Kichcha Sudeep: ಕಿಚ್ಚ ಸುದೀಪ್ ಷಡ್ಯಂತ್ರದ ಹಿಂದಿರೋ ವ್ಯಕ್ತಿ ಸೂರಪ್ಪ ಬಾಬು; ಹೊಸ ಬಾಂಬ್ ಸಿಡಿಸಿದ ವೀರಕಪುತ್ರ ಶ್ರೀನಿವಾಸ! - Vistara News

South Cinema

Kichcha Sudeep: ಕಿಚ್ಚ ಸುದೀಪ್ ಷಡ್ಯಂತ್ರದ ಹಿಂದಿರೋ ವ್ಯಕ್ತಿ ಸೂರಪ್ಪ ಬಾಬು; ಹೊಸ ಬಾಂಬ್ ಸಿಡಿಸಿದ ವೀರಕಪುತ್ರ ಶ್ರೀನಿವಾಸ!

Kichcha Sudeep: ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 2’ ಹಾಗೂ ‘ಕೋಟಿಗೊಬ್ಬ 3’ ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದರು. ಈಗ ಸೂರಪ್ಪ ಬಾಬು ವಿರುದ್ಧ ವಿಷ್ಣು ಸೇನಾ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ (Veerakaputra Srinivas) ಪೋಸ್ಟ್‌ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Veerakaputra Srinivasa Kichcha Sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಿಚ್ಚ ಸುದೀಪ್ (Kichcha Sudeep) ವಿರುದ್ಧ ನಿರ್ಮಾಪಕರಾದ ಎಂ. ಎನ್​ ಕುಮಾರ್, ರೆಹಮಾನ್​ ಸಿಡಿದೇಳಲು ಸೂರಪ್ಪ ಬಾಬು ಕಾರಣ ಎಂದು ವಿಷ್ಣು ಸೇನಾ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ (Veerakaputra Srinivas) ಪೋಸ್ಟ್‌ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ. ತಮ್ಮ ಫೇಸ್‌ಬುಕ್‌ ಖಾತೆಯಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.

ವೀರಕಪುತ್ರ ಶ್ರೀನಿವಾಸ ಹೇಳಿದ್ದೇನು?

ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 2’ ಹಾಗೂ ‘ಕೋಟಿಗೊಬ್ಬ 3’ ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದರು. “ಇತ್ತೀಚೆಗೆ ಕಿಚ್ಚ ಸುದೀಪ್‌ ಅವರ ಕುರಿತಾಗಿ ತುಂಬ ಮಾತುಗಳು ಕೇಳಿಬರ್ತಿವೆ. ಅವರು ನಿರ್ಮಾಪಕರಿಗೆ ಹಣ ಕೊಡ್ಬೇಕಂತೆ, ಕಾಲ್ ಶೀಟ್‌ ಕೊಡಬೇಕಂತೆ, ಆದರೆ ಸಾಕ್ಷಿಗಳಿಲ್ಲವಂತೆ… ಅದಂತೆ, ಇದಂತೆ… ಅನ್ನೋ ಅಂತೆ ಕಂತೆಗಳು ತುಂಬಾನೇ ಹರಿದಾಡ್ತಿವೆʼʼ ಎಂದು ವೀರಕಪುತ್ರ ಶ್ರೀನಿವಾಸ ಮಾತು ಆರಂಭಿಸಿದ್ದಾರೆ.

ʻʻಈ ಪ್ರಕರಣದ ಬೆಳವಣಿಗೆಗಳನ್ನು ಒಂದು ವಾರದಿಂದ ಗಮನಿಸುತ್ತಿದ್ದೇನೆ. ಇದೊಂದು ಹಣದ ವಿಷಯವಾಗಿ ಮಾತ್ರ ಉಳಿದಿದೆ ಎಂದು ನನಗನ್ನಿಸುತ್ತಿಲ್ಲ. ಈ ಪ್ರಕರಣ ಮಾನಹರಣಕ್ಕೆ ಮಾತ್ರ ಮೀಸಲಾಗಿರುವುದು ಸ್ಪಷ್ಟವಾಗಿದೆ. ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ತಂದು ಕೊಟ್ಟ ಖ್ಯಾತನಟನ ವಿರುದ್ಧವಾಗಿ ಇಷ್ಟೆಲ್ಲಾ ನಡೆಯುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಹಾಗಂತ ಸುದೀಪ್‌ ಅವರು ಪ್ರಶ್ನಾತೀತರಲ್ಲ. ತಪ್ಪು ಮಾಡಿದಾಗ ಅವರನ್ನೂ ಪ್ರಶ್ನಿಸಬೇಕು. ಆದರೆ ಪ್ರಶ್ನಿಸುತ್ತಿರುವವರ ಅಸಲಿಯತ್ತು, ಪ್ರಮಾಣಿಕತೆಯನ್ನು ಒರೆಗೆ ಹಚ್ಚಬೇಕಿದೆ. ಅಂತಹ ಕೆಲವು ಸಂಗತಿಗಳನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಬೇಕಿದೆ. ನಾನ್ಯಾಕೆ ಹಂಚಿಕೊಳ್ಳಬೇಕು. ಅಂದರೆ ಸುದೀಪ್‌ ಸರ್‌ ಅವರ ಜತೆ ಮಾತ್ರವಲ್ಲ ಈ ಆರೋಪಗಳನ್ನು ಮಾಡುತ್ತಿರುವ ಇಬ್ಬರು ನಿರ್ಮಾಪಕರ ಜತೆಗೂ ನನಗೆ ಅಷ್ಟೇ ಒಡನಾಟವಿರುವುದರಿಂದ ಈ ಮಾತುಗಳನ್ನು ನಾನು ಹೇಳಲೇಬೇಕುʼʼಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ಇತಿಹಾಸದಲ್ಲಿ ಇದು ದಾಖಲಾಗಿ ಉಳಿಯಲಿದೆ.

