Sunny Mahipal: ಗರ್ಭಿಣಿ ಪತ್ನಿ ಮೇಲೆ ʻನೇತ್ರಾವತಿʼ ಸೀರಿಯಲ್‌ ನಟನಿಂದ ಹಲ್ಲೆ ಆರೋಪ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ? - Vistara News

ಕಿರುತೆರೆ

Sunny Mahipal: ಗರ್ಭಿಣಿ ಪತ್ನಿ ಮೇಲೆ ʻನೇತ್ರಾವತಿʼ ಸೀರಿಯಲ್‌ ನಟನಿಂದ ಹಲ್ಲೆ ಆರೋಪ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

Sunny Mahipal: ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ.

VISTARANEWS.COM


on

Sunny Mahipal Nethravathi Serial Actor Kick His Pregnant Wife
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಬ್ಬರ ಜತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ʻನೇತ್ರಾವತಿʼ ಧಾರಾವಾಹಿ ನಟನ ವಿರುದ್ಧ ಆರೋಪ ಕೇಳಿ (Sunny Mahipal) ಬಂದಿದೆ. ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದು ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗೆಳೆದ ಸನ್ನಿ ಮಹಿಪಾಲ್‌ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್‌ ಎ. ಎಲ್‌ ಠಾಣೆಗೆ ದೂರು ನೀಡಿದ್ದಾರೆ.

ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ (Sunny Mahipal) ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಸನ್ನಿ ಮಹಿಪಾಲ್ ಕೆಲಸ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಯುವತಿಯರ ಜೊತೆ ಲಿವಿಂಗ್ ಟು ಗೆದರ್ ಆರೋಪ ಕೂಡ ನಟನ ವಿರುದ್ಧ ಕೇಳಿ ಬಂದಿದೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ. ಈ ಯುವತಿ ಲಾ ಸ್ಟೂಡೆಂಟ್ ಆಗಿದ್ದಳು. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಶುರುವಾಗಿದೆ. ಬಳಿಕ ಅವರನ್ನು ಸನ್ನಿ ಪ್ರೀತಿ ಮಾಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಮದುವೆಯಾಗೋದಾಗಿ ನಂಬಿಸಿದ್ದರು. ಜೂನ್ 15ರಂದು ಸನ್ನಿ ಮಹಿಪಾಲ್ ಜೊತೆಗೆ ಯುವತಿ ದೇವಸ್ಥಾನದಲ್ಲಿ ವಿವಾಹ ಆದರು. ಸದ್ಯ ಮಹಿಳೆ ಎರಡು ತಿಂಗಳ ಗರ್ಭಿಣಿ.

