Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ! - Vistara News

ಕಿರುತೆರೆ

Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

Kannada Serials TRP: ಇತ್ತೀಚೆಗೆ ಪ್ರಸಾರ ಆರಂಭಿಸಿದ ಹೊಸ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu Serial) ಎರಡನೇ ಸ್ಥಾನದಲ್ಲಿದೆ.ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ನಾಲ್ಕನೇ ಸ್ಥಾನದಲ್ಲಿದೆ.

VISTARANEWS.COM


on

Kannada Serials TRP Lakshmi Nivasa Serial On Top
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವಾರ ಧಾರಾವಾಹಿಗಳ ಟಿಆರ್‌ಪಿ (Kannada Serials TRP) ಲಿಸ್ಟ್‌ ಹೊರಬಿದ್ದಿದೆ. ಕನ್ನಡ ಧಾರಾವಾಹಿಗಳ 14ನೇ ವಾರದ ಟಿಆರ್​ಪಿಯಲ್ಲಿ ಹೊಸ ಧಾರಾವಾಹಿ ಎಂಟ್ರಿ ಕೊಟ್ಟಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ಹೊಸ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu Serial) ಎರಡನೇ ಸ್ಥಾನದಲ್ಲಿದೆ.

‘ಲಕ್ಷ್ಮಿ ನಿವಾಸ’

13ನೇ ವಾರದ ಟಿಆರ್​ಪಿ ಪ್ರಕಾರ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇರಲಿದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 4ನಲ್ಲಿ `ರಾಮಾಚಾರಿ’ ಧಾರಾವಾಹಿ; ರೇಸ್‌ನಲ್ಲಿ ಇಲ್ಲ ʻಸತ್ಯʼ, ʻಶ್ರೀರಸ್ತು ಶುಭಮಸ್ತುʼ!

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲಿ ಪುಟ್ಟಕ್ಕನ ಮೊದಲ ಮಗಳು ಸಹನಾ ಜೀವನ ಈಗಾಗಲೇ ಬೀದಿಗೆ ಬಿದ್ದಿದೆ. ಹಾಗೇ ಪುಟ್ಟಕ್ಕನ ಎರಡನೇ ಮಗಳು ಅತ್ತೆ ಬಂಗಾರಮ್ಮಳನ್ನು ಜೈಲಿಗೆ ಕಳುಹಿಸಿದ್ದಾಳೆ. ಈಗ ಬಂಗಾರಮ್ಮ ಜೈಲಿನಲ್ಲಿ ನಿಂತು ಪುಟ್ಟಕ ಮುಂದೇನೆ ತನ್ನ ಮನೆಯಿಂದಲೇ ಸ್ನೇಹಾಳನ್ನು ಮನೆಯಿಂದ ಆಚೆ ಹಾಕುವುದಾಗಿ ಹೇಳಿದ್ದಾಳೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜೊತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

 ‘ಶ್ರಾವಣಿ ಸುಬ್ರಮಣ್ಯ’

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಟಾಪ್‌ 5ರಲ್ಲಿ ʻರಾಮಾಚಾರಿʼ: ʻಲಕ್ಷ್ಮೀ ನಿವಾಸʼ ಹಿಂದಿಕ್ಕಿದ ‘ಪುಟ್ಟಕ್ಕನ ಮಕ್ಕಳು’!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. ಸದ್ಯ ಭೂಮಿಕಾಗೆ ಅತ್ತೆಯ ನಿಜ ಮುಖ ಗೊತ್ತಾಗಿದೆ. ಗೌತಮ್‌ ಮೇಲೆ ಇನ್ನಷ್ಟು ಪ್ರೀತಿ ಹೆಚ್ಚಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Mahanati Show: ಸ್ಪರ್ಧಿ ಗಗನಾ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್‌ ಅರವಿಂದ್‌, ನಟಿ ಪ್ರೇಮ ಮತ್ತಿತರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಈ ಕಾರ್ಯಕ್ರಮದಲ್ಲಿ ನಟಿ ಗಗನಾ ಪ್ರಮುಖ ಹೈಲೈಟ್‌. ಯಾವುದೇ ವಿಷಯ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಅವರು ಈ ಬಾರಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

