Tribute to the PuneethRajkumar by vikramravichandran Puneeth Rajkumar: ಆಕಾಶದಲ್ಲಿರುವ ನಕ್ಷತ್ರಕ್ಕೆ ಪುನೀತ್ ಹೆಸರು: ವಿಡಿಯೊ ಹಂಚಿಕೊಂಡ ವಿಕ್ರಮ್ ರವಿಚಂದ್ರನ್ - Vistara News

ಸಿನಿಮಾ

Puneeth Rajkumar: ಆಕಾಶದಲ್ಲಿರುವ ನಕ್ಷತ್ರಕ್ಕೆ ಪುನೀತ್ ಹೆಸರು: ವಿಡಿಯೊ ಹಂಚಿಕೊಂಡ ವಿಕ್ರಮ್ ರವಿಚಂದ್ರನ್

ವಿಕ್ರಮ್ ರವಿಚಂದ್ರನ್ ಅವರು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಗೌರವ ಸಲ್ಲಿಸಿರುವ ವಿಡಿಯೊ ಬಿಡುಗಡೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತದೆ ಎಂಬ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿ ಬಂದಿದೆ.

VISTARANEWS.COM


on

Tribute to the PuneethRajkumar by vikramravichandran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್‌ (Puneeth Rajkumar) ಹುಟ್ಟು ಹಬ್ಬದ ಪ್ರಯುಕ್ತ ‘ಬಿಗ್ ಲಿಟ್ಲ್’ ಕಂಪನಿ ನಟ ವಿಕ್ರಮ್ ರವಿಚಂದ್ರನ್ ಅವರೊಂದಿಗೆ ಸೇರಿ ವಿಡಿಯೊ ಗೌರವ ಸಲ್ಲಿಸಿದೆ. ವಿಕ್ರಮ್ ರವಿಚಂದ್ರನ್ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಿರುವ ವಿಡಿಯೊ ಬಿಡುಗಡೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಕಾಲದ ಅತ್ಯುತ್ತಮ ಸ್ಪೂರ್ತಿಗೆ ಒಂದು ಚಿಕ್ಕ ಗೌರವ ನೀಡುವ ಸಲುವಾಗಿ ಆಕಾಶದಲ್ಲಿರುವ ನಕ್ಷತ್ರವೊಂದಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಹೆಮ್ಮೆಯಾಗಿದೆ ಎಂದು ಬಿಗ್ ಲಿಟ್ಲ್ ಕಂಪನಿ ತಿಳಿಸಿದೆ.

ವಿಕ್ರಮ್ ರವಿಚಂದ್ರನ್ ಮಾತನಾಡಿ ʻʻಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ತೊಡಗಿಸಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತೆ. ನಾನು ಚಿಕ್ಕಂದಿನಿಂದಲೂ ಅವರ ಸಿನಿಮಾಗಳನ್ನು ನೋಡುತ್ತ ಬೆಳೆದಿದ್ದೇನೆ. ಸಿನಿಮಾದ ಆಚೆಗಿನ ಅವರ ಜೀವನ ಜಗತ್ತಿಗೇ ಸ್ಪೂರ್ತಿ. ಅವರಿಗಾಗಿ ಮಾಡುತ್ತಿರುವ ಒಂದೊಳ್ಳೆ ಕೆಲಸದಲ್ಲಿ ನಾನು ಭಾಗಿಯಾಗಿರೊವುದು ನನಗೆ ತುಂಬ ಖುಷಿ ಕೊಟ್ಟಿದೆʼʼ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಿಕ್ರಮ್ ರವಿಚಂದ್ರನ್ ಇನ್‌ಸ್ಟಾ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ನಡುವೆ ತನ್ನ ನಿಷ್ಕಲ್ಮಷ ನಗುವಿನಿಂದಲೇ ಮಿಂಚಿದ್ದ ತಾರೆಯೊಂದು ,ಇನ್ನು ಮುಂದೆ ಆಕಾಶದಲ್ಲಿ ಹೊಳೆಯಲಿದೆ. ಕೋಟ್ಯಂತರ ನಕ್ಷತ್ರಗಳಲ್ಲಿ ಒಂದು ನಕ್ಷತ್ರಕ್ಕೆ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಇಡಲಾಗಿದೆ. ನಮ್ಮ ನಡುವೆ ಜೀವಿಸಿದ ಪರಮಾತ್ಮನಿಗೆ ನಮ್ಮ ಕಡೆಯಿಂದ ಒಂದು ಪುಟ್ಟ ಸಮರ್ಪಣೆʼʼಎಂದು ವಿಡಿಯೊ ಶೇರ್‌ ಮಾಡಿದ್ದಾರೆ.

