Brindavana Serial Kannada: ʻಏನಾಗಲಿ ಮುಂದೆ ಸಾಗು ನೀʼಎಂದ ʻಬೃಂದಾವನʼ ಧಾರಾವಾಹಿ ಮಾಜಿ ನಾಯಕ! - Vistara News

ಕಿರುತೆರೆ

Brindavana Serial Kannada: ʻಏನಾಗಲಿ ಮುಂದೆ ಸಾಗು ನೀʼಎಂದ ʻಬೃಂದಾವನʼ ಧಾರಾವಾಹಿ ಮಾಜಿ ನಾಯಕ!

Brindavana Serial Kannada: ಈ ವಿವಾದ ಆದ ಬಳಿಕ ವಿಶ್ವನಾಥ್‌ ಅವರ ತಂದೆ ಮಾಧ್ಯಮದ ಮುಂದೆ ʻʻವಿಶ್ವನಾಥ್‌ಗೆ ನಟನೆ ಹೊಸದು. ಇದೆಲ್ಲ ನಮಗೆ ಗೊತ್ತಿಲ್ಲ. ನಮಗೆ ಈ ಬಗ್ಗೆ ಯಾವುದೇ ವಿಷಾದ ಇಲ್ಲʼʼಎಂದಿದ್ದರು.

VISTARANEWS.COM


on

Brindavana Serial Kannada Vishwanath Ravindra Haveri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೈವಿಧ್ಯಮಯ ಧಾರಾವಾಹಿ, ವಿವಿಧ ಕಾರ್ಯಕ್ರಮಗಳ ಮೂಲಕ ಕಲರ್ಸ್‌ ಕನ್ನಡ ವಾಹಿನಿ ಪ್ರೇಕ್ಷಕರ ಮನಗೆದ್ದಿದೆ. ಈ ಮಧ್ಯೆ ಜನಪ್ರಿಯ ʼಬೃಂದಾವನʼ (Brindavana Serial Kannada) ಧಾರಾವಾಹಿಯ ಪ್ರಮುಖ ಪಾತ್ರಧಾರಿ ಬದಲಾಗಿ, ಹಲವು ಚರ್ಚೆಗಳಿಗೆ ಎಡೆ ಮಾಡಿ ಕೊಟ್ಟಿತ್ತು. ಆರಂಭದಲ್ಲೇ ಪ್ರೇಕ್ಷಕರ ಗಮನ ಸೆಳೆದಿದ್ದ ʼಬೃಂದಾವನʼ ಸೀರಿಯಲ್‌ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ವಿಶ್ವನಾಥ್‌ ಹಾವೇರಿ ಹೊರ ನಡೆದಿದ್ದು, ಆ ಪಾತ್ರಕ್ಕೆ ವರುಣ್‌ ಆರಾಧ್ಯ ಬಂದಿದ್ದರು. ಸಾಕಷ್ಟು ಜನ ವೀಕ್ಷಕರು ಆಕಾಶ್ ಪಾತ್ರದಲ್ಲಿ ವಿಶ್ವನಾಥ್ ಅವರೇ ನಟಿಸಬೇಕು ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದರು. ಆದರೀಗ ಏಕಾಏಕಿ ವಿಶ್ವನಾಥ್‌ ಅವರು ʼಏನಾಗಲಿ ಮುಂದೆ ಸಾಗು ನೀʼ ಎನ್ನುವ ಹಾಡನ್ನು ಪೋಸ್ಟ್‌ ಮಾಡಿದ್ದಾರೆ.

ಇದೀಗ ವಿಶ್ವನಾಥ್‌ ಈ ಎಲ್ಲ ಘಟನೆ ಆದ ಬಳಿಕ ಮುಂಬೈಗೆ ಹಾರಿದ್ದಾರೆ. ‘ಮುಸ್ಸಂಜೆ ಮಾತು’ ಚಿತ್ರದ ಸೂಪರ್ ಹಿಟ್ ‘ಏನಾಗಲಿ ಮುಂದೆ ಸಾಗು ನೀ ಬಯಸಿದ್ದೆಲ್ಲಾ ಸಿಗದು ಬಾಳಲಿ’ ಹಾಡು ಹಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ನಿಜಜೀವನಕ್ಕೆ ಹತ್ತಿರವಾಗುವಂತಿರುವ ಹಾಡನ್ನು ಹಾಡಿ ಪೋಸ್ಟ್ ಮಾಡಿದ್ದಾರೆ ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ ನೆಟ್ಟಿಗರು. ಜತೆಗೆ ವಿಶ್ವನಾಥ್‌ ಅವರ ಜೀವನದ ಮುಂದಿನ ಪಯಣಕ್ಕೆ ಶುಭ ಹಾರೈಸುತ್ತಿದ್ದಾರೆ.