VISTARANEWS.COM


on

Mahanati Show complaint against Gagana Contestant and Ramesh
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಈ ಮೂಲಕ ಹಲವು ಪ್ರತಿಭೆಗಳನ್ನು ಕರುನಾಡಿಗೆ ಪರಿಚಯಿಸಿದ ಕೀರ್ತಿ ಈ ವಾಹಿನಿಗೆ ಸಲ್ಲುತ್ತದೆ. ಕನ್ನಡ ಚಿತ್ರರಂಗಕ್ಕೆ ಯುವ ನಾಯಕ ನಟಿಯರನ್ನು ನೀಡುವ ಕೆಲಸವನ್ನು ಈ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಮಾಡುತ್ತಿದೆ.  ಈ ಕಾರ್ಯಕ್ರಮದಲ್ಲಿ ನಟಿ ಗಗನಾ ಪ್ರಮುಖ ಹೈಲೈಟ್‌. ಯಾವುದೇ ವಿಷಯ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಅವರು ಈ ಬಾರಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಆರಂಭದಲ್ಲಿ ಗಗನಾ ಡೈಲಾಗ್‌ ನತ್ತು ನಟನೆಗೆ ತರುಣ್ ಸುಧೀರ್ ಮಚ್ಚುಗೆ ವ್ಯಕ್ತಪಡಿಸಿ, ಅಡ್ವಾನ್ಸ್ ಕೂಡ ಕೊಟ್ಟಿದ್ದರು. ಎರಡನೇ ಬಾರಿಗೆ ಲೋಟವನ್ನು ಬಹುಮಾನವಾಗಿ ನೀಡಿದ್ದರು. ಹೀಗೆ ವಾರಕ್ಕೊಮ್ಮೆ ವಿಭಿನ್ನವಾದ ನಟನೆಯಿಂದ ಜಡ್ಜಸ್ ಗಳ ಗಮನ ಸೆಳೆಯುತ್ತಿದ್ದರು. ಇದೀಗ ಸ್ಪರ್ಧಿ ಗಗನಾ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್‌ ಅರವಿಂದ್‌, ನಟಿ ಪ್ರೇಮ ಮತ್ತಿತರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಈ ಮಹಾನಟಿ ಶೋನಲ್ಲಿ ರಮೇಶ್‌ ಅರವಿಂದ್‌ ಅವರು ಒಂದೊಂದು ಟಾಪಿಕ್‌ ಕೊಡುತ್ತಾರೆ. ಅದರ ಬಗ್ಗೆ ಸ್ಪರ್ಧಿಗಳು ನಟಿಸಬೇಕು. ಮಹಾನಟಿಯರು ತಕ್ಷಣೆಕ್ಕೆ ಡೈಲಾಗ್‌ ರೆಡಿ ಮಾಡಿಕೊಂಡು ನಟಿಸುತ್ತಾರೆ. ಈ ಬಾರಿ ಗಗನಾಗೆ ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕಾನ್ಸೆಪ್ಟ್‌ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕಲ್‌ ಅವರನ್ನು ಮದುವೆ ಆಗಿದ್ದರೆ ಏನು ಮಾಡುತ್ತೀಯಾ? ಎಂದು ಸ್ಕಿಟ್‌ ಮಾಡಬೇಕಿತ್ತು. ಡೈಲಾಗ್‌ ಹೇಳುವ ಭರದಲ್ಲಿ ಮೆಕ್ಯಾನಿಕ್‌ ಮದುವೆಯಾದರೆ ಗ್ರೀಸ್‌ ತಿಂದು ಬದುಕಬೇಕಾಗುತ್ತದೆ ಎಂದಿದ್ದಾರೆ, ಈ ಬಗ್ಗೆ ರಮೇಶ್‌ ಕೂಡ ಬೇಸರ ವ್ಯಕ್ತಪಡಿಸಿದರು. ಜತೆಗೆ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವಿರೋಧ್ಯ ವ್ಯಕ್ತವಾಗಿದೆ. ಇನ್ನೊಂದೆಡೆ ಚಿಕ್ಕನಾಯಕನಹಳ್ಳಿಯ ದ್ವಿಚಕ್ರವಾಹನ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್‌ ಸಮುದಾಯಕ್ಕೆ ನೋವಾಗಿದೆ ಎಂದು ದೂರುನೀಡಿದ್ದಾರೆ.