ಸುದೀಪ್‌ ಅವರ ಬಗ್ಗೆ ಕುಮಾರ್‌ ಅವರು ಆರೋಪ ಮಾಡಿದ್ದರು. ಸುದೀಪ್ ನನಗೆ ಒಂಬತ್ತು ಕೋಟಿ ಹಣ ಕೊಡಬೇಕು ಎಂದು. ಆದರೆ ಅದಕ್ಕೆ ಯಾವುದೇ ಸಾಕ್ಷಿಯಿಲ್ಲ ನಮ್ಮ ಮನಸಾಕ್ಷಿಯೇ ಸಾಕ್ಷಿ ಅಂತ. ಈ ಮನಸಾಕ್ಷಿ, , ವನಜಾಕ್ಷಿ, ಮೀನಾಕ್ಷಿಯನ್ನಿಟ್ಟುಕೊಂಡು ವ್ಯವಹಾರ ಮಾಡೋದನ್ನು ಗಾಂಧಿನಗರದವರು ಎಲ್ಲಿಂದ ಕಲಿತರು ಅಂತ? ನಮ್ಮ ಹಳ್ಳಿಗಳಲ್ಲಿ ಅಂಗಡಿಗೆ ಹೋಗಿ ಕಾಫಿಪುಡಿ ಸಾಲದ ರೂಪದಲ್ಲಿ ತಂದರೂ ಅದನ್ನು ಒಂದು ಪುಸ್ತಕದಲ್ಲಿ ಬರೆದಿಟ್ಟುಕೊಳ್ಳುತ್ತಾನೆ ಆ ಅಂಗಡಿಯವರು. ಅಂತಹದರಲ್ಲಿ ಕುಮಾರ್‌ ಅವರು ಅಷ್ಟು ದೊಡ್ಡ ಮೊತ್ತವನ್ನು ಏನೂ ದಾಖಲೆಗಳಿಲ್ಲದೆ ಕೊಟ್ಟರೆಂದರೆ ಯಾರಾದರೂ ನಂಬ್ತಾರೆ? ಯಾಕಾದ್ರೂ ನಂಬಬೇಕು? ಅಂದ್ರೆ ಅವರ ಬಳಿ ಅಷ್ಟೊಂದು ಹಣ ಇದೆಯಾ? ಮುಂದುವರಿದು ಅವ್ರು ಹೇಳ್ತಾರೆ. ನನಗೆ ಹಣ ಬೇಡ ಆದ್ರೆ ಕಾಲ್ ಶೀಟ್ ಕೊಡಿ ಅಂತ. ಇತ್ತ ಕಡೆ ಆರೋಪ ಮಾಡುತ್ತಲೇ, ಅತ್ತ ಕಡೆ ಅವಕಾಶ ಕೇಳುತ್ತಿರುವ ಒಂದು ಕೆಟ್ಟ ವಿದ್ಯಮಾನವಾಗಿ ಕರ್ನಾಟಕ ಚಲನಚಿತ್ರ ಇತಿಹಾಸದಲ್ಲಿ ಇದು ದಾಖಲಾಗಿ ಉಳಿಯಲಿದೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್‌ ಸಿನಿಮಾಗೆ ತಮಿಳು ಖ್ಯಾತ ನಿರ್ದೇಶಕ ವೆಂಕಟ್ ಪ್ರಭು ಆ್ಯಕ್ಷನ್‌ ಕಟ್‌?

ನಾನು ಕುಮಾರ್‌ ಅವರಿಗಾಗಲಿ, ಇತರೆ ನಿರ್ಮಾಪಕರಿಗಾಗಲಿ ಹೇಳಲು ಬಯಸುವುದೇನೆಂದರೆ, ನಿಮಗೆ ಕಾಲ್ ಶೀಟ್‌ ಯಾಕೆ ಕೊಡಬೇಕು? ಸ್ನೇಹಿತರು ಅಂತಾನ? ನಿಮ್ಮೆಲ್ಲರ ಬಹುದೊಡ್ಡ ಸಮಸ್ಯೆ ಏನೆಂದರೆ,, ಸುದೀಪ್‌ ಏನೂ ಇಲ್ಲದೇ ಇದ್ದಾಗ ನಾವು ಜೊತೆಗಿದ್ವಿ, ಈಗ ಆತ ಎತ್ತರಕ್ಕೆ ಬೆಳೆದುಬಿಟ್ಟಿದ್ದಾರೆ. ಆದ್ದರಿಂದ ನಾವು ಕಷ್ಟಕ್ಕೆ ಸಿಕ್ಕಿಕೊಂಡಾಗಲೆಲ್ಲಾ ಸುದೀಪ್‌ ಸಹಾಯ ಹಸ್ತ ಚಾಚ್ತಾ ಇರ್ಬೇಕು? ಇದೆಂತಾ ನ್ಯಾಯ ಸ್ವಾಮಿ.. ಮೋದಿಯವರು ಕೂಡ ಟೀ ಮಾರುತ್ತಿದ್ದರು ಹಾಗಂತ ಅವ್ರನ್ನು ಈಗಲೂ ಟೀ ಅಂಗಡಿಯಲ್ಲೇ ಕೂತಿರಿ ಅಂತ ಹೇಳೋಕಾಗುತ್ತಾ? ನಿಮ್ಮಂತಹ ಸ್ನೇಹಿತರನ್ನು ನಂಬಿಕೊಂಡು ಸುದೀಪ್ ಅವರು ಮಾಡಿದ ಸಿನಿಮಾಗಳೆಷ್ಟು ಅಂತ ಒಂದ್ಸಲ ಲೆಕ್ಕಮಾಡಿ ನೋಡಿ ಮತ್ತು ಅವುಗಳು ಬಿಡುಗಡೆ‌ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಎಷ್ಟು ಎಂತಹವು ಗೊತ್ತಾ..? ರನ್ನ ಸಿನಿಮಾ ಬಿಡುಗಡೆ ಮುನ್ನಾ ದಿನ ಎಂಥಾ ಇಕ್ಕಟ್ಟಿಗೆ ಸಿಕ್ಕಿಕೊಂಡಿತು? ಕೋಟಿಗೊಬ್ಬ 3 ಬಿಡುಗಡೆಯೇ ಆಗಲಿಲ್ಲ… ಇದಕ್ಕೆಲ್ಲಾ ಕಾರಣ ಯಾರು? ಅದೇ ಸ್ನೇಹಿತರಲ್ಲವೇ?

ಇದಕ್ಕೆ ಕಾರಣವಾದವರು ಯಾರು?

