'The Elephant Whisperers' couple; Baby elephant under their care dies The Elephant Whisperers: ಆಸ್ಕರ್ ಪ್ರಶಸ್ತಿ ವಿಜೇತ ಬೊಮ್ಮನ್-ಬೆಳ್ಳಿ ಆರೈಕೆ ಮಾಡುತ್ತಿದ್ದ ಆನೆ ಮರಿ ಅನಾರೋಗ್ಯದಿಂದ ಸಾವು - Vistara News

South Cinema

The Elephant Whisperers: ಆಸ್ಕರ್ ಪ್ರಶಸ್ತಿ ವಿಜೇತ ಬೊಮ್ಮನ್-ಬೆಳ್ಳಿ ಆರೈಕೆ ಮಾಡುತ್ತಿದ್ದ ಆನೆ ಮರಿ ಅನಾರೋಗ್ಯದಿಂದ ಸಾವು

ಆನೆ ಮರಿ (The Elephant Whisperers)ತಾಯಿ ಮತ್ತು ಹಿಂಡಿನಿಂದ ಬೇರ್ಪಟ್ಟಿರುವುದು ಗೊತ್ತಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆನೆಮರಿಯನ್ನು ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ .ತನ್ನ ಹಿಂಡಿನಿಂದ ಬೇರ್ಪಟ್ಟ ಒತ್ತಡದ ಕಾರಣದಿಂದಾಗಿ ಮೃತಪಟ್ಟಿದೆ ಎಂದು ವರದಿಯಾಗಿದೆ.

VISTARANEWS.COM


on

'The Elephant Whisperers' couple; Baby elephant under their care dies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ʻದಿ ಎಲಿಫೆಂಟ್ ವಿಸ್ಪರರ್ಸ್‌ʼ (The Elephant Whisperers) ಖ್ಯಾತಿಯ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರು ಆರೈಕೆ ಮಾಡುತ್ತಿದ್ದ ಮರಿ ಆನೆಯೊಂದು ಮಾರ್ಚ್‌ 31ರಂದು ಶುಕ್ರವಾರ ನಸುಕಿನಲ್ಲಿ ಮೃತಪಟ್ಟಿದೆ. 4 ತಿಂಗಳ ವಯಸ್ಸಿನ ಆನೆ ಮರಿ ಎಂದು ವರದಿಯಾಗಿದೆ. ಸುಮಾರು ಎರಡು ವಾರಗಳ ಕಾಲ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರದಲ್ಲಿ ಮರಿ ಆನೆಯನ್ನು ಇರಿಸಲಾಗಿತ್ತು. ಆನೆ ಮರಿ ತಾಯಿ ಮತ್ತು ಹಿಂಡಿನಿಂದ ಬೇರ್ಪಟ್ಟಿರುವುದು ಗೊತ್ತಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆನೆಮರಿಯನ್ನು ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ. ತನ್ನ ಹಿಂಡಿನಿಂದ ಬೇರ್ಪಟ್ಟ ಒತ್ತಡದ ಕಾರಣದಿಂದಾಗಿ ಮೃತಪಟ್ಟಿದೆ ಎಂದು ವರದಿಯಾಗಿದೆ.

