Site icon Vistara News

Nannamma Super Star 3: ತಾಯಿಗೆ ಪಾದಪೂಜೆ ಮಾಡಿ ಕ್ಷಮೆ ಕೋರಿದ ವರ್ತೂರ್‌ ಸಂತೋಷ್‌!

Varthur Santhosh bowed to his mother and apologized!

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ʻನನ್ನಮ್ಮ ಸೂಪರ್ ಸ್ಟಾರ್ʼ (Nannamma Super Star) ಮತ್ತೆ ಬಂದಿದೆ. ಮಕ್ಕಳ ಮುದ್ದು ಮಾತುಗಳು , ಅವರ ಆಟಗಳು ನೋಡುಗರನ್ನು ರಂಜಿಸುತ್ತಲೇ ಬರುತ್ತಿದೆ. ಎರಡು ಸೀಸನ್‌ ಪ್ರಸಾರವಾದ ಬಳಿಕ ಈಗ ಮೂರನೇ ಸೀಸನ್‌ ಶುರುವಾಗಿದೆ. ಕಲರ್ಸ್‌ ಕನ್ನಡ ಸೀರಿಯಲ್‌ ಸಂತೆ, ಕಾಮಿಡಿ ಶೋಗಳು, ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿಗಳು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಇದೀಗ ʻನನ್ನಮ್ಮ ಸೂಪರ್ ಸ್ಟಾರ್ʼ ವೇದಿಕೆಗೆ ವರ್ತೂರ್‌ ಸಂತೋಷ್‌ ಹಾಗೂ ಅವರ ತಾಯಿ ಬಂದಿದ್ದರು. ಇದೇ ವೇಳೆ ವೇದಿಕೆಯಲ್ಲಿ ವರ್ತೂರ್‌ ಅವರು ತಾಯಿಗೆ ಪಾದಪೂಜೆ ಮಾಡಿ ಕ್ಷಮೆ ಕೋರಿದ್ದಾರೆ.

ಕಲರ್ಸ್‌ ಕನ್ನಡ ಹೊಸ ಪ್ರೋಮೊ ಹಂಚಿಕೊಂಡಿದೆ. ವರ್ತೂರ್‌ ಅವರು ಮಾತನಾಡಿ ʻʻನಮ್ಮ ತಾಯಿ ಇರಲಿಲ್ಲ ಅಂದರೆ ವರ್ತೂರ್‌ ಸಂತೋಷ್‌ ಇವತ್ತು ಇರುತ್ತಿರಲ್ಲ. ಸಣ್ಣ ವಯಸ್ಸಿನಲ್ಲಿಯೇ ನನ್ನ ತಂದೆ ತೀರಿಕೊಂಡಾಗ, ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ತಂದೆ ತಾಯಿ ದೇವರುಗಳು. ದೇವರುಗಳನ್ನು ಬೇರೆಯವರು ಸೃಷ್ಟಿ ಮಾಡಲು ಆಗುವುದಿಲ್ಲ. ನಮ್ಮ ತಾಯಿಗೆ ನನ್ನ ಕಡೆಯಿಂದ ತುಂಬಾ ನೋವಾಗಿದೆ. ನನ್ನ ಕ್ಷಮಿಸಮ್ಮಾʼʼ ಎಂದು ಭಾವುಕರಾದರು.

ಇದನ್ನೂ ಓದಿ: Nannamma Super Star 3: ʻನನ್ನಮ್ಮ ಸೂಪರ್ ಸ್ಟಾರ್‌ʼಗೆ ನಿರೂಪಕಿಯಾದ ಸುಷ್ಮಾ ರಾವ್!

ʻನನ್ನಮ್ಮ ಸೂಪರ್ ಸ್ಟಾರ್ʼ

ಮೊದಲ ಸೀಸನ್‍ನಲ್ಲಿ ವನ್ಷಿಕಾ ಮತ್ತು ಯಶಸ್ವಿನಿ ಭಾಗವಹಿಸಿದ್ದರು. ವಿಜೇತರಾಗಿ ಹೊರಹೊಮ್ಮಿದ್ದರು. ಎರಡನೇ ಸೀಸನ್‌ನಲ್ಲಿ ಗ್ರಾಮೀಣ ಭಾಗದ ಪ್ರತಿಭೆಗೆ ಅಂದರೆ ಚೈತ್ರಾ ಮತ್ತು ಅವರ ಅವಳಿ ಮಕ್ಕಳು ಚಿರಂತ್-ಚಿನ್ಮಯ್ ವಿಜೇತರಾಗಿದ್ದರು.ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್‌ ಸ್ಟಾರ್ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಅಮ್ಮ ಮಕ್ಕಳ ಜತೆಗೆ ಕಿರುತೆರೆಯ ಚಿನಕುರುಳಿ ಎಂತಲೇ ಖ್ಯಾತಿ ಪಡೆದ ವನ್ಷಿಕಾ ನಿರೂಪಕಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್ ಸ್ಟಾರ್ ಶೋ ಬಹಳ ವಿಶೇಷವಾಗಿತ್ತು. ಏಕೆಂದರೆ ಶೋನಲ್ಲಿ ಸಾಮಾನ್ಯರಿಗೂ ಅವಕಾಶ ನೀಡಲಾಗಿತ್ತು.

ಕಳೆದ ಸೀಸನ್‌ನಂತೆ ಈ ಬಾರಿಯೂ ಸೃಜನ್ ಲೋಕೇಶ್, ತಾರಾ ಅನುರಾಧಾ, ಅನುಪ್ರಭಾಕರ್ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಸ್ಪರ್ಧಿಗಳ ಜತೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ನಾಯಕಿ ಭಾಗ್ಯಳಾಗಿ ನಟಿಸುತ್ತಿರುವ ಸುಷ್ಮಾ ರಾವ್ ‘ನನ್ನಮ್ಮ ಸೂಪರ್ ಸ್ಟಾರ್’ನ ನಿರೂಪಕಿಯಾಗಿ ದ್ದಾರೆ.

Exit mobile version