು ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿಯಲ್ಲಿ ನಾನು, ವೈಶಾಲಿ ಕಾಸರವಳ್ಳಿ, ದತ್ತಣ್ಣ, ಛಾಯಾ ಮೊದಲಾದವರು ನಟಿಸಿದ್ದೆವು. ಛಾಯಾ ನನ್ನ ತಂಗಿ ಪಾತ್ರ ಮಾಡಿದ್ದರು. ಆ ಬಳಿಕ ಅವರು ಹಲವು ಸಿನಿಮಾ ಮಾಡಿದರು. ಅವರು ಅದ್ಭುತ ನಟಿ’ ಎಂದಿದ್ದಾರೆ ರಾಜೇಶ್ ನಟರಂಗ.

ನಟ ರಾಜೇಶ್ ನಟರಂಗ ಅವರಿಗೆ ಕಿರುತೆರೆ ಹೊಸದೇನಲ್ಲ. ʻತ್ರಿವೇಣಿ ಸಂಗಮʼ ʻಮುಕ್ತ’, ‘ಬದುಕು’, ‘ಶಕ್ತಿ’, ‘ಗುಪ್ತಗಾಮಿನಿʼ ಹೀಗೆ ಹಲವು ಧಾರಾವಾಹಿಗಳಲ್ಲಿ ಛಾಪು ಮೂಡಿಸಿದ್ದರು. ‘ತ್ರಿವೇಣಿ ಸಂಗಮ’ ಧಾರಾವಾಹಿಯಲ್ಲಿಯೂ ನಾಯಕ ತ್ರಿವಿಕ್ರಮ್ ಆಗಿ ರಾಜೇಶ್ ನಟರಂಗ ನಟಿಸಿದ್ದರು. ಅವರಿಗೆ ಜೋಡಿಯಾಗಿ ಸ್ಯಾಂಡಲ್‌ವುಡ್ ನಟಿ ಅನುಪ್ರಭಾಕರ್ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಗೆ ಜನಮೆಚ್ಚುಗೆ ಲಭಿಸಿತ್ತು.

ಇದನ್ನೂ ಓದಿ: Amruthadhare Kannada Serial: ಕಿರುತೆರೆಗೆ ರಾಜೇಶ್ ನಟರಂಗ ಗ್ರ್ಯಾಂಡ್‌ ಎಂಟ್ರಿ; ಒಲವಿನ ಅಮೃತಧಾರೆಯ ಹರಿವು ಆರಂಭ!

ಭೂಮಿಕಾ-ಗೌತಮ್‌ ಪ್ರಪಂಚ ಬೇರೆ ಬೇರೆ ಇದ್ದರೂ ಭಾವ ಒಂದೇ!

ಅಮೃತಧಾರೆ ಧಾರಾವಾಹಿ ʻಬಡೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ಈಗಾಗಲೇ ಪ್ರೇಕ್ಷಕರು ಮೊದಲ ಎಪಿಸೋಡ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅಮೃತಧಾರೆ ಧಾರಾವಾಹಿಯಲ್ಲಿ ನಟಿ ಛಾಯಾ ಸಿಂಗ್‌ ಜತೆ ನಟ ರಾಜೇಶ್‌ ಕಾಣಿಸಿಕೊಂಡಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ. ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ. ಇದೀಗ ಇವರಿಬ್ಬರು ಒಂದಾಗುತ್ತಾರಾ ಎಂಬುದೇ ಪ್ರೇಕ್ಷಕರಿಗೆ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Arun Yogiraj: ಕಿರುತೆರೆಗೆ ಕಾಲಿಟ್ಟ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌; ಯಾವ ಕಾರ್ಯಕ್ರಮ?