ಇದಾದ ಬಳಿಕ ನಟ ಮತ್ತೊಂದು ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಪ್ರಶ್ನಿಸಲು ಹೋದ ಪತ್ನಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಪತಿ ಪತ್ನಿ ಮದುವೆಯಾದರು ಒಟ್ಟಿಗೆ ಇರಲಿಲ್ಲ .ನಮ್ಮ ಪೋಷಕರನ್ನ ಒಪ್ಪಿಸಿ ಮತ್ತೆ ಬರುತ್ತೇನೆ ಎಂದು ನಟ ಕಾಗೆ ಹಾರಿಸಿದ್ದ .ಅಲ್ಲದೇ ಸ್ನೇಹಿತರ ರೀತಿಯೇ ಇರಬೇಕು. ಸ್ನೇಹಿತರಂತೆಯೇ ಮೆಸೆಜ್ ಮಾಡ್ಬೇಕು ಎಂದು ಕಂಡಿಷನ್ ಹಾಕಿದ್ದನಂತೆ. ಅದರಂತೆಯೇ ಮಹಿಪಾಲ್ ಪತ್ನಿ ನಡೆದು ಕೊಂಡಿದ್ದರು. ಅದಾಗಲೇ ಕೆಲ ದಿನದ ಹಿಂದೆ ಬೇರೆ ಯುವತಿ ಜೊತೆಗೆ ಮಹಿಪಾಲ್ ಎಂಗೆಜ್ಮೆಂಟ್ ಆಗಿದ್ದನಂತೆ. ಇದನ್ನು ಪ್ರಶ್ನಿಸಲು 22 ರಂದು ರಾತ್ರಿ ಮಹಿಪಾಲ್ ಮನೆಗೆ ಪತ್ನಿ ಹೋಗಿದ್ದಾರೆ. ರಾತ್ರಿ 9.30 ಕ್ಕೆ ವಿಜ್ಙಾನ ನಗರ ದಲ್ಲಿರುವ ಮಹಿಪಾಲ್ ನಿವಾಸಕ್ಕೆ ಪತ್ನಿ ಹೋಗಿದ್ದರು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ಈ ವೇಳೆ ಗಲಾಟೆಯಾಗಿ ಪತ್ನಿ ಮೇಲೆ ನಟ ಹಲ್ಲೆ ನಡೆಸಿದ್ದಾರೆ. ಚಾಕುವಿನಿಂದ ತೋಳಿಗೆ ಇರಿದ ಆರೋಪ ಮಾಡಲಾಗಿದೆ. ಗಲಾಟೆಯಲ್ಲಿ ಗರ್ಭಪಾತ ಆಗಿರೋದಾಗಿ ಪತ್ನಿ ಹೇಳಿಕೆ ನೀಡಿದ್ದಾರೆ. ಹೊಟ್ಟೆಗೆ ಏಟಾಗಿ ಗರ್ಭಪಾತ ಆಗಿದೆ ಎಂದು ಪತ್ನಿ ಅಳಲು ತೋಡಿಕೊಂಡಿದ್ದಾರೆ.  ಗಲಾಟೆ ಆದ ಮೇಲೆ 112ಕ್ಕೆ ಮಹಿಪಾಲ್ ಪತ್ನಿ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಭೇಟಿ ಕೊಟ್ಟಿದ್ದರು. ಗರ್ಭಪಾತದಿಂದಾಗಿ ಮಹಿಳೆಗೆ ರಕ್ತಸ್ರಾವವಾಗುತ್ತಿತ್ತು. ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸರಿಗೆ ಅವರು ಮನವಿ ಮಾಡಿದ್ದರು. ಆದರೆ, ನಮ್ಮ ಬಳಿ ಮಹಿಳಾ ಸಿಬ್ಬಂದಿ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವತಃ ತಾವೆ ಕಾರು ಚಲಾಯಿಸಿಕೊಂಡು ಬಂದು ಅವರು ಆಸ್ಪತ್ರೆ ಸೇರಿದ್ದಾರೆ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅತ್ತ ಹೆಚ್ಎಎಲ್ ಪೊಲೀಸ್ ಠಾಣೆಗೆ ತೆರಳಿ ಸನ್ನಿ ಮಹಿಪಾಲ್ ಮನೆಗೆ ಅತಿಕ್ರಮ ಪ್ರವೇಶ ಮಾಡಿರೋದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಬಲವಂತದಿಂದ ಮದುವೆಯಾಗಿರೋದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ದೂರು ಪಡೆದು ಹೆಚ್ಎಎಲ್ ಪೊಲೀಸರು ಸುಮ್ಮನಾಗಿದ್ದಾರೆ. ಇನ್ನೂ ಮಾಹಿತಿ ಪ್ರಕಾರ ಹಲ್ಲೆಗೂ ಮುನ್ನ ಗರ್ಭಪಾತ ಮಾಡಿಸಲು ಪತ್ನಿಗೆ ನಟ ಕಿರುಕುಳ ನೀಡಿದ್ದರು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಸ್ಯಾಂಡಲ್ ವುಡ್

Chaitra Vasudevan: ನಾನು ಸಿಲ್ಲಿ ಹುಡುಗಿ ಅಲ್ಲ..ನನ್ನಂತವರಿಗೂ ಮೋಸ ಆಗುತ್ತದೆ ಅಂದುಕೊಂಡಿರಲಿಲ್ಲ ಎಂದ ಆ್ಯಂಕರ್ ಚೈತ್ರಾ!

Chaitra Vasudevan: ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Chaitra Vasudevan says not a silly girl never thought that someone cheated me
Koo

ಬೆಂಗಳೂರು: ಬಿಗ್‌ ಬಾಸ್‌ʼನಿಂದ ಹೆಚ್ಚು ಜನಪ್ರಿಯರಾಗಿರುವ ಆ್ಯಂಕರ್ ಚೈತ್ರಾ ವಾಸುದೇವನ್‌ (Chaitra Vasudevan) ಅವರು ತಮ್ಮ ದಾಂಪತ್ಯಕ್ಕೆ ವಿಚ್ಛೇದನ ನೀಡಿರುವುದು ಗೊತ್ತೇ ಈದೆ. ಚೈತ್ರಾ ಅನೌನ್ಸ್‌ ಮಾಡಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸೋಷಿಯಲ್‌ ಮೀಡಿಯಾದಲ್ಲಿ ನಡೆಯಿತು. ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

