BBK Season 10: ಬಿಗ್‌ಬಾಸ್‌ ಮನೆಯಲ್ಲಿ ಯಾರೂ ಮುಗ್ಧರಿಲ್ಲ!; ಇಶಾನಿ ಮನದಾಳ - Vistara News

ಕಿರುತೆರೆ

BBK Season 10: ಬಿಗ್‌ಬಾಸ್‌ ಮನೆಯಲ್ಲಿ ಯಾರೂ ಮುಗ್ಧರಿಲ್ಲ!; ಇಶಾನಿ ಮನದಾಳ

BBK Season 10: ಬಿಗ್‌ಬಾಸ್‌ ಮನೆಯೊಳಗೆ ಯಾರೂ ಮುಗ್ಧರಿಲ್ಲ-ಇದು ರ‍್ಯಾಪರ್‌ ಇಶಾನಿ ಅಭಿಪ್ರಾಯ. ಸ್ಪರ್ಧೆಯಿಂದ ಹೊರಬಿದ್ದ ಅವರು ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

VISTARANEWS.COM


on

eshani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿರುವ ಬಿಗ್‌ಬಾಸ್‌ (BBK Season 10) ಮನೆಯಿಂದ ಈ ಶನಿವಾರ ಹೊರಬಿದ್ದ ಸ್ಪರ್ಧಿ ರ‍್ಯಾಪರ್‌ ಇಶಾನಿ (Rapper Eshani). ಇಷ್ಟು ವಾರಗಳ ಕಾಲದ ಅವರ ಬಿಗ್‌ಬಾಸ್ ಜರ್ನಿ ಹೇಗಿತ್ತು? ಅವರು ಹೊರಬೀಳಲು ಕಾರಣವಾದ ಸಂಗತಿಗಳು ಏನು? ಎನ್ನುವ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಬಿಗ್‌ಬಾಸ್ ಮನೆಯಿಂದ ಹೊರಬಿದ್ದ ಮರುಕ್ಷಣವೇ JioCinemaಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಮಾತುಗಳಲ್ಲಿಯೇ ಕೇಳೋಣ.

ಆತ್ಮವಿಶ್ವಾಸ ಇತ್ತು

ಏನು ಹೇಳಬೇಕು ಎಂದು ಗೊತ್ತಾಗ್ತಿಲ್ಲ. ಬಿಗ್‌ಬಾಸ್ ಮನೆಯಿಂದ ಆಚೆ ಬಂದಿದೀನಿ. 99% ನಾನು ಇರ್ತೀನಿ ಅಂತ ಆತ್ಮವಿಶ್ವಾಸ ಇತ್ತು. ಉಳಿದ 1% ಆಗಲ್ಲ ಅನಿಸಿತ್ತು. ನನಗೆ ಹಠ ಜಾಸ್ತಿ. ಗೇಮ್ ಆಡುವ ಅವಕಾಶ ಜಾಸ್ತಿ ಸಿಗಲಿಲ್ಲ. ಅದರಿಂದ ನನಗೆ ಬೇಜಾರಾಗಿತ್ತು. ನನ್ನನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಾಗಾಗಿ ನನ್ನ ಶಕ್ತಿ ಏನು ಎನ್ನುವುದನ್ನು ತೋರಿಸಲಾಗಲಿಲ್ಲ. ನಾನು ಸ್ವಲ್ಪ ಎಮೋಷನಲ್ ಆಗಿದೀನಿ. ಆದರೆ ಎಮೋಷನಲ್ ಆಗಿರುವುದು, ವೀಕ್‌ನೆಸ್ ಅಲ್ವೇ ಅಲ್ಲ. ಅದು ಸ್ಟ್ರೆಂಥ್‌. ಆದರೆ ಅದನ್ನು ನೋಡಿ ಯಾವಾಗ್ಲೂ ನನ್ನ ನಾಮಿನೇಷನ್‌ ಮಾಡ್ತಿದ್ರು. ಕಳಪೆಯಲ್ಲಿ ಹಾಕ್ತಿದ್ರು. ಇದನ್ನೇ ರೀಸನ್ ಕೊಡ್ತಿದ್ರು ಎಂದು ಇಶಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಪ್ರಕಾರ ಅದು ಸರಿ ಎಂದು ನನಗೆ ಅನಿಸುವುದಿಲ್ಲ. ಮನೆಯೊಳಗೆ ಗುಂಪುಗಳಿದ್ದವು. ನಾನು ಬೇರೆ ಗುಂಪಿನಲ್ಲಿದ್ದರೆ ನನಗೆ ಇನ್ನೂ ಅವಕಾಶಗಳು ಸಿಗುತ್ತಿತ್ತು ಎಂದೂ ಅನಿಸುವುದಿಲ್ಲ. ವಿನಯ್‌, ನಮ್ರತಾ, ಮೈಕಲ್, ಸ್ನೇಹಿತ್ ಎಲ್ಲರ ಜತೆ ಖುಷಿಯಾಗಿದ್ದೆ. ಅವರು ನನಗೆ ಯಾವಾಗಲೂ ಸಪೋರ್ಟ್‌ ಮಾಡಿದ್ದಾರೆ. ಅವರಿಂದ ನನಗೆ ಡಿಸ್ಟ್ರಾಕ್ಷನ್ ಆಗಿಲ್ಲ. ಆದರೆ ನನ್ನ ವೈಯಕ್ತಿಕ ಆಯ್ಕೆಗಳಿಂದ ನನಗೆ ತೊಂದರೆಯಾಗಿರುವುದು. ಅವರು ನನಗೆ ತುಂಬ ಒಳ್ಳೆಯ ಸ್ನೇಹಿತರು ಎಂದು ಇಶಾನಿ ತಿಳಿಸಿದ್ದಾರೆ.