run Yogiraj: ಸದಾ ಹೊಸತನದ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಸ್ಟಾರ್‌ ಸುವರ್ಣ ವಾಹಿನಿಯ ಜನ ಮೆಚ್ಚಿದ ಶೋ ಬೋಂಬಾಟ್‌ ಭೋಜನ. ಸಿಹಿಕಹಿ ಚಂದ್ರ ನಡೆಸಿಕೊಡುವ ಈ ಕಾರ್ಯಕ್ರಮ ಈಗಾಗಲೇ ಸಾವಿರ ಸಂಚಿಕೆ ಪೂರೈಸಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ರಾಮ ನವಮಿ ಪ್ರಯುಕ್ತ ಈ ಕಾರ್ಯಕ್ರಮದಲ್ಲಿ ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ಭಾಗವಹಿಸಲಿದ್ದಾರೆ. ಈ ಸಂಚಿಕೆ ನಾಳೆ (ಏಪ್ರಿಲ್‌ 17) ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

VISTARANEWS.COM


on

Arun Yogiraj
Koo

ಬೆಂಗಳೂರು: ಸ್ಟಾರ್ ಸುವರ್ಣ (Star Suvarna) ವಾಹಿನಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ʼಬೊಂಬಾಟ್ ಭೋಜನʼದಲ್ಲಿ ಈ ಬಾರಿ ʼರಾಮ ನವಮಿ’ (Rama Navami) ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ. ಈ ರಾಮನವಮಿಯ ವಿಶೇಷ ಸಂಚಿಕೆಯಲ್ಲಿ ವಿಶೇಷ ಅತಿಥಿ ಪಾಲ್ಗೊಳ್ಳಲಿದ್ದಾರೆ. ಅವರೇ ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj).

ಅರುಣ್ ಯೋಗಿರಾಜ್ ಅವರ ಮನೆಯಲ್ಲಿ ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಈ ಸಡಗರಕ್ಕೆ ಸ್ಟಾರ್‌ ಸುವರ್ಣ ವಾಹಿನಿಯ ಬೊಂಬಾಟ್‌ ಭೋಜನ ತಂಡವೂ ಸಾಕ್ಷಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ಅವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಅವರು ಬಿಚ್ಚಿಟ್ಟಿದ್ದಾರೆ.

ʼಬೊಂಬಾಟ್ ಭೋಜನʼದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು ಅವರು ಅರುಣ್ ಯೋಗಿರಾಜ್ ಅವರಿಗೆ ಗೌರವಾರ್ಪಣೆಯೊಂದಿಗೆ ಸನ್ಮಾನ ನಡೆಸಿದ್ದಾರೆ. ಜತೆಗೆ ಈ ವಿಶೇಷ ಸಂಚಿಕೆಗೆ ಗಾಯಕ ಶ್ರೀ ಚಿನ್ಮಯಿ ಅತ್ರೇಯಸ್ ಅವರೂ ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿದ್ದಾರೆ.

ಯಾವಾಗ ಪ್ರಸಾರ?

ಅಂದ ಹಾಗೆ ʼಬೊಂಬಾಟ್ ಭೋಜನʼದ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ (ಏಪ್ರಿಲ್‌ 17) ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

Continue Reading

ಕಿರುತೆರೆ

Namratha Gowda: ಸಖತ್‌ ಕ್ಯೂಟ್‌ ಆಗಿರೋ ಕಾರು ಖರೀದಿಸಿದ ನಮ್ರತಾ ಗೌಡ! ವೈಶಿಷ್ಟ್ಯವೇನು?

Namratha Gowda: ನಾಗಿಣಿ 2, ಬಿಗ್ ಬಾಸ್ ಸೀಸನ್ 10 (Bigg Boss Kannada 10) ಶೋ ಮೂಲಕ ಗಮನ ಸೆಳೆದ ನಮ್ರತಾ ಗೌಡ (Namratha Gowda) ಹುಟ್ಟುಹಬ್ಬದ ಸೆಲೆಬ್ರೇಶನ್ ಮೂಡ್‌ನಲ್ಲಿ ಇದ್ದಾರೆ. ಇದರ ನಡುವೆ ಪುಟಾಣಿ ಕಾರು ಖರೀದಿಸುವ ಮೂಲಕ ನಟಿ ಸಂಭ್ರಮಿಸಿದ್ದಾರೆ.‌ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ನಮ್ರತಾ ಗೌಡ ಅವರ ಬೇಡಿಕೆ ಈಗ ಹೆಚ್ಚಾಗಿದೆ. ಕಿರುತೆರೆ, ಹಿರಿತೆರೆ ಮತ್ತು ಜಾಹೀರಾತುಗಳಿಗೆ ಅವಕಾಶಗಳು ಹರಿದು ಬರುತ್ತಿವೆ.

