Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌! - Vistara News

ಕಿರುತೆರೆ

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Jyoti Rai: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು.

VISTARANEWS.COM


on

Jyoti Rai seeks divine blessings at tirupathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಇದಾದ ಬಳಿಕ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು. ಈ ಎಲ್ಲದರ ನಡುವೆ ನಟಿ ತಮ್ಮ ಸಂಗಾತಿ ಸುಕು ಪೂರ್ವಜ್ ಜತೆ ತಿರುಪತಿಗೆ ತೆರಳಿದ್ದಾರೆ. ತಿರುಪತಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದರು.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದರು. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದರು.

ಇದನ್ನೂ ಓದಿ: Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದರು.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದರು. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದರು. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದರು.

ಇನ್ನೂ ವಿಡಿಯೊ ವಿಚಾರಕ್ಕೆ ಬಂದರೆ ಜ್ಯೋತಿ ರೈ ವಿಚಾರದ ಕಿಡಿಗೇಡಿಗಳು ಡೀಪ್‌ಫೇಕ್ ವಿಡಿಯೊ ಬಳಸಿ ನಟಿ ಜ್ಯೋತಿ ರೈ ಅವರ ನಕಲಿ ವಿಡಿಯೋ ಹಾಗೂ ಫೋಟೊಗಳನ್ನು ಸೃಷ್ಟಿಸಿರಬಹುದೆಂದು ಚರ್ಚೆಯಾಗುತ್ತಿದೆ. ಈ ಬಗ್ಗೆ ನಟಿ ಈಗಾಗಲೇ ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

Kannada Serials TRP: 25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

VISTARANEWS.COM


on

Kannada Serials TRP Lakshmi Baramma in Top 5 new serials not in demand
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಭಾರಿ ಪೈಪೋಟಿ ನೀಡುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.  25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

ಲಕ್ಷ್ಮೀ ನಿವಾಸ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಾ ರಾಮ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.

‘ಲಕ್ಷ್ಮೀ ಬಾರಮ್ಮ’

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮೀ ಬಾರಮ್ಮ’ ಅನ್ನೋದು ವಿಶೇಷ. ಲಕ್ಷ್ಮೀಗೆ ಈಗ ವೈಷ್ಣವ್‌ ಪ್ರೀತಿ ಗೊತ್ತಾಗಿದೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಕೊನೆಗೂ ವೈಷ್ಣವ್‌ಗೆ ತಾಯಿ ಕಾವೇರಿ ಮಾಡಿದ ಮೋಸ ಏನು ಅಂತ ಗೊತ್ತಾಗಿದೆ. ಕಾವೇರಿ ಮಾಡಿದ ಮೋಸ ಏನು ಅಂತ ಲಕ್ಷ್ಮೀಗೂ ಗೊತ್ತಾಗಿದೆ. ಈಗ ಏನಾಗುವುದು ಎಂದು ಕಾದು ನೋಡಬೇಕಿದೆ. ವೈಷ್ಣವ್ ಪಾತ್ರಕ್ಕೆ ಶಮಂತ್ ಬ್ರೊ ಗೌಡ, ಕೀರ್ತಿ ಪಾತ್ರಕ್ಕೆ ತನ್ವಿ ರಾವ್, ಲಕ್ಷ್ಮೀ ಪಾತ್ರಕ್ಕೆ ಭೂಮಿಕಾ ರಮೇಶ್ ಅವರು ಜೀವ ತುಂಬುತ್ತಿದ್ದಾರೆ.

ಅಮೃತಧಾರೆ

ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿತ್ತು. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. 

ಹೊಸ ಧಾರಾವಾಹಿ ‘ನಿನಗಾಗಿ’ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ 22ನೇ ವಾರದಲ್ಲಿ ಆರನೇ ಸ್ಥಾನ ಪಡೆದಿತ್ತು. 23ನೇ ವಾರದ ಧಾರಾವಾಹಿಯಲ್ಲಿ ಒಂಭತ್ತನೇ ಸ್ಥಾನಕ್ಕೆ ಇಳಿದಿತ್ತು. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