ಇನ್ನು ಕೆಲವರು ವಿಶ್ವನಾಥ್‌ ಅವರು ನೋಡಲು ಚಿಕ್ಕ ಹುಡುಗನಂತೆ ಕಾಣಿಸುತ್ತಿದ್ದ ಕಾರಣ ಧಾರಾವಾಹಿಯಿಂದ ಹೊರ ನಡೆದರು ಎಂದು ಕಮೆಂಟ್‌ ಕೂಡ ಮಾಡುತ್ತಿದ್ದಾರೆ ನೆಟ್ಟಿಗರು. ಈ ವಿವಾದ ಆದ ಬಳಿಕ ವಿಶ್ವನಾಥ್‌ ಅವರ ತಂದೆ ಮಾಧ್ಯಮದ ಮುಂದೆ ʻʻವಿಶ್ವನಾಥ್‌ಗೆ ನಟನೆ ಹೊಸದು. ಇದೆಲ್ಲ ನಮಗೆ ಗೊತ್ತಿಲ್ಲ. ನಮಗೆ ಈ ಬಗ್ಗೆ ಯಾವುದೇ ವಿಷಾದ ಇಲ್ಲʼʼ ಎಂದಿದ್ದರು.

‘ಪುಟ್ಟಗೌರಿ ಮದುವೆ’, ‘ಮಂಗಳಗೌರಿ ಮದುವೆ’, ‘ರಂಗನಾಯಕಿ’, ‘ನಾಗಿಣಿ- 2’, ‘ಗೀತಾ’, ‘ರಾಣಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಕೆ.ಎಸ್. ರಾಮ್‌ ಜೀ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ಕೂಡು ಕುಟುಂಬದ ಕಥೆ ಹೊಂದಿರುವ ಈ ಧಾರಾವಾಹಿಯ ಆಕಾಶ್‌ ಪಾತ್ರದಲ್ಲಿ ಬಿಗ್​ಬಾಸ್ ಸ್ಪರ್ಧಿಯಾಗಿದ್ದ ಗಾಯಕ ವಿಶ್ವನಾಥ್ ಹಾವೇರಿ ಕಾಣಿಸಿಕೊಂಡಿದ್ದರು. ಆದರೆ ಸೀರಿಯಲ್‌ನ 25ರಷ್ಟು ಸಂಚಿಕೆ ಮುಗಿಯುವಷ್ಟರಲ್ಲಿ ಅವರು ಬದಲಾಗಿದ್ದರು.

ಇದನ್ನೂ ಓದಿ: Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯವಾಗಿರುವ ವರುಣ್‌ ಆರಾಧ್ಯ ಹೆಗಲಿಗೆ ಆಕಾಶ್‌ ಪಾತ್ರದ ಜವಾಬ್ದಾರಿ ಬಿದ್ದಿದೆ. ತುಂಬು ಕುಟುಂಬದ ಕುಡಿಯಾಗಿರುವ ಆಕಾಶ್‌ ಮದುವೆಯ ಸಿದ್ಧತೆ ನಡೆಯುತ್ತಿದ್ದು ಈ ಹೊತ್ತಿನಲ್ಲೇ ನಾಯಕನ ಬದಲಾವಣೆ ಅಚ್ಚರಿಗೆ ಕಾರಣವಾಗಿತ್ತು. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡುತ್ತ ಜನಪ್ರಿಯರಾಗಿರುವ ವರುಣ್‌ ಆರಾಧ್ಯಗೆ ಉತ್ತಮ ಅವಕಾಶ ಸಿಕ್ಕಿದೆ. ಅಕ್ಟೋಬರ್ 23ರಂದು ಈ ಸೀರಿಯಲ್‌ ಪ್ರಸಾರ ಆರಂಭಿಸಿತ್ತು.

ಕಥೆ ಏನು?

