Site icon Vistara News

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

Mahanati Show bindu honnali not selected

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಪ್ರಸಾರ ಕಾಣುತ್ತಿದೆ. ಈಗಾಗಲೇ ಸ್ಪರ್ಧಿಗಳು ಫಿನಾಲೆ ತಲುಪಿದ್ದಾರೆ. ಫಿನಾಲೆ ಹಂತದಲ್ಲಿ ಇರುವ ಈ ಮಹಾನಟಿ ಶೋಗೆ ಟಾಪ್‌ ಐದು ಮಂದಿ ಆಯ್ಕೆ ಮಾಡಲಾಗಿದೆ. ಗಗನ, ಪ್ರಿಯಾಂಕಾ, ಶ್ವೇತಾ ಭಟ್, ಆರಾಧನಾ ಭಟ್ ಹಾಗೂ ಧನ್ಯಶ್ರೀ ಫಿನಾಲೆಗೆ ಆಯ್ಕೆಯಾಗಿದ್ದಾರೆ. ಆದರೆ ಗ್ರಾಮೀಣ ಪ್ರತಿಭೆ ಸ್ಪರ್ಧಿ ಬಿಂದು ಹೊನ್ನಾಳಿ ಆಯ್ಕೆ ಆಗಿಲ್ಲ. ಈ ಬಗ್ಗೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಆರಂಭದಲ್ಲಿ ಬಿಂದು ಹೊನ್ನಾಳ್ಳಿ ಅವರ ಪ್ರತಿಭೆಗೆ ತೀರ್ಪುಗಾರರು ಮೆಚ್ಚುಗೆ ಹೊರ ಹಾಕಿದ್ದರು. ರಮೇಶ್‌ ಅರವಿಂದ್‌, ಪ್ರೇಮಾ ಹಾಗೂ ತರುಣ್‌ ಸೇರಿದಂತೆ ಬಿಂದು ಅವರ ನಟನೆಗೆ ಹಾಡಿ ಹೊಗಳುತ್ತಿದ್ದರು. ಇದೀಗ ಕೊನೆಯ ಹಂತದಲ್ಲಿ ಅವರನ್ನು ಕೈ ಬಿಡಲಾಗಿದ್ದು, ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಬಿಂದು ಹೊನ್ನಾಳಿ ಅವರು ದಾವಣಗೆರೆ ಮೂಲದವರು ವೃತ್ತಿಯಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ. ಹಾಗಂತ ಇವರು ಕೇವಲ ಶಿಕ್ಷಕಿಯಷ್ಟೇ ಅಲ್ಲ. ಇವರು ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಹಾಗೆಯೇ ಇವರು ದಾವಣಗೆರೆಯಲ್ಲಿ ಎಲ್‌ಐಸಿ ಎಜೆಂಟ್ ಕೂಡ ಆಗಿದ್ದಾರೆ. ಇದೀಗ ಅವರಿಗೆ ಓಟ್‌ ಬಿದ್ದ ಮೇಲೆಯೂ ಫಿನಾಲೆಗೆ ಸೆಲೆಕ್ಟೆ ಮಾಡಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ ನೆಟ್ಟಿಗರು. ಇದೀಗ ನೆಟ್ಟಿಗರು ಟಿಆರ್‌ಪಿಗೆ ಬೆಲೆ ಕೊಡುವ ಬದಲು, ಪ್ರತಿಭೆಗೆ ಬೆಲೆ ಕೊಟ್ಟರೆ ಚೆನ್ನಾಗಿರುತ್ತಿತ್ತು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

ಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version