VISTARANEWS.COM


on

Namratha Gowda Buys New MG Comet EV Car
Koo

ಬಿಗ್ ಬಾಸ್ ಸೀಸನ್ 10 ಶೋ (Namratha Gowda) ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿರುವ ನಟಿ ನಮ್ರತಾ ಗೌಡ ಹುಟ್ಟುಹಬ್ಬದ ಸಂಭ್ರಮದಲ್ಲಿಯೇ ಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ.

ನಮ್ರತಾ ಗೌಡ ಎಂಜಿ ಮೋಟಾರ್ ನಿರ್ಮಾಣದ ಕಾಮೆಟ್ ಇವಿ ಕಾರು ಖರೀದಿಸಿದ್ದು (Best EV Car in India), ನಮ್ರತಾ ಖುಷಿ ನೋಡಿ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ: Namratha Gowda: ವೃದ್ಧಾಶ್ರಮಕ್ಕೆ ನಮ್ರತಾ ಪೋಷಕರು ಸಹಾಯ ಹಸ್ತ; ವೋಟ್‌ಗೋಸ್ಕರ ಡ್ರಾಮ ಅಂದ್ರು ನೆಟ್ಟಿಗರು!

ಕಾಮೆಟ್ ಇವಿ (Comet EV Car) ಕಾರು ಸದ್ಯ ಮಾರುಕಟ್ಟೆಯಲ್ಲಿ ಪೇಸ್, ಪ್ಲೇ ಮತ್ತು ಪ್ಲಶ್ ಎನ್ನುವ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

ಹೊಸ ಕಾರಿನಲ್ಲಿ 3.3kW ಹೋಂ ಚಾರ್ಜರ್ ನೀಡಲಾಗಿದ್ದು, ಇದರೊಂದಿಗೆ 100% ಬ್ಯಾಟರಿ ಚಾರ್ಜ್ ಆಗಲು 7 ಗಂಟೆ ಸಮಯಾವಕಾಶ ತೆಗೆದುಕೊಳ್ಳುತ್ತದೆ.

Continue Reading

ಸ್ಯಾಂಡಲ್ ವುಡ್

Ondu Sarala Prema Kathe: ಇಂದೇ ಕಿರುತೆರೆಯಲ್ಲಿ ಪ್ರಸಾರ ʻಒಂದು ಸರಳ ಪ್ರೇಮಕಥೆʼ!

Ondu Sarala Prema Kathe: ಒಂದೊಳ್ಳೆ ಬ್ರೇಕ್‌ಗಾಗಿ ಕಾಯುತ್ತಿದ್ದ ಅಣ್ಣಾವ್ರ ಮೊಮ್ಮಗನಿಗೆ ‘ಒಂದು ಸರಳ ಪ್ರೇಮಕಥೆ’ ಗೆಲುವಿನ ಟಾನಿಕ್ ನೀಡಿರುವುದು ಸುಳ್ಳಲ್ಲ. ಕಡಿಮೆ ಬಜೆಟ್‌ನಲ್ಲೇ ನಿರ್ಮಾಣವಾಗಿದ್ದ ಸಿನಿಮಾ ಉತ್ತಮ ಗಳಿಕೆ ಕಂಡು ಗೆಲುವಿನ ದಡ ಸೇರಿತ್ತು.ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್, ನಾಯಕ ವಿನಯ್, ನಾಯಕಿಯರಾದ ಸ್ವಾತಿಷ್ಠಾ, ಮಲ್ಲಿಕಾ ಅಮೋಘ ಅಭಿನಯ, ವೀರ್ ಸಮರ್ಥ್ ಅವರ ಟ್ಯೂನ್ ಸಿನಿರಸಿಕರು ಸಖತ್ ಇಷ್ಟಪಟ್ಟಿದ್ದರು.

