Dooradarshana | ʼದೂರದರ್ಶನʼದಲ್ಲಿ ಉಗ್ರಂ ಮಂಜು ಹೊಸ ಅವತಾರ - Vistara News

ಸಿನಿಮಾ

Dooradarshana | ʼದೂರದರ್ಶನʼದಲ್ಲಿ ಉಗ್ರಂ ಮಂಜು ಹೊಸ ಅವತಾರ

ಪೃಥ್ವಿ ಅಂಬಾರ್‌ (Pruthvi Ambaar) ನಟನೆಯ ದೂರದರ್ಶನ ಸಿನಿಮಾದಲ್ಲಿ ಉಗ್ರಂ ಸಿನಿಮಾ ಖ್ಯಾತಿಯ ಮಂಜು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Pruthvi Ambaar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೃಥ್ವಿ ಅಂಬಾರ್‌ (Dooradarshana) ನಟನೆಯ ದೂರದರ್ಶನ ಸಿನಿಮಾ ಟೈಟಲ್‌ನಿಂದ ಮಾತ್ರವಲ್ಲದೆ, ಪೋಸ್ಟರ್‌ ಹಾಗೂ ಟೀಸರ್‌ನಿಂದಲೇ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಈಗ ದೂರದರ್ಶನದ ಇನ್ನೊಂದು ಕ್ಯಾರೆಕ್ಟರ್‌ ಅನ್ನು ಪರಿಚಯಿಸಲಾಗಿದೆ. ರೌಡಿಸಂ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಗ್ರಂ ಮಂಜು ಇಲ್ಲಿ ವಿಶೇಷ ಪಾತ್ರದೊಂದಿಗೆ ತೆರೆಯತ್ತ ದಾವಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಮನುಷ್ಯ ಎಂದ ಮೇಲೆ ವೈಫಲ್ಯಗಳು ಇದ್ದೇ ಇರುತ್ತದೆ. ಹಾಗೇ ಒಂದು ಗುರಿಯೂ ಇರುತ್ತದೆ. ಇವುಗಳನ್ನು ಎಷ್ಟೇ ಅಡೆತಡೆ ಇದ್ದರೂ ಮೆಟ್ಟಿ ನಿಲ್ಲುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ. ಇಲ್ಲಿ ಮಂಜು ಕಾರ್ಯಕಾರಿ ನಿರ್ಮಾಪಕ, ಕಲಾ ವಿನ್ಯಾಸಕಾರರಾಗಿಯೂ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ.

ಪೃಥ್ವಿ ಅಂಬಾರ್‌ಗೆ ಅಯಾನಾ ಜೋಡಿಯಾಗಿದ್ದಾರೆ. ಮೈತ್ರಿ ಎಂಬ ಪಾತ್ರದಲ್ಲಿ ನಟಿ ಅಯಾನಾ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಹರಿಣಿ, ದೀಪಕ್ ರೈ ಪಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ.

ಇದನ್ನೂ ಓದಿ | Pruthvi Ambaar | ದೂರದರ್ಶನದಲ್ಲಿ ಪೃಥ್ವಿ ಅಂಬಾರ್‌ ಜತೆಯಾದ ನಟಿ ಅಯನಾ

Pruthvi Ambaar
ಉಗ್ರಂ ಮಂಜು

ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ “ದೂರದರ್ಶನ” ಚಿತ್ರ ಈಗಷ್ಟೇ ಡಬ್ಬಿಂಗ್ ಮುಗಿಸಿ ಶೀಘ್ರದಲ್ಲಿ ತೆರೆಗೆ ತರಲು ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಸಿನಿಮಾವನ್ನು ವಿಎಸ್ ಮೀಡಿಯಾ ಎಂಟರ್‌ಪ್ರೈಸಸ್ ಬ್ಯಾನರ್ ಅಡಿ ರಾಜೇಶ್ ಭಟ್ ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ.

ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಒಂದು ಚಿಕ್ಕ ಊರೊಳಗೆ ಟಿವಿ ಬಂದ ಮೇಲೆ ಹೇಗೆಲ್ಲ ಪ್ರಭಾವ ಬೀರುತ್ತದೆ. ಅಂದಿನ ಕಾಲಘಟ್ಟದ ಹಲವಾರು ವಿದ್ಯಮಾನಗಳು ಈ ಚಿತ್ರದಲ್ಲಿವೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.

