Dance Karnataka Dance 7: ಪವರ್‌ ಸ್ಟಾರ್‌ ಟ್ರೋಫಿ ಗೆದ್ದ ನಿತಿನ್-ಡಿಂಪಲ್ ಜೋಡಿ! ಬಹುಮಾನವೇನು? - Vistara News

ಕಿರುತೆರೆ

Dance Karnataka Dance 7: ಪವರ್‌ ಸ್ಟಾರ್‌ ಟ್ರೋಫಿ ಗೆದ್ದ ನಿತಿನ್-ಡಿಂಪಲ್ ಜೋಡಿ! ಬಹುಮಾನವೇನು?

Dance Karnataka Dance 7: ಕರುನಾಡಿನ ಹೃದಯ ಗೆದ್ದ  ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 7ರ ಡ್ಯಾನ್ಸ್ ರಾಹುಲ್‌ ಮಾಸ್ಟರ್‌ ಜೋಡಿ ನಿತಿನ್-ಡಿಂಪಲ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಕಳೆದ 22 ವಾರಗಳಿಂದ ಯಶಸ್ವಿಯಾಗಿ ನಡೆದಿರುವ ‘ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಸೀಸನ್‌ 7’‌ ಶೋ ಕೊನೆಗೂ ವಿನ್ನರ್‌ ಘೋಷಣೆ ಮಾಡಿದೆ.

VISTARANEWS.COM


on

Nitin-Dimple Jodi won the Power Star Trophy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅ.8ರಂದು ಜೀ ವಾಹಿನಿಯಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್‌ ಫಿನಾಲೆ (Dance Karnataka Dance 7) 6ರಿಂದ 10.30ರವರೆಗೆ ಅದ್ಧೂರಿಯಾಗಿ ಪ್ರಸಾರ ಕಂಡಿದೆ. ವಿನ್ನರ್‌ ಯಾರು ಆಗಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಿಗಿತ್ತು. ಅದರಂತೆ ಫಿನಾಲೆಯಲ್ಲಿ ವಿನ್ ಆದವರಿಗೆ ಪವರ್‌ ಸ್ಟಾರ್‌ ಟ್ರೋಫಿ ಸೇರಬೇಕು. ಈ ಪವರ್‌ ಸ್ಟಾರ್‌ ಟ್ರೋಫಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಪ್ರೆಕ್ಷಕರಲ್ಲಿ ಹೆಚ್ಚಾಗಿತ್ತು. ಇದೀಗ ಕರುನಾಡಿನ ಹೃದಯ ಗೆದ್ದ  ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 7ರ ಡ್ಯಾನ್ಸ್ ರಾಹುಲ್‌ ಮಾಸ್ಟರ್‌ ಜೋಡಿ ನಿತಿನ್-ಡಿಂಪಲ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಕಳೆದ 22 ವಾರಗಳಿಂದ ಯಶಸ್ವಿಯಾಗಿ ನಡೆದಿರುವ ‘ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಸೀಸನ್‌ 7’‌ ಶೋ ಕೊನೆಗೂ ವಿನ್ನರ್‌ ಘೋಷಣೆ ಮಾಡಿದೆ.

