Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ - Vistara News

ಸಿನಿಮಾ

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Tharun Sudhir: ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ. ಈಗ ಈ ಜೋಡಿಯು ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ.

VISTARANEWS.COM


on

Tharun Sudhir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಆರತಕ್ಷತೆಯು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನಲ್ಲಿ ರಿಸೆಪ್ಶನ್‌ ನಡೆದಿದ್ದು, ಸ್ಯಾಂಡಲ್‌ವುಡ್‌ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜಕಾರಣಿಗಳು ಸೇರಿ ನೂರಾರು ಗಣ್ಯರು ರಿಸೆಪ್ಶನ್‌ನಲ್ಲಿ ಭಾಗವಹಿಸಿ, ನೂತನ ಜೋಡಿಗೆ ಶುಭ ಹಾರೈಸಿದ್ದಾರೆ. ಭಾನುವಾರ (ಆಗಸ್ಟ್‌ 11) ಮದುವೆ ಸಮಾರಂಭ ನಡೆಯಲಿದ್ದು, ಇನ್ನಷ್ಟು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಿನಿಮಾ ಕಾನ್ಸೆಪ್ಟ್‌ನಲ್ಲಿಯೇ ಸಿದ್ಧವಾದ ವೇದಿಕೆ ಮೇಲೆ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಅವರು ಮಿಂಚಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಟ ಪ್ರೇಮ್‌, ನಟಿಯರಾದ ಮಾಲಾಶ್ರೀ, ಆರಾಧನಾ ಮಾಲಾಶ್ರೀ, ಪ್ರೇಮಾ, ನಿರ್ಮಾಪಕ ಕೆ.ಮಂಜು, ನಟ ರಮೇಶ್‌ ಅರವಿಂದ್‌ ಸೇರಿ ಹಲವು ಸೆಲೆಬ್ರಿಟಿಗಳು, ಗಣ್ಯರು ನೂತನ ಜೋಡಿಗೆ ಶುಭ ಕೋರಿದರು.

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ್ದಾರೆ. ಇವರೆಲ್ಲರೂ ಭಾನುವಾರ ಮದುವೆಗೆ ಹಾಜರಾಗುವ ಸಾಧ್ಯತೆ ಇದೆ.

ಆರತಕ್ಷತೆಯ ಲೈವ್‌ ವಿಡಿಯೊ ವೀಕ್ಷಿಸಿ

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡಿರುವ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ.

ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ರಿಸೆಪ್ಶನ್‌ ಲೈವ್‌ ವಿಡಿಯೊ ಇಲ್ಲಿದೆ ನೋಡಿ

Tharun Sudhir: ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.

VISTARANEWS.COM


on

Tharun Sudhir
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಮೆಹಂದಿ ಶಾಸ್ತ್ರವು ಅದ್ಧೂರಿಯಾಗಿ ನೆರವೇರಿದ್ದು, ಶನಿವಾರ (ಆಗಸ್ಟ್‌ 10) ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ರಿಸೆಪ್ಶನ್‌ ನಡೆಯುತ್ತಿದೆ. ಶನಿವಾರ ಆರತಕ್ಷತೆ ನಡೆದರೆ, ಭಾನುವಾರ ಅದ್ಧೂರಿಯಾಗಿ ತಾರಾ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಇನ್ನು ತರುಣ್‌ ಸುಧೀರ್‌ ಅವರ ರಿಸೆಪ್ಶನ್‌ಗೆ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಆಗಮಿಸುತ್ತಿದ್ದಾರೆ. ಅವರ ರಿಸೆಪ್ಶನ್‌ ಲೈವ್‌ ವಿಡಿಯೊವನ್ನು ಇಲ್ಲಿ ವೀಕ್ಷಿಸಿ.

ಗಣ್ಯರಿಗೆ ಆಹ್ವಾನ

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದರು.

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Continue Reading

ಟಾಲಿವುಡ್

Samantha Ruth Prabhu: ನಾಗ ಚೈತನ್ಯ ಎಂಗೇಜ್‌ ಆದ ಬೆನ್ನಲ್ಲೇ ಸಮಂತಾಗೆ ಬಂತು ಪ್ರಪೋಸಲ್‌; ಗ್ಲೀನ್‌ ಸಿಗ್ನಲ್‌ ಕೊಟ್ರಾ ನಟಿ?

Samantha Ruth Prabhu: ಮುಕೇಶ್ ಎಂಬವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿದ್ದಾರೆ ಅದರಲ್ಲಿ ಮೊದಲಿಗೆ ಮುಕೇಶ್‌ ಸಮಂತಾಗೆ ಚಿಂತಿಸಬೇಕಾಗಿಲ್ಲ ಏಕೆಂದರೆ ನಾನು ಯಾವಾಗಲೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ರೀಲ್ಸ್‌ನಲ್ಲಿ ಸಮಂತಾ ‘ಮನೆ’ಯನ್ನು ತಲುಪಿದ ನಂತರ ಜಿಮ್‌ಗೆ ಹೋಗುತ್ತಾರೆ. ಬಳಿಕ ಅಲ್ಲಿಯೇ ‘ಹೃದಯ’ವನ್ನು ನೀಡಿ ಬೇಡಿಕೊಳ್ಳುವುದರೊಂದಿಗೆ ರೀಲ್ಸ್‌ ಕೊನೆಗೊಳ್ಳುತ್ತದೆ.

