Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು - Vistara News

ಕಿರುತೆರೆ

Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು

ಶಿವಾಂಗಿ ಜೋಶಿ (Shivangi Joshi) ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗುಣಮುಖನಾವಾಗಿ ಬರುತ್ತೇನೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Shivangi Joshi hospitalised due to kidney infection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ (Yeh Rishta Kya Kehlata Hai) ಧಾರಾವಾಹಿ ಖ್ಯಾತಿಯ ನಟಿ ಶಿವಾಂಗಿ ಜೋಶಿ (Shivangi Joshi) ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗುಣಮುಖನಾಗಿ ಬರುತ್ತೇನೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಶಿವಾಂಗಿ ಅವರು ಆಸ್ಪತ್ರೆಗೆ ದಾಖಲಾದ ಫೋಟೊ ಹಂಚಿಕೊಂಡಿದ್ದಾರೆ.

ಇನ್‌ಸ್ಟಾದಲ್ಲಿ ʻʻಎಲ್ಲರಿಗೂ ನಮಸ್ಕಾರ, ಒಂದೆರಡು ದಿನಗಳಿಂದ ನನಗೆ ಕಿಡ್ನಿ ಸೋಂಕಿತ್ತು. ನನ್ನ ಕುಟುಂಬ, ಸ್ನೇಹಿತರು, ವೈದ್ಯರ ಬೆಂಬಲ,ಆಸ್ಪತ್ರೆಯ ಸಿಬ್ಬಂದಿ ಮತ್ತು ದೇವರ ಕೃಪೆಯಿಂದ ಆರೋಗ್ಯವಾಗಿದ್ದೇನೆ. ಶೀಘ್ರದಲ್ಲೇ ಗುಣಮುಖಳಾಗಿ ಬರುತ್ತೇನೆʼʼ ಎಂದು ಬರೆದುಕೊಂಡಿದ್ದಾರೆ. ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳು ಶಿವಾಂಗಿಗೆ ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Prithvi Shaw : ನಟಿ ಸಪ್ನಾ ಗಿಲ್​ ವಿರುದ್ಧ ಕೊಲೆ ಕೇಸ್​ ಕೂಡ ದಾಖಲು, ಮತ್ತೊಮ್ಮೆ ಜೈಲು ಸೇರುವ ಸಾಧ್ಯತೆ?

ಶಿವಾಂಗಿ ಜೋಶಿ ಅವರು 2013ರಲ್ಲಿ ಖೇಲ್ತಿ ಹೈ ಜಿಂದಗಿ ಆಂಖ್ ಮಿಚೋಲಿ ( Khelti Hai Zindagi Aankh Micholi) ಧಾರಾವಾಹಿ ಮೂಲಕ ಕಿರುತೆರೆಗೆ ಪದಾರ್ಪಣೆ ಮಾಡಿದರು. 2016ರಲ್ಲಿ ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ (Yeh Rishta Kya Kehlata Hai) ಮೂಲಕ ಮನೆಮಾತರಾದರು. ಕಳೆದ ವರ್ಷ, ರೋಹಿತ್ ಶೆಟ್ಟಿ ಅವರ ರಿಯಾಲಿಟಿ ಶೋ ʻಖತ್ರೋನ್ ಕೆ ಖಿಲಾಡ-12 ನಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Sonarika Bhadoria: ಗೆಳೆಯ ವಿಕಾಸ್‌ ಪರಾಶರ್‌ ಜತೆ ಸೋನಾರಿಕಾ ಭಡೋರಿಯಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈಗ ವಿಕಾಸ್‌ ಜತೆಗಿನ ಹನಿಮೂನ್‌ನ ಹಾಟ್‌ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

VISTARANEWS.COM


on

Sonarika Bhadoria
Koo

ಇತ್ತೀಚೆಗಷ್ಟೇ ವಿವಾಹವಾದ ಹಿಂದಿ ಕಿರುತೆರೆ ನಟಿ ʻದೇವೋಂಕಾ ದೇವ್‌ ಮಹಾದೇವ್‌ʼ ಸೋನಾರಿಕಾ ಭಡೋರಿಯಾ (Sonarika Bhadoria) ಅದ್ಧೂರಿಯಾಗಿ ವಿವಾಹವಾಗಿದ್ದರು. ಆ ಬಳಿಕ ತಮ್ಮ ಹನಿಮೂನ್‌ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಈಗ ಶೇರ್‌ ಮಾಡಿಕೊಂಡಿದ್ದಾರೆ.