ಮತ್ತೆ ಅವಕಾಶ ಸಿಕ್ಕರೆ…

ಮತ್ತೆ ಬಿಗ್‌ಬಾಸ್‌ಗೆ ಹೋಗುವುದು ಸಾಧ್ಯವಾದರೆ ನಾನು ನನ್ನದೇ ಲೆಕ್ಕಾಚಾರ ಇಟ್ಟುಕೊಂಡು ಆಟ ಆಡುತ್ತೇನೆ. ಯಾರು ಫೇಕ್, ಯಾರು ರಿಯಲ್ ಎಂದು ವಿಶ್ಲೇಷಿಸಿ ಮುಂದಡಿ ಇಡುವೆ. ಟಾಸ್ಕ್‌ ವಿಷಯಲ್ಲಿಯೂ ನಾನು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ. ಏನಾದರೂ ಇರಲಿ, ನಾನು ನನಗೋಸ್ಕರ ಆಡುತ್ತಿದ್ದೆ. ಇನ್ಯಾರಿಗೋಸ್ಕರನೋ ಅಲ್ಲ. ಟೀಮ್‌ನಲ್ಲಿ ಆಡಬೇಕು ಅಂದರೆ ನಾನು ನನಗೋಸ್ಕರ ಆಟ ಆಡ್ತಿದ್ದೆ. ಟೀಮ್ ಗೆಲ್ಲಬೇಕು ಅಂತಲೇ ಆಟ ಆಡ್ತಿದ್ದೆ, ಆದರೆ ನಾನು ಟೀಮ್ ಲೀಡರ್ ಆಗಬೇಕು ಎಂದು ಗಟ್ಟಿಯಾಗಿ ಹೇಳುತ್ತಿದ್ದೆ. ಎಂಪಥಿ ಮತ್ತು ಇಂಟಲಿಜೆನ್ಸ್‌ನಲ್ಲಿ ನನಗೆ ನಂಬಿಕೆ ಇದೆ. ಇವೆರಡನ್ನೂ ಉಪಯೋಗಿಸಿಕೊಳ್ಳಲು ಫೋಕಸ್ ಮಾಡುತ್ತಿದ್ದೆ ಎಂದು ರ‍್ಯಾಪರ್‌ ಹೇಳಿದ್ದಾರೆ.

