Sound of UI : ಸದ್ದು ಮಾಡುತ್ತಿದೆ UI ಚಿತ್ರದ 'ಸೌಂಡ್ ಆಫ್ ಯುಐ' - Vistara News

ಸಿನಿಮಾ

Sound of UI : ಸದ್ದು ಮಾಡುತ್ತಿದೆ UI ಚಿತ್ರದ ‘ಸೌಂಡ್ ಆಫ್ ಯುಐ’

Sound of UI : ಯುಐ” ಚಿತ್ರದ ಮ್ಯೂಸಿಕ್ ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್ , ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ. 15 ವಯೊಲಿನ್, 8 ಬೇಸ್ ಗಿಟಾರ್, 4 ಕೊಳಲು ಹೀಗೆ ಹಲವು ಇನ್‌ಸ್ಟ್ರುಮೆಂಟ್ಸ್ ಬಳಸಿಕೊಂಡು 90ಕ್ಕೂ ಅಧಿಕ ನುರಿತ ಸಂಗೀತಗಾರರು ಲೈವ್ ನಲ್ಲೇ ಕಾರ್ಯ ನಿರ್ವಹಿಸಿರುವುದು ವಿಶೇಷ.

VISTARANEWS.COM


on

Sound of UI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ‘ಯುಐ’ (UI) ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ‘ಸೌಂಡ್ ಆಫ್ ಯುಐ’ (Sound of UI) ಬಿಡುಗಡೆಯಾಗಿದೆ. 1 ನಿಮಿಷ 24 ಸೆಕೆಂಡ್‌ಗಳ ಈ ಮ್ಯೂಸಿಕ್ ಝಲಕ್ ನಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮೋಡಿ ಮಾಡಿದ್ದಾರೆ. ಮುಂದೆ ಬಿಡುಗಡೆಯಾಗಲಿರುವ ಹಾಡುಗಳ ಬಗ್ಗೆ ಕುತೂಹಲ ಹೆಚ್ಚಿದೆ.

“ಯುಐ” ಚಿತ್ರದ ಮ್ಯೂಸಿಕ್ ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್ , ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ. 15 ವಯೊಲಿನ್, 8 ಬೇಸ್ ಗಿಟಾರ್, 4 ಕೊಳಲು ಹೀಗೆ ಹಲವು ಇನ್‌ಸ್ಟ್ರುಮೆಂಟ್ಸ್ ಬಳಸಿಕೊಂಡು 90ಕ್ಕೂ ಅಧಿಕ ನುರಿತ ಸಂಗೀತಗಾರರು ಲೈವ್ ನಲ್ಲೇ ಕಾರ್ಯ ನಿರ್ವಹಿಸಿರುವುದು ವಿಶೇಷ. ಚಿತ್ರದಲ್ಲಿ ಬಿಜಿಎಂ ಪ್ರಮುಖಪಾತ್ರ ವಹಿಸಿದೆ. ಹಂಗೇರಿಯಲ್ಲಿ ನಡೆದ ಈ ಮ್ಯೂಸಿಕ್ ಜರ್ನಿಯ ಒಂದು ಝಲಕ್ ಅನ್ನು ಚಿಕ್ಕ ಪ್ರೋಮೊ ಮೂಲಕ “ಸೌಂಡ್ ಆಫ್ ಯುಐ” ಹೆಸರಿನಲ್ಲಿ ಚಿತ್ರತಂಡ ರಿಲೀಸ್ ಮಾಡಿದೆ.

