Jai Jagadish and Doddarange Gowda Are The Guests In Weekend With Ramesh Weekend With Ramesh: ಈ ವಾರದ ವೀಕೆಂಡ್​ ವಿತ್‌ ರಮೇಶ್‌ ಅತಿಥಿಗಳು ಇವರು! Vistara News
Connect with us

ಕಿರುತೆರೆ

Weekend With Ramesh: ಈ ವಾರದ ವೀಕೆಂಡ್​ ವಿತ್‌ ರಮೇಶ್‌ ಅತಿಥಿಗಳು ಇವರು!

ಈ ವಾರ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ (Weekend With Ramesh) ಸಾಹಿತಿ, ಅಪ್ಪಟ ದೇಸೀ ಕವಿ, ಗ್ರಾಮ್ಯ ಸಾಹಿತ್ಯದ ಮೇರು ಶಿಖರ, ಪದ್ಮಶ್ರೀ ಡಾ.ದೊಡ್ಡರಂಗೇಗೌಡ ಹಾಗೂ ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ ಜೈ ಜಗದೀಶ್ ಅತಿಥಿಯಾಗಿದ್ದಾರೆ.

VISTARANEWS.COM


on

Jai Jagadish and Doddarange Gowda
Koo

ಬೆಂಗಳೂರು: ಈ ವಾರ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ (Weekend With Ramesh) ಸಾಹಿತಿ, ಅಪ್ಪಟ ದೇಸೀ ಕವಿ, ಗ್ರಾಮ್ಯ ಸಾಹಿತ್ಯದ ಮೇರು ಶಿಖರ, ಪದ್ಮಶ್ರೀ ಡಾ.ದೊಡ್ಡರಂಗೇಗೌಡ ಹಾಗೂ ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ ಜೈ ಜಗದೀಶ್ ಅತಿಥಿಯಾಗಿದ್ದಾರೆ. ಇಬ್ಬರು ಅತಿಥಿಗಳ ಎಪಿಸೋಡ್ ಪ್ರೋಮೋಗಳನ್ನು ಜೀ ಕನ್ನಡ ವಾಹಿನಿ ಈಗಾಗಲೇ ಹಂಚಿಕೊಂಡಿದೆ.

ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾದವರು ದೊಡ್ಡರಂಗೇಗೌಡರು

ದೊಡ್ಡರಂಗೇಗೌಡರು ಕನ್ನಡದ ಕವಿ, ಸಾಹಿತಿ , ಪ್ರಾಧ್ಯಾಪಕರು ಮತ್ತು ಚಲನಚಿತ್ರ ಸಾಹಿತಿಗಳು. ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ 80ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾಗಿದ್ದಾರೆ. ಗ್ರಾಮೀಣ ಸೊಗಡಿನ ಗೀತ ಸಾಹಿತ್ಯವು ಇವರ ಸಾಹಿತ್ಯದ ಗುರುತಾಗಿದೆ. ʻಕನ್ನಡ ಪ್ರಗಾಥಗಳ ಸಾಮ್ರಾಟ್ʼ ಎಂದೂ ಪ್ರಸಿದ್ಧಿಯಾಗಿದ್ದಾರೆ.

