Seetha Rama Serial: ಚಂದನವನದ ದಿಗ್ಗಜರ ಜತೆ ಬಾಲನಟಿಯಾಗಿ ಮಿಂಚಿದ್ದ ಸಿಂಧೂ ರಾವ್‌ ಕಿರುತೆರೆಗೆ ಎಂಟ್ರಿ! - Vistara News

ಕಿರುತೆರೆ

Seetha Rama Serial: ಚಂದನವನದ ದಿಗ್ಗಜರ ಜತೆ ಬಾಲನಟಿಯಾಗಿ ಮಿಂಚಿದ್ದ ಸಿಂಧೂ ರಾವ್‌ ಕಿರುತೆರೆಗೆ ಎಂಟ್ರಿ!

Seetha Rama Serial: ಬಾಲ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಸಿಂಧೂ ರಾವ್ ಎಂಟ್ರಿ ಕೊಟ್ಟಿದ್ದರು. ವಿಷ್ಣುವರ್ಧನ್, ಅಂಬರೀಶ್, ದೇವರಾಜ್, ರವಿಚಂದ್ರನ್, ಶಿವಣ್ಣ ಸೇರಿದಂತೆ ಹಲವು ನಾಯಕರ ಜತೆ ತೆರೆ ಹಂಚಿಕೊಂಡಿದ್ದರು.

VISTARANEWS.COM


on

Sindhu Rao with her husband
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 1993ರಲ್ಲಿ ತೆರೆ ಕಂಡ ‘ನಾನೆಂದು ನಿಮ್ಮವನೇ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾದ ಸಿಂಧೂ ರಾವ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಸೀತಾ ರಾಮ ಧಾರಾವಾಹಿಯಲ್ಲಿ (Seetha Rama Serial) ನಾಯಕ ರಾಮ್ ಚಿಕ್ಕಮ್ಮನ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದಾರೆ. ಬಾಲ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಸಿಂಧೂ ರಾವ್ ಎಂಟ್ರಿ ಕೊಟ್ಟಿದ್ದರು. ವಿಷ್ಣುವರ್ಧನ್, ಅಂಬರೀಶ್, ದೇವರಾಜ್, ರವಿಚಂದ್ರನ್, ಶಿವಣ್ಣ ಸೇರಿದಂತೆ ಹಲವು ನಾಯಕರ ಜತೆ ತೆರೆ ಹಂಚಿಕೊಂಡಿದ್ದರು.

ವಿದ್ಯಾಭ್ಯಾಸದತ್ತ ಗಮನ ಹರಿಸಲು ಕೆಲವು ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ಸಿಂಧು ನಾಯಕಿಯಾಗಿ ಅವಕಾಶಗಳಿಗೆ ಎದುರು ನೋಡಿದರೂ ಅದು ಸಾಧ್ಯವಾಗಲಿಲ್ಲ. ಟಿ ಸಿಂಧು ರಾವ್ ಅವರ ಕುಟುಂಬದಲ್ಲಿ ಯಾರೂ ಕಲಾವಿದರಲ್ಲ.

‘ನಾನೆಂದು ನಿಮ್ಮವನೇ’, ‘ರಾಯರು ಬಂದರು ಮಾವನ ಮನೆಗೆ’, ‘ಮಿಸ್ಟರ್ ಮಹೇಶ್ ಕುಮಾರ್’, ‘ಮದರ್ ಇಂಡಿಯಾ’, ‘ಆಯುಧ’, ‘ರಾಜ ಮಾರ್ತಾಂಡ’, ‘ಕಲಾವಿದ’, ‘ಪುಟ್ಮಲ್ಲಿ’, ‘ಒಂದಾಗೋಣ ಬಾ’, ‘ಮೌನರಾಗ’ ಹೀಗೆ ಸಾಲು ಸಾಲು ಚಿತ್ರಗಳಲ್ಲಿ ಸಿಂಧು ಬಾಲನಟಿಯಾಗಿ ಕಾಣಿಸಿಕೊಂಡರು. ‘ಮೌನರಾಗ’ ಚಿತ್ರಕ್ಕೆ 1996-97ರಲ್ಲಿ ಆಕೆಗೆ ರಾಜ್ಯ ಪ್ರಶಸ್ತಿ ಕೂಡ ಸಿಕ್ಕಿತ್ತು. ಆ ಕಾರಣಕ್ಕೆ ನಾಯಕಿ ಅವಕಾಶ ಸಿಗಲಿಲ್ಲ ಹತ್ತನೇ ತರಗತಿ ವೇಳೆಗೆ ಓದಿನ ಕಡೆಗೆ ಗಮನ ಕೊಡಬೇಕು ಎಂದು ನಟನೆ ನಿಲ್ಲಿಸಿದ್ದರು.