ಇದನ್ನೂ ಓದಿ: Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ವಿಕ್ರಮ್ ರವಿಚಂದ್ರನ್ ಪೋಸ್ಟ್‌

ಬಿಗ್ ಲಿಟ್ಲ್ ಕಂಪನಿ ಸಂಸ್ಥಾಪಕಿ ಕಾವ್ಯ ಶಂಕರೇಗೌಡ ಮಾತನಾಡಿ ʻʻಪುನೀತ್ ರಾಜ್ ಕುಮಾರ್ ಎಲ್ಲರಿಗೂ ಸ್ಪೂರ್ತಿ. ಬಿಗ್ ಲಿಟ್ಲ್ ಕಂಪನಿ ಅವರಿಂದ ತುಂಬಾ ಕಲಿತಿದೆ. ವೈಯಕ್ತಿಕವಾಗಿ ಅವರು ನನಗೆ ಗೊತ್ತಿದ್ದಾರೆ, ನನ್ನಂತ ಸಾಮಾನ್ಯ ವ್ಯಕ್ತಿಗಳು ಸೂಪರ್ ಸ್ಟಾರ್ ಗಳ ಬಗ್ಗೆ ಹೊಂದಿರುವ ಅಭಿಪ್ರಾಯವನ್ನು ಅವರು ಬದಲಾಯಿಸಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತದೆ ಎಂಬ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿ ಬಂದಿದೆ. ನಮ್ಮ ಪ್ರೀತಿ ಪಾತ್ರರು ದೂರವಾದಾಗ ನಕ್ಷತ್ರಗಳಾಗುತ್ತಾರೆ ಎಂದು ನಾವು ನಂಬಿದ್ದೇವೆ. ಅಪ್ಪು ಸರ್ ನಮಗೆಲ್ಲ ಸ್ಟಾರ್ ಆಗಿದ್ದರು, ಅವರ ಹೆಸರಲ್ಲಿ ಒಂದು ನಕ್ಷತ್ರ ಇರಬೇಕೆಂದು ನಾವು ಬಯಸುತ್ತೇವೆ. ನಮ್ಮೆಲ್ಲರ ಅತ್ಯುತ್ತಮ ಸ್ಪೂರ್ತಿಯ ಶಕ್ತಿಗೆ ಇದು ನಮ್ಮ ಚಿಕ್ಕ ಕೊಡುಗೆʼʼ ಎಂದು ತಿಳಿಸಿದ್ದಾರೆ.

ಬಿಗ್ ಲಿಟ್ಲ್ ಕಂಪನಿ ಬಿಡುಗಡೆ ಮಾಡಿರುವ ಅಪ್ಪುಗೆ ಗೌರವ ಸಲ್ಲಿಸುವ ಈ ವಿಡಿಯೊ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಸಖತ್ ವೈರಲ್ ಆಗಿದೆ. ವಿಕ್ರಮ್ ರವಿಚಂದ್ರನ್ ಹಾಗೂ ‘ಬಿಗ್ ಲಿಟ್ಲ್’ ತಂಡ ವಿಡಿಯೊವನ್ನು ಮೆಚ್ಚಿ ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಕ್ಷೀಣಿಸುತ್ತಿರುವ ಬಾಕ್ಸ್ ಆಫೀಸ್ ಆದಾಯದ ನಡುವೆ, ಐಪಿಎಲ್ ಮತ್ತು ಸಾರ್ವತ್ರಿಕ ಚುನಾವಣೆಗಳಿಂದ ಟಾಲಿವುಡ್ ನಲ್ಲಿ ಯಾವುದೇ ಚಲನಚಿತ್ರ ತೆರೆಗೆ ಬಂದಿಲ್ಲ. ಹೀಗಾಗಿ ನಷ್ಟದ ಹಾದಿಯನ್ನು ಸರಿಪಡಿಸಿಕೊಳ್ಳಲು ತೆಲಂಗಾಣದಲ್ಲಿ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು (Single Screen Theaters) ಹತ್ತು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ.