ಚೈತ್ರಾ ಮಾತನಾಡಿ ʻʻನಾನು ಈ ಬಗ್ಗೆ ಅನೌನ್ಸ್‌ ಮಾಡುವೆ ಮೊದಲೇ ಡಿವೋರ್ಸ್‌ ಮಾಡಿದ್ದೆ. ಈ ಬಗ್ಗೆ ನಾನು ಎಲ್ಲಿಯೂ ಹೇಳಲು ಇಷ್ಟ ಪಟ್ಟಿರಲಿಲ್ಲ. ನನ್ನ ತಂದೆ ತಾಯಿ ಕೂಡ ಆಗ ನನ್ನ ಜತೆ ನಿಂತು, ನಿನ್ನ ಜವಾಬ್ದಾರಿ ಅಂದಿದ್ದರು. ಬೇರೆಯವರ ಕರ್ಮ ಅವರು ಅನುಭವಿಸುತ್ತಾರೆ. ಎಲ್ಲೂ ಕಂಪ್ಲೇನ್‌ ಮಾಡಬೇಡು ಎಂದು ತಂದೆ ತಾಯಿ ಹೇಳಿದ್ದರು. ಕ್ಷುಲ್ಲಕ ಕಾರಣಕ್ಕೆ ಸಪ್‌ರೇಟ್‌ ಆದರು ಎನ್ನುವ ಗಾಸಿಪ್‌ ಹರಡಿತ್ತು. ಆದರೆ ರಿಯಲ್‌ ರೀಸನ್‌ ಬೇರೆ ಇದೆ. ನನ್ನ ಕುಟುಂಬ ಅಂದರೆ ನಾನು, ನನ್ನ ತಂದೆ ತಾಯಿ, ಸೇರಿ ಮೋಸ ಹೋದೆವು. ಮಾನಸಿಕವಾಗಿ, ದೈಹಿಕವಾಗಿ, ಭಾವನಾತ್ಮಕವಾಗಿ ಮೋಸ ಹೋದೆವು. ಆದರೆ ನಾನು 5 ವರ್ಷಗಳ ಕಾಲ ಕಾದೆ. ಎನೋ ಒಂದು ಆಗತ್ತೆ ಅಂತ. ನಾನು ಸಿಲ್ಲಿ ಹುಡುಗಿ ಅಲ್ಲ. ಏನೋ ಅಚೀವ್‌ ಮಾಡಬೇಕು..ಏನೋ ಮಾಡಬೇಕು ಎಂದು ದುಡ್ಡು ದುಡೀಬೇಕು ಎಂಬ ಕಾರಣಕ್ಕೆ ಸಪ್‌ರೇಟ್‌ ಆಗ್ತೀನಿ ಎನ್ನುವ ಸಿಲ್ಲಿ ಹುಡುಗಿ ನಾನಲ್ಲ. ನಾನು ಪ್ಲ್ಯಾನ್‌ ಮುಂಚೆ ಹೇಗ್‌ ಮಾಡಿದ್ದೆ ಅಂದರೆ, ನನ್ನ ಕುಟುಂಬ, ನನ್ನ ಫ್ಯಾಮಿಲಿ, ಅತ್ತೆ ಮಾವ ಹೀಗೆ ಜತೆಗೆ ಇರಬೇಕು, ಮಕ್ಕಳು ಇರಬೇಕು ಎಂದು ಬಯಸಿದ್ದೆ. ಆದರೆ ಕನಸು ನನಸಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಏನು ಮಾಡಕ್ಕೆ ಆಗದೇ ಸುಮ್ಮನೇ ಇದ್ದೆ. ಕೆಟ್ಟ ದಿನಗಳು ಆಗಿದ್ದವು. ಯಾರಾದರೂ ಬಂದು ನನ್ನ ಸೇವ್‌ ಮಾಡ್ತಾರಾ ಎನ್ನುವ ಪರಿಸ್ಥಿತಿ ಇತ್ತು. ಆ ತರ ನಾನು ಹಾತೊರೆಯುತ್ತಿದ್ದೆ. ಪ್ರೀತಿ ಮಾಡಿ, ಆದರೆ ನಿಜ ಹೇಳಿ. ಆದರೆ ಯಾರಿಗೂ ಮೋಸ ಮಾಡಬೇಡಿ. ಆದರೆ ನಾನು ಯಾರಿಗೂ ಮೋಸ ಮಾಡಿಲ್ಲ. ಆದರೆ ನನಗೆ ಹೀಗ್‌ ಆಯ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Chaitra Vasudevan: ಅಹಂಕಾರದಿಂದ ಬೇರೆಯಾಗಿಲ್ಲ ಎಂದು ಡಿವೋರ್ಸ್‌ ಅಸಲಿ ಕಾರಣ ತಿಳಿಸಿದ ಆ್ಯಂಕರ್ ಚೈತ್ರಾ!