ಯಾರು ಫೇಕ್?

ಮನೆಯೊಳಗೆ ವಿನಯ್‌, ನಮ್ರತಾ ಎಲ್ರೂ ಪ್ರಾಮಾಣಿಕರಾಗಿಯೇ ಇದ್ದರು. ನನ್ನ ಪ್ರಕಾರ ಮೈಕಲ್ ತುಂಬ ಪ್ರಾಮಾಣಿ. ಅದು ಪ್ರಾರಂಭದಲ್ಲಿ ನನಗೆ ಕಾಣಿಸಲಿಲ್ಲ. ಕೊನೆಕೊನೆಗೆ ಕಾಣಿಸಿತು. ಈಗ ನಾನು ವಾಪಸ್ ಹೋಗಲು ಸಾಧ್ಯವಾದರೆ ಎಲ್ಲದಕ್ಕೂ ಮೈಕಲ್ ಸೈಡ್ ತಗೋತಿದ್ದೆ. ತುಕಾಲಿ ಅವರನ್ನು ನಾನು ಊಸರವಳ್ಳಿ ಎಂದು ಕರೆದಿದ್ದೆ. ಅದಕ್ಕೆ ಕಾರಣವಿದೆ. ಯಾಕೆಂದರೆ ಅವರು ಒಂದ್ಸಲ ನನ್ನ ಜತೆ ಸರಿಯಾಗಿ ಮಾತಾಡ್ತಿದ್ರು. ಮತ್ತೊಮ್ಮೆ ಇನ್ನೊಂದು ಗ್ರೂಪಲ್ಲಿ ಹೋಗಿ ಇನ್ನೇನಾದ್ರೂ ಹೇಳ್ತಿದ್ರು. ಉದ್ದೇಶಪೂರ್ವಕವಾಗಿ ಡ್ರಾಮಾ ಕ್ರಿಯೇಟ್ ಮಾಡಿ ಕಾಣೆಯಾಗ್ತಿದ್ರು. ಹಾಗಾಗಿ ಅವರು ನನಗೆ ಒಂಚೂರು ಇಷ್ಟವಾಗಲಿಲ್ಲ. ಅವರು ನಂಬರ್ ಒನ್ ಫೇಕ್. ಎರಡನೇ ಫೇಕ್‌ ನೀತು. ಅವರಿಗೆ ಪರ್ಸನಾಲಿಟಿ ಇರಲೇ ಇಲ್ಲ. ನನ್ನ ಪ್ರಕಾರ ಮನೆಯಲ್ಲಿ ಯಾರೂ ಮುಗ್ಧರಿಲ್ಲ. ಪ್ರತಾಪ್ ಇನೋಸೆಂಟ್ ಅಂದುಕೊಂಡಿದ್ದೆ. ಸ್ವಲ್ಪ ಮುಗ್ಧತೆ ಇದೆ ಅವರಲ್ಲಿ. ಆದರೆ ಅವರು ತುಂಬ ಬುದ್ಧಿವಂತರು. ಅಂದರೆ ಪಾಸಿಟೀವ್ ದೃಷ್ಟಿಯಿಂದಲೇ ಬುದ್ಧಿವಂತರು. ಗೇಮ್ ಹೇಗೆ ಆಡಬೇಕು ಎಂದು ಅವರಿಗೆ ಗೊತ್ತು. ಹಾಗಾಗಿ ಖಂಡಿತವಾಗಿ ಮನೆಯಲ್ಲಿ ಯಾರೂ ಮುಗ್ಧರಿಲ್ಲ ಎಂದು ಇಶಾನಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: BBK Season 10: ಬಿಗ್‌ಬಾಸ್‌ ಮನೆಯೊಳಗೆ ಎಂಟ್ರಿ ಕೊಟ್ರು ಸ್ಪೆಷಲ್‌ ಗೆಸ್ಟ್‌

ಇಶಾನಿ ಫೈನಲ್ ಲೀಸ್ಟ್‌!