ಇದನ್ನೂ ಓದಿ: Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

ಹಲವು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ “ಯುಐ” ಚಿತ್ರವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ. ಬಹು ನಿರೀಕ್ಷೆಯಿರುವ ‘ಯುಐ’ ಚಿತ್ರ ವಿಶ್ವದಾದ್ಯಂತ ವಿಜಯಪತಾಕೆ ಹಾರಿಸಲಿದೆ. ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Amy Jackson : ಮದುವೆಯ ಮೊದಲ ಚಿತ್ರಗಳನ್ನು ಹಂಚಿಕೊಂಡ ನಟಿ ಆ್ಯಮಿ ಜಾಕ್ಸನ್‌

Amy Jackson : ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

VISTARANEWS.COM


on

Amy Jackson
Koo

ಬೆಂಗಳೂರು: ‘ಸಿಂಗ್ ಈಸ್ ಬ್ಲಿಂಗ್’ ಸಿನಿಮಾ ಖ್ಯಾತಿಯ ಆಮಿ ಜಾಕ್ಸನ್ (Amy Jackson) ಪ್ರಿಯತಮ ಎಡ್ ವೆಸ್ಟ್ವಿಕ್ ಅವರನ್ನು ವಿವಾಹವಾದರು. ಇಟಲಿಯ ಅಮಲ್ಫಿ ಕರಾವಳಿಯಲ್ಲಿ ಐಷಾರಾಮಿ ನೌಕೆಯಲ್ಲಿ ನಡೆದ ಪಾರ್ಟಿಯಲ್ಲಿ ದಂಪತಿ ತಮ್ಮ ವಿವಾಹ ಆಚರಣೆಗಳನ್ನು ನಡೆಸಿದರು. ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬವು ಮದುವೆಯ ಭಾಗವಾಗಿದ್ದರು. ವಿವಾಹಪೂರ್ವ ಉತ್ಸವಗಳ ಚಿತ್ರಗಳು ತಕ್ಷಣದಲ್ಲೇ ಆನ್‌ಲೈನ್‌ನಲ್ಲಿ ವೈರಲ್‌ ಆದವು. ದಂಪತಿಗಳು ಅಂತಿಮವಾಗಿ ಫೋಟೋಗಳ ಗುಂಪನ್ನು ಹಂಚಿಕೊಂಡಿದ್ದಾರೆ.

ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

ಶನಿವಾರ, ಆಮಿ ತನ್ನ ಮೊದಲ ದಿನದ ವಿವಾಹ ದಿನದ ಸುಂದರವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು “ಐ ಲವ್ ಯು ಬಿಯಾಂಡ್” ಎಂದು ಬರೆದಿದ್ದಾರೆ.

ವಾರದ ಆರಂಭದಲ್ಲಿ, ಆಮಿ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ತನ್ನ ಆಪ್ತರನ್ನು ಒಳಗೊಂಡ ಸರಣಿ ಚಿತ್ರಗಳನ್ನು ಹಂಚಿಕೊಂಡಿದ್ದರು. ಒಂದು ಚಿತ್ರದಲ್ಲಿ ದಂಪತಿಗಳು ವಿಮಾನದ ಮಧ್ಯದಲ್ಲಿ ಚುಂಬಿಸುತ್ತಿರುವುದನ್ನು ಕಾಣಬಹುದು. ಫೋಟೋಗಳಲ್ಲಿ ಅವರ ಅತ್ತೆ ಮಾವ ಮತ್ತು ಅವರ ಮಗ ಆಂಡ್ರಿಯಾಸ್ ಕೂಡ ಸೇರಿದ್ದಾರೆ. ತಮ್ಮ ಮಾಜಿ ಪಾಲುದಾರ ಜಾರ್ಜ್ ಪನಯೋಟೌ ಅವರಿಂದ ಬೇರ್ಪಟ್ಟ ಬಳಿಕ ಅವರು ಮದುವೆಯಾಗುತ್ತಿದ್ದಾರೆ. ಆಮಿ, “ಮದುವೆಯಾಗೋಣ, ಬೇಬಿ” ಎಂದು ಬರೆದಿರುವ ಜತೆಎಗೆ “ಇಟಲಿಗೆ ಬರುತ್ತೇನೆ ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: New Fashion Trend : ಯುವತಿಯರನ್ನು ಆಕರ್ಷಿಸುತ್ತಿದೆ ಇಂಡೊ-ವೆಸ್ಟರ್ನ್‌ ಡಿಸೈನ್‌‌‌ನ ಮ್ಯಾಚಿಂಗ್‌ ಸೀರೆ 