ಇದನ್ನೂ ಓದಿ: Mahanati Show: ಸ್ವಾಭಿಮಾನಿ ಅಜ್ಜಿಯ ಕಷ್ಟಕ್ಕೆ ನೆರವಾದ ಅನುಶ್ರೀ; ದಿನಸಿ ವ್ಯವಸ್ಥೆ ಮಾಡಿದ ತರುಣ್ ಸುಧೀರ್!

ಗಗನಾ ವಿಡಿಯೊಗೆ ಶಾಕಿಂಗ್ ಕಮೆಂಟ್‌ಗಳು ಬಂದಿವೆ. ಅದರಲ್ಲೂ ಭಗ್ನ ಪ್ರೇಮಿ ಎಂಬ ವಿಚಾರವೂ ಬಂದಿದೆ. ‘ನೀನ್ ಎಂತ ಟ್ಯಾಲೆಂಟ್ ಅಂತ ಗೊತ್ತು. ನನ್ನಂತವನಿಗೆ ಕಾಗೆ ಹಾರಿಸಿದ್ದೀಯ. ಇನ್ನು ಚಾನೆಲ್ ಯಾವ ಲೆಕ್ಕ’ ಅಂತ ಟ್ರೋಲ್ ಗುರು ಬೆಂಗಳೂರು ಎಂಬ ಪೇಜ್ ಕಮೆಂಟ್ ಮಾಡಿದೆ.

ʻಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Continue Reading

ಸಿನಿಮಾ

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

Gurucharan Singh: ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಹೊಸ ಅಪ್‌ಡೇಟ್‌ ಪ್ರಕಾರ ದೆಹಲಿ ಪೊಲೀಸರ ಆರಂಭಿಕ ತನಿಖೆಯಲ್ಲಿ ಗುರುಚರಣ್ ಸಿಂಗ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಮತ್ತು ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Gurucharan Singh soon to get married faced financial crunch
Koo