ಈ ತಿಂಗಳ ಆರಂಭದಲ್ಲಿ, ರಾಜ್ಯ ಅರಣ್ಯ ಇಲಾಖೆಯ ಆದೇಶದಂತೆ, ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಬೆಲ್ಲನ್ ಎಂಬಲ್ಲಿನ ಬಾವಿಯಿಂದ ಮರಿ ಆನೆಯನ್ನು ರಕ್ಷಿಸಲಾಯಿತು. ಮಾರ್ಚ್ 16ರಿಂದ, ಮರಿ ಆನೆಗೆ ದ್ರವ ಆಹಾರವನ್ನು ನೀಡಲಾಗಿತ್ತು. ವೈದ್ಯಕೀಯ ಸಿಬ್ಬಂದಿ ಮತ್ತು ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರು ಮೇಲ್ವಿಚಾರಣೆ ಮಾಡುತ್ತಿದ್ದರು. ಅಧಿಕಾರಿಗಳ ಪ್ರಕಾರ, ಆನೆಮರಿಗೆ ಲ್ಯಾಕ್ಟೋಜೆನ್ ಅನ್ನು ನೀಡಲಾಗುತ್ತಿತ್ತು. ಮರಿ ಆನೆ ಲ್ಯಾಕ್ಟೋಜೆನ್ ಅನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಮಾರ್ಚ್‌ 30 ಮಧ್ಯಾಹ್ನದವರೆಗೆ ಆನೆ ಮರಿಯ ಆರೋಗ್ಯ ಸಾಮಾನ್ಯವಾಗಿತ್ತು ಎಂದು ಎಂಟಿಆರ್ ಕ್ಷೇತ್ರ ನಿರ್ದೇಶಕ ಡಿ.ವೆಂಕಟೇಶ್ ತಿಳಿಸಿದ್ದಾರೆ. ಆದರೆ ಸಂಜೆಯ ಹೊತ್ತಿಗೆ ಬೇಧಿ ಉಂಟಾಗಿದ್ದು, ರಾತ್ರಿಯವರೆಗೂ ಹಾಗೇ ಇತ್ತು. “ಪಶುವೈದ್ಯರ ತಂಡವು ಆನೆ ಮರಿಗೆ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೃತಪಟ್ಟಿದೆ” ಎಂದು ವೆಂಕಟೇಶ್ ತಿಳಿಸಿದರು. ಕೆಲವು ಅಲರ್ಜಿಗಳಿಂದ ಅತಿಸಾರದಿಂದಾಗಿ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅನೆ ಮರಿ ಸಾವಿಗೆ ನಿಖರವಾದ ಕಾರಣವನ್ನು ಅಧ್ಯಯನ ಮಾಡಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಇದನ್ನೂ ಓದಿ: The Elephant Whisperers: ʻದಿ ಎಲಿಫೆಂಟ್ ವಿಸ್ಪರರ್ಸ್‌ʼನ ಬೊಮ್ಮನ್-ಬೆಳ್ಳಿ ದಂಪತಿಗೆ ವಿಮಾನದಲ್ಲಿ ಸಿಕ್ಕ ಗೌರವ ಹೇಗಿತ್ತು?

ಮೃತಪಟ್ಟ ಆನೆ ಮರಿ

ಲ್ಯಾಬ್ ಪರೀಕ್ಷೆಗಾಗಿ ಮೃತದೇಹದ ಪ್ರಮುಖ ಭಾಗಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ನಂತರ, ಬೊಮ್ಮನ್ ಮತ್ತು ಅರಣ್ಯ ಸಿಬ್ಬಂದಿ ಅರಣ್ಯ ಪ್ರದೇಶದಲ್ಲಿ ಶವವನ್ನು ಸುಡುವ ಮೊದಲು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ್ದಾರೆ.

ಮುದುಮಲೈ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮೀಸಲು ಪ್ರದೇಶದ ತೆಪ್ಪಕಾಡು ಆನೆ ಶಿಬಿರದಲ್ಲಿ ‘ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಚಿತ್ರೀಕರಿಸಿದ ನಂತರ ಆನೆ ಪಾಲಕ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಪ್ರಾಮುಖ್ಯತೆ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ ಕೂಡ ಒಂದು. ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿರುವ ಈ ಸಿನಿಮಾದ ಕನ್ನಡ ಮತ್ತು ಹಿಂದಿ ಅವತರಣಿಕೆಯ ತಮ್ಮ ಪಾತ್ರಕ್ಕೆ ನಾಯಕಿ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ. ಮೂಲತಃ ಕರ್ನಾಟಕವರಾದ ದೀಪಿಕಾ 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಬಳಿಕ ಕನ್ನಡತ್ತ ಮುಖ ಮಾಡಿರಲಿಲ್ಲ. ಈದೀಗ ಅವರು ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಟಾಲಿವುಡ್

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

Pushpa 2: ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

Pushpa 2 Allu Arjun fan recreates hook step on graduation day
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿತ್ತು. ‘ಪುಷ್ಪ 2’ ಚಿತ್ರದ ಮೊದಲ ಸಿಂಗಲ್ ‘ಪುಷ್ಪ ಪುಷ್ಪ’ ಬಿಡುಗಡೆ ಆದ ತಕ್ಷಣದಿಂದಲೇ ಟ್ರೆಂಡ್‌ ಆಗಿತ್ತು. ಅಲ್ಲು ಅರ್ಜುನ್‌ ಅವರ ಸ್ಟೈಲಿಶ್ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದರು. ಇದೀಗ ಈ ಸ್ಟೆಪ್ಸ್‌ವನ್ನು ಪದವಿ ವಿದ್ಯಾರ್ಥಿವೊಬ್ಬ ಪದವಿ ಪ್ರದಾನ ಮಾಡುವ ದಿನ ವೇದಿಕೆಯಲ್ಲಿ ‘ಪುಷ್ಪ ಪುಷ್ಪ’ ಸಾಂಗ್‌ ಸ್ಟೆಪ್ಸ್‌ ಹಾಕಿದ್ದಾನೆ. ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಇದನ್ನೂ ಓದಿ: Pushpa 2: ಬರೋಬ್ಬರಿ 60 ಕೋಟಿ ರೂ.ಗೆ ‘ಪುಷ್ಪ 2’ ಆಡಿಯೊ ಹಕ್ಕು ಮಾರಾಟ?