ನೋಟದಾಗೆ ನಗೆಯ ಬೀರಿ, ನಮ್ಮೂರ ಮಂದಾರ ಹೂವೆ, ತೇರಾ ಏರಿ ಅಂಬರದಾಗೆ ಹಾಡುಗಳು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಹಾಡುಗಳನ್ನು ದೊಡ್ಡರಂಗೇಗೌಡರು ಬರೆದಿದ್ದಾರೆ. 10 ಸಿನಿಮಾಕ್ಕೆ ಸಂಭಾಷಣೆ ಹಾಗೂ 100ಕ್ಕೂ ಹೆಚ್ಚು ಕಿರು-ಧಾರಾವಾಹಿಗಳಿಗೆ ಚಿತ್ರಕತೆ ಬರೆದಿದ್ದಾರೆ. ದೊಡ್ಡರಂಗೇಗೌಡರು ‘ಮಾಗಿಯ ಕನಸು’ ಚಿತ್ರದಲ್ಲಿ ಮತ್ತು ಸಾಧನೆ ಶಿಖರ ಚಲನಚಿತ್ರದಲ್ಲಿ ನಟಿಸಿದ್ದಾರೆ. ‘ಹಾರುವ ಹಂಸಗಳುʼ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. ನಾಲ್ಕು ಬಾರಿ ಉತ್ತಮ ಗೀತರಚನೆಗೆ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ಹೀಗೆ ಹಲವಾರು ಪ್ರಶಸ್ತಿಗಳು ಸಂದಿವೆ. ದೊಡ್ಡರಂಗೇಗೌಡರು ಹಾಗೂ ಇನ್ಫೋಸಿಸ್​​ ನಾರಾಯಣಮೂರ್ತಿಯರು ಶಾಲಾ ದಿನಗಳಲ್ಲಿ ಸಹಪಾಠಿಗಳಾಗಿದ್ದವರು. ಈ ಬಗ್ಗೆಯೂ ದೊಡ್ಡರಂಗೇಗೌಡರು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: Weekend With Ramesh: ಸಾಧಕರ ಸೀಟ್‌ನಲ್ಲಿ ಕವಿತೆ, ಚಲನಚಿತ್ರ ಹಾಡುಗಳನ್ನು ಬರೆದ ಸಾಹಿತಿ ಡಾ. ನಾಗೇಂದ್ರ ಪ್ರಸಾದ್‌!

ನಟನೆ, ನಿರ್ದೇಶನ, ನಿರ್ಮಾಣಕ್ಕೂ ಜೈ ಎಂದ ಕಲಾವಿದ

1976ರಲ್ಲಿ ಫಲಿತಾಂಶ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಜೈ ಜಗದೀಶ್ ನಾಯಕ ನಟನಾಗಿ, ಪೋಷಕನಟನಾಗಿ, ಖಳನಟನಾಗಿ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ., ಕನ್ನಡದ ಜನಪ್ರಿಯ ನಟ. ಪುಟ್ಟಣ್ಣ ಕಣಗಾಲ್​ರಿಂದ 1976 ರಲ್ಲಿ ಚಿತ್ರರಂಗಕ್ಕೆ ಪರಿಚಯಿಸಲ್ಪಟ್ಟ ಜೈ ಜಗದೀಶ್ ಐದು ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಾಯಕನಾಗಿ, ಪೋಷಕ ನಟನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿರುವ ಜೈ ಜಗದೀಶ್, ಶಿವರಾಜ್ ಕುಮಾರ್ ನಟನೆಯ ʻಭೂಮಿ ತಾಯಿ ಚೊಚ್ಚಲ ಮಗʼ ಸಿನಿಮಾ ಮೂಲಕ ನಿರ್ಮಾಣಕ್ಕೂ ಕೈ ಹಾಕಿದರು.

ಕೆಲವು ಸಿನಿಮಾಗಳ ನಿರ್ದೇಶನವನ್ನೂ ಜೈ ಜಗದೀಶ್ ಮಾಡಿದ್ದಾರೆ. ಬೆಂಕಿಯಲ್ಲಿ ಅರಳಿದ ಹೂವು, ಮದುವೆ ಮಾಡು ತಮಾಷೆ ನೋಡಿ, ಗರ್ಜನೆ,  ಪಡುವಾರಹಳ್ಳಿ ಪಾಂಡವರು’,`ಗಾಳಿ ಮಾತು’ ಇನ್ನೂ ಹಲವು ಸಿನಿಮಾಗಳಲ್ಲಿ ಅಭಿನಯಸಿದ್ದಾರೆ. ಇವರ ಪತ್ನಿ ವಿಜಯಲಕ್ಷ್ಮಿ ಸಿಂಗ್ ಕೂಡ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ,ನಿರ್ದೇಶಕಿಯಾಗಿ ಪ್ರಸಿದ್ಧರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Kollam Sudhi: ಮಲಯಾಳಂ ಖ್ಯಾತ ಕಿರುತೆರೆ ನಟ ಕಾರು ಅಪಘಾತದಲ್ಲಿ ನಿಧನ; ಕಾರು ನಜ್ಜುಗುಜ್ಜು!