ಸೋನಾರಿಕಾ ಅವರು ಇತ್ತೀಚೆಗೆ ಲೇಯರ್ ಟೈ-ಬ್ಯಾಕ್ ವಿನ್ಯಾಸದೊಂದಿಗೆ ಹೈ-ಕಟ್ ಬಿಕಿನಿಯೊಂದಿಗೆ ಮತ್ತು ಮ್ಯಾಚಿಂಗ್ ಕವರ್-ಅಪ್ ಮ್ಯಾಕ್ಸಿ ಸ್ಕರ್ಟ್‌ನೊಂದಿಗೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಗೆಳೆಯ ವಿಕಾಸ್‌ ಪರಾಶರ್‌ ಜತೆ ಸೋನಾರಿಕಾ ಭಡೋರಿಯಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈಗ ವಿಕಾಸ್‌ ಜತೆಗಿನ ಹನಿಮೂನ್‌ನ ಹಾಟ್‌ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

ಇದೀಗ ನಟಿ ಬೀಚ್‌ನಲ್ಲಿ ಎಂಜಾಯ್‌ ಮಾಡಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಬಹುತೇಕ ಮಂದಿ ಸೋನಾರಿಕಾ ತಮ್ಮ ಹನಿಮೂನ್‌ ಮಾಲ್ಡೀವ್ಸ್‌ನಲ್ಲಿ ಆಚರಿಸಿಕೊಂಡಿದ್ದಾರೆ ಎಂದು ಹೇಳಿದ್ದರೆ, ಇನ್ನೂ ಕೆಲವರು ಇದು ಲಕ್ಷದ್ವೀಪದ ಚಿತ್ರ ಎಂದಿದ್ದಾರೆ.

ಸೋನಾರಿಕಾ (Sonarika Bhadoria) 2015ರಲ್ಲಿ ಜಾದೂಗಾಡು (Jadoogadu) ತೆಲುಗು ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

Continue Reading

ಕಿರುತೆರೆ

Myna Serial Udaya TV: ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ ಭವ್ಯಾ!

Myna Serial Udaya Tv: 90ರ ದಶಕದ ಬಹುಬೇಡಿಕೆಯ ನಟಿ ಭವ್ಯಾ ʻಮೈನಾʼ ಧಾರಾವಾಹಿಗೆ ಎಂಟ್ರಿ ಕೊಟ್ಟಿದ್ದಾರೆ. ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ.

VISTARANEWS.COM


on

Myna Serial Udaya Tv bhavya actress entry
Koo

ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ (Myna Serial Udaya TV) ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ (bhavya actress), ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ ಬರೆದ ಕಾದಂಬರಿʼ, ʻಕೃಷ್ಣ ನೀ ಬೇಗನೆ ಬಾರೋʼ, ʻಕರುಣಾಮಯಿʼ, ʻಹೃದಯಗೀತೆʼ, ʻಮತ್ತೆ ಹಾಡಿತು ಕೋಗಿಲೆʼ, ʻಸಾಂಗ್ಲಿಯಾನʼ ಇತ್ಯಾದಿ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ವಿಷ್ಣುವರ್ಧನ್‌, ಶಂಕರನಾಗ್‌, ಅಂಬರೀಶ್‌, ರವಿಚಂದ್ರನ್ ಮತ್ತಿತರ ದಿಗ್ಗಜ ಕಲಾವಿದರ ಜತೆ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಭವ್ಯಾ, ಟಿವಿ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಇದೇ ಮೊದಲು.

ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ. ಕಟ್ಟುನಿಟ್ಟಾದರೂ ತಾಯಿ ಹೃದಯಿ. ಊರು ಬಿಟ್ಟು ಪರವೂರಿಗೆ ಬಂದಿರುವ ಹೆಣ್ಣುಮಕ್ಕಳೇ ಹೆಚ್ಚಿರುವ ಜಾಗದಲ್ಲಿ ಎಲ್ಲರನ್ನೂ ನಿಯಂತ್ರಿಸುತ್ತ ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತ ಎಲ್ಲರ ಭಾವನೆಗಳಿಗೂ ಬೆಲೆ ಕೊಡುವ ಅಪರೂಪದ ಪಾತ್ರ.

ಇದನ್ನೂ ಓದಿ: Uday Kiran: ದಿವಂಗತ ನಟ ಉದಯ್ ಕಿರಣ್ ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾ ರಿ-ರಿಲೀಸ್‌!

ಮೈನಾ ಜೀವನದಲ್ಲಿ ಹಠಾತ್ತನೆ ಬರುವ ಅನಿರೀಕ್ಷಿತ ತಿರುವು ಕಂಗೆಡಿಸಿದಾಗ ಅವಳಿಗೆ ಆಸರೆಯಾಗಿ ನಿಲ್ಲುತ್ತಾಳೆ ಅರುಂಧತಿ. ಹಾಗೆಯೇ ಇವರ ಮಹಿಳಾ ಹಾಸ್ಟೆಲ್‌ನಲ್ಲಿರುವ ಇತರ ನಾಲ್ಕು ಹೆಣ್ಣುಮಕ್ಕಳೂ ʻಮೈನಾʼ ಧಾರಾವಾಹಿಯ ಮಹತ್ವದ ಪಾತ್ರಗಳಾಗಿ ಬರುತ್ತಾರೆ. ಮಹಿಳಾ ಹಾಸ್ಟೆಲ್‌ ಈ ಧಾರಾವಾಹಿಯಲ್ಲಿ ಒಂದು ಬಹುಮುಖ್ಯ ಅಂಗವೇ ಆಗಿದೆ.
ʻಮೈನಾʼ ಧಾರಾವಾಹಿ ಪ್ರತಿದಿನ (ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದೆ.

ಉದಯ ಟಿವಿಯಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ‘ಕನ್ಯಾದಾನ’, ‘ಗಂಗೆಗೌ’ರಿ, ‘ಅಣ್ಣತಂಗಿ’, ‘ಶಾಂಭವಿ’, ‘ಸೇವಂತಿ’, ‘ರಾಧಿಕಾ’, ‘ಜನನಿ’, ‘ಗೌರಿಪುರದ ಗಯ್ಯಾಳಿಗಳು’ ಹೀಗೆ ಸಾಕಷ್ಟು ವೈವಿಧ್ಯಮಯ ಧಾರಾವಾಹಿಗಳು ಪ್ರಸಾರ ಆಗುತ್ತಿವೆ. ಇದಕ್ಕೆ ಈಗ ಹೊಸ ಧಾರಾವಾಹಿ ʼಮೈನಾʼ ಸೇರ್ಪಡೆ ಆಗಿದೆ.

ಮೈನಾ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ನಟಿಸುತ್ತಿದ್ದಾರೆ. ಈ ಹಿಂದೆ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ನಕ್ಷತ್ರಾ ಎನ್ನುವ ಪಾತ್ರ ಮಾಡಿದ್ದರು. ಟಿ ಎಸ್ ನಾಗಾಭರಣ, ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್, ಸಿದ್ದಾರ್ಥ್, ಪ್ರಭಂಜನ, ಸಾಗರ್, ಹರ್ಷಾರ್ಜುನ್, ಯಶಸ್ವಿನಿ, ಆಶಾ, ಅನುಷಾ ಕುಮಾರಿ, ಮಾಸ್ಟರ್ ಅರುಣ್, ಮಾಸ್ಟರ್ ರಣವೀರ್ ಮುಂತಾದವರು ನಟಿಸುತ್ತಿದ್ದಾರೆ.

