Kannada Serials TRP: ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀʼ: ಟಿಆರ್‌ಪಿ ಕಣಕ್ಕೆ ಹೊಸ ಧಾರಾವಾಹಿಗಳು ಎಂಟ್ರಿ! - Vistara News

ಕಿರುತೆರೆ

Kannada Serials TRP: ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀʼ: ಟಿಆರ್‌ಪಿ ಕಣಕ್ಕೆ ಹೊಸ ಧಾರಾವಾಹಿಗಳು ಎಂಟ್ರಿ!

ಈ ವಾರ ಹೊಸ ಧಾರಾವಾಹಿ ಎಂಟ್ರಿ ಪಡೆದಿದೆ. 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ ಟಾಪ್​ 3 ಧಾರಾವಾಹಿಗಳಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ. ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನದಲ್ಲಿದೆ.

VISTARANEWS.COM


on

Kannada Serials
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿ (Kannada Serials TRP) ಹೊರಬಿದ್ದಿದೆ. ‘ ಪುಟ್ಟಕ್ಕನ ಮಕ್ಕಳು’, ‘ಅಮೃತಧಾರೆ’ ಟಿಆರ್​ಪಿಯಲ್ಲಿ ಭಾರಿ ಏರಿಕೆ ಆಗಿದೆ. ಆದರೆ ಈ ವಾರ ಹೊಸ ಧಾರಾವಾಹಿ ಎಂಟ್ರಿ ಪಡೆದಿದೆ. 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ ಟಾಪ್​ 3 ಧಾರಾವಾಹಿಗಳಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ. ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನದಲ್ಲಿದೆ.

ಪುಟ್ಟಕ್ಕನ ಮಕ್ಕಳು

ಕಳೆದ ಕೆಲ ವಾರದಿಂದ ಈ ಧಾರಾವಾಹಿ ಟಿಆರ್​ಪಿ ಡಬಲ್ ಡಿಜಿಟ್ ತಲುಪಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ಬಾರಿಯೂ ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ಹಲವು ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ ಅನ್ನೋದು ವಿಶೇಷ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

‘ಗಟ್ಟಿಮೇಳ’

ಇತ್ತೀಚಿನ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಒಂದೇ ರೀತಿಯ ಟಿಆರ್​ಪಿ ಕಾಯ್ದುಕೊಂಡು ಹೋಗುತ್ತಿತ್ತು. ಆದರೆ ಈ ಬಾರಿ ಧಾರಾವಾಹಿ ಟಿಆರ್‌ಪಿ ಏರಿಕೆ ಕಂಡಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿ ಮಧ್ಯಮ ವರ್ಗದ ಮನೆಯ ಹೆಣ್ಣು ಮಕ್ಕಳನ್ನು ಹೇಗೆ ಪರಿಮಳಾ ಹಾಗೂ ಮಂಜುನಾಥ್ ದಂಪತಿ ಮದುವೆ ಮಾಡುತ್ತಾರೆ ಎಂಬುದು ಒನ್‌ಲೈನ್‌ ಸ್ಟೋರಿ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ಅಖಾಡಕ್ಕೆ ಹೊಸ ಧಾರಾವಾಹಿ ಎಂಟ್ರಿ; ಅಕ್ಕ-ತಂಗಿ ಕಥೆಗೆ 5ನೇ ಸ್ಥಾನವೂ ಇಲ್ಲ!

