Urfi Javed: ಬಟ್ಟೆಯೇ ನಿನ್ನನ್ನು ನೋಡಿ ನಾಚಿಕೆ ಪಡುತ್ತೆ ಅಂದ್ರು ನೆಟ್ಟಿಗರು; ಟ್ರೋಲ್‌ಗೆ ಗುರಿಯಾದ ಉರ್ಫಿ - Vistara News

ಬಾಲಿವುಡ್

Urfi Javed: ಬಟ್ಟೆಯೇ ನಿನ್ನನ್ನು ನೋಡಿ ನಾಚಿಕೆ ಪಡುತ್ತೆ ಅಂದ್ರು ನೆಟ್ಟಿಗರು; ಟ್ರೋಲ್‌ಗೆ ಗುರಿಯಾದ ಉರ್ಫಿ

Urfi Javed: ಉರ್ಫಿ ಜಾವೇದ್ ಅವರು ತನಗೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ರಾಜಕಾರಣಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಸುದ್ದಿಯಲ್ಲಿದ್ದರು. ತನ್ನ ಬಟ್ಟೆಯಿಂದಾಗಿ ಉರ್ಫಿ ಜಾವೇದ್ ಇಲ್ಲಿಯವರೆಗೆ ಅನೇಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಗ ಮತ್ತೆ ಅವರು ಬಟ್ಟೆ ವಿಚಾರಕ್ಕೆ ಟ್ರೋಲ್‌ ಆಗುತ್ತಿದ್ದಾರೆ.

VISTARANEWS.COM


on

Urfi Javed gets brutally trolled for her latest look
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಫ್ಯಾಷನ್‌ ಐಕಾನ್‌ ಎಂತಲೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್‌ (Urfi Javed) ಮಾರ್ಚ್ 17ರಂದು ಮುಂಬೈನಲ್ಲಿ ನಡೆದ ಏಸ್ ಡಿಸೈನರ್ ಜೋಡಿ ಶಾಂತಾನು ಮತ್ತು ನಿಖಿಲ್ ಅವರ ಸ್ಟೋರ್ ಲಾಂಚ್ (Shantanu and Nikhil’s store )ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತನ್ನ ಕಪ್ಪು ಉಡುಗೆಯಿಂದ ಮತ್ತೆ ಸುದ್ದಿಯಾಗಿದ್ದಾರೆ ಉರ್ಫಿ. ಬೆಜೆವೆಲ್ಡ್ ಬೆಲ್ಟ್ ಹಾಗೂ ಧೋತಿಯಂತಹ ಸ್ಕರ್ಟ್ ಜತೆಗೆ ಕಪ್ಪು ದುಪಟ್ಟಾದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಉರ್ಫಿ ಲುಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಟ್ರೋಲ್‌ಗೆ ಗುರಿಯಾಗಿದ್ದಾರೆ. ʻಕಡಿಮೆ ಬಟ್ಟೆಗಳನ್ನು ಧರಿಸಿ ಗಮನ ಸೆಳೆಯುತ್ತಿದ್ದಾರೆ. ಯಾವುದೇ ಶೈಲಿಯಿಲ್ಲʼʼ ಎಂದು ಬರೆದರೆ ಇನ್ನೊಬ್ಬರು ʻʻನಟಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಮೆರಿಕದಲ್ಲಿ ಸಹ ಮಹಿಳೆಯರು ಅಂತಹ ಬಟ್ಟೆಗಳನ್ನು ಧರಿಸಿ ಬೀದಿಗಳಲ್ಲಿ ತಿರುಗಾಡುವುದಿಲ್ಲʼʼ ಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರುʻʻಬಟ್ಟೆಯೇ ನಿನ್ನನ್ನು ನೋಡಿ ನಾಚಿಕೆ ಪಡುತ್ತೆ, ನಿನಗೆ ನಾಚಿಕೆ ಇಲ್ಲವಾʼʼಎಂದು ಬರೆದುಕೊಂಡಿದ್ದಾರೆ.