Continue Reading

ಕಿರುತೆರೆ

Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

Seetha Raama Serial: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ʼಸೀತಾ ರಾಮʼ ಹಿಂದಿಗೆ ರಿಮೇಕ್‌ ಆಗುತ್ತಿದೆ. ಈ ಧಾರಾವಾಹಿ ಪ್ರೋಮೊ ಹೇಗಿದೆ ನೀವೇ ನೋಡಿ.

VISTARANEWS.COM


on

Seetha Raama Serial
Koo

ಬೆಂಗಳೂರು: ಟಿಆರ್‌ಪಿಯಲ್ಲಿ ಸದಾ ಮುಂಚೂಣಿಯಲ್ಲಿರುವ, ಟಾಪ್‌ 5ರೊಳಗೆ ಸ್ಥಾನ ಪಡೆದುಕೊಳ್ಳುತ್ತಿರುವ ಕನ್ನಡದ ಜನಪ್ರಿಯ ಧಾರಾವಾಹಿ ʼಸೀತಾ ರಾಮʼ (Seetha Raama Serial). ಝೀ ಕನ್ನಡ (Zee Kannada) ವಾಹಿನಿಯಲ್ಲಿ ಈ ಸೀರಿಯಲ್‌ ಪ್ರಸಾರವಾಗುತ್ತಿದೆ. ಸದ್ಯ ಇದು ಹಿಂದಿಗೆ ರಿಮೇಕ್‌ ಆಗುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಸದ್ಯ ಹಿಂದಿ ರಿಮೇಕ್‌ನ ಪ್ರೋಮೊ ಬಿಡುಗಡೆಯಾಗಿದ್ದು, ಗಮನ ಸೆಳೆಯುತ್ತಿದೆ.

ʼಸೀತಾ ರಾಮʼ ಸೀರಿಯಲ್‌ನ ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸದ್ಯ ಯಾವಾಗಿನಿಂದ ಟೆಲಿಕಾಸ್ಟ್‌ ಆಗಲಿದೆ ಎನ್ನುವ ಮಾಹಿತಿ ಗೊತ್ತಾಗಿಲ್ಲ. ಕನ್ನಡದಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಗೌಡ, ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಇನ್ನು ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಬದಲಾವಣೆ ಎಂದರೆ ಸೀತಾ ರಾಮ ಸೀರಿಯಲ್‌ನಲ್ಲಿ ಸೀತಾಗೆ ಸಿಹಿ ಹೆಸರಿನ ಮಗಳಿದ್ದರೆ ‘ಮೇ ಹೂ ಸಾತ್ ತೆರೆ’ಯಲ್ಲಿ ನಾಯಕಿಗೆ ಮಗ ಇರುವುದು ಪ್ರೋಮೊದಲ್ಲಿ ಕಂಡು ಬಂದಿದೆ. ಉಳಿದಂತೆ ಕೊಂಚ ಮಾರ್ಪಾಡಿನೊಂದಿಗೆ ಮೂಲ ಕಥೆಯಂತೆಯೇ ಇದು ಮೂಡಿ ಬರಲಿದೆ.

ಕನ್ನಡವೂ ರಿಮೇಕ್‌

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಫುಲ್ ಹೌಸ್ ಮೀಡಿಯಾ’ ನಿರ್ಮಾಣದ ‘ಮೇ ಹೂ ಸಾತ್ ತೇರೆ’ ಮುಂದಿನ ತಿಂಗಳಿನಿಂದ ಪ್ರಸಾರವಾಗುವ ಸಾಧ್ಯತೆ ಇದೆ.

2023ರ ಜುಲೈ 17ರಿಂದ ಪ್ರಸಾರವಾಗುತ್ತಿರುವ ʼಸೀತಾ ರಾಮʼ ಹಲವು ತಿರುವುಗಳೊಂದಿಗೆ ಪ್ರೇಕ್ಷಕರ ಮನ ರಂಜಿಸುತ್ತಿದೆ. ಮರಾಠಿ, ಕನ್ನಡದಲ್ಲಿ ಹಿಟ್‌ ಆದ ಈ ಧಾರಾವಾಹಿಯನ್ನು ಹಿಂದಿಯ ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 5ನಲ್ಲಿ ಇಲ್ಲ ʻಶ್ರೀರಸ್ತು ಶುಭಮಸ್ತುʼ: ರೇಸ್‌ಗಿಳಿದ ʻರಾಮಾಚಾರಿʼ!

