Star Suvarna: ಸಿಗಂದೂರು ದೇವಸ್ಥಾನದಲ್ಲಿ 'ಸುವರ್ಣ ಅಖಂಡ ದೀಪ'ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ' ಧಾರಾವಾಹಿ ತಂಡದ ಕೊಡುಗೆ - Vistara News

ಕಿರುತೆರೆ

Star Suvarna: ಸಿಗಂದೂರು ದೇವಸ್ಥಾನದಲ್ಲಿ ‘ಸುವರ್ಣ ಅಖಂಡ ದೀಪ’ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದ ಕೊಡುಗೆ

Star Suvarna: ಸ್ಟಾ‌ರ್ ಸುವರ್ಣ ವಾಹಿನಿಯಲ್ಲಿ ಕಳೆದ ಜುಲೈ 1 ರಿಂದ ಪ್ರಸಾರವಾಗುತ್ತಿರುವ “ಶ್ರೀ ದೇವೀ ಮಹಾತ್ಮೆ” ಎಂಬ ಪೌರಾಣಿಕ ಧಾರಾವಾಹಿಗೆ ಮೊದಲ ದಿನದಿಂದಲೇ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ‌ ಹಿನ್ನೆಲೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಲೋಕ ಕಲ್ಯಾಣಾರ್ಥವಾಗಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸುವರ್ಣ ಅಖಂಡ ದೀಪವನ್ನು ಸ್ಥಾಪಿಸಿದೆ.

VISTARANEWS.COM


on

Star Suvarna Akhand Deepa at Sigandur Sri Chaudeshwari Temple Shri Devi Mahatme serial team contribution
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಗರ ತಾಲೂಕಿನ ಶ್ರೀ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ‘ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದಿಂದ ಸ್ಥಾಪಿಸಲಾಗಿರುವ ‘ಸುವರ್ಣ ಅಖಂಡ ದೀಪ’ಕ್ಕೆ “ಸುವರ್ಣ ಸಂಕಲ್ಪ” ಕಾರ್ಯಕ್ರಮ (Star Suvarna) ಖ್ಯಾತಿಯ ವಿದ್ವಾನ್ ಡಾ. ಗೋಪಾಲ ಕೃಷ್ಣ ಶರ್ಮ ಹಾಗು ಧರ್ಮದರ್ಶಿಗಳಾದ ರಾಮಪ್ಪನವರ್ ಪುತ್ರ ರವಿಕುಮಾರ್ ಅವರು ಚಾಲನೆ ನೀಡಿದರು.

ಸ್ಟಾ‌ರ್ ಸುವರ್ಣ ವಾಹಿನಿಯಲ್ಲಿ ಕಳೆದ ಜುಲೈ 1 ರಿಂದ ಪ್ರಸಾರವಾಗುತ್ತಿರುವ “ಶ್ರೀ ದೇವೀ ಮಹಾತ್ಮೆ” ಎಂಬ ಪೌರಾಣಿಕ ಧಾರಾವಾಹಿಗೆ ಮೊದಲ ದಿನದಿಂದಲೇ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ‌ ಹಿನ್ನೆಲೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಲೋಕ ಕಲ್ಯಾಣಾರ್ಥವಾಗಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸುವರ್ಣ ಅಖಂಡ ದೀಪವನ್ನು ಸ್ಥಾಪಿಸಿದೆ. ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶ್ರೀ‌ ಸಿಗಂದೂರು ಚೌಡೇಶ್ವರಿ ದೇವಾಲಯ ಸಮಿತಿ ಕಾರ್ಯದರ್ಶಿ ರವಿಕುಮಾರ್ ದೀಪ ಬೆಳಗಿಸುವ ಮೂಲಕ ಅಖಂಡ ದೀಪವನ್ನು ಉದ್ಘಾಟಿಸಿದರು.

