Site icon Vistara News

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ರಿಸೆಪ್ಶನ್‌ ಲೈವ್‌ ವಿಡಿಯೊ ಇಲ್ಲಿದೆ ನೋಡಿ

Tharun Sudhir

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಮೆಹಂದಿ ಶಾಸ್ತ್ರವು ಅದ್ಧೂರಿಯಾಗಿ ನೆರವೇರಿದ್ದು, ಶನಿವಾರ (ಆಗಸ್ಟ್‌ 10) ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ರಿಸೆಪ್ಶನ್‌ ನಡೆಯುತ್ತಿದೆ. ಶನಿವಾರ ಆರತಕ್ಷತೆ ನಡೆದರೆ, ಭಾನುವಾರ ಅದ್ಧೂರಿಯಾಗಿ ತಾರಾ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಇನ್ನು ತರುಣ್‌ ಸುಧೀರ್‌ ಅವರ ರಿಸೆಪ್ಶನ್‌ಗೆ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಆಗಮಿಸುತ್ತಿದ್ದಾರೆ. ಅವರ ರಿಸೆಪ್ಶನ್‌ ಲೈವ್‌ ವಿಡಿಯೊವನ್ನು ಇಲ್ಲಿ ವೀಕ್ಷಿಸಿ.

ಗಣ್ಯರಿಗೆ ಆಹ್ವಾನ

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದರು.

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Exit mobile version