ಪೃಥ್ವಿ ಅಂಬಾರ್‌ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಪೃಥ್ವಿ ಅಂಬಾರ್‌ ನಟನೆಯ ಶುಗರ್‌ಲೆಸ್‌ ಸೆ.23ಕ್ಕೆ ವೂಟ್‌ನಲ್ಲಿ ರಿಲೀಸ್‌ ಆಗುತ್ತಿದೆ. ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸುತ್ತಿರುವ ಸಿನಿಮಾಗೆ ಭುವನಂ ಗಗನಂ ಎಂಬ ಟೈಟಲ್ ಇಡಲಾಗಿದ್ದು, ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಲು ಸಜ್ಜಾಗಿದೆ.

ಇದನ್ನೂ ಓದಿ | ಎಲ್ಲರೂ ಒಟ್ಟಾಗಿ ಕುಳಿತು ದೂರದರ್ಶನದಲ್ಲಿ ಸ್ವರಾಜ್ ವಿಶೇಷ ಸರಣಿ ವೀಕ್ಷಿಸಿದ ಪ್ರಧಾನಿ ಮೋದಿ, ಕೇಂದ್ರ ಸಚಿವರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

ಈಗಾಗಲೇ ಆರಂಭವಾಗಿರುವ ಪ್ರತಿಷ್ಠಿತ ಕಾನೆ ಫಿಲ್ಮ್ ಫೆಸ್ಟಿವಲ್‌ನಲ್ಲಿ ಹಾಲಿವುಡ್‌-ಬಾಲಿವುಡ್‌ ಸೇರಿದಂತೆ ನಾನಾ ಕ್ಷೇತ್ರದ ಫ್ಯಾಷನ್‌ ಐಕಾನ್‌ಗಳು, ರೆಡ್‌ಕಾರ್ಪೆಟ್‌ನಲ್ಲಿ ತಮ್ಮತಮ್ಮ ಫ್ಯಾಷನ್‌ವೇರ್ಸ್ ಅನಾವರಣಗೊಳಿದರು. ಮೊದಲ ದಿನವೇ ಯಾರ್ಯಾರು ಹೇಗೆಲ್ಲ ಕಾಣಿಸಿಕೊಂಡರು ಎಂಬುದರ ಕುರಿತಂತೆ ಫ್ಯಾಷನ್‌ ವಿಮರ್ಶಕರು ರಿವ್ಯೂ ನೀಡಿದ್ದು, ಇಲ್ಲಿದೆ ಡಿಟೇಲ್ಸ್.‌

VISTARANEWS.COM


on

Cannes 2024 Fashion celebrities trend
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮತ್ತೊಮ್ಮೆ ಸೆಲೆಬ್ರೆಟಿಗಳ (Cannes 2024 Fashion) ಫ್ಯಾಷನ್‌ ಟ್ರೆಂಡ್‌ಗೆ ಸಾಕ್ಷಿಯಾಗುತ್ತಿದೆ. ಹೌದು, ಈಗಾಗಲೇ ಆರಂಭವಾಗಿರುವ ವಿಶ್ವದ ಪ್ರತಿಷ್ಠಿತ 77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಹಾಲಿವುಡ್‌-ಬಾಲಿವುಡ್‌ ಸೇರಿದಂತೆ ನಾನಾ ಕ್ಷೇತ್ರದ ಫ್ಯಾಷನ್‌ ಐಕಾನ್‌ಗಳು ಪಾಲ್ಗೊಂಡು ತಮ್ಮದೇ ಆದ ಫ್ಯಾಷನ್‌ವೇರ್ಸ್ ಅನಾವರಣಗೊಳಿಸತೊಡಗಿದ್ದಾರೆ.

