Site icon Vistara News

Annayya Serial: ‘ಅಣ್ಣಯ್ಯ’ ಧಾರಾವಾಹಿಗೆ ರಿಷಬ್ ಶೆಟ್ಟಿ ಸಾಥ್‌; ಕಾರಣವೇನು?

Annayya Serial rishab shetty support

ಬೆಂಗಳೂರು: ಇತ್ತೀಚೆಗಷ್ಟೇ ‘ಸತ್ಯ’ ಧಾರಾವಾಹಿ (Annayya Serial) ಅಂತ್ಯ ಕಂಡಿತ್ತು. ಈ ಬೆನ್ನಲ್ಲೇ ಮತ್ತೊಂದು ಹೊಸ ಧಾರಾವಾಹಿ ಪ್ರಸಾರಕ್ಕೆ ರೆಡಿಯಾಗಿ ನಿಂತಿದೆ ಅದುವೇ ‘ಅಣ್ಣಯ್ಯ’. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಆಗಲಿದ್ದು, ಕೆಲವು ದಿನಗಳಿಂದ ಭರ್ಜರಿ ಪ್ರಚಾರ ಆರಂಭಿಸಿತ್ತು. ‘ಗಟ್ಟಿಮೇಳ’ ಧಾರಾವಾಹಿಯ ನಾಯಕಿ ನಿಶಾ ರವಿಕೃಷ್ಣನ್ ಮತ್ತೆ ‘ಅಣ್ಣಯ್ಯ’ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಹಾಗೇ ನಾಗೇಂದ್ರ ಶಾ, ವಿಕಾಶ್ ಉತ್ತಯ್ಯ ಸೇರಿದಂತೆ ಹಲವು ಮಂದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಈ ಧಾರಾವಾಹಿಗೆ ರಿಷಬ್ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ.

ʻಅಣ್ಣಯ್ಯ’ ಧಾರಾವಾಹಿಯನ್ನು ರಿಷಬ್ ಗೆಳೆಯ ಪ್ರಮೋದ್ ಶೆಟ್ಟಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಪೋಸ್ಟ್ ಕೂಡ ಹಾಕಿದ್ದಾರೆ. ಅವರು ಧಾರಾವಾಹಿ ನೋಡುವಂತೆ ಕೋರಿದ್ದಾರೆ.

‘ನಾನು ನಿಮಗೆ ಒಂದು ಕಥೆ ಹೇಳೋಣ ಎಂದು ಬಂದೆ. ನಮ್ಮ ಶಿವಣ್ಣಂದು. ಕಾಡು ಬೆಟ್ಟದ ಶಿವಣ್ಣ (ಕಾಂತಾರ ಕಥಾ ನಾಯಕನ ಪಾತ್ರ) ಅಲ್ಲ. ಮಾರಿಗುಡಿ ಶಿವಣ್ಣಂದು. ಇವನು ಹ್ಯಾಟ್ರಿಕ್ ಹೀರೋ ಶಿವಣ್ಣನ ರೀತಿಯೇ. ತಂಗಿ ಅಂದ್ರೆ ಪ್ರೀತಿ. ನಾಲ್ಕು ತಂಗಿಯರ ಬದುಕು ಚಂದ ಆಗಬೇಕು ಅನ್ನೋದೆ ಅವನ ದೊಡ್ಡ ಕನಸು. ಶಿವಣ್ಣನ ಕಥೆ ಇಷ್ಟೇ ಅಲ್ಲ, ಭಾರಿ ಉಂಟು. ನೋಡಿ ಮರ್ರೆ’ ಎಂದು ರಿಷಬ್ ಶೆಟ್ಟಿ ಕೋರಿದ್ದಾರೆ.

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

ನಾಲ್ಕು ಜನ ತಂಗಿಯರಿಗೆ ತಾಯಿಯ ಮಮತೆ ತೋರುತ್ತಾನೆ. ತಂಗಿಯಂದಿರ ಓದು- ಮದುವೆಯ ಕನಸು ಕಾಣುತ್ತಾನೆ.’ಪಾರು’ ಧಾರಾವಾಹಿಯ ಹನುಮಂತು ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಾಗೇಂದ್ರ ಶಾ ಇಲ್ಲಿ ವಿಶಿಷ್ಟ ಅವತಾರ ತಾಳಿದ್ದಾರೆ.

‘ಅಣ್ಣಯ್ಯ’ ಧಾರಾವಾಹಿಯಲ್ಲಿ ರಂಗಭೂಮಿ ಹಿನ್ನೆಲೆಯ ಅನುಭವಿ ಕಲಾವಿದರ ದೊಡ್ಡ ತಂಡವೇ ಇದೆ. ಶಿವಣ್ಣ- ಪಾರ್ವತಿ ಮತ್ತು ನಾಲ್ಕು ತಂಗಿಯರ ಕಥೆ ನಾಳೆಯಿಂದ (ಆಗಸ್ಟ್ 12) ರಾತ್ರಿ 7.30 ಕ್ಕೆ ಪ್ರಸಾರಗೊಳ್ಳಲಿದೆ. 7.30 ಕ್ಕೆ ಪ್ರಸಾರವಾಗುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಇನ್ಮುಂದೆ ಸಂಜೆ 6.30 ಕ್ಕೆ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.

Exit mobile version