Tyson: ಮಲಯಾಳಂಗೆ ಹೊಂಬಾಳೆ ಫಿಲ್ಮ್ಸ್‌ ಎಂಟ್ರಿ, ಸೂಪರ್‌ಸ್ಟಾರ್‌ ಪೃಥ್ವಿರಾಜ್‌ ಸುಕುಮಾರನ್ ಸಾ‍ಥ್‌ - Vistara News

ಪ್ರಮುಖ ಸುದ್ದಿ

Tyson: ಮಲಯಾಳಂಗೆ ಹೊಂಬಾಳೆ ಫಿಲ್ಮ್ಸ್‌ ಎಂಟ್ರಿ, ಸೂಪರ್‌ಸ್ಟಾರ್‌ ಪೃಥ್ವಿರಾಜ್‌ ಸುಕುಮಾರನ್ ಸಾ‍ಥ್‌

ಹೊಂಬಾಳೆ ಫಿಲ್ಮ್ಸ್‌ ಮಲಯಾಳಂ ‘ಸೂಪರ್ ಸ್ಟಾರ್’ ಪೃಥ್ವಿರಾಜ್ ಸುಕುಮಾರನ್ ಜೊತೆ ಹೊಸ ಸಿನಿಮಾಕ್ಕಾಗಿ ಕೈಜೋಡಿಸಿದೆ. ಮುಂದಿನ ದಿನಗಳಲ್ಲಿ ಕಲಾವಿದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

VISTARANEWS.COM


on

ಹೊಂಬಾಳೆ ಫಿಲ್ಮ್ಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಹೊಂಬಾಳೆ ಫಿಲ್ಮ್ಸ್‌ ನಿಂದ ಸಾಲು ಸಾಲು ಸಿನಿಮಾಗಳು ಅನೌನ್ಸ್‌ ಆಗುತ್ತಲೇ ಇವೆ. ಇತ್ತೀಚೆಗಷ್ಟೇ ಪ್ಯಾನ್‌ ಇಂಡಿಯಾ ಸಿನಿಮಾಗಳು ಘೋಷಣೆ ಆಗಲಿವೆ ಎಂದು ಹೊಂಬಾಳೆ ಫಿಲ್ಮ್ಸ್‌ ತಂಡ ಹೇಳಿತ್ತು. ಇದೀಗ ಒಂದು ಹೊಸ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಘೋಷಣೆ ಮಾಡಲಾಗಿದೆ. ವಿಶೇಷವೆಂದರೆ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಮಲಯಾಳಂ ‘ಸೂಪರ್ ಸ್ಟಾರ್’ ಪೃಥ್ವಿರಾಜ್ ಸುಕುಮಾರನ್ “ಟೈಸನ್‌ʼʼ ಮೂಲಕ ಇದಕ್ಕೆ ಕೈಜೋಡಿಸಿದ್ದಾರೆ. 

ಈಗಾಗಲೇ ಟೈಟಲ್‌ ಕೂಡ ರಿವೀಲ್‌ ಆಗಿದ್ದು, ನಟನೆ ಜತೆ ನಿರ್ದೇಶನವನ್ನೂ ಪೃಥ್ವಿರಾಜ್‌ ಸುಕುಮಾರನ್‌ ಮಾಡುತ್ತಿರುವುದೇ ವಿಶೇಷ. ಹೊಸ ಸಿನಿಮಾಕ್ಕೆ ʼಟೈಸನ್‌ʼ ಎಂದು ಹೆಸರು ಇಟ್ಟಿದ್ದು, ಅದನ್ನು ಐದು ಭಾಷೆಗಳಲ್ಲಿ ತೆರೆಗೆ ತರಲು ಹೊಂಬಾಳೆ ಫಿಲ್ಮ್ಸ್‌ ಸಜ್ಜಾಗಿದೆ.

ಇದನ್ನೂ ಓದಿ | Kantara vs Martin Movie : ಆ್ಯಕ್ಷನ್‌ ಪ್ರಿನ್ಸ್‌ ಮತ್ತು ರಿಷಭ್ ಶೆಟ್ಟಿ ‌ಒಂದೇ ದಿನ ಮುಖಾಮುಖಿ!

ಹೇಗಿರಲಿದೆ ಟೈಸನ್‌?