VISTARANEWS.COM


on

By

Single Screen Theaters
Koo

ಪ್ರಮುಖ ಚಲನಚಿತ್ರಗಳ ಬಿಡುಗಡೆ (movie releases) ಕೊರತೆಯಿಂದಾಗಿ ತೆಲಂಗಾಣದಾದ್ಯಂತ (Telangana) ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು (Single Screen Theaters) 10 ದಿನಗಳ ಕಾಲ ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ ಇಲ್ಲದಿರುವ ಪರಿಣಾಮ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಯಾವುದೇ ದೊಡ್ಡ ಬಜೆಟ್ ನ ಚಿತ್ರಗಳು ಬಾರದೇ ಇರುವುದರಿಂದ ಥಿಯೇಟರ್ ಗಳನ್ನು ಮುಚ್ಚುತ್ತಿರುವುದಾಗಿ ಥಿಯೇಟರ್ ಮಾಲೀಕರು ಉಲ್ಲೇಖಿಸಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸಲು ಯಾವುದೇ ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಚಲನಚಿತ್ರ ಪ್ರದರ್ಶನ ಕಾರ್ಯಾಚರಣೆಯ ವೆಚ್ಚ ಮತ್ತು ಕಡಿಮೆಯಾದ ಆದಾಯ ಸೇರಿದಂತೆ ಹಣಕಾಸಿನ ಸವಾಲುಗಳ ನಡುವೆ 2024ರ ಸಂಕ್ರಾಂತಿ ನಂತರ ಯಾವುದೇ ದೊಡ್ಡ ಚಿತ್ರಗಳು ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಲಿಲ್ಲ.

ಏನು ಕಾರಣ?

ಕಳೆದ ಕೆಲವು ವಾರಗಳಲ್ಲಿ ತೆಲಂಗಾಣದಲ್ಲಿ ಚಲನಚಿತ್ರ ವ್ಯಾಪಾರಿಗಳು ಮೇ 17ರಿಂದ ಥಿಯೇಟರ್ ಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡರು. ಒಂದೆಡೆ ಲೋಕ ಸಭಾ ಚುನಾವಣೆ, ಇನ್ನೊಂದೆಡೆ ದೊಡ್ಡ ಚಿತ್ರಗಳ ಬಿಡುಗಡೆಗಳ ಕೊರತೆ, ಇಂಡಿಯನ್ ಪ್ರೀಮಿಯರ್ ಲೀಗ್ ಗಳು ತೆಲಂಗಾಣ ಮತ್ತು ಆಂಧ್ರಪ್ರದೇಶದಾದ್ಯಂತ ಥಿಯೇಟರ್‌ಗಳ ಮೇಲೆ ಭಾರಿ ಪ್ರಭಾವವನ್ನು ಬೀರಿದೆ.

ಮತ್ತೆ ತೆರೆಯುವ ನಿರೀಕ್ಷೆ

ಮೇ 31 ರಂದು ವಿಶ್ವಕ್ ಸೇನ್ ಅವರ ‘ಗ್ಯಾಂಗ್ಸ್ ಆಫ್ ಗೋದಾವರಿ’ಗಾಗಿ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಮತ್ತೆ ತೆರೆಯಲ್ಪಡುತ್ತವೆ. ಅಲ್ಲದೆ ಅನೇಕ ಥಿಯೇಟರ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ‘ಕಲ್ಕಿ’ಯಂತಹ ದೊಡ್ಡ-ಬಜೆಟ್ ಚಿತ್ರಗಳ ಮೇಲೆ ಭರವಸೆ ಇಡುತ್ತಿವೆ. 2898 AD’, ‘ಪುಷ್ಪ: ದಿ ರೂಲ್’, ‘ಗೇಮ್ ಚೇಂಜರ್’, ‘ವಿಶ್ವಂಭರ’ ಮತ್ತು ‘ಇಂಡಿಯನ್ 2’ ಸೇರಿದಂತೆ ಈ ಬಾರಿ ಹಲವು ಚಿತ್ರಗಳು ತೆರೆಗೆ ಬರುವ ನಿರೀಕ್ಷೆಯಲ್ಲಿದೆ.