VISTARANEWS.COM


on

Ondu Sarala Prema Kathe in star suvarna
Koo

ಬೆಂಗಳೂರು: ಪ್ರೇಕ್ಷಕರ ಪ್ರೀತಿ ಪಡೆದ ʻಒಂದು ಸರಳ ಪ್ರೇಮಕಥೆʼ ಸಿನಿಮಾ (Ondu Sarala Prema Kathe) ಇಂದು (ಏ.14)ರಂದು ಸ್ಟಾರ್ ಸುವರ್ಣ (Star suvarna) ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಫೆಬ್ರವರಿ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಎಲ್ಲ ವರ್ಗದ ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು. ವಿನಯ್‌ ರಾಜ್‌ಕುಮಾರ್‌ ಮತ್ತು ನಿರ್ದೇಶಕ ಸಿಂಪಲ್‌ ಸುನಿ ಕಾಂಬಿನೇಷನ್‌ನ ಮೋಡಿ ಮಾಡಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿದ್ದ ʻಒಂದು ಸರಳ ಪ್ರೇಮಕಥೆʼ ಬಾಕ್ಸಾಫೀಸ್‌ನಲ್ಲಿಯೂ ಉತ್ತಮ ಗಳಿಕೆ ಕಂಡಿತ್ತು.

ಸುನಿ ಅವರ ಪಂಚಿಂಗ್ ಮಾತು, ಪ್ರೀತಿ, ಭಾವುಕತೆ, ಸುಮಧುರ ಗಾಯನ ಹೀಗೆ ಎಲ್ಲ ವಿಚಾರಗಳಲ್ಲಿಯೂ ʻಒಂದು ಸರಳ ಪ್ರೇಮಕಥೆʼ ಮನರಂಜನೆ ನೀಡಿತ್ತು. ಸ್ವಾತಿಷ್ಠ ಕೃಷ್ಣನ್ ಮತ್ತು ಮಲ್ಲಿಕಾ ಸಿಂಗ್ ನಾಯಕಿಯರಾಗಿ ನಟಿಸಿದ್ದರು. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧು ಕೋಕಿಲ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿದ್ದರು.

ಒಂದೊಳ್ಳೆ ಬ್ರೇಕ್‌ಗಾಗಿ ಕಾಯುತ್ತಿದ್ದ ಅಣ್ಣಾವ್ರ ಮೊಮ್ಮಗನಿಗೆ ‘ಒಂದು ಸರಳ ಪ್ರೇಮಕಥೆ’ ಗೆಲುವಿನ ಟಾನಿಕ್ ನೀಡಿರುವುದು ಸುಳ್ಳಲ್ಲ. ಕಡಿಮೆ ಬಜೆಟ್‌ನಲ್ಲೇ ನಿರ್ಮಾಣವಾಗಿದ್ದ ಸಿನಿಮಾ ಉತ್ತಮ ಗಳಿಕೆ ಕಂಡು ಗೆಲುವಿನ ದಡ ಸೇರಿತ್ತು.

ಇದನ್ನೂ ಓದಿ: Ondu Sarala Premakathe: ಒಟಿಟಿಗೆ ಬಂದೇ ಬಿಡ್ತು ʻಒಂದು ಸರಳ ಪ್ರೇಮಕಥೆʼ; ಕನ್ನಡಿಗರ ಆಕ್ರೋಶ!