ಬೆಂಗಳೂರು: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ (Taarak Mehta Ka Ooltah Chashmah) ಧಾರಾವಾಹಿಯ ನಟ ಗುರುಚರಣ್ ಸಿಂಗ್ (Gurucharan Singh ) ಏ.27ರಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. ಇದೀಗ ದೆಹಲಿ ಪೊಲೀಸರ ತನಿಖೆ ಪ್ರಕಾರ ಗುರುಚರಣ್ ಸಿಂಗ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಇದೇ ವೇಳೆ ನಟ ಗುರುಚರಣ್​ ಹಣಕಾಸಿನ ತೊಂದರೆಗಳನ್ನೂ ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ದೆಹಲಿಯ ಎಟಿಎಂನಿಂದ ಗುರುಚರಣ್ 7,000 ರೂ. ಡ್ರಾ ಮಾಡಿರುವುದು ಕೂಡ ಪತ್ತೆಯಾಗಿದೆ. ಕೊನೆಯದಾಗಿ ಏಪ್ರಿಲ್ 24 ರಂದು ಗುರುಚರಣ್ ಸಿಂಗ್ ಮನೆಯಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ʻಪಾಲಂʼನಲ್ಲಿ ಕಂಡು ಬಂದರು ಎಂದು ವರದಿಯಾಗಿದೆ. ಅಂದಿನಿಂದ ಗುರುಚರಣ್ ಸಿಂಗ್‌ ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ವರದಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ʻʻಎಪ್ರಿಲ್ 22ರಂದು ಗುರುಚರಣ್ ಸಿಂಗ್ ಶೂಟಿಂಗ್ ಸೇರಿದಂತೆ ಇತರ ಕೆಲಸದ ನಿಮಿತ್ತ ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಲು ವಿಮಾನ ನಿಲ್ದಾಕ್ಕೆ ತೆರಳಿದ್ದರು. ಗುರುಚರಣ್ ಸಿಂಗ್ ಬೆಳಗ್ಗೆ 8.30ಕ್ಕೆ ಮನೆಯಿಂದ ತೆರಳಿದ್ದರು. ಆದರೆ ಅವರು ಮುಂಬೈಗೆ ತಲುಪಿಲ್ಲ. ಬದಲಾಗಿ ಬೆಳಗ್ಗೆ 9.14ರ ಸುಮಾರಿಗೆ ಪಾಲಂʼನಲ್ಲಿ ನಟ ಕಂಡು ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನ ಕೊನೆಯ ಸಿಸಿಟಿವಿ ದೃಶ್ಯಗಳಲ್ಲಿ ಬೆನ್ನಿಗೆ ಬ್ಯಾಗ್‌ ಹೊತ್ತುಕೊಂಡು ರಸ್ತೆ ದಾಟುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

ಈ ಪ್ರಕರಣದ ಬಗ್ಗೆ ಗುರುಚರಣ್ ಸಿಂಗ್ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಡಿಸಿಪಿ ರೋಹಿತ್ ಮೀನಾ ಈ ಬಗ್ಗೆ ಈಗಾಗಲೇ ಮಾಹಿತಿ ಹಂಚಿಕೊಂಡು ʻʻಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಪ್ರಮುಖ ಸುಳಿವುಗಳು ಸಿಕ್ಕಿವೆʼʼ ಎಂದು ಮಾಹಿತಿ ಹಂಚಿಕೊಂಡಿದ್ದರು.

ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

Continue Reading

ಕಿರುತೆರೆ

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

Gurucharan Singh: ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

VISTARANEWS.COM


on

Gurucharan Singh Taarak Mehta Ka Ooltah Chashmah actor missing
Koo

ಬೆಂಗಳೂರು: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ (Taarak Mehta Ka Ooltah Chashmah) ಧಾರಾವಾಹಿಯ ನಟ ಗುರುಚರಣ್ ಸಿಂಗ್ (Gurucharan Singh ) ನಾಪತ್ತೆಯಾಗಿದ್ದಾರೆ. ಕೆಲಸದ ನಿಮಿತ್ತ ದೆಹಲಿಯಿಂದ ಮುಂಬೈ ತೆರಳಿದ ನಟ ನಾಪತ್ತೆಯಾಗಿದ್ದಾರೆ ಎಂದು ಗುರುಚರಣ್ ಸಿಂಗ್ ತಂದೆ ಹರ್ಜಿತ್ ಸಿಂಗ್ ದೂರು ದಾಖಲಿಸಿದ್ದಾರೆ.

ಎಪ್ರಿಲ್ 22ರಂದು ಗುರುಚರಣ್ ಸಿಂಗ್ ಶೂಟಿಂಗ್ ಸೇರಿದಂತೆ ಇತರ ಕೆಲಸದ ನಿಮಿತ್ತ ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಲು ವಿಮಾನ ನಿಲ್ದಾಕ್ಕೆ ತೆರಳಿದ್ದಾರೆ. 50 ವರ್ಷದ ಗುರುಚರಣ್ ಸಿಂಗ್ ಬೆಳಗ್ಗೆ 8.30ಕ್ಕೆ ಮನೆಯಿಂದ ತೆರಳಿದ್ದಾರೆ. ನಟ ಮುಂಬೈಗೆ ತಲುಪಿಲ್ಲ ಎನ್ನಲಾಗಿದೆ. ʻʻಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಮನೆಗೂ ಕೂಡ ಹಿಂತಿರುಗಿಲ್ಲ. ಗುರುಚರಣ್ ಸಿಂಗ್ ಸಂಪರ್ಕಕ್ಕೆ ಸಿಕ್ಕಿಲ್ಲʼʼ ಎಂದು ತಂದೆ ಹರ್ಜಿತ್ ಸಿಂಗ್ ದೂರು ದಾಖಲಿಸಿದ್ದಾರೆ.