ಹತ್ತು ದಿನ ಬಂದ್

ತೆಲಂಗಾಣದಲ್ಲಿ ಚಲನಚಿತ್ರ ವ್ಯವಹಾರವು ಕೆಲವು ಅಭೂತಪೂರ್ವ ಸವಾಲುಗಳನ್ನು ಎದುರಿಸುತ್ತಿದೆ. ಇದು ರಾಜ್ಯದ ಮನರಂಜನಾ ವಲಯದಾದ್ಯಂತ ತಲ್ಲಣ ಉಂಟು ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಆದಾಯ ಕಡಿಮೆಯಾಗುತ್ತಿರುವ ಕಾರಣ ತೆಲಂಗಾಣದಾದ್ಯಂತ ಹಲವಾರು ಏಕ-ಪರದೆಯ ಚಿತ್ರಮಂದಿರಗಳು ಮೇ 17ರಿಂದ ಮೇ 26ರವರೆಗೆ ಹತ್ತು ದಿನಗಳ ಕಾಲ ಬಾಗಿಲು ಮುಚ್ಚಲು ಯೋಜಿಸಿದೆ.

ಈ ಬಾರಿ ಬೇಸಿಗೆಯಲ್ಲಿ ಪ್ರಮುಖ ಚಲನಚಿತ್ರ ಬಿಡುಗಡೆಯಾಗಿಲ್ಲ. ಸಾಮಾನ್ಯವಾಗಿ ಈ ಸಂದರ್ಭದಲ್ಲಿ ದೊಡ್ಡ ಜನಸಮೂಹವನ್ನು ಸೆಳೆಯುವ ಬ್ಲಾಕ್‌ಬಸ್ಟರ್ ಹಿಟ್‌ ಚಿತ್ರಗಳು ತೆರೆಗೆ ಬರುತ್ತದೆ. ಆದರೆ ಈ ಬಾರಿ ಯಾವುದೇ ಅಂತಹ ಚಿತ್ರಗಳು ಬಂದಿಲ್ಲ. ಇದು ಸಿಂಗಲ್ ಸ್ಕ್ರೀನ್‌ಗಳ ಮೇಲೆ ಗಂಭೀರ ಪರಿಣಾಮವನ್ನೇ ಬೀರಿದೆ.

ಇದನ್ನೂ ಓದಿ: Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

ಥಿಯೇಟರ್‌ಗಳು ತಮ್ಮ ಆದಾಯವನ್ನು ಸಂಗ್ರಹಿಸಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತದೆ. ಚಲನಚಿತ್ರದ ವೇಳಾಪಟ್ಟಿ ಮತ್ತು ಪ್ರೇಕ್ಷಕರ ಸಂಖ್ಯೆಯಲ್ಲಿನ ಏರಿಳಿತಗಳಿಗೆ ಹೆಚ್ಚು ಗುರಿಯಾಗುತ್ತವೆ. ಕಳೆದ ಎರಡು ತಿಂಗಳುಗಳಲ್ಲಿ ಸಣ್ಣ ಮತ್ತು ಮಧ್ಯಮ-ಬಜೆಟ್ ಚಲನಚಿತ್ರಗಳ ಸರಣಿಯು ಛಾಪು ಮೂಡಿಸುವಲ್ಲಿ ವಿಫಲವಾಗಿದೆ. ಇದರಿಂದ ಚಿತ್ರೋದ್ಯಮ ವ್ಯಾಪಾರವನ್ನು ಮತ್ತಷ್ಟು ತಗ್ಗಿದೆ.

ನಷ್ಟ ತಡೆಗೆ ಕ್ರಮ

ತೆಲಂಗಾಣ ಥಿಯೇಟರ್ಸ್ ಅಸೋಸಿಯೇಷನ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತಷ್ಟು ನಷ್ಟವನ್ನು ತಡೆಯಲು ತಡೆಗಟ್ಟಲು ನಿರ್ಧರಿಸಿದೆ.

Continue Reading

ಪ್ರಮುಖ ಸುದ್ದಿ

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

Pushpa 2: ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

VISTARANEWS.COM


on

Pushpa 2
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪಾ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳ ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೇಟ್ ಸಂಬಂಧಿತ ಸಮಸ್ಯೆಗಳಿಂದಾಗಿ ಎಡಿಟರ್​ ಆಂಟನಿ ರೂಬೆನ್ ಪುಷ್ಪಾ 2 ಬಳಗ ತೊರೆದಿದ್ದಾರೆ ಎಂಬ ಸುದ್ದಿಹರಡಿತ್ತು ಎಂದು ಪೀಪಿಂಗ್ ಮೂನ್ ಇತ್ತೀಚೆಗೆ ವರದಿ ಮಾಡಿದೆ. ಹೀಗಾಗಿ ಚಿತ್ರದ ಸಂಕಲನ ಕಾರ್ಯವನ್ನು ಪೂರ್ಣಗೊಳಿಸಲು ನವೀನ್ ನೂಲಿ ಅವರನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿ ಪುಷ್ಪ 2 ಬಿಡುಗಡೆ ವಿಳಂಬಕ್ಕೆ ಕಾರಣವಾಗಬಹುದೇ ಎಂದು ಅನುಮಾನ ಎದ್ದಿದ್ದವು.

ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ರಶ್ಮಿಕಾ ಅವರು ಬಹುನಿರೀಕ್ಷಿತ ಚಿತ್ರದ ಬಗ್ಗೆ ಮಾತನಾಡುವುದಾದರೆ. ಇದು ಎಂದಿಗಿಂತಲೂ ಭರವಸೆಯ ಸಿನಿಮಾವಾಗಿದೆ. “ಪುಷ್ಪಾ 2 ತುಂಬಾ ದೊಡ್ಡ ಸಿನಿಮಾವಾಗಲಿದೆ. ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ಮೊದಲ ಚಿತ್ರದಲ್ಲಿ ನಾವು ಸ್ವಲ್ಪ ವಿಶೇಷವಾದದನ್ನು ನೀಡಿದ್ದೇವೆ. ಭಾಗ 2 ರಲ್ಲಿ, ನಮಗೆ ಜವಾಬ್ದಾರಿ ಹೆಚ್ಚಿದೆ ಎಂದೂ ನಮಗೆ ತಿಳಿದಿದೆ ಏಕೆಂದರೆ ಜನರು ಚಿತ್ರದ ಬಗ್ಗೆ ತುಂಬಾ ನಿರೀಕ್ಷೆ ಹೊಂದಿದ್ದಾರೆ. ನಾವು ಅದನ್ನು ತಲುಪಿಸಲು ನಿರಂತರವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಪಿಂಕ್​ವಿಲ್ಲಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು. ಇದಕ್ಕೂ ಮೊದಲು, ಸಿಯಾಸತ್​​ನ ಮತ್ತೊಂದು ವರದಿಯು ಎಲ್ಲಾ ಭಾಷೆಗಳ ಹಕ್ಕುಗಳ ಒಪ್ಪಂದಕ್ಕಾಗಿ ತಯಾರಕರು 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬೇಡಿಕೆ ಬಂದಿದೆ. ಈ ಚಿತ್ರವು ಎಸ್.ಎಸ್.ರಾಜಮೌಳಿ ಅವರ ಆರ್​ಆರ್​ಆರ್​ ಮೀರಿಸುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Continue Reading

ಫ್ಯಾಷನ್

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

ಈಗಾಗಲೇ ಆರಂಭವಾಗಿರುವ ಪ್ರತಿಷ್ಠಿತ ಕಾನೆ ಫಿಲ್ಮ್ ಫೆಸ್ಟಿವಲ್‌ನಲ್ಲಿ ಹಾಲಿವುಡ್‌-ಬಾಲಿವುಡ್‌ ಸೇರಿದಂತೆ ನಾನಾ ಕ್ಷೇತ್ರದ ಫ್ಯಾಷನ್‌ ಐಕಾನ್‌ಗಳು, ರೆಡ್‌ಕಾರ್ಪೆಟ್‌ನಲ್ಲಿ ತಮ್ಮತಮ್ಮ ಫ್ಯಾಷನ್‌ವೇರ್ಸ್ ಅನಾವರಣಗೊಳಿದರು. ಮೊದಲ ದಿನವೇ ಯಾರ್ಯಾರು ಹೇಗೆಲ್ಲ ಕಾಣಿಸಿಕೊಂಡರು ಎಂಬುದರ ಕುರಿತಂತೆ ಫ್ಯಾಷನ್‌ ವಿಮರ್ಶಕರು ರಿವ್ಯೂ ನೀಡಿದ್ದು, ಇಲ್ಲಿದೆ ಡಿಟೇಲ್ಸ್.‌

VISTARANEWS.COM


on

Cannes 2024 Fashion celebrities trend
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮತ್ತೊಮ್ಮೆ ಸೆಲೆಬ್ರೆಟಿಗಳ (Cannes 2024 Fashion) ಫ್ಯಾಷನ್‌ ಟ್ರೆಂಡ್‌ಗೆ ಸಾಕ್ಷಿಯಾಗುತ್ತಿದೆ. ಹೌದು, ಈಗಾಗಲೇ ಆರಂಭವಾಗಿರುವ ವಿಶ್ವದ ಪ್ರತಿಷ್ಠಿತ 77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಹಾಲಿವುಡ್‌-ಬಾಲಿವುಡ್‌ ಸೇರಿದಂತೆ ನಾನಾ ಕ್ಷೇತ್ರದ ಫ್ಯಾಷನ್‌ ಐಕಾನ್‌ಗಳು ಪಾಲ್ಗೊಂಡು ತಮ್ಮದೇ ಆದ ಫ್ಯಾಷನ್‌ವೇರ್ಸ್ ಅನಾವರಣಗೊಳಿಸತೊಡಗಿದ್ದಾರೆ.