ಕಥೆಯು 36 ಸದಸ್ಯರ ವಿಶಾಲವಾದ ಅವಿಭಕ್ತ ಕುಟುಂಬದ ಸುತ್ತ ಸುತ್ತುತ್ತದೆ. ‘ಕನ್ನಡತಿ’ ಧಾರಾವಾಹಿ ಮೂಲಕ ಅಮ್ಮಮ್ಮ ಎಂದೇ ಖ್ಯಾತಿ ಪಡೆದ ಚಿತ್ಕಲಾ ಬಿರಾದಾರ್ ಈ ಮೂಲಕ ಮತ್ತೆ ಮೋಡಿ ಮಾಡುತ್ತಿದ್ದಾರೆ. ಅವರು ಸುಧಾ ಮೂರ್ತಿ ಎನ್ನುವ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕಥಾ ನಾಯಕ ಆಕಾಶ್ ತನ್ನ ವಿದ್ಯಾಭ್ಯಾಸ ಮುಗಿಸಿ ವಿದೇಶದಿಂದ ಹಿಂದಿರುಗುತ್ತಾನೆ. ಸುಧಾಮೂರ್ತಿಗೆ ತನ್ನ ಮೊಮ್ಮಗ ಆಕಾಶ್‌ನ ಮದುವೆ ನೋಡಬೇಕೆಂಬ ಆಸೆ. ಅದಕ್ಕಾಗಿ ಕೂಡು ಕುಟುಂಬದ ಎಲ್ಲರ ಒಪ್ಪಿಗೆ ಪಡೆಯುತ್ತಾರೆ. ಕೊನೆಗೆ ಪುಷ್ಪಾ ಎನ್ನುವ ಯುವತಿಯನ್ನು ಒಪ್ಪಿಕೊಳ್ಳುತ್ತಾರೆ. ಸದ್ಯ ಆಕಾಶ್‌-ಪುಷ್ಪಾ ಮದುವೆ ಸಿದ್ಧತೆ ನಡೆಯುತ್ತಿದೆ. ಪ್ರೋಮೊ ಮೂಲಕವೇ ಈ ಧಾರಾವಾಹಿ ಕುತೂಹಲ ಕೆರಳಿಸಿತ್ತು. ಅಮೂಲ್ಯ ಭಾರಾಧ್ವಾಜ್, ಸಂದೀಪ್ ಅಶೋಕ್, ಸುಂದರ್ ವೀಣಾ, ವೀಣಾ ಸುಂದರ್, ರಾಜೇಶ್ ಎಸ್. ರಾವ್, ಅನು ಪಲ್ಲವಿ ಗೌಡ, ಮಾನಸ ಗುರುಸ್ವಾಮಿ, ಯೋಗಿತಾ ಕುಂಬಾರ್, ವೈಷ್ಣವಿ ಗೌಡ, ಮಧುರಾ ಮತ್ತಿತರರು ಮುಖ್ಯ ಪಾತ್ರದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

Puttakkana Makkalu: ಮಗಳನ್ನು ಕಳೆದುಕೊಂಡ ಪುಟ್ಟಕ್ಕ ಬಿಕ್ಕಿ ಬಿಕ್ಕಿ ಅಳುತ್ತಿದ್ದರೆ, ಅವರ ಅದ್ಭುತ ನಟನೆ ನೋಡಿ ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.ಹಿರಿಮಗಳು ಸಹನಾಳನ್ನು ಕಳೆದುಕೊಂಡ ಪುಟ್ಟಕ್ಕನ ಆಕ್ರಂದನ ಮುಗಿಲು ಮುಟ್ಟಿದೆ. ಒಂದೇ ಒಂದು ಸಲ ʻʻಓ ಅನ್ನು ಮಗಳೆ, ನಾನೇ ಪಾಪಿ, ಆ ಮಗುನ ಅತ್ತೆ ಮನೆಗೆ ಹೋಗು ಹೋಗು ಅಂತ ಹೇಳಿ ಹೇಳಿ ಈಗ ನಾನೇ ಆ ಮಗುವ ಬೆಂಕಿಗೆ ಹಾಕಿದೆʼʼ ಎಂದು ಎದೆ ಬಡಿದುಕೊಂಡು ಅಳುತ್ತಿದ್ದಾಳೆ ಪುಟ್ಟಕ್ಕ. ಉಮಾಶ್ರೀ ಅವರ ಈ ದೃಶ್ಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

VISTARANEWS.COM


on

Puttakkana Makkalu umashree acting praised
Koo

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಪುಟ್ಟಕ್ಕನ ಮಕ್ಕಳುʼ (Puttakkana Makkalu) ಧಾರಾವಾಹಿಯಲ್ಲಿ ಸದ್ಯ ಸಹನಾ ಮೃತಪಟ್ಟಿದ್ದಾಳೆ. ಸಹನಾ ಅಂತ್ಯಕ್ರಿಯೆಯ ದೃಶ್ಯ ಪ್ರೇಕ್ಷಕರಲ್ಲಿ ಕಣ್ಣೀರು ತರಸಿವಂತೆ ಇತ್ತು.