ಇದನ್ನೂ ಓದಿ: Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಇದಕ್ಕೂ‌ ಮುನ್ನ‌ ವೇದಿಕೆ ಮೇಲೆ ಉಪಸ್ಥಿತರಿದ್ದ ಗೋಪಾಲಕೃಷ್ಣ ಶರ್ಮ ಗುರೂಜಿ ಮಾತನಾಡಿ ಶ್ರೀದೇವಿಯ ಅವತಾರಗಳ‌ ಬಗ್ಗೆ, ಇಂದಿನಿಂದ ನಿರಂತರವಾಗಿ ಪ್ರಜ್ವಲಿಸರುವ ಅಖಂಡ ದೀಪದ ಬಗ್ಗೆ ವಿವರಣೆ ನೀಡಿದರು. ಜೊತೆಗೆ ಸುವರ್ಣ ವಾಹಿನಿಯು ಲೋಕ ಕಲ್ಯಾಣಾರ್ಥವಾಗಿ, ಸುವರ್ಣ ವಾಹಿನಿಯ ವೀಕ್ಷಕರಿಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸುತ್ತಾ ಹಾಗು ಶ್ರೀ ದೇವೀ ಮಹಾತ್ಮೆಯು ಇನ್ನಷ್ಟು ಪ್ರಖ್ಯಾತಿ ಪಡೆಯಲಿ ಎಂದು ಈ “ಸುವರ್ಣ ಅಖಂಡ ದೀಪ”ವನ್ನು ಸ್ಥಾಪಿಸಿ ಬೆಳಗಿಸಲಾಗುತ್ತಿದೆ ಎಂದರು. ನಂತರ ‘ಶ್ರೀ ದೇವೀ ಮಹಾತ್ಮೆ’ ಧಾರಾವಾಹಿಯ ನಿರ್ಮಾಪಕ ಅರವಿಂದ್ ಮಾತನಾಡಿ, ಇದು ನಮ್ಮ ಸಂಸ್ಥೆಯ ನಿರ್ಮಾಣದ ಮೂರನೇ ಧಾರಾವಾಹಿ. ಮೊದಲು ಆರಂಭಿಸಿದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಈಗಾಗಲೇ 1000 ಕಂತುಗಳನ್ನು ಮುಗಿಸಿದೆ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಈಗಾಗಲೇ 500 ಕಂತುಗಳನ್ನು ಮುಗಿಸಿದೆ. ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ, ಚಿತ್ರೀಕರಣಗೊಳ್ಳುತ್ತಿರುವ ಈ ಧಾರಾವಾಹಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ‌ ನೆಲದ ಕಥೆಗಳನ್ನು ನಮ್ಮ ಜನರಿಗೆ ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ. ಈಗ ‘ಶ್ರೀ ದೇವೀ ಮಹಾತ್ಮೆ’ ಧಾರಾವಾಹಿಯು ಸೋಮವಾರದಿಂದ ಶನಿವಾರ ರಾತ್ರಿ 7 ಗಂಟೆಗೆ ಪ್ರಸಾರವಾಗುತ್ತಿದೆ ಎಂದರು.

