Anchor Aparna: `ನಮ್ಮ ಮೆಟ್ರೋ'ಗೆ ಅಪರ್ಣಾ ಧ್ವನಿ ಆಯ್ಕೆ ಆಗಿದ್ದು ಹೇಗೆ? ಅವರ ಮೊದಲ ಪ್ರಯಾಣದ ಕಥೆಯೇ ರೋಚಕ! - Vistara News

ಕಿರುತೆರೆ

Anchor Aparna: `ನಮ್ಮ ಮೆಟ್ರೋ’ಗೆ ಅಪರ್ಣಾ ಧ್ವನಿ ಆಯ್ಕೆ ಆಗಿದ್ದು ಹೇಗೆ? ಅವರ ಮೊದಲ ಪ್ರಯಾಣದ ಕಥೆಯೇ ರೋಚಕ!

Anchor Aparna: ಅಪರ್ಣಾ ಅವರ ಧ್ವನಿಯನ್ನು ಮೆಟ್ರೋದಲ್ಲಿ ಮೊಳಗುವುದಕ್ಕೆ ಆರಂಭ ಆದ ಮೇಲೆ ಕನ್ನಡಿಗರು ಖುಷಿಯನ್ನು ವ್ಯಕ್ತಪಡಿಸಿದ್ದರು. ಸ್ವತ: ಅಪರ್ಣಾ ಅವರು ಮೆಟ್ರೋದಲ್ಲಿ ತಮ್ಮದೇ ಧ್ವನಿಯನ್ನು ಕೇಳುವುದಕ್ಕೆ ಹೋಗಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

VISTARANEWS.COM


on

Anchor Aparna voice to namma metro Death Famous Anchor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (Anchor Aparna) ಅವರು ನಿಧನರಾಗಿದ್ದಾರೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಮೆಟ್ರೋ ಆರಂಭ ಆದಾಗ, ಪ್ರಯಾಣಿಕರಿಗೆ ಮಾಹಿತಿಯನ್ನು ನೀಡುವುದಕ್ಕೆ ಮೊದಲು ಇವರ ಧ್ವನಿಯನ್ನೇ ಆಯ್ಕೆ ಮಾಡಲಾಗಿತ್ತು. ನಿಜಕ್ಕೂ ಮೆಟ್ರೋಗೆ ಕಳೆ ಅಂತ ಬಂದಿದ್ದೇ ಇವರ ಧ್ವನಿಯಿಂದ. ಅಪರ್ಣಾ ಅವರ ಧ್ವನಿಯನ್ನು ಮೆಟ್ರೋದಲ್ಲಿ ಮೊಳಗುವುದಕ್ಕೆ ಆರಂಭ ಆದ ಮೇಲೆ ಕನ್ನಡಿಗರು ಖುಷಿಯನ್ನು ವ್ಯಕ್ತಪಡಿಸಿದ್ದರು. ಸ್ವತ: ಅಪರ್ಣಾ ಅವರು ಮೆಟ್ರೋದಲ್ಲಿ ತಮ್ಮದೇ ಧ್ವನಿಯನ್ನು ಕೇಳುವುದಕ್ಕೆ ಹೋಗಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ʻʻನನಗೂ ಮೆಟ್ರೋಗೂ ಅದ್ಯಾವ ರೀತಿಯ ಸಂಬಂಧ ಅಂದರೆ, ತುಂಬ ಹೆಮ್ಮೆ ಎನಿಸುತ್ತೆ. ಒಂದು ದಿನ ನನಗೆ ಕರೆ ಬಂತು. 12 ವರ್ಷದ ಹಿಂದೆನೇ ಆಗಿರಬಹುದು. ನಿಮ್ಮದೊಂದು ವಾಯ್ಸ್‌ ನಮ್ಮ ಮೆಟ್ರೋಗೆ ಬೇಕು ಹೇಳಿದರು. ಆ ಮೇಲೆ ಏನಿದು ಅಂತ ಕೇಳಿದಾಗ, ನಿಮ್ಮದೊಂದು ವಾಯ್ಸ್ ಸ್ಯಾಂಪಲ್ ಕೊಡಿ ಎಂದು ಹೇಳಿದ್ದರು. ಆದರೆ ಅಪರ್ಣಾಗೆ ಹೇಗೆ ಧ್ವನಿ ಕೊಡಬೇಕು ಎಂದು ಗೊತ್ತಿರಲಿಲ್ಲ. ಬಳಿಕ ನ್ಯೂಸ್‌ ಪೇಪರ್‌ ಇಟ್ಟಕೊಂಡು ಧ್ವನಿ ನೀಡಿದ್ದರು. ಚೆನ್ನೈನಲ್ಲಿ ಈ ಎಲ್ಲ ನಿರ್ಧಾರಗಳನ್ನು ತೆಗದುಕೊಳ್ಳುತ್ತಿದ್ದರು. ಜಯನಗರ, ಈಗ ಏನೇನು ಬರುತ್ತೆ ಬಾಗಿಲನ್ನು ತೆರೆದು ಅಂತೆಲ್ಲ. ಇದೆಲ್ಲ ಯಾಕೆ? ಅವರನ್ನು ಕೇಳಿದೆ. ನನಗೆ ಐಡಿಯಾ ಇಲ್ಲ. ಇದೆಲ್ಲ ಹೆಂಗೆ ಬರುತ್ತೆ ಅಂತ ಆಗ ಅವರು ವಿವರಣೆ ಕೊಟ್ಟರು” ಎಂದು ಅಪರ್ಣಾ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Anchor Aparna: ಅಗಲಿದ ಅಪರ್ಣಾಗೆ ಸಿಎಂ, ಡಿಸಿಎಂ, ವಿಜಯೇಂದ್ರ ಮುಂತಾದ ಗಣ್ಯರ ಸಂತಾಪ