ಸುದೀಪ್‌ ಅವರಿಗೆ ಸಿನಿಮಾ ಮಾಡಲು ಬರುವ ಬಹುತೇಕ ನಿರ್ಮಾಪಕರ ಹತ್ತಿರ ಒಂದು ರೂಪಾಯಿ ಹಣ ಕೂಡ ಇರಲ್ಲ. ಅದಕ್ಕಿಂತ ಪ್ರಮುಖ ಸಂಗತಿ ಏನೆಂದರೆ.. ಸಿನಿಮಾ ಮಾಡದಿದ್ದರೆ, ಇವರುಗಳ ಬ್ಯಾಂಕ್ ಬ್ಯಾಲೆನ್ಸ್‌ಗಳು ನಮ್ಮ ಬ್ಯಾಂಕ್ ಬ್ಯಾಲೆನ್ಸ್‌ಗಳಷ್ಟೂ ಇರುವುದಿಲ್ಲ ಅದ್ರೂ ನಾವು ಇಂತಹ ಸಿನಿಮಾ ಮಾಡೋಕೆ ಅಗಲ್ಲ ಆದ್ರೆ ಇವ್ರು ಹೇಗೆ ಬಿಗ್ ಬಜೆಟ್ ಸಿನಿಮಾ ಮಾಡ್ತಾರೆ? ಸಿಂಪಲ್… ಸುದೀಪ್ ಅವರಂತಹ ಸ್ಟಾರ್‌ಗಳ ಕಾಲ್ ಶೀಟ್ ಇವರಿಗೆ ಕೋಟ್ಯಂತರ ರೂಪಾಯಿಗಳ ಫಂಡಿಂಗ್ ಸಿಗುವಂತೆ ಮಾಡುತ್ತದೆ. ಸುದೀಪ್‌ ಸರ್‌ ಕಾಲ್ ಶೀಟ್‌ ಗ್ಯಾರಂಟಿ ಆದ್ಮೇಲೆ, ಇವರು ಫೈನಾನ್ಸಿಯರ್‌ಗಳ ಹತ್ರ ಹೋಗಿ ಇಪ್ಪತ್ತೋ ಮೂವತ್ತೋ ಕೋಟಿ ಹಣವನ್ನು ಬಡ್ಡಿಗೆ ತರ್ತಾರೆ. ಆ ಬಡ್ಡಿ ಬ್ಯಾಂಕ್‌ ಬಡ್ಡಿ ಅಲ್ಲ ಗಾಂಧಿನಗರದ ಬಡ್ಡಿ! ಆಟೋಮೀಟರ್‌ ಸ್ಪೀಡಲ್ಲಿ ಓಡ್ತಿರುತ್ತೆ. ಆ ಬಡ್ಡಿಗೆ ತಂದ ಹಣದಲ್ಲಿ ಇವರು ಮೊದಲು ಇವರ ಸಾಲಗಳನ್ನು ತೀರಿಸಿಕೊಳ್ತಾರೆ. ಆಮೇಲೊಂದು ಮನೆ ಕಟ್ಟಿಸಿಕೊಳ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ಅನುಕೂಲ ಮಾಡಿಕೊಳ್ತಾರೆ. ಇವರ ಶೋಕಿ, ಬಾಕಿ ಎಲ್ಲವೂ ಅದರಿಂದಲೇ ತೀರುತ್ತೆ. ಕೊನೆಗೆ… ಅವರಿಗೆ ಸಿನಿಮಾ ನೆನಪಾಗುತ್ತೆ. ಆರು ತಿಂಗಳಲ್ಲಿ ಮುಗಿಯಬೇಕಾದ ಸಿನಿಮಾ, ಎರಡು ವರ್ಷವಾಗುತ್ತೆ. ಅಷ್ಟರಲ್ಲಿ… ಇತ್ತ ಗಾಂಧಿನಗರದ ಮೂವತ್ತು ಕೋಟಿಯು ಬಡ್ಡಿಸೇರಿ ಅರವತ್ತು ಕೋಟಿಯಾಗಿರುತ್ತೆ. ಬಿಡುಗಡೆ ಹೊತ್ತಿಗೆ ಸಾಲ ತೀರಿಸಬೇಕಿರುತ್ತೆ. ಆದರೆ ತೀರಿಸುವುದಕ್ಕೆ ಇವರ ಹತ್ತಿರ ಅಷ್ಟು ಹಣ ಇರಲ್ಲ. ಆಗ ಬಿಡುಗಡೆ ನಿಂತು ಹೋಗುತ್ತೆ. ಅಯ್ಯೋ ನಮ್ಗೆ ಲಾಸ್‌ ಆಯ್ತು.. ನಾವು ಕಷ್ಟದಲ್ಲಿದ್ದೇವೆ…ಈ ಸಿನಿಮಾ ಮಾಡಿ ನಾನು ಹಾಳದೆ, ಈ ಹೀರೊ ನಂಬಿ ನಾನು ಮನೆಮಠ ಕಳೆದುಕೊಂಡೆ ಅಂತ ಊರ್‌ ತುಂಬಾ ಹೇಳ್ಕೊಂಡು ಓಡಾಡ್ತಾರೆ. ಹೀರೋ ಮರ್ಯಾದೆ ತೆಗೀತಾರೆ. ಇತ್ತ ಅಭಿಮಾನಿಗಳು ಥಿಯೇಟರ್‌ ಮುಂದೆ ಕೂತು ಅವರ ಮೆಚ್ಚಿನ ನಟನ ಸಿನಿಮಾಗೆ ಈ ರೀತಿ ಆಗ್ತಿರೋದನ್ನು ನೆನೆದು ಅಳ್ತಿರ್ತಾರೆ. ದಯವಿಟ್ಟು ನಿರ್ಮಾಪಕರನ್ನು ಬದಲಾಯಿಸಿ ಅಣ್ಣ… ಅಂತ ಕೂಗ್ತಿರ್ತಾರೆ. ಅತ್ತ ನಿರ್ಮಾಪಕನ ಅಸಹಕಾರ, ಇತ್ತ ಅಭಿಮಾನಿಗಳ ಒತ್ತಡ… ಆಗ ಹೀರೋ ಮಧ್ಯಪ್ರವೇಶ ಮಾಡಬೇಕು. ಎಲ್ಲೆಲ್ಲಿಂದಲೂ ಹಣ ತಂದುಕೊಟ್ಟು ಸಿನಿಮಾ ಬಿಡುಗಡೆಗೊಳಿಸಬೇಕು. ರನ್ನ ಸಿನಿಮಾಗೆ ಆಗಿದ್ದು ಇದೆ. ಕೋಟಿಗೊಬ್ಬ ಸಿನಿಮಾಗೆ ಆಗಿದ್ದೂ ಇದೆ. ಎರಡೂ ಸಿನಿಮಾಗಳೂ ಬಿಡುಗಡೆ ಸಂಕಷ್ಟವನ್ನು ಎದುರಿಸಿದ್ದವು. ಇದಕ್ಕೆ ಕಾರಣವಾದವರು ಯಾರು? ಅದೇ ಸೋ ಕಾಲ್ಡ್ ಹಳೇ ಸ್ನೇಹಿತರು” ಎಂದು ಸುದೀರ್ಘವಾಗಿ ವೀರಕಪುತ್ರ ಬರೆದುಕೊಂಡಿದ್ದಾರೆ.

Kichcha Sudeep

ಯಾರಿವರು ಸೂರಪ್ಪ ಬಾಬು?

