Weekend With Ramesh: ಮಾರ್ಚ್‌ 25ರಿಂದ ʻವೀಕೆಂಡ್ ವಿತ್ ರಮೇಶ್’; ಮೊದಲ ಗೆಸ್ಟ್‌ ಮೋಹಕ ತಾರೆ ರಮ್ಯಾ? Vistara News
Connect with us

ಕಿರುತೆರೆ

Weekend With Ramesh: ಮಾರ್ಚ್‌ 25ರಿಂದ ʻವೀಕೆಂಡ್ ವಿತ್ ರಮೇಶ್’; ಮೊದಲ ಗೆಸ್ಟ್‌ ಮೋಹಕ ತಾರೆ ರಮ್ಯಾ?

ಈಗ ಕಿರುತೆರೆ ಲೋಕದಲ್ಲಿ ಮೋಹಕತಾರೆ ರಮ್ಯಾ ವೀಕೆಂಡ್ ವಿತ್ ರಮೇಶ್ ಸೀಸನ್ 5ರಲ್ಲಿ (Weekend With Ramesh) ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಈ ಬಾರಿಯ ಮೊದಲ ಅತಿಥಿ ಆಗಲಿದ್ದಾರೆ ಎನ್ನಲಾಗಿತ್ತು.

VISTARANEWS.COM


on

Weekend With Ramesh Ramya First Guest
Koo

ಬೆಂಗಳೂರು: ಈಗಾಗಲೇ ‘ವೀಕೆಂಡ್ ವಿತ್ ರಮೇಶ್’ (Weekend With Ramesh) ಸೀಸನ್‌ 5 ಗೆ ಅತಿಥಿಗಳ ಪಟ್ಟಿ ಅಂತಿಮಗೊಂಡಿದೆ ಎನ್ನಲಾಗುತ್ತಿದೆ. ಈಗ ಕಿರುತೆರೆ ಲೋಕದಲ್ಲಿ ಮೋಹಕತಾರೆ ರಮ್ಯಾ ವೀಕೆಂಡ್ ವಿತ್ ರಮೇಶ್ ಸೀಸನ್ 5ರಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಈ ಬಾರಿಯ ಮೊದಲ ಅತಿಥಿ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ಕೆಲವು ಸುದ್ದಿಗಳ ಪ್ರಕಾರ ಮೊದಲ ಎಪಿಸೋಡ್‌ಗೆ ರಿಷಬ್ ಶೆಟ್ಟಿಯ ಬದಲಾಗಿ ರಮ್ಯಾ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗಿದೆ. ಇದೀಗ ಕಾರ್ಯಕ್ರಮ ಮಾರ್ಚ್‌ 25ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9ಗಂಟೆಗೆ ಪ್ರಸಾರವಾಗಲಿದೆ.

ಕಳೆದ ಕೆಲವು ದಿನಗಳಿಂದ ಭಾರತದ ಮೈಕಲ್ ಜಾಕ್ಸನ್ ಪ್ರಭುದೇವ 5ನೇ ಸೀಸನ್‌ನ ಮೊದಲ ಎಪಿಸೋಡ್ ಪ್ರಸಾರ ಆಗಲಿದೆ ಎನ್ನುವ ಸುದ್ದಿ ವೈರಲ್‌ ಆಗಿತ್ತು. ‘ವೀಕೆಂಡ್ ವಿತ್ ರಮೇಶ್’ ಸೀಸನ್ 5ರ ಮೊದಲ ಎಪಿಸೋಡ್‌ನಲ್ಲಿ ಮೋಹಕತಾರೆ ರಮ್ಯಾ ಬರುತ್ತಾರೆ ಎಂಬದು ಬಹುತೇಕ ಕನ್ಫರ್ಮ್ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ಇದೇ ತಿಂಗಳು ಮಾರ್ಚ್‌ 21ರಂದು ರಮ್ಯಾ ಅವರ ಎಪಿಸೋಡ್‌ನ ಶೂಟಿಂಗ್ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: Weekend With Ramesh: ‘ವೀಕೆಂಡ್ ವಿತ್‌ ರಮೇಶ್ʼ ಮೊದಲ ಎಪಿಸೋಡ್‌ಗೆ ರಿಷಬ್‌ ಬದಲು ಬೇರೆ ಅತಿಥಿ ಯಾರು?

