Urfi Javed | ʻಭಾರತದಿಂದ ಹೊರಗಟ್ಟಿʼ ಅಂದ್ರು ನೆಟ್ಟಿಗರು: ಬೇಕಾಬಿಟ್ಟಿ ಡ್ರೆಸ್‌ ಹಾಕುವ ಉರ್ಫಿಗೆ ವಾರ್ನಿಂಗ್‌! - Vistara News

ಬಾಲಿವುಡ್

Urfi Javed | ʻಭಾರತದಿಂದ ಹೊರಗಟ್ಟಿʼ ಅಂದ್ರು ನೆಟ್ಟಿಗರು: ಬೇಕಾಬಿಟ್ಟಿ ಡ್ರೆಸ್‌ ಹಾಕುವ ಉರ್ಫಿಗೆ ವಾರ್ನಿಂಗ್‌!

ಉರ್ಫಿ ಜಾವೇದ್‌ ಉಡುಪಿಗೆ (Urfi Javed )ಟ್ರೋಲಿಗರು ಮನಬಂದಂತೆ ಕಮೆಂಟ್‌ ಮಾಡಿದ್ದಾರೆ. ʻಭಾರತದಿಂದ ಹೊರಗಟ್ಟಿʼಎಂದು ಕಮೆಂಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Urfi Javed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಹಾಗೂ ಯೂತ್‌ ಐಕಾನ್‌ ಎಂತಲೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್‌ (Urfi Javed) ತಮ್ಮ ತುಂಡು ಬಟ್ಟೆಗಳಿಂದ ಸುದ್ದಿಯಲ್ಲಿರುತ್ತಾರೆ. ಈಗಾಗಲೇ ಉರ್ಫಿ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ತ್ವಚೆಯ ಬಣ್ಣದ ಟಾಪ್ ಧರಿಸಿದ್ದು ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿದ್ದಾರೆ. ಸೆಲೆಬ್ರಿಟಿ ಛಾಯಾಗ್ರಾಹಕ ವೈರಲ್ ಭಯಾನಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಉರ್ಫಿ ಅವರ ಹೊಸ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ.

ಇದೀಗ ಈ ವಿಡಿಯೊಗೆ ನೆಟ್ಟಿಗರು ಮನಬಂದಂತೆ ಕಮೆಂಟ್‌ ಮಾಡುತ್ತಿದ್ದಾರೆ. ಒಬ್ಬರ ಕಮೆಂಟ್‌ನಲ್ಲಿ ಉರ್ಫಿಯನ್ನು ʻಭಾರತದಿಂದ ಹೊರಗಟ್ಟಿʼ ಎಂದು ಹೇಳಿದರೆ, ಇನ್ನೊಬ್ಬರು ʻʻನಿಮ್ಮ ಮೇಲೆ ನಿಮಗೆ ಸ್ವಲ್ಪ ಗೌರವ ಉಳಿಸಿಕೊಳ್ಳಿʼʼ ಎಂದು ಮನಬಂದಂತೆ ಟ್ರೋಲಿಗರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ | Urfi Javed | ಮೊಬೈಲ್‌ಗಳಿಂದ ಮಾನ ಮುಚ್ಚಿಕೊಂಡ ಉರ್ಫಿ: ʻಲ್ಯಾಪ್‌ಟಾಪ್‌ ಇನ್ಮುಂದೆ ಸ್ಕರ್ಟ್‌ʼ ಅಂದ್ರು ನೆಟ್ಟಿಗರು!

ಬಿಗ್ ಬಾಸ್ OTTಯ ಮೊದಲ ಸೀಸನ್‌ಗೆ ಬಂದ ನಂತರ ಉರ್ಫಿ ಹೆಚ್ಚು ಗಮನ ಸೆಳೆದರು. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೇಷಭೂಷಣಗಳ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಅವರ ಇನ್‌ಸ್ಟಾದಲ್ಲಿ 3.8 ಮಿಲಿಯನ್‌ ಫಾಲೋವರ್ಸ್‌ ಹೊಂದಿದ್ದಾರೆ. ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ 92 ಸಾವಿರ ಅನುಯಾಯಿಗಳನ್ನು ಹೊಂದಿದ್ದಾರೆ.