ಬಳಿಕ ಇಷ್ಟಾದರೂ ಅಪರ್ನಾ ಅವರು ಮೆಟ್ರೋಗೆ ಹೋಗೇ ಇರಲಿಲ್ಲ ಅಂತೆ. ದೀಪಾವಳಿ ಹಬ್ಬದ ದಿನ ಬನಶಂಕರಿಯಿಂದ ಎಂಜಿ ರಸ್ತೆವರೆಗೂ ಹೋಗಿ, ಬೈಯಪ್ಪನಹಳ್ಳಿವರೆಗೂ ಧ್ವನಿ ಹೇಗೆ ಇರಲಿದೆ ಎಂಬ ಕುತೂಹಲ ದಿಂದ ಪ್ರಯಾಣ ಮಾಡಿರುವುದಾಗಿ ಹೇಳಿಕೊಂಡಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಕಿರುತೆರೆ

Sunny Mahipal: ಗರ್ಭಿಣಿ ಪತ್ನಿ ಮೇಲೆ ʻನೇತ್ರಾವತಿʼ ಸೀರಿಯಲ್‌ ನಟನಿಂದ ಹಲ್ಲೆ ಆರೋಪ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

Sunny Mahipal: ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ.

VISTARANEWS.COM


on

Sunny Mahipal Nethravathi Serial Actor Kick His Pregnant Wife
Koo

ಬೆಂಗಳೂರು: ಒಬ್ಬರ ಜತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ʻನೇತ್ರಾವತಿʼ ಧಾರಾವಾಹಿ ನಟನ ವಿರುದ್ಧ ಆರೋಪ ಕೇಳಿ (Sunny Mahipal) ಬಂದಿದೆ. ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದು ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗೆಳೆದ ಸನ್ನಿ ಮಹಿಪಾಲ್‌ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್‌ ಎ. ಎಲ್‌ ಠಾಣೆಗೆ ದೂರು ನೀಡಿದ್ದಾರೆ.

ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ. ಈ ಯುವತಿ ಲಾ ಸ್ಟೂಡೆಂಟ್ ಆಗಿದ್ದಳು. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಶುರುವಾಗಿದೆ. ಬಳಿಕ ಅವರನ್ನು ಸನ್ನಿ ಪ್ರೀತಿ ಮಾಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಮದುವೆಯಾಗೋದಾಗಿ ನಂಬಿಸಿದ್ದರು. ಜೂನ್ 15ರಂದು ಸನ್ನಿ ಮಹಿಪಾಲ್ ಜೊತೆಗೆ ಯುವತಿ ದೇವಸ್ಥಾನದಲ್ಲಿ ವಿವಾಹ ಆದರು. ಸದ್ಯ ಮಹಿಳೆ ಎರಡು ತಿಂಗಳ ಗರ್ಭಿಣಿ.