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ, ಸ್ಟಾರ್ ಮ್ಯಾಜಿಕ್ ಖ್ಯಾತಿಯ ಕೊಲ್ಲಂ ಸುಧಿ (Kollam Sudhi) ಕಾರು ಅಪಘಾತದಲ್ಲಿ ಜೂನ್‌ 5ರ ಬೆಳಗ್ಗೆ ಮೃತಪಟ್ಟಿದ್ದಾರೆ.

VISTARANEWS.COM


on

Edited by

Actor Kollam Sudhi
Koo

ಬೆಂಗಳೂರು: ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ, ಸ್ಟಾರ್ ಮ್ಯಾಜಿಕ್ ಖ್ಯಾತಿಯ ಕೊಲ್ಲಂ ಸುಧಿ (Kollam Sudhi) ಕಾರು ಅಪಘಾತದಲ್ಲಿ ಜೂನ್‌ 5ರ ಬೆಳಗ್ಗೆ ಮೃತಪಟ್ಟಿದ್ದಾರೆ. ಕೈಪಮಂಗಲದಲ್ಲಿ ಟ್ರಕ್​ಗೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು 39 ವರ್ಷದ ನಟ ಮೃತಪಟ್ಟಿದ್ದಾರೆ. ಇನ್ನು ಮೂವರು ಮಿಮಿಕ್ರಿ ಕಲಾವಿದರಾದ ಬಿನು ಅಡಿಮಲಿ, ಉಲ್ಲಾಸ್ ಮತ್ತು ಮಹೇಶ್ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ವರದಿಯ ಪ್ರಕಾರ, ಸುಧಿ ಮತ್ತು ಇತರ ಕಲಾವಿದರು ತಮ್ಮ ಟಿವಿ ಕಾರ್ಯಕ್ರಮದ ನಂತರ ಮನೆಗೆ ಹಿಂತಿರುಗುತ್ತಿದ್ದರು. ಸುಧಿಯವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ತಲೆಗೆ ತೀವ್ರ ಪೆಟ್ಟಾಗಿರುವ ಕಾರಣದಿಂದ ಉಳಿಸಿಕೊಳ್ಳಲಾಗಲಿಲ್ಲ ಎಂದು ವರದಿಯಾಗಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಮಿಮಿಕ್ರಿ ಕಲಾವಿದ ಕೊಲ್ಲಂ ಸುಧಿ ಅವರು ಈ ಹಿಂದೆ ನಟ ಜಗದೀಶ್ ಅವರ ಅನುಕರಣೆ ಮೂಲಕ ಅದೆಷ್ಟೋ ಹೃದಯಗಳನ್ನು ಗೆದ್ದಿದ್ದರು.

ಸ್ಟಾರ್ ಮ್ಯಾಜಿಕ್‌ಗೆ ಪ್ರವೇಶಿಸಿದ ನಂತರ ಮಲಯಾಳಂ ಟಿವಿ ವೀಕ್ಷಕರಲ್ಲಿ ಮನೆಮಾತಾದರು. ನಟನ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ.