ಆಮಿ ಈ ಹಿಂದೆ ಜಾರ್ಜ್ ಪನಯೋಟೌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರಿಗೆ ಆಂಡ್ರಿಯಾಸ್ ಎಂಬ ಮಗ ಇದ್ದಾನೆ. ಆಮಿ ಜಾಕ್ಸನ್ 2010 ರಲ್ಲಿ ತಮಿಳು ಚಿತ್ರ ಮದ್ರಾಸಪಟ್ಟಣಂ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು ಮತ್ತು ನಂತರ ಎಕ್ ದೀವಾನಾ ಥಾ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan : ರೌಡಿಶೀಟರ್‌ಗಳ ಜತೆಗೆ ಸಿಗರೇಟ್‌ ಸೇದುತ್ತಾ ಜೈಲಿನಲ್ಲಿ ನಟ ದರ್ಶನ್‌ ಬಿಂದಾಸ್‌ ಲೈಫ್!‌ ವೈರಲ್‌ ಆಯ್ತು ಫೋಟೊ

Actor Darshan : ಕೊಲೆ ಕೇಸ್‌ವೊಂದರಲ್ಲಿ (Renukaswamy Murder case) ಜೈಲುಪಾಲಾಗಿರುವ ನಟ ದರ್ಶನ್‌ ರೌಡಿಶೀಟರ್‌ಗಳ ಜತೆಗೆ ಕುಳಿತು ಸಿಗರೇಟ್‌ ಸೇದುತ್ತಿರುವ ಫೋಟೊ ವೈರಲ್‌ ಆಗಿದೆ. ಕೈದಿಯೊಬ್ಬ ಈ ಫೋಟೊ ತೆಗೆದಿದ್ದ ಎನ್ನಲಾಗಿದೆ.

VISTARANEWS.COM


on

By

Actor Darshan Bindass in jail smoking cigarettes with rowdy-sheeters
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿವೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ. ಜೈಲು ಸೇರಿದ 75 ದಿನಗಳ ನಂತರ ದರ್ಶನ್‌ನ ದರ್ಶನವಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದಾರೆ. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿದೆ. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆಯುತ್ತಿದ್ದಾರೆ.

ಮತ್ತೊಬ್ಬ ಕೈದಿ ವೇಲು ಎಂಬಾತ ಈ ಫೋಟೊ ತೆಗೆದಿದ್ದು, ತನ್ನ ಪತ್ನಿಗೆ ಕಳಿಸಿದ್ದಾನೆ. ಇದೀಗ ರೌಡಿಶೀಟರ್‌ ಜತೆಗೆ ಇರುವ ಫೋಟೋ ವೈರಲ್‌ ಆಗಿದ್ದು, ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದ್ಯಾ ಎಂಬ ಅನುಮಾನ ಮೂಡಿದೆ.

ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕುಟುಂಬಸ್ಥರ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡ ‌ ಮಾಧ್ಯಮದೊಂದಿಗೆ ಮಾತಾನಾಡಲಿದ್ದಾರೆ.

ಇದನ್ನೂ ಓದಿ: Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಕೈದಿಗಳ ಜತೆಗೆ ವಾಲಿಬಾಲ್‌ ಆಟ

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಕೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Samantha Ruth Prabhu: ಪ್ರೀತಿ ಒಂದು ತ್ಯಾಗ! ಮಾರ್ಮಿಕ ಸಂದೇಶ ಪೋಸ್ಟ್‌ ಮಾಡಿದ ಸಮಂತಾ ರುತ್ ಪ್ರಭು ಪೋಸ್ಟ್

ಗೆಳೆಯ ಅಥವಾ ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ, ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

VISTARANEWS.COM


on

By

Samantha Ruth Prabhu
Koo

ನಟಿ ಸಮಂತಾ ರುತ್ ಪ್ರಭು (Samantha Ruth Prabhu ) ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿರುವ ಪೋಸ್ಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ (social mideia) ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಅವರು ಹಂಚಿಕೊಂಡಿರುವ ಪೋಸ್ಟ್ ನೋಡಿ ‘ಪ್ರೀತಿ ಒಂದು ತ್ಯಾಗ’ (Love Is A Sacrifice) ಅದು ಹೇಗೆ ಎಂಬುದರ ಕುರಿತು ಹೆಚ್ಚಿನ ನೆಟ್ಟಿಗರು ಚರ್ಚೆ ಮಾಡಲು ಪ್ರಾರಂಭಿಸಿದ್ದಾರೆ.

