Tollywood actor Allu Ramesh passed away Allu Ramesh: ಖ್ಯಾತ ಹಾಸ್ಯನಟ ಅಲ್ಲು ರಮೇಶ್ ಇನ್ನಿಲ್ಲ - Vistara News

South Cinema

Allu Ramesh: ಖ್ಯಾತ ಹಾಸ್ಯನಟ ಅಲ್ಲು ರಮೇಶ್ ಇನ್ನಿಲ್ಲ

ಇತ್ತೀಚೆಗೆ, ಅಲ್ಲು ರಮೇಶ್ (Allu Ramesh) ಅವರು ಜನಪ್ರಿಯ ವೆಬ್ ಸಿರೀಸ್‌ ‘ಮಾ ವಿದಕುಲು’ ನಲ್ಲಿ ನಾಯಕ ನಟಿಯ ತಂದೆಯಾಗಿ ಕಾಣಿಸಿಕೊಂಡಿದ್ದರು. ಸಣ್ಣ ಪಾತ್ರಗಳನ್ನು ನಿರ್ವಹಿಸುತ್ತಿದ್ದರೂ ತಮ್ಮ ನಟನಾ ಕೌಶಲಕ್ಕಾಗಿ ಮನ್ನಣೆ ಗಳಿಸಿದ್ದರು.

VISTARANEWS.COM


on

Tollywood actor Allu Ramesh passed away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ಹಾಸ್ಯನಟ ಅಲ್ಲು ರಮೇಶ್ (Allu Ramesh) ಅವರು ಹೃದಯಾಘಾತದಿಂದ ಏಪ್ರಿಲ್‌ 18ರಂದು ನಿಧನರಾಗಿದ್ದಾರೆ. ತಮ್ಮ ಹುಟ್ಟೂರಾದ ವಿಶಾಖಪಟ್ಟಣದಲ್ಲಿ ಅಲ್ಲು ರಮೇಶ್ ಅವರು ನಿಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ನಿರ್ದೇಶಕ ಆನಂದ್ ರವಿ ಅವರು ನಿಧನದ ಸುದ್ದಿಯನ್ನು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಅವರ ಅಭಿಮಾನಿಗಳು ಸೇರಿದಂತೆ ತೆಲುಗು ಚಿತ್ರರಂಗ ಕಂಬನಿ ಮಿಡಿದಿದೆ.

ವೈಜಾಗ್ ಮೂಲದ ಅಲ್ಲು ರಮೇಶ್ ಅವರು ರಂಗಭೂಮಿ ಕಲಾವಿದ. ಬಳಿಕ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಚಿರುಜಲ್ಲು’ ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅನೇಕ ತೆಲುಗು ಚಿತ್ರಗಳಲ್ಲಿ ನಟಿಸಿದರು. ‘ತೋಲು ಬೊಮ್ಮಲಾಟ (Tolu Bommalata),’ ‘ಮಥುರಾ ವೈನ್ಸ್,'(Mathura Wines) ‘ವೀಧಿ,'(Veedhi) ‘ಬ್ಲೇಡ್ ಬಾಬ್ಜಿ (Blade Babji,),’ ಮತ್ತು ‘ನೆಪೋಲಿಯನ್’ (Napoleon) ಸೇರಿದಂತೆ ಅವರ ಕೆಲವು ಗಮನಾರ್ಹ ಚಿತ್ರಗಳು. 2015ರ ‘ಕೇರಿಂತ’ ಚಿತ್ರದಲ್ಲಿ ನೂಕರಾಜು ಅವರ ತಂದೆಯ ಪಾತ್ರವನ್ನು ನಿರ್ವಹಿಸಿದರು. ರಾಜೇಂದ್ರ ಪ್ರಸಾದ್ ಅವರ ‘ಆನುಕೋನಿ ಪ್ರಯಾಣʼ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ, ಅಲ್ಲು ರಮೇಶ್ ಅವರು ಜನಪ್ರಿಯ ವೆಬ್ ಸಿರೀಸ್‌ ‘ಮಾ ವಿದಕುಲು’ನಲ್ಲಿ ನಾಯಕ ನಟಿಯ ತಂದೆಯಾಗಿ ಕಾಣಿಸಿಕೊಂಡಿದ್ದರು. ಸಣ್ಣ ಪಾತ್ರಗಳನ್ನು ನಿರ್ವಹಿಸುತ್ತಿದ್ದರೂ ತಮ್ಮ ನಟನಾ ಕೌಶಲಕ್ಕಾಗಿ ಮನ್ನಣೆ ಗಳಿಸಿದ್ದರು. ‘ನೆಪೋಲಿಯನ್’ ಮತ್ತು ‘ತೊಳುಬೊಮ್ಮಲತಾ’ ಚಿತ್ರಗಳಲ್ಲಿನ ಅವರ ಅಭಿನಯಕ್ಕಾಗಿ ಹೆಚ್ಚು ಖ್ಯಾತಿ ಪಡೆದಿದ್ದರು.