ಸೂರಪ್ಪ ಬಾಬು ಎಂಬುವರು ಒಬ್ಬರಿದ್ದಾರೆ. ಈ ಪ್ರಕರಣದಲ್ಲಿ ಅವರು ಎಲ್ಲೂ ಕಾಣಿಸ್ತಿಲ್ಲ ಅಷ್ಟೇ, ಆದರೆ ಇದರ ಹಿಂದೆ ನಿಂತು ನಡೆಸುತ್ತಿರುವುದಲ್ಲಿ ಅವರೂ ಒಬ್ಬರು. . ಸೂರಪ್ಪ ಬಾಬು ಅವರು ನನಗೆ ಆತ್ಮೀಯರಾಗಿದ್ದವರು. ಅದೇ ಕಾರಣಕ್ಕೆ ಅವರು ನಾನು ಅನೇಕ ವಿಷಯಗಳ ಬಗ್ಗೆ ಅನೇಕ ವರ್ಷಗಳಿಂದ ಮಾತನಾಡುತ್ತ ಬಂದಿದ್ದೇವೆ. ಅವುಗಳ ಬಗ್ಗೆ ಈಗ ಹೇಳುವುದು ನನ್ನ ವ್ಯಕ್ತಿತ್ವ ಅಲ್ಲ. ಆದರೆ ಅವರ ಮನಸಲ್ಲಿ ಒಳ್ಳೇತನವಿಲ್ಲ ಎಂಬುದು ಮಾತ್ರ ಸತ್ಯ. ಅವರಿಗೆ ವಿಷ್ಣು ಸರ್‌ ಬಗ್ಗೆಯೂ ಗೌರವವರಿಲಿಲ್ಲ, ಸುದೀಪ್‌ ಸರ್‌ ಬಗ್ಗೆಯೂ ಗೌರವವಿರಲಿಲ್ಲ. ನನ್ನ ಜತೆ ಮಾತನಾಡುವಾಗಲೆಲ್ಲಾ ಅವರಿಬ್ಬರನ್ನು ಏಕವಚನದಲ್ಲಿಯೇ ಸಂಬೋಧಿಸುತ್ತಾರೆ. ಕೇವಲ ವ್ಯವಹಾರಕ್ಕೆ ಮಾತ್ರ ಇವರು ಅವರಿಬ್ಬರ ಜತೆ ಚೆನ್ನಾಗಿದ್ದರು ಅಷ್ಟೇ. ಇದೇ ಸೂರಪ್ಪಬಾಬು ಅವರು… ಬಸವೇಶ್ವರ ನಗರದ ಹೋಟೆಲ್‌ ಒಂದರಲ್ಲಿ ಅನ್ನದ ಎದುರು ಕೂತು ಹೇಳಿದ್ದ ಮಾತು “ಕೋಟಿಗೊಬ್ಬ 2ರಲ್ಲಿ ನನ್ನಿಂದ ಸುದೀಪ್‌ ಅವರಿಗೆ ಸ್ವಲ್ಪ ಬೇಸರವಾಗಿದೆ. ನನ್ನ ಸ್ವಯಂಕೃತ ಅಪರಾಧಗಳಿಂದಾಗಿ ಸಿನಿಮಾ ಹಿಟ್ ಆದರೂ ನನಗೆ ಲಾಭವಾಗಲಿಲ್ಲ. ಹೇಗೋ… ನನಗೆ ಇಬ್ಬರು ಹೆಣ್ಮಕ್ಕಳ್ಳಿರುವ ವಿಷ್ಯ ಸುದೀಪ್‌ ಅವ್ರಿಗೆ ಗೊತ್ತಾದ ಮೇಲೆ ಅವರೇ ಕರೆದು ಕೋಟಿಗೊಬ್ಬ 3 ಸಿನಿಮಾ ಮಾಡೋಕೆ ಅವಕಾಶ ಕೊಟ್ಟರು ಅಂತ ಹೇಳಿದ್ದರು. ಆದರೆ ಅದೇ ಸೂರಪ್ಪಬಾಬು ಇವತ್ತು ಈ ಷಡ್ಯಂತ್ರದ ಭಾಗವಾಗಿದ್ದಾರೆ. ಸುದೀಪ್‌ ಅವರ ತೇಜೋವಧೆಗೆ ಇಳಿದಿದ್ದಾರೆ. ಅನೇಕ ಪತ್ರಕರ್ತರಿಗೆ ಕರೆಮಾಡಿ, ನಾಳೆ ಸುದೀಪ್‌ ವಿರುದ್ಧ ಪ್ರೆಸ್‌ಮೀಟ್ ಇದೆ, ನಿಮ್ಮ ಫುಲ್‌ ಸಪೋರ್ಟ್‌ ಬೇಕು ಅಂತ ಕೇಳಿದ್ದಾರೆ. ತಪ್ಪಲ್ವಾ.. ಸೂರಪ್ಪ ಬಾಬು ಅವರೇ… ನಿಮ್ಮ ಕಷ್ಟಕ್ಕೆ ಅಂತ ಜತೆಯಾದ ವ್ಯಕ್ತಿ ಬಗ್ಗೆ ಹೀಗೆಲ್ಲಾ ಮಾಡುವುದು ತಪ್ಪಲ್ವಾ..? ಇವತ್ತು ಸುದೀಪ್‌ ಅವರು ಮತ್ತೆ ಕಾಲ್‌ಶೀಟ್‌ ಕೊಡ್ತಿಲ್ಲ ಅಂತ ನೀವು ಆರೋಪ ಮಾಡಲು ಪ್ರೆಸ್‌ಮೀಟ್ ಮಾಡಿಸ್ತೀದ್ದೀರಲ್ವಾ! ನಿಮ್ಮ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ನಿಂತು ಹೋದ ದಿನ, ನಾನು ಜಾಕ್‌ ಮಂಜು ಅವರ ಮೂಲಕ ಹಣ ಕಳುಹಿಸಿಕೊಟ್ಟೆ ಅದನ್ನು ನೀವು ಎರಡೂವರೆ ವರ್ಷಗಳ ಕಾಲ ಕಾಡಿಸಿ, ಆಡಿಸಿ, ನೋಯಿಸಿ ವಾಪಸ್ಸು ಮಾಡಿದ್ದಿರಿ. ಇನ್ನೂ ಸ್ವಲ್ಪ ಹಣ ಬಂದೇ ಇಲ್ಲ! ಅದರ ಬಗ್ಗೆ ನಾನೂ ಪ್ರೆಸ್ಮೀಟ್‌ ಮಾಡ್ಲಾ? ನಿಮ್ಜೊತೆಗಿನ ಸ್ಕ್ರೀನ್‌ ಶಾಟ್‌ ಗಳನ್ನು ಶೇರ್‌ ಮಾಡ್ಲಾ? ನೀವು ಜತೆಗಿದ್ದವರಿಗೆ ಹೀಗೆ ಬೆನ್ನಿಗೆ ಚೂರಿ ಹಾಕುವುದಾದರೆ, ನಾನೂ ಹಾಕಬಹುದಿತ್ತಲ್ಲವಾ? ಆದ್ರೆ ನಾನು ಆ ಕೆಲಸ ಮಾಡಲಿಲ್ಲ ಏಕೆಂದರೆ ನನ್ನ ಯಜಮಾನ್ರು ಆ ಸಂಸ್ಕಾರ ನನಗೆ ಕಲಿಸಿಲ್ಲ. ಬಟ್‌ ಯಜಮಾನ್ರ ಗರಡಿಯಲ್ಲಿ ಪಳಗಿದ ನಿಮಗ್ಯಾಕೆ ಆ ಸಂಸ್ಕಾರ ಬರಲಿಲ್ಲ ಎಂದು ಶ್ರೀನಿವಾಸ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Kichcha Sudeep: ಎಂ ಎನ್​ ಕುಮಾರ್​ ಹೊರಿಸಿದ ಆರೋಪಕ್ಕೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್‌

