Rupanjana Mitra: ತನಗಿಂತ 6 ವರ್ಷ ಚಿಕ್ಕವನ ಜತೆ ಮಗನ ಸಮ್ಮುಖದಲ್ಲಿ ಎರಡನೇ ಮದುವೆಯಾದ ನಟಿ! - Vistara News

ಕಿರುತೆರೆ

Rupanjana Mitra: ತನಗಿಂತ 6 ವರ್ಷ ಚಿಕ್ಕವನ ಜತೆ ಮಗನ ಸಮ್ಮುಖದಲ್ಲಿ ಎರಡನೇ ಮದುವೆಯಾದ ನಟಿ!

Rupanjana Mitra: ಕಳೆದ ವರ್ಷ ಡಾರ್ಜಿಲಿಂಗ್‌ನಲ್ಲಿ ರೂಪಂಜನಾ ಮತ್ತು ರತುಲ್ ಡಾರ್ಜಿಲಿಂಗ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಫೋಟೊಗಳಿಗೆ ಪೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ಸಂತಸದ ಕ್ಷಣಗಳನ್ನು ಹಂಚಿಕೊಂಡಿತ್ತು. ರೂಪಾಂಜನಾ ಅವರ ಸಹನಟರು, ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದ್ದರು.

VISTARANEWS.COM


on

Rupanjana Mitra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 43 ವರ್ಷದ ಕಿರುತೆರೆ ನಟಿ ರೂಪಂಜನಾ ಮಿತ್ರಾ (Rupanjana Mitra) ಅವರು ಏಪ್ರಿಲ್ 19ರಂದು ತಮಗಿಂತ 6 ವರ್ಷ ಚಿಕ್ಕವರಾದ ರತುಲ್‌ ಮುಖರ್ಜಿ ಅವರನ್ನು ವಿವಾಹವಾಗಿದ್ದಾರೆ. ಬಂಗಾಳಿ ಸಂಪ್ರದಾಯದಲ್ಲಿ ನಟಿ ವಿವಾಹವಾದರು. ವಿಶೇಷ ಅಂದರೆ ನಟಿ ಮಗನ ಎದುರೇ ನಟಿ ಎರಡನೇ ವಿವಾಹವಾಗಿದ್ದಾರೆ. ನಟಿ ಕೆಂಪು ಬಣ್ಣದ ಬನಾರಸ್‌ ಸೀರೆಯಲ್ಲಿ ಕಂಗೊಳಿಸಿದರೆ, ರತುಲ್‌ ಅವರು ಧೋತಿಯಲ್ಲಿ ಕಂಡು ಬಂದರು.

ರೂಪಾಂಜನಾ ಅವರ ಮಗ ರಿಯಾನ್ ಕೆಂಪು ಪಂಜಾಬಿಯನ್ನು ಧರಿಸಿದ್ದ. ರೂಪಂಜನಾ ಮಿತ್ರಾ ಹಾಗೂ ರತುಲ್‌ ಮುಖರ್ಜಿ ಮದುವೆಗೂ ಮುಂಚೆ ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು. ರತುಲ್‌ ಅವರು ರೂಪಂಜನಾ ಮಿತ್ರಾಗಿಂತ ಆರು ವರ್ಷ ಚಿಕ್ಕವರು.

ಕಳೆದ ವರ್ಷ ಡಾರ್ಜಿಲಿಂಗ್‌ನಲ್ಲಿ ರೂಪಂಜನಾ ಮತ್ತು ರತುಲ್ ಡಾರ್ಜಿಲಿಂಗ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಫೋಟೊಗಳಿಗೆ ಪೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ಸಂತಸದ ಕ್ಷಣಗಳನ್ನು ಹಂಚಿಕೊಂಡಿತ್ತು. ರೂಪಾಂಜನಾ ಅವರ ಸಹನಟರು, ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದ್ದರು.

