Deepak Gowda, who walked out of the serial Shreerastu Shubhamastu Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್‌ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ! Vistara News
Connect with us

ಕಿರುತೆರೆ

Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್‌ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!

ಧಾರಾವಾಹಿಯಲ್ಲಿ ‘ಸಮರ್ಥ್’ ಪಾತ್ರವನ್ನು ನಿರ್ವಹಿಸುತ್ತಿದ್ದ ನಟ ದೀಪಕ್ ಗೌಡ (Deepak Gowda) ಇದೀಗ ಕಾರಣಾಂತರಗಳಿಂದ ಧಾರಾವಾಹಿಯಿಂದ ಹೊರಬಂದಿದ್ದಾರೆ. ದೀಪಕ್ ತಮ್ಮ ನಿರ್ಧಾರದ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ.

VISTARANEWS.COM


on

Deepak Gowda out of the serial Shreerastu Shubhamastu
Koo

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ‘ಶ್ರೀರಸ್ತು ಶುಭಮಸ್ತು’ ಕೂಡ ಒಂದು. ಟಿಆರ್‌ಪಿಯಲ್ಲಿಯೂ ಒಳ್ಳೆಯ ಸ್ಥಾನ ಪಡೆದುಕೊಂಡಿರುವ ಈ ಧಾರಾವಾಹಿ ಇದೀಗ ಪ್ರೇಕ್ಷಕರಿಗೆ ಬೇಸರ ಸುದ್ದಿ ನೀಡಿದೆ. ಧಾರಾವಾಹಿಯಲ್ಲಿ ‘ಸಮರ್ಥ್’ ಪಾತ್ರವನ್ನು ನಿರ್ವಹಿಸುತ್ತಿದ್ದ ನಟ ದೀಪಕ್ ಗೌಡ (Deepak Gowda) ಇದೀಗ ಕಾರಣಾಂತರಗಳಿಂದ ಧಾರಾವಾಹಿಯಿಂದ ಹೊರಬಂದಿದ್ದಾರೆ. ದೀಪಕ್ ತಮ್ಮ ನಿರ್ಧಾರದ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ದೀಪಕ್‌ ಅಭಿಮಾನಿಗಳು ಇನ್‌ಸ್ಟಾದಲ್ಲಿ ಕಮೆಂಟ್‌ ಮೂಲಕ ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

.’ಶ್ರೀ ರಸ್ತು ಶುಭಮಸ್ತು’ ಧಾರಾವಾಹಿಯ ಮೊದಲು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಮ್ಮನೆ ಯುವರಾಣಿ’ ಧಾರಾವಾಹಿಯಲ್ಲಿ ನಟಿಸಿದ್ದ ದೀಪಕ್ ಗೌಡ ಅಲ್ಲೂ ಕೂಡಾ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಆಗಲೂ ಕೂಡ ಅವರ ಪಾತ್ರ ಅರ್ಧದಲ್ಲೇ ಮುಗಿದುಹೋಇತ್ತು. ‘ಶ್ರೀ ರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಕಿರುತೆರೆ ವೀಕ್ಷಕರು ಸಮರ್ಥ್ ಹಾಗೂ ಸಿರಿ ಜೋಡಿಯನ್ನು ಕೂಡಾ ಮೆಚ್ಚಿಕೊಂಡಿದ್ದರು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಬಿಳಿ ಹೆಂಡ್ತಿ’ ಧಾರಾವಾಹಿಯಲ್ಲಿ ನಾಯಕ ಅಜಿತ್ ಆಗಿ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರಿ ದೀಪಕ್‌.

ಶ್ರೀ ರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸಮರ್ಥ್ ಪಾತ್ರಕ್ಕೆ ಈಗಾಗಲೇ ಹೊಸ ನಟನ ಆಗಮನವಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ದೊರೆಸಾನಿ’ ಧಾರಾವಾಹಿಯಲ್ಲಿ ನಾಯಕಿ ದೀಪಿಕಾಳ ಅಣ್ಣ ಆಗಿ ನಟಿಸಿದ್ದ ದರ್ಶಿತ್ ಗೌಡ ಇನ್ನು ಮುಂದೆ ಸಮರ್ಥ್ ಆಗಿ ನಟಿಸಲಿದ್ದಾರೆ.