ಡ್ಯಾನ್ಸ್ ಹಬ್ಬದಲ್ಲಿ ಫಸ್ಟ್‌ ರನ್ನರ್ ಅಪ್ ಸಾತ್ವಿಕ್-ಸೌಮ್ಯಾ ಜೋಡಿ ಆದರೆ ಸೆಕಂಡ್‌ ರನ್ನರ್ ಅಪ್ ಆಗಿ ಇಸುಬ್-ಅಕ್ಷದ ಜೋಡಿ ಆಯ್ಕೆಯಾಗಿದೆ. ಈ ಬಾರಿ ವಿಜೇತರಿಗೆ ಪವರ್‌ ಸ್ಟಾರ್‌ ಟ್ರೋಫಿ ಜತೆಗೆ 25 ಲಕ್ಷ ರೂ. ಕ್ಯಾಶ್‌ ಪ್ರೈಸ್‌ ಪಡೆದಕೊಂಡಿದೆ. ಕೆಲವರು ಪ್ರಶಸ್ತಿಯ ಬಗ್ಗೆ ಹೊಗಳಿದರೆ ಇನ್ನೂ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ʻʻಈ ಕಾರ್ಯಕ್ರಮ ಮೇಲೆ ಬಹಳ ನಂಬಿಕೆ ಇತ್ತು. ಫೈನಲ್ಸ್ ನೋಡಿ ಬಹಳ ಬೇಜಾರ ಆಯ್ತು. ಒಳ್ಳೆ ಪ್ರತಿಭೆಗೆ ಬೆಲೆ ಇಲ್ಲದ ಹಾಗೆ ಆಯ್ತುʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಟಿಆರ್‌ಪಿಗೋಸ್ಕರ ಭೇದ ಭಾವ ಮಾಡುತ್ತಾರೆʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Dance Karnataka Dance 7: ʻಪವರ್‌ ಸ್ಟಾರ್‌ʼ ಟ್ರೋಫಿ ಯಾರ ಮುಡಿಗೆ? ಇಂದು ಡಿಕೆಡಿ ಗ್ರ್ಯಾಂಡ್‌ ಫಿನಾಲೆ!

22ರ ವಾರ‌ಗಳವರೆಗೆ, 22 ಥೀಮ್‌ನೊಂದಿಗೆ, 13 ಜೋಡಿಗಳ ಜತೆ ಶುರುವಾದ ಈ ಡ್ಯಾನ್ಸ್‌ ರಿಯಾಲಿಟಿ ಶೋ 6 ಜೋಡಿಗಳೊಂದಿಗೆ ಫಿನಾಲೆ ಹಂತವನ್ನು ತಲುಪಿತ್ತು. ಫಿನಾಲೆಯಲ್ಲಿ ವಿನ್ ಆದವರಿಗೆ ಪವರ್‌ ಸ್ಟಾರ್‌ ಟ್ರೋಫಿ ಸೇರಲಿತ್ತು. ಪ್ರಭುದೇವ, ಶಿವರಾಜ್‌ಕುಮಾರ್, ವಿಜಯ ರಾಘವೇಂದ್ರ ಅವರು ನಾಟನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಕಾರ್ಯಕ್ರಮದಲ್ಲಿ ಜಡ್ಜ್ ಗಳಾಗಿ ಅರ್ಜುನ್ ಜನ್ಯ, ನಟಿ ರಕ್ಷಿತಾ ಪ್ರೇಮ್, ವಿಜಯ್ ರಾಘವೇಂದ್ರ, ಶಿವರಾಜ್ ಕುಮಾರ್, ಚಿನ್ನಿ ಪ್ರಕಾಶ್ ಮಾಸ್ಟರ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Neha Gowda: 2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda is pregnant the actress shared the good news
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ನೇಹಾ ಗೌಡ – ಚಂದನ್ ಗೌಡ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನೇಹಾ ಗೌಡ – ಚಂದನ್ ಗೌಡ ದಂಪತಿ ಪೋಷಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ ನಿವಾಸಕ್ಕೆ ಜೆ.ಪಿ.ನಡ್ಡಾ, ರಾಧಾ ಮೋಹನ್ ದಾಸ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ʻʻನಮ್ಮ ಕುಟುಂಬಕ್ಕೆ ಹೊಸ ಜೀವನವನ್ನು ಸ್ವಾಗತಿಸಲು ತಯಾರಾಗಿದ್ದೇವೆ. ನಮ್ಮ ಹೃದಯವು ಸಂತೋಷ ಮತ್ತು ನಿರೀಕ್ಷೆಯಿಂದ ತುಂಬಿ ತುಳುಕುತ್ತಿದೆ. ನಿಮ್ಮಲ್ಲಿ ಹಲವರು ಊಹಿಸಿದ್ದೀರಿ. ಹೌದು, ನೀವು ಹೇಳಿದ್ದು ಸರಿ! ನಮ್ಮ ಕುಟುಂಬ ಎರಡರಿಂದ ಮೂರಕ್ಕೆ ಬೆಳೆಯುತ್ತಿದೆ. ನಿದ್ದೆಯಿಲ್ಲದ ರಾತ್ರಿಗಳು, ಅಂತ್ಯವಿಲ್ಲದ ನಗು ಮತ್ತು ಮಿತಿಯಿಲ್ಲದ ಪ್ರೀತಿಯಿಂದ ತುಂಬಿರುವ ಈ ಹೊಸ ಅಧ್ಯಾಯಕ್ಕಾಗಿ ಕಾಯುತ್ತಿದ್ದೇವೆʼʼಎಂದು ಬರೆದುಕೊಂಡಿದ್ದಾರೆ ನೇಹಾ ದಂಪತಿ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಲಕ್ಷ್ಮಿ ಬಾರಮ್ಮ ಸೀರಿಯಲ್​ನಲ್ಲಿ ಗೊಂಬೆ ಪಾತ್ರದಲ್ಲಿ ನೇಹಾ ಅವರನ್ನು ಜನ ತುಂಬಾ ಇಷ್ಟಪಟ್ಟಿದ್ದರು. ‘ಸ್ವಾತಿ ಚುನುಕುಲು’ ಧಾರಾವಾಹಿ. ಅಷ್ಟೇ ಅಲ್ಲದೆ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಕಲ್ಯಾಣ ಪರಿಸು’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