ಫ್ಯಾಷನ್‌ ವಿಮರ್ಶಕರ ರಿವ್ಯೂ
” ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಎಂದಿನಂತೆ ನಾನಾ ಧಿರಿಸು ಹಾಗೂ ಗೌನ್‌ಗಳ ಅನಾವರಣದಿಂದಲೇ ಆರಂಭವಾಗಿದೆ. ಸ್ಪರ್ಧೆಗಿಳಿದವರಂತೆ ತಾರೆಯರು ಕೂಡ ಊಹೆಗೂ ಮೀರಿದ ಡಿಸೈನರ್‌ವೇರ್‌ಗಳಲ್ಲಿ ಕಾಣಿಸತೊಡಗಿದ್ದಾರೆ. ಹಾಲಿವುಡ್‌ ತಾರೆಯರು ನಾನ್‌ ವೇರಬಲ್‌ ಡಿಸೈನರ್‌ವೇರ್‌ಗಳಿಗೆ ಆದ್ಯತೆ ನೀಡಿದರೇ, ನಮ್ಮ ರಾಷ್ಟ್ರದ ಸೆಲೆಬ್ರೆಟಿಗಳು ವೇರಬಲ್‌ ಪ್ಲಸ್‌ ನಾನ್‌ ವೇರಬಲ್‌ ಡಿಸೈನರ್‌ ಗೌನ್‌ಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ. ಇನ್ನು ಸಾಕಷ್ಟು ದಿನಗಳು ಈ ಫೆಸ್ಟಿವಲ್‌ ನಡೆಯುವುದರಿಂದ ಈಗಲೇ ಏನೂ ಹೇಳಲಾಗದು” ಎನ್ನುತ್ತಾರೆ ಫ್ಯಾಷನ್‌ ದಿಗ್ಗಜರಾದ ಸೆಲೆಬ್ರೆಟಿ ಡಿಸೈನರ್‌ ನೀರಜ್‌ ವರ್ಮಾ.
” ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಬಾಲಿವುಡ್‌ ನಟಿ ಐಶ್ವರ್ಯಾ ರೈ ಪ್ರತಿಬಾರಿಯೂ ವಿನೂತನ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿಯೂ ನಿರೀಕ್ಷೆ ಇದೆ. ಇನ್ನು ಕಿಯಾರಾ, ಶೋಭಿತಾ, ಜಾಕ್ವೇಲಿನ್‌ ಹಾಗೂ ಅದಿತಿ ರಾವ್‌ ಹೈದರಿ ಕೂಡ ಮುಂಬರುವ ದಿನಗಳಲ್ಲಿ ಭಾಗವಹಿಸಲಿದ್ದು, ಇವರ ಡಿಸೈನರ್‌ವೇರ್‌ಗಳ ಬಗ್ಗೆಯೂ ಸಾಕಷ್ಟು ಕುತೂಹಲವಿದೆ” ಎಂದಿದ್ದಾರೆ ಫ್ಯಾಷನ್‌ ವಿಮರ್ಶಕರಾದ ರೋಹನ್‌ ರಾಜ್‌.

ಇದನ್ನೂ ಓದಿ: Sandalwood Actress At Cannes 2023: ಮತ್ತೊಮ್ಮೆ ಕಾನ್‌ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ

ಟಿವಿ ತಾರೆ ದೀಪ್ತಿಯ ಆಕರ್ಷಕ ಲಾಂಗೆಸ್ಟ್‌ ಗೌನ್‌

ಆರಂಭದಲ್ಲೆ, ಟಿವಿ ತಾರೆ ದೀಪ್ತಿ ಸದ್ವಾನಿಯ ಹಳದಿ ಕಲರ್‌ ರಫಲ್‌ ನೆಟ್ಟೆಡ್‌ ಗೌನ್‌ ಕಾನೆ ಫೆಸ್ಟಿವಲ್‌ನ ಆರಂಭದ ದಿನದಲ್ಲೆ ಎಲ್ಲರನ್ನು ಸೆಳೆಯಿತು. ಆಂಚಲ್‌ ಕಾಚರ್‌ ಡಿಸೈನ್‌ನ ಈ ಗೌನ್‌ ಮೊದಲನೆ ದಿನದ ಅತಿ ಉದ್ದನೆಯ ಗೌನ್‌ ಎಂದು ರೆಕಾರ್ಡ್‌ ಮಾಡಿತು.

ಶಾರ್ಕ್‌ ಟ್ಯಾಂಕ್‌ ಖ್ಯಾತಿಯ ನಮಿತಾ ತಾಪರ್‌ ಲುಕ್‌:

ಉದ್ಯಮಿ ಹಾಗೂ ಶಾರ್ಕ್‌ ಟ್ಯಾಂಕ್‌ ಖ್ಯಾತಿಯ ನಮಿತಾ ಟಾಪರ್‌ರ ಪಾಸ್ಟೆಲ್‌ ಶೇಡ್‌ನ ಆಫ್‌ ಶೋಲ್ಡರ್‌, ಸ್ಲಿಟ್‌ ಇರುವ ಬಲೂನ್‌ ಸ್ಲೀವ್‌ನ ಗೌನ್‌ ಸೋಷಿಯಲ್‌ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯಿತು.