ಇದಾದ ಬಳಿಕ ನಟ ಮತ್ತೊಂದು ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಪ್ರಶ್ನಿಸಲು ಹೋದ ಪತ್ನಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಪತಿ ಪತ್ನಿ ಮದುವೆಯಾದರು ಒಟ್ಟಿಗೆ ಇರಲಿಲ್ಲ .ನಮ್ಮ ಪೋಷಕರನ್ನ ಒಪ್ಪಿಸಿ ಮತ್ತೆ ಬರುತ್ತೇನೆ ಎಂದು ನಟ ಕಾಗೆ ಹಾರಿಸಿದ್ದ .ಅಲ್ಲದೇ ಸ್ನೇಹಿತರ ರೀತಿಯೇ ಇರಬೇಕು. ಸ್ನೇಹಿತರಂತೆಯೇ ಮೆಸೆಜ್ ಮಾಡ್ಬೇಕು ಎಂದು ಕಂಡಿಷನ್ ಹಾಕಿದ್ದನಂತೆ. ಅದರಂತೆಯೇ ಮಹಿಪಾಲ್ ಪತ್ನಿ ನಡೆದು ಕೊಂಡಿದ್ದರು. ಅದಾಗಲೇ ಕೆಲ ದಿನದ ಹಿಂದೆ ಬೇರೆ ಯುವತಿ ಜೊತೆಗೆ ಮಹಿಪಾಲ್ ಎಂಗೆಜ್ಮೆಂಟ್ ಆಗಿದ್ದನಂತೆ. ಇದನ್ನು ಪ್ರಶ್ನಿಸಲು 22 ರಂದು ರಾತ್ರಿ ಮಹಿಪಾಲ್ ಮನೆಗೆ ಪತ್ನಿ ಹೋಗಿದ್ದಾರೆ. ರಾತ್ರಿ 9.30 ಕ್ಕೆ ವಿಜ್ಙಾನ ನಗರ ದಲ್ಲಿರುವ ಮಹಿಪಾಲ್ ನಿವಾಸಕ್ಕೆ ಪತ್ನಿ ಹೋಗಿದ್ದರು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ಈ ವೇಳೆ ಗಲಾಟೆಯಾಗಿ ಪತ್ನಿ ಮೇಲೆ ನಟ ಹಲ್ಲೆ ನಡೆಸಿದ್ದಾರೆ. ಚಾಕುವಿನಿಂದ ತೋಳಿಗೆ ಇರಿದ ಆರೋಪ ಮಾಡಲಾಗಿದೆ. ಗಲಾಟೆಯಲ್ಲಿ ಗರ್ಭಪಾತ ಆಗಿರೋದಾಗಿ ಪತ್ನಿ ಹೇಳಿಕೆ ನೀಡಿದ್ದಾರೆ. ಹೊಟ್ಟೆಗೆ ಏಟಾಗಿ ಗರ್ಭಪಾತ ಆಗಿದೆ ಎಂದು ಪತ್ನಿ ಅಳಲು ತೋಡಿಕೊಂಡಿದ್ದಾರೆ.  ಗಲಾಟೆ ಆದ ಮೇಲೆ 112ಕ್ಕೆ ಮಹಿಪಾಲ್ ಪತ್ನಿ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಭೇಟಿ ಕೊಟ್ಟಿದ್ದರು. ಗರ್ಭಪಾತದಿಂದಾಗಿ ಮಹಿಳೆಗೆ ರಕ್ತಸ್ರಾವವಾಗುತ್ತಿತ್ತು. ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸರಿಗೆ ಅವರು ಮನವಿ ಮಾಡಿದ್ದರು. ಆದರೆ, ನಮ್ಮ ಬಳಿ ಮಹಿಳಾ ಸಿಬ್ಬಂದಿ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವತಃ ತಾವೆ ಕಾರು ಚಲಾಯಿಸಿಕೊಂಡು ಬಂದು ಅವರು ಆಸ್ಪತ್ರೆ ಸೇರಿದ್ದಾರೆ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅತ್ತ ಹೆಚ್ಎಎಲ್ ಪೊಲೀಸ್ ಠಾಣೆಗೆ ತೆರಳಿ ಸನ್ನಿ ಮಹಿಪಾಲ್ ಮನೆಗೆ ಅತಿಕ್ರಮ ಪ್ರವೇಶ ಮಾಡಿರೋದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಬಲವಂತದಿಂದ ಮದುವೆಯಾಗಿರೋದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ದೂರು ಪಡೆದು ಹೆಚ್ಎಎಲ್ ಪೊಲೀಸರು ಸುಮ್ಮನಾಗಿದ್ದಾರೆ. ಇನ್ನೂ ಮಾಹಿತಿ ಪ್ರಕಾರ ಹಲ್ಲೆಗೂ ಮುನ್ನ ಗರ್ಭಪಾತ ಮಾಡಿಸಲು ಪತ್ನಿಗೆ ನಟ ಕಿರುಕುಳ ನೀಡಿದ್ದರು ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Chaitra Vasudevan: ನಾನು ಸಿಲ್ಲಿ ಹುಡುಗಿ ಅಲ್ಲ..ನನ್ನಂತವರಿಗೂ ಮೋಸ ಆಗುತ್ತದೆ ಅಂದುಕೊಂಡಿರಲಿಲ್ಲ ಎಂದ ಆ್ಯಂಕರ್ ಚೈತ್ರಾ!