ಗೆಳೆಯರು, ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

ಬಹಳಷ್ಟು ಜನರು ಸ್ನೇಹ ಮತ್ತು ಸಂಬಂಧಗಳನ್ನು ಪರಸ್ಪರವಾಗಿ ನೋಡುತ್ತಾರೆ ಮತ್ತು ನಾನು ಒಪ್ಪುತ್ತೇನೆ. ನೀನು ಕೊಡು, ನಾನು ಕೊಡುತ್ತೇನೆ. ಆದರೆ ಕೆಲವೊಮ್ಮೆ ಪ್ರೀತಿಯು ಇತರ ವ್ಯಕ್ತಿಯು ಹಿಂತಿರುಗಿಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ನೀವು ನೀಡಲು ಕಾರಣವಾಗುತ್ತದೆ ಎಂದು ನಾನು ವರ್ಷಗಳಲ್ಲಿ ಕಲಿತಿದ್ದೇನೆ. ನೀವು ಕೊಡುವುದರಿಂದ ಅದು ಹೋಗುತ್ತದೆ, ನಾನು ಕೊಡುತ್ತೇನೆ.. ನೀವು ಹಿಂತಿರುಗಿಸಲು ಸಾಧ್ಯವಾಗುವವರೆಗೆ ಪ್ರತಿಯಾಗಿ ನಾನು ಕೊಡುತ್ತೇನೆ ಎಂಬುದಾಗಿ ಸಮಂತಾ ಮಾರ್ಮಿಕವಾಗಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.


“ಪ್ರೀತಿ ಒಂದು ತ್ಯಾಗ. ಒಂದು ಋತುವಿಗಾಗಿ ಸಮತೋಲಿತ ಸಲಹೆ ಕೂಡ. ಅಭಿಮಾನಿಗಳು ಕೂಡ ಅಷ್ಟೆ. ನಾನು ಪ್ರತಿಯಾಗಿ ಕೃತಜ್ಞತೆ ಸ್ಪುರಿಸಲು ಸಾಧ್ಯವಾಗುತ್ತಿಲ್ಲ ಎಂದಾಗಲೂ ಜನ ಅಭಿಮಾನ ಸುರಿಸುತ್ತಲೇ ಇರುತ್ತಾರೆʼʼ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಬಿಳಿ ಬಣ್ಣದ ಹೃದಯದ ಇಮೊಜಿಯೊಂದಿಗೆ ಸಮಂತಾ ಇದನ್ನು ಪೋಸ್ಟ್ ಮಾಡಿದ್ದಾರೆ.

ಈ ನಡುವೆ ಸಮಂತಾ ರುತ್ ಪ್ರಭು ಗುರುವಾರ ರಾತ್ರಿ ಮುಂಬಯಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ವಿಡಿಯೋದಲ್ಲಿ ಅವರು ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದಂತೆ ಪಾಪರಾಜಿಗಳಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಕಪ್ಪು ಉಡುಪನ್ನು ಧರಿಸಿದ್ದ ಅವರ ವಿಡಿಯೋವನ್ನು ನೋಡಿ ಅಭಿಮಾನಿಗಳು, ನಟಿ ಸಾಕಷ್ಟು ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಸಮಂತಾ ರುತ್ ಪ್ರಭು ಶೀಘ್ರದಲ್ಲೇ ʼಸಿಟಾಡೆಲ್: ಹನಿ ಬನ್ನಿʼ ವೆಬ್‌ ಸಿರೀಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಸರಣಿಯಾಗಿದ್ದು, ಈ ತಿಂಗಳ ಆರಂಭದಲ್ಲಿ ʼಸಿಟಾಡೆಲ್: ಹನ್ನಿ ಬನ್ನಿʼ ಚಿತ್ರದ ಟೀಸರ್ ಬಿಡುಗಡೆಯಾಯಿತು.