ಡಿಸೈನರ್‌ವೇರ್‌ ಕಾಪಿ ಮಾಡಿದ ಊರ್ವಶಿ

ಪಿಂಕ್‌ ಗೌನ್‌ನಲ್ಲಿ ಊರ್ವಶಿ ಚಂದನಾಗಿ ಕಾಣಿಸಿದರೂ, ದೀಪಿಕಾ ಪಡುಕೋಣೆಯ ಗೌನ್‌ ಕಾಪಿ ಮಾಡಿದ ಬಿರುದು ದೊರೆಯಿತು.

ಹಾಲಿವುಡ್‌ ತಾರೆಯರ ಬೆಸ್ಟ್‌ ಲುಕ್ಸ್‌

ನಟಿ ನೌಮಿ ಕಾಂಪ್ಬೆಲ್‌ ಬ್ಲಾಕ್‌ ಶೇಡ್‌ ಆರ್ಕಿವ್‌ ಚಾನೆಲ್‌ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡರೇ, ಅನ್ಯಾ ಟಾಯ್ಲರ್‌ ಡಿಯೋರ್‌ ಶೋಲ್ಡರ್‌ಲೆಸ್‌ ಕ್ರೀಮಿಶ್‌ ಸಿಂಡ್ರೆಲ್‌ ಗೌನ್‌ನಲ್ಲಿ ಗಮನ ಸೆಳೆದರು. ಕ್ರಿಸ್‌ ಹೆಮ್ಸ್ವರ್ತ್‌ – ಎಲ್ಸಾ ಕಪಲ್‌ ಕಾಂಟ್ರಸ್ಟ್‌ ಬ್ಲಾಕ್‌ & ವೈಟ್‌ ಔಟ್‌ಫಿಟ್‌ನಲ್ಲಿ ರೆಡ್‌ ಕಾರ್ಪೆಟ್‌ ತುಳಿದರು. ಲಾ ರೋಚ್‌ ಬ್ಲಾಕ್‌ ಶೈನಿಂಗ್‌ ಕೋಟ್‌ ಶರ್ಟ್-ಪ್ಯಾಂಟ್‌ನಲ್ಲಿ, ಸಬ್ರು ಡಬ್ಬಲ್‌ ಶೇಡ್‌ ವನ್‌ ಶೋಲ್ಡರ್‌ ಗೌನ್‌ನಲ್ಲಿ, ಗ್ರೇಟಾ ರೆಡ್‌ ಫಿಶ್‌ಟೇಲ್‌ ಗೌನ್‌ನಲ್ಲಿ, ಇವಾ ಬಾಲ್ಮೈಮ್‌ ಶಿಮ್ಮರ್‌ ಗೌನ್‌ನಲ್ಲಿ ಫ್ಯಾಷನ್‌ ಪ್ರಿಯರನ್ನು ಸೆಳೆದರು. ಇವರೊಂದಿಗೆ ಸಿನಿಮಾ ಪ್ರೀಮಿಯರ್‌ ಟೀಮ್‌ನವರು ನಾನಾ ಶೈಲಿಯ ಡಿಸೈನರ್‌ವೇರ್ಗಳಲ್ಲಿ ಕಾಣಿಸಿಕೊಂಡರು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ಸಿನಿಮಾ

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Chandu Champion: ಚಂದು ಚಾಂಪಿಯನ್ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ಚಂದು ಚಾಂಪಿಯನ್​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Chandu Champion Injured Kartik Aaryan looks intense
Koo