ಇದನ್ನೂ ಓದಿ: Deepa Katte: ವೈವಾಹಿಕ ಜೀವನಕ್ಕೆ ಕಾಲಿಟ್ಟ `ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಖ್ಯಾತಿಯ ನಟಿ ದೀಪಾ ಕಟ್ಟೆ

ಶ್ರೀರಸ್ತು ಶುಭಮಸ್ತು ಧಾರಾವಾಹಿ ಕಥೆಯು ವಿಧವೆಯಾದ ತುಳಸಿ ಎಂಬ ಹುಡುಗಿಯ ಸುತ್ತ ಸುತ್ತುತ್ತದೆ. ತುಳಸಿಯನ್ನು ಮರುಮದುವೆ ಮಾಡಿಸಲು ಸಿರಿ ತನ್ನ ಕುಟುಂಬ ಮತ್ತು ಸಮಾಜದ ವಿರುದ್ಧ ನಿಲ್ಲುತ್ತಾಳೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮಧ್ಯ ವಯಸ್ಕನ ಪಾತ್ರವನ್ನು ಅಜಿತ್‌ ಹಿಂದೆ ನಿರ್ವಹಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕಿರುತೆರೆ

Weekend With Ramesh: ಈ ವಾರದ ವೀಕೆಂಡ್​ ವಿತ್‌ ರಮೇಶ್‌ ಅತಿಥಿಗಳು ಇವರು!

ಈ ವಾರ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ (Weekend With Ramesh) ಸಾಹಿತಿ, ಅಪ್ಪಟ ದೇಸೀ ಕವಿ, ಗ್ರಾಮ್ಯ ಸಾಹಿತ್ಯದ ಮೇರು ಶಿಖರ, ಪದ್ಮಶ್ರೀ ಡಾ.ದೊಡ್ಡರಂಗೇಗೌಡ ಹಾಗೂ ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ ಜೈ ಜಗದೀಶ್ ಅತಿಥಿಯಾಗಿದ್ದಾರೆ.

VISTARANEWS.COM


on

Edited by

Jai Jagadish and Doddarange Gowda
Koo

ಬೆಂಗಳೂರು: ಈ ವಾರ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ (Weekend With Ramesh) ಸಾಹಿತಿ, ಅಪ್ಪಟ ದೇಸೀ ಕವಿ, ಗ್ರಾಮ್ಯ ಸಾಹಿತ್ಯದ ಮೇರು ಶಿಖರ, ಪದ್ಮಶ್ರೀ ಡಾ.ದೊಡ್ಡರಂಗೇಗೌಡ ಹಾಗೂ ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ ಜೈ ಜಗದೀಶ್ ಅತಿಥಿಯಾಗಿದ್ದಾರೆ. ಇಬ್ಬರು ಅತಿಥಿಗಳ ಎಪಿಸೋಡ್ ಪ್ರೋಮೋಗಳನ್ನು ಜೀ ಕನ್ನಡ ವಾಹಿನಿ ಈಗಾಗಲೇ ಹಂಚಿಕೊಂಡಿದೆ.

ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾದವರು ದೊಡ್ಡರಂಗೇಗೌಡರು

ದೊಡ್ಡರಂಗೇಗೌಡರು ಕನ್ನಡದ ಕವಿ, ಸಾಹಿತಿ , ಪ್ರಾಧ್ಯಾಪಕರು ಮತ್ತು ಚಲನಚಿತ್ರ ಸಾಹಿತಿಗಳು. ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ 80ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾಗಿದ್ದಾರೆ. ಗ್ರಾಮೀಣ ಸೊಗಡಿನ ಗೀತ ಸಾಹಿತ್ಯವು ಇವರ ಸಾಹಿತ್ಯದ ಗುರುತಾಗಿದೆ. ʻಕನ್ನಡ ಪ್ರಗಾಥಗಳ ಸಾಮ್ರಾಟ್ʼ ಎಂದೂ ಪ್ರಸಿದ್ಧಿಯಾಗಿದ್ದಾರೆ.