ಉರ್ಫಿ ಜಾವೇದ್ ಅವರು ತನಗೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ರಾಜಕಾರಣಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಸುದ್ದಿಯಲ್ಲಿದ್ದರು. ತನ್ನ ಬಟ್ಟೆಯಿಂದಾಗಿ ಉರ್ಫಿ ಜಾವೇದ್ ಇಲ್ಲಿಯವರೆಗೆ ಅನೇಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: Urfi Javed: ಇಸ್ಲಾಂ ಧರ್ಮವನ್ನು ಅವಮಾನಿಸುತ್ತಿರುವ ಉರ್ಫಿಗೆ ಸ್ಮಶಾನದಲ್ಲೂ ಜಾಗ ಕೊಡಲ್ಲ: ಫೈಜಾನ್ ಅನ್ಸಾರಿ

ಸ್ಟೋರ್ ಲಾಂಚ್ ಕಾರ್ಯಕ್ರಮದಲ್ಲಿ ಉರ್ಫಿ ಕಂಡದ್ದು

ಉರ್ಫಿ ವಿರುದ್ಧ ನಟ ಫೈಜಾನ್ ಅನ್ಸಾರಿ ಶಾಕಿಂಗ್ ಹೇಳಿಕೆ

ಕೆಲ ದಿನಗಳಿಂದ ಉರ್ಫಿ ಜಾವೇದ್ ವಿರುದ್ಧ ಹೋರಾಟ ನಡೆಸುತ್ತಿರುವ ನಟ ಫೈಜಾನ್‌, “ಧರ್ಮವನ್ನು ಪದೇಪದೆ ಅವಮಾನಿಸಿದ್ದಾರೆ. ಮುಸ್ಲಿಂ ಹುಡುಗಿಯೊಬ್ಬಳು ಬೆತ್ತಲೆಯಾಗಿ ತಿರುಗಾಡುತ್ತಿದ್ದಾಳೆ ಎಂದು ಯಾರಾದರೂ ಹೇಳಿದಾಗ ನನಗೆ ತುಂಬಾ ನಾಚಿಕೆಯಾಗುತ್ತದೆ. ಉರ್ಫಿ ಅವರು ಇಸ್ಲಾಂ ಧರ್ಮವನ್ನು ಅವಮಾನಿಸಿದ್ದಾರೆ, ಆದ್ದರಿಂದ ಅವರನ್ನು ಯಾವುದೇ ಸ್ಮಶಾನದಲ್ಲಿ ಸಮಾಧಿ ಮಾಡಲು ಬಿಡಬಾರದು ಎಂದು ಮನವಿ ಮಾಡಿದ್ದೇನೆʼʼ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Urfi Javed: ಉರ್ಫಿ ಹೊಸ ಮ್ಯಾಗಜಿನ್‌ ಫೋಟೊಶೂಟ್‌ ವೈರಲ್‌: ಖ್ಯಾತ ಫ್ಯಾಷನ್‌ ಡಿಸೈನರ್‌ ಅನಿತಾ ಶ್ರಾಫ್ ಹೇಳಿದ್ದೇನು?

ಉರ್ಫಿ ಸತ್ತಾಗ ಸ್ಮಶಾನದಲ್ಲಿ ಜಾಗವನ್ನೂ ಕೊಡುವುದಿಲ್ಲ ಎಂದು ನಟ ಹೇಳಿದ್ದಾರೆ. ʻʻಆಕೆ ತೊಟ್ಟಿರುವ ಬಟ್ಟೆಗಳು ಜಗತ್ತಿನಾದ್ಯಂತ ಇರುವ ಮುಸ್ಲಿಮರನ್ನು ಕೆಣಕುತ್ತಿವೆ. ಅವಳು ಇಸ್ಲಾಂನಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರೆ, ಮೊದಲು ಅವಳ ಹೆಸರನ್ನು ಬದಲಿಸಿಕೊಳ್ಳಬೇಕು. ಮುಸ್ಲಿಂ ಹುಡುಗಿ ಇಂತಹ ಬಟ್ಟೆಗಳನ್ನು ಧರಿಸುತ್ತಾಳೆ ಎಂದು ಯಾರಾದರೂ ಹೇಳಿದಾಗ ನಮಗೆ ತುಂಬಾ ಬೇಸರವಾಗುತ್ತದೆ. ಫತ್ವಾ ಹೊರಡಿಸಿದ್ದಕ್ಕಾಗಿ ದೆಹಲಿಯ ಮೌಲಾನಾ ಮತ್ತು ಮುಂಬೈನ ಸಿಟಿ ಖಾಜಿಗೂ ದೂರು ನೀಡಿದ್ದೇನೆ ಎಂದು ಫೈಜಾನ್ ಅನ್ಸಾರಿʼʼ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