ಪೃಥ್ವಿರಾಜ್‌ ಅವರ ನಟನೆ ಮತ್ತು ನಿರ್ದೇಶನದ ಈ ಸಿನಿಮಾ ಆಕ್ಷನ್‌ ಥ್ರಿಲರ್‌ ಆಗಿದ್ದು, ಸಾಮಾಜಿಕ ವಿಚಾರಗಳು ಇರಲಿವೆಯಂತೆ. ಮೋಹನ್‌ಲಾಲ್‌ ನಟನೆಯ ʼಲೂಸಿಫರ್‌ʼ ಸಿನಿಮಾ ನಿರ್ದೇಶನದ ಮೂಲಕ ಡೈರೆಕ್ಷನ್‌ಗೆ ಇಳಿದಿದ್ದರು ಪೃಥ್ವಿರಾಜ್‌. ಮೊದಲ ಸಿನಿಮಾದಲ್ಲೇ ಸಕ್ಸಸ್‌ ಪಡೆದ ಪೃಥ್ವಿರಾಜ್‌ ನಂತರ ʼಬ್ರೋ ಡ್ಯಾಡಿʼ  ಸಿನಿಮಾ ನಿರ್ದೇಶಿಸಿದರು. ಈಗ ʼಲೂಸಿಫರ್‌ʼ ಸಿನಿಮಾದ ಸಿಕ್ವೇಲ್‌ ʼಎಂಪುರಾನ್‌ʼ ನಿರ್ದೇಶನ ಮಾಡುತ್ತಿದ್ದಾರೆ.

ಇದೀಗ ಅವರ ನಿರ್ದೇಶನದಲ್ಲಿ ನಾಲ್ಕನೇ ಸಿನಿಮಾ ಟೈಸನ್‌. ಗೋಪಿ ಅವರು ಪೃಥ್ವಿರಾಜ್‌ ಅವರ ಹಿಂದಿನ ಸಿನಿಮಾಗೂ ಸ್ಕ್ರಿಪ್ಟ್‌ ಮಾಡಿದ್ದು, ಈ ಸಿನಿಮಾಗೂ ಸ್ಕ್ರಿಪ್ಟ್‌ ಗೋಪಿಯವರೇ ಮಾಡುತ್ತಿದ್ದಾರೆ.

ಮಾಲಿವುಡ್‌ನಲ್ಲಿ ಅಬ್ಬರಿಸಲಿರುವ ಹೊಂಬಾಳೆ ಫಿಲ್ಮ್ಸ್‌

ಪ್ರಶಾಂತ್‌ ನೀಲ್‌ ಅವರ ʼಸಲಾರ್‌ʼ ಮೂಲಕ ಟಾಲಿವುಡ್‌ಗೆ ಸಖತ್‌ ಎಂಟ್ರಿ ನೀಡಿರುವ ಹೊಂಬಾಳೆ ಫಿಲ್ಮ್ಸ್‌ ಇದೀಗ ʼಟೈಸನ್‌ʼ ಮೂಲಕ ಮಾಲಿವುಡ್‌ಗೆ ಕಾಲಿಟ್ಟಿದೆ. 2023ರಲ್ಲಿ ಶೂಟಿಂಗ್‌ ಆರಂಭಿಸಿ , 2024ರಲ್ಲಿ ಪಂಚ ಭಾಷೆಗಳಾದ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಈ ಸಿನಿಮಾವನ್ನು ತೆರೆಗೆ ತರಲು ಪ್ಲಾನ್‌ ಮಾಡಿಕೊಳ್ಳಲಾಗಿದೆ. ಈ ಸಿನಿಮಾದ ಟೈಟಲ್‌ ಲುಕ್‌ ರಿಲೀಸ್‌ ಆಗಿದ್ದು, ಮುಂದಿನ ದಿನಗಳಲ್ಲಿ ಕಲಾವಿದರ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

ಸಾಲು ಸಾಲು ಸಿನಿಮಾದ ಮೂಲಕ ಮುನ್ನುಗ್ಗುತ್ತಿರುವ ಹೊಂಬಾಳೆ

ಕೆಜಿಎಫ್‌-2 ಸಿನಿಮಾದ ಮೂಲಕ ಭಾರಿ ಲಾಭ ಗಳಿಸಿದ ಹೊಂಬಾಳೆ ಫಿಲ್ಮ್ಸ್‌ ಸಿನಿಮಾಗಳನ್ನು ಮಾಡುವುದರ ಜತೆ ಹೊಸ ಹೊಸ ಸಿಹಿ ಸುದ್ದಿಯನ್ನು ನೀಡುತ್ತಿದೆ.