ಇದನ್ನೂ ಓದಿ: Gufi Paintal : ಮಹಾಭಾರತದ ‘ಶಕುನಿ ಮಾಮಾ’ ಇನ್ನಿಲ್ಲ

ಸ್ಟೇಜ್ ಶೋಗಳು ಮತ್ತು ಟಿವಿ ಕಾರ್ಯಮಗಳ ಜತೆಗೆ, ಸುಧಿ ಚಲನಚಿತ್ರಗಳಲ್ಲಿಯೂ ಪಾತ್ರಗಳನ್ನು ನಿರ್ವಹಿಸುತ್ತಿದ್ದರು. 2015ರಲ್ಲಿ ‘ಕಾಂತಾರಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ‘ಕಟ್ಟಪ್ಪಣ್ಣ’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

Continue Reading

ಕಿರುತೆರೆ

Gufi Paintal : ಮಹಾಭಾರತದ ‘ಶಕುನಿ ಮಾಮಾ’ ಇನ್ನಿಲ್ಲ

ಬಿ ಆರ್ ಚೋಪ್ರಾ ಅವರ ಧಾರಾವಾಹಿ ಮಹಾಭಾರತದಲ್ಲಿ ʻಶಕುನಿ ಮಾಮಾʼ ಆಗಿ ಕಾಣಿಸಿಕೊಂಡಿರುವ ಹಿರಿಯ ನಟ ಗುಫಿ ಪೈಂಟಲ್ (Gufi Paintal) ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Edited by

Gufi Paintal Passes Away
Koo

ಬೆಂಗಳೂರು; 1988ರಿಂದ 1990ರವರೆಗೆ ದೂರದರ್ಶನದಲ್ಲಿ ಬರುತ್ತಿದ್ದ ಬಿ ಆರ್ ಚೋಪ್ರಾ ಅವರ ಜನಪ್ರಿಯ ಧಾರಾವಾಹಿ ಮಹಾಭಾರತದಲ್ಲಿ ʻಶಕುನಿ ಮಾಮಾʼ ಆಗಿ ಕಾಣಿಸಿಕೊಂಡಿದ್ದ ಹಿರಿಯ ನಟ ಗುಫಿ ಪೈಂಟಲ್ (Gufi Paintal) ಜೂನ್ 5ರಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು. ಜೂನ್ 5ರ ಸೋಮವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಹಾಭಾರತದಲ್ಲಿ ʻಶಕುನಿ ಮಾಮಾʼ ಕುಳ್ಳಗಿನ ದೇಹ, ಒಂದು ಕಣ್ಣನ್ನು ಸಣ್ಣಗೆ ಮಾಡಿಕೊಂಡು ಕುಂಟುತ್ತಾ ಬರುವ ಆ ಪಾತ್ರವನ್ನು ಮರೆಯುವುದು ಅಸಾಧ್ಯವೆಂದೇ ಹೇಳಬೇಕು. ಇದೀಗ ಗುಫಿ ಪೈಂಟಲ್ ಬಾರದ ಲೋಕಕ್ಕೆ ಹೋಗಿದ್ದಾರೆ. ನಟ ಗುಫಿ ಪೈಂಟಲ್ ಅವರ ಸೋದರಳಿಯ ಹಿತೇನ್ ಪೈಂಟಲ್ ಮಾಧ್ಯಮಕ್ಕೆ ಈ ಬಗ್ಗೆ ಹೇಳಿಕೆ ನೀಡಿದ್ದಾರೆ “ ಗುಫಿ ಪೈಂಟಲ್ ದುರದೃಷ್ಟವಶಾತ್ ಜೂನ್‌ 5ರ ಬೆಳಗ್ಗೆ 9ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಮತ್ತು ಮೂತ್ರಪಿಂಡದ ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರುʼʼ ಎಂದು ಮಾಹಿತಿ ನೀಡಿದ್ದಾರೆ.