ಇದನ್ನೂ ಓದಿ: Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

ಇದನ್ನೂ ಓದಿ: Physical Abuse : ಬೆಂಗಳೂರಲ್ಲೊಂದು ಪೈಶಾಚಿಕ ಕೃತ್ಯ; 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರೂಪಾಂಜನಾ ಅವರು 2007ರಲ್ಲಿ ರಜಾಲ್‌ ಹಕಿಯನ್ನು ವಿವಾಹವಾಗಿದ್ದರು. ರಿಯಾನ್‌ ಎಂಬ ಮಗ ಜನಿಸಿದ. 2018ರಲ್ಲಿ ಜೋಡಿ ವಿಚ್ಛೇದನ ಪಡೆದಿತ್ತು. ಅಂದಿನಿಂದ ಮಗ ತಾಯಿಯ ಜತಗೆ ಇದ್ದಾನೆ. ಪತಿಯಿಂದ ವಿಚ್ಛೇದನ ಪಡೆದ ನಂತರ ರೂಪಾಂಜನಾ ಅವರು ರತುಲ್‌ ಅವರನ್ನು ಪ್ರೀತಿಸುತ್ತಿದ್ದರು.

ಇದೀಗ ಜೋಡಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ವೈರಲ್‌ ಆಗುತ್ತಿರುವ ನವಜೋಡಿಗೆ ಹಲವರು ಶುಭ ಹಾರೈಸುತ್ತಿದ್ದಾರೆ. ರೂಪಂಜನಾ ಬಂಗಾಳಿ ದೂರದರ್ಶನದಲ್ಲಿ ಪ್ರಸಿದ್ಧ ನಟಿ. ಬೆಂಗಾಲಿ ಟಿವಿ ಶೋ ‘ಏಕ್ ಆಕಾಶೇರ್ ನಿಚೆ’ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದರು. ಹಲವಾರು ಸಿನಿಮಾಗಳು ಮತ್ತು ಮತ್ತು ವೆಬ್ ಸಿರೀಸ್‌ನಲ್ಲಿ ನಟಿ ಕಾಣಿಸಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Shrirasthu Shubhamasthu: ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻ

VISTARANEWS.COM


on

Shrirasthu Shubhamasthu serial will be end
Koo

ಬೆಂಗಳೂರು:  ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ‘ಶ್ರೀರಸ್ತು ಶುಭಮಸ್ತು’ (Shrirasthu Shubhamasthu) ಕೂಡ ಒಂದು. ಟಿಆರ್‌ಪಿಯಲ್ಲಿ ಮೊದ ಮೊದಲು ಒಳ್ಳೆಯ ಟಿಆರ್‌ಪಿ ಪಡೆದ ಧಾರಾವಾಹಿ ಬರಬರುತ್ತಾ ಟಾಪ್‌ 5ನಲ್ಲೇ ಇಲ್ಲವಾಗಿತ್ತು. ಆದರೀಗ ಧಾರಾವಾಹಿ ಮುಕ್ತಾಯಗೊಳ್ಳಲಿದೆ ಎಂದು ಗಾಸಿಪ್‌ಗಳು ಹರಿದಾಡುತ್ತಿವೆ. ಏಕೆಂದರೆ ಜೀ ಕನ್ನಡ ಹೊಸ ಪ್ರೋಮೊ ಹಂಚಿಕೊಂಡಿದೆ.

ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶಾರ್ವರಿ ತನ್ನ ಗಂಡನ ಅಣ್ಣ ಮಾಧವ್​,ಮತ್ತು ಅವರ ಪತ್ನಿ, ಮಕ್ಕಳನ್ನು ಮುಗಿಸಿಲೆಂದು ಹೊಂಚು ಹಾಕಿ ಆ್ಯಕ್ಸಿಡೆಂಟ್​ ಮಾಡಿಸಿರುತ್ತಾಳೆ. ಆಗ ಮಾಧವನ ಪತ್ನಿ ತೀರಿಕೊಳ್ಳುತ್ತಾರೆ. ಇದಾದ ಬಳಿಕ ಮಾಧವನ ಮಕ್ಕಳು ತಮ್ಮ ಅಪ್ಪನನ್ನು ತಾಯಿ ಕೊಲ್ಲಲು ತಂದೆಯೇ ಕಾರಣವೆಂದು ಅಪ್ಪನನ್ನು ಕೀಳಾಗಿ ನೋಡಿಕೊಂಡು ಬರುತ್ತಿರುತ್ತಾರೆ. ಇನ್ನು ಶಾರ್ವರಿ ಅನ್ನು ದೇವರಂತೆ ಪೂಜೆ ಮಾಡುತ್ತಿರುತ್ತಾರೆ ಮಾಧವನ ಮಕ್ಕಳು. ಇದೀಗ ಶಾರ್ವರಿ ಗಂಡ ಮಹೇಶನಿಗೆ ಶಾರ್ವರಿಯೇ ಆಕ್ಸೆಡೆಂಟ್‌ ಮಾಡಿಸಿದ್ದು ಎಂದು ಗೊತ್ತಾಗಿದೆ. ಶಾರ್ವರಿಯ ಗುಟ್ಟು ರಟ್ಟಾದರೆ ಅಲ್ಲಿ ಕಥೆ ಮುಗಿದಂತೆ. ಆದರೀಗ ಬಿಡುಗಡೆಯಾಗಿರುವ ಪ್ರೊಮೋದಲ್ಲಿ ತುಳಸಿ ಪೂಜೆ ಮುಗಿಸುತ್ತಿದ್ದಂತೆಯೇ ಸಂಪೂರ್ಣ ಸತ್ಯವನ್ನು ಒಪ್ಪಿಕೊಳ್ಳುವಂತೆ ಮಹೇಶ್‌ ಪತ್ನಿ ಶಾರ್ವರಿಗೆ ಹೇಳಿದ್ದಾನೆ.

ಶಾರ್ವರಿ ಅಪಘಾತ ಮಾಡಿಸಲು ಕಾರಣವೂ ಇದೆ. ಮಾಧವ್​ ಪತ್ನಿ ಸುಮತಿಗೆ ಮನೆಯಲ್ಲಿ ಎಲ್ಲರೂ ಗೌರವ ಕೊಡುತ್ತಿರುತ್ತಾರೆ. ಅವಳ ಮುಂದೆಯೇ ತಲೆಬಾಗಿ ಎಲ್ಲರೂ ಮರ್ಯಾದೆ ಕೊಡುತ್ತಾರೆ, ನಾನೂ ಆ ಮನೆಯ ಸೊಸೆ. ಆದರೆ ನನಗೆ ಯಾರೂ ಮರ್ಯಾದೆ ಕೊಡುತ್ತಿರಲಿಲ್ಲ. ಅದಕ್ಕಾಗಿ ಕೊಲೆ ಮಾಡಿಸಿದೆ ಎಂದು ಎಷ್ಟು ಸಲೀಸಾಗಿ ಹಿಂದೆ ಒಪ್ಪಿಕೊಂಡಿದ್ದಳು ಶಾರ್ವರಿ. ಆದರೆ ಈಗ ಮಾಧವನಿಗೆ ಎರಡನೇ ಹೆಂಡತಿಯಾಗಿ ತುಳಸಿ ಬಂದಿರುತ್ತಾಳೆ. ತುಳಸಿಗೂ ಅದೇ ಗೌರ ಸಿಕ್ಕಿರುವುದನ್ನು ಸಹಿಸಲು ಆಗುತ್ತಿಲ್ಲ ಶಾರ್ವರಿಗೆ. ಈಗ ಮಹೇಶ ಆಜ್ಞೆಯಂತೆ ಮನೆಯವರ ಮುಂದೆ ಎಲ್ಲ ಸತ್ಯವನ್ನು ಒಪ್ಪಿಕೊಳ್ಳಬೇಕಿದೆ.

ಇದನ್ನೂ ಓದಿ: Shrirasthu Shubhamasthu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯ ಮಾಧವ್‌ ಕಿರುತೆರೆಗೆ ಹೊಸಬರಲ್ಲ!