OM Puri: ಸ್ಟಾರ್ ಆಗುವುದು ಸುಲಭವಲ್ಲ. ಇಂದಿನ ಎಷ್ಟೋ ಸ್ಟಾರ್ ಗಳು ಒಂದು ಕಾಲದಲ್ಲಿ ತುಂಬಾ ಕಷ್ಟ ಪಟ್ಟಿದ್ದರು. ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ಇವರಲ್ಲಿ ಓಂ ಪುರಿ ಕೂಡ ಒಬ್ಬರು. ಸ್ಟಾರ್ ಆಗುವ ಮೊದಲು ಅವರ ಬದುಕಿನ ಕಡುಕಷ್ಟದ ದಿನಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

OM Puri
Koo

ಎಷ್ಟೇ ದೊಡ್ಡ ಮನೆತನದಿಂದ ಬಂದಿರಲಿ ಚಿತ್ರರಂಗದಲ್ಲಿ (film industry) ತನ್ನ ಸ್ವಂತ ಪರಿಶ್ರಮವಿಲ್ಲದೆ ಸ್ಟಾರ್ (star) ಆಗಲು ಸಾಧ್ಯವೇ ಇಲ್ಲ. ಇವತ್ತಿನ ಹಲವಾರು ಸೂಪರ್ ಸ್ಟಾರ್ ಗಳು (super star) ಒಂದು ಕಾಲದಲ್ಲಿ ಬೀದಿ ಬದಿಯಲ್ಲಿ ಮಲಗಿದ್ದರು, ಸಣ್ಣಪುಟ್ಟ ಕೆಲಸಗಳನ್ನು ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು.

ಬಾಲಿವುಡ್ ನ (bollywood) ಶಾರುಖ್ ಖಾನ್ (Shah Rukh Khan) , ಅಮಿತಾಬ್ ಬಚ್ಚನ್ (Amitabh Bachchan) ಕೂಡ ಒಂದು ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಸಹಿಸಿಯೇ ಮೇಲಕ್ಕೆ ಏರಿದವರು. ಹೀಗೆಯೇ ಕಷ್ಟಪಟ್ಟು ಮನೆ ಮಾತಾಗಿರುವವರಲ್ಲಿ ಬಾಲಿವುಡ್ ನಲ್ಲಿ ವಿವಿಧ ಪಾತ್ರಗಳಿಂದ ಪ್ರಸಿದ್ದಿ ಪಡೆದ ನಟ ಓಂ ಪುರಿ (OM Puri) ಕೂಡ ಒಬ್ಬರು.

ಜನನ ದಾಖಲೆಯೇ ಇಲ್ಲ

ಹರಿಯಾಣದ ಅಂಬಾಲದಲ್ಲಿ ಜನಿಸಿದ್ದ ಓಂ ಪುರಿ ಅವರ ತಂದೆ ಟೆಕ್ ಚಂದ್ ಪುರಿ ಭಾರತೀಯ ಸೇನೆಯಲ್ಲಿದ್ದರು ಮತ್ತು ರೈಲ್ವೇಯಲ್ಲಿಯೂ ಕೆಲಸ ಮಾಡಿದ್ದರು. ಆದರೂ ಓಂ ಪುರಿ ಅವರು ಯಾವುದೇ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ. ಹೀಗಾಗಿ ಅವರ ಜನ್ಮ ದಿನಾಂಕದ ಬಗ್ಗೆ ಅವರ ಕುಟುಂಬಕ್ಕೆ ಖಚಿತವಾಗಿ ತಿಳಿದಿಲ್ಲ.

ದಸರಾ ಆರಂಭವಾದ ಎರಡು ದಿನಗಳ ಅನಂತರ ತಾನು ಜನಿಸಿರುವುದಾಗಿ ತಾಯಿ ಹೇಳುತ್ತಿದ್ದರು ಎನ್ನುತ್ತಾರೆ ಓಂ ಪುರಿ.