ನಿರ್ದೇಶಕ ಆನಂದ್‌ ರವಿ ಸೋಷಿಯಲ್‌ ಮೀಡಿಯಾದಲ್ಲಿ ಮಾಡಿ ʻʻಮೊದಲ ದಿನದಿಂದ ನೀವು ನನ್ನ ದೊಡ್ಡ ಬೆಂಬಲವಾಗಿದ್ದೀರಿ. ನನ್ನ ತಲೆಯಲ್ಲಿ ಇನ್ನೂ ನಿಮ್ಮ ಧ್ವನಿ ಕೇಳುತ್ತಿದೆ. ರಮೇಶ್ ಅವರೇ, ನಿಮ್ಮ ನಿಧನವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ನನ್ನಂತೆಯೇ ಅನೇಕ ಹೃದಯಗಳನ್ನು ಗೆದ್ದಿದ್ದೀರಿ. ಮಿಸ್ ಯು. ಓಂ ಶಾಂತಿʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Manvita Kamath: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ ತಾಯಿ ನಿಧನ

ಅಲ್ಲು ರಮೇಶ್ ಅವರ ಹಠಾತ್ ನಿಧನದಿಂದ ಚಿತ್ರರಂಗದ ಗಣ್ಯರು ಆಘಾತಕ್ಕೊಳಗಾಗಿದ್ದು, ಅವರ ನಿಧನಕ್ಕೆ ಹಲವಾರು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು.

VISTARANEWS.COM


on

Manjummel Boys
Koo

ಬೆಂಗಳೂರು: ಕೆಲವು ಸಮಯದಿಂದ ಮಂಕಾಗಿದ್ದ ಮಲಯಾಳಂ ಚಿತ್ರರಂಗ (Mollywood) ಮತ್ತೆ ಸದ್ದು ಮಾಡತೊಡಗಿದೆ. ಬ್ಯಾಕ್‌ ಟು ಬ್ಯಾಕ್‌ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವ ಜತೆಗೆ ದೇಶದ ಗಮನ ಸೆಳೆಯುತ್ತಿವೆ. ಅದರಲ್ಲಿಯೂ ʻಮಂಜುಮ್ಮೆಲ್ ಬಾಯ್ಸ್ʼ (Manjummel Boys)ನ ಹವಾ ಜೋರಾಗಿಯೇ ಬೀಸುತ್ತಿದೆ. ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಥಿಯೇಟರ್‌ಗಳಲ್ಲಿ ʻಮಂಜುಮ್ಮೆಲ್ ಬಾಯ್ಸ್ʼನನ್ನು ನೋಡಲಾಗದವರು ಒಟಿಟಿಗೆ ಯಾವಾಗ ಬರುತ್ತದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಕಾತುರಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು. ಅಂದಿನಿಂದ ಇದು ಸುಮಾರು 200 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಈ ಮೂಲಕ ಅತ್ಯಧಿಕ ಗಳಿಕೆ ಕಂಡ ಮಲಯಾಳಂ ಚಿತ್ರ ಎನ್ನುವ ದಾಖಲೆ ಬರೆದಿದೆ. ಇದು ಚಿದಂಬರಂ ಅವರ ಎರಡನೇ ಸಿನಿಮಾ. 2021ರಲ್ಲಿ ಇವರು ಆ್ಯಕ್ಷನ್‌ ಕಟ್‌ ಹೇಳಿದ್ದ ʼಜಾನ್‌.ಇ.ಮಾನ್‌ʼ ಚಿತ್ರ ಬಿಡುಗಡೆಯಾಗಿತ್ತು. ನಟ ʻಮಂಜುಮ್ಮೇಲ್ ಬಾಯ್ಸ್ʼ ಸಿನಿಮಾವನ್ನು ಸೌಬಿನ್ ಶಾಹಿರ್ ಚಿತ್ರವನ್ನು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಮತ್ತಿತರರು ನಟಿಸಿದ್ದಾರೆ.