VISTARANEWS.COM


on

Samantha Ruth Prabhu to marry him instead after Naga Chaitanya
Koo

ಬೆಂಗಳೂರು: ಸಮಂತಾ (Samantha Ruth Prabhu: ) ಮಾಜಿ ಪತಿ ನಾಗ ಚೈತನ್ಯ ಅವರು ಆಗಸ್ಟ್ 8 ರಂದು ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಮಂತಾ ರುತ್ ಪ್ರಭು ಇತ್ತೀಚೆಗೆ ಅಭಿಮಾನಿಯಿಂದ ಮದುವೆಯ ಆಫರ್‌ವೊಂದನ್ನು ಸ್ವೀಕರಿಸಿದ್ದಾರೆ. ಈ ಬಗ್ಗೆ ನಟಿಯೂ ಪ್ರತಿಕ್ರಿಯೆ ನೀಡಿದ್ದಾರೆ.

ಮುಕೇಶ್ ಎಂಬವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿದ್ದಾರೆ ಅದರಲ್ಲಿ ಮೊದಲಿಗೆ ಮುಕೇಶ್‌ ಸಮಂತಾಗೆ ಚಿಂತಿಸಬೇಕಾಗಿಲ್ಲ ಏಕೆಂದರೆ ನಾನು ಯಾವಾಗಲೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ರೀಲ್ಸ್‌ನಲ್ಲಿ ಸಮಂತಾ ‘ಮನೆ’ಯನ್ನು ತಲುಪಿದ ನಂತರ ಜಿಮ್‌ಗೆ ಹೋಗುತ್ತಾರೆ. ಬಳಿಕ ಅಲ್ಲಿಯೇ ‘ಹೃದಯ’ವನ್ನು ನೀಡಿ ಬೇಡಿಕೊಳ್ಳುವುದರೊಂದಿಗೆ ರೀಲ್ಸ್‌ ಕೊನೆಗೊಳ್ಳುತ್ತದೆ. ಅಷ್ಟೇ ಅಲ್ಲ ಆರ್ಥಿಕವಾಗಿ 2 ವರ್ಷದೊಳಗೆ ಗಟ್ಟಿಯಾಗುತ್ತೇನೆ ಎಂದು ಪ್ರಪೋಸ್‌ ಬಗ್ಗೆ ಮನವರಿಕೆ ಮಾಡುತ್ತಾರೆ. ಈ ರೀಲ್ಸ್‌ ಭಾರಿ ವೈರಲ್‌ ಆಗುತ್ತಿದ್ದಂತೆ ಸಮಂತಾ ಅವರ ಗಮನ ಕೂಡ ಸೆಳೆದಿದೆ.

ಫಿಟ್‌ನೆಸ್ ಫ್ರೀಕ್ ಎಂದು ಹೆಸರುವಾಸಿಯಾಗಿರುವ ಸಮಂತಾ ರೀಲ್ಸ್‌ಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ, “ಹಿನ್ನೆಲೆಯಲ್ಲಿರುವ ಜಿಮ್ ನೋಡಿ ನನಗೆ ಬಹುತೇಕ ಮನವರಿಕೆ ಆಗಿದೆ” ಎಂದು ಕಮೆಂಟ್‌ ಮಾಡಿದ್ದಾರೆ. ಬಳಿಕ ಮತ್ತೆ ಮುಕೇಶ್‌ ಅವರು “ಜಗತ್ತು ಸಮಂತಾ ವಿರುದ್ಧವಾಗಿದ್ದರೆ, ನಾನು ಪ್ರಪಂಚದ ವಿರುದ್ಧವಾಗಿರುತ್ತೇನೆ” ಎಂದು ಅವರು ಇನ್ಸ್ಟಾಗ್ರಾಮ್ ಸ್ಟೋರಿಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

ಸಮಂತಾ ಮತ್ತು ಚೈತನ್ಯ ಹೈದರಾಬಾದ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. 2017ರಲ್ಲಿ ಮದುವೆಯಾಗಿ 2021 ರಲ್ಲಿ ವಿಚ್ಛೇದನ ಪಡೆದರು.

ಇದೀಗ ಚೈತನ್ಯ ಆಗಸ್ಟ್ 8 ರಂದು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶೋಭಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗಾರ್ಜುನ ಅವರು ನಿಶ್ಚಿತಾರ್ಥದ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಪ್ರಕಟಿಸಿದರು.

Continue Reading

ಕಾಲಿವುಡ್

Actor Suriya: ಸೂರ್ಯಗೆ ಸೆಟ್‌ನಲ್ಲಿ ಗಾಯ: ಆರೋಗ್ಯ ಸ್ಥಿತಿ ಹೇಗಿದೆ?