ಇನ್ನು ಶಿವನ ಪಾತ್ರಧಾರಿ ನಟ ಅರ್ಜುನ್ ರಮೇಶ್ ಮಾತನಾಡಿ, ʻʻಈಗಾಗಲೇ ನನಗೆ ಮೂರು ಸಲ ಶಿವನ ಪಾತ್ರಕ್ಕೆ ಬಣ್ಣ ಹಚ್ಚುವ ಅವಕಾಶ ಸಿಕ್ಕಿದೆ, ಸಣ್ಣ ಗರ್ವ ಜೊತೆಗೆ ಹೆಮ್ಮೆಯೂ ಇದೆ. ಆಧುನಿಕ ಯುಗದಲ್ಲಿ ಜನ ಪೌರಾಣಿಕ ಧಾರಾವಾಹಿಗಳನ್ನು ಬೆಂಬಲಿಸಬೇಕಿದೆ. ಆದರೆ ಪಾತ್ರಕ್ಕೆ ವೇಷಭೂಷಣ ತೊಟ್ಟು ಗಂಟೆಗಟ್ಟಲೆ ಚಿತ್ರೀಕರಣಕ್ಕೆ ನಿಲ್ಲುವ ಕಲಾವಿದರ ಕಷ್ಟ ಜನರಿಗೆ ಅರ್ಥವಾಗಲ್ಲ. ಆದರೆ ನನ್ನ ಪಾತ್ರವನ್ನು ಜನರು ಮೆಚ್ಚಿಕೊಂಡಿರುವುದು ಖುಷಿ ಕೊಟ್ಟಿದೆ ಎಂದರು. ನಂತರ ಪಾರ್ವತಿ ಪಾತ್ರಧಾರಿ ನಟಿ ಜೀವಿತಾ ವಸಿಷ್ಠ ಮಾತನಾಡಿ, ಶ್ರೀದೇವಿಯ ಪಾತ್ರ ಮಾಡೋ ಅವಕಾಶ ನನಗೆ ಸಿಕ್ಕಿರುವುದೇ ನನ್ನ ಜೀವನದ ದೊಡ್ಡ ಪುಣ್ಯ. ಯಾವುದೇ ಒತ್ತಡವಿಲ್ಲದೆ ಕೆಲಸ ಮಾಡುತ್ತಿರುವೆ. ಎಲ್ಲರೂ ಸಪೋರ್ಟ್ ಮಾಡುತ್ತಿದ್ದಾರೆ. ಶ್ರೀ ದೇವೀ ಮಹಾತ್ಮೆ ಧಾರಾವಾಹಿಯನ್ನು ಸೋಮವಾರದಿಂದ ಶನಿವಾರ ರಾತ್ರಿ 7 ಗಂಟೆಗೆ ಎಲ್ಲರೂ ನೋಡುವಂತೆʼʼ ಕೋರಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

Kannada Serials TRP: . ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ.

VISTARANEWS.COM


on

Kannada Serials TRP Lakshmi Nivas in Top 3 Lakshmi Baramma at fifth position
Koo

ಬೆಂಗಳೂರು: 28ನೇ ವಾರದ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (Kannada Serials TRP) (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಭರ್ಜರಿ ಟಿಆರ್‌ಪಿ ಪಡೆದು ಎರಡನೇ ಸ್ಥಾನ ಪಡೆದ ‘ಸೀತಾ ರಾಮ’; ಟ್ರ್ಯಾಕ್‌ಗೆ ಮರಳಿದ ʻಅಮೃತಧಾರೆʼ!

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಲಕ್ಷ್ಮೀ ನಿವಾಸ ಧಾರಾವಾಹಿ

ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. 

ಸೀತಾ ರಾಮ

ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.  ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಇದಕ್ಕೆ ಕಾರಣ ಆಗಿರೋದು ಸೀತಾ ಹಾಗೂ ರಾಮನ ಮದುವೆ. ನಗರ ಭಾಗದಲ್ಲಿ ಈ ಧಾರಾವಾಹಿ ಒಂದನೇ ಸ್ಥಾನ ಪಡೆದುಕೊಂಡಿದೆ. ಮದುವೆ ಬಳಿಕ ಟ್ವಿಸ್ಟ್​ಗಳು ಸಿಕ್ಕರೆ ಧಾರಾವಾಹಿ ಟಿಆರ್​ಪಿ ಮತ್ತಷ್ಟು ಹೆಚ್ಚಲಿದೆ.

ಲಕ್ಷ್ಮೀ ಬಾರಮ್ಮ

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಈ ಧಾರಾವಾಹಿ ಹಲವು ದಿನಗಳಿಂದ ಟಾಪ್ ಐದರಲ್ಲಿ ಬಂದಿರಲಿಲ್ಲ. ಈ ಧಾರಾವಾಹಿಯನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. 

Continue Reading

ಕಿರುತೆರೆ

Neenade Naa Serial: ರಿಯಲ್‌ ಲೈಫಲ್ಲೂ ಒಂದಾಗ್ತಿದ್ದಾರಾ ವಿಕ್ರಂ-ವೇದಾ? ಮದುವೆ ಯಾವಾಗ?

Neenade Naa Serial: ಅಭಿಮಾನಿಗಳು ಕೂಡ ಇಬ್ಬರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಪೇಜ್‌ಗಳನ್ನು ಕ್ರಿಯೇಟ್ ಮಾಡಿದ್ದಾರೆ. ಇದೀಗ  “ನೀನಾದೆ ನಾ” (Neenade Naa Serial) ಧಾರಾವಾಹಿ ನಟ ನಟಿ ವಿಕ್ರಂ-ವೇದಾ ಇಬ್ಬರ ನಡುವೆ ಲವ್ವಾಗಿದೆ, ಮುಂದೆ ಇಬ್ಬರೂ ಮುದುವೆಯಾಗಲಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.