ಕಥೆ ಏನು?

2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪೊಂದಕು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನನ್ನು ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಯಶಸ್ವಿ ಆಗ್ತಾರಾ ಇಲ್ಲವಾ ಎಂಬುದೇ ಕಥೆ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ನೈಜ ಘಟನೆ

ವಿಶೇಷ ಎಂದರೆ ಇದು ನೈಜ ಘಟನೆ ಆಧಾರಿತ ಸಿನಿಮಾ. ನೈಜವಾಗಿ, ಸರಳವಾಗಿ ಚಿತ್ರವನ್ನು ನಿರೂಪಿಸಲಾಗಿದೆ. ಇದು ಈ ಚಿತ್ರದ ಯಶಸ್ಸಿಗೆ ಮುಖ್ಯ ಕಾರಣ ಎಂದು ಸಿನಿಮಾ ತಜ್ಞರು ಅಭಿಪ್ರಾಯ ಪಡುತ್ತಾರೆ. ಈ ಹಿಂದೆ ಸಿನಿಮಾ ರಂಗದ ಹಲವು ದಿಗ್ಗಜರು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮಂಜುಮ್ಮೇಲ್ ಬಾಯ್ಸ್ʼ ಚಿತ್ರದ ಮೂಲಕ ಮಾಲಿವುಡ್‌ ಭರ್ಜರಿ ಕಂಬ್ಯಾಕ್‌ ಮಾಡಿದೆ. ಇತ್ತೀಚೆಗೆ ತೆರೆಕಂಡ ಹಲವು ಮಲಯಾಳಂ ಚಿತ್ರಗಳಯ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿವೆ. ʼಪ್ರೇಮುಲುʼ, ʼಭ್ರಮಯುಗಂʼ, ʼಅಬ್ರಹಾಂ ಓಜ್ಲರ್ʼ ಮುಂತಾದ ಸಿನಿಮಾಗಳು ಹಿಟ್‌ ಆಗಿವೆ.

Continue Reading

ಸ್ಯಾಂಡಲ್ ವುಡ್

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

Manvita Kamath: ಮಾನ್ವಿತಾ ಕಾಮತ್‌ ಅವರ ಹಳದಿ ಶಾಸ್ತ್ರ ಏಪ್ರಿಲ್ 29ರಂದು ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ.

VISTARANEWS.COM


on

Manvita Kamath Marriage Details Future Husband Arun
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಕೈಹಿಡಿಯುತ್ತಿದ್ದಾರೆ. ಮೇ 1ರಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಿದೆ. ಅರುಣ್ ಒಬ್ಬ ಐಟಿ ಪ್ರೊಫೆಶನಲ್ ಮತ್ತು ಮ್ಯೂಸಿಕ್ ಪ್ರೊಡ್ಯೂಸರ್. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮದುವೆ ಬಗ್ಗೆ ನಟಿ ಮಾಧ್ಯಮದ ಮುಂದೆ ಹಲವು ವಿಚಾರಗಳನ್ನು ಹೇಳಿದರು. ʻʻಇದೊಂದು ಪಕ್ಕಾ ಅರೇಂಜ್ಡ್ ಮ್ಯಾರೇಜ್ʼʼ ಎಂದರು. ಇದು ಲವ್ ಮ್ಯಾರೇಜ್ ಅಲ್ಲ ಎಂದು ನಟಿ ಮಾನ್ವಿತಾ ಕಾಮತ್ ಸ್ಪಷ್ಟನೆ ಕೊಟ್ಟಿದ್ದಾರೆ. ‘ನಮ್ಮದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಮದುವೆ ಆಗುತ್ತಿದ್ದೇವೆ. ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ. ಮಾತ್ರವಲ್ಲ ʻಮದುವೆ ಬಳಿಕವೂ ಸಿನಿಮಾ ಮಾಡುತ್ತೇನೆ. ವೈಯಕ್ತಿಕ ಬೇರೆ, ಪ್ರೊಫೆಷನಲ್ ಬೇರೆ. ಅದನ್ನು ಮಿಕ್ಸ್ ಅಪ್ ಮಾಡಲ್ಲʼʼಎಂದರು ಮಾನ್ವಿತಾ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼಗೆ ಗಂಡು ಹುಡುಕಿದ್ದು ಯಾರು? ಮದುವೆ ಸ್ಥಳದ ಮಾಹಿತಿ ಇಲ್ಲಿದೆ ನೋಡಿ!