ಕಳೆದ ವಾರ ಬಿಡುಗಡೆಯಾದ ಟಿಆರ್‌ಪಿ ಪಟ್ಟಿಯಲ್ಲಿ ʼಸೀತಾ ರಾಮʼ ಆರನೇ ಸ್ಥಾನದಲ್ಲಿತ್ತು. ಅದಕ್ಕೂ ಹಿಂದಿನ ವಾರ ನಾಲ್ಕನೇ ಸ್ಥಾನದಲ್ಲಿತ್ತು. ಮೊದಲ ಸ್ಥಾನಕ್ಕಾಗಿ ಸದ್ಯ ಝೀ ಕನ್ನಡ ವಾಹಿನಿಯ ‘ಪುಟ್ಟಕ್ಕನ ಮಕ್ಕಳು’ ಮತ್ತು ʼಲಕ್ಷ್ಮೀ ನಿವಾಸʼ ಸೀರಿಯಲ್‌ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ

Colors Kannada: ಕಿರುತೆರೆಗೆ ʼಬೆಳ್ಳುಳ್ಳಿ ಕಬಾಬ್ʼ ಚಂದ್ರು; ರಾವುಲ್ಲಾ ಮಾಲೀಕನ ಒನ್‌ ಮೋರ್‌ ಕಾರ್ಯಕ್ರಮ ಯಾವಾಗ?

Colors Kannada: ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಪ್ರಿಯ ಅಡುಗೆ ಕಾರ್ಯಕ್ರಮ ‘ಸವಿರುಚಿ’ ಸದ್ಯದಲ್ಲೇ ಆರಂಭವಾಗಲಿದೆ. ಈ ಕಾರ್ಯಕ್ರಮದ ಪ್ರೋಮೊ ರಿಲೀಸ್‌ ಆಗಿದೆ.

VISTARANEWS.COM


on

colors kannada
Koo

ಬೆಂಗಳೂರು: ಕನ್ನಡಿಗರಿಗೆ ಸ್ವಾದಿಷ್ಟ ಮನರಂಜನೆಯನ್ನು ಉಣಬಡಿಸುತ್ತಾ ಬಂದಿರುವ ಕಲರ್ಸ್ ಕನ್ನಡ (Colors Kannada) ಚಾನಲ್‌ ತನ್ನ ಜನಪ್ರಿಯ ಅಡುಗೆ ಕಾರ್ಯಕ್ರಮ ‘ಸವಿರುಚಿ’ (Saviruchi)ಯನ್ನು ಮತ್ತೆ ಆರಂಭಿಸಲಿದೆ.

ಯುಗಾದಿಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂತೆ ‘ಸವಿರುಚಿ’ಯ ಹೊಸ ಕಂತುಗಳು ಮೂಡಿ ಬರಲಿವೆ. ಏಪ್ರಿಲ್ 9ರಂದು ಆರಂಭವಾಗಲಿರುವ ‘ಸವಿರುಚಿ’ಯ ಹೊಸ ಸೀಸನ್‌ನ ನೀವು ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಿಸಬಹುದು.

ಹೊಸ ಸೀಸನ್ ‘ಸವಿರುಚಿ’ಯಲ್ಲಿ ಹಲವು ಹೊಸ ಅಂಶಗಳು ಇರಲಿವೆ. ಕರ್ನಾಟಕದ ಮೂಲೆಮೂಲೆಗಳ ಪಾಕ ಪ್ರವೀಣರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆಮೂಲೆಗಳಿಗೆ ತೆರಳಿ ಅಲ್ಲಿನ ಸಾಂಪ್ರದಾಯಿಕ ಅಡುಗೆಯನ್ನು ಪರಿಚಯಿಸುವುದರಿಂದಾಗಿ ಈ ಸೀಸಸ್‌ ಅನ್ನು ವೀಕ್ಷಕರಿಗೆ ಮತ್ತಷ್ಟು ಹತ್ತಿರವಾಗಲಿದೆ.