ಗುಫಿ ಪೈಂಟಲ್ ಅವರು ರಕ್ತದೊತ್ತಡ ಮತ್ತು ಹೃದಯ ಸಮಸ್ಯೆ ಕಾಯಿಲೆಯಿಂದ ಬಳಲುತ್ತಿದ್ದರು. ಏಳೆಂಟು ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಇಂದು ಸಂಜೆ 4 ಗಂಟೆಗೆ ಮುಂಬಯಿ ಉಪನಗರ ಅಂಧೇರಿಯಲ್ಲಿರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಗುಫಿ ಪೈಂಟಲ್ ಹಿಂದಿ ಚಲನಚಿತ್ರಗಳ ಹೊರತಾಗಿ, 1980ರ ದಶಕದಲ್ಲಿ ಕೆಲವು ಟಿವಿ ಧಾರಾವಾಹಿಗಳಲ್ಲಿ (Serials) ಕಾಣಿಸಿಕೊಂಡಿದ್ದರು. ನಟನೆಯ ಮೊದಲು ಎಂಜಿನಿಯರ್ ಆಗಿದ್ದರು. ಅವರು ತಮ್ಮ ವೃತ್ತಿಜೀವನವನ್ನು ಎಂಜಿನಿಯರಿಂಗ್‌ನಲ್ಲಿ ಪ್ರಾರಂಭಿಸಿದರು. 1975ರ ʻರಫೂ ಚಕ್ಕರ್ʼ ಸಿನಿಮಾ ಮೂಲಕ ಸಿನಿರಂಗಕ್ಕೆ ಪ್ರವೇಶ ಮಾಡಿದರು. ಶ್ರೀ ಚೈತನ್ಯ ಮಹಾಪ್ರಭು ಎಂಬ ಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ.

Continue Reading

ಕಿರುತೆರೆ

Sharmitha Gowda: ಭಾನುಮತಿ ಕೊರಳಲ್ಲಿ ಹೆಬ್ಬಾವು! ಜೋಪಾನ ಅಂದ್ರು ಫ್ಯಾನ್ಸ್‌!

ವಿಯೆಟ್ನಾಂನ ಪ್ರೇಕ್ಷಣೀಯ ಸ್ಥಳಗಳಿಗೆ ವ ‘ಗೀತಾ’ ಧಾರಾವಾಹಿಯಲ್ಲಿ ಭಾನುಮತಿ ಪಾತ್ರವನ್ನು ನಿಭಾಯಿಸುತ್ತಿರುವವರು ನಟಿ ಶರ್ಮಿತಾ ಗೌಡ (Sharmitha Gowda) ತನ್ನ ಗೆಳತಿಯರ ಜತೆ ತೆರಳಿದ್ದರು.

VISTARANEWS.COM


on

Edited by

Sharmitha Gowda Geetha
Koo
Sharmitha Gowda

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಗೀತಾ’ ಧಾರಾವಾಹಿಯಲ್ಲಿ ಭಾನುಮತಿ ಪಾತ್ರವನ್ನು ನಿಭಾಯಿಸುತ್ತಿರುವವರು ನಟಿ ಶರ್ಮಿತಾ ಗೌಡ (Sharmitha Gowda) ತನ್ನ ಗೆಳತಿಯರ ಜತೆ ವಿಯೆಟ್ನಾಂಗೆ ತೆರಳಿದ್ದರು.

Sharmitha Gowda

ಶರ್ಮಿತಾ ಶೇರ್ ಮಾಡಿರುವ ಪೋಟೊಗಳಲ್ಲಿ ಮೈ ಮೇಲೆ ಹೆಬ್ಬಾವು ಹಾಕಿಕೊಂಡಿದ್ದಾರೆ. ಹೆಬ್ಬಾವಿನ ಜತೆ ಇರುವ ಶರ್ಮಿತಾ ಫೋಟೊ ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ.

Sharmitha Gowda

ವಿಯೆಟ್ನಾಂನ ಪ್ರೇಕ್ಷಣೀಯ ಸ್ಥಳಗಳಲ್ಲಿ ಮಾರ್ಬಲ್ ಮೌಂಟೇನ್‌ ಕೂಡ ಒಂದು. ಮಾರ್ಬಲ್ ಮೌಂಟೇನ್‌ನಲ್ಲಿ ಶರ್ಮಿತಾ ಗೌಡ ಪೋಸ್ ಕೊಟ್ಟಿದ್ದಾರೆ.

