Site icon Vistara News

Mahanati Grand Finale: ʻಮಹಾನಟಿʼ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಪ್ರಿಯಾಂಕಾ; ಧನ್ಯಶ್ರೀಗೆ ಎರಡನೇ ಸ್ಥಾನ, ಬಹುಮಾನ ಏನು?

Mahanati Grand Finale priyanka from mysore is the winner season 1 dhanyashree runner up

ಬೆಂಗಳೂರು: : ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್‌ಗಳು (Mahanati Grand Finale) ವೇದಿಕೆಗೆ ತಲುಪಿದ್ದರು‌. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದಾರೆ. ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. ಗಗನ, ಪ್ರಿಯಾಂಕಾ, ಶ್ವೇತಾ ಭಟ್, ಆರಾಧನಾ ಭಟ್ ಹಾಗೂ ಧನ್ಯಶ್ರೀ ಫಿನಾಲೆಗೆ ಆಯ್ಕೆಯಾಗಿದ್ದರು.

 ಈ ಮಹಾನಟಿ ಶೋನಲ್ಲಿ ರಮೇಶ್‌ ಅರವಿಂದ್‌ ಅವರು ಒಂದೊಂದು ಟಾಪಿಕ್‌ ಕೊಡುತ್ತಾರೆ. ಅದರ ಬಗ್ಗೆ ಸ್ಪರ್ಧಿಗಳು ನಟಿಸಬೇಕು. ಮಹಾನಟಿಯರು ತಕ್ಷಣೆಕ್ಕೆ ಡೈಲಾಗ್‌ ರೆಡಿ ಮಾಡಿಕೊಂಡು ನಟಿಸುತ್ತಾರೆ. ಕೊನೆ ಕೊನೆಗೆ ಕಿರು ಚಿತ್ರ ಕೂಡ ಮೂಡಿ ಬಂದಿತ್ತು. ಈ ಶೋ ರಂಜಿಸುವುದಲ್ಲದೇ ವಿವಾದಕ್ಕೂ ಕಾರಣವಾಗಿತ್ತು.

ಐದು ಕಂಟೆಸ್ಟೆಂಟ್‌ಗಳು ಕಿರು ಚಿತ್ರ ಮಾಡಿದ್ದರು. ಅದರಲ್ಲಿ ಪ್ರಿಯಾಂಕ, ಅನುರಾಗ ಎಂಬ ಶಾರ್ಟ್ ಫಿಲ್ಮ್‌ನಲ್ಲಿ ಅದ್ಬುತವಾಗಿ ನಟಿಸಿದ್ದರು.ಐವರಲ್ಲಿ ವೇದಿಕೆ ಮೇಲೆ ಉಳಿದಿದ್ದೇ ಇಬ್ಬರು.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು. ಇದೀಗ ಎರಡನೇ ರನ್ನರ್ ಅಪ್ ಆಗಿ ಹತ್ತು ಲಕ್ಷ ಬಹುಮಾನವನ್ನು ಧನ್ಯಶ್ರೀ ಪಡೆದಿದ್ದಾರೆ.  ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಇದನ್ನೂ ಓದಿ: Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದಿದ್ದ ಗಗನಾ

ಗಗನಾ ಕಳೆದ ಬಾರಿ ಟ್ರೋಲ್‌ಗೆ ಗುರಿಯಾಗಿದ್ದರು. ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕಾನ್ಸೆಪ್ಟ್‌ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕಲ್‌ ಅವರನ್ನು ಮದುವೆ ಆಗಿದ್ದರೆ ಏನು ಮಾಡುತ್ತೀಯಾ? ಎಂದು ಸ್ಕಿಟ್‌ ಮಾಡಬೇಕಿತ್ತು. ಡೈಲಾಗ್‌ ಹೇಳುವ ಭರದಲ್ಲಿ ಮೆಕ್ಯಾನಿಕ್‌ ಮದುವೆಯಾದರೆ ಗ್ರೀಸ್‌ ತಿಂದು ಬದುಕಬೇಕಾಗುತ್ತದೆ ಎಂದಿದ್ದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ರಮೇಶ್‌ ಅರವಿಂದ್‌, ಗಗನಾ ಸೇರಿದಂತೆ ಈ ಬಗ್ಗೆ ದೂರು ದಾಖಲಾಗಿತ್ತು.

ಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದರು. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

Exit mobile version