VISTARANEWS.COM


on

Neenade Naa Serial Dileep R Shetty khushi will be marry in real life
Koo

ಬೆಂಗಳೂರು: ಕೆಲ ಸಿನಿಮಾ ನಟನ ನಟಿಯರು ತೆರೆ ಮೇಲೆ ಒಂದಾಗಿರುವುದಲ್ಲದೇ ರಿಯಲ್‌ ಲೈಫ್‌ನಲ್ಲಿಯೂ ಒಂದಾಗಿರುವ ಅದೆಷ್ಟೋ ಉದಾಹರಣೆಗಳಿವೆ. ಜತೆಗೆ ವೀಕ್ಷಕರಿಗೂ ನಟ ನಟಿಯ ಜೋಡಿ ಇಷ್ಟವಾದರೆ ರಿಯಲ್‌ ಲೈಫ್‌ನಲ್ಲಿಯೂ ಒಂದಾಗಿ ಎಂದು ಆಶಿಸುತ್ತಾರೆ. ಇದೀಗ  “ನೀನಾದೆ ನಾ” (Neenade Naa Serial) ಧಾರಾವಾಹಿ ನಟ ನಟಿ ವಿಕ್ರಂ-ವೇದಾ ಇಬ್ಬರ ನಡುವೆ ಲವ್ವಾಗಿದೆ, ಮುಂದೆ ಇಬ್ಬರೂ ಮುದುವೆಯಾಗಲಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.

ಈ ಜೋಡಿಯ ಮತ್ತೊಂದು ಸ್ಪೆಷಾಲಿಟಿ ಅಂದರೆ ಇದರಲ್ಲಿ ವಿಕ್ರಂ ಪಾತ್ರ ಮಾಡೋ ದಿಲೀಪ್ ಆರಡಿ ಕಟೌಟ್‌ . ಆದರೆ ವೇದಾ ಮಾತ್ರ ಕುಳ್ಳಿ. ವೇದಾ ಪಾತ್ರಧಾರಿ ಖುಷಿ, ವಿಕ್ರಂ ಪಾತ್ರ ಮಾಡುತ್ತಿರುವುದು ದಿಲೀಪ್‌. ಇದೀಗ ಇವರಿಬ್ಬರ ನಟನೆಗೆ ಹಾಗೇ ಜೋಡಿಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಕೆಲ ದಿನಗಳ ಹಿಂದೆ ತೆಲುಗು ಕಾರ್ಯಕ್ರಮಕ್ಕೆ ದಿಲೀಪ್ ಅವರ ವಿಶೇಷ ಸ್ನೇಹಿತೆ ಎಂದು ಸಪ್ರೈಸ್‌ ಆಗಿ ಖುಷಿ ಅವರನ್ನು ಆಹ್ವಾನಿಸಲಾಗಿತ್ತು. ಇಬ್ಬರ ಪ್ರೀತಿಗೆ ಬಿದ್ದಿದ್ದಾರೆ ಎನ್ನುವ ಚರ್ಚೆ ಕೂಡ ಶುರುವಾಗಿತ್ತು.