ಫ್ಯಾಷನ್‌ ವಿಮರ್ಶಕರ ರಿವ್ಯೂ
” ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಎಂದಿನಂತೆ ನಾನಾ ಧಿರಿಸು ಹಾಗೂ ಗೌನ್‌ಗಳ ಅನಾವರಣದಿಂದಲೇ ಆರಂಭವಾಗಿದೆ. ಸ್ಪರ್ಧೆಗಿಳಿದವರಂತೆ ತಾರೆಯರು ಕೂಡ ಊಹೆಗೂ ಮೀರಿದ ಡಿಸೈನರ್‌ವೇರ್‌ಗಳಲ್ಲಿ ಕಾಣಿಸತೊಡಗಿದ್ದಾರೆ. ಹಾಲಿವುಡ್‌ ತಾರೆಯರು ನಾನ್‌ ವೇರಬಲ್‌ ಡಿಸೈನರ್‌ವೇರ್‌ಗಳಿಗೆ ಆದ್ಯತೆ ನೀಡಿದರೇ, ನಮ್ಮ ರಾಷ್ಟ್ರದ ಸೆಲೆಬ್ರೆಟಿಗಳು ವೇರಬಲ್‌ ಪ್ಲಸ್‌ ನಾನ್‌ ವೇರಬಲ್‌ ಡಿಸೈನರ್‌ ಗೌನ್‌ಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ. ಇನ್ನು ಸಾಕಷ್ಟು ದಿನಗಳು ಈ ಫೆಸ್ಟಿವಲ್‌ ನಡೆಯುವುದರಿಂದ ಈಗಲೇ ಏನೂ ಹೇಳಲಾಗದು” ಎನ್ನುತ್ತಾರೆ ಫ್ಯಾಷನ್‌ ದಿಗ್ಗಜರಾದ ಸೆಲೆಬ್ರೆಟಿ ಡಿಸೈನರ್‌ ನೀರಜ್‌ ವರ್ಮಾ.
” ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಬಾಲಿವುಡ್‌ ನಟಿ ಐಶ್ವರ್ಯಾ ರೈ ಪ್ರತಿಬಾರಿಯೂ ವಿನೂತನ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿಯೂ ನಿರೀಕ್ಷೆ ಇದೆ. ಇನ್ನು ಕಿಯಾರಾ, ಶೋಭಿತಾ, ಜಾಕ್ವೇಲಿನ್‌ ಹಾಗೂ ಅದಿತಿ ರಾವ್‌ ಹೈದರಿ ಕೂಡ ಮುಂಬರುವ ದಿನಗಳಲ್ಲಿ ಭಾಗವಹಿಸಲಿದ್ದು, ಇವರ ಡಿಸೈನರ್‌ವೇರ್‌ಗಳ ಬಗ್ಗೆಯೂ ಸಾಕಷ್ಟು ಕುತೂಹಲವಿದೆ” ಎಂದಿದ್ದಾರೆ ಫ್ಯಾಷನ್‌ ವಿಮರ್ಶಕರಾದ ರೋಹನ್‌ ರಾಜ್‌.

ಇದನ್ನೂ ಓದಿ: Sandalwood Actress At Cannes 2023: ಮತ್ತೊಮ್ಮೆ ಕಾನ್‌ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ

ಟಿವಿ ತಾರೆ ದೀಪ್ತಿಯ ಆಕರ್ಷಕ ಲಾಂಗೆಸ್ಟ್‌ ಗೌನ್‌

ಆರಂಭದಲ್ಲೆ, ಟಿವಿ ತಾರೆ ದೀಪ್ತಿ ಸದ್ವಾನಿಯ ಹಳದಿ ಕಲರ್‌ ರಫಲ್‌ ನೆಟ್ಟೆಡ್‌ ಗೌನ್‌ ಕಾನೆ ಫೆಸ್ಟಿವಲ್‌ನ ಆರಂಭದ ದಿನದಲ್ಲೆ ಎಲ್ಲರನ್ನು ಸೆಳೆಯಿತು. ಆಂಚಲ್‌ ಕಾಚರ್‌ ಡಿಸೈನ್‌ನ ಈ ಗೌನ್‌ ಮೊದಲನೆ ದಿನದ ಅತಿ ಉದ್ದನೆಯ ಗೌನ್‌ ಎಂದು ರೆಕಾರ್ಡ್‌ ಮಾಡಿತು.