ನೋಟದಾಗೆ ನಗೆಯ ಬೀರಿ, ನಮ್ಮೂರ ಮಂದಾರ ಹೂವೆ, ತೇರಾ ಏರಿ ಅಂಬರದಾಗೆ ಹಾಡುಗಳು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಹಾಡುಗಳನ್ನು ದೊಡ್ಡರಂಗೇಗೌಡರು ಬರೆದಿದ್ದಾರೆ. 10 ಸಿನಿಮಾಕ್ಕೆ ಸಂಭಾಷಣೆ ಹಾಗೂ 100ಕ್ಕೂ ಹೆಚ್ಚು ಕಿರು-ಧಾರಾವಾಹಿಗಳಿಗೆ ಚಿತ್ರಕತೆ ಬರೆದಿದ್ದಾರೆ. ದೊಡ್ಡರಂಗೇಗೌಡರು ‘ಮಾಗಿಯ ಕನಸು’ ಚಿತ್ರದಲ್ಲಿ ಮತ್ತು ಸಾಧನೆ ಶಿಖರ ಚಲನಚಿತ್ರದಲ್ಲಿ ನಟಿಸಿದ್ದಾರೆ. ‘ಹಾರುವ ಹಂಸಗಳುʼ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. ನಾಲ್ಕು ಬಾರಿ ಉತ್ತಮ ಗೀತರಚನೆಗೆ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ಹೀಗೆ ಹಲವಾರು ಪ್ರಶಸ್ತಿಗಳು ಸಂದಿವೆ. ದೊಡ್ಡರಂಗೇಗೌಡರು ಹಾಗೂ ಇನ್ಫೋಸಿಸ್​​ ನಾರಾಯಣಮೂರ್ತಿಯರು ಶಾಲಾ ದಿನಗಳಲ್ಲಿ ಸಹಪಾಠಿಗಳಾಗಿದ್ದವರು. ಈ ಬಗ್ಗೆಯೂ ದೊಡ್ಡರಂಗೇಗೌಡರು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: Weekend With Ramesh: ಸಾಧಕರ ಸೀಟ್‌ನಲ್ಲಿ ಕವಿತೆ, ಚಲನಚಿತ್ರ ಹಾಡುಗಳನ್ನು ಬರೆದ ಸಾಹಿತಿ ಡಾ. ನಾಗೇಂದ್ರ ಪ್ರಸಾದ್‌!

ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ

1976ರಲ್ಲಿ ಫಲಿತಾಂಶ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಜೈ ಜಗದೀಶ್ ನಾಯಕ ನಟನಾಗಿ, ಪೋಷಕನಟನಾಗಿ, ಖಳನಟನಾಗಿ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ., ಕನ್ನಡದ ಜನಪ್ರಿಯ ನಟ. ಪುಟ್ಟಣ್ಣ ಕಣಗಾಲ್​ರಿಂದ 1976 ರಲ್ಲಿ ಚಿತ್ರರಂಗಕ್ಕೆ ಪರಿಚಯಿಸಲ್ಪಟ್ಟ ಜೈ ಜಗದೀಶ್ ಐದು ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಾಯಕನಾಗಿ, ಪೋಷಕ ನಟನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿರುವ ಜೈ ಜಗದೀಶ್, ಶಿವರಾಜ್ ಕುಮಾರ್ ನಟನೆಯ ʻಭೂಮಿ ತಾಯಿ ಚೊಚ್ಚಲ ಮಗʼ ಸಿನಿಮಾ ಮೂಲಕ ನಿರ್ಮಾಣಕ್ಕೂ ಕೈ ಹಾಕಿದರು.

ಕೆಲವು ಸಿನಿಮಾಗಳ ನಿರ್ದೇಶನವನ್ನೂ ಜೈ ಜಗದೀಶ್ ಮಾಡಿದ್ದಾರೆ. ಬೆಂಕಿಯಲ್ಲಿ ಅರಳಿದ ಹೂವು, ಮದುವೆ ಮಾಡು ತಮಾಷೆ ನೋಡಿ, ಗರ್ಜನೆ,  ಪಡುವಾರಹಳ್ಳಿ ಪಾಂಡವರು’,`ಗಾಳಿ ಮಾತು’ ಇನ್ನೂ ಹಲವು ಸಿನಿಮಾಗಳಲ್ಲಿ ಅಭಿನಯಸಿದ್ದಾರೆ. ಇವರ ಪತ್ನಿ ವಿಜಯಲಕ್ಷ್ಮಿ ಸಿಂಗ್ ಕೂಡ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ,ನಿರ್ದೇಶಕಿಯಾಗಿ ಪ್ರಸಿದ್ಧರಾಗಿದ್ದಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಗಟ್ಟಿಮೇಳಕ್ಕೆ ಮೊದಲ ಸ್ಥಾನ; ಟಾಪ್‌ 5 ಸ್ಥಾನದಲ್ಲಿ ಯಾವೆಲ್ಲ ಧಾರಾವಾಹಿಗಳು ಇವೆ?