Sharmitha Gowda

‘ಗೀತಾ’ ಸೀರಿಯಲ್‌ನಲ್ಲಿ ಅತ್ತೆ ಪಾತ್ರ ಮಾಡುತ್ತಿದ್ದರೂ, ಶರ್ಮಿತಾ ಗೌಡ ಸಖತ್ ಯಂಗ್ ಆಗಿ ಕಾಣುತ್ತಾರೆ.

Sharmitha Gowda

ಬಾ ನಾ ಹಿಲ್ಸ್‌ನಲ್ಲಿ ಶರ್ಮಿತಾ ಗೌಡ ಸ್ಟನ್ನಿಂಗ್‌ ಲುಕ್‌!

Continue Reading

ಕಿರುತೆರೆ

Amruthadhare Kannada Serial : ʻಅಮೃತಧಾರೆʼಗೂ ಮುಂಚೆ ಅಣ್ಣ-ತಂಗಿಯಾಗಿ ನಟಿಸಿದ್ರಂತೆ ರಾಜೇಶ್‌-ಛಾಯಾ!

Amruthadhare Kannada Serial: ನಾಯಕ ಗೌತಮ್ ದಿವಾನ್ ಪಾತ್ರದ ರಾಜೇಶ್‌ ಹಾಗೂ ಛಾಯಾ ಸಿಂಗ್ ಅವರು ಭೂಮಿಕಾ ಸದಾಶಿವ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆದರೆ ಇವರಿಬ್ಬರ ಜೋಡಿ ಕಿರುತೆರೆಗೆ ಹೊಸತೇನಲ್ಲ. ಈ ಮುಂಚೆ ಇಬ್ಬರೂ ಅಣ್ಣತಂಗಿಯಾಗಿ ನಟಿಸಿದ್ದರು. ಇದರ ಬಗ್ಗೆ ರಾಜೇಶ್‌ ಹೇಳಿದ್ದು ಹೀಗೆ.

VISTARANEWS.COM


on

Edited by

Amruthadhare Kannada Serial
Koo

ಬೆಂಗಳೂರು: ರಾಜೇಶ್ ನಟರಂಗ (Rajesh nataranga) ಹಾಗೂ ಛಾಯಾ ಸಿಂಗ್ (Chaya Singh) ನಟನೆಯ ‘ಅಮೃತಧಾರೆ’ ಧಾರಾವಾಹಿ (Amruthadhare Kannada Serial) ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈಗಾಗಲೇ ಧಾರಾವಾಹಿಯನ್ನು ಪ್ರೇಕ್ಷಕರು ಮೆಚ್ಚು ಹೊಗಳುತ್ತಿದ್ದಾರೆ. ನಾಯಕ ಗೌತಮ್ ದಿವಾನ್ ಪಾತ್ರದ ರಾಜೇಶ್‌ ಹಾಗೂ ಛಾಯಾ ಸಿಂಗ್ ಅವರು ಭೂಮಿಕಾ ಸದಾಶಿವ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆದರೆ ಇವರಿಬ್ಬರ ಜೋಡಿ ಕಿರುತೆರೆಗೆ ಹೊಸತೇನಲ್ಲ. ಈ ಮುಂಚೆ ಇಬ್ಬರೂ ಅಣ್ಣತಂಗಿಯಾಗಿ ನಟಿಸಿದ್ದರು. ಇದರ ಬಗ್ಗೆ ರಾಜೇಶ್‌ ಹೇಳಿದ್ದು ಹೀಗೆ.