ಇದನ್ನೂ ಓದಿ: Seetha Rama Serial: ಪ್ರೇಕ್ಷಕರ ಅಚ್ಚುಮೆಚ್ಚಿನ `ಸೀತಾ ರಾಮ’ ಧಾರಾವಾಹಿಯ ಸಿಹಿ ಕನ್ನಡದವಳಲ್ಲ!

ಇದನ್ನೂ ಓದಿ: Seetha Raama Serial: ಸೀತಾ ರಾಮ ಧಾರಾವಾಹಿಯಲ್ಲಿ ಸೃಜನ್‌ ಲೋಕೇಶ್‌ ಅಕ್ಕ ಪೂಜಾರ ಪಾತ್ರವೇನು?

2017ರಲ್ಲಿ ಮಹೇಶ್ ರಾಮಕೃಷ್ಣಯ್ಯ ಎಂಬುವರನ್ನು ವಿವಾಹವಾದರು. ಪತಿ ಮಹೇಶ್, ಏರೋಬಿಕ್ ಇನ್ಸ್ಟ್ರಕ್ಟರ್, ಆಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕೋವಿಡ್‌ಗೂ ಮುನ್ನ ಸಿಂಧು ಅವರು ‘ಗುಬ್ಬಿ ಮರಿ’ ಸಿನಿಮಾದಲ್ಲಿ ನಟಿಸಿದರು. ಕಮ್ ಬ್ಯಾಕ್ ಮಾಡಬೇಕು ಎಂದು ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ನಟಿಸಿದರು. ಈಗ ‘ಸೀತಾರಾಮ’ ಧಾರಾವಾಹಿ ಮೂಲಕ ರೀಎಂಟ್ರಿ ಕೊಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Munawar Faruqui: ಹಿಂದಿಯ ಬಿಗ್ ಬಾಸ್ 17ನೇ (Bigg Boss 17) ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು. ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Munawar Faruqui hospitalised Bigg Boss 17 winner
Koo

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುನಾವರ್ ಸ್ನೇಹಿತರೊಬ್ಬರು ಮೇ 24ರಂದು ಆಸ್ಪತ್ರೆಯ ಬೆಡ್‌ನಲ್ಲಿ ಮುನಾವರ್‌ ಮಲಗಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಮುನಾವರ್ ಅವರ ಸ್ನೇಹಿತ ನಿತಿನ್ ಮೆಂಘಾನಿ ಅವರು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಮುನಾವರ್ ಆಸ್ಪತ್ರೆಯಲ್ಲಿರುವ ಫೋಟೊ ವನ್ನು ಹಂಚಿಕೊಂಡಿದ್ದಾರೆ. ನಿತಿನ್ ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿ, “ನನ್ನ ಸಹೋದರ ಮುನಾವರ್‌ಗೆ ದೇವರು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. ಶೀಘ್ರದಲ್ಲೇ ಗುಣಮುಖರಾಗಲಿ.”ಎಂದು ಬರೆದುಕೊಂಡಿದ್ದಾರೆ. ಇನ್ನು ಮುನಾವರ್ ಕೂಡ ರಿಕವರ್‌ ಮೋಡ್‌ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಮೇಲೆ ಮೊಟ್ಟೆ ಎಸೆತ!

ಏ. 10) ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

ಹಿಂದಿಯ ಬಿಗ್ ಬಾಸ್ 17ನೇ (Bigg Boss 17) ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು. ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ಮುನಾವರ್‌ ಕೂಡ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ʻನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆʼʼ ಎಂದಿದ್ದರು.