Kannada Serials TRP: ಕಳೆದ ವಾರ (ಮೇ 13-19) ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಹಿಂದಿನ ವಾರದಂತೆ ಈ ವಾರವೂ ಗಟ್ಟಿಮೇಳ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನ ಪುಟ್ಟಕ್ಕನ ಮಕ್ಕಳು ಪಡೆದಿದೆ.

VISTARANEWS.COM


on

Edited by

Kannada Serials TRP This Week
Koo

ಬೆಂಗಳೂರು: ಈ ವಾರದ ಕನ್ನಡ ಕಿರುತೆರೆಯ (Kannada Serials TRP) ಟಿಆರ್‌ಪಿ ಹೊರಬಿದ್ದಿದೆ. ಕಲರ್ಸ್‌ ಕನ್ನಡ ಹಾಗೂ ಜೀ ವಾಹಿನಿಯಲ್ಲಿ ಹಲವು ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಕಳೆದ ವಾರ (ಮೇ 13-19) ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಹಿಂದಿನ ವಾರದಂತೆ ಈ ವಾರವೂ ಗಟ್ಟಿಮೇಳ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನ ಪುಟ್ಟಕ್ಕನ ಮಕ್ಕಳು ಪಡೆದಿದೆ.

ಮೊದಲ ಸ್ಥಾನ ‘ಗಟ್ಟಿಮೇಳ’

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಗಟ್ಟಿಮೇಳ’ ಧಾರಾವಾಹಿ 1000 ಎಪಿಸೋಡ್ ಪೂರೈಸಿದೆ. ಇಷ್ಟಾದರೂ ತನ್ನ ಸ್ಥಾನವನ್ನು ಹಾಗೇ ಉಳಿಸಿಕೊಂಡಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ಇದರಲ್ಲಿ ಇದ್ದಾರೆ. ಈ ಮಧ್ಯಮ ವರ್ಗದ ಮನೆಯ ಹೆಣ್ಣು ಮಕ್ಕಳನ್ನು ಹೇಗೆ ಪರಿಮಳಾ ಹಾಗೂ ಮಂಜುನಾಥ್ ದಂಪತಿ ಮದುವೆ ಮಾಡುತ್ತಾರೆ ಎಂಬುದು ಒನ್‌ಲೈನ್‌ ಸ್ಟೋರಿ.

ಎರಡನೇ ಸ್ಥಾನ ಪುಟ್ಟಕ್ಕನ ಮಕ್ಕಳು.

ಈ ಧಾರಾವಾಹಿ ಹಾಗೂ ಗಟ್ಟಿಮೇಳ ಆಗಾಗ ಪೈಪೋಟಿಗೆ ಇಳಿಯುತ್ತವೆ. ಈ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ನಂಬರ್‌ 1 ಸ್ಥಾನ ಪಡೆದ ಧಾರಾವಾಹಿ ಯಾವುದು?

ಮೂರನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದು ಅಕ್ಕ ತಂಗಿ ಕಥೆ. ಈ ಎರಡೂ ಧಾರಾವಾಹಿಗಳು ಹಿಂದಿನ ವಾರ ಒಂದೇ ಟಿಆರ್​ಪಿ ಪಡೆದು ಮೂರನೇ ಸ್ಥಾನದಲ್ಲಿತ್ತು. ಆದರೆ ಈ ವಾರ ಭಾಗ್ಯಲಕ್ಷ್ಮೀ ಮೂರನೇ ಸ್ಥಾನ ಪಡೆದುಕೊಂಡಿದೆ. ಸುದರ್ಶನ್ ರಂಗಪ್ರಸಾದ್, ಸುಷ್ಮಾ ಕೆ ರಾವ್, ಪದ್ಮಜಾ ರಾವ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಲಕ್ಷ್ಮೀ ಬಾರಮ್ಮ

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಜನಮನ್ನಣೆ ಪಡೆದಿದೆ. ಈ ಧಾರಾವಾಹಿಯನ್ನು ಜನರು ಇಷ್ಟಪಡುತ್ತಿದ್ದಾರೆ. ಟಾಪ್ ಐದರಲ್ಲಿ ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಇದೆ. ಶಮಂತ್ ಬ್ರೋ ಗೌಡ ಮೊದಲಾದವರು ಇದ್ದಾರೆ.