ಕೆಲದಿನಗಳ ಹಿಂದೆ ಜೀ ವಾಹಿನಿ `ವೀಕೆಂಡ್ ವಿತ್‌ ರಮೇಶ್ʼ ಮತ್ತೆ ಬರುತ್ತಿದೆ ಪ್ರೋಮೊ ಪ್ರಸಾರ ಮಾಡಿತ್ತು. ನಟ ರಮೇಶ್‌ ಕೂಡ ಪ್ರೋಮೊ ಹಂಚಿಕೊಂಡಿದ್ದರು. ರಾಧಿಕಾ ಚೇತನ್ ಕೂಡ ಕಾಣಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ವಾಹಿನಿಯು ಪ್ರೋಮೊ ರಿಲೀಸ್ ಮಾಡಿ, “ಸ್ಫೂರ್ತಿದಾಯಕ ಕಥೆಗಳೊಂದಿಗೆ ವೀಕೆಂಡ್‌ಗೆ ಸಾರ್ಥಕತೆ ತುಂಬೋಕೆ ಬರ್ತಿದ್ದಾರೆ ನಿಮ್ಮ ರಮೇಶ್ ಅರವಿಂದ್” ಎಂದು ಹೇಳಿಕೆ ನೀಡಿತ್ತು.

2019ರ ಜುಲೈ ತಿಂಗಳಿನಲ್ಲಿ ‘ವೀಕೆಂಡ್ ವಿಥ್‌ ರಮೇಶ್ʼ 4’ ಕಾರ್ಯಕ್ರಮ ಮುಗಿದಿತ್ತು. ಇದಾದ ಬಳಿಕ ಹೊಸ ಸೀಸನ್ ಶುರುವಾಗಿಲ್ಲ. ‘’ವೀಕೆಂಡ್ ವಿತ್‌ ರಮೇಶ್ʼ ’ ಮತ್ತೆ ಯಾವಾಗ ಶುರುವಾಗುತ್ತದೆ ಎಂದು ವೀಕ್ಷಕರು ಕೇಳುತ್ತಲೇ ಇದ್ದಾರೆ. ‘’ವೀಕೆಂಡ್ ವಿತ್‌ ರಮೇಶ್ʼ ’ ಕಾರ್ಯಕ್ರಮದ ಮೊದಲ ಸೀಸನ್‌ 2014ರಲ್ಲಿ ಪ್ರಸಾರ ಕಂಡಿತ್ತು. ಎರಡನೇ ಸೀಸನ್ 2015-16ರಲ್ಲಿ, ಮೂರನೇ ಸೀಸನ್ 2017ರಲ್ಲಿ, 4ನೇ ಸೀಸನ್ 2019ರಲ್ಲಿ ಪ್ರಸಾರವಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.

VISTARANEWS.COM


on

Edited by

Koo

ಬೆಂಗಳೂರು: ಅದು 2019ರ ಸೆಪ್ಟೆಂಬರ್‌ 9. ಕನ್ನಡದ ಕಿರುತೆರೆಗೆ ಹೊಸ ಶೈಲಿಯ ಕಥೆಯೊಂದು (Kannada Serial) ಎಂಟ್ರಿ ಕೊಟ್ಟಿತ್ತು. ಅದುವೇ ʼಜೊತೆ ಜೊತೆಯಲಿʼ. ಈ ಧಾರಾವಾಹಿ ಕಿರುತೆರೆಗೆ ಎಂಟ್ರಿ ಕೊಟ್ಟ ಒಂದೇ ವಾರದಲ್ಲಿ ಕನ್ನಡದ ಎಲ್ಲಾ ಧಾರಾವಾಹಿಗಳ ದಾಖಲೆಗಳನ್ನು ಮುರಿದು ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎನ್ನುವ ಖ್ಯಾತಿ ಪಡೆದುಕೊಂಡಿತು. ಆ ಧಾರಾವಾಹಿಗೆ ಇದೀಗ 900 ಸಂಚಿಕೆಗಳು ಸಂಪೂರ್ಣಗೊಂಡಿವೆ.