ಶಾರ್ಕ್‌ ಟ್ಯಾಂಕ್‌ ಖ್ಯಾತಿಯ ನಮಿತಾ ತಾಪರ್‌ ಲುಕ್‌:

ಉದ್ಯಮಿ ಹಾಗೂ ಶಾರ್ಕ್‌ ಟ್ಯಾಂಕ್‌ ಖ್ಯಾತಿಯ ನಮಿತಾ ಟಾಪರ್‌ರ ಪಾಸ್ಟೆಲ್‌ ಶೇಡ್‌ನ ಆಫ್‌ ಶೋಲ್ಡರ್‌, ಸ್ಲಿಟ್‌ ಇರುವ ಬಲೂನ್‌ ಸ್ಲೀವ್‌ನ ಗೌನ್‌ ಸೋಷಿಯಲ್‌ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯಿತು.

ಡಿಸೈನರ್‌ವೇರ್‌ ಕಾಪಿ ಮಾಡಿದ ಊರ್ವಶಿ

ಪಿಂಕ್‌ ಗೌನ್‌ನಲ್ಲಿ ಊರ್ವಶಿ ಚಂದನಾಗಿ ಕಾಣಿಸಿದರೂ, ದೀಪಿಕಾ ಪಡುಕೋಣೆಯ ಗೌನ್‌ ಕಾಪಿ ಮಾಡಿದ ಬಿರುದು ದೊರೆಯಿತು.

ಹಾಲಿವುಡ್‌ ತಾರೆಯರ ಬೆಸ್ಟ್‌ ಲುಕ್ಸ್‌

ನಟಿ ನೌಮಿ ಕಾಂಪ್ಬೆಲ್‌ ಬ್ಲಾಕ್‌ ಶೇಡ್‌ ಆರ್ಕಿವ್‌ ಚಾನೆಲ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡರೇ, ಅನ್ಯಾ ಟಾಯ್ಲರ್‌ ಡಿಯೋರ್‌ ಶೋಲ್ಡರ್‌ಲೆಸ್‌ ಕ್ರೀಮಿಶ್‌ ಸಿಂಡ್ರೆಲ್‌ ಗೌನ್‌ನಲ್ಲಿ ಗಮನ ಸೆಳೆದರು. ಕ್ರಿಸ್‌ ಹೆಮ್ಸ್ವರ್ತ್‌ – ಎಲ್ಸಾ ಕಪಲ್‌ ಕಾಂಟ್ರಸ್ಟ್‌ ಬ್ಲಾಕ್‌ & ವೈಟ್‌ ಔಟ್‌ಫಿಟ್‌ನಲ್ಲಿ ರೆಡ್‌ ಕಾರ್ಪೆಟ್‌ ತುಳಿದರು. ಲಾ ರೋಚ್‌ ಬ್ಲಾಕ್‌ ಶೈನಿಂಗ್‌ ಕೋಟ್‌ ಶರ್ಟ್-ಪ್ಯಾಂಟ್‌ನಲ್ಲಿ, ಸಬ್ರು ಡಬ್ಬಲ್‌ ಶೇಡ್‌ ವನ್‌ ಶೋಲ್ಡರ್‌ ಗೌನ್‌ನಲ್ಲಿ, ಗ್ರೇಟಾ ರೆಡ್‌ ಫಿಶ್‌ಟೇಲ್‌ ಗೌನ್‌ನಲ್ಲಿ, ಇವಾ ಬಾಲ್ಮೈಮ್‌ ಶಿಮ್ಮರ್‌ ಗೌನ್‌ನಲ್ಲಿ ಫ್ಯಾಷನ್‌ ಪ್ರಿಯರನ್ನು ಸೆಳೆದರು. ಇವರೊಂದಿಗೆ ಸಿನಿಮಾ ಪ್ರೀಮಿಯರ್‌ ಟೀಮ್‌ನವರು ನಾನಾ ಶೈಲಿಯ ಡಿಸೈನರ್‌ವೇರ್ಗಳಲ್ಲಿ ಕಾಣಿಸಿಕೊಂಡರು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ಸಿನಿಮಾ