ಕರ್ನಾಟಕದಲ್ಲಿ ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ಚಿತ್ರವನ್ನು ವಿತರಣೆ ಮಾಡಿತ್ತು. ಬೆಂಗಳೂರು, ಮೈಸೂರು, ರಾಜಸ್ಥಾನ ಹಾಗೂ ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿತ್ತು. ಮೈಸೂರು ರಮೇಶ್ ‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ಬಂಡವಾಳ ಹೂಡಿದ್ದರು.

ತಮ್ಮ ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆಯುತ್ತಾ ಬರ್ತಿದ್ದಾರೆ. ‘ಅವತಾರ ಪುರುಷ’ ಬಳಿಕ ಸುನಿ ‘ಗತವೈಭವ’ ಸಿನಿಮಾ ಕೈಗೆತ್ತಿಕೊಂಡಿದ್ದರು. ಬಳಿಕ ಸದ್ದಿಲ್ಲದೇ ‘ಒಂದು ಸರಳ ಪ್ರೇಮಕಥೆ’ ಶುರು ಮಾಡಿದ್ದರು.

Continue Reading

ಕಿರುತೆರೆ

Skanda Ashok: ‘ರಾಧಾ ರಮಣ’ ಹೀರೊ ಇನ್‌ಸ್ಟಾಗ್ರಾಮ್‌ ಹ್ಯಾಕ್: ವಂಚನೆಗೆ ಯತ್ನ!

Skanda Ashok: ಸ್ಕಂದ ಅಶೋಕ್ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಅವರ ಫಾಲೋವರ್ಸ್‌ಗಳಿಗೆ ಮೆಸೇಜ್ ಕಳುಹಿಸಿ, ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಅಕೌಂಟ್ ಹ್ಯಾಕ್ ಆದ ಲೊಕೆಷನ್ ಪರಿಶೀಲಿಸಿದ್ದಾರೆ. ಈ ಸಂಬಂಧ ಅಶೋಕ್ ಮೈಕ್ರೋ ಲೇಔಟ್‌ ಪೊಲೀಸರಿಗೆ ದೂರು ನೀಡಿದ್ದಾರೆ.

VISTARANEWS.COM


on

Skanda Ashok Social Media Hack
Koo

ಬೆಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಅವರ ಫಾಲೋವರ್ಸ್‌ಗಳಿಗೆ ಮೆಸೇಜ್ ಕಳುಹಿಸಿ, ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಅದೇ ರೀತಿ ಧಾರಾವಾಹಿ ನಟ ಸ್ಕಂದ ಅಶೋಕ್ (Skanda Ashok) ಅವರ ಸೋಷಿಯಲ್ ಮೀಡಿಯಾ ಖಾತೆಯನ್ನು ಹ್ಯಾಕ್ (Social Media Hack) ಮಾಡಿ ವಂಚನೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅಶೋಕ್ ಮೈಕ್ರೋ ಲೇಔಟ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿಯಲ್ಲಿ ನಾಯಕ ರಮಣನಾಗಿ ನಟಿಸುವ ಮೂಲಕ ಕಿರುತೆರೆಗೆ ಎಂಟ್ರಿ ಪಡೆದ ಹೆಣ್ಣು ಮಕ್ಕಳ ಹೃದಯ ಕದ್ದ ಸ್ಕಂದ ಅಶೋಕ್‌ ಇದೀಗ ಸೈಬರ್ ಪ್ರಕರಣದಲ್ಲಿ ಸಿಲುಕಿದ್ದಾರೆ. ಸ್ಕಂದ ಅಶೋಕ್ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ದುರ್ಬಳಕೆ ಮಾಡಿಕೊಂಡು ವಂಚನೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಕಂದ ಅಶೋಕ್ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಅವರ ಫಾಲೋವರ್ಸ್‌ಗಳಿಗೆ ಮೆಸೇಜ್ ಕಳುಹಿಸಿ, ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಅಕೌಂಟ್ ಹ್ಯಾಕ್ ಆದ ಲೊಕೆಷನ್ ಪರಿಶೀಲಿಸಿದ್ದಾರೆ. ಚೆನೈ ಹಾಗೂ ಬೆಂಗಳೂರು ಮತ್ತು ನೈಜೀರಿಯಾ ಸ್ಥಳ ಎಂಬುದು ಪತ್ತೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Honeybee Attack : ಹುಲಿ ‌ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ; ಬೆದರಿ ಓಡಿ‌ದ ಸಾಕಾನೆ ಭೀಮ

‘ಅವನು ಮತ್ತು ಶ್ರಾವಣಿ’ (Avanu Mathe Shravani)ಎನ್ನುವ ಹೆಸರಿನ ಹೊಸ ಧಾರಾವಾಹಿ ಮೂಲಕ ಸ್ಕಂದ ಅಶೋಕ್‌ ಕಿರುತೆರೆಗೆ ಮರಳಿದ್ದರು. ಮಲಯಾಳಂನ ‘ನೋಟ್ ಬುಕ್’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ನಟನೆಗೆ ಕಾಲಿಟ್ಟ ಸ್ಕಂದ ಮೊದಲ ಸಿನಿಮಾಕ್ಕೆ ಏಷಿಯನೆಟ್ ಫಿಲಂ ನೀಡುವ ಹೊಸ ಮುಖ ಪ್ರಶಸ್ತಿ ಪಡೆದಿದ್ದರು. ಮಲಯಾಳಂನ ‘ಪಾಸಿಟಿವ್’, ತೆಲುಗಿನ ‘ಮಲ್ಲಿ ಮಲ್ಲಿ’, ಮಲಯಾಳಂನ ‘ಎಲೆಕ್ಟ್ರಾ’, ತಮಿಳಿನ ‘ಅಂಗುಸಂ’ ಹಾಗೂ ‘ಮುಪ್ಪರಿಮಾನಂ’ ಸಿನಿಮಾಗಳಲ್ಲಿ ನಟಿಸಿ ವೀಕ್ಷಕರ ಮನ ಸೆಳೆದ ಸ್ಕಂದ ‘ಚಾರುಲತಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಸು’ ಧಾರಾವಾಹಿಯಲ್ಲಿ ನಾಯಕ ಅರವಿಂದ ಆಗಿ ನಟಿಸುವ ಮೂಲಕ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಚಾರುಲತಾ’ ಸಿನಿಮಾದ ನಂತರ ‘ಯೂ ಟರ್ನ್’ ಸಿನಿಮಾದಲ್ಲಿ ಪುಟ್ಟ ಪಾತ್ರವೊಂದರಲ್ಲಿ ನಟಿಸಿದ ಇವರು ತದ ನಂತರ ‘ಕಾನೂರಾಯಣ’, ‘ಜಿಗ್ರಿ ದೋಸ್ತ್’, ‘ದೇವಯಾನಿ’, ‘ಭೈರಾದೇವಿ’ ಹಾಗೂ ‘ರಣಾಂಗಣ’ ‘ಫ್ಲಾಟ್ ನಂ 9’, ‘ಬರ್ಬರಿಕಾ’ ಸಿನಿಮಾದಲ್ಲಿ ಸ್ಕಂದ ಬಣ್ಣ ಹಚ್ಚಿದ್ದಾರೆ.

Continue Reading
Advertisement
2nd PUC Exam
ಕರ್ನಾಟಕ6 mins ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

Lok Sabha Election
ದೇಶ8 mins ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Kanker Encounter
ದೇಶ13 mins ago

Kanker Encounter: ಎನ್‌ಕೌಂಟರ್‌ನಲ್ಲಿ 18 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Karnataka weather Forecast
ಮಳೆ45 mins ago

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Oil Pulling
ಆರೋಗ್ಯ48 mins ago

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

UPSC Results 2023
ಪ್ರಮುಖ ಸುದ್ದಿ51 mins ago

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

Take action to close failed borewell says Vijayanagara DC MS Diwakar
ವಿಜಯನಗರ60 mins ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ1 hour ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ1 hour ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ1 hour ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ14 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