ಇದನ್ನೂ ಓದಿ: Jote Joteyali: ಹಸೆಮಣೆ ಏರಲು ಸಜ್ಜಾದ `ಜೊತೆ ಜೊತೆಯಲಿ’ ಧಾರಾವಾಹಿ ನಟಿ ಶಿಲ್ಪಾ ಅಯ್ಯರ್

ಧಾರಾವಾಹಿ 900 ಸಂಚಿಕೆಗಳನ್ನು ಪೂರ್ಣಗೊಳಿಸಿರುವ ಸಂತಸದಲ್ಲಿ ಧಾರಾವಾಹಿಯ ತಂಡವಿದೆ. ಈ 900 ಸಂಚಿಕೆಗಳಲ್ಲಿ ಧಾರಾವಾಹಿ ಹಲವಾರು ತಿರುವುಗಳನ್ನು ಕಂಡಿದೆ. ಅನಿರುದ್ಧ ಅವರನ್ನು ಧಾರಾವಾಹಿ ತಂಡದಿಂದ ಹೊರಹಾಕಿದ ನಂತರ ಅವರ ಸ್ಥಾನಕ್ಕೆ ಹರೀಶ್‌ ರಾಜ್‌ ಅವರನ್ನು ಕರೆತರಲಾಗಿದೆ. ಅದಕ್ಕಾಗಿಯೇ ಕೆಲವು ಹೊಸ ಉಪಕಥೆಯನ್ನೂ ಪರಿಚಯಿಸಲಾಗಿದೆ. ಹಾಗೆಯೇ ಜೋಡಿ ಹಕ್ಕಿ ಧಾರಾವಾಹಿ ಖ್ಯಾತಿಯ ಚೈತ್ರ ರಾವ್‌ ಅವರನ್ನೂ ಸಹ ಆರಾಧನಾ ಹೆಸರಿನಲ್ಲಿ ಧಾರಾವಾಹಿಯಲ್ಲಿ ಪರಿಚಯಿಸಲಾಗಿದೆ.

ಜೊತೆ ಜೊತೆಯಲ್ಲಿ ಧಾರಾವಾಹಿಯು ಮಧ್ಯಮ ವಯಸ್ಸಿನ ಉದ್ಯಮಿ ಆರ್ಯವರ್ಧನ್‌ ಕಥೆಯಾಗಿದೆ. ಅದರಲ್ಲಿ ಆ ಉದ್ಯಮಿಗೆ ಅನು ಹೆಸರಿನ ಯುವತಿಯೊಂದಿಗೆ ಪ್ರೀತಿ ಹುಟ್ಟಿ ಅವರಿಬ್ಬರು ಮದುವೆಯಾಗುತ್ತಾರೆ. ಇದೀಗ ಅನು ಗರ್ಭಿಣಿಯಾಗಿದ್ದು, ಅದೇ ಸಂಭ್ರಮದಲ್ಲಿ ಆರ್ಯವರ್ಧನ್‌ ಇದ್ದಾರೆ. ಆದರೆ ಇವರಿಬ್ಬರ ಅನ್ಯೋನ್ಯತೆ ಬಗ್ಗೆ ಆರಾಧನಾ ಅವರಿಗೆ ಅಸಮಾಧಾನ ಇದೆ.

ಇದನ್ನೂ ಓದಿ: Anirudh Jatkar: ʻಜೊತೆ ಜೊತೆಯಲಿʼ ಖ್ಯಾತಿಯ ಅನಿರುದ್ಧ ಮುಂಬರುವ ಧಾರಾವಾಹಿಗೆ ನಾಯಕಿ ಯಾರು?
ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಈ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

Continue Reading

ಕಿರುತೆರೆ

Vaishnavi Gowda: ಕಾನೂನು ಪದವಿ ಪಡೆದ ಕಿರುತೆರೆ ನಟಿ ವೈಷ್ಣವಿ ಗೌಡ ತಾಯಿ

ಅಮ್ಮನ (Vaishnavi Gowda) ಕುರಿತಾದ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ. ವೈಷ್ಣವಿ ಅವರ ತಾಯಿ ಭಾನು ರವಿಕುಮಾರ್ ಈಗ ಲಾ ಪದವಿ ಮುಗಿಸಿ ಕಪ್ಪು ಕೋಟ್‌ ಧರಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಫೋಟೊ ಕೂಡ ಹಂಚಿಕೊಂಡಿದ್ದಾರೆ.