ಅಭಿಮಾನಿಗಳು ಕೂಡ ಇಬ್ಬರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಪೇಜ್‌ಗಳನ್ನು ಕ್ರಿಯೇಟ್ ಮಾಡಿದ್ದಾರೆ. ನೀವಿಬ್ಬರು ನಿಜಜೀವನದಲ್ಲಿ ಒಂದಾದರೆ ಚೆನ್ನಾಗಿರುತ್ತದೆ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.ಸ್ವತಃ ದಿಲೀಪ್ ಶೆಟ್ಟಿ ಈ ಚರ್ಚೆ ಬಗ್ಗೆ ಮಾತನಾಡಿದ್ದಾರೆ. ಯಾಕೆ ರಿಯಲ್‌ ಲೈಫ್‌ನಲ್ಲೂ ಜೋಡಿ ಆಗಬಾರದು? ಎನ್ನುವ ಪ್ರಶ್ನೆಗೆ “ಅದೆಲ್ಲಾ ವಿಧಿ. ಡೆಸ್ಟಿನಿಯಲ್ಲಿ ಏನು ಬರೆದಿರುತ್ತಾರೆ? ಅದೇ ಆಗುವುದು. ನೋಡೋಣ, ಡೆಸ್ಟಿನಿ ಏನು ಹೇಳುತ್ತದೆ” ಎಂದು ಹೇಳಿ ದಿಲೀಪ್‌ ನಕ್ಕಿದ್ದಾರೆ.

ಇದನ್ನೂ ಓದಿ: Neenade Naa Serial: ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನ ಹೊಚ್ಚ ಹೊಸ ಧಾರಾವಾಹಿ ‘ನೀನಾದೆ ನಾ’

 ‘ನೀನಾದೆ ನಾ’ ಧಾರಾವಾಹಿ

ವಿದ್ಯಾಭ್ಯಾಸ ಮುಗಿಸಿದರು ಕೂಡ ಸಂಸ್ಕಾರ-ಸಂಸ್ಕೃತಿ, ಆಚಾರ-ವಿಚಾರಗಳನ್ನು ಪರಿಪಾಲಿಸುವಲ್ಲಿ ಸದಾ ಮುಂದೆ ಈ ಕಥಾ ನಾಯಕಿ ‘ವೇದಾ’. ಅಜ್ಜಿಯ ಪ್ರೀತಿಯ ಮೊಮ್ಮಗಳು ‘ವೇದಾ’ ನೇರ ನಡೆಯನ್ನು ಹೊಂದಿರುತ್ತಾಳೆ. ಈಕೆಗೆ ಮನೆಯವರ ಸಮ್ಮುಖದಲ್ಲಿ, ಹುಟ್ಟಿ ಬೆಳೆದ ಊರಲ್ಲಿ, ಮನೆಯವರು ನೋಡಿದ ಹುಡುಗನೊಂದಿಗೆ ಮದುವೆಯಾಗಬೇಕು ಎಂಬ ಆಸೆ ಇರುತ್ತದೆ. ಆದರೆ ಮುಂದೆ ನಡೆಯುವುದು ಮಾತ್ರ ವಿಧಿಲಿಖಿತ.

ಕಥಾ ನಾಯಕ ವಿಕ್ರಮ್. ಗೂಂಡಾಗಿರಿ ಮಾಡಿಕೊಂಡು, ತನ್ನ ಬಾಸ್ ಹೇಳಿದನ್ನು ಚಾಚು ತಪ್ಪದೆ ಮಾರುವ ಈತನಿಗೆ , ಆಚಾರ-ವಿಚಾರ ಸಂಸ್ಕಾರವಂತೂ ಇಲ್ಲವೇ ಇಲ್ಲ. ಪದವಿ ಪಡೆದಿದ್ದರೂ ಕೂಡ ಈತ ಹೀಗಿರುವುದರಿಂದ ಅಪ್ಪನಿಗೂ ಇವನ ಮೇಲೆ ಸಿಕ್ಕಾಪಟ್ಟೆ ಕೋಪವಿರುತ್ತದೆ. ಅಚಾನಕ್ ಆಗಿ ಒಂದು ದಿನ ದೇವರ ಸನ್ನಿಧಾನದಲ್ಲಿ ವಿಧಿಯಾಟದಂತೆ ವಿಕ್ರಮ್- ವೇದಾಳಿಗೆ ತಾಳಿ ಕಟ್ಟುತ್ತಾನೆ.