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

Lok Sabha Elections 2024: ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ.

VISTARANEWS.COM


on

Lok Sabha Elections 2024 Jr NTR, Allu Arjun, Chiranjeevi cast votes
Koo

ಹೈದರಾಬಾದ್‌: ಲೋಕಸಭೆಗೆ ಇಂದು 4ನೇ ಹಂತದ ಮತದಾನ ನಡೆಯಲಿದೆ. ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಒಟ್ಟು 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಸ್ಥಾನಗಳಿಗೆ ಮತದಾನ ನಡೆಯಲಿದೆ. ನಟ ಅಲ್ಲು ಅರ್ಜುನ್ (Allu Arjun) ಮತ್ತು ನಟ ಜ್ಯೂನಿಯರ್‌ ಎನ್‌ಟಿಆರ್‌ ( NTR Jr), ಇಂದು (ಮೇ.13) ಬೆಳಗ್ಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ತೆಲಂಗಾಣದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಜುಬಿಲಿ ಹಿಲ್ಸ್‌ನಲ್ಲಿ ಮೊದಲ ಮತದಾರರ ಗುಂಪಿನಲ್ಲಿ ಇಬ್ಬರು ಸೇರಿದ್ದಾರೆ. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.

‘ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಬಿಳಿ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್‌ನಲ್ಲಿ ಕಾಣಿಸಿಕೊಂಡರೆ, ಆರ್‌ಆರ್‌ಆರ್ ಸ್ಟಾರ್ ಜ್ಯೂನಿಯರ್‌ ಎನ್‌ಟಿಆರ್‌ ನೀಲಿ ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಕಂಡು ಬಂದರು.

ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ಮತಗಟ್ಟೆಗಳಲ್ಲಿ ಇಬ್ಬರು ನಟರು ಸರದಿಯಲ್ಲಿ ನಿಂತಿರುವ ವೀಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ. ದೇಶಕ್ಕೆ ನಾವು ಜವಾಬ್ದಾರಿಯುಳ್ಳವರು, ನಾವು ಕೇರ್ ಮಾಡುತ್ತೇವೆ ಎನ್ನುವುದನ್ನು ತೋರಿಸಿ. ಬಂದು ವೋಟ್ ಮಾಡಿ ಎಂದು ಅವರು ವೋಟ್ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮತದಾನಕ್ಕೆ ಕರೆ ಕೊಟ್ಟರು. ತ್ರಿಬಲ್ ಆರ್ ಸ್ಟಾರ್ ಸಂಗೀತ ನಿರ್ದೇಶಕ ಕೀರವಾಣಿ ಅವರೂ ಕೂಡಾ ವೋಟ್ ಮಾಡಿದ್ದಾರೆ. ಅವರು ವೋಟ್ ಮಾಡಿ ಬಂದು ಮನೆಯತ್ತ ಹೋಗುವುದು ಕಂಡುಬಂದಿದೆ.

ಇದನ್ನೂ ಓದಿ: Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

ಮತ ಚಲಾಯಿಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅಲ್ಲು ಅರ್ಜುನ್, ʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲʼ ಎಂದು ಸ್ಪಷ್ಟಪಡಿಸಿದರು. “ದಯವಿಟ್ಟು ನಿಮ್ಮ ಮತಗಳನ್ನು ಚಲಾಯಿಸಿ. ಇದು ಅತ್ಯಂತ ಜವಾಬ್ದಾರಿಯುತ ದಿನ” ಎಂದು ಅವರು ಹೇಳಿದರು. ʻʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ, ನನಗೆ ಆತ್ಮೀಯರಾಗಿರುವ ಎಲ್ಲರಿಗೂ ಬೆಂಬಲ ನೀಡುತ್ತೇನೆ. ನನ್ನ ಚಿಕ್ಕಪ್ಪ, ನನ್ನ ಸ್ನೇಹಿತ, ನನ್ನ ಮಾವ ಎಲ್ಲರೂ ರಾಜಕೀಯದಲ್ಲಿದ್ದಾರೆʼʼಎಂದರು.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ

ಆಂಧ್ರಪ್ರದೇಶದಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸತತ ಎರಡನೇ ಬಾರಿಗೆ ಸಿಎಂ ಗಾದಿಗೇರಲು ವೈ.ಎಸ್.‌ ಜಗನ್‌ಮೋಹನ್‌ ರೆಡ್ಡಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೇರಲು ಟಿಡಿಪಿಯೂ ಸಜ್ಜಾಗಿದ್ದು, ಚುನಾವಣೆ ರಣಕಣವು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ.ಹಿಂದಿನ ಮೂರು ಹಂತದ ಚುನಾವಣೆಗಳಲ್ಲಿ 2019ರ ಸಾರ್ವತ್ರಿಕ ಚುನಾವಣೆಗಿಂತ ಕಡಿಮೆ ಮತದಾನವಾಗಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಮೊಹುವಾ ಮೊಯಿತ್ರಾ: ಕೃಷ್ಣನಗರ ಕ್ಷೇತ್ರ
ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ಸ್ಪರ್ಧೆ. ಟಿಎಂಸಿ ಅಭ್ಯರ್ಥಿ. ಸಂಸತ್ ನಲ್ಲಿ ಪ್ರಶ್ನೆಗಾಗಿ ಹಣ ಆರೋಪ ಹೊತ್ತಿರುವ ಸಂಸದೆ.

ಅಮೃತ ರಾಯ್: ಕೃಷ್ಣನಗರ ಕ್ಷೇತ್ರ
ಪಶ್ಚಿಮಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ. ರಾಜ ವಂಶಸ್ಥೆ, ಮೊಹುವಾ ಮೊಯಿತ್ರಾ ವಿರುದ್ಧ ಸ್ಪರ್ಧೆ.

ಅಧಿರ್ ರಂಜನ್ ಚೌಧರಿ : ಬೆಹರಾಮಪುರ್ ಕ್ಷೇತ್ರ
ಪಶ್ಚಿಮ ಬಂಗಾಳದ ಬೆಹರಾಂಪುರ ಕ್ಷೇತ್ರದಿಂದ ಸ್ಪರ್ಧೆ. ಕಾಂಗ್ರೆಸ್ ಅಭ್ಯರ್ಥಿ

ಯೂಸುಫ್ ಪಠಾಣ್ : ಬೆಹರಾಮಪುರ್ ಕ್ಷೇತ್ರ
ಮಾಜಿ ಕ್ರಿಕೆಟಿಗ ಯೂಸುಫ್ ಬೆಹರಾಂಪುರ ಕ್ಷೇತ್ರದಿಂದ ಟಿ ಎಂ ಸಿ ಅಭ್ಯರ್ಥಿ. ಅಧಿರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧೆ

ಅಖಿಲೇಶ್ ಯಾದವ್: ಕನೌಜ್ ಕ್ಷೇತ್ರ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಕನೌಜ್ ಕ್ಷೇತ್ರದಿಂದ ಸ್ಪರ್ಧೆ. ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಸುಬ್ರತಾ ಪಾಠಕ್ ಸಂಸದರಾಗಿದ್ದಾರೆ. 2019 ರ ಚುನಾವಣೆಯಲ್ಲಿ ಯಾದವ್, ಪತ್ನಿ ಡಿಂಪಲ್ ಅವರನ್ನು ಸೋಲಿಸುವ ಮೂಲಕ ಪಾಠಕ್ ಗೆಲುವು ಸಾಧಿಸಿದ್ದರು

ಗಿರಿರಾಜ್ ಸಿಂಗ್: ಬೇಗುಸರಾಯ್‌ ಕ್ಷೇತ್ರ
ಬಿಹಾರದ ಬೇಗುಸರಾಯ್‌ ಕ್ಷೇತ್ರದಿಂದ ಸ್ಪರ್ಧೆ. ಬಿಜೆಪಿಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್. 2019ರ ಚುನಾವಣೆಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ವಿರುದ್ಧ ಸಿಂಗ್ ವಿಜಯಶಾಲಿಯಾಗಿದ್ದರು

ವೈ.ಎಸ್. ಶರ್ಮಿಳಾ: ಕಡಪ ಕ್ಷೇತ್ರ
ಆಂಧ್ರದ ಮಾಜಿ ಸಿಎಂ ವೈಎಸ್ಆರ್ ಅವರ ಪುತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ, ತಮ್ಮ ಸೋದರ ಸಂಬಂಧಿ, ಎರಡು ಬಾರಿ ಹಾಲಿ ಸಂಸದ ವೈಎಸ್ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶರ್ಮಿಳಾ ಸಹೋದರ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಅಸಾದುದ್ದೀನ್ ಓವೈಸಿ: ಹೈದರಾಬಾದ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕ್ಷೇತ್ರದಿಂದ ಸ್ಪರ್ಧೆ