ಕುಂದಾಪುರದ ಹುಡುಗಿ ಚೈತ್ರಾ ಜತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.

ಡಿವೋರ್ಸ್‌ ಪೋಸ್ಟ್‌ ಹಂಚಿಕೊಂಡಿದ್ದ ಚೈತ್ರಾ

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದರು.

ಆ್ಯಂಕರ್ ಆಗಿದ್ದ ಚೈತ್ರಾ ‘ಬಿಗ್ ಬಾಸ್ (big boss) ಕನ್ನಡ ಸೀಸನ್ 7’ರ ಸ್ಪರ್ಧಿಯಾಗಿದ್ದರು. ಚೈತ್ರಾ ವಾಸುದೇವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಚೈತ್ರಾ ತಮ್ಮದೇ ಆದ ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ನಡೆಸುತ್ತಿದ್ದಾರೆ.

Continue Reading

ಬಿಗ್ ಬಾಸ್

Actress Siri: ನಾನೇನು ʻಮದುವೆʼಯ ವಿರೋಧಿ ಅಲ್ಲ, ವಿವಾಹ ಬೇಡ ಎಂದೂ ಅಂದುಕೊಂಡಿರಲಿಲ್ಲ ಎಂದ ಸಿರಿ!

Actress Siri: ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

VISTARANEWS.COM


on

Actress Siri Reaction about late marriage
Koo

ಬೆಂಗಳೂರು: `ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿರುವುದು ಗೊತ್ತೇ ಇದೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

ಸಿರಿ ಮಾತನಾಡಿ ʻʻಇಷ್ಟು ವರ್ಷ ನನಗೆ ಮದುವೆ ಬಗ್ಗೆ ಏನೂ ಅನ್ನಿಸುತ್ತಿರಲಿಲ್ಲ. ನಮ್ಮ ತಾಯಿ ಬಿಟ್ಟರೆ ನಾನು ಮದುವೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನನ್ನ ತಾಯಿಗೆ ಒಂದು ಮಾತು ಹೇಳುತ್ತ ಇದ್ದೆ. ನಿನ್ನ ಮಗಳು ಖುಷಿಯಾಗಿ ಇರಬೇಕು. ಅದೇ ಮುಖ್ಯ ಅಂದರೆ ನೋಡು ಅಂತಿದ್ದೆ. ಆದರೆ ಬಿಗ್‌ ಬಾಸ್‌ ಆದ ಬಳಿಕ ಆಗಬೇಕು ಎಂಬ ಮನಸ್ಸು ಬಂತು. ಆದರೆ ಒತ್ತಡ ಅಂತೇನಿಲ್ಲ. ಹೀಗೆ ಆಗಬೇಕು ಎಂದು ಅನ್ನಿಸಿತ್ತು. ಹೊರಗೆ ಬಂದ ಮೇಲೆ ಈ ಬಗ್ಗೆ ನಿರ್ಧಾರ ಮಾಡಿದೆ. ಬಳಿಕ ಇವರನ್ನ ಮದುವೆ ಆಗಬಹುದು ಎಂದು ಅನ್ನಿಸಿದ ಮೇಲೆ ನಾನು ಮದುವೆಯಾದೆʼʼಎಂದರು.

ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿಲ್ಲ. ನನ್ನ ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದೇ ಇತ್ತು. ಮದುವೆ ವಿರುದ್ಧನೂ ಅಲ್ಲ ನಾನು. ನನ್ನ ಹಣೆಬರಹದಲ್ಲಿ ಈಗ ಬರ್ದಿದೆ. ಮನೆಯಲ್ಲಿ ಪ್ರಯತ್ನ ಮಾಡಿದ್ದರು. ಆದರೆ ಈಗ ಆ ಕಾಲ ಕೂಡಿ ಬಂದಿದೆ. ಮದುವೆ ಬೇಗ ಆಗಿ ಏನಾದರೂ ಸಮಸ್ಯೆ ಮಾಡಿಕೊಳ್ಳುವುದಿಕ್ಕಿಂತ , ನಾನು ರೆಡಿ ಇದ್ದೀನಿ.. ಎಂದು ರೆಡಿ ಆದ ಮೇಲೆ ಮದುವೆ ಮದುವೆಯಾಗೋದು ಸರಿ. ಯಾರಿಗಾದರೂ ಇದು ದೊಡ್ಡ ನಿರ್ಧಾರ. ನನಗೆ ನನ್ನ ಪತಿ ಬದುಕು ಸೀರಿಯಲ್‌ ನಿಂದ ಪರಿಚಯ. ಇಬ್ಬರು ಸ್ನೇಹಿತರಾಗಿದ್ದೇವು. ಬಳಿಕ ಮತ್ತೆ ವರ್ಷಗಳ ನಂತರ ಟಚ್‌ನಲ್ಲಿ ಬಂದೆವು. ನಂತರ ಇಬ್ಬರು ಮದುವೆಯಾಗೋಣ ಎಂದು ನಿರ್ಧಾರ ಮಾಡಿದೆವು. ಈಗಲೂ ಫ್ರೆಂಡ್‌ ಜತಗೆ ಇದ್ದೇನೆ ಎಂದು ಅನ್ನಿಸುತ್ತೆ. ಇಬ್ಬರಲ್ಲೂ ಪ್ರಪೋಸ್‌ ಏನೂ ಆಗಿಲ್ಲ. ಮಾತುಕತೆ ಆಯ್ತು. ಹಾಗೇ ಮದುವೆ ಆದೆವುʼʼಎಂದರು.

ಇದನ್ನೂ ಓದಿ: Actress Siri: ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀವೆ; ಪತಿಯನ್ನು ಬಣ್ಣಿಸಿದ ಸಿರಿ!

ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

Continue Reading

ಕಿರುತೆರೆ

Star Suvarna: `ಸುವರ್ಣ ಗೃಹಮಂತ್ರಿ’ಯ ಸಾರಥಿಯಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ರವಿಶಂಕರ್

Star Suvarna: ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಜೊತೆ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ “ಸುವರ್ಣ ಗೃಹಮಂತ್ರಿ” ಕಾರ್ಯಕ್ರಮದ ಶೈಲಿಯಾಗಿದೆ.

VISTARANEWS.COM


on

Star suvarna Ravi Shankar entered television suvarna grahamanthri
Koo

ಬೆಂಗಳೂರು: ಸ್ಟಾರ್ ಸುವರ್ಣ (Star Suvarna) ವಾಹಿನಿಯಲ್ಲಿ ಮಧ್ಯಾಹ್ನದ ಮನರಂಜನೆಯಾಗಿ ಆರಂಭವಾದ “ಸುವರ್ಣ ಗೃಹಮಂತ್ರಿ” ಎಂಬ ಹೊಸ ಬಗೆಯ ರಿಯಾಲಿಟಿ ಶೋ ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇದೀಗ ಮತ್ತಷ್ಟು ಮೆರುಗು ನೀಡಲು ಇದೇ ಮೊದಲ ಬಾರಿಗೆ ಸುವರ್ಣ ವಾಹಿನಿಯ ಮೂಲಕ ಖ್ಯಾತ ನಟ ರವಿಶಂಕರ್ ಕಿರುತೆರೆಗೆ ಪದಾರ್ಪಣೆ ಮಾಡಿದ್ದಾರೆ. ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಟ ರವಿಶಂಕರ್ ಹೊರಲಿದ್ದಾರೆ. ವರ್ಷಗಳ ಬಳಿಕ ನಟ ರವಿ ಶಂಕರ್ (Ravi shankar) ಅವರನ್ನು ಗೃಹಮಂತ್ರಿ ಪ್ರೋಮೋದಲ್ಲಿ ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸಿದ್ದು, ‘ಸುವರ್ಣ ಗೃಹಮಂತ್ರಿ’ಯ ಸಂಚಿಕೆಯಲ್ಲಿ ರವಿಶಂಕರ್ (suvarna gruha mantri) ರವರ ನಿರೂಪಣೆಯನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಜೊತೆ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ “ಸುವರ್ಣ ಗೃಹಮಂತ್ರಿ” ಕಾರ್ಯಕ್ರಮದ ಶೈಲಿಯಾಗಿದೆ.

ಇದನ್ನೂ ಓದಿ: Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಇನ್ಮುಂದೆ ನಟ ರವಿಶಂಕರ್ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ.

‘ಸುವರ್ಣ ಗೃಹಮಂತ್ರಿ’ ಇದೇ ಸೋಮವಾರದಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ .

Continue Reading
Advertisement
BJP Protest
ಕರ್ನಾಟಕ2 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ2 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ3 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ4 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ4 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ4 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ4 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು5 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ5 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು5 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