ಡಿಸಿಪಿ ರೋಹಿತ್ ಮೀನಾ ಈ ಬಗ್ಗೆ ಮಾಹಿತಿ ಹಂಚಿಕೊಂಡು ʻʻಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಪ್ರಮುಖ ಸುಳಿವುಗಳು ಸಿಕ್ಕಿವೆʼʼ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಗುರುಚರಣ್ ಅವರ ತಂದೆ ಪೊಲೀಸರಿಗೆ ಮಗ ಮಾನಸಿಕವಾಗಿ ಸ್ಥಿರವಾಗಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

Continue Reading

ಕಿರುತೆರೆ

Krishna Mukherjee: ಮೇಕಪ್‌ ರೂಮ್‌ನಲ್ಲಿ ಕೂಡಿ ಹಾಕಿದ್ರು, ಬಟ್ಟೆ ಬದಲಿಸಲೂ ಬಿಡಲಿಲ್ಲ; ʻನಾಗಿಣ್-3′ ಖ್ಯಾತ ನಟಿಯ ಅಳಲು!

Krishna Mukherjee: ಕೃಷ್ಣಾ ಮುಖರ್ಜಿ ಹಲವು ವರ್ಷಗಳಿಂದ ಹಲವು ವರ್ಷಗಳಿಂದ ಆಕೆ ಹಿಂದಿ ಕಿರುತೆರೆ ಧಾರಾವಾಹಿಗಳಲ್ಲಿ ಮಿಂಚಿದ್ದಾರೆ. ಜನಪ್ರಿಯ ‘ನಾಗಿಣ್-3’ ಧಾರಾವಾಹಿಯಲ್ಲಿ ಕೂಡ ನಟಿಸಿ ಗೆದ್ದಿದ್ದಾರೆ.ಶುಭ್ ಶಗುನ್ʼ ಧಾರಾವಾಹಿ (Shubh Shagun) ನಿರ್ಮಾಪಕ ʻಕುಂದನ್ ಸಿಂಗ್ʼ (Kundan Singh) ಅವರನ್ನು ಟ್ಯಾಗ್ ಮಾಡಿ ನಟಿ ಕೃಷ್ಣ ಮುಖರ್ಜಿ ತಮಗಾದ ಕಿರುಕುಳದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Krishna Mukherjee accuses Shubh Shagun producer
Koo

ಬೆಂಗಳೂರು: ಜನಪ್ರಿಯ ಟಿವಿ ಶೋ `ಯೇ ಹೈ ಮೊಹಬತೇನ್’ (Yeh Hai Mohabaatein) ಮೂಲಕ ಖ್ಯಾತಿ ಪಡೆದ ನಟಿ ಕೃಷ್ಣಾ ಮುಖರ್ಜಿ(Krishna Mukherjee) ನಿರ್ಮಾಪಕರು, ನಿರ್ದೇಶಕರು ತಮ್ಮೊಟ್ಟಿಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. ಹಿಂದಿ ಜನಪ್ರಿಯ ಕಿರುತೆರೆ ನಟಿ ಕೃಷ್ಣ ಮುಖರ್ಜಿ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತ ಹೆಸರು. ‘ಯೇ ಹೈ ಮೊಹಬ್ಬತೇನ್‌’ ಧಾರಾವಾಹಿಯಲ್ಲಿ ಆಲಿಯಾ ರಾಘವ್ ಭಲ್ಲಾ ಪಾತ್ರದಲ್ಲಿ ಅವರ ನಟನೆ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಜನಪ್ರಿಯ ‘ನಾಗಿಣ್-3’ ಧಾರಾವಾಹಿಯಲ್ಲಿ ಕೂಡ ನಟಿಸಿ ಗೆದ್ದಿದ್ದಾರೆ.