VISTARANEWS.COM


on

Edited by

Vaishnavi Gowdas mother who has a law degree
Koo

ಬೆಂಗಳೂರು: ʻಅಗ್ನಿ ಸಾಕ್ಷಿʼ ಧಾರಾವಾಹಿ ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) ಸೀತಾರಾಮ ಧಾರಾವಾಹಿ ಮೂಲಕ ಮತ್ತೆ ಅಭಿನಯಿಸುತ್ತಿದ್ದಾರೆ. ಪ್ರೋಮೊಗಳ ಮೂಲಕ ವೀಕ್ಷಕರ ಗಮನ ಸೆಳೆದಿದ್ದಾರೆ. ಶೀಘ್ರದಲ್ಲಿಯೇ ಈ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಇದೀಗ ಅವರ ಅಮ್ಮನ ಕುರಿತಾದ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ. ವೈಷ್ಣವಿ ಅವರ ತಾಯಿ ಭಾನು ರವಿಕುಮಾರ್ ಈಗ ಲಾ ಪದವಿ ಮುಗಿಸಿ ಕಪ್ಪು ಕೋಟ್‌ ಧರಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಫೋಟೊ ಕೂಡ ಹಂಚಿಕೊಂಡಿದ್ದಾರೆ.

ಇನ್‌ಸ್ಟಾದಲ್ಲಿ ಫೋಟೊ ಹಂಚಿಕೊಂಡು ʻʻ’ಮನೆಯಲ್ಲೀಗ ವಕೀಲರು ಇದ್ದಾರೆ. ನೀವು ಯಾವಾಗಲೂ ವಯಸ್ಸು ಕೇವಲ ನಂಬರ್‌ ಎಂದು ಕಲಿಸಿದ್ದೀರಿ. ಈ ವಯಸ್ಸಿನಲ್ಲಿ ನೀವು ಏನು ಸಾಧನೆ ಮಾಡಿದ್ದೀರ. ಅದನ್ನು ನೋಡಿ ಹೆಮ್ಮೆ ಪಡುವೆ’ ಎಂದು ವೈಷ್ಣವಿ ಬರೆದುಕೊಂಡಿದ್ದಾರೆ. ವೈಷ್ಣವಿ ಅವರ ತಾಯಿ ಮಗಳಿಗೆ ಸದಾ ಬೆಂಬಲ ನೀಡುತ್ತಿರುತ್ತಾರೆ. ಕೆಲವು ದಿನಗಳ ಹಿಂದೆ ವೈಷ್ಣವಿ ತಾಯಿ ಇದ್ದಕ್ಕಿದ್ದಂತೆ ತೂಕ ಇಳಿಸಿಕೊಂಡ ವಿಚಾರ ದೊಡ್ಡ ಸುದ್ದಿ ಆಗಿತ್ತು. ನನ್ನ ತಾಯಿ ಯೋಗ ಮಾಡಿ ತೂಕ ಇಳಿಸಿಕೊಂಡಿದ್ದಾರೆ ಎಂದು ಈ ಹಿಂದೆ ವೈಷ್ಣವಿ ಹೇಳಿದ್ದರು. ಅಷ್ಟೇ ಅಲ್ಲದೇ ಮನೆಯ ಗೃಪ್ರವೇಶದ ಫೋಟೊ ಕೂಡ ಹಂಚಿಕೊಂಡು ಸುದ್ದಿಯಾಗಿದ್ದರು.