ನೀನಾದೆ ನಾ’ ಧಾರಾವಾಹಿಯು ಅದ್ಭುತ ತಾರಾಬಳಗವನ್ನು ಹೊಂದಿದ್ದು, ನಾಯಕನ ಪಾತ್ರದಲ್ಲಿ ದಿಲೀಪ್ ಶೆಟ್ಟಿ, ನಾಯಕಿಯಾಗಿ ಖುಷಿ ಅಭಿನಯಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಗೆ ಖ್ಯಾತ ನಟ ರಮೇಶ್ ಅರವಿಂರ್‌ ಅವರು ‘ವಂದನ ಮೀಡಿಯಾ’ ಸಂಸ್ಥೆಯಡಿ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

Continue Reading

ಕಿರುತೆರೆ

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Mahanati Show: ಅಷ್ಟಕ್ಕೂ ಸ್ಪರ್ಧಿ‌ ಹಲವಾರು ರೌಂಡ್ಸ್​ಗಳಲ್ಲಿ ಉತ್ತಮ ರೀತಿಯಲ್ಲಿಯೇ ಅಭಿನಯದ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು. ತನ್ನ ಕನಸುಗಳನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಮನೆಯವರ ಬಲವಂತಕ್ಕೆ ಮದುವೆಯಾದ ಯುವತಿಯ ಕಥೆ ಸಾರುವ ‘ಅನುರಾಗ’ ಎನ್ನುವ ಶಾರ್ಟ್ ಫಿಲಂನಲ್ಲಿ ನಟಿಸಿ ಎಲ್ಲರ ಹೃದಯ ಗೆದ್ದಿದ್ದರು.

VISTARANEWS.COM


on

Mahanati Show Darshan wished Priyanka the contestant
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್‌ಗಳು (Mahanati Grand Finale) ವೇದಿಕೆಗೆ ತಲುಪಿದ್ದರು‌. ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿತ್ತು. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದರು. ಇದೀಗ ಎಲ್ಲೋ ಜೋಗಪ್ಪ ನಿನ್​ ಅರಮನೆ…ಹಾಡಿಗೆ ಪ್ರಿಯಾಂಕಾ ರೀಲ್ಸ್​ ಮಾಡಿದ್ದು, ಅದನ್ನು ಜೀ ಕನ್ನಡ ವಾಹಿನಿ ಶೇರ್​ ಮಾಡಿಕೊಂಡಿದೆ. ಅಂದಹಾಗೆ, ಪ್ರಿಯಾಂಕಾ ಅವರು ಮೈಸೂರಿನವರು. ಈ ಶೋನಲ್ಲಿ ಇವರು ಜೈಲಿನಲ್ಲಿರುವ ದರ್ಶನ್​ ಕುರಿತು ಹೇಳಿಕೊಂಡಿದ್ದರು.

ʻʻತಮ್ಮ ತಂದೆ ಹಾಗೂ ದರ್ಶನ್ ಕ್ಲೋಸ್​ ಫ್ರೆಂಡ್ಸ್​. ನಾನು ಈ ಶೋಗೆ ಆಯ್ಕೆ ಆಗಿದ್ದ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದರು. ಚೆನ್ನಾಗಿ ಹೇಳುವುದನ್ನು ಕೇಳು ಎಂದು ವಿಶ್​ ಮಾಡಿದ್ದರುʼʼ ಎಂಬುದಾಗಿ ಹೇಳಿದ್ದರು. ಮಹಾನಟಿಯಲ್ಲಿ ಸೆಲೆಕ್ಟ್​ ಆದ ಬಳಿಕ ತಾವು ದರ್ಶನ್ ಅವರನ್ನ ಖುದ್ದು ಭೇಟಿಯಾಗಿ ಆಶೀರ್ವಾದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದರು.

ಅಷ್ಟಕ್ಕೂ ಪ್ರಿಯಾಂಕಾ ಅವರು ಹಲವಾರು ರೌಂಡ್ಸ್​ಗಳಲ್ಲಿ ಉತ್ತಮ ರೀತಿಯಲ್ಲಿಯೇ ಅಭಿನಯದ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು. ತನ್ನ ಕನಸುಗಳನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಮನೆಯವರ ಬಲವಂತಕ್ಕೆ ಮದುವೆಯಾದ ಯುವತಿಯ ಕಥೆ ಸಾರುವ ‘ಅನುರಾಗ’ ಎನ್ನುವ ಶಾರ್ಟ್ ಫಿಲಂನಲ್ಲಿ ನಟಿಸಿ ಎಲ್ಲರ ಹೃದಯ ಗೆದ್ದಿದ್ದರು.