Continue Reading

ಸಿನಿಮಾ

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

ಪಿಯುಸಿ ಮುಗಿದ ಬಳಿಕ ನನಗೆ ಭಯಾನಕ ಅನುಭವವಾಗಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ನನಗೆ ಫೇಸ್ ಬುಕ್ ನಲ್ಲಿ ಸಂದೇಶ ಕಳುಹಿಸಿದ್ದರು. ಸಿನಿಮಾದ ಚರ್ಚೆಗೆ ಕರೆದಿದ್ದರು. ಚರ್ಚೆಯ ವೇಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈಗ ಅವರು ತೋರಿಸುವ ಮುಖ ನಾನು ಅಂದು ನೋಡಿದ ಮುಖವಲ್ಲ ಎಂದು ನಟಿ ರೇವತಿ ಸಂಪತ್ (Revathy Sampath) ಆರೋಪಿಸಿದ್ದಾರೆ.

VISTARANEWS.COM


on

By

Revathy Sampath
Koo

ಮಲಯಾಳಂ ಚಲನಚಿತ್ರ (Malayalam movie) ಕಲಾವಿದರ ಸಂಘದ (AMMA) ಪ್ರಧಾನ ಕಾರ್ಯದರ್ಶಿ ಆಗಿರುವ ಹಿರಿಯ ನಟ ಸಿದ್ದಿಕ್ (Veteran actor Siddique) ತಮ್ಮ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾರೆ ಎಂದು ನಟಿ ರೇವತಿ ಸಂಪತ್ (Revathy Sampath) ಆರೋಪಿಸಿದ್ದಾರೆ. ತಾವು 21 ವರ್ಷದವಳಿದ್ದಾಗ ಈ ಘಟನೆ ನಡೆದಿರುವುದಾಗಿ ಹೇಳಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಸಿದ್ದಿಕ್‌ ರಾಜೀನಾಮೆ ನೀಡಿದ್ದು, ಕೇರಳ ಚಿತ್ರರಂಗದಲ್ಲಿ ಈ ಪ್ರಕರಣದ ಕುರಿತು ಸಂಚಲನ ಉಂಟಾಗಿದೆ.

ಹೇಮಾ ಸಮಿತಿ ವರದಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಅವರು, ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಸಿದ್ದಿಕ್ ಮೊದಲು ತಮ್ಮನ್ನು ಮೋಲ್ ಎಂದು ಕರೆದರು. ಮೋಲ್ ಎಂಬುದನ್ನು ಕೇರಳದಲ್ಲಿ ಸಾಮಾನ್ಯವಾಗಿ ಚಿಕ್ಕ ಹುಡುಗಿ ಅಥವಾ ಮಗಳನ್ನು ಉಲ್ಲೇಖಿಸಲು ಬಳಸಲಾಗುತ್ತದೆ ಎಂದು ತಿಳಿಸಿದರು.

ಪಿಯುಸಿ ಮುಗಿದ ಬಳಿಕ ನನಗೆ ಈ ಭಯಾನಕ ಅನುಭವವಾಗಿದೆ. ಸಿದ್ದಿಕ್ ನನಗೆ ಫೇಸ್ ಬುಕ್ ನಲ್ಲಿ ಸಂದೇಶ ಕಳುಹಿಸಿದ್ದರು. ಸಿನಿಮಾದ ಚರ್ಚೆಗೆ ಕರೆದಿದ್ದರು. ಚರ್ಚೆಯ ವೇಳೆ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈಗ ಅವರು ತೋರಿಸುವ ಮುಖ ನಾನು ಅಂದು ನೋಡಿದ ಮುಖವಲ್ಲ ಎಂದು ರೇವತಿ ಹೇಳಿದ್ದಾರೆ. ಸಿದ್ದಿಕ್ ಅವರು ʼಅಮ್ಮ ʼ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿರುವುದಾಗಿ ಅಮ್ಮಾ ಉಪಾಧ್ಯಕ್ಷ ಜಯನ್ ಚೇರ್ತಲ ಖಚಿತಪಡಿಸಿದ್ದಾರೆ.