ಇದನ್ನೂ ಓದಿ: Vaishnavi Gowda | ʻಸೀತಾರಾಮʼ ಧಾರಾವಾಹಿ ಮೂಲಕ ಮಿಂಚಲಿದ್ದಾರೆ ವೈಷ್ಣವಿ ಗೌಡ

ವೈಷ್ಣವಿ ಪೋಸ್ಟ್‌

ಮತ್ತೆ ಬಣ್ಣದ ಲೋಕಕ್ಕೆ ವೈಷ್ಣವಿ

ಅಗ್ನಿಸಾಕ್ಷಿʼ ಧಾರಾವಾಹಿ ನಂತರ ವೈಷ್ಣವಿ ಅವರು ಬಿಗ್‌ ಬಾಸ್‌ ಮನೆಗೆ ಕಾಲಿಟ್ಟಿದ್ದರು. ಅಲ್ಲಿ ಸಾಕಷ್ಟು ಪ್ರಶಂಸೆಯನ್ನು ಪಡೆದುಕೊಂಡರು. ಸ್ವಪ್ನ ಕೃಷ್ಣ ನಿರ್ದೇಶನದ ಸೀತಾರಾಮ ಧಾರಾವಾಹಿಯಲ್ಲಿ ನಾಯಕಿಯಾಗಿಯಾಗುತ್ತಿದ್ದಾರೆ ವೈಷ್ಣವಿ ಗೌಡ. ಈ ಹಿಂದೆ ಅಷ್ಟೇ ವೈಷ್ಣವಿ ಅವರು ಉದ್ಯಮಿ ವಿದ್ಯಾಭರಣ್ ಜತೆ​ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾದ ಫೋಟೊವೊಂದು ವೈರಲ್ ಆಗಿತ್ತು. ಬಳಿಕ ಕಾರಣಾಂತರಗಳಿಂದ ಆ ಸಂಬಂಧ ಮುರಿದು ಬಿದ್ದಿದೆ. ಈಗ ವೈಷ್ಣವಿಗೌಡ ಸ್ವಲ್ಪ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ.

Continue Reading

ಕಿರುತೆರೆ

Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು

ಶಿವಾಂಗಿ ಜೋಶಿ (Shivangi Joshi) ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗುಣಮುಖನಾವಾಗಿ ಬರುತ್ತೇನೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Edited by

Shivangi Joshi hospitalised due to kidney infection
Koo

ಬೆಂಗಳೂರು: ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ (Yeh Rishta Kya Kehlata Hai) ಧಾರಾವಾಹಿ ಖ್ಯಾತಿಯ ನಟಿ ಶಿವಾಂಗಿ ಜೋಶಿ (Shivangi Joshi) ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗುಣಮುಖನಾಗಿ ಬರುತ್ತೇನೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಶಿವಾಂಗಿ ಅವರು ಆಸ್ಪತ್ರೆಗೆ ದಾಖಲಾದ ಫೋಟೊ ಹಂಚಿಕೊಂಡಿದ್ದಾರೆ.

ಇನ್‌ಸ್ಟಾದಲ್ಲಿ ʻʻಎಲ್ಲರಿಗೂ ನಮಸ್ಕಾರ, ಒಂದೆರಡು ದಿನಗಳಿಂದ ನನಗೆ ಕಿಡ್ನಿ ಸೋಂಕಿತ್ತು. ನನ್ನ ಕುಟುಂಬ, ಸ್ನೇಹಿತರು, ವೈದ್ಯರ ಬೆಂಬಲ,ಆಸ್ಪತ್ರೆಯ ಸಿಬ್ಬಂದಿ ಮತ್ತು ದೇವರ ಕೃಪೆಯಿಂದ ಆರೋಗ್ಯವಾಗಿದ್ದೇನೆ. ಶೀಘ್ರದಲ್ಲೇ ಗುಣಮುಖಳಾಗಿ ಬರುತ್ತೇನೆʼʼ ಎಂದು ಬರೆದುಕೊಂಡಿದ್ದಾರೆ. ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳು ಶಿವಾಂಗಿಗೆ ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Prithvi Shaw : ನಟಿ ಸಪ್ನಾ ಗಿಲ್​ ವಿರುದ್ಧ ಕೊಲೆ ಕೇಸ್​ ಕೂಡ ದಾಖಲು, ಮತ್ತೊಮ್ಮೆ ಜೈಲು ಸೇರುವ ಸಾಧ್ಯತೆ?