ಬಿಗ್‌ಬಾಸ್ ಫಿನಾಲೆಯಲ್ಲಿ ಇರುವ ಐದು ಸ್ಫರ್ಧಿಗಳಲ್ಲಿ ನಾನೂ ಒಬ್ಬಳಾಗಬೇಕು ಎಂದು ನನಗೆ ಆಸೆ ಇತ್ತು. ಆದರೆ ಆಗಲಿಲ್ಲ. ನನ್ನ ಪ್ರಕಾರ ವಿನಯ್, ಮೈಕಲ್, ಸಂಗೀತಾ, ಕಾರ್ತಿಕ್‌ ಮತ್ತು ನಮ್ರತಾ ಕೊನೆಯವರೆಗೆ ಉಳಿದುಕೊಳ್ಳುತ್ತಾರೆ. ಇವರಲ್ಲಿ ಮೈಕಲ್ ಗೆಲ್ಲಬೇಕು ಎಂಬುದು ನನ್ನ ಆಸೆ ಎಂದು ಇಶಾನಿ ಹೇಳಿದ್ದಾರೆ.

ಜಿಯೊ ಸಿನಿಮಾ ಟಾಸ್ಕ್‌ಗಳ ಮಜಾ

ಜಿಯೊ ಸಿನಿಮಾ ಫನ್ ಫ್ರೈಡೆ ಟಾಸ್ಕ್‌ಗಳು ತುಂಬ ಮಜವಾಗಿದ್ದವು. ಕಳೆದ ವಾರ ಲಗೋರಿ ಆಡಿದೆವು. ಅದು ತುಂಬ ಮಜವಾಗಿತ್ತು. ಯಾಕೆಂದರೆ ಫಸ್ಟ್ ಟೈಮ್ ನಾನು ಲಗೋರಿ ಆಡುತ್ತಿರುವುದು. ನನಗೆ ಲಗೋರಿ ಏನೆಂದೇ ಗೊತ್ತಿರಲಿಲ್ಲ. ಅದನ್ನು ಆಡಿ ಖುಷಿಯಾಯ್ತು. ಹಾಗೆಯೇ ಆನೆಗೆ ಬಾಲ ಬಿಡಿಸುವ ಟಾಸ್ಕ್ ಕೂಡ ಸಖತ್ ಎಂಜಾಯ್ ಮಾಡಿದೆ. ಆ ಥರ ಸಾಕಷ್ಟ ಟಾಸ್ಕ್ ಇದ್ದವು ಎಂದು ಇಶಾನಿ ಖುಷಿಯಿಂದ ಹೇಳಿದ್ದಾರೆ.

ಕನ್ನಡ ರ‍್ಯಾಪ್ ಬರೆಯಬೇಕು

ಕನ್ನಡ ಇನ್ನೂ ಕಲಿಯುತ್ತಿದ್ದೇನೆ. ಇನ್ನೂ ಚೆನ್ನಾಗಿ ಕಲಿಯಬೇಕು ಅಂತ ಆಸೆ ಇದೆ. ಇನ್ನಷ್ಟು ಸ್ಪಷ್ಟವಾಗಿ ಕನ್ನಡ ಕಲಿತು, ಕನ್ನಡದಲ್ಲಿಯೇ ರ‍್ಯಾಪ್ ಸಾಂಗ್ ಬರೆಯಬೇಕು ಎಂಬ ಆಸೆ ಇದೆ. ಬಿಗ್‌ಬಾಸ್ ಮನೆಯೊಳಗೂ ಟ್ರೈ ಮಾಡುತ್ತಿದ್ದೆ. ಸ್ವಲ್ಪ ಟೈಮ್ ತಗೊಳ್ತು. ಸ್ನೇಹಿತರ ಹೆಲ್ಪ್ ತಗೊಳ್ತಿದ್ದೆ. ಅವರ ಜತೆ ಚರ್ಚಿಸುತ್ತಿದ್ದೆ. ಅದೆಲ್ಲ ಕಲಿಯುತ್ತಿದ್ದೆ. ಇನ್ನು ಮುಂದೆಯೂ ಕನ್ನಡದಲ್ಲಿ ಬರೆಯುವುದನ್ನು ಮುಂದುವರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ಇಶಾನಿ ನುಡಿದಿದ್ದಾರೆ.