ಸಿದ್ದಿಕ್ ಅವರನ್ನು “ಕ್ರಿಮಿನಲ್” ಎಂದು ಕರೆದ ನಟಿ ರೇವತಿ, ಸಿದ್ದಿಕ್ ತಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ತಮ್ಮ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲ್ಲೆ ನಡೆಸಿದ ಬಳಿಕ ನಾನು ತೀವ್ರ ಮಾನಸಿಕ ಆಘಾತ ಅನುಭವಿಸಿದೆ. ಇದು ನನ್ನ ವೃತ್ತಿ ಜೀವನದ ಮೇಲೂ ಪರಿಣಾಮ ಬೀರಿದೆ. ಯಾವ ವ್ಯವಸ್ಥೆಯೂ ನನ್ನ ಬೆಂಬಲಕ್ಕೆ ನಿಂತಿರಲಿಲ್ಲ. ಮಾತನಾಡಲು ನನಗೆ ಬಹಳ ಸಮಯ ಹಿಡಿಯಿತು. ಘಟನೆಯ ಬಳಿಕ ಸಿದ್ದಿಕ್ ಏನೂ ಆಗಿಲ್ಲ ಎಂಬಂತೆ ವರ್ತಿಸಿ ನನ್ನ ಮುಂದೆ ಸಾಮಾನ್ಯ ಎಂಬಂತೆ ನಿಂತಿದ್ದರು. ಇದು ಸಾಮಾನ್ಯ ಸಂಗತಿ ಎಂಬಂತೆ ಎಲ್ಲರೂ ಪ್ರತಿಕ್ರಿಯಿಸಿದರು. ಅವರೆಲ್ಲರೂ ಇದನ್ನು ತಿಳಿದೇ ಮಾಡಿದ್ದಾರೆ ಎಂದು ಅನಿಸಿತು.

ಪರಿಸ್ಥಿತಿಯಿಂದ ಪಾರಾಗಲು ಓಡಿಹೋದೆ. ಆ ವಯಸ್ಸಿನಲ್ಲಿ ನಾನು ಸಾಧ್ಯವಾದಷ್ಟು ಉತ್ತಮವಾಗಿ ಪ್ರತಿಕ್ರಿಯಿಸಿದೆ. ನಾನು ಏನೂ ಮಾಡಲೂ ಸಾಧ್ಯವಿರಲಿಲ್ಲ. ಓಡಿಹೋಗಿ ಆಟೋ ಹತ್ತಿ ಪರಾರಿಯಾದೆ ಎಂದು ರೇವತಿ ಹೇಳಿದ್ದಾರೆ. ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಕೆಲಸದ ಪರಿಸ್ಥಿತಿಗಳು ಮತ್ತು ಲೈಂಗಿಕ ಶೋಷಣೆಯ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಗೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಶುಕ್ರವಾರ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ: Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್

ʼಅಮ್ಮಾʼ ವರದಿಯನ್ನು ಕೆಲವು ಬಣಗಳು ತಿರಸ್ಕರಿಸಿದ್ದು, ಕಾಸ್ಟಿಂಗ್ ಕೌಚ್ ಆರೋಪವನ್ನು ತಳ್ಳಿಹಾಕಿವೆ. ನಾನು ಕಳೆದ ನಾಲ್ಕು ದಶಕಗಳಿಂದ ಉದ್ಯಮದಲ್ಲಿದ್ದೇನೆ. ವರದಿಯಲ್ಲಿ ಉಲ್ಲೇಖಿಸಿರುವಂತೆ ಯಾವುದೇ ಗುಂಪು ಅಸ್ತಿತ್ವದಲ್ಲಿಲ್ಲ. ಏಕೆಂದರೆ ಇದು ಚಲನಚಿತ್ರೋದ್ಯಮ ಮತ್ತು ಅಂತಹ ಯಾವುದೇ ಗುಂಪುಗಳು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಎಲ್ಲಿಯಾದರೂ ಯಾವುದೇ ಅಪರಾಧ ನಡೆದಿದ್ದರೆ ಅದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರಿದ್ದರೆ ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ಇದರಲ್ಲಿ ನಮಗೆ ಯಾವುದೇ ಸಂಕೋಚವಿಲ್ಲ ಎಂದು ಸಿದ್ದಿಕ್ ಹೇಳಿದ್ದಾರೆ.