ಬೆಂಗಳೂರು: ಕಾರ್ತಿಕ್ ಆರ್ಯನ್ ( Kartik Aaryan) ಅವರು ತಮ್ಮ ಮುಂಬರುವ ಚಿತ್ರ ‘ಚಂದು ಚಾಂಪಿಯನ್’ ನ (Chandu Champion) ಎರಡನೇ ಪೋಸ್ಟರ್‌ ಬಿಡುಗಡೆಗೊಳಿಸಿದ್ದಾರೆ. ಬಾಕ್ಸಿಂಗ್ ರಿಂಗ್‌ನಲ್ಲಿ ಗಾಯಗೊಂಡ ಮುಖದೊಂದಿಗೆ ಕಂಡಿದ್ದಾರೆ. ಮೊದಲ ಪೋಸ್ಟರ್ ಅನ್ನು ಮೇ 15ರಂದು ಅನಾವರಣಗೊಳಿಸಲಾಯಿತು. ಕಬೀರ್ ಖಾನ್ ನಿರ್ದೇಶನದ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಕಾರ್ತಿಕ್​​ ಗಮನಾರ್ಹ ರೂಪಾಂತರಕ್ಕೆ ಒಳಗಾಗಿರುವುದು ಕಂಡಿದೆ. ಕಠಿಣ ತಯಾರಿ ನಡೆಸಿರುವುದಾಗಿ ಕಂಡು ಬರುತ್ತಿದೆ.

ʼಚಂದು ಚಾಂಪಿಯನ್ʼ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ʼಚಂದು ಚಾಂಪಿಯನ್ʼ​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಬ್ರೇಕಪ್‌ ಕ್ಲ್ಯಾರಿಟಿ ಬೆನ್ನಲ್ಲೇ ಸಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕಾರ್ತಿಕ್ ಆರ್ಯನ್!

ಕಾರ್ತಿಕ್ ಆರ್ಯನ್ ಅವರ ಈ ಕಠಿಣ ಶ್ರಮಕ್ಕೆ ನಿರ್ದೇಶಕ ಕಬೀರ್ ಖಾನ್ ಟಿಪ್ಪಣಿಯನ್ನು ಬರೆದಿದ್ದಾರೆ. ʻʻಚಂದು ಚಾಂಪಿಯನ್‌ನ ಕಥೆಯು ನಂಬಲಾಗದಷ್ಟು ಸ್ಪೂರ್ತಿದಾಯಕ ನೈಜ ಕಥೆಯಾಗಿದೆ. ಆದರೆ ಈ ಚಾಂಪಿಯನ್ ಆಗಲು ಕಾರ್ತಿಕ್ ಮಾಡಿದ ಪ್ರಯಾಣವು ಸ್ಫೂರ್ತಿದಾಯಕವಾಗಿದೆ. ಶೇ. 39ರಷ್ಟು ಬಾಡಿ ಫ್ಯಾಟ್‌ ಕರಗಿಸಿದರುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಕಬೀರ್ ಖಾನ್ ಆ್ಯಕ್ಷನ್​ ಕಟ್​ ಹೇಳಿರುವ ʻಈ ಚಂದು ಚಾಂಪಿಯನ್ʼ, ಓರ್ವ ಕ್ರೀಡಾಪಟುವಿನ ನೈಜ ಕಥೆಯನ್ನು ಬಿಚ್ಚಿಡಲಿದೆ. ಈ ಪಾತ್ರಕ್ಕಾಗಿ ಕಾರ್ತಿಕ್ ಅವರ ಪ್ರಯಾಣ ಗಮನಾರ್ಹವಾದದ್ದು. ಜೂನ್ 14 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ.

Continue Reading

ಕಿರುತೆರೆ

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Amruthadhaare Serial: ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. . ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

VISTARANEWS.COM


on

Amruthadhaare Serial bhoomika in birthday chaya singh
Koo

ಇಂದು (ಮೇ 16) ಅಮೃತಧಾರೆ ಧಾರಾವಾಹಿ (Amruthadhaare Serial) ಖ್ಯಾತಿಯ ನಟಿ ಛಾಯಾ ಸಿಂಗ್ (Chaya Singh)​ ಅವರಿಗೆ ಜನುಮದಿನದ ಸಂಭ್ರಮ. ಧಾರಾವಾಹಿಯಿಂದ ಜನರಿಗೆ ಭೂಮಿಕಾ ಎಂದೇ ಪರಿಚಯ.

ನಟಿಯ ವಿಶೇಷ ದಿನದಂದು ಜೀ ಕನ್ನಡ ವಾಹಿನಿ ಛಾಯಾ ಸಿಂಗ್​ ಕುರಿತು ವಿಡಿಯೊ ಒಂದನ್ನು ರಿಲೀಸ್​ ಮಾಡಿದೆ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಹೇಗೆ ಕೋಟ್ಯಧಿಪತಿ ಉದ್ಯಮಿ ಜತೆ ಜೀವನ ನಡೆಸುತ್ತಾಳೆ ಎಂಬುದೇ ಈ ಧಾರಾವಾಹಿಯ ಒನ್‌ಲೈನ್‌ ಸ್ಟೋರಿ.