ರೆಹಮಾನ್‌ ಯಜಮಾನ ಎಂಬ ಮಹೋನ್ನತ ಸಿನಿಮಾದ ನಿರ್ಮಾಪಕ

ಇನ್ನು ರೆಹಮಾನ್‌ ಅವ್ರು “ಯಜಮಾನ ಎಂಬ ಮಹೋನ್ನತ ಸಿನಿಮಾದ ನಿರ್ಮಾಪಕರು”. ನೆನಪಿರಬಹುದು ನಾವು ಕಟೌಟ್‌ ಜಾತ್ರೆ ಮಾಡಿದ್ವಿ. ಅದು ಈಗ ಏಷಿಯನ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆ. ಆ ಕಟೌಟ್‌ ಜಾತ್ರೆಗೆ ಅಭಿಮಾನಿಗಳೆಲ್ಲರೂ ಒಂದೊಂದು ಕಟೌಟ್‌ ಮಾಡಿಸುತ್ತಿದ್ದೇವೆ, ನೀವೂ ಒಂದು ಕಟೌಟ್‌ ಕೊಡಿ ಸರ್‌ ಅಂತ ಕೇಳಿದ್ದಕ್ಕೆ ಅಯ್ಯೋ… ನಿಮ್ಮೆಜಮಾನ್ರಿಂದ ನಾನೇನು ಉದ್ದಾರವಾಗಿಲ್ಲ, ಕಟೌಟ್‌ ಕೊಡೋಕೆ ಆಗಲ್ಲ ಅಂತ ಹೇಳಿದ ದೊಡ್ಡವ್ಯಕ್ತಿ ಅವರು. ಯಜಮಾನ ಸಿನಿಮಾವನ್ನು ಮರುಬಿಡುಗಡೆ ಮಾಡೋಣವಾ ಸರ್‌ ಅಂದರೆ ನನ್ನ ಹತ್ರ ಇಪ್ಪತ್ತೈದು ಲಕ್ಷ ಕೇಳಿದ ನಿರ್ಮಾಪಕರು ಅವರು. ಅಂತಹ ರೆಹಮಾನ್‌ ಅವರು ಇವತ್ತು ಯಜಮಾನರ ಕೆಲಸಗಳಿಗಾಗಿ 365 ದಿನವೂ ಸಿದ್ಧವಾಗಿರುವ ಸುದೀಪ್‌ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಅದೂ ವಿಷ್ಣು ಸರ್‌ ಹೆಸರನ್ನು ತೆಗೆದುಕೊಂಡು. ಮುಜುಗರವಾಗಲ್ವಾ ಇವರಿಗೆ? ಸ್ವರ್ಗ ಸಿನಿಮಾಗೆ ವಿಷ್ಣು ಸರ್‌ ಅವರನ್ನು ಒಪ್ಪಿಸ್ತೀನಿ ಅಂತ ಹೇಳಿ ನೀವು ಸುದೀಪ್‌ ಅವ್ರ ಕಾಲ್ ಶೀಟ್ ಅನ್ನು ಪಡೆದಿದ್ದರ ಬಗ್ಗೆ ನೀವೇ ನನಗೆ ಹೇಳಿದ್ದೀರಿ. ಆಮೇಲೆ ವಿಷ್ಣು ಸರ್‌ ಆ ಸಿನಿಮಾ ಒಪ್ಪಲಿಲ್ಲ ಎಂಬ ಕಾರಣಕ್ಕೆ ಸುದೀಪ್‌ ಸರ್‌ ಕೂಡ ಅದರಲ್ಲಿ ನಟಿಸಲಿಲ್ಲ. ಏಕೆಂದರೆ ವಿಷ್ಣು ಅವರಿಲ್ಲದ ಮೇಲೆ ಆ ಸಿನಿಮಾಗೆ ಧಮ್‌ ಇಲ್ಲ ಅಂತ ಅವ್ರು ನಂಬಿದ್ದರು. ಆ ಮೂಲಕ ಅವ್ರು ಯಜಮಾನ್ರಿಗೆ ಗೌರವ ಕೊಟ್ಟಿದ್ದರು. ಆ ವಿಷ್ಯವನ್ನು ಈಗ ಅವಕಾಶ ಸಿಕ್ಕಿದೆ ಅಂತ ನೀವು ತಿರುಗಾ ಮುರುಗಾ ಮಾಡಿ ಮಾತಾಡುವುದು ತಪ್ಪಲ್ವಾ ಸರ್? ʼದೊಡ್ಮನುಷ್ಯʼ ಟೈಟಲ್‌ ಸುದೀಪ್‌ ಅವ್ರಿಗಾಗಿ ನೋಂದಾಯಿಸಿ ಇಟ್ಟುಕೊಂಡಿದ್ದೇನೆ. ನೀವೊಂದು ಮಾತು ಸುದೀಪ್‌ ಅವ್ರಿಗೆ ಹೇಳಿ ಅಂತ ನನ್ನ ಮೂಲಕ ಶಿಫಾರಸ್ಸಿಗೆ ಯತ್ನಿಸಿದ್ದು ಮರೆತಿದ್ದೀರಾ? ನಿಮ್ಗೆ ಸುದೀಪ್‌ ಅವ್ರಿಂದ ಮೋಸವಾಗಿದ್ದರೆ ಸುದೀಪ್‌ ಅವ್ರಿಗಾಗಿ ಆ ಟೈಟಲ್‌ ಯಾಕೆ ರಿಜಿಸ್ಟರ್‌ ಮಾಡಿದ್ರಿ? ಅಂದ್ರೆ ನಿಮಗೆ ಅವರ ಬಗ್ಗೆ ಗೌರವವಿತ್ತು ಆದ್ರೆ ಅದು ಅವಕಾಶ ಸಿಗಬಹುದೆನ್ನುವ ಗೌರವ. ಯಾವಾಗ ಅದು ಸಿಗುವುದಿಲ್ಲವೆಂಬುದು ಖಾತ್ರಿಯಾಯಿತೋ… ಆಗ ಎಟುಕದ ದ್ರಾಕ್ಷಿ ಹುಳಿಯಾಗಿಬಿಟ್ಟಿದೆ ಅಷ್ಟೇ. ಇನ್ಮೇಲೆ ಅವ್ರ ಸಿನಿಮಾ ಮಾಡೋಕೆ ಅಗಲ್ಲ ಅನ್ನೋ ಸತ್ಯವನ್ನು ಅರಗಿಸಿಕೊಳ್ಳಲಾಗದೆ, ಅಸಹಾಯಕತೆ ಮತ್ತು ಅಸಹನೆಯನ್ನು ಹೀಗೆ ಹೊರಹಾಕಿ, ಯಜಮಾನ ಸಿನಿಮಾದ ನಿರ್ಮಾಪಕನೆಂಬ ಘನತೆಯನ್ನು ಕಳೆದುಕೊಳ್ಳುತ್ತಿದ್ದೀರಿ” ಎಂದು ಬರೆದುಕೊಂಡಿದ್ದಾರೆ.

ಕಷ್ಟದಲ್ಲಿದ್ದಾರೆ ಅಂದ್ರೆ ಕೈ ಹಿಡಿಯೋ ಬಹುದೊಡ್ಡ ನಟ ಸುದೀಪ್

“ಯಾರಾದ್ರೂ ಕಷ್ಟದಲ್ಲಿದ್ದಾರೆ ಅಂದ್ರೆ ಕೈ ಹಿಡಿಯೋ ಇವತ್ತಿನ ತಲೆಮಾರಿನ ಬಹುದೊಡ್ಡ ನಟ ಸುದೀಪ್ ಅವರು. ಶೋ ರೂಮಿನಿಂದ ಗಾಡಿ ಖರೀದಿಸಿ, ರೋಡಿಗೆ ಇಳಿದ ತಕ್ಷಣ ಆಕ್ಸಿಡೆಂಟ್‌ ಆದ್ರೆ, ಯಾವ ಶೋರೋಮಿನವನೂ ಹಣ ವಾಪಸ್ಸು ಕೊಡುವುದಿಲ್ಲ. ಅಂತಹುದರಲ್ಲಿ ಸುದೀಪ್‌ ಸರ್‌ ಒಂದು ಸಿನಿಮಾ ನಷ್ಟವಾಯ್ತು ಅಂದ ತಕ್ಷಣ ಕರೆದು ಮತ್ತೊಂದು ಸಿನಿಮಾ ಕೊಡುವಷ್ಟು ಸಂಭಾವಿತರು. ರಾಜ್, ವಿಷ್ಣು ನಂತರದಲ್ಲಿ ಅಂತಹದೊಂದು ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿರುವವರಲ್ಲಿ ಸುದೀಪ್ ಅವ್ರು ಮೊದಲಿಗರು. ಆದ್ದರಿಂದಲೇ ಕುಮಾರ್‌ ಅವ್ರು ನಾಲ್ಕು ಸಿನಿಮಾ ಮಾಡಲು ಸಾಧ್ಯವಾಯಿತು. ಸೂರಪ್ಪ ಬಾಬು ಅವ್ರು ಎರಡು ಸಿನಿಮಾ ಮಾಡಲು ಸಾಧ್ಯವಾಯಿತು. ರೆಹಮಾನ್‌ ಅವ್ರು ಇಷ್ಟೆಲ್ಲಾ ಮಾತನಾಡುವಂತಾಯಿತು” ಎಂದು ಪೋಸ್ಟ್‌ ಶೇರ್‌ ಮಾಡಿದ್ದಾರೆ.