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಇತ್ತೀಚೆಗೆ ಆರಂಭಗೊಂಡಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ರಿಚ್ ಆಗಿ ಮೂಡಿ ಬರುತ್ತಿದೆ. ಈ ಕಾರಣಕ್ಕೂ ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನೇ ಕಾಯ್ದುಕೊಂಡು ಹೋಗುವ ಚಾಲೆಂಜ್ ಈ ಧಾರಾವಾಹಿಗೆ ಇದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಪ್ರಬುದ್ಧ ನಟನೆಯ ಗಮನ ಸೆಳೆಯುತ್ತಿದೆ. ಅಮೃತಧಾರೆ ಧಾರಾವಾಹಿ ʻಬಡೆ ಅಚ್ಚೆ ಲಗತೆ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಶ್ರೀರಸ್ತು ಶುಭಮಸ್ತು

ಪತಿಯನ್ನು ಕಳೆದುಕೊಂಡ ಮಹಿಳೆ ಹಾಗೂ ಪತ್ನಿಯನ್ನು ಕಳೆದುಕೊಂಡ ಪುರುಷ. ಇವರಿಬ್ಬರಿಗೂ ಮಕ್ಕಳಿದ್ದಾರೆ. ಅವರು ದೊಡ್ಡವರಾಗಿದ್ದಾರೆ. ಹೀಗಿರುವಾಗ ಈ ಪುರುಷ ಹಾಗೂ ಮಹಿಳೆ ಮಧ್ಯೆ ಪ್ರೀತಿ ಮೂಡಿದರೆ ಏನಾಗುತ್ತದೆ? ಈ ಕಥೆಯನ್ನು ‘ಶ್ರೀರಸ್ತು ಶುಭಮಸ್ತು’ ಹೊಂದಿದೆ. ಈ ಧಾರಾವಾಹಿ ಟಿಆರ್​ಪಿ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಹಿಂದಿನ ವಾರ ಸ್ಟಾರ್‌ ಸುವರ್ಣದ ನಮ್ಮ ಲಚ್ಚಿ ಧಾರಾವಾಹಿ ಇತ್ತು. ಆರನೇ ಸ್ಥಾನದಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯೆಲ್ಲಮ್ಮ’, ಏಳನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’, ಎಂಟನೇ ಸ್ಥಾನದಲ್ಲಿ ನೀನಾದೆನಾ, ಒಂಬತ್ತನೇ ಸ್ಥಾನದಲ್ಲಿ ‘ನಮ್ಮ ಲಚ್ಚಿ’ ಹಾಗೂ ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಭಾಗ್ಯಲಕ್ಷ್ಮೀ’ ಧಾರಾವಾಹಿ ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇದೀಗ ಜೀ ವಾಹಿನಿಯಲ್ಲಿ ಹೊಸ ಧಾರಾವಾಹಿ ‘ಸೀತಾ ರಾಮ’ ಬಂದಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ನಟಿಸಿದ್ದಾರೆ. ಈ ಧಾರಾವಾಹಿ ಮುಂದಿನ ವಾರ ಸ್ಪರ್ಧೆ ನೀಡುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

Nisha Ravikrishnan: ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ ‘ಗಟ್ಟಿಮೇಳ’ ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ ‘ಅಂಶು’ ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

Nisha Ravikrishnan in new serial annayya
Koo
ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

‘ಗಟ್ಟಿಮೇಳ’ (Gattimela) ಸೀರಿಯಲ್ ನಾಯಕಿ ನಿಶಾ ರವಿಕೃಷ್ಣನ್ (Nisha Ravikrishnan) ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಟಿ ಈಗ ಕನ್ನಡದ ಹೊಸ ಧಾರಾವಾಹಿಯನ್ನು ಒಪ್ಪಿಕೊಂಡಿದ್ದಾರೆ.

ಕಾಂತಾರ’ ಖ್ಯಾತಿಯ ಪ್ರಮೋದ್ ಶೆಟ್ಟಿ ಮತ್ತು ಅವರ ಪತ್ನಿ ಸುಪ್ರೀತಾ ಇದೀಗ ಹೊಸ ಸೀರಿಯಲ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

‘ಅಣ್ಣಯ್ಯ’ (Annayya) ಎಂಬ ಸೀರಿಯಲ್‌ಗೆ ನಿಶಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.
ಅಣ್ಣಯ್ಯ ಧಾರಾವಾಹಿಯಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ. ಆದರೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಅಂತ್ಯ ಆಗುವ ಸಾಧ್ಯತೆ ಇದೆ. ನವೀನ್ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್, ಕಾರ್ತಿಕ್ ಸಾಮಗ್ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆರೂರು ಜಗದೀಶ್ ನಿರ್ದೇಶನ, ನಿರ್ಮಾಣದ ಧಾರಾವಾಹಿ ಇದಾಗಿದೆ.
Continue Reading

ಕಿರುತೆರೆ

Divya Uruduga: ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ!