ಶಿವಾಂಗಿ ಜೋಶಿ ಅವರು 2013ರಲ್ಲಿ ಖೇಲ್ತಿ ಹೈ ಜಿಂದಗಿ ಆಂಖ್ ಮಿಚೋಲಿ ( Khelti Hai Zindagi Aankh Micholi) ಧಾರಾವಾಹಿ ಮೂಲಕ ಕಿರುತೆರೆಗೆ ಪದಾರ್ಪಣೆ ಮಾಡಿದರು. 2016ರಲ್ಲಿ ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ (Yeh Rishta Kya Kehlata Hai) ಮೂಲಕ ಮನೆಮಾತರಾದರು. ಕಳೆದ ವರ್ಷ, ರೋಹಿತ್ ಶೆಟ್ಟಿ ಅವರ ರಿಯಾಲಿಟಿ ಶೋ ʻಖತ್ರೋನ್ ಕೆ ಖಿಲಾಡ-12 ನಲ್ಲಿ ಭಾಗವಹಿಸಿದ್ದರು.

Continue Reading

ಕಿರುತೆರೆ

Fashion Interview: ಕಿರುತೆರೆಯ ಸ್ಟೈಲಿಶ್‌ ಐಕಾನ್‌ಗಳ ಟಾಪ್‌ ಲಿಸ್ಟ್‌ಗೆ ಸೇರಿದ ನಿರಂಜನ್‌ ದೇಶಪಾಂಡೆ

ನಟ ಹಾಗೂ ಜನಪ್ರಿಯ ನಿರೂಪಕರಾಗಿರುವ ನಿರಂಜನ್‌ ದೇಶಪಾಂಡೆ (Fashion Interview) ಸದ್ಯಕ್ಕೆ ಟೆಲಿವಿಷನ್‌ ಲೋಕದ ಸ್ಟೈಲಿಶ್‌ ಐಕಾನ್‌ ಎಂದೇ ಖ್ಯಾತಿ ಗಳಿಸಿದ್ದಾರೆ. ತಮ್ಮದೇ ಆದ ಫ್ಯಾಷನ್‌ ಲುಕ್‌ಗೆ ಹೆಸರಾಗಿದ್ದಾರೆ. ಈ ಬಗ್ಗೆ ಅವರು ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ್ದಾರೆ.

VISTARANEWS.COM


on

Edited by

Fashion Interview
Koo

ಸಂದರ್ಶನ: ಶೀಲಾ ಸಿ. ಶೆಟ್ಟಿ

ಕಿರುತೆರೆಯಲ್ಲಿ ಸದ್ಯಕ್ಕೆ ಸ್ಟೈಲಿಶ್‌ ಹಾಗೂ ಆಕರ್ಷಕವಾಗಿ ಕಾಣಿಸುವವರ ಸಾಲಿನಲ್ಲಿ ನಟ ಹಾಗೂ ನಿರೂಪಕ ನಿರಂಜನ್‌ ದೇಶಪಾಂಡೆ ಮೊದಲ ಸ್ಥಾನದಲ್ಲಿದ್ದಾರೆ. ಪ್ರತಿ ಕಾರ್ಯಕ್ರಮಗಳಲ್ಲೂ ಸಖತ್‌ ಫ್ಯಾಷೆನಬಲ್‌ ಆಗಿ ಕಾಣಿಸಿಕೊಳ್ಳುವ ಯುವ ನಿರೂಪಕ ನಿರಂಜನ್‌ (niranjan deshpande) ಅವರು ಫ್ಯಾಷನ್‌ ವಿಮರ್ಶಕರ ಫೇವರೇಟ್‌ ಕೂಡ ಹೌದು. ಆ ಮಟ್ಟಿಗೆ ಟ್ರೆಂಡಿಯಾಗಿ ಕಾಣಿಸಿಕೊಳ್ಳುತ್ತಾರೆ. ಜತೆಗೆ ತಮ್ಮದೇ ಆದ ಯೂನಿಕ್‌ ಫ್ಯಾಷನ್‌ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಉದ್ಯಾನನಗರಿಯ ವೆಲ್ಹೋಜ್ಹ್ ಇವ್‌ ಸಂಸ್ಥೆ ಆಯೋಜಿಸಿದ್ದ ವಿಮೆನ್ಸ್‌ ಆಚಿವರ್ಸ್ ಆವಾರ್ಡ್ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ ನಿರಂಜನ್‌ ದೇಶಪಾಂಡೆ, ವಿಸ್ತಾರ ನ್ಯೂಸ್‌ನೊಂದಿಗೆ ತಮ್ಮ ಫ್ಯಾಷನಬಲ್‌ ಲೈಫ್‌ಸ್ಟೈಲ್‌ ಬಗ್ಗೆ ಮಾತನಾಡಿದ್ದಾರೆ.