ಇದೀಗ ಮತ್ತೆ ರಿಯಾಲಿಟಿ ಶೋ ಕಡೆ ಮುಖ ಮಾಡಿದ್ದಾರೆ. ಬಾಲಿವುಡ್‌ನ ʻಪಟಾಕಾʼ ಎಂದೇ ಹೆಸರುವಾಸಿಯಾಗಿರುವ ಉರ್ಫಿ ಜಾವೇದ್‌ ಸ್ಪರ್ಧಿಗಳಿಗೆ ಕಠಿಣ ಸ್ಪರ್ಧೆ ಹಾಗೂ ಪೈಪೋಟಿಯನ್ನು ನೀಡಲಿದ್ದಾರೆ. ರಿಯಾಲಿಟಿ ಶೋ ಸ್ಪ್ಲಿಟ್ಸ್‌ವಿಲ್ಲಾದಲ್ಲಿ X4ರಲ್ಲಿ (MTV Splitsvilla X4) ಉರ್ಫಿ ಭಾಗವಹಿಸಿದ್ದಾರೆ.

ಇದನ್ನೂ ಓದಿ | Urfi Javed | ರಿಯಾಲಿಟಿ ಶೋದತ್ತ ಮುಖ ಮಾಡಿದ ಉರ್ಫಿ ಜಾವೇದ್‌: ಟ್ರೋಲ್‌ ಆಗಿದ್ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Deepika Padukone: ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

VISTARANEWS.COM


on

Deepika Padukone Enjoy Lunch Date After Casting Their Vote
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ ಆಗುತ್ತಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಮತ ಚಲಾಯಿಸಿದ್ದಾರೆ. ಇದೀಗ ದೀಪಿಕಾ ಅವರ ಬೇಬಿ ಬಂಪ್‌ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗುತ್ತಿವೆ. ಈ ಮೂಲಕ ಜೋಡಿ ಬಾಡಿಗೆ ತಾಯ್ತನ ಆಶ್ರಯಿಸಿದ್ದಾರೆ ಎಂಬ ವದಂತಿಗೂ ತೆರೆ ಬಿದ್ದಿದೆ. ಲೂಸ್ ಶರ್ಟ್ ಧರಿಸಿದ್ದರೂ ಐದು ತಿಂಗಳ ಗರ್ಭಿಣಿಯಾಗಿರುವ ದೀಪಿಕಾಳ ಬೇಬಿ ಬಂಪ್ ಎದ್ದು ಕಾಣಿಸುತ್ತಿತ್ತು. ನೆಟ್ಟಿಗರು ದೀಪಿಕಾ ಹೊಟ್ಟೆಯಲ್ಲಿ ಗಂಡು ಮಗುವೇ ಇದೆ, ಈ ಜೋಡಿಗೆ ಗಂಡು ಮಗುವೇ ಆಗುವುದು ಎಂದು ಭವಿಷ್ಯ ನುಡಿಯುತ್ತಿದ್ದಾರೆ.

ವೈರಲ್‌ ಆದ ವಿಡಿಯೊದಲ್ಲಿ ದೀಪಿಕಾ ʻʻಬಿಳಿ ಶರ್ಟ್ ಮತ್ತು ಡೆನಿಮ್‌ನಲ್ಲಿ ಕಾಣಿಸಿಕೊಂಡರು. ರಣವೀರ್ ಹೆಂಡತಿಗೆ ಕಾರಿನಲ್ಲಿ ಕುಳಿತುಕೊಳ್ಳಲು ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ದೀಪಿಕಾ ಮತ್ತು ರಣವೀರ್ ಮತಗಟ್ಟೆಗೆ ತೆರಳುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ರಣವೀರ್ ಅವರು ದೀಪಿಕಾ ಅವರನ್ನು ಬೂತ್‌ಗೆ ಕರೆದೊಯ್ಯುವಾಗ ಕೈ ಹಿಡಿದು ಕರೆದುಕೊಂಡು ಹೋದರು. ದೀಪಿಕಾ ಇದೇ ಮೊದಲ ಬಾರಿಗೆ ತನ್ನ ಬೇಬಿ ಬಂಪ್ ತೋರಿಸಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼ ಎನ್ನಲಾಗಿತ್ತು.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಇದನ್ನೂ ಓದಿ: Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌!

ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದರು. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿತ್ತು.

Continue Reading

ಬಾಲಿವುಡ್

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Yami Gautam: ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೆ ಆದಿತ್ಯಾ ಧಾರ್ ಆಕ್ಷನ್ ಕಟ್ ಹೇಳಿದ್ದರು. ಚಿತ್ರದ ಮುಖ್ಯ ಪಾತ್ರದಲ್ಲಿ ಕೂಡ ಯಾಮಿ ಮಿಂಚಿದ್ದರು. ಕನ್ನಡದ ‘ಉಲ್ಲಾಸ ಉತ್ಸಾಹ’ ಆಕೆ ನಟಿಸಿದ ಮೊದಲ ಸಿನಿಮಾ. ಬಾಲಿವುಡ್‌ನಲ್ಲಿ ‘ವಿಕ್ಕಿ ಡೋನರ್’ ಚಿತ್ರದಲ್ಲಿ ಮೊದಲಿಗೆ ನಟಿಸಿದ್ದರು.