ಪೂಜೆ ಮುಗಿಯುತ್ತಿದ್ದಂತೆಯೇ ಶಾರ್ವರಿ ನಾನು ಸತ್ಯವನ್ನು ಹೇಳಬೇಕಿದೆ. ಎಲ್ಲರ ಎದುರು ಸತ್ಯ ಹೇಳುತ್ತಿದ್ದೇನೆ ಎಂದು ಹೇಳಿದ್ದಾಳೆ. ಅದರ ಪ್ರೊಮೋ ಅನ್ನು ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಶಾರ್ವರಿ ನಿಜಕ್ಕೂ ಸತ್ಯ ನುಡಿದರೆ ಸೀರಿಯಲ್‌ ಮುಗಿದಂತೆಯೇ ಎಂದು ಪ್ರೇಕ್ಷಕರು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಹೇಳುವ ಭರದಲ್ಲಿ ಬೇರೆ ಏನಾದರೂ ಶಾರ್ವರಿ ಹೇಳಬಹುದು ಎಂದು ನೋಡುಗರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Shrirasthu Shubhamasthu | ದುಡಿದು, ದಣಿವ ಅಮ್ಮಂದಿರ ದನಿಯಾಗಿ ಬರುತ್ತಿದೆ ಹೊಸ ಕಥೆ: ಶ್ರೀರಸ್ತು ಶುಭಮಸ್ತು!

 ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮಧ್ಯ ವಯಸ್ಕನ ಪಾತ್ರವನ್ನು ಅಜಿತ್‌ ನಿರ್ವಹಿಸುತ್ತಿದ್ದಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

Kannada Serials TRP: ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Kannada Serials TRP puttakkana makkalu top the list
Koo

ಬೆಂಗಳೂರು:  ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ. ಮೇ 3ರಂದು ಕಳೆದ ವಾರದ ಟಿಆರ್‌ಪಿ ಲಿಸ್ಟ್ ಹೊರಬಿದ್ದಿದೆ.ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಸಹನಾ ದಾಂಪತ್ಯ ಕಲಹದಿಂದಾಗಿ ಇದೀಗ ಟಿಆರ್‌ಪಿ ಜಾಸ್ತಿ ಆದಂತಾಗಿದೆ. ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.’ರಾಮಾಚಾರಿ’ ಧಾರಾವಾಹಿ ಕಲರ್ಸ್ ಕನ್ನಡದ ಟಾಪ್ ಸ್ಥಾನದಲ್ಲಿದೆ. 4.6 ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದೆ.

ಇನ್ನು ಕಲರ್ಸ್‌ಕನ್ನಡದಲ್ಲಿ ರಾಮಾಚಾರಿ ಟಾಪ್‌ 1 ಆದರೆ, ‘ಭಾಗ್ಯಲಕ್ಷ್ಮಿ’ ಧಾರಾವಾಹಿ 4.3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹಾಗೇ ‘ಲಕ್ಷ್ಮಿ ಬಾರಮ್ಮ’ 3.6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸ್ಟಾರ್‌ ಸುವರ್ಣದಲ್ಲಿ ಕೂಡ ಧಾರಾವಾಹಿಗಳು ಒಳ್ಳೆಯ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ : 3.7 ಅಂಕಗಳೊಂದಿಗೆ ಟಾಪ್‌ ಸ್ಥಾನದಲ್ಲಿದೆ. ‘ಯಡಿಯೂರು ಸಿದ್ಧಲಿಂಗೇಶ್ವರ’ 3.5 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ‘ನೀನಾದೆ ನಾ’ 3 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕನ್ನಡ ಟಾಪ್ 3 ಮನರಂಜನಾ ವಾಹಿನಿಗಳಲ್ಲಿ ಜೀ ಕನ್ನಡ, ಕಲರ್ಸ್ ಕನ್ನಡ ಹಾಗೂ ಸ್ಟಾರ್ ಸುವರ್ಣವಿದೆ. ಎಂದಿನಂತೆ ಮೂರೂ ವಾಹಿನಿಗಳು ಕಾಂಪಿಟೇಷನ್‌ಗೆ ಬಿದ್ದು, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ.

Continue Reading

ಕಿರುತೆರೆ

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Gurucharan Singh: ಗುರುಚರಣ್ ತನ್ನ ಫೋನ್ ಅನ್ನು ದೆಹಲಿಯ ಪಾಲಂ ಪ್ರದೇಶದಲ್ಲಿ ಬಿಟ್ಟು ನಗರದಿಂದ ಹೊರಗೆ ಹೋಗಿರುವುದಾಗಿ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಟ ಒಂದು ರಿಕ್ಷಾದಿಂದ ಇನ್ನೊಂದಕ್ಕೆ ಹೋಗುತ್ತಿರುವುದು ಕಂಡುಬಂದಿದೆ. ಅವರು ಎಲ್ಲ ಫ್ಲ್ಯಾನ್‌ ಪ್ರಕಾರವಾಗಿಯೇ ದೆಹಲಿ ಬಿಟ್ಟು ಹೋಗಿದ್ದಾರೆʼʼಎಂದು ವರದಿಯಾಗಿದೆ.