ಇನ್ನು ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ಮಾನ್ವಿತಾ ಮದುವೆಯಾಗುತ್ತಿರುವ ಅರುಣ್ ಕುಮಾರ್ ಮೈಸೂರಿನವರು. ಕಳಸದಲ್ಲಿಯೇ ಯಾಕೆ ಮದುವೆಯಾಗುತ್ತಿದ್ದೀರಾ ಎಂಬ ಪ್ರಶ್ನೆಗೆ ಮಾನ್ವಿತಾ ಮಾತನಾಡಿ ʻʻನಾನು ಹತ್ತನೇ ತರಗತಿವರಗೆ ಕಳಸದಲ್ಲೇ ಕಲಿತದ್ದು. ಈ ಊರಿನೊಂದಿಗೆ ನನಗೆ ನಂಟಿದೆ, ಅಪ್ಪ- ಅಮ್ಮನ ಜೊತೆ ಇಲ್ಲೇ ವಾಸವಿದ್ದೆ. ಹಾಗಾಗಿ ಮದುವೆ ಇಲ್ಲೇ ಆಗುವುದರ ಬಗ್ಗೆ ಅರುಣ್ ಮತ್ತು ಅವರ ಪೋಷಕರಿಗೆ ತಿಳಿಸಿದಾಗ ಅವರು ಖುಷಿಯಿಂದಲೇ ಒಪ್ಪಿದರು.ʼʼಎಂದರು.

ಇದನ್ನೂ ಓದಿ: Manvita Kamath: ʻಟಗರು ಪುಟ್ಟಿʼಗೆ ಕಂಕಣ ಭಾಗ್ಯ ಕೂಡಿ ಬಂತು! ವರ ಯಾರು?

`ಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು. ಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಮಾನ್ವಿತಾ. ಸದ್ಯ ಕನ್ನಡ ಮತ್ತು ಮರಾಠಿಯಲ್ಲಿ ನಿರ್ಮಾಣವಾಗಿರುವ ʻರಾಜಸ್ತಾನ ಡೈರೀಸ್‌ʼ ಮತ್ತು ʻಹ್ಯಾಪಿಲಿ ಮ್ಯಾರೀಡ್‌ʼ ಸಿನಿಮಾಗಳಲ್ಲಿಯೂ ನಟಿಸಿದ್ದು, ತೆರೆಗೆ ಬರಬೇಕಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

Rakshit Shetty: ಮೂಲಗಳ ಪ್ರಕಾರ ರಿಚರ್ಡ್‌ ಆಂಟನಿ ಸಿನಿಮಾದ ಪ್ರಿ ಪ್ರೊಡಕ್ಷನ್‌ ಕೆಲಸಗಳು ಆರಂಭಗೊಂಡಿವೆ. ರಕ್ಷಿತ್ ಶೆಟ್ಟಿಯವರು ಈಗಾಗಲೇ ಉಡುಪಿಗೆ ಶಿಫ್ಟ್‌ ಆಗಿದ್ದಾರೆ. ಅವರ ಟೀಂ ಕೂಡ ಶೀಘ್ರವೇ ಉಡುಪಿಗೆ ಬರಲಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ವರದಿ ಪ್ರಕಾರ ಈ ಸಿನಿಮಾದಲ್ಲಿ ಕರಾವಳಿಯ ಕಲಾವಿದರು ಮಾತ್ರ ಮುಖ್ಯವಾಗಿ ನಟಿಸಲಿದ್ದಾರಂತೆ.