ಅಗಸ್ಟ್‌ 5ರಂದು ʼಹೊಂಬಾಳೆ ಫಿಲ್ಮ್ಸ್‌ʼನ ʼರಾಘವೇಂದ್ರ ಸ್ಟೋರ್ಸ್‌ʼ ಮತ್ತು ಸೆಪ್ಟೆಂಬರ್‌ 30ರಂದು ರಿಷಭ್ ಶೆಟ್ಟಿ ಅವರ ʼಕಾಂತಾರʼ ಸಿನಿಮಾ ತೆರೆಕಾಣಲಿದೆ. ʼಸಲಾರ್‌ʼ ಶೂಟಿಂಗ್‌ ಜತೆ ಶ್ರೀಮುರಳಿ ಅವರ ʼಬಘೀರʼ ಚಿತ್ರಕ್ಕೆ ಮೂಹರ್ತ ನೆರವೇರಿಸಿದೆ.

ಇದನ್ನೂ ಓದಿ | ಶೋ ಮ್ಯಾನ್ ಪ್ರಶಾಂತ್ ನೀಲ್ Birthday: ಪ್ಯಾನ್‌ ಇಂಡಿಯಾ ಸ್ಟಾರ್‌ಗಳ ಸಮಾಗಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

Karan Bhushan Singh: ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Karan Bhushan Singh
Koo

ಲಕ್ನೋ: ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಕುಡಿದು ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಹಸಿಯಾಗಿರುವಾಗಲೇ ಅಂತಹದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಪುತ್ರ ಕರಣ್ ಭೂಷಣ್ ಸಿಂಗ್ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು 17 ವರ್ಷದ ರೆಹಾನ್ ಮತ್ತು ಆತನ ಸಂಬಂಧಿ 24 ವರ್ಷದ ಶಹಜಾದ್ ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ

ಈ ಬಗ್ಗೆ ಎಫ್ಐಆರ್ ದಾಖಲಿಸಿರುವ ಚಂದಾ ಬೇಗಂ ಮಾತನಾಡಿ, ʼʼಇಂದು (ಮೇ 29) ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಮಗ ರೆಹಾನ್ ಮತ್ತು ಸೋದರಳಿಯ ಶಹಜಾದ್ ಔಷಧ ಖರೀದಿಸಲು ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆʼʼ ಎಂದು ಹೇಳಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮತ್ತು ಮೃತರ ಕುಟುಂಬದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ಕ್ರಮ ಕೈಗೊಂಡ ಪೊಲೀಸರು ಅಪಘಾತ ನಡೆದ ನಂತರ ಪರಾರಿಯಾಗಿದ್ದ ಟೊಯೊಟಾ ಫಾರ್ಚೂನರ್‌ನ ಚಾಲಕನ್ನು ಬಂಧಿಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಕರಣ್ ಭೂಷಣ್ ಸಿಂಗ್ ಅವರು ವಾಹನದಲ್ಲಿ ಇದ್ದರಾ ಎನ್ನುವ ಬಗ್ಗೆ ಇದುವರೆಗೆ ಮಾಹಿತಿ ಲಭಿಸಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿರುವ ಕಾರಣ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಅವರ ಬದಲಾಗಿ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಮಣೆ ಹಾಕಲಾಗಿತ್ತು. ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕರಣ್ ಭೂಷಣ್ ಸಿಂಗ್ ಹಿನ್ನೆಲೆ

2019ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

Continue Reading

ರಾಜಕೀಯ

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

MLC Election: ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು.

VISTARANEWS.COM


on

mlc election
Koo

ಬೆಂಗಳೂರು: ವಿಧಾನ ಪರಿಷತ್‌ಗೆ (MLC Election) ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟಿನ ಚೆಂಡು ಸದ್ಯಕ್ಕೆ ಹೈಕಮಾಂಡ್ ಅಂಗಳದಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (DCM DK Shivakumar) ಸದ್ಯ ತಮ್ಮ ಭಿನ್ನಮತಗಳನ್ನು ಮರೆತು ಒಂದಾಗಿದ್ದಾರೆ. ಈ ನಡುವೆ ಹಿರಿಯ ನಾಯಕ, ಗೃಹ ಸಚಿವ ಪರಮೇಶ್ವರ (G Parameshwara) ಅವರು, ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಾಂಬ್‌ ಹಾಕಿದ್ದಾರೆ. ಕೋಲಾರದ ಹಿರಿಯ ನಾಯಕ ರಮೇಶ್‌ ಕುಮಾರ್‌ (Ramesh Kumar) ಅವರು ಕೂಡ ತಮ್ಮ ದಾಳ ಉರುಳಿಸಲು ಮುಂದಾಗಿದ್ದಾರೆ.