ಮಗಳನ್ನು ಕಳೆದುಕೊಂಡ ಪುಟ್ಟಕ್ಕ ಬಿಕ್ಕಿ ಬಿಕ್ಕಿ ಅಳುತ್ತಿದ್ದರೆ, ಅವರ ಅದ್ಭುತ ನಟನೆ ನೋಡಿ ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಈ ಎಪಿಸೋಡ್ ನೋಡಿದ ಪ್ರೇಕರೊಬ್ಬರು ಹೀಗೆ ಕಮೆಂಟ್‌ ಮಾಡಿದ್ದಾರೆ. ʻʻದಯವಿಟ್ಟು ತಂದೆ ತಾಯಿ ಗಮನಿಸಿ. ನಿಮ್ಮ ಹೆಣ್ಣು ಮಕ್ಕಳು ಗಂಡನ ಮನೆಯಲ್ಲಿ ತೊಂದರೆ ಎಂದು ಬಂದಾಗ ಅವಳಿಗೆ ಸ್ವಲ್ಪ ಸಮಯ ಕೊಡಿ ಯೊಚನೆ ಮಾಡೋಕೆ. ಮನೆಯ ಮಾನ ಮರ್ಯಾದೆ ಹೋಗುತ್ತೆ ಅಂತ ಗಂಡನ ಮನೆಗೆ ಹೋಗು ಅಂತ ಬಲವಂತ ಮಾಡಬೇಡಿ. ಅಕ್ಕಪಕ್ಕದ ಮನೆಯವರು ಏನೋ ಹೇಳ್ತಾರೆ ಅಂತ ಮನೆ ಮಗಳಿಗೆ ಹಿಂಸೆ ನೀಡಬೇಡಿ ಪ್ಲೀಸ್ʼʼಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ʻʻಉಮಾಶ್ರೀ ಅಮ್ಮ ನಿಮ್ಮ ನಟನೆ ಬೇರೆ ಲೆವೆಲ್‌! ಎಷ್ಟು ನ್ಯಾಚುರಲ್ ಆಗಿ ಅಭಿನಹಿಸುತ್ತಿದ್ದೀರಾ. ನಿಮಗೆ ನನ್ನ ಕೋಟಿ ಕೋಟಿ ನಮನಗಳುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

ಹಿರಿಮಗಳು ಸಹನಾಳನ್ನು ಕಳೆದುಕೊಂಡ ಪುಟ್ಟಕ್ಕನ ಆಕ್ರಂದನ ಮುಗಿಲು ಮುಟ್ಟಿದೆ. ಒಂದೇ ಒಂದು ಸಲ ʻʻಓ ಅನ್ನು ಮಗಳೆ, ನಾನೇ ಪಾಪಿ, ಆ ಮಗುನ ಅತ್ತೆ ಮನೆಗೆ ಹೋಗು ಹೋಗು ಅಂತ ಹೇಳಿ ಹೇಳಿ ಈಗ ನಾನೇ ನನ್ನ ಮಗುವನ್ನ ಬೆಂಕಿಗೆ ಹಾಕಿದೆʼʼ ಎಂದು ಎದೆ ಬಡಿದುಕೊಂಡು ಅಳುತ್ತಿದ್ದಾಳೆ ಪುಟ್ಟಕ್ಕ. ಉಮಾಶ್ರೀ ಅವರ ಈ ದೃಶ್ಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಗಂಡನ ಮನೆಬಿಟ್ಟು ಅಮ್ಮನ ಮನೆ ಸೇರಿರುವ ಸಹನಾ, ಕೊನೆಗೆ ತಾನು ಅಮ್ಮನಿಗೆ ಭಾರವಾಗಿರೋದು ಬೇಡ ಎಂದು ಬೇಸರದಲ್ಲಿ ಮನೆಯನ್ನೇ ಬಿಟ್ಟು ಹೊರಟಿರುತ್ತಾಳೆ. ರಾತ್ರೋ ರಾತ್ರಿ ಬ್ಯಾಗ್ ಹಿಡಿದು ಮನೆಯಿಂದ ಹೊರಟಿದ್ದ ಸಹನಾಳಿಗಾಗಿ ಎಲ್ಲೆಡೆಯೂ ಹುಡುಕಾಟ ನಡೆಸಿದ್ದಾರೆ. ಕೊನೆಗೆ ಆಕೆ ಸಿಕ್ಕಿದ್ದು, ಶವವಾಗಿ. ಜಜ್ಜಿದ ಮುಖದ, ಗುರುತಿಸಲಾರದ ಸ್ಥಿತಿಯಲ್ಲಿ ಸಹನಾ ಶವ ಪತ್ತೆಯಾಗಿದ್ದು, ಅದರ ಪಕ್ಕ ಸಹನಾ ಐಡೆಂಟಿಟಿ ಕಾರ್ಡ್ ಕೂಡ ಲಭ್ಯವಾಗಿರುತ್ತದೆ. ಸಹನಾಳದ್ದೆ ಸಾವಾಗಿದೆ ಎಂದು ಎಲ್ಲರೂ ಒಪ್ಪಿಕೊಂಡು ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಇಂದಿನ ಪ್ರೋಮೊದಲ್ಲಿ ಸಹನಾ ಜೀವಂತವಾಗಿರುವ ಬಗ್ಗೆ ಜೀ ವಾಹಿನಿ ಪೋಸ್ಟ್‌ ಮಾಡಿದೆ. ಮುಂದೆ ಸಹನಾಳ ಕಥೆ ಏನು ಎಂಬುದು ಇಂದಿನ ಎಪಿಸೋಡ್‌ನಲ್ಲಿ ಪ್ರಸಾರ ಆಗಲಿದೆ.