ಬಿಗ್‌ಬಾಸ್ ಮನೆ ನೆನಪಾದ್ರೆ ಅಳ್ತೀನಿ

ಬಿಗ್‌ಬಾಸ್ ಮನೆ ನೆನಪಾದ್ರೆ ಅಳು ಬರುತ್ತೆ. ಮನೆಯೊಳಗೆ ಅಡುಗೆ ಮಾಡುವುದು, ಬಾತ್ ರೂಮ್, ಅಡುಗೆ ಕೋಣೆ ಕ್ಲೀನ್ ಮಾಡುವುದು, ನನ್ನ ಹಾಸಿಗೆ ನಾನೇ ನೋಡಿಕೊಳ್ಳುವುದು ಇದೆಲ್ಲ ನನಗೆ ಹೊಸದು. ಇದೆಲ್ಲದರ ಮಹತ್ವ ಬಿಗ್‌ಬಾಸ್ ಮನೆಯೊಳಗೆಬಂದ ಮೇಲೆ ಅರ್ಥವಾಯ್ತು. ಅಲ್ಲಿನ ನನ್ನ ಫ್ರೆಂಡ್ಸ್‌ ಎಲ್ರನ್ನೂ ತುಂಬ ಮಿಸ್ ಮಾಡ್ಕೋತೀನಿ. ಸಂಗೀತಾ ಬಂದು ಎಲ್ಲರನ್ನು ಹೆದರಿಸುತ್ತಿದ್ರು, ತಲೆದಿಂಬಿನಲ್ಲಿ ಹೊಡೆದಾಡಿಕೊಳ್ತಿದ್ವಿ. ಅವೆಲ್ಲಾನೂ ಮಿಸ್ ಮಾಡ್ಕೋತೀನಿ. ಬಿಗ್‌ಬಾಸ್ ಶೋ ನಾನು ತುಂಬ ಕೃತಜ್ಞಳಾಗಿದೀನಿ. ನನಗೆ ಇನ್ನೊಮ್ಮೆ ಅವಕಾಶ ಸಿಕ್ರೆ ಬಂದೇ ಬರ್ತಿನಿ. ಬರುವ ಆಸೆಯೂ ಇದೆ ಎಂದು ಇಶಾನಿ ಹೇಳಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಕಿರುತೆರೆ

Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

Kannada Serials TRP: ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಹಾಗೇ ಕಲರ್ಸ್‌ ಕನ್ನಡದ ನಿನಗಾಗಿ ಎಂಬ ಹೊಸ ಧಾರಾವಾಹಿ ಈ ಬಾರಿ ಟಿಆರ್‌ಪಿಯಲ್ಲಿ ಕುಸಿದಿದೆ.

VISTARANEWS.COM


on

Kannada Serials TRP seetha rama grow Ninagaagi serial full down
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಭಾರಿ ಪೈಪೋಟಿ ನೀಡುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಹಾಗೇ ಕಲರ್ಸ್‌ ಕನ್ನಡದ ನಿನಗಾಗಿ ಎಂಬ ಹೊಸ ಧಾರಾವಾಹಿ ಈ ಬಾರಿ ಟಿಆರ್‌ಪಿಯಲ್ಲಿ ಕುಸಿದಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ʻಶ್ರೀಗೌರಿ,ʼ ʻನಿನಗಾಗಿʼ; ʻಅಮೃತಧಾರೆʼ ಜಿಗಿತ!

ಲಕ್ಷ್ಮೀ ನಿವಾಸ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಾರಾಮ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ರಾಮ್ ಹಾಗೂ ಸೀತಾಳ ಎಂಗೇಜ್​ಮೆಂಟ್ ಆಗಿದೆ. ಇವರ ಮಧ್ಯೆ ಪ್ರೀತಿ ಮೂಡಿದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಅಮೃತಧಾರೆ

ಐದನೇ ಸ್ಥಾನದಲ್ಲಿ ʼಅಮೃತಧಾರೆ’ ಧಾರಾವಾಹಿ ಇದೆ. ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ಮತ್ತು ಗೌತಮ್‌ ಫಸ್ಟ್‌ನೈಟ್‌ ಎಪಿಸೋಡ್‌ ಒಳ್ಳೆಯ ವೀಕ್ಷಣೆ ಕಂಡಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. 