ರಾಜಕೀಯ ವರ್ಚಸ್ಸಿಗಾಗಿ ನನಗೆ ನೀನು, ನಿನಗೆ ನಾನು ಎಂಬ ತತ್ವ ಉಪಯೋಗಿಸಿರುವ ಸಿಎಂ ಹಾಗೂ ಡಿಸಿಎಂ, ತಮ್ಮ ಆಪ್ತರಿಗೆ ಟಿಕೆಟ್‌ ಕೊಡಿಸುವುದು ಬಹುತೇಕ ಖಚಿತವಾಗಿದೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದಾಗಿದ್ದು, ಹಿರಿಯ ನಾಯಕರ ಅಭಿಪ್ರಾಯವನ್ನು ತೆಗೆದುಕೊಳ್ಳದೇ ದೆಹಲಿಗೆ ದೌಡಾಯಿಸಿದ್ದಾರೆ. ಎರಡು ಪ್ರತ್ಯೇಕ ಪಟ್ಟಿ ಹಿಡಿದು ಹೊರಟಿರುವ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಭೇಟಿ ಮಾಡಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಲಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಗೋವಿಂದರಾಜುಗೆ ಟಿಕೆಟ್ ಕನ್ಫರ್ಮ್ ಎಂದು ಮೂಲಗಳು ತಿಳಿಸಿವೆ. ಈ ಉಭಯರ ಪರವಾಗಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಪುತ್ರ ಯತೀಂದ್ರ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದರು. ತ್ಯಾಗ ಮಾಡಿದ ಮಗನಿಗೆ ಪರಿಷತ್ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಟೊಂಕ ಕಟ್ಟಿದ್ದಾರೆ. ಇತ್ತ ಗೋವಿಂದರಾಜು ಪರವಾಗಿಯೂ ಸಿಎಂ‌ ಬ್ಯಾಟಿಂಗ್ ಮಾಡಿದ್ದಾರೆ.

ಡಿಕೆಶಿ ಹೇಳಿರುವ ಹೆಸರಿಗೂ ಸಿಎಂ ಎಸ್ ಎಂದಿದ್ದಾರೆ ಎನ್ನುತ್ತಿವೆ ಮೂಲಗಳು. ವಿನಯ್ ಕಾರ್ತಿಕ್ ಹಾಗೂ ಮುಳುಗುಂದ್ ಪರ ಡಿಕೆಶಿ ನಿಂತಿದ್ದಾರೆ ಎನ್ನುತ್ತಿವೆ ದೆಹಲಿಯ ಮೂಲಗಳು. ಹೀಗಾಗಿ ಈ ಬಾರಿ ಪರಿಷತ್ ಅಭ್ಯರ್ಥಿ ಆಯ್ಕೆಯಲ್ಲಿ ಸಿಎಂ, ಡಿಸಿಎಂ ಇಬ್ಬರ ಕೈ ಮೇಲುಗೈ ಆಗೋದರಲ್ಲಿ ಯಾವುದೇ ಅನುಮಾನವಿಲ್ಲ.

ಇದರಿಂದ ಕಾಂಗ್ರೆಸ್ ಪಕ್ಷದ ಹಿರಿಯ ಹುದ್ದರಿಗಳಲ್ಲಿ ಅಸಮಾಧಾನ ಮೂಡಿದೆ. ದೆಹಲಿಯಲ್ಲಿ ಚರ್ಚೆಗೂ ಮುನ್ನವೇ ಕೈ ಪಾಳಯದಲ್ಲಿನ ಹಿರಿಯ ನಾಯಕರ ಅಸಮಾಧಾನ ಮುಗಿಲು ಮುಟ್ಟಿದ್ದು, ಪ್ರತಿ ಬಾರಿಯೂ ಹಿರಿಯ ನಾಯಕರ ಕಡೆಗಣಿನೆಯಾಗುತ್ತಿದೆ ಎಂದು ಕೆಲವರು ಬಹಿರಂಗ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು. ಈ ಬಾರಿಯೂ ಸಿಎಂ, ಡಿಸಿಎಂ ತಮ್ಮ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವುದು ಪಕ್ಕಾ ಆಗಿದ್ದು, ಇವರಿಬ್ಬರ ನಿರಂಕುಶ ಓಟಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಬ್ರೇಕ್ ಹಾಕುತ್ತಾರಾ ನೋಡಬೇಕಿದೆ.