VISTARANEWS.COM


on

Rakshit Shetty Richard Anthony Pre Production
Koo

ಬೆಂಗಳೂರು: ರಕ್ಷಿತ್ ಶೆಟ್ಟಿ ( Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ʻರಿಚರ್ಡ್​ ಆಂಟನಿʼ (Richard Anthony) ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ವರದಿ ಪ್ರಕಾರ ಈ ಸಿನಿಮಾದಲ್ಲಿ ಕರಾವಳಿಯ ಕಲಾವಿದರು ಮಾತ್ರ ಮುಖ್ಯವಾಗಿ ನಟಿಸಲಿದ್ದಾರಂತೆ. ಜತೆಗೆ 2025ರ ವೇಳೆಗೆ ಸಿನಿಮಾ ತೆರೆಗೆ ಬರಲಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರಿಚರ್ಡ್‌ ಆಂಟನಿ ಸಿನಿಮಾದ ಪ್ರಿ ಪ್ರೊಡಕ್ಷನ್‌ ಕೆಲಸಗಳು ಆರಂಭಗೊಂಡಿವೆ. ರಕ್ಷಿತ್ ಶೆಟ್ಟಿಯವರು ಈಗಾಗಲೇ ಉಡುಪಿಗೆ ಶಿಫ್ಟ್‌ ಆಗಿದ್ದಾರೆ. ಅವರ ಟೀಂ ಕೂಡ ಶೀಘ್ರವೇ ಉಡುಪಿಗೆ ಬರಲಿದೆ. ಮೇ 1ರಿಂದ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕಾರ್ಯಗಳು ನೇರವೇರಲಿದೆಯಂತೆ. ಶೇ. 50ರಷ್ಟು ಸಿನಿಮಾ ಕರಾವಳಿಯಲ್ಲಿಯೇ ಶೂಟಿಂಗ್‌ ನಡಯಲಿದ್ದು, ಕೆಲವು ಸೀಕ್ವೆನ್ಸ್‌ಗಳು ಗೋಕರ್ಣ, ಕೇರಳದಲ್ಲಿ ಶೂಟ್‌ ಆಗಬಹುದು ಎನ್ನಲಾಗಿದೆ.

ಇದನ್ನೂ ಓದಿ: Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾಗಾಗಿ ಮುಖ್ಯವಾಗಿ ಕರಾವಳಿ ಕಲಾವಿದರನ್ನೇ ಆಯ್ಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾದಲ್ಲಿ ಉಡುಪಿ ಭಾಷೆಯೇ ಪ್ರಮುಖ ಹೈಲೈಟ್‌ ಆಗಿದ್ದು, ಬೇರೆಯವರು ಮಾತನಾಡಿದರೆ ಅನುಕರಣೆಯಂತಾಗುತ್ತದೆ. ಹೀಗಾಗಿ ಉಡುಪಿ ಭಾಷೆ ಬರುವವರಿಗೆ ಮಾತ್ರ ಮೊದಲ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗಿದೆ. 2025ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಟಾಲಿವುಡ್

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

Anupama Parameswaran: ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ.

VISTARANEWS.COM


on

Anupama Parameswaran Paradha next
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ ʻಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ ʻಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಕೊಂಡಿತ್ತು. ಸಿನಿಮಾ ಒಟಿಟಿಗೆ ಲಗ್ಗೆ ಈಗಾಗಲೇ ಇಟ್ಟಿದೆ. ಇದರ ಬೆನ್ನಲ್ಲೇ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಹೊಸ ಅವತಾರದಲ್ಲಿ ಕಂಡಿದ್ದಾರೆ ಅನುಪಮಾ ಪರಮೇಶ್ವರನ್.