ʻಶುಭ್ ಶಗುನ್ʼ ಧಾರಾವಾಹಿ (Shubh Shagun) ನಿರ್ಮಾಪಕ ʻಕುಂದನ್ ಸಿಂಗ್ʼ (Kundan Singh) ಅವರನ್ನು ಟ್ಯಾಗ್ ಮಾಡಿ ನಟಿ ಕೃಷ್ಣ ಮುಖರ್ಜಿ ಈ ಪೋಸ್ಟ್ ಮಾಡಿದ್ದಾರೆ. ಕಾರ್ಯಕ್ರಮವನ್ನು ತೊರೆಯುವುದರ ಹಿಂದಿನ ನಿಜವಾದ ಕಾರಣವನ್ನು ಬಹಿರಂಗಪಡಿಸಿದರು. ಶುಭ್ ಶಗುನ್ ತಮ್ಮ ಸಂಭಾವನೆಯನ್ನು ಇನ್ನೂ ನೀಡಿಲ್ಲ ಎಂಬುದರ ಬಗ್ಗೆಯೂ ಹೇಳಿಕೊಂಡಿದ್ದಾರೆ. ಮೇಕಪ್‌ ರೂಮ್‌ನಲ್ಲಿ ನಿರ್ಮಾಪಕ ʻಕುಂದನ್ ಸಿಂಗ್ʼ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ. ಒಂದೂವರೆ ವರ್ಷದಿಂದ ತಾವು ಈ ರೀತಿ ಕಿರುಕುಳ ಅನುಭವಿಸಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

ನಟಿ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ ʻಇದರ ಬಗ್ಗೆ ಬರೆಯುವಾಗ ನನ್ನ ಕೈಗಳು ಇನ್ನೂ ನಡುಗುತ್ತಿವೆ. ನಾನು ಆತಂಕದಲ್ಲಿ ಇದ್ದೇನೆ. ಖಿನ್ನತೆಯಿಂದ ಬಳಲುತ್ತಿದ್ದೇನೆ. ಈ ಪ್ರಕರಣದ ಬಗ್ಗೆ ಪೋಸ್ಟ್‌ ಮಾಡಬೇಡ ಎಂದು ನನ್ನ ಕುಟುಂಬದವರು ಹೇಳುತ್ತಲೇ ಇದ್ದರು. ಆದರೆ ನಾನೇಕೆ ಹೆದರಬೇಕು? ಇದು ನನ್ನ ಹಕ್ಕು ಮತ್ತು ನನಗೆ ನ್ಯಾಯ ಬೇಕು. ನಾನು ತುಂಬ ಕಷ್ಟದ ಸಮಯವನ್ನು ಎದುರಿಸುತ್ತಿದ್ದೇನೆ. ಕಳೆದ ಒಂದೂವರೆ ವರ್ಷ ನನಗೆ ಸುಲಭವಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೆ. ನಾನು ಒಬ್ಬಂಟಿಯಾಗಿರುವಾಗ ಅಳುತ್ತಿದ್ದೆ. ನಾನು ‘ದಂಗಲ್’ ಟಿವಿಗಾಗಿ ‘ಶುಭ್ ಶಗುನ್’ ಧಾರಾವಾಹಿಯಲ್ಲಿ ನಟಿಸಲು ಆರಂಭಿಸದ ಬಳಿಕ ಇದೆಲ್ಲಾ ಶುರುವಾಯಿತು” ಎಂದು ಆಕೆ ಬರೆದುಕೊಂಡಿದ್ದಾರೆ.