Continue Reading

ಕಿರುತೆರೆ

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Puttakkana Makkalu: ಮುರಳಿ-ಸಹನಾ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದೆ. ಸಹನಾಗೆ ವಿಚ್ಛೇದನ ಬೇಕು, ಮುರಳಿಗೆ ತನ್ನ ತಪ್ಪಿನ ಅರಿವಾಗಿದೆ. ಮುರಳಿ ಜತೆ ಬಾಳಲು ರೆಡಿ ಇಲ್ಲ ಸಹನಾ. ಸಹನಾ ಈಗ ಮನೆ ಬಿಟ್ಟು ಹೋಗಿದ್ದಾಳೆ.ತಾಯಿಗೆ ಎಲ್ಲಿ ತಾನು ಭಾರವಾಗುತ್ತೇನೋ ಎಂದು ಸಹನಾ ಮನೆಯಿಂದ ಆಚೆ ನಡೆದಿದ್ದಾಳೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

VISTARANEWS.COM


on

Puttakkana makkalu sahana dead
Koo
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಪುಟ್ಟಕನ ಮಕ್ಕಳುʼ (Puttakkana Makkalu) ಸತತ ಎರಡನೇ ವಾರ ಒಳ್ಳೆಯ ಟಿಆರ್‌ಪಿ ಕಂಡಿದೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

ಸಹನಾ ಶವ ಪತ್ತೆ ಆಗಿದೆ, ಎಲ್ಲರೂ ಮನೆ ಮಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

ಬಾಳಬೇಕಾದ ಮಗಳು ಶವವಾಗಿ ಮಲಗಿರೋದು ನೋಡಿ ಪುಟ್ಟಕ್ಕ ಅಳುತ್ತಿದ್ದಾಳೆ. ಸಹನಾ ಅಂತ್ಯಸಂಸ್ಕಾರ ಮುಗಿದಿದೆ.

ಮುರಳಿಯಿಂದ ಡಿವೋರ್ಸ್ ಪಡೆದಿರುವ ಸಹನಾ ತವರುಮನೆಗೂ ಕೂಡ ಸ್ವಲ್ಪವೂ ಭಾರವಾಗದೆ, ತನ್ನ ಜೀವನ ತಾನೇ ನಡೆಸಬೇಕು ಅಂತ ಅಂದುಕೊಂಡಿದ್ದಳು. ಹೀಗೆ ಅಂದುಕೊಂಡವಳು ಹೇಗೆ ಶವವಾದಳು. ಆದರೆ ವೀಕ್ಷಕರು ಸಹನಾ ಸತ್ತಿಲ್ಲ ಬದುಕಿದ್ದಾಳೆ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಸಹನಾ ಮುಖ ಪ್ಲಾಸ್ಟಿಕ್‌ ಸರ್ಜರಿ ಆಗರಿಬಹುದೆಂದು ಕಮೆಂಟ್‌ ಮಾಡಿದ್ದಾರೆ!

Continue Reading

ಕಿರುತೆರೆ

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Shine Shetty: ಶೈನ್‌ ಶೆಟ್ಟಿ ಅವರು ʻಜಸ್ಟ್‌ ಮ್ಯಾರಿಡ್‌ʼ ಮತ್ತು ʻನಿದ್ರಾದೇವಿ ನೆಕ್ಸ್ಟ್‌ ಡೋರ್‌ʼ ಎಂಬ ಎರಡು ಹೊಸ ಚಿತ್ರಗಳಿಗೆ ನಾಯಕರಾಗಿದ್ದಾರೆ. ಶೈನ್‌ ಶೆಟ್ಟಿ ಬಿಗ್‌ ಬಾಸ್‌ ಮೂಲಕ ಸಖತ್‌ ಫೇಮಸ್‌ ಆಗಿದ್ದರು. ದೀಪಿಕಾ ದಾಸ್‌ ಅವರು ಶೈನ್‌ ಶೆಟ್ಟಿ (Shyne Shetty) ಅವರ ಜತೆ ಬಿಗ್‌ ಬಾಸ್‌ ಮನೆಯಲ್ಲಿ ತುಂಬ ಕ್ಲೋಸ್‌ ಆಗಿದ್ದರು. ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದ ನಂತರವೂ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಜನ ಅಂದುಕೊಳ್ಳುತ್ತಿದ್ದರು.