ಇದನ್ನೂ ಓದಿ: Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು. ಇದೀಗ ಎರಡನೇ ರನ್ನರ್ ಅಪ್ ಆಗಿ ಹತ್ತು ಲಕ್ಷ ಬಹುಮಾನವನ್ನು ಧನ್ಯಶ್ರೀ ಪಡೆದಿದ್ದಾರೆ.  ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು. ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

Continue Reading

ಕಿರುತೆರೆ

Mahanati Grand Finale: ʻಮಹಾನಟಿʼ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಪ್ರಿಯಾಂಕಾ; ಧನ್ಯಶ್ರೀಗೆ ಎರಡನೇ ಸ್ಥಾನ, ಬಹುಮಾನ ಏನು?

Mahanati Grand Finale: ಐದು ಕಂಟೆಸ್ಟೆಂಟ್‌ಗಳು ಕಿರು ಚಿತ್ರ ಮಾಡಿದ್ದರು. ಅದರಲ್ಲಿ ಪ್ರಿಯಾಂಕ, ಅನುರಾಗ ಎಂಬ ಶಾರ್ಟ್ ಫಿಲ್ಮ್‌ನಲ್ಲಿ ಅದ್ಬುತವಾಗಿ ನಟಿಸಿದ್ದರು.ಐವರಲ್ಲಿ ವೇದಿಕೆ ಮೇಲೆ ಉಳಿದಿದ್ದೇ ಇಬ್ಬರು.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು.

VISTARANEWS.COM


on

Mahanati Grand Finale priyanka from mysore is the winner season 1 dhanyashree runner up
Koo

ಬೆಂಗಳೂರು: : ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್‌ಗಳು (Mahanati Grand Finale) ವೇದಿಕೆಗೆ ತಲುಪಿದ್ದರು‌. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದಾರೆ. ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. ಗಗನ, ಪ್ರಿಯಾಂಕಾ, ಶ್ವೇತಾ ಭಟ್, ಆರಾಧನಾ ಭಟ್ ಹಾಗೂ ಧನ್ಯಶ್ರೀ ಫಿನಾಲೆಗೆ ಆಯ್ಕೆಯಾಗಿದ್ದರು.

 ಈ ಮಹಾನಟಿ ಶೋನಲ್ಲಿ ರಮೇಶ್‌ ಅರವಿಂದ್‌ ಅವರು ಒಂದೊಂದು ಟಾಪಿಕ್‌ ಕೊಡುತ್ತಾರೆ. ಅದರ ಬಗ್ಗೆ ಸ್ಪರ್ಧಿಗಳು ನಟಿಸಬೇಕು. ಮಹಾನಟಿಯರು ತಕ್ಷಣೆಕ್ಕೆ ಡೈಲಾಗ್‌ ರೆಡಿ ಮಾಡಿಕೊಂಡು ನಟಿಸುತ್ತಾರೆ. ಕೊನೆ ಕೊನೆಗೆ ಕಿರು ಚಿತ್ರ ಕೂಡ ಮೂಡಿ ಬಂದಿತ್ತು. ಈ ಶೋ ರಂಜಿಸುವುದಲ್ಲದೇ ವಿವಾದಕ್ಕೂ ಕಾರಣವಾಗಿತ್ತು.

ಐದು ಕಂಟೆಸ್ಟೆಂಟ್‌ಗಳು ಕಿರು ಚಿತ್ರ ಮಾಡಿದ್ದರು. ಅದರಲ್ಲಿ ಪ್ರಿಯಾಂಕ, ಅನುರಾಗ ಎಂಬ ಶಾರ್ಟ್ ಫಿಲ್ಮ್‌ನಲ್ಲಿ ಅದ್ಬುತವಾಗಿ ನಟಿಸಿದ್ದರು.ಐವರಲ್ಲಿ ವೇದಿಕೆ ಮೇಲೆ ಉಳಿದಿದ್ದೇ ಇಬ್ಬರು.ಪ್ರಿಯಾಂಕಗೆ ಸಿಕ್ಕಿದ್ದು 15 ಲಕ್ಷದ ಪ್ಯೂರ್ ಚಿನ್ನದ ಕಿರೀಟ. ತಮ್ಮ ಅಭಿನಯದಿಂದ ಧನ್ಯಶ್ರೀ ಗಮನ ಸೆಳೆದರೆ ಅವರ ತಂದೆ ಹಾಸ್ಯದಿಂದ ಗಮನ ಸೆಳೆದರು. ಇದೀಗ ಎರಡನೇ ರನ್ನರ್ ಅಪ್ ಆಗಿ ಹತ್ತು ಲಕ್ಷ ಬಹುಮಾನವನ್ನು ಧನ್ಯಶ್ರೀ ಪಡೆದಿದ್ದಾರೆ.  ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಇದನ್ನೂ ಓದಿ: Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