ಯುಗಾದಿ ಹಬ್ಬದ ದಿನವೇ ಹೊಸ ಸೀಸನ್ ಶುರುವಾಗುತ್ತಿರುವುದರ ಬಗ್ಗೆ ಮಾತನಾಡಿದ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ʼ‘ಹಬ್ಬ ಅಂದರೆ ಕುಟುಂಬದ ಎಲ್ಲರೂ ಒಟ್ಟಿಗೆ ಸೇರಿ ರುಚಿರುಚಿಯಾದ ಅಡುಗೆಯನ್ನು ಆನಂದಿಸುವುದು. ಈ ಯುಗಾದಿಯ ಸಡಗರವನ್ನು ‘ಸವಿರುಚಿ’ಯ ಹೊಸ ಸೀಸನ್ ಇನ್ನಷ್ಟು ರಸವತ್ತಾಗಿಸಲಿದೆʼ’ ಎಂದರು. ‘ʼನಮ್ಮ ವೀಕ್ಷಕರೆಲ್ಲರೂ ನಮ್ಮ ಕುಟುಂಬದವರೇ, ಅವರೆಲ್ಲರಿಗೂ ಯುಗಾದಿಯ ಶುಭಾಶಯ ಕೋರುತ್ತಾ ಉಡುಗೊರೆಯಾಗಿ ‘ಸವಿರುಚಿ’ಯ ಹೊಸ ಸೀಸನ್ನನ್ನು ಅವರಿಗೆ ನೀಡುತ್ತಿದ್ದೇವೆʼ’ ಎಂದು ಅವರು ಹೇಳಿದರು.

‘ನನ್ನಮ್ಮ ಸೂಪರ್ ಸ್ಟಾರ್’ ಖ್ಯಾತಿಯ ಜಾಹ್ನವಿ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಅವರ ಜತೆಗೆ ಇತ್ತೀಚೆಗೆ ʼಬೆಳ್ಳುಳ್ಳಿ ಕಬಾಬ್ʼ ಮೂಲಕ ಎಲ್ಲೆಡೆ ಜನಪ್ರಿಯರಾಗಿರುವ ಬಿ.ಕೆ.ಚಂದ್ರು ಕೂಡ ಇರುವುದು ಮಜವನ್ನು ಮತ್ತೊಂದು ಹಂತಕ್ಕೆ ಏರಿಸಲಿದೆ.

ಇದನ್ನೂ ಓದಿ: Sonu Srinivas Gowda: ಸೋನು ಗೌಡ ದತ್ತು ಪಡೆದ ಪ್ರಕರಣ; ಮಗುವಿನ ಪಾಲಕರಿಗೂ ಸಂಕಷ್ಟ; ಕಾನೂನು ಏನು ಹೇಳುತ್ತದೆ?

‘ಸವಿರುಚಿ’ಯಲ್ಲಿ ಬರೀ ಅಡುಗೆ ಮಾಡುವುದಷ್ಟೇ ಅಲ್ಲದೆ, ಅದರ ಪೌಷ್ಟಿಕತೆಯ ಕುರಿತು ತಜ್ಞರ ಅಭಿಪ್ರಾಯಗಳೂ ಇರುವುದು ಈ ಕಾರ್ಯಕ್ರಮವನ್ನು ವಿಶೇಷಗೊಳಿಸಲಿವೆ. ಈಗಾಗಲೇ ಒಂದು ಚೆಂದದ ಕಾರ್ಯಕ್ರಮದ ಪರಿಮಳ ನಿಮ್ಮ ಮೂಗಿಗೆ ಬರತೊಡಗಿದ್ದರೆ ಏಪ್ರಿಲ್ 9ರ ಮಧ್ಯಾಹ್ನ 12 ಗಂಟೆಗೆ ಕಲರ್ಸ್ ಕನ್ನಡ ನೋಡಲು ಮರೆಯಬೇಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Summer Nail Colours Trend
ಫ್ಯಾಷನ್17 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202422 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು27 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ38 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ59 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 20241 hour ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು1 hour ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 20241 hour ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