ಹೊಸ ಧಾರಾವಾಹಿ ‘ನಿನಗಾಗಿ’ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ 22ನೇ ವಾರದಲ್ಲಿ ಆರನೇ ಸ್ಥಾನ ಪಡೆದಿತ್ತು. 23ನೇ ವಾರದ ಧಾರಾವಾಹಿಯಲ್ಲಿ ಒಂಭತ್ತನೇ ಸ್ಥಾನಕ್ಕೆ ಇಳಿದಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

ಶ್ರೀಗೌರಿ ಕೂಡ ಬೇಡಿಕೆ ಉಳಿಸಿಕೊಂಡಿದೆ. ‘ಭಾಗ್ಯಲಕ್ಷ್ಮೀ’ ಹಾಗೂ ‘ಲಕ್ಷ್ಮಿ ಬಾರಮ್ಮ’ಗೆ ಮೊದಲಿನಷ್ಟು ಬೇಡಿಕೆ ಇಲ್ಲ. ಮುಖ್ಯ ಭೂಮಿಕೆಯಲ್ಲಿ ‘ಕಮಲಿ’ ಧಾರಾವಾಹಿಯ ಅಮೂಲ್ಯ ಗೌಡ ಅಭಿನಯ ಮಾಡಿದ್ದಾರೆ. ಅಮೂಲ್ಯ ಮೊದಲು ʻಅನುರಾಗ ಸಂಗಮʼ ಎನ್ನುವ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ʻಸ್ವಾತಿ ಮುತ್ತುʼ, ʻಪುನರ್ ವಿವಾಹʼ, ʻಅರಮನೆʼ, ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಅಮೂಲ್ಯ ಗೌಡಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಧಾರಾವಾಹಿ ಕಮಲಿ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

Continue Reading

ಕಿರುತೆರೆ

Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

Actor Darshan: ಇನ್ನೂ ಕೆಲವರು ಈ ರೀತಿ ಕಮೆಂಟ್‌ ಹಾಕಿ ಜೀವ ಕಳೆದುಕೊಳ್ಳುವದಕ್ಕಿಂದ ಪುಟ್ಟಕ್ಕನ ಮಗಳು ಸ್ನೇಹಾ IAS ಪಾಸ್‌ ಆಗ್ತಾಳಾ ಎಂದು ಕಾಯೋದು ಉತ್ತಮ ಎಂದು ಟ್ರೋಲ್‌ ಮಾಡುತ್ತಿದ್ದಾರೆ. ಇಟ್ಟಿನಲ್ಲಿ ದರ್ಶನ್‌ ಹೈಪ್‌ನಿಂದ ಧಾರಾವಾಹಿಗಳು ಪಾತ್ರಗಳು ಸಖತ್‌ ಚರ್ಚೆಯಲ್ಲಿವೆ. ಟ್ರೋಲ್‌ ಹೈಕ್ಳು ದರ್ಶನ್‌ ಕೊಲೆ ಕೇಸ್‌ಗೆ ಲಿಂಕ್‌ ಮಾಡಿ ಭಾರಿ ಮಜವಾಗಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ʻʻಚಿನ್ನುಮರಿ ತಂಟೆಗೆ ಹೋದರೆ ಒದೆ…ಪವಿತ್ರಾ ಗೌಡ ತಂಟೆಗೆ ಹೋದರೆ ಕೊಲೆನೆʼʼಎಂದು ಟ್ರೋಲ್‌ ಮಾಡುತ್ತಿದ್ದಾರೆ.