ಇದನ್ನೂ ಓದಿ: Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

ಸ್ವಂತ ಪರಿಶ್ರಮದಿಂದ ಖ್ಯಾತಿ

ಓಂಪುರಿ ಅವರ ಬಾಲ್ಯವು ತುಂಬಾ ಸುಲಭವಾಗಿರಲಿಲ್ಲ. ಇಂದು ನಾವು ಅವರ ಕುಟುಂಬದ ಬಗ್ಗೆ ಮಾತನಾಡುತ್ತೇವೆ. ಆದರೆ ಅವರು ಹಿಂದುಳಿದ ಹಿನ್ನೆಲೆಯಿಂದ ಬಂದು ದೊಡ್ಡ ಹೆಸರನ್ನು ತಮ್ಮ ಸ್ವಂತ ಪರಿಶ್ರಮದಿಂದಲೇ ಗಳಿಸಿದರು.
ಎಂಟು ಮಂದಿಯಲ್ಲಿ ಇಬ್ಬರು ಮಾತ್ರ ಬದುಕಿ ಉಳಿದರು.

ಓಂ ಪುರಿ ಅವರ ಎಂಟು ಸಹೋದರರು ಮತ್ತು ಸಹೋದರಿಯರಲ್ಲಿ ಕಿರಿಯರಾಗಿದ್ದರು. ದುರದೃಷ್ಟವಶಾತ್ ಅವರ ಎಲ್ಲಾ ಸಹೋದರರು ಮತ್ತು ಸಹೋದರಿಯರು ಬಾಲ್ಯದಲ್ಲೇ ಸರಿಯಾದ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ನಿಧನರಾದರು. ಅವರ ಹಿರಿಯ ಸಹೋದರ ವೇದ್ ಮತ್ತು ಪುರಿ ಮಾತ್ರ ಬದುಕುಳಿದರು.


ಕಷ್ಟದ ಜೀವನ

ತಂದೆ ರೈಲ್ವೇ ಉದ್ಯೋಗಿಯಾಗಿದ್ದಾಗ ಸಿಮೆಂಟ್ ಕಳ್ಳತನದ ಆರೋಪದಿಂದ ಜೈಲು ಸೇರಿದ್ದರು. ಇದರ ಬಳಿಕ ಅವರ ಕುಟುಂಬವು ನಿರಾಶ್ರಿತವಾಯಿತು. ಈ ಸಮಯದಲ್ಲಿ ಓಂ ಪುರಿ ಅವರ ಸಹೋದರ ವೇದ್ ಪ್ರಕಾಶ್ ಪುರಿ ರೈಲು ನಿಲ್ದಾಣಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಓಂ ಪುರಿ ಅವರು ಸ್ಥಳೀಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬವನ್ನು ಬೆಂಬಲಿಸಲು ಇವರು ರೈಲು ಹಳಿಗಳಿಂದ ಕಲ್ಲಿದ್ದಲು ಸಂಗ್ರಹಿಸುತ್ತಿದ್ದರು.

ಕಷ್ಟವಿದ್ದರೂ ಓದು ಮುಂದುವರಿಸಿದರು

ಎಷ್ಟೇ ಕಷ್ಟವಿದ್ದರೂ ಪುರಿ ಅವರ ಅಧ್ಯಯನವನ್ನು ಬಿಡಲಿಲ್ಲ. ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ ಸೇರಿ, ಅಲ್ಲಿ ಅವರು ನಾಸಿರುದ್ದೀನ್ ಷಾ ಅವರನ್ನು ಭೇಟಿಯಾದರು. ಷಾ ಅವರು ಪುರಿ ಅವರನ್ನು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕರೆ ತಂದರು.

ಷಾ ಅವರೊಂದಿಗೆ ಕೆಲಸ

ಓಂ ಪುರಿ ಮತ್ತು ನಾಸಿರುದ್ದೀನ್ ಷಾ ಅವರೊಂದಿಗೆ ಒಟ್ಟಿಗೆ 26 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಮೊದಲ ಚಿತ್ರ 1977ರಲ್ಲಿ ಭೂಮಿಕಾ ಮತ್ತು ಅವರ ಕೊನೆಯ ಚಿತ್ರ 2009 ರಲ್ಲಿ ಬೋಲೋ ರಾಮ್.