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Chandu Champion: ಚಂದು ಚಾಂಪಿಯನ್ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ಚಂದು ಚಾಂಪಿಯನ್​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Chandu Champion Injured Kartik Aaryan looks intense
Koo

ಬೆಂಗಳೂರು: ಕಾರ್ತಿಕ್ ಆರ್ಯನ್ ( Kartik Aaryan) ಅವರು ತಮ್ಮ ಮುಂಬರುವ ಚಿತ್ರ ‘ಚಂದು ಚಾಂಪಿಯನ್’ ನ (Chandu Champion) ಎರಡನೇ ಪೋಸ್ಟರ್‌ ಬಿಡುಗಡೆಗೊಳಿಸಿದ್ದಾರೆ. ಬಾಕ್ಸಿಂಗ್ ರಿಂಗ್‌ನಲ್ಲಿ ಗಾಯಗೊಂಡ ಮುಖದೊಂದಿಗೆ ಕಂಡಿದ್ದಾರೆ. ಮೊದಲ ಪೋಸ್ಟರ್ ಅನ್ನು ಮೇ 15ರಂದು ಅನಾವರಣಗೊಳಿಸಲಾಯಿತು. ಕಬೀರ್ ಖಾನ್ ನಿರ್ದೇಶನದ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಕಾರ್ತಿಕ್​​ ಗಮನಾರ್ಹ ರೂಪಾಂತರಕ್ಕೆ ಒಳಗಾಗಿರುವುದು ಕಂಡಿದೆ. ಕಠಿಣ ತಯಾರಿ ನಡೆಸಿರುವುದಾಗಿ ಕಂಡು ಬರುತ್ತಿದೆ.

ʼಚಂದು ಚಾಂಪಿಯನ್ʼ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ʼಚಂದು ಚಾಂಪಿಯನ್ʼ​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಬ್ರೇಕಪ್‌ ಕ್ಲ್ಯಾರಿಟಿ ಬೆನ್ನಲ್ಲೇ ಸಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕಾರ್ತಿಕ್ ಆರ್ಯನ್!

ಕಾರ್ತಿಕ್ ಆರ್ಯನ್ ಅವರ ಈ ಕಠಿಣ ಶ್ರಮಕ್ಕೆ ನಿರ್ದೇಶಕ ಕಬೀರ್ ಖಾನ್ ಟಿಪ್ಪಣಿಯನ್ನು ಬರೆದಿದ್ದಾರೆ. ʻʻಚಂದು ಚಾಂಪಿಯನ್‌ನ ಕಥೆಯು ನಂಬಲಾಗದಷ್ಟು ಸ್ಪೂರ್ತಿದಾಯಕ ನೈಜ ಕಥೆಯಾಗಿದೆ. ಆದರೆ ಈ ಚಾಂಪಿಯನ್ ಆಗಲು ಕಾರ್ತಿಕ್ ಮಾಡಿದ ಪ್ರಯಾಣವು ಸ್ಫೂರ್ತಿದಾಯಕವಾಗಿದೆ. ಶೇ. 39ರಷ್ಟು ಬಾಡಿ ಫ್ಯಾಟ್‌ ಕರಗಿಸಿದರುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಕಬೀರ್ ಖಾನ್ ಆ್ಯಕ್ಷನ್​ ಕಟ್​ ಹೇಳಿರುವ ʻಈ ಚಂದು ಚಾಂಪಿಯನ್ʼ, ಓರ್ವ ಕ್ರೀಡಾಪಟುವಿನ ನೈಜ ಕಥೆಯನ್ನು ಬಿಚ್ಚಿಡಲಿದೆ. ಈ ಪಾತ್ರಕ್ಕಾಗಿ ಕಾರ್ತಿಕ್ ಅವರ ಪ್ರಯಾಣ ಗಮನಾರ್ಹವಾದದ್ದು. ಜೂನ್ 14 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ.

Continue Reading
Advertisement
CAA
ದೇಶ1 min ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ5 mins ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Pushpa 2
ಪ್ರಮುಖ ಸುದ್ದಿ12 mins ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ30 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ31 mins ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ58 mins ago

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Fire Accident
ದೇಶ59 mins ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್1 hour ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್1 hour ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್1 hour ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು7 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