Divya Uruduga: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು. ಇದೀಗ ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ.

VISTARANEWS.COM


on

Divya Uruduga kishan belgali In ninagagi serial
Koo

ನಟ ರಿತ್ವಿಕ್ ಮಠದ್ (Ritvvikk Mathad ) ಹಾಗೂ ನಟಿ ದಿವ್ಯಾ ಉರುಡುಗ (Actress Divya Uruduga) ಅಭಿನಯದ , ‘ನಿನಗಾಗಿ’ ಧಾರಾವಾಹಿ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಇದೀಗ ‘ಬಿಗ್ ಬಾಸ್ ಕನ್ನಡ 7’ರ (Bigg Boss Kannada 7) ಮೂಲಕ ಗಮನ ಸೆಳೆದ ಕಿಶನ್ ಬಿಳಗಲಿ (Kishen Bilagali ಈ ಸೀರಿಯಲ್‌ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ. ಅವರದ್ದು ಒಂದು ಸಸ್ಪೆನ್ಸ್​​ ಕ್ಯಾರೆಕ್ಟರ್​ ಆಗಿದೆ.

ಸದಾ ಒಂದಲ್ಲಾ ಒಂದು ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿರುವ ಕಿಶನ್ ಈಗ ಕಿರುತೆರೆ ಎಂಟ್ರಿ ಕೊಟ್ಟಿರುವುದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. 

ಇದನ್ನೂ ಓದಿ: Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

Continue Reading

ಕಿರುತೆರೆ

Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Vaishnavi Gowda: ವೈಷ್ಣವಿ ಗೌಡ ಈ ಹಿಂದೆ ಧರಿಸಿದ್ದ ಕೆಂಪು ಬಣ್ಣದ ಗೌನ್ ಬಟ್ಟೆಯ ಫೋಟೋವನ್ನು ಎಡಿಟ್‌ ಮಾಡಿರುವ ಕಿಡಿಗೇಡಿಗಳು ಫೋಟೋವನ್ನು ಹರಿಬಿಟ್ಟಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

VISTARANEWS.COM


on

Vaishnavi Gowda deep fake Photo viral
Koo

ಇತ್ತೀಚೆಗೆ, ರಶ್ಮಿಕಾ ಮಂದಣ್ಣ, ಕಾಜೋಲ್ ಮತ್ತು ಕತ್ರಿನಾ ಕೈಫ್ ಸೇರಿದಂತೆ ಹಲವಾರು ನಟರು ಡೀಪ್‌ಫೇಕ್‌ಗೆ ಬಲಿಯಾಗಿದ್ದಾರೆ. ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು (Vaishnavi Gowda) ಸೆಲೆಬ್ರಿಟಿಗಳಾಗಿದ್ದಾರೆ. 

ಈಗ ಅಗ್ನಿಸಾಕ್ಷಿ, ಸೀತಾರಾಮ ಸೀರಿಯಲ್‌ ಖ್ಯಾತಿಯ ನಟಿ ವೈಷ್ಣವಿ ಗೌಡಗೆ (Vaishnavi Gowda) ಕಿಡಿಗೇಡಿಗಳಿಂದ ಡೀಪ್ ಫೇಕ್ ಕಾಟ ಎದುರಾಗಿದೆ.