ಹೃದಯಾಘಾತದಿಂದ ನಿಧನ

ಓಂ ಪುರಿ ಅವರು ಮುಂಬಯಿ ನ ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ 2017ರ ಜನವರಿ 6 ರಂದು ನಿಧನರಾದರು. ಚಾಚಿ 420 (1997), ಹೇರಾ ಫೆರಿ (2000), ಚೋರ್ ಮಚಾಯೆ ಶೋರ್ (2002), ದೀವಾನೆ ಹ್ಯೂ ಪಾಗಲ್, ಚುಪ್ ಚುಪ್ ಕೆ, ಕಿಸ್ಮೆತ್ ಕನೆಕ್ಷನ್ ಮತ್ತು ಮಲಾಮಾಲ್ ವೀಕ್ಲಿ (2006) ಮತ್ತು ಓಹ್ ಮೈ ಗಾಡ್, ಧೋಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು.

ಭಾರತೀಯ, ಬ್ರಿಟಿಷ್ ಮತ್ತು ಅಮೆರಿಕನ್ ಚಲನಚಿತ್ರಗಳಲ್ಲಿ ನಟಿಸಿರುವ ಅವರಿಗೆ ನ್ಯಾಷನಲ್ ಫಿಲಂ ಅವಾರ್ಡ್, ಅತ್ಯತ್ತಮ ನಟ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದೆ.

Continue Reading

ಬಾಲಿವುಡ್

Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

Riteish Deshmukh: ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Riteish Deshmukh-Genelia visit Ayodhya Ram Mandir
Koo

ಬೆಂಗಳೂರು: ನಟ ರಿತೇಶ್ ದೇಶಮುಖ್ (Riteish Deshmukh) ಏಪ್ರಿಲ್ 20ರಂದು ಪತ್ನಿ ಜೆನಿಲಿಯಾ ದೇಶಮುಖ್ (Genelia Deshmukh) ಮತ್ತು ಮಕ್ಕಳೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ದಂಪತಿ ರಾಮಮಂದಿರಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಿತೇಶ್ ಮತ್ತು ಜೆನಿಲಿಯಾ (Ayodhya Ram Mandir) ಫೋಟೊ ಶೇರ್‌ ಮಾಡಿಕೊಂಡು ʻʻರಾಮಲಲ್ಲಾ ದರ್ಶನ ಪಡೆದದ್ದಾಯ್ತುʼʼಎಂದು ಬರೆದುಕೊಂಡಿದ್ದಾರೆ.

ಫೋಟೊದಲ್ಲಿ ದಂಪತಿ ರಾಮನನ್ನು ಪ್ರಾರ್ಥಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮುಂಚೆ  ಪ್ರಿಯಾಂಕಾ ಚೋಪ್ರಾ (Priyanka Chopra), ಅವರ ಪತಿ-ಗಾಯಕ ನಿಕ್ ಜೋನಾಸ್ ಮತ್ತು ಅವರ ಪುತ್ರಿ ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆ ಬುಧವಾರ (ಮಾ.20) ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದರು.

ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Priyanka Chopra : ರಾಮಮಂದಿರದಲ್ಲಿ ಪ್ರಿಯಾಂಕಾ ಮಗಳು ಕ್ಯೂಟ್‌ ಆಗಿ ‘ಅಯೋಧ್ಯಾ’ ಎಂದು ಹೇಳಿದ್ದು ಹೀಗೆ!

ರಿತೇಶ್ ದೇಶಮುಖ್ ಪೋಸ್ಟ್‌

ಸಿನಿಮಾ ವಿಚಾರಕ್ಕೆ ಬಂದರೆ, ರಿತೇಶ್ ಅವರು ‘ಮಸ್ತಿ 4’ ಗಾಗಿ ಏಳು ವರ್ಷಗಳ ನಂತರ ವಿವೇಕ್ ಒಬೆರಾಯ್ ಮತ್ತು ಅಫ್ತಾಬ್ ಶಿವದಾಸನಿ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಇಂದ್ರ ಕುಮಾರ್, ಎ. ಜುಂಜುನ್ವಾಲಾ, ಅಶೋಕ್ ಠಾಕೇರಿಯಾ ಮತ್ತು ಎಸ್.ಕೆ. ಅಹ್ಲುವಾಲಿಯಾ ಬಂಡವಾಳ ಹೂಡಿದ್ದಾರೆ.