ಇತ್ತ ಕೊನೆಯ ಕ್ಷಣದಲ್ಲಿ ಪರಿಷತ್ ಸ್ಪರ್ಧೆಗೆ ರಮೇಶ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ಸಿಗುವ ಏಳು ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು, ಏಳು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ದೆಹಲಿಗೆ ಹೋಗುವ ಮುನ್ನವೇ ರಮೇಶ್ ಕುಮಾರ್ ಅವರು ಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಜತೆ ಹೋಗಿ ಲಾಬಿ ಮಾಡಿರುವ ರಮೇಶ್‌ ಕುಮಾರ್‌, ಪರಿಷತ್ ಸ್ಥಾನ ತಮಗೆ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

ನನ್ನ ಲಿಸ್ಟ್‌ನಲ್ಲಿ ನೀನು ಇದ್ದೀಯಾ. ಡಿಕೆ ಶಿವಕುಮಾರ್ ಬಳಿ ಹೋಗು. ಅವರ ಪಟ್ಟಿಯಲ್ಲಿ ಹೆಸರು ಬರುವ ರೀತಿ ಮಾಡು ಎಂದು ಸಿದ್ದರಾಮಯ್ಯ ಓಲೈಸಿ ಕಳಿಸಿದ್ದಾರೆ. ಹೀಗಾಗಿ ಡಿಕೆಶಿ ಮನೆಗೂ ತೆರಳಿದ ರಮೇಶ್ ಕುಮಾರ್ ಆಂಡ್ ಟೀಮ್, ಪರಿಷತ್ ಸ್ಥಾನ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಆಕಾಂಕ್ಷಿಗಳ ಸಂಖ್ಯೆ ದುಪ್ಪಟ್ಟು ಇದೆ. ಆದರೂ ನಿಮ್ಮ ಬಗ್ಗೆ ಹೈಕಮಾಂಡ್ ಜತೆ ಮಾತನಾಡ್ತೀವಿ ಎಂದು ಹೇಳಿ ಡಿಕೆಶಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ದೆಹಲಿಯ ಕಾಂಗ್ರೆಸ್ ಬೆಳವಣಿಗೆಗಳ ಮೇಲೆ ರಮೇಶ್ ಕುಮಾರ್ ಕಣ್ಣಿಟ್ಟಿದ್ದಾರೆ. ಅತ್ತ ಕೆ.ಎಚ್‌ ಮುನಿಯಪ್ಪ ಬಣ ರಮೇಶ್‌ ಕುಮಾರರ ಆಕಾಂಕ್ಷೆಗೆ ಅಡ್ಡಗಾಲಾಗಿದೆ. ಈ ವಿರೋಧದ ನಡುವೆಯೂ ರಮೇಶ್ ಕುಮಾರ್‌ಗೆ ಸ್ಥಾನ ಒಲಿಯಲಿದೆಯೇ ನೋಡಬೇಕಿದೆ.

ಇದನ್ನೂ ಓದಿ: MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Continue Reading

ಪ್ರಮುಖ ಸುದ್ದಿ

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Bomb Threat: ಬೆಂಗಳೂರು ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

VISTARANEWS.COM


on

Bomb Threat
Koo

ದೇವನಹಳ್ಳಿ: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ (Bomb Threat) ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅನಾಮಿಕ ವ್ಯಕ್ತಿಯೊಬ್ಬ ಏರ್‌ಪೋರ್ಟ್‌ನ ಬಾತ್ ರೂಮ್‌ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ತಕ್ಷಣ ಶ್ವಾನದಳ, ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಸಂದೇಶ ಅಂತ ಗೊತ್ತಾಗಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚೆಗೆ ಪದೇಪದೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿರುವುದು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ | Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Prajwal Revanna Case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

Continue Reading

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Continue Reading
Advertisement
Karan Bhushan Singh
ದೇಶ4 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ6 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ13 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್19 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ24 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ26 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ55 mins ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್1 hour ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ2 hours ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

panjurli daiva sharat shetty murder
ದಕ್ಷಿಣ ಕನ್ನಡ2 hours ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