“ಸುದೀಪ್‌ ಅವರ ಮಾನಹರಣ ಮಾಡಿದ್ದರೆ ಇವರಿಗೆ ಅವರ ಕಾಲ್ ಶೀಟ್ ಸಿಗಲ್ಲ ಅನ್ನೋದು ಗೊತ್ತು… ಆಗಿದ್ರೂ ಯಾಕೆ ಈ ಕೆಲಸ ಮಾಡ್ತಿದ್ದಾರೆ? ಯಾಕೆ ಅಂದ್ರೆ ನೀವು ಹೀಗೆ ಅವರ ತೇಜೋವಧೆ ಮಾಡುವದರಿಂದ ಇವರು ಕೆಲವು ಹೀರೋಗಳಿಗೆ ಹತ್ತಿರವಾಗುತ್ತಾರೆ. ಅವರ ಕಾಲ್ ಶೀಟ್ ಅದ್ರೂ ಸಿಗಬಹುದು ಎಂಬ ದೂರದೃಷ್ಟಿ ಅವರದು. ಆದ್ರೆ ಒಂದು ನೆನಪಿರಲಿ.. ಸುದೀಪ್‌ ಅವ್ರ ಮಾನಹರಣ ಮಾಡೋಕೆ ಅವರಿಗಿಂತ ಒಂದಷ್ಟು ಎತ್ತರದ ವ್ಯಕ್ತಿ ಇರಬೇಕು. ಅವರಿಗಿಂತ ಚೂರು ಹೆಚ್ಚೇ ಸಾಧನೆ ಮಾಡಿರಬೇಕು. ಇಲ್ಲವಾದರೆ ಕನ್ನಡ ಜನತೆ ಅದನ್ನು ನಂಬಲ್ಲ. ಚಿನ್ನದ ಶುದ್ದತೆಯನ್ನು ಪರೀಕ್ಷಿಸುವ ಹಾಗೆ, ನಿಮ್ಮ ಆರೋಪಗಳನ್ನೂ ಪರೀಕ್ಷಿಸುತ್ತಾರೆ. ಆಗ ಬಟಾಬಯಲಾಗೋ ಸರದಿಯಲ್ಲಿ ನೀವೂ ಇರ್ತೀರಿ” ಎಂದಿದ್ದಾರೆ.

ಇದನ್ನೂ ಓದಿ: Kiccha Sudeep : ನನ್ನ ಒಳ್ಳೆಯತನ ದುರುಪಯೋಗದ ಟೂಲ್‌ ಅಲ್ಲ! ಖಡಕ್‌ ಸಂದೇಶ ಕೊಟ್ಟ ಕಿಚ್ಚ ಸುದೀಪ್

ಸೂಪರ್‌ ಸ್ಟಾರ್‌ ವಿರುದ್ದ ಷಡ್ಯಂತ್ರ ನಡೆಸೋಕೆ ವಾಣಿಜ್ಯ ಮಂಡಳಿಯಲ್ಲಿಯೇ ಅವಕಾಶ ಕೊಡ್ತಾ ಇದೆ!

“ಇನ್ನು ಆ ವಾಣಿಜ್ಯ ಮಂಡಳಿ! ದೇವ್ರೇ… ಅದರ ಬಗ್ಗೆ ಮಾತನಾಡೋದೆ ಬೇಡ. ಒಬ್ಬ ತಾಯಿಗೆ ಹತ್ತು ಮಕ್ಕಳಿದ್ದರೆ ಹತ್ತೂ ಮಕ್ಕಳಿಗೂ ಸಮಾನ ಪ್ರೀತಿ ಹಂಚ್ತಾಳೆ… ಅದಕ್ಕೆ ಆಕೆ ತಾಯಿ! ಆದ್ರೆ ಚಿತ್ರರಂಗದ ಮಾತೃಸಂಸ್ಥೆ ಎಂದು ಕರೆಸಿಕೊಳ್ಳುವ ಇವ್ರು ಮಾತ್ರ, ಇಡೀ ದೇಶವೇ ಹೆಮ್ಮೆಪಡುವಂತಹ ಕನ್ನಡದ ಸೂಪರ್‌ ಸ್ಟಾರ್‌ ವಿರುದ್ದ ಷಡ್ಯಂತ್ರ ನಡೆಸೋಕೆ ವಾಣಿಜ್ಯ ಮಂಡಳಿಯಲ್ಲಿಯೇ ಪ್ರೆಸ್‌ಮೀಟ್ ಆಯೋಜನೆಗೆ ಅವಕಾಶ ಕೊಡ್ತಾರಂದ್ರೆ ಏನ್‌ ಹೇಳಬೇಕು. ಅಂದರೆ ಇವರ ಪಕ್ಷಪಾತ ಧೋರಣೆಗಳ ಅಧ್ಯಾಯ ಇನ್ನೂ ಮುಗಿದಿಲ್ಲವೆನಿಸುತ್ತೆ. ಅಮೃತಮಹೋತ್ಸವದಲ್ಲಿ ಪೋಷಕ ನಟರ ಸಾಲಿನಲ್ಲಿ ಕೂರಿಸಿ ಡಾ.ವಿಷ್ಣುವರ್ಧನ್‌ ಅವರಿಗೆ ಸನ್ಮಾನಿಸಿ ಅವಮಾನಿಸಿದ ಈ ತಂಡ ಇಷ್ಟು ವರ್ಷಗಳ ನಂತರವಾದರೂ ಬದಲಾಗದೇ ಹೋಗಿರುವುದು ಏಕೆ ಅಂತ? ಭಾಮಾ ಹರೀಶ್‌ ಅವರಂತಹ ವ್ಯಕ್ತಿ ಬಂದ್ಮೇಲೂ ಇಂತಹ ಪಕ್ಷಪಾತಿ ಚಟುವಟಿಕೆಗಳು ಆಗುತ್ತಿವೆ ಎಂದರೆ ಏನ್‌ ಹೇಳುವುದು? ಕನ್ನಡ ಸಿನಿಮಾ ರಂಗದಲ್ಲಿ ವರ್ಷಕ್ಕೆ ಐದು ಸಿನಿಮಾ ಕೂಡ ಹಿಟ್‌ ಆಗ್ತಿಲ್ಲ. ಥಿಯೇಟರ್‌ಗಳು ಮುಚ್ಚಿಕೊಂಡು ಹೋಗ್ತಿವೆ. ಇದನ್ನೇ ನಂಬಿದ ಜನ ಮಕ್ಕಳಿಗೆ ಸ್ಕೂಲ್‌ ಫೀಸ್‌ ಕಟ್ಟಲಾಗದ, ಮನೆ ಬಾಡಿಗೆ ಕಟ್ಟಲಾಗದ ದುಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಚಿತ್ರರಂಗದ ಏಳ್ಗೆಗೆ ಮಾರ್ಗೋಪಾಯಗಳನ್ನು ಹುಡುಕುವ ಕೆಲಸ ಮಾಡಬೇಕಲ್ಲವಾ? ಸುದೀಪ್ ಅವ್ರ ಆದಿಯಾಗಿ, ಎರಡು ವರ್ಷಕ್ಕೆ ಒಂದು ಸಿನಿಮಾ ಮಾಡೋ ಸ್ಟಾರ್‌ಗಳಿಗೆ ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ತಾಕೀತು ಮಾಡಬೇಕಲ್ಲವಾ? ಅದನ್ನೆಲ್ಲಾ ಬಿಟ್ಟು ಇಂತಹ ಷಡ್ಯಂತ್ರಗಳ ಭಾಗವಾಗುತ್ತಿರುವುದು ನಿಜಕ್ಕೂ ನಾಚಿಕೆಗೇಡು” ಎಂದು ವೀರಕಪುತ್ರ ಶ್ರೀನಿವಾಸ ಹೇಳಿದ್ದಾರೆ.