Kannada Serials TRP: ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

VISTARANEWS.COM


on

Kannada Serials TRP Colors Kannada serials not in top 5 Shravani Subramanya is back on track
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ಮತ್ತು ಗೌತಮ್‌ ಹನಿಮೂನ್‌ ಹಾಳು ಮಾಡಿದ್ದಾಳೆ ಶಕುಂತಲಾ. ಇದೀಗ ಅಜ್ಜಿ ಮೊಮ್ಮಗ ಗೌತಮ್‌ ಸಂಸಾರ ಶುರು ಮಾಡುವಂತೆ ಒಂದಲ್ಲ ಒಂದು ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಲ್ಲಿಗೆ ಎಷ್ಟೋ ಶಕುಂತಲಾ ತೊಂದರೆ ಕೊಟ್ಟರೂ ಮಹಿಮಾ ಕಾವಲಾಗಿ ನಿಂತಿದ್ದಳು. ಈಗ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ. ಈಗಾಗಲೇ ಸೀತಾ ರಾಮರ ಎಂಗೇಜ್‌ಮೆಂಟ್‌ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಹಿನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಈ ಧಾರಾವಾಹಿಯನ್ನು ಹಿಂದಿಕ್ಕಿದೆ. ಈಗ ರಾಮ ಹಾಗೂ ಸೀತೆಯ ಮದುವೆ ನಿಶ್ಚಯ ಆಗಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Continue Reading

ಕಿರುತೆರೆ

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Sujay Hegde: ದೂರದ ಸಂಬಂಧಿ ಆಗಿರುವ ಪ್ರೇರಣಾ ಎನ್ನುವವರನ್ನು ಸುಜಯ್ ಮದುವೆ ಆಗಲಿದ್ದಾರೆ. ಬೆಂಗಳೂರಿನಲ್ಲಿಯೇ ಈ ನಿಶ್ಚಿತಾರ್ಥ ನಡೆದಿದ್ದು, ಕನ್ನಡ ಕಿರುತೆರೆ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

VISTARANEWS.COM


on

Sujay Hegde Manasare actor Engagement with Prerana
Koo

`ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪ್ರೇರಣಾ (Prerana) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್‌ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ. ಈ ಮೂಲಕ ಸುಜಯ್ ಬಾಳಿನಲ್ಲಿ ‘ಬಾಳ ಸಂಗಾತಿ’ ಆಗಮನ ಆಗಿದೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಸುಜಯ್ ಹೆಗಡೆ ಅವರು ‘ಆಕಾಶ ದೀಪ’, ‘ಗೋಕುಲದಲ್ಲಿ ಸೀತೆ’, ‘ಶನಿ’, ‘ಮನಸಾರೆ’, ‘ಮನಸೆಲ್ಲಾ ನೀನೆ’, ಕಥೆಯೊಂದು ಶುರುವಾಗಿದೆ‘’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಾಣಿಕ್ಯ’, ‘ವಜ್ರಕಾಯ’, ‘ಮಿ ಎಲ್‌ಎಲ್‌ ಬಿ’ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ

ಮಾಧ್ಯಮವೊಂದಕ್ಕೆ ಸುಜಯ್ ಹೆಗಡೆ ಮಾಹಿತಿ ನೀಡಿ  ‘ನಮ್ಮದು ಪ್ರೇಮ ವಿವಾಹವಲ್ಲ, ಅರೇಂಜ್ಡ್ ಮ್ಯಾರೇಜ್. ನನ್ನ ಪ್ರೇರಣಾ ನಮ್ಮ ಫ್ಯಾಮಿಲಿ ಫ್ರೆಂಡ್‌ʼʼಎಂದು ಹೇಳಿಕೊಂಡಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಸುಜಯ್ ಹೆಗಡೆ ಸದ್ಯಕ್ಕೆ ಬೆಂಗಳೂರು ನಿವಾಸಿ.

Continue Reading

ಕಿರುತೆರೆ

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Aditi Prabhudeva: ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

VISTARANEWS.COM


on

Aditi Prabhudeva is returning to reality show judge
Koo

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಳ್ಳುತ್ತಿದ್ದಾರೆ .

‘ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. 

Continue Reading
Advertisement
Rupert Murdoch
ವಿದೇಶ8 mins ago

Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

pratap simha mlc election
ಕರ್ನಾಟಕ10 mins ago

MLC Election: “ಬುರ್ಖಾ ಸ್ಟೂಡೆಂಟ್‌ ಗೇಲಿ…” ರೊಚ್ಚಿಗೆದ್ದ ಪ್ರತಾಪ್‌ ಸಿಂಹರಿಂದ ರಘುಪತಿ ಭಟ್‌ ಪರ ಪೋಸ್ಟ್‌, ಡಿಲೀಟ್!

T20 World Cup 2024
ಕ್ರೀಡೆ19 mins ago

T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

Sanjeeda Shaikh Says a Woman Groped Her
ಬಾಲಿವುಡ್29 mins ago

Sanjeeda Shaikh: ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಓಡಿದಳು ಎಂದ ಖ್ಯಾತ ನಟಿ!

ದೇಶ38 mins ago

Lok Sabha Election 2024: ಬಿಜೆಪಿ ಫೈರ್‌ ಬ್ರ್ಯಾಂಡ್‌ಗಳ ಸೋಲು ಗೆಲುವಿನ ಲೆಕ್ಕಾಚಾರ ಹೇಗಿದೆ? ಎಕ್ಸಿಟ್‌ ಪೋಲ್‌ ಹೇಳೋದೇನು?

Dakshina Kannada Lok Sabha Constituency
ಪ್ರಮುಖ ಸುದ್ದಿ48 mins ago

Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

2nd Puc Exam 3
ಶಿಕ್ಷಣ54 mins ago

2nd PUC Exam 3: ದ್ವಿತೀಯ ಪಿಯುಸಿ ಪರೀಕ್ಷೆ-3ರ ದಂಡಸಹಿತ ಶುಲ್ಕ ಪಾವತಿಗೆ ಇಂದೇ ಕೊನೇ ದಿನ

stock market news narendra modi
ಪ್ರಮುಖ ಸುದ್ದಿ1 hour ago

Stock Market News: ಮೋದಿ ಸರಕಾರ ಪುನರಾಗಮನಕ್ಕೆ ಷೇರು ಮಾರುಕಟ್ಟೆ ಹರ್ಷ, ಸೆನ್ಸೆಕ್ಸ್‌- ನಿಫ್ಟಿ ದಾಖಲೆ ಏರಿಕೆ

Shah Rukh Khan looks Like Johnny Depp
ಬಾಲಿವುಡ್1 hour ago

Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

1993 Mumbai Serial Blast
ದೇಶ1 hour ago

1993 Mumbai Serial Blast: ಜೈಲಿನಲ್ಲೇ ಹತ್ಯೆಯಾದ ಸರಣಿ ಬಾಂಬ್‌ ಬ್ಲಾಸ್ಟ್‌ ಅಪರಾಧಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