VISTARANEWS.COM


on

Actor Darshan case comparision to serial troll
Koo

ಬೆಂಗಳೂರು: ಜೀ ಕನ್ನಡ ವಾಹಿನಿಯ ಹಲವು ಧಾರಾವಾಹಿಗಳಲ್ಲಿ ‘ಲಕ್ಷ್ಮೀ ನಿವಾಸ’ ಸೀರಿಯಲ್‌ ಕೂಡ ಒಂದು. ಈ ಧಾರಾವಾಹಿ ಪ್ರೇಕ್ಷಕರ ಮನ ಗೆದ್ದಿದೆ. ಜತೆಗೆ ಟಿಆರ್‌ಪಿಯಲ್ಲಿ (Actor Darshan) ಎರಡನೇ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಲ್ಲಿ ಜಯಂತ್‌ ಪಾತ್ರಧಾರಿಗೆ ತನ್ನ ಹೆಂಡತಿ ಯಾರಿಗೂ ಕಾಲ್ ಮಾಡಬಾರದು ಅವಳು ನನ್ನದೊಂದೇ ಸ್ವತ್ತು ಎನ್ನುವ ರೀತಿಯಲ್ಲಿ ಆಡುತ್ತಾನೆ. ಮನೆಯ ಲ್ಯಾಂಡ್​​ಲೈನ್​ ಫೋನ್ ಕೇಬಲ್ ಕೂಡ ಕಟ್ ಮಾಡುತ್ತಾನೆ. ʻಚಿನ್ನುಮರಿʼಯಂದೇ ಪ್ರೀತಿಯಿಂದ ಹೆಂಡತಿ ಕರೆದು, ಅತಿಯಾಗಿ ಸಂಶಯವೂ ಪಡ್ತಾನೆ. ಆದರೀಗ ಟ್ರೋಲ್‌ ಹೈಕ್ಳು ದರ್ಶನ್‌ ಕೊಲೆ ಕೇಸ್‌ಗೆ ಲಿಂಕ್‌ ಮಾಡಿ ಭಾರಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ʻʻಚಿನ್ನುಮರಿ ತಂಟೆಗೆ ಹೋದರೆ ಒದೆ…ಪವಿತ್ರಾ ಗೌಡ ತಂಟೆಗೆ ಹೋದರೆ ಕೊಲೆನೆʼʼಎಂದು ಟ್ರೋಲ್‌ ಮಾಡುತ್ತಿದ್ದಾರೆ.

ಜಯಂತ್‌ ಪಾತ್ರ ಹೇಗಿದೆ?

ಜಯಂತ್‌ ತುಂಬ ಶ್ರೀಮಂತ. ಈತನನ್ನು ಹುಡುಗನನ್ನು ಮಧ್ಯಮ ಕುಟುಂಬದ ಜಾಹ್ನವಿ ಮದುವೆ ಆಗಿದ್ದಾಳೆ. ಒಳ್ಳೆಯ ಹುಡುಗ ನಮಗೆ ಅಳಿಯನಾಗಿ ಸಿಕ್ಕಿದ್ದಾನೆ ಅಂತ ಜಾಹ್ನವಿ ಮನೆಯವರು ಸಿಕ್ಕಾಪಟ್ಟೆ ಖುಷಿಯಲ್ಲಿದ್ದಾರೆ. ಆದರೆ ಜಯಂತ್‌ ಹಾಗಿಲ್ಲ. ತನ್ನ ಹೆಂಡ್ತಿ ತನ್ನನ್ನು ಮಾತ್ರ ಇಷ್ಟಪಡಬೇಕು, ನನಗೆ ಮಾತ್ರ ಆದ್ಯತೆ ಕೊಡಬೇಕು, ನನ್ನ ಜೊತೆ ಮಾತಾಡಬೇಕು, ಮನೆ ಬಿಟ್ಟು ಎಲ್ಲಿಗೂ ಹೋಗಬಾರದು ಎಂದು ಏನೋನೋ ಮಸಲತ್ತು ಮಾಡ್ತಾನೆ. ‘ಸೈಕೋ’ ಜಯಂತ್‌ಗೆ ಬರೀ ಹೆಂಡತಿ ಮೇಲೆ ಅನುಮಾನ . ಆಫೀಸ್‌ನಲ್ಲಿ ಕೂತು, ಮನೆಯಲ್ಲಿ ಫಿಕ್ಸ್‌ ಮಾಡಿದ ಸಿಸಿ ಕ್ಯಾಮೆರ ಮೂಲಕ ಮೊಬೈಲ್‌ನಲ್ಲಿ ಕದ್ದು ನೋಡುವ ಜಯಂತ್‌ಗೆ ಬರೀ ಜಾಹ್ನವಿಯದ್ದೇ ಯೋಚನೆ. ಮಾತ್ರವಲ್ಲ ಕಾಲೇಜಿನಲ್ಲಿ ಜಾಹ್ನವಿಯನ್ನು ಪ್ರೀತಿಸುತ್ತಿದ್ದ ಹುಡುಗನಿಗೂ ಸಖತ್‌ ಒದೆ ಕೊಟ್ಟವ. ಈತನನ್ನು ಕಂಡರೆ ಸಾಕು ಪ್ರೇಕ್ಷಕರು ಕೂಡ ಗಾಬರಿಯಾಗುತ್ತಾರೆ.