VISTARANEWS.COM


on

Shine Shetty follows diet and fitness
Koo

ಸ್ಯಾಂಡಲ್‌ವುಡ್‌, ನಟ ಬಿಗ್‌ ಬಾಸ್‌ ವಿಜೇತ, ಕನ್ನಡ ಕಿರುತೆರೆ ಜನಪ್ರಿಯ ನಟ ಶೈನ್ ಶೆಟ್ಟಿ (Shine Shetty) ಕೈಯಲ್ಲಿ ಎರಡು ಬಿಗ್ ಪ್ರಾಜೆಕ್ಟ್ ಸಿನಿಮಾಗಳಿವೆ. ಇದೀಗ ಚಿತ್ರಕ್ಕೆಂದು ಫಿಟ್ನೆಸ್‌ ಬಗ್ಗೆ ಗಮನ ಕೊಟ್ಟಿದ್ದಾರೆ.

ಫಿಟ್‌ ಆಗಿರುವ ಹಾಗೂ ವರ್ಕೌಟ್‌ ಮಾಡಿರುವ ಫೋಟೊಗಳನ್ನು ಶೈನ್‌ ಶೆಟ್ಟಿ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ಸುಮಾರು 11 ದಿನಗಳ ಕಾಲ ಕಠಿಣ ವರ್ಕೌಟ್ ಮತ್ತು ಡಯಟ್ ಫಾಲೋ ಮಾಡಿ ಸಿಕ್ಸ್‌ ಪ್ಯಾಕ್ ಮಾಡಿರುವ ಶೈನ್‌ ಇದೀಗ ರಗಡ್‌ ಆಗಿ ಕಾಣುತ್ತಿದ್ದಾರೆ.

ಶೈನ್‌ ಶೆಟ್ಟಿ ಅವರು ʻಜಸ್ಟ್‌ ಮ್ಯಾರಿಡ್‌ʼ ಮತ್ತು ʻನಿದ್ರಾದೇವಿ ನೆಕ್ಸ್ಟ್‌ ಡೋರ್‌ʼ ಎಂಬ ಎರಡು ಹೊಸ ಚಿತ್ರಗಳಿಗೆ ನಾಯಕರಾಗಿದ್ದಾರೆ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಶೈನ್‌ ಶೆಟ್ಟಿ ಬಿಗ್‌ ಬಾಸ್‌ ಮೂಲಕ ಸಖತ್‌ ಫೇಮಸ್‌ ಆಗಿದ್ದರು. ದೀಪಿಕಾ ದಾಸ್‌ ಅವರು ಶೈನ್‌ ಶೆಟ್ಟಿ (Shyne Shetty) ಅವರ ಜತೆ ಬಿಗ್‌ ಬಾಸ್‌ ಮನೆಯಲ್ಲಿ ತುಂಬ ಕ್ಲೋಸ್‌ ಆಗಿದ್ದರು. ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದ ನಂತರವೂ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಜನ ಅಂದುಕೊಳ್ಳುತ್ತಿದ್ದರು. ಬಿಗ್‌ ಬಾಸ್‌ ಸಂದರ್ಭದಲ್ಲಿ ಈ ಜೋಡಿಗೆ ಜನರೇ ‘ಶಿನಿಕಾ’ ಎಂದು ಹೆಸರಿಟ್ಟು, ತುಂಬಾ ಮುದ್ದಾದ ಜೋಡಿ ಎಂದು ಹೇಳುತ್ತಿದ್ದರು.

Continue Reading

ಸಿನಿಮಾ

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Karan Johar: ಕೆತನ್‌ ಸಿಂಗ್ ಅವರು ಕರಣ್‌ ಅವರ ರೀತಿ ಅನುಕರಣೆ ಮಾಡಿದ್ದಾರೆ. ಇದು ಕರಣ್‌ ಅವರಿಗೆ ಇಷ್ಟವಾಗಲಿಲ್ಲ. ಹೀಗಾಗಿ ಕರಣ್‌ ಬೇಸರದಲ್ಲಿ ಇನ್‌ಸ್ಟಾದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಆದರೆ ಎಲ್ಲಿಯೂ ಕಾರ್ಯಕ್ರಮದ ಹೆಸರನ್ನು ಉಲ್ಲೇಖಿಸಿಲ್ಲ. ಹೀಗಾಗಿ ಇದು ʻಮ್ಯಾಡ್ನೆಸ್ ಮಚಾಯೆಂಗೆʼ ಕಾರ್ಯಕ್ರಮದ ಬಗ್ಗೆಯೇ ಕರಣ್ ಮಾತನಾಡಿರುವುದು ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Karan Johar upset with Kettan Singh's poor mimicry of him
Koo