ಫ್ಯಾಷನಬಲ್‌ ನಿರೂಪಕರ ಟಾಪ್‌ ಲಿಸ್ಟ್‌ನಲ್ಲಿದ್ದಿರಲ್ಲ! ನಿಮ್ಮ ಫ್ಯಾಷನ್‌ ಮಂತ್ರ ಏನು ?

ಧನ್ಯವಾದಗಳು. ನಾನು ಆದಷ್ಟೂ ಸೀಸನ್‌ವೈಸ್‌ ಫ್ಯಾಷನ್‌ ಅಳವಡಿಸಿಕೊಳ್ಳುತ್ತೇನೆ. ಉದಾಹರಣೆಗೆ., ಬೇಸಿಗೆ ತಕ್ಕಂತೆ ನನ್ನ ಡ್ರೆಸ್‌ಕೋಡ್‌ ಇರುತ್ತದೆ. ಬಿಸಿಲಿಗೆ ಸನ್‌ಗ್ಲಾಸ್‌, ಇನ್ನು ಚಳಿಗಾಲಕ್ಕೆ ಲೆಯರ್‌ ಲುಕ್‌ ನೀಡುವ ಜಾಕೆಟ್ಸ್‌ ಹೀಗೆ ಬದಲಾಗುತ್ತಿರುತ್ತದೆ.

ನಿಮ್ಮ ಸಿಗ್ನೇಚರ್‌ ಸ್ಟೈಲ್‌ ಬಗ್ಗೆ ಹೇಳಿ?

ನನಗೆ ಚೈನಾ ಕಾಲರ್ಸ್ ಇರುವಂತಹ ಶರ್ಟ್ಸ್‌, ಟೋರ್ನ್ ಜೀನ್ಸ್‌ ಹಾಗೂ ಸನ್‌ಗ್ಲಾಸ್‌ ನನ್ನ ಸಿಗ್ನೇಚರ್‌ ಸ್ಟೈಲ್‌ ಲಿಸ್ಟ್‌ನಲ್ಲಿದೆ.

Fashion Interview

ನಿಮ್ಮ ಸ್ಟೈಲ್‌ಸ್ಟೇಟ್‌ಮೆಂಟ್‌ಗೆ ಸಾಥ್‌ ನೀಡುವ ಅಂಶಗಳ್ಯಾವುವು?

ಮುಗುಳ್ನಗೆ. ಹೌದು. ಮುಖದ ಮೇಲಿನ ಒಂದು ಮುಗುಳ್ನಗೆ ಇಡೀ ಲುಕ್‌ಗೆ ಕಿರೀಟವಿದ್ದಂತೆ. ನೋಡಲು ಆಕರ್ಷಕವಾಗಿ ಕಾಣಲು ಇದು ಪ್ಲಸ್‌ ಪಾಯಿಂಟ್‌. ಹುಡುಗಿಯರೇ ಆಗಲಿ ಹುಡುಗರೇ ಆಗಲಿ, ಎಷ್ಟೆಲ್ಲಾ ಫ್ಯಾಷನಬಲ್‌ ಆಗಿ ರೆಡಿಯಾಗಿದ್ದರೂ ಕೊನೆಗೆ ಮುಖದ ಮೇಲಿನ ನಗು ಮತ್ತಷ್ಟು ಸುಂದರವಾಗಿ ಕಾಣುವಂತೆ ಬಿಂಬಿಸುತ್ತದೆ. ನಗು ಇಲ್ಲದಿದ್ದರೇ ಎಷ್ಟು ದುಬಾರಿ ಉಡುಪು ಧರಿಸಿದರೂ ಸಪ್ಪೆಯೆಂದೆನಿಸಬಹುದು.