VISTARANEWS.COM


on

Gurucharan Singh Taarak Mehta Ka Ooltah Chashmah actor planned disappearance
Koo

ಬೆಂಗಳೂರು: ಸುಮಾರು ಎರಡು ವಾರಗಳಿಂದ ನಾಪತ್ತೆಯಾಗಿರುವ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ (Taarak Mehta Ka Ooltah Chashmah) ಧಾರವಾಹಿ ನಟ ಗುರುಚರಣ್ ಸಿಂಗ್ (Gurucharan Singh) ಅವರು ಭರ್ಜರಿ ಪ್ಲ್ಯಾನ್‌ ಮಾಡಿಯೇ ನಗರ ಬಿಟ್ಟು ಹೋಗಿದ್ದಾರೆ ಎಂದು ವರದಿಯಾಗಿದೆ. ಗುರುಚರಣ್ ತನ್ನ ಫೋನ್ ಅನ್ನು ದೆಹಲಿಯ ಪಾಲಂ ಪ್ರದೇಶದಲ್ಲಿ ಬಿಟ್ಟು ನಗರದಿಂದ ಹೊರಗೆ ಹೋಗಿರುವುದಾಗಿ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಗುರುಚರಣ್ ಸಿಂಗ್ ನಾಪತ್ತೆಯಾದ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು?

ದೆಹಲಿ ಪೊಲೀಸ್ ಮೂಲಗಳ ಪ್ರಕಾರ, “ಗುರುಚರಣ್ ಸಿಂಗ್ ತನ್ನ ಫೋನ್ ಅನ್ನು ಪಾಲಂ ಪ್ರದೇಶದಲ್ಲಿ ಬಿಟ್ಟಿದ್ದಾರೆ. ನಾವು ಕೂಡ ಅವರನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. ಆದರೆ ಗುರುಚರಣ್ ಸಿಂಗ್ ಅವರನ್ನು ಪತ್ತೆಹಚ್ಚಲು ನಮಗೆ ಕಷ್ಟವಾಗುತ್ತಿರುವ ಕಾರಣ ಅವರ ಬಳಿ ಫೋನ್‌ ಕೂಡ ಇಲ್ಲ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಟ ಒಂದು ರಿಕ್ಷಾದಿಂದ ಇನ್ನೊಂದಕ್ಕೆ ಹೋಗುತ್ತಿರುವುದು ಕಂಡುಬಂದಿದೆ. ಅವರು ಎಲ್ಲ ಫ್ಲ್ಯಾನ್‌ ಪ್ರಕಾರವಾಗಿಯೇ ದೆಹಲಿ ಬಿಟ್ಟು ಹೋಗಿದ್ದಾರೆʼʼಎಂದು ವರದಿಯಾಗಿದೆ.

ಏಪ್ರಿಲ್ 22ರಂದು ಸಂಜೆ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದರು. ಏಪ್ರಿಲ್ 22ರಂದು ರಾತ್ರಿ 8.30 ಕ್ಕೆ ಮಗ ಮುಂಬೈಗೆ ತೆರಳಿದ್ದ ಎಂದು ತಂದೆ ದೂರು ನೀಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ʻʻಎಪ್ರಿಲ್ 22ರಂದು ಗುರುಚರಣ್ ಸಿಂಗ್ ಶೂಟಿಂಗ್ ಸೇರಿದಂತೆ ಇತರ ಕೆಲಸದ ನಿಮಿತ್ತ ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಲು ವಿಮಾನ ನಿಲ್ದಾಕ್ಕೆ ತೆರಳಿದ್ದರು. ಗುರುಚರಣ್ ಸಿಂಗ್ ಬೆಳಗ್ಗೆ 8.30ಕ್ಕೆ ಮನೆಯಿಂದ ತೆರಳಿದ್ದರು. ಆದರೆ ಅವರು ಮುಂಬೈಗೆ ತಲುಪಿಲ್ಲ. ಬದಲಾಗಿ ಬೆಳಗ್ಗೆ 9.14ರ ಸುಮಾರಿಗೆ ಪಾಲಂʼನಲ್ಲಿ ನಟ ಕಂಡು ಬಂದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