ʻʻಈ ಧಾರಾವಾಹಿಗೆ ಒಪ್ಪಿಕೊಂಡಿದ್ದು ನನ್ನ ಜೀವನದ ಅತ್ಯಂತ ಕೆಟ್ಟ ನಿರ್ಧಾರ. ಮೊದಲಿಗೆ ಇಷ್ಟವಿರಲಿಲ್ಲ. ಬಳಿಕ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ರೊಡಕ್ಷನ್ ಹೌಸ್ ಮತ್ತು ನಿರ್ಮಾಪಕ ಕುಂದನ್ ಸಿಂಗ್ ನನಗೆ ಹಲವು ಬಾರಿ ಕಿರುಕುಳ ನೀಡಿದ್ದಾರೆ. ನಾನು ಅಸ್ವಸ್ಥನಾಗಿದ್ದರಿಂದ ಅವರು ಒಮ್ಮೆ ನನ್ನನ್ನು ಮೇಕಪ್ ರೂಮ್‌ ಒಳಗೆ ಕೂಡಿ ಹಾಕಿದ್ದರು. ಸಂಭಾವನೆ ನೀಡದ ಕಾರಣ ನಾನು ಚಿತ್ರೀಕರಣ ಮಾಡದಿರಲು ನಿರ್ಧರಿಸಿದೆ. ಒಮ್ಮೆ ನಾನು ಬಟ್ಟೆ ಬದಲಿಸುವಾಗ ನನ್ನ ಮೇಕಪ್ ರೂಂ ಬಾಗಿಲು ಜೋರಾಗಿ ಬಡಿಯುತ್ತಿದ್ದರು” ಎಂದು ನೋವು ತೋಡಿಕೊಂಡಿದ್ದಾರೆ.

”ಹಲವು ಬಾರಿ ಧಮಕಿಯನ್ನೂ ನನಗೆ ಹಾಕಿದರು. ನನಗೆ ಅಸುರಕ್ಷಿತ ಅನಿಸುತ್ತಿದೆ. ನಾನು ತುಂಬಾ ಜನರ ಸಹಾಯ ಕೇಳಿದೆ ಆದರೆ ಏನೂ ಪ್ರಯೋಜನ ಆಗಿಲ್ಲ. ನಾನು ಯಾಕೆ ಯಾವುದೇ ಶೋ ಮಾಡುತ್ತಿಲ್ಲ ಎಂದು ಜನರು ನನ್ನನ್ನು ಕೇಳುತ್ತಾರೆ? ಇದೇ ಕಾರಣ. ಮತ್ತೆ ಇದೇ ರೀತಿ ಆದರೆ ಹೇಗೆ? ಎನ್ನುವ ಭಯ ನನಗೆ. ನನಗೆ ನ್ಯಾಯಬೇಕು” ಎಂದು ಕೃಷ್ಣ ಮುಖರ್ಜಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

ನಟಿಯ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೂಡಲೇ, ಸಲೆಬ್ರಿಟಿಗಳು ನಟಿಯ ಫಾಲೋವರ್ಸ್‌ಗಳು ಅವರಿಗೆ ಬೆಂಬಲ ನೀಡಿದರು. ಪೂಜಾ ಬ್ಯಾನರ್ಜಿ, ಸಿಂಪಲ್ ಕೌಲ್, ಶ್ವೇತಾ ಗುಲಾಟಿ ಮತ್ತು ಪವಿತ್ರಾ ಪುನಿಯಾ ಮುಂತಾದ ನಟ, ನಟಿಯರು ಕಮೆಂಟ್‌ ಮೂಲಕ ನಟಿಗೆ ಸಾಥ್‌ ಕೊಟ್ಟಿದ್ದಾರೆ.

Continue Reading
Advertisement
Sadhguru Jaggi Vasudev
ಬೆಂಗಳೂರು7 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ12 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ29 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ38 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ47 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ54 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ1 hour ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