Site icon Vistara News

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Tharun Sudhir

ಬೆಂಗಳೂರು: ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಆರತಕ್ಷತೆಯು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನಲ್ಲಿ ರಿಸೆಪ್ಶನ್‌ ನಡೆದಿದ್ದು, ಸ್ಯಾಂಡಲ್‌ವುಡ್‌ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜಕಾರಣಿಗಳು ಸೇರಿ ನೂರಾರು ಗಣ್ಯರು ರಿಸೆಪ್ಶನ್‌ನಲ್ಲಿ ಭಾಗವಹಿಸಿ, ನೂತನ ಜೋಡಿಗೆ ಶುಭ ಹಾರೈಸಿದ್ದಾರೆ. ಭಾನುವಾರ (ಆಗಸ್ಟ್‌ 11) ಮದುವೆ ಸಮಾರಂಭ ನಡೆಯಲಿದ್ದು, ಇನ್ನಷ್ಟು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

https://vistaranews.com/wp-content/uploads/2024/08/Tarun.mp4

ಸಿನಿಮಾ ಕಾನ್ಸೆಪ್ಟ್‌ನಲ್ಲಿಯೇ ಸಿದ್ಧವಾದ ವೇದಿಕೆ ಮೇಲೆ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಅವರು ಮಿಂಚಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಟ ಪ್ರೇಮ್‌, ನಟಿಯರಾದ ಮಾಲಾಶ್ರೀ, ಆರಾಧನಾ ಮಾಲಾಶ್ರೀ, ಪ್ರೇಮಾ, ನಿರ್ಮಾಪಕ ಕೆ.ಮಂಜು, ನಟ ರಮೇಶ್‌ ಅರವಿಂದ್‌ ಸೇರಿ ಹಲವು ಸೆಲೆಬ್ರಿಟಿಗಳು, ಗಣ್ಯರು ನೂತನ ಜೋಡಿಗೆ ಶುಭ ಕೋರಿದರು.

https://vistaranews.com/wp-content/uploads/2024/08/Hamsalekha.mp4

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ್ದಾರೆ. ಇವರೆಲ್ಲರೂ ಭಾನುವಾರ ಮದುವೆಗೆ ಹಾಜರಾಗುವ ಸಾಧ್ಯತೆ ಇದೆ.

ಆರತಕ್ಷತೆಯ ಲೈವ್‌ ವಿಡಿಯೊ ವೀಕ್ಷಿಸಿ

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡಿರುವ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ.

ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Exit mobile version