ಬೆಂಗಳೂರು: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ (Karan Johar) ಭಾನುವಾರ ರಾತ್ರಿ (ಮೇ.5) ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಮ್ಮನ್ನು ಅನುಕರಣೆ ಮಾಡಿದ ಕಾಮಿಡಿ ಶೋ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕೆತನ್‌ ಸಿಂಗ್ (Comedian Kettan Singh ) ಅವರು `ಮ್ಯಾಡ್ನೆಸ್ ಮಚಾಯೆಂಗೆʼ ( Madness Machaenge) ಕಾರ್ಯಕ್ರಮದ ಪ್ರೋಮೊ ಪೋಸ್ಟ್‌ ಮಾಡಿದ್ದಾರೆ. ಕೆತನ್‌ ಸಿಂಗ್ ಅವರು ಕರಣ್‌ ಅವರ ರೀತಿ ಅನುಕರಣೆ ಮಾಡಿದ್ದಾರೆ. ಇದು ಕರಣ್‌ ಅವರಿಗೆ ಇಷ್ಟವಾಗಲಿಲ್ಲ. ಹೀಗಾಗಿ ಕರಣ್‌ ಬೇಸರದಲ್ಲಿ ಇನ್‌ಸ್ಟಾದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಆದರೆ ಎಲ್ಲಿಯೂ ಕಾರ್ಯಕ್ರಮದ ಹೆಸರನ್ನು ಉಲ್ಲೇಖಿಸಿಲ್ಲ. ಹೀಗಾಗಿ ಇದು ʻಮ್ಯಾಡ್ನೆಸ್ ಮಚಾಯೆಂಗೆʼ ಕಾರ್ಯಕ್ರಮದ ಬಗ್ಗೆಯೇ ಕರಣ್ ಮಾತನಾಡಿರುವುದು ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ. ಕರಣ್ ಟೀಕೆಗೆ ಇದೀಗ ಹಾಸ್ಯನಟ ಕೂಡ ಪ್ರತಿಕ್ರಿಯಿಸಿದ್ದಾರೆ.

ಕರಣ್ ಇನ್‌ಸ್ಟಾ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ, “ನಾನು ನನ್ನ ತಾಯಿಯೊಂದಿಗೆ ಕುಳಿತು ಟಿವಿ ನೋಡುತ್ತಿದ್ದೆ. ಒಳ್ಳೆಯ ಚಾನೆಲ್‌ನಲ್ಲಿ ಕಾಮಿಡಿ ರಿಯಾಲಿಟಿ ಶೋ ಹಾಸ್ಯದ ಪ್ರೋಮೊ ನೋಡಿದೆ. ನನ್ನ ಅನುಕರಣೆ ಅದರಲ್ಲಿತ್ತು. ಅತ್ಯಂತ ಕಳಪೆಯಾಗಿತ್ತು. ಈ ರೀತಿ ಕಳಪೆ ಮಟ್ಟದ ಮಿಮಿಕ್ರಿಯನ್ನು ನಾನು ಟ್ರೋಲ್‌ ಪೇಜ್‌ಗಳಿಂದ, ಫೇಮಸ್‌ ಇಲ್ಲದೇ ಇರುವ ಜನರಿಂದ ನಿರೀಕ್ಷಿಸುತ್ತೇನೆ. ಆದರೆ 25 ವರ್ಷಗಳಿಂದ ಒಳ್ಳೆಯ ಬಾಡಿಂಗ್‌ ಇರುವ ಚಾನೆಲ್‌ನಿಂದ ಈ ರೀತಿಯ ಕಳಪೆ ಮಟ್ಟದ ಪ್ರದರ್ಶನ ನಾನು ನಿರೀಕ್ಷಿಸರಲಿಲ್ಲ. ಈ ಪ್ರೋಮೊ ಕಂಡು ನನಗೆ ಕೋಪ ಬರಲಿಲ್ಲ. ಬಹಳ ದುಃಖವನ್ನುಂಟುಮಾಡಿತು!” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ವನ್ನು ನಿರ್ಮಾಪಕಿ ಏಕ್ತಾ ಕಪೂರ್ ಕೂಡ ರಿ ಪೋಸ್ಟ್‌ ಮಾಡಿ ಕರಣ್ ಬೆಂಬಲಕ್ಕೆ ನಿಂತರು. ಕಳಪೆ ಹಾಸ್ಯ ಎಂದು ಏಕ್ತಾ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