VISTARANEWS.COM


on

Yami Gautam welcome baby boy
Koo
ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷಯ ತೃತೀಯ ದಿನವೇ(ಮೇ 10) ಮಗುವಿಗೆ ಜನ್ಮ ನೀಡಿದ್ದು ಇದೀಗ ಆ ವಿಚಾರ ಬಹಿರಂಗಪಡಿಸಿದ್ದಾರೆ.

ʻʻಪೋಷಕರಾಗಿ ಈ ಸುಂದರ ಪ್ರಯಾಣವನ್ನು ನಾವು ಪ್ರಾರಂಭಿಸಿದಾಗ, ನಮ್ಮ ಮಗನಿಗಾಗಿ ಕಾಯುತ್ತಿರುವ ಉಜ್ವಲ ಭವಿಷ್ಯವನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತೇವೆ. ಅವನು ಸಾಧಿಸುವ ಪ್ರತಿ ಮೈಲುಗಲ್ಲು, ಅವರು ನಮ್ಮ ಇಡೀ ಕುಟುಂಬಕ್ಕೆ ಮತ್ತು ನಮ್ಮ ಪ್ರೀತಿಯ ರಾಷ್ಟ್ರಕ್ಕೆ ಹೆಮ್ಮೆಯ ದಾರಿದೀಪವಾಗಿ ಬೆಳೆಯುತ್ತಾನೆ ಎಂಬ ಭರವಸೆ ಮತ್ತು ನಂಬಿಕೆಯಿಂದ ನಾವಿದ್ದೇವೆʼʼ‌ ಎಂದು ಯಾಮಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗೇ ಮಗನ ಹೆಸರನ್ನು ರಿವೀಲ್‌ ಮಾಡಿದ್ದಾರೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

‘ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ.

Continue Reading

ಬಾಲಿವುಡ್

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Salman Khan: ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದನು. ಅರ್ಹಾನ್ ಖಾನ್ ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಕಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

VISTARANEWS.COM


on

Salman Khan Ultimate Sex Symbol Says Malaika Arora
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರ ಮಾಜಿ ಅತ್ತಿಗೆ ಮಲೈಕಾ ಅರೋರಾ (Malaika Arora) ಅವರು ಬಾಲಿವುಡ್‌ನ ಹಾಟೆಸ್ಟ್ ಸ್ಟಾರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸಂದರ್ಶನವೊಂದರಲ್ಲಿ ʻʻಅರ್ಬಾಜ್ ಖಾನ್ ನನ್ನ ಪಾಲಿಗೆ ಪರ್ಮನೆಂಟ್ ಗಂಡ. ಆದರೆ ಸಲ್ಮಾನ್ ಖಾನ್ ಬಾಲಿವುಡ್‌ನಲ್ಲಿ ಅಲ್ಟಿಮೇಟ್ ಸೆಕ್ಸ್ ಸಿಂಬಲ್ʼʼಎಂದು ಹೇಳಿಕೊಂಡಿದ್ದಾರೆ.

ಇದೀಗ ಮಲೈಕಾ ಅವರ ಹಳೆಯ ಸಂದರ್ಶನದ ವಿಡಿಯೊ ವೈರಲ್‌ ಆಗುತ್ತಿದೆ. ʻʻಭಾರತದ ಪ್ರಮುಖ ಸೆಕ್ಸ್‌ ಸಿಂಬಾಲ್‌ ಪುರುಷ ಯಾರು?ʼʼ ಎಂಬ ಪ್ರಶ್ನೆಗೆ ಉತ್ತರಿಸಿದ ಮಲೈಕಾ, “ನಾನು ನಿಸ್ಸಂದೇಹವಾಗಿ ಸಲ್ಮಾನ್ ಖಾನ್ ಎಂದು ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

“ನನಗೆ, ಅರ್ಬಾಜ್ ನನ್ನ ಪಾಲಿಗೆ ಶಾಶ್ವತ ಗಂಡಸು (Arbaaz is my eternal man). ಇಲ್ಲಿಯವರೆಗೆ, ನಾವು ನಿಶ್ಚಿತಾರ್ಥ ಅಷ್ಟೇ ಮಾಡಿಕೊಂಡಿದ್ದೇವೆ ಎಂದು ಅನ್ನಿಸುತ್ತದೆ. ನಾವು ಮದುವೆಯಾಗಿದ್ದೇವೆ. ಮಗುವನ್ನು ಹೊಂದಿದ್ದೇವೆ ಎಂದು ನನಗೆ ಈಗಲೂ ಅನಿಸುವುದಿಲ್ಲ. ಆದರೆ ಸಲ್ಮಾನ್ ಖಾನ್ ಭಾರತದ ಅಲ್ಟಿಮೇಟ್ ಸೆಕ್ಸ್ ಸಿಂಬಲ್ ವ್ಯಕ್ತಿ ಎಂದು ನಾನು ಭಾವಿಸುತ್ತೇನೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Malaika arora reveal male sex symbol in the country in old zoom tv interview
byu/Sea-Fix691 inBollyBlindsNGossip

ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದ್ದ. ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ತನಗಿಂತ ಕಿರಿಯ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

ನಟಿ ಮಲೈಕಾ ಅರೋರಾ (Malaika Arora) ಮತ್ತು ಅವರ ಮಾಜಿ ಪತಿ ಅರ್ಬಾಜ್ ಖಾನ್ ( Arbaaz Khan) ಅವರ ಮಗ ಅರ್ಹಾನ್ ಖಾನ್ ಅವರ ʻಪಾಡ್‌ಕಾಸ್ಟ್ ದಮ್ ಬಿರಿಯಾನಿʼಯ (‘Dumb Biryani’) ಎರಡನೇ ಸಂಚಿಕೆಯಲ್ಲಿ ನಟಿ ಈ ಹಿಂದೆ ಮಾಜಿ ಪತಿ ಅರ್ಬಾಜ್ ಖಾನ್‌ರಿಂದ ತನ್ನ ಮಗ ಯಾವ ಗುಣಗಳನ್ನು ಅನುವಂಶಿಕವಾಗಿ ಪಡೆದಿದ್ದಾನೆ ಎಂಬುದನ್ನು ಮಲೈಕಾ ಅರೋರಾ ಹೇಳಿದ್ದರು. ಮೊದಲಿಗೆ ಅರ್ಹಾನ್ ಮಲೈಕಾಗೆ ತಂದೆ ಅರ್ಬಾಜ್‌ ಅವರ ಕೆಲವು ಗುಣಗಳ ಬಗ್ಗೆ ಕೇಳಿದರು. ಅದಕ್ಕೆ ಮಲೈಕಾ ಉತ್ತರಿಸಿ ʻʻನಿನ್ನ ಮ್ಯಾನರಿಸಂ ನಿನ್ನ ತಂದೆಯಂತೆಯೇ ಇದೆ. ಇಬ್ಬರೂ ನಡುವೆ ಹಲವು ವಿಚಾರಗಳಿಗೆ ಹೋಲಿಕೆ ಇದೆ. ಅರ್ಬಾಜ್ ಅವರ ಮ್ಯಾನರಿಸಂ ಅಷ್ಟಾಗಿ ಅಟ್ರ್ಯಾಕ್ಟಿವ್‌ ಆಗಿಲ್ಲʼʼ ಎಂದಿದ್ದರು.

ಮಲೈಕಾ ಮಾತು ಮುಂದುವರಿಸಿ ʻʻಅರ್ಬಾಜ್ ನ್ಯಾಯಯುತ ವ್ಯಕ್ತಿ. ಅವರು ಎಂದಿಗೂ ವಿಷಯಗಳ ಬಗ್ಗೆ ಅತಿಯಾಗಿ ಯೋಚಿಸಲು ಹೋಗುವುದಿಲ್ಲ, ಕೆಲವು ವಿಷಯಗಳ ಬಗ್ಗೆ ತುಂಬಾ ಸ್ಪಷ್ಟವಾಗಿರುತ್ತಾರೆ. ಆ ಗುಣ ನಿನ್ನಲ್ಲಿ ಕೂಡ ಇದೆʼʼ ಎಂದಿದ್ದರು.

Continue Reading

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading
Advertisement
Trichy Tour
ಪ್ರವಾಸ5 mins ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Money Guide
ಮನಿ-ಗೈಡ್9 mins ago

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Yamuna Bridge
ವೈರಲ್ ನ್ಯೂಸ್14 mins ago

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

KKR vs SRH Qualifier 1
ಕ್ರೀಡೆ29 mins ago

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

Road Accident
ಪ್ರಮುಖ ಸುದ್ದಿ33 mins ago

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

theft case
ತುಮಕೂರು54 mins ago

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Physical Abuse & Murder
ದೇಶ56 mins ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Crime News
ದೇಶ57 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

ISIS Terrorists
ದೇಶ59 mins ago

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

Deepika Padukone Enjoy Lunch Date After Casting Their Vote
ಬಾಲಿವುಡ್1 hour ago

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