Continue Reading

ಕಿರುತೆರೆ

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Shreerastu Shubhamastu Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀರಸ್ತು ಶುಭಮಸ್ತು ಕನ್ನಡ ಸೀರಿಯಲ್‌ ಸಾಕಷ್ಟು ಪ್ರೇಕ್ಷಕರ ಗಮನ ಸೆಳೆದಿದೆ. ಈ ಸಿರೀಯಲ್‌ನಲ್ಲಿ ಖಳನಾಯಕಿ ಶಾರ್ವರಿ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತ್ತು.ಈಗ ನೇತ್ರಾ ಜಾಧವ್ ಅವರು ಧಾರಾವಾಹಿಯಿಂದ ಹೊರ ನಡೆದಿದ್ದು, ಸದ್ಯ ನಟಿ ಸ್ವಪ್ನ ದೀಕ್ಷಿತ್ ಅವರು ಶಾರ್ವರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Shreerastu Shubhamastu Serial Netra Jadhav out
Koo

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.

ಧಾರಾವಾಹಿಯಲ್ಲಿ ದೆಹಲಿಗೆ ಹೋಗಿ ಬರುತ್ತೇನೆ ಎಂದು ಹೊರಟʻ ಶಾರ್ವರಿʼ, ವಾಪಸ್ ಬಂದಿದ್ದು, ಸ್ವಪ್ನಾ ದೀಕ್ಷಿತ್ ಆಗಿ.

ಈಗ ನೇತ್ರಾ ಜಾಧವ್ ಅವರು ಧಾರಾವಾಹಿಯಿಂದ ಹೊರ ನಡೆದಿದ್ದು, ಸದ್ಯ ನಟಿ ಸ್ವಪ್ನ ದೀಕ್ಷಿತ್ ಅವರು ಶಾರ್ವರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ರಥ ಸಪ್ತಮಿ, ಸುಂದರಿ, ಸಾಗುತ ದೂರ ದೂರ , ಆಕೃತಿ ಹೀಗೆ ಕನ್ನಡ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು ನೇತ್ರಾ.

ಶ್ರೀರಸ್ತು ಧಾರಾವಾಹಿಯಲ್ಲಿ ಶಾರ್ವರಿ ಪಾತ್ರ ಹೇಗೆಂದರೆ ಮುಂದೆ ಒಳ್ಳೆಯವರಂತೆ ನಟಿಸುತ್ತ, ಒಳಗೊಳಗೆ ಪಿತೂರಿ ಮಾಡುವ ಪಾತ್ರ. ಇಷ್ಟು ದಿನ ಶಾರ್ವರಿ ದೆಹಲಿಯಲ್ಲಿರುವ ತಮ್ಮ ಕಂಪನಿಯಲ್ಲಿ ಸಮಸ್ಯೆ ಆಗಿತ್ತು ಎಂಬ ಕಾರಣಕ್ಕೆ ಮಾಧವ್ ಬದಲು ತಾನು ಹೋಗಿರುತ್ತಾಳೆ. ಇದೀಗ ಮತ್ತೆ ಮನೆಗೆ ವಾಪಸ್‌ ಆಗಿದ್ದಾಳೆ.

Continue Reading

ಕಿರುತೆರೆ

Ninagagi Serial: ‘ಬೃಂದಾವನ’ ಧಾರಾವಾಹಿ ಅಂತ್ಯ; ದಿವ್ಯಾ ಉರುಡುಗ ಜತೆ ‘ನಿನಗಾಗಿ’ ಎಂದ ʻಗಿಣಿರಾಮʼನಟ!

Ninagagi Serial: ‘ನಿನಗಾಗಿ’ ಧಾರಾವಾಹಿ ಮೇ 27ನೇ ತಾರೀಖಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಧಾರಾವಾಹಿಗೆ ಸಂಪೃಥ್ವಿ ನಿರ್ದೇಶನವಿದೆ. ಈ ಹಿಂದೆ ಇವರು ‘ನಮ್ಮನೆ ಯುವರಾಣಿ’, ‘ಹೂಮಳೆ’, ‘ನಮ್ಮ ಲಚ್ಚಿ’ ಸೀರಿಯಲ್ ನಿರ್ದೇಶನ ಮಾಡಿದ್ದರು.