ಮಾಧವಿ ಲತಾ: ಹೈದರಾಬಾದ್
ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ. ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದಿರುವ ಮಾಧವಿ ಲತಾ‌

ಅರ್ಜುನ್ ಮುಂಡ : ಖುಂತಿ ಕ್ಷೇತ್ರ
ಮೂರು ಬಾರಿ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಸಚಿವರಾಗಿ ಕಾರ್ಯ ನಿರ್ವಹಿಸಿತ್ತಿರುವ ಅರ್ಜುನ್ ಮುಂಡ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಬಂಡಿ ಸಂಜಯ್ ಕುಮಾರ್: ಕರೀಂನಗರ ಕ್ಷೇತ್ರ
ಮಾಜಿ ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಹಾಲಿ ಸಂಸದ ಬಂಡಿ ಸಂಜಯ್ ಕುಮಾರ್ ಕರೀಂನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಶತ್ರುಘ್ನ ಸಿನ್ಹಾ: ಅಸನ್ಸೋಲ್ ಕ್ಷೇತ್ರ
ಪಶ್ಚಿಮ ಬಂಗಾಳ ಅಸನ್ನೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿರುವ ಶತ್ರುಘ್ನ ಸಿನ್ಹಾ ಸ್ಪರ್ಧೆ. ಟಿ ಎಂ ಸಿ ಪಕ್ಷದ ಅಭ್ಯರ್ಥಿ

ಕಿಶನ್ ರೆಡ್ಡಿ : ಸಿಕಂದರಾಬಾದ್ ಕ್ಷೇತ್ರ
ಪ್ರಸ್ತುತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪರ್ಧೆಸುತ್ತಿರುವ ಕ್ಷೇತ್ರ

Continue Reading

ಮಾಲಿವುಡ್

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

Turbo Trailer Out: ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. ಇಲ್ಲಿ ರಾಜ್‌ .ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

VISTARANEWS.COM


on

Turbo Trailer Out mammoottys raj b shetty looks menacing
Koo

ಬೆಂಗಳೂರು: ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ರಾಜ್ ಅವರು ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. 133 ಸೆಕೆಂಡ್​ಗಳ ಟ್ರೈಲರ್‌ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮುಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಟ್ರೈಲರ್‌ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜತೆಗೆ ಕಾಮಿಡಿ ಕೂಡ ಇದೆ. ಟ್ರೈಲರ್‌ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ. ರಾಜ್​ ಬಿ ಶೆಟ್ಟಿ ಎಂಟ್ರಿ ಸಖತ್ ಆಗಿದೆ. ರಾಜ್‌ ಬಿ ಶೆಟ್ಟಿ ಮಲಯಾಳಂನಲ್ಲೂ ಅವರೇ ಡಬ್ ಮಾಡಿದ್ದಾರೆ.

ಇದನ್ನೂ ಓದಿ: Palanku Movie: 17 ವರ್ಷ ಪೂರೈಸಿದ ಮಮ್ಮುಟ್ಟಿ ಅಭಿನಯದ ʻಪಲುಂಕುʼ ಸಿನಿಮಾ, ಇದರ ಕತೆ ಹೃದಯಸ್ಪರ್ಶಿ

ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಕನ್ನಡ ಸಿನಿರಸಿಕರ ಮುಂದೆ ರಾಜ್. ಶೆಟ್ಟಿ ಬಂದಿದ್ದರು. ಬಳಿಕ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ‘ಗರುಡಗಮನ ವೃಷಭವಾಹನ’ ಸಿನಿಮಾ ದೊಡ್ಡ ಬ್ರೇಕ್ ಕೊಟ್ಟಿತ್ತು. ತಾವೇ ನಿರ್ದೇಶಿಸಿ ನಟಿಸಿದ್ದ ಚಿತ್ರದಲ್ಲಿ ಶಿವ ಆಗಿ ಅಬ್ಬರಿಸಿದ್ದರು. ಸದ್ಯ ‘ಟರ್ಬೋ’ ಚಿತ್ರದಲ್ಲೂ ವೆಟ್ರಿವೇಲ್ ಷಣ್ಮುಗಂ ಎನ್ನುವ ಖಡಕ್ ಪಾತ್ರದಲ್ಲಿ ದರ್ಬಾರ್ ನಡೆಸಿದ್ದಾರೆ.

ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading
Advertisement
Patanjali case
ದೇಶ14 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ32 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ1 hour ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್1 hour ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ1 hour ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ2 hours ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ2 hours ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್2 hours ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ2 hours ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