ಇನ್ನು ಕಥೆಯಲ್ಲಿ ಜಯಂತ್‌ ಈ ಗುಣಗಳು ಜಾಹ್ನವಿಗೆ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಅವಳು ಇದಕ್ಕೆ ಕಾರಣ ಏನು ಎಂದು ಹುಡುಕಿಕೊಂಡು ಹೋಗುವಾಗ ಗೊತ್ತಾಗಬಹುದು. ಆದರೀಗ ಜಯಂತ್‌ ಹಾಗೂ ನಟ ದರ್ಶನ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡ್‌ ಆಗುತ್ತಿದ್ದಾರೆ. ದರ್ಶನ್‌ ಕೂಡ ಪವಿತ್ರಾ ಗೌಡ ಗೋಸ್ಕರ ಕೊಲೆಯೇ ಮಾಡಿಬಿಟ್ಟರು ಎಂದು ಈ ಮೂಲಕ ಟ್ರೋಲ್‌ ಮಾಡುತ್ತಿದ್ದಾರೆ.

ಇನ್ನೂ ಕೆಲವರು ಈ ರೀತಿ ಕಮೆಂಟ್‌ ಹಾಕಿ ಜೀವ ಕಳೆದುಕೊಳ್ಳುವದಕ್ಕಿಂದ ಪುಟ್ಟಕ್ಕನ ಮಗಳು ಸ್ನೇಹಾ IAS ಪಾಸ್‌ ಆಗ್ತಾಳಾ ಎಂದು ಕಾಯೋದು ಉತ್ತಮ ಎಂದು ಟ್ರೋಲ್‌ ಮಾಡುತ್ತಿದ್ದಾರೆ. ಇಟ್ಟಿನಲ್ಲಿ ದರ್ಶನ್‌ ಹೈಪ್‌ನಿಂದ ಧಾರಾವಾಹಿಗಳು ಪಾತ್ರಗಳು ಸಖತ್‌ ಚರ್ಚೆಯಲ್ಲಿವೆ.

ಇದನ್ನೂ ಓದಿ: Actor Darshan : Boss ನಿಮ್ಮನ್ನ ಈ ರೀತಿ ನೋಡೊಕೆ ಆಗ್ತಿಲ್ಲ; ಬಿಕ್ಕಿ ಬಿಕ್ಕಿ ಅತ್ತ ದರ್ಶನ್​ ಮಹಿಳಾ ಅಭಿಮಾನಿ!

ದರ್ಶನ್‌ ಪ್ರಕರಣ ಏನು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ರೇಣುಕಾಸ್ವಾಮಿಗೆ ಒದ್ದಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ದರ್ಶನ್‌ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading
Advertisement
Dina Bhavishya
ಭವಿಷ್ಯ56 mins ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ7 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ9 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ9 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ10 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ10 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ11 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ11 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ11 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ11 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ12 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ13 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ18 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