VISTARANEWS.COM


on

Ninagagi Serial Ritvvikk Mathad Divya Uruduga On May 27
Koo

ಬೆಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಈಗಾಗಲೇ ಬೃಂದಾವನ ಧಾರಾವಾಹಿ ಅಂತ್ಯ ಕಂಡಿದೆ. ಹೊಸದೊಂದು ಧಾರಾವಾಹಿ ಬರುತ್ತಿದೆ. ‘ಗಿಣಿರಾಮ’ ಧಾರಾವಾಹಿಯಲ್ಲಿ (Ninagagi Serial) ಹಳ್ಳಿ ಸೊಗಡಿನ ಪಾತ್ರವನ್ನು ಮಾಡಿದ ನಟ ರಿತ್ವಿಕ್ ಮಠದ್ (Ritvvikk Mathad ) ಹಾಗೂ ನಟಿ ದಿವ್ಯಾ ಉರುಡುಗ (Actress Divya Uruduga) , ‘ನಿನಗಾಗಿ’ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿನಗಾಗಿ’ ಧಾರಾವಾಹಿ ಈಗಾಗಲೇ ಪ್ರೋಮೊ ಮೂಲಕ ಬಹಳಷ್ಟು ಸದ್ದು ಮಾಡಿದೆ. ನಟ ರಿತ್ವಿಕ್ ಮಠದ್ ಈ ಧಾರಾವಾಹಿಯಲ್ಲಿ ಬಹಳ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಈ ಧಾರಾವಾಹಿಯಲ್ಲಿ ದಿವ್ಯಾ ಅವರು ನಟಿ ಆಗಿದ್ದರೆ, ಹೆಣ್ಣು ಮಗುವಿನ ತಂದೆ ಆಗಿ ಕಾಣಿಸಿಕೊಳ್ಳುವ ನಟ ರಿತ್ವಿಕ್ ಈ ಧಾರಾವಾಹಿಯಲ್ಲಿ ಸಿಂಗಲ್ ಪೇರೆಂಟ್.

ಪ್ರೋಮೊ ನೋಡಿದರೆ ಈ ಬಾರಿ ರಿತ್ವಿಕ್ ಮಠದ್ ನಿರ್ವಹಿಸುತ್ತಿರುವ ಪಾತ್ರ ಬಹಳ ಪ್ರಬುದ್ಧವಾದದ್ದು. ಇವರ ಕಥೆ ಏನು? ಧಾರಾವಾಹಿ ಕಥೆಯ ನಾಯಕಿಗೂ ಈ ನಾಯಕನಿಗೂ ಯಾವ ರೀತಿ ಪರಿಚಯವಾಗುತ್ತೆ ಸಂಬಂಧ ಯಾವ ರೀತಿ ಮುಂದುವರೆಯುತ್ತದೆ ಎಂಬ ಕುತೂಹಲ ವೀಕ್ಷಕರಿಗೆ ಕಾಡುತ್ತಿದೆ. ‘ನಿನಗಾಗಿ’ ಧಾರಾವಾಹಿ ಮೇ 27ನೇ ತಾರೀಖಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಧಾರಾವಾಹಿಗೆ ಸಂಪೃಥ್ವಿ ನಿರ್ದೇಶನವಿದೆ. ಈ ಹಿಂದೆ ಇವರು ‘ನಮ್ಮನೆ ಯುವರಾಣಿ’, ‘ಹೂಮಳೆ’, ‘ನಮ್ಮ ಲಚ್ಚಿ’ ಸೀರಿಯಲ್ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

Continue Reading

ಪ್ರಮುಖ ಸುದ್ದಿ

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

Udho Udho Shri Renuka Yellamma: ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು.

VISTARANEWS.COM


on

Udho Udho Shri Renuka Yellamma
Koo

ಬೆಂಗಳೂರು: ಕನ್ನಡ ಕಿರುತೆರೆ ಕ್ಷೇತ್ರದ ಜನಪ್ರಿಯ ವಾಹನಿ ಸ್ಟಾರ್ ಸುವರ್ಣ ತನ್ನ ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನಿರಂತರವಾಗಿ ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” (Udho Udho Shri Renuka Yellamma) ಧಾರಾವಾಹಿ ಪ್ರೇಕ್ಷಕರ ಮನಗೆದ್ದು ಯಶಸ್ಸಿನಿಂದ ಸಾಗುತ್ತಿದೆ. ಇದೀಗ “ಸಮಯದ ಕುದುರೆಯನ್ನೇರಿ ಉರುಳಿವೆ ಋತುಗಳು” ಆರಂಭಗೊಂಡಿದ್ದು. ಇನ್ಮುಂದೆ ಹೊಸ ಅಧ್ಯಾಯದೊಂದಿಗೆ ಧಾರಾವಾಹಿಯಲ್ಲಿ ಅನೇಕ ರೋಚಕ ತಿರುವುಗಳು ವೀಕ್ಷಕರಿ ಮನ ಸೆಳೆಯಲಿದೆ.

ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು. ಆದರೆ ಇದೀಗ ಕಥೆಯಲ್ಲಿ ವರ್ಷಗಳುರುಳಿ ರೇಣುಕಾ-ಯಲ್ಲಮ್ಮ ಬಾಲ್ಯದಿಂದ ತಾರುಣ್ಯದ ಕಡೆಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಕಥೆಯಲ್ಲಿನ ರೋಚಕತೆ ಹೆಚ್ಚಾಗಿದೆ.

ಬಾಲ್ಯದಿಂದಲೂ ಕಷ್ಟಗಳನ್ನೇ ಎದುರಿಸುತ್ತಾ ಬಂದಿರುವ ರೇಣುಕಾ-ಯಲ್ಲಮ್ಮರ ಬಾಳಿನಲ್ಲಿ 10 ವರ್ಷಗಳ ಬಳಿಕ ಏನೆಲ್ಲಾ ಆಗಲಿದೆ ? ದುಷ್ಟರಿಂದ ಇನ್ನೆಷ್ಟು ಕಷ್ಟಗಳನ್ನು ಎದುರಿಸಬೇಕಾಗಬಹುದು? ಇವರಿಬ್ಬರ ಬಾಳಿನಲ್ಲಿ ಪ್ರೀತಿಯ ಹೂವು ಅರಳಲಿದೆಯೇ ? ರೇಣುಕಾ ಹಾಗು ಜಮದಗ್ನಿಯ ವಿವಾಹವು ಯಾವಾಗ ? ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಸಂಹಾರಕ್ಕಾಗಿ ದೇವಿ ಅಂಶದ ಎರಡು ಶಕ್ತಿಗಳು ಒಂದಾಗಿ ಕಷ್ಟ ಕೋಟಲೆಗಳನ್ನು ಹೇಗೆ ಎದುರಿಸುತ್ತಾರೆ? ಎಂಬುದು ಈ ಧಾರಾವಾಹಿಯ ಮುಂದಿನ ರೋಚಕ ಕಥಾಹಂದರ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಈಗಾಗಲೇ ನೂತನ ಅಧ್ಯಾಯದ ಚಿತ್ರೀಕರಣ ಶುರುವಾಗಿದ್ದು, ರೇಣುಕೆಯಾಗಿ ಮಹತಿ, ಯಲ್ಲಮ್ಮನ ಪಾತ್ರದಲ್ಲಿ ಅನನ್ಯ ಮೈಸೂರ್ ಅಭಿನಯಿಸುತ್ತಿದ್ದಾರೆ. ಅಮೋಘ ವಿನ್ಯಾಸದ ಸೆಟ್‌ ಮತ್ತು ಗ್ರಾಫಿಕ್ಸ್‌ನಿಂದ ಪ್ರಸಾರವಾಗುತ್ತಿರುವ ಧಾರಾವಾಹಿಯ ಪ್ರೋಮೋಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಹೊಸ ಸವಾಲುಗಳನ್ನು ಎದುರಿಸಲು, ಹೊಸ ಉತ್ಸಾಹದೊಂದಿಗೆ ಬರ್ತಿದ್ದಾರೆ ರೇಣುಕಾ-ಯಲ್ಲಮ್ಮ.”ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Continue Reading
Advertisement
Saree Fashion
ಫ್ಯಾಷನ್50 mins ago

Saree Fashion: ಮಹಿಳೆಯರ ಮನಗೆದ್ದ ಕಟ್‌ ವರ್ಕ್ ಬಾರ್ಡರ್‌ ಪಾರ್ಟಿ ಸೀರೆ

Hardik Pandya
ಕ್ರೀಡೆ1 hour ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ1 hour ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್1 hour ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ1 hour ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್1 hour ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ2 hours ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ2 hours ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ2 hours ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ2 hours ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