Continue Reading

ಬಾಲಿವುಡ್

Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

Ranveer Singh: ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

VISTARANEWS.COM


on

Ranveer Singh Files Police Case Deepfake Video Goes
Koo

ಬೆಂಗಳೂರು: : ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೊವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ. ಹೀಗಾಗಿ ರಣವೀರ್‌ ಸಿಂಗ್‌ ಅವರು ಡೀಪ್‌ಫೇಕ್ ವಿಡಿಯೊ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಇದೀಗ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರಣವೀರ್ ಸಿಂಗ್ ತಂಡ ಹೇಳಿದೆ. “ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ರಣವೀರ್ ಸಿಂಗ್ ಅವರ ಎಐ-ರಚಿಸಿದ ಡೀಪ್‌ಫೇಕ್ ವೀಡಿಯೊವನ್ನು ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Ranveer Singh: ಅಂಬಾನಿ ಭಾವಿ ಸೊಸೆಯ ಮಾತಿಗೆ ನಾಚಿ ನೀರಾದ ದೀಪಿಕಾ ಪತಿ!

ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಇತ್ತೀಚೆಗೆ ನಟನ ವಕ್ತಾರರು ಈ ವಿಡಿಯೊ ವಿರುದ್ಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಕೈಗೊಂಡಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Continue Reading

ಬಾಲಿವುಡ್

Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

Kalki 2898 AD: ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು.

VISTARANEWS.COM


on

Kalki 2898 AD Name of Amitabh Bachchan character revealed
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ.  ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಅಮಿತಾಭ್ ಬಚ್ಚನ್ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ತಂಡ ರಿವೀಲ್ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅಮಿತಾಭ್‌ ಬಚ್ಚನ್ ಹಳದಿ ಬಟ್ಟೆಯನ್ನು ಧರಿಸಿದ್ದರು. ಗುಹೆಯಂತೆ ಕಾಣುವ ಶಿವಲಿಂಗದ ಮುಂದೆ ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು. ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ, ನಾನು ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೆ. ನಾನು ಗುರು ದ್ರೋಣರ ಮಗ. ಅಶ್ವತ್ಥಾಮ.”ಎಂದು ಹೇಳುತ್ತಾರೆ. ಈ ಮೂಲಕ ಅಮಿತಾಭ್‌ ಪಾತ್ರ ರಿವೀಲ್‌ ಆಗಿದೆ.

ಇದನ್ನೂ ಓದಿ: Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಈ ಹಿಂದೆ 2024ರ ಮೇ 9ರಂದು ಚಿತ್ರ ತೆರೆ ಕಾಣಲಿದೆ ಎನ್ನಲಾಗಿತ್ತು. ಆದರೆ ಎಲ್ಲ ಕೆಲಸ ಪೂರ್ಣಗೊಂಡಿಲ್ಲದ ಕಾರಣ ರಿಲೀಸ್‌ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕೆಲವು ದಿನಗಳ ಹಿಂದೆ ವರದಿಗಳು ತಿಳಿಸಿದ್ದವು. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು. ಇದು ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಪಾತ್ರ ಹೆಸರನ್ನೂ ರಿವೀಲ್‌ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ದುಬಾರಿ ಸಿನಿಮಾ

ʼಕಲ್ಕಿ 2898 ಎಡಿʼ ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ.

Continue Reading
Advertisement
Lok Sabha Election 2024
Lok Sabha Election 20247 mins ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ12 mins ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ59 mins ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ1 hour ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Kanguva Budget
ಸಿನಿಮಾ1 hour ago

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ook between H and L
ಪ್ರಮುಖ ಸುದ್ದಿ1 hour ago

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Lok Sabha Election-2024
ರಾಜಕೀಯ2 hours ago

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

Neha Murder Case How can a mobile photo be leaked when accused Fayaz is in jail
ಹುಬ್ಬಳ್ಳಿ2 hours ago

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Money Guide
ಮನಿ-ಗೈಡ್2 hours ago

Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