ಕೆಲ ವರ್ಷಗಳ ಹಿಂದೆ ಗುರುಚರಣ್ ಸಿಂಗ್ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರವಾಹಿಯಿಂದ ಹೊರಬಂದಿದ್ದರು. ತಂದೆಯ ಅನಾರೋಗ್ಯ, ಕುಟುಂಬದ ನಿರ್ವಹಣೆ ಕಾರಣದಿಂದ ಸೀರಿಯಲ್‌ನಿಂದ ಹೊರಬಂದು ಕುಟುಂಬದ ಜತೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿ 2022 ಜುಲೈ 2ಕ್ಕೆ 3500 ಸಂಚಿಕೆಗಳನ್ನು ಕಂಡಿದೆ.

Continue Reading

ಸಿನಿಮಾ

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

Bhoomi Shetty:  ಭೂಮಿ ಆಗಾಗ ತಮ್ಮ ಡ್ರೆಸ್‌ ಹಾಗೂ ಸ್ಟೈಲ್‌ ಮೂಲಕ ಟ್ರೋಲ್‌ಗೆ ಗುರಿಯಾಗುತ್ತಲೇ ಇರುತ್ತಾರೆ. ಭೂಮಿ ಶೆಟ್ಟಿ ಈ ಹಿಂದೆ ಪಾರ್ಟಿ ವೇರ್‌ನಲ್ಲಿ ಕಂಡಿದ್ದರು. ಡ್ರೆಸ್ ನಲ್ಲಿ ಎದೆ ಸೀಳು ಎದ್ದು ಕಾಣುತ್ತಿತ್ತು. ಹೀಗಾಗಿ ಭೂಮಿ ತೊಟ್ಟಿರುವ ಡ್ರೆಸ್‌ಗೆ ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ಆದರೀಗ ನಟಿ ಆಫ್ರಿಕನ್‌ ಲುಕ್‌ನಲ್ಲಿ ಕಂಡಿದ್ದಾರೆ.

VISTARANEWS.COM


on

Bhoomi Shetty African braids Look style
Koo

`ಕಿನ್ನರಿ’ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಭೂಮಿ ಶೆಟ್ಟಿಯನ್ನು (Bhoomi Shetty) ಪ್ರೇಕ್ಷಕರು ಮೆಚ್ಚಿದ್ದರು. ಕುಂದಾಪುರದ ಭೂಮಿ ಆಗಾಗ ಬೈಕ್ ರೈಡ್ ಮೂಲಕ ಹಳ್ಳಿ ಶೈಲಿಯ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಆಗಾಗ ಹಾಟ್‌ ಅವತಾರ ತಾಳುವ ಭೂಮಿ ಇದೀಗ ಹೊಸ ಲುಕ್‌ನೊಂದಿಗೆ ಕಂಡಿದ್ದಾರೆ. ಆಫ್ರಿಕನ್‌ ಸ್ಟೈಲ್‌ನಲ್ಲಿ ಭೂಮಿ ಸಖತ್‌ ಹಾಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Bhoomi Shetty: ಎದೆ ಸೀಳು ಎದ್ದು ಕಾಣುವಂತೆ ಡ್ರೆಸ್‌ ಧರಿಸಿದ ಭೂಮಿ ಶೆಟ್ಟಿ; ನೆಟ್ಟಿಗರ ತರಾಟೆ!

ಭೂಮಿ ಇದೀಗ ದಕ್ಷಿಣ ಆಫ್ರಿಕಾ ಸ್ಪೆಷಲ್‌ ಸ್ಟೈಲ್‌ ಬ್ರೇಡ್ಸ್‌( braids) ಸ್ಟೈಲ್‌ ಮಾಡಿಸಿಕೊಂಡಿದ್ದಾರೆ. ಈ ಬ್ರೇಡ್ಸ್‌ ಸ್ಟೈಲ್‌ ಕುರಿತು ಇನ್‌ಸ್ಟಾದಲ್ಲಿ ವಿವರಣೆ ಕೂಡ ಕೊಟ್ಟಿದ್ದಾರೆ ಭೂಮಿ.