ಮೂರನೇ ಸ್ಥಾನ ಪಡೆದ ಚಿತ್ರದುರ್ಗದ ಗಗನ, ನಾಲ್ಕನೇ ಸ್ಥಾನ ಪಡೆದ ಆರಾಧನಾ ಭಟ್‌, ಐದನೇ ಸ್ಥಾನ ಶ್ವೇತಾ ಭಟ್‌ಗೆ ತಲಾ ಒಂದು ಲಕ್ಷ ಬಹುಮಾನ ನೀಡಲಾಯಿತು.

ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದಿದ್ದ ಗಗನಾ

ಗಗನಾ ಕಳೆದ ಬಾರಿ ಟ್ರೋಲ್‌ಗೆ ಗುರಿಯಾಗಿದ್ದರು. ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕಾನ್ಸೆಪ್ಟ್‌ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕಲ್‌ ಅವರನ್ನು ಮದುವೆ ಆಗಿದ್ದರೆ ಏನು ಮಾಡುತ್ತೀಯಾ? ಎಂದು ಸ್ಕಿಟ್‌ ಮಾಡಬೇಕಿತ್ತು. ಡೈಲಾಗ್‌ ಹೇಳುವ ಭರದಲ್ಲಿ ಮೆಕ್ಯಾನಿಕ್‌ ಮದುವೆಯಾದರೆ ಗ್ರೀಸ್‌ ತಿಂದು ಬದುಕಬೇಕಾಗುತ್ತದೆ ಎಂದಿದ್ದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ರಮೇಶ್‌ ಅರವಿಂದ್‌, ಗಗನಾ ಸೇರಿದಂತೆ ಈ ಬಗ್ಗೆ ದೂರು ದಾಖಲಾಗಿತ್ತು.

ಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದರು. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

Continue Reading
Advertisement
Kannada Serials TRP Lakshmi Nivas in Top 3 Lakshmi Baramma at fifth position
ಕಿರುತೆರೆ36 seconds ago

Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

Sameer Nigam
ಕರ್ನಾಟಕ13 mins ago

Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

Director R Chandru unveiled the teaser of Hagga movie
ಕರ್ನಾಟಕ15 mins ago

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Dangerous Bike Stunt
Latest25 mins ago

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Sexual Abuse
Latest36 mins ago

Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

Paris Olympics
ಕ್ರೀಡೆ42 mins ago

Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

Nita Ambani
Latest44 mins ago

Nita Ambani : ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

karnataka Rain
ಮಳೆ1 hour ago

Karnataka Rain : ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಕುಸಿದು ಬಿದ್ದ ಮನೆಗಳು, ರಸ್ತೆ ಕಾಣದೆ ಕಂದಕ್ಕೆ ನುಗ್ಗಿದ ಕಾರು

Akshay Kumar Rushes To Save Actor Who Faints Mid-Air During A Stunt
ಬಾಲಿವುಡ್1 hour ago

Akshay Kumar: ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟ; ರಕ್ಷಿಸಿದ ʻಕಿಲಾಡಿʼ ಅಕ್ಷಯ್​​ ಕುಮಾರ್ !

Priyank Kharge karnataka jobs reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಕನ್ನಡಿಗರಿಗೆ ಮೀಸಲು ಕಡ್ಡಾಯ ಮಾಡಲು ಕಾನೂನು ಸಮಸ್ಯೆ: ಖರ್ಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