ಇಬ್ಬರೂ ಒಟ್ಟಿಗೆ ನಟಿಸಿದ್ದು 23 ವರ್ಷಗಳ ಹಿಂದಿನ ಕಥೆ. ‘ಈಟಿವಿ ಕನ್ನಡ ಆಗತಾನೇ (2000) ಆರಂಭ ಆಗಿತ್ತು. ಆಗ ಮಧ್ಯಾಹ್ನ ಒಂದು ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿಯಲ್ಲಿ ನಾನು, ವೈಶಾಲಿ ಕಾಸರವಳ್ಳಿ, ದತ್ತಣ್ಣ, ಛಾಯಾ ಮೊದಲಾದವರು ನಟಿಸಿದ್ದೆವು. ಛಾಯಾ ನನ್ನ ತಂಗಿ ಪಾತ್ರ ಮಾಡಿದ್ದರು. ಆ ಬಳಿಕ ಅವರು ಹಲವು ಸಿನಿಮಾ ಮಾಡಿದರು. ಅವರು ಅದ್ಭುತ ನಟಿ’ ಎಂದಿದ್ದಾರೆ ರಾಜೇಶ್ ನಟರಂಗ.

ನಟ ರಾಜೇಶ್ ನಟರಂಗ ಅವರಿಗೆ ಕಿರುತೆರೆ ಹೊಸದೇನಲ್ಲ. ʻತ್ರಿವೇಣಿ ಸಂಗಮʼ ʻಮುಕ್ತ’, ‘ಬದುಕು’, ‘ಶಕ್ತಿ’, ‘ಗುಪ್ತಗಾಮಿನಿʼ ಹೀಗೆ ಹಲವು ಧಾರಾವಾಹಿಗಳಲ್ಲಿ ಛಾಪು ಮೂಡಿಸಿದ್ದರು. ‘ತ್ರಿವೇಣಿ ಸಂಗಮ’ ಧಾರಾವಾಹಿಯಲ್ಲಿಯೂ ನಾಯಕ ತ್ರಿವಿಕ್ರಮ್ ಆಗಿ ರಾಜೇಶ್ ನಟರಂಗ ನಟಿಸಿದ್ದರು. ಅವರಿಗೆ ಜೋಡಿಯಾಗಿ ಸ್ಯಾಂಡಲ್‌ವುಡ್ ನಟಿ ಅನುಪ್ರಭಾಕರ್ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಗೆ ಜನಮೆಚ್ಚುಗೆ ಲಭಿಸಿತ್ತು.

ಇದನ್ನೂ ಓದಿ: Amruthadhare Kannada Serial: ಕಿರುತೆರೆಗೆ ರಾಜೇಶ್ ನಟರಂಗ ಗ್ರ್ಯಾಂಡ್‌ ಎಂಟ್ರಿ; ಒಲವಿನ ಅಮೃತಧಾರೆಯ ಹರಿವು ಆರಂಭ!

ಭೂಮಿಕಾ-ಗೌತಮ್‌ ಪ್ರಪಂಚ ಬೇರೆ ಬೇರೆ ಇದ್ದರೂ ಭಾವ ಒಂದೇ!

ಅಮೃತಧಾರೆ ಧಾರಾವಾಹಿ ʻಬಡೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ಈಗಾಗಲೇ ಪ್ರೇಕ್ಷಕರು ಮೊದಲ ಎಪಿಸೋಡ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅಮೃತಧಾರೆ ಧಾರಾವಾಹಿಯಲ್ಲಿ ನಟಿ ಛಾಯಾ ಸಿಂಗ್‌ ಜತೆ ನಟ ರಾಜೇಶ್‌ ಕಾಣಿಸಿಕೊಂಡಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ. ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ. ಇದೀಗ ಇವರಿಬ್ಬರು ಒಂದಾಗುತ್ತಾರಾ ಎಂಬುದೇ ಪ್ರೇಕ್ಷಕರಿಗೆ ಕುತೂಹಲವಾಗಿದೆ.

Continue Reading
Advertisement
Transport Minister Ramalinga reddy
ಕರ್ನಾಟಕ7 mins ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ1 hour ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ2 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ2 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ2 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ3 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ3 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್3 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ4 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ13 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ13 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ20 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!