ಇದನ್ನೂ ಓದಿ: Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

ವೈಷ್ಣವಿ ಅವರು ರೆಡ್‌ ಕಲರ್‌ ಡ್ರೆಸ್‌ನಲ್ಲಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದರು. ಕೆಲ ಕಿಡಿಗೇಡಿಗಳು ಈ ಫೋಟೊಗೆ ಬೋಲ್ಡ್ ಆಗಿ ಎಡಿಟ್ ಮಾಡಿ ಇಂಟರ್‌ನೆಟ್‌ನಲ್ಲಿ ವೈರಲ್ ಆಗುವಂತೆ ಮಾಡಿದ್ದಾರೆ.

ಸದ್ಯ ಈ ಡೀಪ್ ಫೇಕ್ ಬಗ್ಗೆ ‘ಸೀತಾರಾಮ’ (Seetharama) ನಟಿ ವೈಷ್ಣವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಈ ವರ್ಷದ ಆರಂಭದಲ್ಲಿ, ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ ಅವರ ಡೀಪ್‌ಫೇಕ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದಕ್ಕೂ ಮೊದಲು, ರಣವೀರ್ ಸಿಂಗ್ ಅವರ ಡೀಪ್‌ಫೇಕ್ ವೀಡಿಯೊ ಕೂಡ ವೈರಲ್ ಆಗಿದ್ದು, ಇದರಲ್ಲಿ ನಟ ಸರ್ಕಾರವನ್ನು ಟೀಕಿಸಿರುವಂತೆ ವೈರಲ್‌ ಆಗಿತ್ತು.

Continue Reading

ಕಿರುತೆರೆ

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Nayana Nagaraj: ಪಾಪಾ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ಕಥಾನಾಯಕಿಯಾಗಿ ಮಿಂಚಿದ ಪ್ರತಿಭಾವಂತ ನಟಿ ನಯನ ನಾಗರಾಜ್. ಗಾಯಕಿ ಹಾಗೂ ನೃತ್ಯಗಾರ್ತಿಯೂ ಆಗಿದ್ದಾರೆ. ಈ ಹಿಂದೆ ನಯನ ನಾಗರಾಜ್ ಅವರ ಬ್ಯಾಚುಲರೇಟ್ ಪಾರ್ಟಿಯಲ್ಲಿ ‘ಲಕ್ಷ್ಮೀ ನಿವಾಸ’ ಸೀರಿಯಲ್ ಖ್ಯಾತಿಯ ಚಂದನಾ ಅನಂತಕೃಷ್ಣ ಭಾಗವಹಿಸಿದ್ದರು.

VISTARANEWS.COM


on

Nayana Nagaraj ginirama serial fame got married with suhas
Koo

ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ ನಯನ ನಾಗರಾಜ್ (Nayana Nagaraj) ದಾಂಪತ್ಯ ಜೀವನಕ್ಕೆ ಜೂ.16ರಂದು ಕಾಲಿಟ್ಟಿದ್ದಾರೆ.

ದೀರ್ಘಕಾಲದ ಗೆಳೆಯ ಸುಹಾಸ್ ಶಿವಣ್ಣ ಅವರೊಂದಿಗೆ ನಯನ ನಾಗರಾಜ್ ಸಪ್ತಪದಿ ತುಳಿದಿದ್ದಾರೆ

ಕುಟುಂಬಸ್ಥರ ಸಮ್ಮುಖದಲ್ಲಿ ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಮದುವೆಯಾದರು.

ಇದನ್ನೂ ಓದಿ: Nayana Nagaraj: ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಗಿಣಿರಾಮ’ ಖ್ಯಾತಿಯ ನಟಿ ನಯನ ನಾಗರಾಜ್

ಈ ಮುಂಚೆ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

ಹತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ . ಇದೀಗ ಜೋಡಿಗೆ ಹಲವು ನಟ ನಟಿಯರು ಶುಭ ಹಾರೈಸಿದ್ದಾರೆ.
Continue Reading
Advertisement
Karnataka Weather
ಕರ್ನಾಟಕ12 mins ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ42 mins ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Fatty Lever Disease
ಆರೋಗ್ಯ42 mins ago

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Karnataka Milk Federation
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ7 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ7 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ8 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು8 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ8 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