ಒಬ್ಬರ ಒಳ್ಳೇತನ ಸಮಯಸಾಧಕರಿಗೆ ಅಸ್ತ್ರವಾಗಬಾರದು.

ಸುದೀಪ್‌ ಸರ್‌ ಅವರು ಹತ್ತು ವರ್ಷಗಳ ಹಿಂದೆ ಇದ್ದ ರೀತಿ ಇಂದು ಇದ್ದಿದ್ದರೆ ಇವರುಗಳು ಹೀಗೆಲ್ಲಾ ಮಾತನಾಡಲು ಸಾಧ್ಯವೇ ಆಗುತ್ತಿರಲಿಲ್ಲ. ಆದರೆ ಅವರು ಈಗ ಬದಲಾಗಿದ್ದಾರೆ. ನಡೆ ನುಡಿಯಲ್ಲಿ ಸಂಯಮ, ಸಂಸ್ಕಾರ, ಹಿರಿಯರ ಬಗ್ಗೆ ಗೌರವ, ಕಿರಿಯರಿಗೆ ಪ್ರೋತ್ಸಾಹ ಕೊಡ್ತಾ ಸಮಸ್ತ ಚಿತ್ರರಂಗ ನನ್ನ ಕುಟುಂಬ ಎಂಬ ಭಾವ ಬಿತ್ತಿ ಬೆಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವರೆಲ್ಲರೂ ಅವರ ಸಂಯಮವನ್ನು ಅಣಕಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಿರುವುದು ಬೆಂಗಳೂರಿನ ಅಭಿಮಾನಿಗಳು ಮಾತ್ರವಲ್ಲ ರಾಜ್ಯದಲ್ಲಿರುವ ಸುದೀಪ್‌ ಅವ್ರ ಅಭಿಮಾನಿಗಳೆಲ್ಲರೂ ಈ ನಿರ್ಮಾಪಕರ ಮನೆಗಳ ಎದುರು ಧರಣಿ ಕೂತು, ದಾಖಲೆ ಕೇಳಬೇಕು. ದಾಖಲೆ ಕೊಡಲಾಗದಿದ್ದರೆ ಕ್ಷಮೆ ಕೇಳುವಂತೆ ಮಾಡಬೇಕು. ಒಬ್ಬರ ಒಳ್ಳೇತನ ಸಮಯಸಾಧಕರಿಗೆ ಅಸ್ತ್ರವಾಗಬಾರದು. ಅಷ್ಟೇʼʼಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Ram Pothineni ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

VISTARANEWS.COM


on

Ram Pothineni Double iSmart teaser with Sanjay Dutt
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹಾಗೂ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ `ಡಬಲ್ ಇಸ್ಮಾರ್ಟ್‘ (Double iSmart) ಟೀಸರ್‌ ಬಿಡುಗಡೆಗೊಂಡಿದೆ. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡುವಂತಿದೆ. ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Sanjay Dutt: ‘ಡಬಲ್ ಇಸ್ಮಾರ್ಟ್’ಗೆ ʻಬಿಗ್ ಬುಲ್ʼ ಎಂಟ್ರಿ; ಸಂಜಯ್ ದತ್ ಬರ್ತ್‌ಡೇ ಸ್ಪೆಷಲ್‌!

ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್‌ದತ್‌ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಈ ಹಿಂದೆ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್‌ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಾಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

Kannada New Movie: ‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

VISTARANEWS.COM


on

Kannada New Movie swapna mantapa shooting compleated
Koo

ಬೆಂಗಳೂರು: ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ (Kannada New Movie) ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನ ಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

ಇದನ್ನೂ ಓದಿ: Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

Actor Diganth: ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ.

VISTARANEWS.COM


on

Actor Diganth role in Crazystar Ravichandran The Judgement movie Kannada
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ (Actor Diganth) ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್‌, ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು (The Judgement movie Kannada) ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ. ಚಿತ್ರತಂಡ ನಡೆಸಿದ ಸಂದರ್ಶನದ ಝಲಕ್‌ ಇಲ್ಲಿದೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿದೆ. ಇಂದಿನ ಜನರೇಶನ್‌ನ ಬೆಂಗಳೂರಿನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು, ಏನೆಲ್ಲ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದರ ಸುತ್ತ ನನ್ನ ಪಾತ್ರವಿದೆ.

ಇದನ್ನೂ ಓದಿ: Actor Darshan: ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ: ಉಮಾಪತಿಗೆ ದರ್ಶನ್‌ ವಾರ್ನಿಂಗ್‌!

ನಿಮ್ಮ ಪ್ರಕಾರ ʼದ ಜಡ್ಜ್‌ಮೆಂಟ್‌ʼ ಅಂದ್ರೇನು?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಒಂದು ಕೋರ್ಟ್‌ ರೂಂ ಡ್ರಾಮಾ ಸಿನಿಮಾ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಏನೂ ಕುತೂಹಲ ಬಿಟ್ಟುಕೊಡಲಾರೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಮೊದಲೇ ಹೇಳಿದಂತೆ, ನಾನು ಇಲ್ಲಿಯವರೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಕಥೆ, ಪಾತ್ರ ಎರಡೂ ಈ ಸಿನಿಮಾದಲ್ಲಿದೆ. ರವಿಚಂದ್ರನ್‌ ಅವರಂಥ ದೊಡ್ಡ ನಟರ ಜೊತೆ ಅಭಿನಯಿಸುವ ಅವಕಾಶ, ತುಂಬ ದೊಡ್ಡ ಸ್ಟಾರ್‌ ಕಾಸ್ಟಿಂಗ್‌, ತುಂಬ ವೃತ್ತಿಪರವಾಗಿರುವ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಮತ್ತು ಸಿನಿಮಾದ ಬಗ್ಗೆ ತುಂಬ ಪ್ಯಾಶನೇಟ್‌ ಆಗಿರುವ ತಂಡ. ಇವೆಲ್ಲವೂ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವಾಯಿತು.

ರವಿಚಂದ್ರನ್‌ ಜೊತೆಗಿನ ಚಿತ್ರೀಕರಣದ ಅನುಭವ ಹೇಗಿತ್ತು?