ಏಕ್ತಾ ಕಪೂರ್‌ ರಿ ಪೋಸ್ಟ್‌ ಮಾಡಿ ʻʻಈ ರೀತಿ ಹಲವು ಬಾರಿ ಸಂಭವಿಸಿದೆ! ಕಳಪೆ ಹಾಸ್ಯವು ಕೆಲವೊಮ್ಮೆ ಕಾರ್ಯಕ್ರಮಗಳಲ್ಲಿ ಮತ್ತು ಪ್ರಶಸ್ತಿ ಸಮಾರಂಭಗಳಲ್ಲಿಯೂ ಇರುತ್ತದೆ. ಇದರ ಜತೆಗೆ ನೀವು ಹಾಜರಾಗಬೇಕೆಂದು ಅವರು ನಿರೀಕ್ಷಿಸುತ್ತಾರೆʼʼ ಎಂದು ಅವರು ಬರೆದಿದ್ದಾರೆ.

ಕರಣ್‌ ಜೋಹರ್ ಹೇಳಿಕೆಯ ನಂತರ, ಹಾಸ್ಯನಟ ಕೆತನ್‌ ಸಿಂಗ್ ಪ್ರತಿಕ್ರಿಯಿಸಿದರು ಮತ್ತು ಕ್ಷಮೆಯಾಚಿಸಿದರು. “ನಾನು ಕರಣ್ ಸರ್ ಅವರಲ್ಲಿ ಕ್ಷಮೆ ಕೇಳುತ್ತೇನೆ. ಮೊದಲನೇದಾಗಿ ಈ ರೀತಿ ಮಿಮಿಕ್ರಿ ಮಾಡಲು ಕಾರಣ ಕರಣ್ ಜೋಹರ್ ಅವರ ಕಾಫಿ ಶೋವನ್ನು ಬಹಳಷ್ಟು ಬಾರಿ ನೋಡಿದ್ದೇನೆ. ನಾನು ಅವರ ಕೆಲಸಕ್ಕೆ ಮತ್ತು ಆ ಕಾರ್ಯಕ್ರಮಕ್ಕೆ ನಾನು ದೊಡ್ಡ ಅಭಿಮಾನಿ. ಇತ್ತೀಚೆಗೆ ನಾನು ಕರಣ್‌ ಅವರ ಚಿತ್ರ ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾವನ್ನು 5 ರಿಂದ 6 ಬಾರಿ ನೋಡಿದ್ದೇನೆ. ನನ್ನ ಈ ನಟನೆಯಿಂದ ಕರಣ್‌ ಅವರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಿಮ್ಮನ್ನು ನೋವಿಸುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಕೇವಲ ಪ್ರೇಕ್ಷಕರನ್ನು ರಂಜಿಸಲು ಬಯಸಿದ್ದೆʼʼಎಂದು ಹೇಳಿದ್ದಾರೆ.

ಕರಣ್‌ ಜೋಹರ್ ಅವರ ಕೊನೆಯ ಚಿತ್ರ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading
Advertisement
ವೈರಲ್ ನ್ಯೂಸ್10 mins ago

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Double Murder Fakirappa stabs brothers to death for falling behind daughter
ಕ್ರೈಂ13 mins ago

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

SSLC Exam Result 2024 to be declared tomorrow Here are the details
ಶಿಕ್ಷಣ29 mins ago

SSLC Exam Result 2024: ನಾಳೆ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Srinidhi Shetty Attends Daiva Kola Festivities in Mangalore
ಸ್ಯಾಂಡಲ್ ವುಡ್36 mins ago

Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Pepper spray
ಕರ್ನಾಟಕ44 mins ago

Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

Prajwal Revanna Case Will resign says DK Shivakumar and slams HD Kumaraswamy
ರಾಜಕೀಯ46 mins ago

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Sam Pitroda
ದೇಶ60 mins ago

Sam Pitroda: “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ…” ಸ್ಯಾಮ್‌ ಪಿತ್ರೋಡಾ ಮತ್ತೊಂದು ಆತ್ಮಹತ್ಯಾ ಬಾಂಬ್!

World Red Cross Day
Latest1 hour ago

World Red Cross Day: ದಾನ ಮತ್ತು ಸೇವೆಯಿಂದ ಸಂತೋಷ; ಇದು ರೆಡ್ ಕ್ರಾಸ್ ದಿನದ ಸಂದೇಶ

Palthady Rama krishna achar
ಕರ್ನಾಟಕ1 hour ago

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Actor Darshan devil starring making video release on may 10
ಸಿನಿಮಾ2 hours ago

Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ17 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ20 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ22 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