Continue Reading
Advertisement
PM Narendra Modi
ಪ್ರಮುಖ ಸುದ್ದಿ25 mins ago

Narendra Modi : ಪಾಕಿಸ್ತಾನದ ವಾಯಮಾರ್ಗ ಬಳಸಿ ಪೋಲೆಂಡ್‌ನಿಂದ ಭಾರತಕ್ಕೆ ಮರಳಿದ್ದ ಪ್ರಧಾನಿ ಮೋದಿ

Amy Jackson
ಸಿನಿಮಾ1 hour ago

Amy Jackson : ಮದುವೆಯ ಮೊದಲ ಚಿತ್ರಗಳನ್ನು ಹಂಚಿಕೊಂಡ ನಟಿ ಆ್ಯಮಿ ಜಾಕ್ಸನ್‌

Krishna janmastami 2024
ಆಹಾರ/ಅಡುಗೆ2 hours ago

Krishna janmastami 2024: ಕೃಷ್ಣ ಜನ್ಮಾಷ್ಟಮಿಗೆ ಏನೆಲ್ಲ ಸಿಹಿ ತಿನಿಸು ತಯಾರಿಸಬಹುದು? ಇಲ್ಲಿದೆ ಟಿಪ್ಸ್‌

New Fashion Trend
ಫ್ಯಾಷನ್2 hours ago

New Fashion Trend : ಯುವತಿಯರನ್ನು ಆಕರ್ಷಿಸುತ್ತಿದೆ ಇಂಡೊ-ವೆಸ್ಟರ್ನ್‌ ಡಿಸೈನ್‌‌‌ನ ಮ್ಯಾಚಿಂಗ್‌ ಸೀರೆ

Krishnadevaraya Palika Bazar
ಕರ್ನಾಟಕ2 hours ago

Krishnadevaraya Palika Bazaar: ಬೆಂಗಳೂರಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಉದ್ಘಾಟಿಸಿದ ಸಿಎಂ

Sound of UI
ಸಿನಿಮಾ3 hours ago

Sound of UI : ಸದ್ದು ಮಾಡುತ್ತಿದೆ UI ಚಿತ್ರದ ‘ಸೌಂಡ್ ಆಫ್ ಯುಐ’

Karkala Physical Abuse
ಕರ್ನಾಟಕ3 hours ago

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

Paul Valthaty
ಪ್ರಮುಖ ಸುದ್ದಿ3 hours ago

Paul Valthaty : ಅಮೆರಿಕದ ಕ್ರಿಕೆಟ್‌ ತಂಡದ ಕೋಚಿಂಗ್ ಹುದ್ದೆ ವಹಿಸಿಕೊಂಡ ಐಪಿಎಲ್ ಸ್ಟಾರ್‌ ಪಾಲ್ ವಾಲ್ತಾಟಿ

Krishna Janmastami 2024
ಧಾರ್ಮಿಕ4 hours ago

Krishna Janmastami 2024: ಜನ್ಮಾಷ್ಟಮಿಯಂದು ಕೃಷ್ಣನಿಗೆ ಬೆಣ್ಣೆ ಅರ್ಪಿಸುವುದು ಏಕೆ?

KAS Prelims exam
ಕರ್ನಾಟಕ4 hours ago

KAS Prelims exam: ಕೆಎಎಸ್‌ ಪ್ರಿಲಿಮ್ಸ್ ಮುಂದೂಡಲು ರಾಜ್ಯಪಾಲರಿಗೆ ಅಭ್ಯರ್ಥಿಗಳ ನಿಯೋಗ ಮನವಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