Chaitra Vasudevan: ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Chaitra Vasudevan says not a silly girl never thought that someone cheated me
Koo

ಬೆಂಗಳೂರು: ಬಿಗ್‌ ಬಾಸ್‌ʼನಿಂದ ಹೆಚ್ಚು ಜನಪ್ರಿಯರಾಗಿರುವ ಆ್ಯಂಕರ್ ಚೈತ್ರಾ ವಾಸುದೇವನ್‌ (Chaitra Vasudevan) ಅವರು ತಮ್ಮ ದಾಂಪತ್ಯಕ್ಕೆ ವಿಚ್ಛೇದನ ನೀಡಿರುವುದು ಗೊತ್ತೇ ಈದೆ. ಚೈತ್ರಾ ಅನೌನ್ಸ್‌ ಮಾಡಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸೋಷಿಯಲ್‌ ಮೀಡಿಯಾದಲ್ಲಿ ನಡೆಯಿತು. ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

ಚೈತ್ರಾ ಮಾತನಾಡಿ ʻʻನಾನು ಈ ಬಗ್ಗೆ ಅನೌನ್ಸ್‌ ಮಾಡುವೆ ಮೊದಲೇ ಡಿವೋರ್ಸ್‌ ಮಾಡಿದ್ದೆ. ಈ ಬಗ್ಗೆ ನಾನು ಎಲ್ಲಿಯೂ ಹೇಳಲು ಇಷ್ಟ ಪಟ್ಟಿರಲಿಲ್ಲ. ನನ್ನ ತಂದೆ ತಾಯಿ ಕೂಡ ಆಗ ನನ್ನ ಜತೆ ನಿಂತು, ನಿನ್ನ ಜವಾಬ್ದಾರಿ ಅಂದಿದ್ದರು. ಬೇರೆಯವರ ಕರ್ಮ ಅವರು ಅನುಭವಿಸುತ್ತಾರೆ. ಎಲ್ಲೂ ಕಂಪ್ಲೇನ್‌ ಮಾಡಬೇಡು ಎಂದು ತಂದೆ ತಾಯಿ ಹೇಳಿದ್ದರು. ಕ್ಷುಲ್ಲಕ ಕಾರಣಕ್ಕೆ ಸಪ್‌ರೇಟ್‌ ಆದರು ಎನ್ನುವ ಗಾಸಿಪ್‌ ಹರಡಿತ್ತು. ಆದರೆ ರಿಯಲ್‌ ರೀಸನ್‌ ಬೇರೆ ಇದೆ. ನನ್ನ ಕುಟುಂಬ ಅಂದರೆ ನಾನು, ನನ್ನ ತಂದೆ ತಾಯಿ, ಸೇರಿ ಮೋಸ ಹೋದೆವು. ಮಾನಸಿಕವಾಗಿ, ದೈಹಿಕವಾಗಿ, ಭಾವನಾತ್ಮಕವಾಗಿ ಮೋಸ ಹೋದೆವು. ಆದರೆ ನಾನು 5 ವರ್ಷಗಳ ಕಾಲ ಕಾದೆ. ಎನೋ ಒಂದು ಆಗತ್ತೆ ಅಂತ. ನಾನು ಸಿಲ್ಲಿ ಹುಡುಗಿ ಅಲ್ಲ. ಏನೋ ಅಚೀವ್‌ ಮಾಡಬೇಕು..ಏನೋ ಮಾಡಬೇಕು ಎಂದು ದುಡ್ಡು ದುಡೀಬೇಕು ಎಂಬ ಕಾರಣಕ್ಕೆ ಸಪ್‌ರೇಟ್‌ ಆಗ್ತೀನಿ ಎನ್ನುವ ಸಿಲ್ಲಿ ಹುಡುಗಿ ನಾನಲ್ಲ. ನಾನು ಪ್ಲ್ಯಾನ್‌ ಮುಂಚೆ ಹೇಗ್‌ ಮಾಡಿದ್ದೆ ಅಂದರೆ, ನನ್ನ ಕುಟುಂಬ, ನನ್ನ ಫ್ಯಾಮಿಲಿ, ಅತ್ತೆ ಮಾವ ಹೀಗೆ ಜತೆಗೆ ಇರಬೇಕು, ಮಕ್ಕಳು ಇರಬೇಕು ಎಂದು ಬಯಸಿದ್ದೆ. ಆದರೆ ಕನಸು ನನಸಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಏನು ಮಾಡಕ್ಕೆ ಆಗದೇ ಸುಮ್ಮನೇ ಇದ್ದೆ. ಕೆಟ್ಟ ದಿನಗಳು ಆಗಿದ್ದವು. ಯಾರಾದರೂ ಬಂದು ನನ್ನ ಸೇವ್‌ ಮಾಡ್ತಾರಾ ಎನ್ನುವ ಪರಿಸ್ಥಿತಿ ಇತ್ತು. ಆ ತರ ನಾನು ಹಾತೊರೆಯುತ್ತಿದ್ದೆ. ಪ್ರೀತಿ ಮಾಡಿ, ಆದರೆ ನಿಜ ಹೇಳಿ. ಆದರೆ ಯಾರಿಗೂ ಮೋಸ ಮಾಡಬೇಡಿ. ಆದರೆ ನಾನು ಯಾರಿಗೂ ಮೋಸ ಮಾಡಿಲ್ಲ. ಆದರೆ ನನಗೆ ಹೀಗ್‌ ಆಯ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Chaitra Vasudevan: ಅಹಂಕಾರದಿಂದ ಬೇರೆಯಾಗಿಲ್ಲ ಎಂದು ಡಿವೋರ್ಸ್‌ ಅಸಲಿ ಕಾರಣ ತಿಳಿಸಿದ ಆ್ಯಂಕರ್ ಚೈತ್ರಾ!

ಕುಂದಾಪುರದ ಹುಡುಗಿ ಚೈತ್ರಾ ಜತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.

ಡಿವೋರ್ಸ್‌ ಪೋಸ್ಟ್‌ ಹಂಚಿಕೊಂಡಿದ್ದ ಚೈತ್ರಾ

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದರು.

ಆ್ಯಂಕರ್ ಆಗಿದ್ದ ಚೈತ್ರಾ ‘ಬಿಗ್ ಬಾಸ್ (big boss) ಕನ್ನಡ ಸೀಸನ್ 7’ರ ಸ್ಪರ್ಧಿಯಾಗಿದ್ದರು. ಚೈತ್ರಾ ವಾಸುದೇವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಚೈತ್ರಾ ತಮ್ಮದೇ ಆದ ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ನಡೆಸುತ್ತಿದ್ದಾರೆ.

Continue Reading
Advertisement
Delhi Floods
ಪ್ರಮುಖ ಸುದ್ದಿ2 hours ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Paris Olympics 2024
ಕ್ರೀಡೆ2 hours ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ2 hours ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ3 hours ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ3 hours ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ3 hours ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ3 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ4 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ4 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ12 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ13 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