ಶ್ರೀಗೌರಿ ಕೂಡ ಬೇಡಿಕೆ ಕಡಿಮೆಯಾಗಿದೆ. ಮುಖ್ಯ ಭೂಮಿಕೆಯಲ್ಲಿ ‘ಕಮಲಿ’ ಧಾರಾವಾಹಿಯ ಅಮೂಲ್ಯ ಗೌಡ ಅಭಿನಯ ಮಾಡಿದ್ದಾರೆ. ಅಮೂಲ್ಯ ಮೊದಲು ʻಅನುರಾಗ ಸಂಗಮʼ ಎನ್ನುವ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ʻಸ್ವಾತಿ ಮುತ್ತುʼ, ʻಪುನರ್ ವಿವಾಹʼ, ʻಅರಮನೆʼ, ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಅಮೂಲ್ಯ ಗೌಡಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಧಾರಾವಾಹಿ ಕಮಲಿ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

Continue Reading

ಸಿನಿಮಾ

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Hina Khan: ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ.

VISTARANEWS.COM


on

Hina Khan diagnosed with breast cancer
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ನನಗೆ ಸ್ತನ ಕ್ಯಾನ್ಸರ್ (‘Yeh Rishta Kya Kehlata Hai’.) 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ. ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ ʻʻಎಲ್ಲರಿಗೂ ನಮಸ್ಕಾರ, ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರೊಂದಿಗೆ ಕೆಲವು ಪ್ರಮುಖ ಸುದ್ದಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ ಮೂರನೇ ಹಂತದಲ್ಲಿ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇದರಿಂದ ಆದಷ್ಟು ಬೇಗ ಗುಣಮುಖಳಾಗಿ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದ ನನ್ನ ಮೇಲೆ ಇರಲಿ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜತೆಗೆ ಗಟಿಯಾದ ನಿರ್ಧಾರದ ಜತೆಗೆ ಪಾಸಿಟಿವ್‌ ಆಗಿರಲು ಬಯಸುತ್ತೇನೆ.
ಪರಮಾತ್ಮನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿ ಮತ್ತೆ ನಿಮ್ಮ ಮುಂದೆ ಬರುತ್ತೇಬೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು



ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ, ಅಭಿಮಾನಿಗಳು ಮತ್ತು ಸ್ನೇಹಿತರು ನಟಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದಾರೆ. “ನೀವು ಯಾವಾಗಲೂ ತುಂಬಾ ಬಲಶಾಲಿಯಾಗಿದ್ದೀರಿʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಅಂಕಿತಾ ಲೋಖಂಡೆ ಕೂಡ”ಹೀನಾ ನೀನು ಇದಕ್ಕಿಂತ ಬಲಶಾಲಿ ಆದ ಹುಡುಗಿ!!! ದೇವರು ನಿಮ್ಮನ್ನು ಆಶೀರ್ವದಿಸಲಿ. ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಕಿರುತೆರೆ

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Shri Devi Mahathme: ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು (star suvrna) ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ (Shri Devi Mahathme) ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ “ಶ್ರೀ ದೇವೀ ಮಹಾತ್ಮೆ”.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ ? ಹಾಗು ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ.

ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ” ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

{ಬದಲಾದ ಸಮಯದಲ್ಲಿ ಬರ್ತಿದೆ ನಿಮ್ಮ ನೆಚ್ಚಿನ ಧಾರಾವಾಹಿ “ಗೌರಿ ಶಂಕರ” ಇದೇ ಸೋಮವಾರದಿಂದ ಸಂಜೆ 6.30 ತಪ್ಪದೇ ವೀಕ್ಷಿಸಿ}

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading
Advertisement
AR Rahman
ಕ್ರೀಡೆ2 mins ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ3 mins ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest4 mins ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ9 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Shraddha Nrityarnava special dance festival in Bengaluru
ಕರ್ನಾಟಕ10 mins ago

Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

Yuva Sambhrama 2024 programme for 3 days from July 12 in Bengaluru
ಕರ್ನಾಟಕ11 mins ago

Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

Rohit Sharma
ಕ್ರೀಡೆ25 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Allahabad High Court
ದೇಶ31 mins ago

Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

Physical Abuse
ಬೆಂಗಳೂರು35 mins ago

Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

Actor Darshan Devil gang gets life imprisonment What do legal experts say
ಕ್ರೈಂ48 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