ಶ್ರೀರಸ್ತು ಶುಭಮಸ್ತು

ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿ (Shrirasthu Shubhamasthu Serial) ಧಾರಾವಾಹಿಯ ಪ್ರತಿ ಪಾತ್ರವನ್ನು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಇಷ್ಟಪಟ್ಟಿದ್ದಾರೆ. ತುಳಸಿ ಹೆಸರಿನ ಪಾತ್ರವನ್ನು ಅವರು ಮಾಡಿದ್ದಾರೆ. ಮಾಧವ್ ಆಗಿ ಅಜಿತ್ ಹಂದೆ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಗೆ ಐದನೇ ಸ್ಥಾನ ಇದೆ.ಸುಧಾರಾಣಿ ಅವರು ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ತುಳಸಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಕಿರುತೆರೆ

Deepa Katte: ವೈವಾಹಿಕ ಜೀವನಕ್ಕೆ ಕಾಲಿಟ್ಟ `ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಖ್ಯಾತಿಯ ನಟಿ ದೀಪಾ ಕಟ್ಟೆ

ಶ್ರೀರಸ್ತು ಶುಭಮಸ್ತು ಧಾರಾವಾಹಿ ಖ್ಯಾತಿಯ ದೀಪಾ ಕಟ್ಟೆ (Deepa Katte) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿವೆ ಫೋಟೊಗಳು!

VISTARANEWS.COM


on

Edited by

Shreerastu Shubhamastu serial fame actress Deepa Katte entered married life
Koo
Deepa Katte

ಶ್ರೀರಸ್ತು ಶುಭಮಸ್ತು ಧಾರಾವಾಹಿ ಖ್ಯಾತಿಯ ದೀಪಾ ಕಟ್ಟೆ (Deepa Katte) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Deepa Katte

‘ಮಿಥುನರಾಶಿ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ದೀಪಾ ಕಟ್ಟೆ ಅವರು ಸದ್ಯ `ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ ಅವರ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನೆಗೆಟಿವ್ ಶೇಡ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Shreerastu Shubhamastu serial fame actress Deepa Katte entered married life

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ತುಳಸಿ ಪುತ್ರಿ ಸಂಧ್ಯಾ ಪಾತ್ರ ನಿರ್ವಹಿಸುತ್ತಿರುವ ನಟಿ ದೀಪಾ ಕಟ್ಟೆ ಧಾರಾವಾಹಿಯಲ್ಲಿ ಸೊಕ್ಕಿನ ಹುಡುಗಿಯಾಗಿ, ಮನೆ ಬಿಟ್ಟು ಓಡಿ ಹೋದವಳು ಎಂತಲೇ ಫೇಮಸ್ ಆಗಿದ್ದಾರೆ.

Shreerastu Shubhamastu serial fame actress Deepa Katte entered married life

ಐಟಿ ಉದ್ಯೋಗಿ ರಕ್ಷಿತ್ ಯಡಪಡಿತ್ತಾಯ ಅವರ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭ, ಅರಿಶಿನ, ಮೆಹೆಂದಿ ಶಾಸ್ತ್ರದ ಫೋಟೊಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Shreerastu Shubhamastu serial fame actress Deepa Katte entered married life

ದೀಪಾ ಕಟ್ಟೆ – ರಕ್ಷಿತ್ ಅವರ ವಿವಾಹ, ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ನಡೆಯಿತು.

Continue Reading

ಕಿರುತೆರೆ

Nitesh Pandey: ಕಿರುತೆರೆ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

‘ಅನುಪಮಾ’ ಧಾರಾವಾಹಿ ಖ್ಯಾತಿಯ ನಿತೇಶ್ ಪಾಂಡೆ (Nitesh Pandey) ಹೃದಯಾಘಾತದಿಂದ ಮೇ 24ರಂದು ನಿಧನರಾಗಿದ್ದಾರೆ. ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ‘ಅನುಪಮಾ’ ಧಾರಾವಾಹಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Edited by

Anupamaa actor Nitesh Pandey passes away
Koo

ಮುಂಬೈ: ‘ಅನುಪಮಾ’ ಧಾರಾವಾಹಿ ಖ್ಯಾತಿಯ ನಿತೇಶ್ ಪಾಂಡೆ (Nitesh Pandey) ಹೃದಯಾಘಾತದಿಂದ ಮೇ 24ರಂದು ನಿಧನರಾಗಿದ್ದಾರೆ. ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ‘ಅನುಪಮಾ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ನಿತೇಶ್ ಪಾಂಡೆ ಮಾಡುತ್ತಿದ್ದರು.