ಭೂಮಿ ಹೊಸ ಲುಕ್‌ ಪೋಸ್ಟ್‌ ಮಾಡಿ ಈ ರೀತಿ ಬರೆದುಕೊಂಡಿದ್ದಾರೆ ʻನನಗೆ, ಈ ಸ್ಟೈಲ್‌ ಸಾಂಸ್ಕೃತಿಕವಾಗಿ ಮೆಚ್ಚುಗೆಯಾಗಿರಬಹುದು. “ಬಾಕ್ಸ್ ಬ್ರೇಡ್‌ʼ ಸ್ಟೈಲ್‌ ದಕ್ಷಿಣ ಆಫ್ರಿಕಾದಲ್ಲಿ ಹುಟ್ಟಿಕೊಂಡಿದ್ದು. ಈ ರೀತಿ ಕೂದಲನ್ನು ಮಾಡಿಕೊಳ್ಳಲು ಸುಮಾರು 5-8 ಗಂಟೆಗಳವರೆಗೆ ಬೇಕಾಗುತ್ತದೆ. ಈ ಬ್ರೇಡ್‌ ಸ್ಟೈಲ್‌ ಯಾರನ್ನು ನಿಭಾಯಿಸುತ್ತಿದ್ದರೋ ಅವರನ್ನು ಶ್ರೀಮಂತ ಮಹಿಳೆ ಎಂದು ಹಲವರು ನಂಬಿದ್ದರು. ಬ್ರೇಡ್‌ಗಳು ಕಪ್ಪು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬ್ರೇಡ್‌ಗಳು ಸಾವಿರಾರು ವರ್ಷಗಳ ಹಿಂದಿನದು ಎಂದು ಇತಿಹಾಸದಲ್ಲಿದೆ. ಈ ರೀತಿ ಸ್ಟೈಲ್‌ಗಳು ಸಾಮಾಜಿಕ ಪದ್ಧತಿಗಳನ್ನು ಎತ್ತಿಹಿಡಿಯುವುದು ಮಾತ್ರವಲ್ಲದೆ ಅವು ಆಗಿನ ಸಮಯದಲ್ಲಿ ಫ್ಯಾಶನ್ ಆಗಿದ್ದವು. ಆಫ್ರಿಕನ್ ಮಹಿಳೆಯರು ತಮ್ಮ ಕೂದಲನ್ನು ಅಲಂಕರಿಸುವ ವಿಷಯದಲ್ಲಿ ಶ್ರೀಮಂತ ಇತಿಹಾಸವನ್ನು ಹೊಂದಿದ್ದಾರೆ. ನೀವು ಕೇಶವಿನ್ಯಾಸವನ್ನು ಹೊಂದವ ಮೊದಲು ನೀವು ಆಯಾ ಶೈಲಿಯ ಇತಿಹಾಸದ ಬಗ್ಗೆ ತಿಳಿದುಕೊಂಡಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಕೆಲವರು ಭೂಮಿಯವರ ಸ್ಟೈಲ್‌ ಇಷ್ಟ ಪಟ್ಟರೆ, ಇನ್ನೂ ಕೆಲವರು ನಟಿಯ ಬಗ್ಗೆ ಕೆಟ್ಟದ್ದಾಗಿ ಕಮೆಂಟ್‌ ಮಾಡಿದ್ದಾರೆ. ಭೂಮಿ ಶೆಟ್ಟಿ ಅವರು ಧಾರಾವಾಹಿ ಮಾತ್ರವಲ್ಲದೇ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಕೂಡ ಭಾಗವಹಿಸಿ ಪ್ರೇಕ್ಷಕರ ಮನಸನ್ನು ಗೆದ್ದಿದ್ದರು.
Continue Reading
Advertisement
Rachita Taneja
ದೇಶ9 mins ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rahul Gandhi
ಪ್ರಮುಖ ಸುದ್ದಿ12 mins ago

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ14 mins ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case HD Revanna ready to leave the country SIT issues lookout notice
ಕ್ರೈಂ41 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest46 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ52 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ59 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ1 hour ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ1 hour ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ2 hours ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ5 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