ನಿಮಗೆ ಎಥ್ನಿಕ್‌ ಅಥವಾ ವೆಸ್ಟರ್ನ್ ಯಾವ ಬಗೆಯ ಫ್ಯಾಷನ್‌ವೇರ್‌ಗಳಿಷ್ಟ?

ಹಾಗೇನಿಲ್ಲ! ಕಂಫರ್ಟಬಲ್‌ ಹಾಗೂ ಗುಡ್‌ ಲುಕ್ಕಿಂಗ್‌ ಕಾಣುವಂತಹ ಯಾವುದೇ ಉಡುಪಾದರೂ ಸರಿಯೇ!

ಟೆಲಿವಿಷನ್‌ನಲ್ಲಿ ನೀವು ಧರಿಸುವ ಫ್ಯಾಷನ್‌ವೇರ್‌ಗೂ ಅಭಿಮಾನಿಗಳು ಇದ್ದಾರಂತಲ್ಲ! ಸೋ, ಪ್ರತಿಬಾರಿ ಸ್ಟೈಲಿಶ್‌ ಲುಕ್‌ ಹೇಗೆ ನಿರ್ಧರಿಸುತ್ತೀರಿ?

ಹೌದು. ಅಭಿಮಾನಿಗಳಿದ್ದಾರೆ. ಖುಷಿಯಾಗುತ್ತದೆ. ಕೆಲವೊಂದು ಸ್ಟೈಲಿಶ್‌ ಲುಕ್‌ಗಳನ್ನು ಖುದ್ದು ನಿರ್ಧರಿಸುತ್ತೀನಿ. ಆದರೆ, ಇದೀಗ ಆಯಾ ಕಾರ್ಯಕ್ರಮಗಳಿಗೆ ತಕ್ಕಂತೆ ಚಾನೆಲ್‌ಗಳೇ ಹೀಗಿರಬೇಕೆಂದು ತೀರ್ಮಾನಿಸಿ ಆಪ್ಷನ್‌ ನೀಡುತ್ತವೆ. ಪರಿಣಾಮ, ಎಲ್ಲರ ಅಭಿಪ್ರಾಯಗಳು ಒಟ್ಟಿಗೆ ಸೇರಿ ಸ್ಟೈಲಿಶ್‌ ಲುಕ್‌ ನನ್ನದಾಗುತ್ತದೆ.

ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯವಾಗಿರುವ ನೀವು ನೆಟ್ಟಿಗರಿಗೆ ಯಾವ ಬಗೆಯ ಫ್ಯಾಷನ್‌ ಟಿಪ್ಸ್‌ ನೀಡುತ್ತೀರಾ?

ಫ್ಯಾಷನ್‌ ಲುಕ್‌ ನಿಮಗೆ ಹೊಂದುವಂತಿರಲಿ, ಬೇರೆಯವರ ಫ್ಯಾಷನ್‌ ಫಾಲೋ ಮಾಡಲು ಹೋಗಿ ನಗೆಪಾಟಲಿಗೀಡಾಗಬೇಡಿ. ಆದಷ್ಟೂ ನಿಮ್ಮ ಬಾಡಿ ಟೈಪ್‌ಗೆ ಹೊಂದುವಂತದ್ದನ್ನು ಧರಿಸಿ. ಸ್ಮಾರ್ಟ್ ಆಗಿ ಕಾಣಿಸಿಕೊಳ್ಳಿ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading
Advertisement
smartphone
ವಾಣಿಜ್ಯ2 mins ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ8 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ15 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್29 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ37 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ43 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ44 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್46 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ50 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್52 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!