ಧಾರಾವಾಹಿಯಲ್ಲಿ ಪತಿ ಗೌತಮ್‌ ಹೆಂಡತಿಯ ಹುಟ್ಟುಹಬ್ಬಕ್ಕೆಂದು ಚಿಕ್ಕಮಗಳೂರಿನ ಎಸ್ಟೇಟ್​ ಬರೆದು ಕೊಟ್ಟಿದ್ದಾನೆ. ಇದೀಗ ರಿಯಲ್‌ ಗಂಡ ಪತ್ನಿಗೆ ಏನು ಗಿಫ್ಟ್‌ ಕೊಟ್ಟಿದ್ದಾರೆ? ಎಂದು ನೆಟ್ಟಿಗರು ಪ್ರಶ್ನೆ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಛಾಯಾ ಅವರ ರಿಯಲ್​ ಲೈಫ್​ ಪತಿಯ ಹೆಸರು ಕೃಷ್ಣ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಪತಿಯ ಜತೆ ಆಗಾಗ ಫೋಟೋ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಕೃಷ್ಣ ಮತ್ತು ಛಾಯಾ ಮದುವೆಯಾಗಿ 11 ವರ್ಷಗಳೇ ಕಳೆದಿವೆ. ಛಾಯಾ ಅವರಿಗೆ ಕೃಷ್ಣ ಅವರ ಪರಿಚಯವಾದದ್ದು, ತಮಿಳು ಚಿತ್ರದಲ್ಲಿ ನಟಿಸುವ ಸಮಯದಲ್ಲಿ.
ಕನ್ನಡ ಸಿನಿರಂಗದಲ್ಲಿಯೂ ಸಕ್ರಿಯರಾಗಿರುವ ಛಾಯಾ, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನುಡಿ’ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. 
Continue Reading

ಕಿರುತೆರೆ

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

Bhavani Singh: ಪಂಕಜ ಶಿವಣ್ಣ-ಭವಾನಿಸಿಂಗ್ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಬೇಬಿ ಬಂಪ್‌ ಫೋಟೊ ಶೂಟ್‌ ಮಾಡಿಸಿಕೊಂಡಿದ್ದಾರೆ ಪಂಕಜ್‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿಗೆ ವಿಶ್‌ ಮಾಡುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Bhavani Singh pankaj shivanna couple expecting-their first child
Koo

‘ಚರಣದಾಸಿ’, ‘ಸುಬ್ಬಲಕ್ಷ್ಮಿ ಸಂಸಾರ’,’ರಕ್ಷಾ ಬಂಧನ’ ಖ್ಯಾತಿಯ ಕಿರುತೆರೆ ನಟ ಭವಾನಿ ಸಿಂಗ್ (Bhavani Singh) ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪಂಕಜ ಶಿವಣ್ಣ ಕೂಡ ನಟಿಯಾಗಿದ್ದು, ಇದೀಗ ಜೋಡಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದೆ.

ಭವಾನಿ ಸಿಂಗ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ಸಂಸಾರ ದೊಡ್ಡದಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

‘ಚರಣದಾಸಿ’ ಧಾರಾವಾಹಿ ಮೂಲಕ ನಟನೆಗೆ ಕಾಲಿಟ್ಟರು ನಟ ಭವಾನಿ ಸಿಂಗ್. ಪಂಕಜ ಶಿವಣ್ಣ ಅವರು ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಮೂಲಕ ಭವಾನಿ ಸಿಂಗ್ ಅವರಿಗೆ ಪರಿಚಯವಾದರು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

2019ರಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಐದು ವರ್ಷಗಳ ನಂತರ ಈ ಜೋಡಿ ಸಿಹಿಸುದ್ದಿಯನ್ನು ಹಂಚಿಕೊಂಡಿದೆ.
Continue Reading
Advertisement
BMW X3 xDrive20d
ಪ್ರಮುಖ ಸುದ್ದಿ11 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ13 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್18 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ22 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್26 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ28 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ37 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ42 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್51 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ57 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಟ್ರೆಂಡಿಂಗ್‌