ನಿತೇಶ್ ಪಾಂಡೆ 1990ರಲ್ಲಿ ರಂಗಭೂಮಿಗೆ ಪದಾರ್ಪಣೆ ಮಾಡಿದರು. 1995ರಲ್ಲಿ ʻತೇಜಸ್ʼ ಚಿತ್ರದಲ್ಲಿ ಪತ್ತೇದಾರಿ ಪಾತ್ರವನ್ನು ನಿರ್ವಹಿಸಿದರು. ನಿತೇಶ್ ಪಾಂಡೆ ʻಮಂಜಿಲೀನ್ ಅಪಾನಿ ಅಪಾನಿʼ, ʻಅಸ್ತಿತ್ವ…ಏಕ್ ಪ್ರೇಮ್ ಕಹಾನಿʼ, ʻಸಾಯಾʼ, ʻಜುಸ್ತಜೂʼ ಮತ್ತು ʻದುರ್ಗೇಶ್ ನಂದಿನಿʼಯಂತಹ ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ʻಓಂ ಶಾಂತಿ ಓಂʼ ಮತ್ತು ʻಬದಾಯಿ ದೋʼ ಸೇರಿದಂತೆ ಹಲವಿ ಸಿನಿಮಾಗಲಲ್ಲಿ ಅಭಿನಯಿಸಿದ್ದರು. ಡ್ರೀಮ್ ಕ್ಯಾಸಲ್ ಪ್ರೊಡಕ್ಷನ್ಸ್ ಎಂಬ ಹೆಸರಿನ ನಿರ್ಮಾಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ‘ಪ್ಯಾರ್​ ಕ ದರ್ದ್​ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದರು. ಈಗ ನಿತೇಶ್ ಏಕಾಏಕಿ ಮೃತಪಟ್ಟಿದ್ದು ಅನೇಕರಿಗೆ ಆಘಾತ ತಂದಿದೆ. ಕಳೆದ 25 ವರ್ಷಗಳಿಂದ ಕಿರುತೆರೆಯಲ್ಲಿ ಪರಿಚಿತರಾಗಿದ್ದರು.

ನಿತೇಶ್ ಅವರ ಭಾವ, ನಿರ್ಮಾಪಕ ಸಿದ್ದಾರ್ಥ್ ನಗರ್ ಈ ಬಗ್ಗೆ ಮಾತನಾಡಿ. ‘ನಿತೇಶ್​ ಅವರು ಮೃತಪಟ್ಟಿದ್ದಾರೆ. ಅವರ ಪತ್ನಿ ಅರ್ಪಿತಾ ಪಾಂಡೆ ಶಾಕ್​ನಲ್ಲಿದ್ದಾರೆ. ಅವರ ತಂದೆ ಮೃತದೇಹ ತರಲು ತೆರಳಿದ್ದಾರೆ. ನನ್ನ ಸಹೋದರಿ ಅರ್ಪಿತಾ ಜತೆ ನನಗೆ ಮಾತನಾಡಲೂ ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Ray Stevenson: ಆರ್​ಆರ್​ಆರ್​​ ಚಿತ್ರದಲ್ಲಿ ನಟಿಸಿದ್ದ ರೇ ಸ್ಟೀವನ್​ಸನ್​ ನಿಧನ; ಅರಗಿಸಿಕೊಳ್ಳಲಾಗುತ್ತಿಲ್ಲ ಎಂದ ರಾಜಮೌಳಿ

ಇತ್ತೀಚೆಗೆ ಹಿಂದಿ ಕಿರುತೆರೆಗೆ ಕರಾಳ ದಿನ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದಾದ ಬೆನ್ನಲ್ಲೇ ಮೇ 23ರಂದು ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಅವರು ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಕೊನೆಯುಸಿರೆಳೆದರು.

Continue Reading
Advertisement
Shah Rukh Khan And Akshay kumar Voice Over to New parliament building Video
ದೇಶ2 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema12 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema15 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ19 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್32 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ42 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ53 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ1 hour ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ2 hours ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

Narendra Modi Stadium, Ahmedabad
ಕ್ರಿಕೆಟ್2 hours ago

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ53 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!