‘ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಅನುಪಮಾ ಕಂಡಿದ್ದಾರೆ. ಸೆರಗನ್ನು ತಲೆ ಮೇಲೆ ಹೊತ್ತು, ಮಹಿಳೆಯರ ಸಮ್ಮುಖದಲ್ಲಿ ನಿಂತಿದ್ದಾರೆ.

ಇದನ್ನೂ ಓದಿ: Anupama Parameswaran: ಅನುಪಮಾ ಪರಮೇಶ್ವರನ್‌ಗೆ ಜ್ಯೂ.ಎನ್‌ಟಿಆರ್‌ ಫ್ಯಾನ್ಸ್‌ನಿಂದ ಅವಮಾನ!

`ಬಂಡಿ’ ಸಿನಿಮಾ ಖ್ಯಾತಿಯ ಪ್ರವೀಣ್ ಕಂಡ್ರೇಗುಲಾ ನಿರ್ದೇಶನ ಪರಧಾ ಚಿತ್ರಕ್ಕಿದೆ. ಮಲಯಾಳಂ ನಟ ಹೃದಯಂನ ʻದರ್ಶನಾ ರಾಜೇಂದ್ರನ್ʼ ಮತ್ತು ಸಂಗೀತಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಆನಂದ ಮೀಡಿಯಾ ಅಡಿಯಲ್ಲಿ ವಿಜಯ್ ಡೊಂಕದ, ಶ್ರೀನಿವಾಸಲು ಪಿವಿ ಮತ್ತು ಶ್ರೀಧರ್ ಮಕ್ಕುವ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ದೆಹಲಿ, ಹಿಮಾಚಲ ಪ್ರದೇಶ ಮತ್ತು ಕೆಲವು ಹಳ್ಳಿಗಳಲ್ಲಿ ಪರಧಾ ಚಿತ್ರೀಕರಣ ಮಾಡಲಾಗಿದೆ.

ಅನುಪಮಾ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ, “ ಬ್ಲಾಕ್‌ಬಸ್ಟರ್ ಟಿಲ್ಲು ಸ್ಕ್ವೇರ್ ನಂತರ, ಈಗ ಪರಧಾ ಜೊತೆ ಬರುತ್ತಿದ್ದೇನೆ! ಹಿಂದೆಂದೂ ಕಾಣದಂತಹ ಅನುಭವವನ್ನು ನಿಮಗೆ ಈ ಸಿನಿಮಾ ಮೂಲಕ ಸಿಗಲಿದೆ ಎಂದು ಭರವಸೆ ನೀಡುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಟಿಲ್ಲು ಸ್ಕ್ವೇರ್’ 2024, ಮಾರ್ಚ್ 29ರಂದು ರಿಲೀಸ್ ಆಗಿತ್ತು. ‘ಡಿಜೆ ಟಿಲ್ಲು’ 30 ಕೋಟಿ ರೂಪಾಯಿ ಲೂಟಿ ಮಾಡಿದ್ದರೆ, ‘ಟಿಲ್ಲು ಸ್ಕ್ವೇರ್’ ಬಾಕ್ಸಾಫೀಸ್‌ನಲ್ಲಿ ಬರೋಬ್ಬರು 125 ಕೋಟಿ ರೂಪಾಯಿ ದೋಚಿದೆ. ಈ ವರ್ಷದ ಟಾಲಿವುಡ್‌ನ ಮೋಸ್ಟ್ ಸಕ್ಸೆಸ್‌ಫುಲ್‌ ಸಿನಿಮಾ ಎನಿಸಿಕೊಂಡಿದೆ. ನೆಟ್‌ಫ್ಲಿಕ್ಸ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಖರೀದಿ ಮಾಡಿದೆ.

`ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading
Advertisement
Manjummel Boys
ಮಾಲಿವುಡ್24 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ30 mins ago

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ವಿದೇಶ43 mins ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್1 hour ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ1 hour ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ2 hours ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Manvita Kamath Marriage Details Future Husband Arun
ಸ್ಯಾಂಡಲ್ ವುಡ್2 hours ago

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

state JDS secretary R A Chabusab statement In Ripponpet
ಶಿವಮೊಗ್ಗ2 hours ago

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Narendra Modi
ಪ್ರಮುಖ ಸುದ್ದಿ2 hours ago

Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202418 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