ನಾನು ರವಿ ಸರ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಮೊದಲ ಬಾರಿಗೆ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಅವರೊಂದಿಗೆ ಅಭಿನಯಿಸುವ ಅವಕಾಶ ಸಿಕ್ಕಿದ್ದಕ್ಕೆ ತುಂಬ ಖುಷಿಯಾಗಿದೆ. ರವಿ ಸರ್‌ ಜೊತೆಗೆ ಶೂಟಿಂಗ್‌ ಮಾಡುವಾಗ, ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಅವರಿಂದ ಕಲಿತುಕೊಳ್ಳುವುದು, ಮಾತಿಗೆ ಕುಳಿತುಕೊಂಡರೆ ಅವರಿಂದ ತಿಳಿದುಕೊಳ್ಳುವುದು ಸಾಕಷ್ಟು ವಿಷಯಗಳು ಇರುತ್ತದೆ.

ಶೂಟಿಂಗ್‌ನಲ್ಲಿ ರವಿಚಂದ್ರನ್‌ ಅವರಿಂದ ಕಲಿತುಕೊಂಡಿದ್ದೇನಾದರೂ ಇದೆಯಾ?

ನಾವೆಲ್ಲ ಸಿನಿಮಾವನ್ನು ಆಡಿಯನ್ಸ್‌ ಆಗಿ ಅಥವಾ ಕಲಾವಿದರಾಗಿ ನೋಡಿದರೆ, ರವಿ ಸರ್‌ ಸಿನಿಮಾವನ್ನು ಬೇರೆಯದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ. ಅವರು ಆಡಿಯನ್‌, ಆರ್ಟಿಸ್ಟ್‌, ಟೆಕ್ನೀಶಿಯನ್‌, ಮೇಕರ್‌ ಎಲ್ಲವೂ ಆಗಿರುವುದರಿಂದ, ಸಿನಿಮಾವನ್ನು ಅವರು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ. ಸಿನಿಮಾ ವಿಷಯದಲ್ಲಿ ಅವರ ಜ್ಞಾನ ತುಂಬ ಅಪಾರ. ಸಿನಿಮಾ ಮೇಕಿಂಗ್‌ ಬಗ್ಗೆ ಅವರು ಹೇಳುವ ವಿಷಯಗಳು ಬೇರೆಲ್ಲೂ ಕಲಿತುಕೊಳ್ಳಲು ಸಿಗದಂತವು.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಸಾಮಾನ್ಯವಾಗಿ ಪ್ರತಿ ಸಿನಿಮಾದ ಪಾತ್ರಗಳಿಗೂ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಆದರೆ ನಿಜ ಹೇಳಬೇಕೆಂದರೆ, ಈ ಸಿನಿಮಾಕ್ಕೆ ಅಷ್ಟೊಂದು ತಯಾರಿ ಮಾಡಿಕೊಂಡಿರಲಿಲ್ಲ. ಅದಕ್ಕೆ ಕಾರಣ ನಿರ್ದೇಶಕ ಗುರುರಾಜ್‌. ಈ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯಿತ್ತು. ಪ್ರತಿಯೊಂದನ್ನೂ ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು. ಅದನ್ನು ಬಿಟ್ಟರೆ ಸಿನಿಮಾದಲ್ಲಿ ಬರುವ ಡ್ಯಾನ್ಸ್‌ ನಂಬರ್‌ಗೆ ಒಂದಷ್ಟು ತಯಾರಿ ಮಾಡಿಕೊಳ್ಳಬೇಕಾಯಿತು.

ಸಿನಿಮಾದಲ್ಲಿ ನಿಮ್ಮ ಮತ್ತು ಧನ್ಯಾ ಕೆಮಿಸ್ಟ್ರಿ ಹೇಗಿದೆ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಮೊದಲ ಬಾರಿಗೆ ನಾನು ಧನ್ಯಾ ರಾಮಕುಮಾರ್‌ ಜೋಡಿಯಾಗಿ ಅಭಿನಯಿಸಿದ್ದೇವೆ. ನಮ್ಮಿಬ್ಬರದ್ದೂ, ಇಂದಿನ ಜನರೇಶನ್‌ ಯುವ ಜೋಡಿಯನ್ನು ಪ್ರತಿನಿಧಿಸುವಂಥ ಪಾತ್ರ. ಇಬ್ಬರ ಕೆಮಿಸ್ಟ್ರಿ ತುಂ ಬ ಚೆನ್ನಾಗಿದೆ. ಕಲಾವಿದೆಯಾಗಿ ಬೆಳೆಯಬೇಕೆಂಬ ಧನ್ಯಾ ಅವರ ಉದ್ದೇಶ, ಅವರ ಉತ್ಸಾಹ ಎರಡೂ ಮೆಚ್ಚುವಂಥದ್ದು. ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಂತರ ʼಪೌಡರ್‌ʼ ಸಿನಿಮಾದಲ್ಲೂ ನಾವಿಬ್ಬರೂ ಒಟ್ಟಿಗೇ ಅಭಿನಯಿಸುತ್ತಿದ್ದೇವೆ.

ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಿರ್ದೇಶಕ ಗುರುರಾಜ್‌ ಮೂಲತಃ ಸಾಫ್ಟ್‌ವೇರ್‌ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್‌ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್‌ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.

ʼದ ಜಡ್ಜ್‌ಮೆಂಟ್‌ʼ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್‌ಗೆ ಖಂಡಿತವಾಗಿಯೂ ʼದ ಜಡ್ಜ್‌ಮೆಂಟ್‌ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

ಪ್ರಚಾರದ ವೇಳೆ ಪ್ರೇಕ್ಷಕರ ಕಡೆಯಿಂದ ಹೇಗೆ ರೆಸ್ಪಾನ್ಸ್‌ ಸಿಗುತ್ತಿದೆ?

ಈಗಾಗಲೇ ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಟೈಟಲ್‌ ಪೋಸ್ಟರ್‌, ಕ್ಯಾರೆಕ್ಟರ್‌ ಫಸ್ಟ್‌ಲುಕ್‌, ಟೀಸರ್‌ ಮಾತ್ತು ಹಾಡು ಬಿಡುಗಡೆಯಾಗಿದೆ. ಎಲ್ಲದಕ್ಕೂ ಸೋಶಿಯಲ್‌ ಮೀಡಿಯಾಗಳಲ್ಲಿ ಆಡಿಯನ್ಸ್‌ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಬಹುತೇಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ.

ವಿ ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ರೇಖಾ ಕೂಡ್ಲಿಗಿ, ಕೃಷ್ಣ ಹೆಬ್ಬಾಳೆ, ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಸಿನಿಮಾದಲ್ಲಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Dolly Dhananjay: `ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Dolly Dhananjay Kotie Cinema Kannada
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ʻಕೋಟಿʼ ಸಿನಿಮಾದ ಹಾಡುಗಳ ಹಕ್ಕನ್ನು ʻಸರಿಗಮʼ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ‌ ವೀಕ್ಷಿಸಬಹುದು.

ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗತ್ತೆ‌ ಅನ್ನೊ ನಂಬಿಕೆ ಇದೆ” ಎಂದು ಹೇಳಿದರು.

“ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಷನ್ನಿನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಕೋಟಿಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

`ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Mamata Banerjee
ಪ್ರಮುಖ ಸುದ್ದಿ4 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ4 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

CAA
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Amit Shah
ದೇಶ5 hours ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ5 hours ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ5 hours ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Isha Ambani
ದೇಶ6 hours ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ6 hours ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು6 hours ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ6 hours ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ21 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ23 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