Actor Suriya: ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

VISTARANEWS.COM


on

Actor Suriya minor injury while shooting for film
Koo

ಬೆಂಗಳೂರು: ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ (Actor Suriya) ಅವರ ಮುಂಬರುವ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯ ಅವರ ತಲೆಗೆ ಗಾಯವಾಗಿದೆ. ಈ ಘಟನೆಯ ನಂತರ ತಾತ್ಕಾಲಿಕವಾಗಿ ಸೂರ್ಯ 44 ಚಿತ್ರದ ಶೂಟಿಂಗ್‌ವನ್ನು ( Karthik Subbaraj) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಎಕ್ಸ್ ನಲ್ಲಿ ನಟನ ಯೋಗಕ್ಷೇಮದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದರು. ʻʻನಟನಿಗೆ ಸಣ್ಣ ಗಾಯವಾಗಿದೆ. ದಯವಿಟ್ಟು ಚಿಂತಿಸಬೇಡಿ, ಸೂರ್ಯ ಅಣ್ಣ ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಯೊಂದಿಗೆ ಸಂಪೂರ್ಣವಾಗಿ ಚೆನ್ನಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಈ ಘಟನೆ ಬಗ್ಗೆ ಕೇಳಿ ಸೂರ್ಯ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆದರೆ, ಈಗ ನಿರ್ಮಾಪಕರು ಈ ಬಗ್ಗೆ ಮಾಹಿತಿ ಕೊಟ್ಟ ಬಳಿಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ. ಅವರು ಬೇಗ ಚೇತರಿಕೆ ಕಂಡು ಮತ್ತೆ ಶೂಟಿಂಗ್ ಸೆಟ್ ಸೇರಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ʻಕಂಗುವʼ ಸಿನಿಮಾ

ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್‌ ಇರಲಿದೆ ಎಂದಿದ್ದಾರೆ.

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Milana Nagaraj:  ಮಿಲನಾ ನಾಗರಾಜ್ ಸೀಮಂತಶಾಸ್ತ್ರ ಫೋಟೊಗಳು ವೈರಲ್‌!

Milana Nagaraj: ಕಾರ್ಯಕ್ರಮಕ್ಕೆ ನಟಿ ಸಂಗೀತಾ ಶೃಂಗೇರಿ, ಅಮೂಲ್ಯಾ, ಅಕುಲ್ ಬಾಲಾಜಿ ಪತ್ನಿ ಜ್ಯೋತಿ ಕೂಡ ಆಗಮಿಸಿದ್ದರು.ಸೀಮಂತದ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

VISTARANEWS.COM


on

Milana Nagaraj Baby Shower photos Baby bump photo
Koo

ನಟಿ ಮಿಲನಾ ನಾಗರಾಜ್ (Milana Nagaraj), ಡಾರ್ಲಿಂಗ್ ಕೃಷ್ಣ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗ ಮಿಲನಾ ಅವರು ಅದ್ಧೂರಿಯಾಗಿ ಸೀಮಂತ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ನಟಿ ಸಂಗೀತಾ ಶೃಂಗೇರಿ, ಅಮೂಲ್ಯಾ, ಅಕುಲ್ ಬಾಲಾಜಿ ಪತ್ನಿ ಜ್ಯೋತಿ ಕೂಡ ಆಗಮಿಸಿದ್ದರು.ಸೀಮಂತದ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಮಿಲನಾ ಅವರು ಸೆಪ್ಟೆಂಬರ್​​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಅವರಿಗೆ ಗಂಡು ಮಗು ಜನಿಸುತ್ತದೆಯೋ ಅಥವಾ ಹೆಣ್ಣುಮಗುವೋ ಎನ್ನುವ ಕುತೂಹಲ ಮೂಡಿದೆ.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. 
Continue Reading
Advertisement
natwar singh
ದೇಶ2 hours ago

Natwar Singh: ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವ ನಟ್ವರ್‌ ಸಿಂಗ್‌ ನಿಧನ; ಗಣ್ಯರ ಸಂತಾಪ

Paris Olympics 2024
ಪ್ರಮುಖ ಸುದ್ದಿ3 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

Hindenburg
ವಾಣಿಜ್ಯ3 hours ago

Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Narendra Modi Stadium
ಪ್ರಮುಖ ಸುದ್ದಿ3 hours ago

Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

Tharun Sudhir
ಸಿನಿಮಾ4 hours ago

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Paris Olympics 2024
ಪ್ರಮುಖ ಸುದ್ದಿ4 hours ago

Paris Olympics 2024 : ವಿನೇಶ್ ಫೋಗಟ್​ ಬೆಳ್ಳಿ ಪದಕದ ಮನವಿ ತೀರ್ಪು ಭಾನುವಾರಕ್ಕೆ ಮುಂದೂಡಿಕೆ

BJP-JDS Padayatra
ಕರ್ನಾಟಕ4 hours ago

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

Independence Day 2024
ದೇಶ5 hours ago

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

Shira News
ತುಮಕೂರು5 hours ago

Shira News: ಶ್ರಾವಣದ ಮೊದಲ ಶನಿವಾರ; ಶಿರಾ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

Jitesh Sharma
ಕ್ರೀಡೆ5 hours ago

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